Tag: arrest

  • ಪೊಲೀಸರ ಸೀಲನ್ನೇ ನಕಲಿ ಮಾಡಿ ಸರ್ಟಿಫಿಕೇಟ್ – ಖತರ್ನಾಕ್ ಗ್ಯಾಂಗ್ ಅಂದರ್

    ಪೊಲೀಸರ ಸೀಲನ್ನೇ ನಕಲಿ ಮಾಡಿ ಸರ್ಟಿಫಿಕೇಟ್ – ಖತರ್ನಾಕ್ ಗ್ಯಾಂಗ್ ಅಂದರ್

    – 5 ರಿಂದ 10 ಸಾವಿರಕ್ಕೆ ಒಂದು ಪ್ರಮಾಣ ಪತ್ರ

    ಹಾಸನ: ರಾಜ್ಯದ ಬಹುತೇಕ ಪೊಲೀಸ್ ಠಾಣೆಗಳ ನಕಲಿ ಪೊಲೀಸ್ ಸೀಲು ಬಳಸಿ ಪ್ರಮಾಣಪತ್ರ ಮಾಡಿಕೊಡುತ್ತಿದ್ದ ಆರೋಪದ ಮೇಲೆ ಹಾಸನ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

    ಹಾಸನ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ಪರಮೇಶ್, ಮಹೇಶ, ಶ್ರೀಕಾಂತ್, ಪಾಂಡುರಂಗ ಮತ್ತು ಮಾದಪ್ಪ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಹುದ್ದೆಗೆ ಸೇರಲು ಸ್ಥಳೀಯ ಪೊಲೀಸ್ ಠಾಣೆಯ ಪ್ರಮಾಣಪತ್ರ ಬೇಕಾಗಿರುತ್ತದೆ. ಇದನ್ನೇ ಬಂಡವಾಳ ಮಾಡಿಕೊಂಡ ಪರಮೇಶ್, ಅಭ್ಯರ್ಥಿಗಳಿಂದ ಹಣ ಪಡೆದು ನಕಲಿ ಪೊಲೀಸ್ ಪ್ರಮಾಣಪತ್ರ ತಯಾರಿಸಿ ಕೊಡುತ್ತಿದ್ದ ಎನ್ನಲಾಗಿದೆ.

    ಒಂದು ಪ್ರಮಾಣಪತ್ರಕ್ಕೆ 5 ರಿಂದ 10 ಸಾವಿರ ಹಣ ಪಡೆದು ನಗರದ ಎಲ್ಲಾ ಪೊಲೀಸ್ ಠಾಣೆಯ ನಕಲಿ ಸೀಲ್ ಮಾಡಿಸಿಕೊಂಡು ಪ್ರಮಾಣಪತ್ರ ನೀಡುತ್ತಿದ್ದರು. ಇದಲ್ಲದೇ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳ ನಕಲಿ ಸೀಲನ್ನು ಬಳಸಿ ನಕಲಿ ಸಹಿ ಮಾಡಿಕೊಡುತ್ತಿದ್ದರು. ಇದೊಂದು ದೊಡ್ಡ ಜಾಲವೇ ಇದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಶಂಕೆ ಮೇರೆಗೆ ನಾಲ್ವರನ್ನು ವಿಚಾರಣೆ ಮಾಡುತ್ತಿದ್ದಾರೆ. ಘಟನೆ ಸಂಬಂಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸ್ತಿದ್ದ ವ್ಯಕ್ತಿಯ ಬಂಧನ

    ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸ್ತಿದ್ದ ವ್ಯಕ್ತಿಯ ಬಂಧನ

    – ಸಿಸಿಟಿವಿಯಲ್ಲಿ  ವ್ಯಕ್ತಿಯ ದುರ್ವರ್ತನೆ ಸೆರೆ

    ತಿರುವನಂತಪುರಂ: ಹಸುವಿನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಕೋಯಿಕ್ಕೋಡ್ ನ ಕುನ್ನಮಂಗಕಂ ಎಂಬಲ್ಲಿ ನಡೆದಿದೆ. ವ್ಯಕ್ತಿಯ ವಿಚಿತ್ರ ವರ್ತನೆ ಸಿಸಿಟಿಯಲ್ಲಿ ಸೆರೆಯಾಗಿದೆ.

    ಆರೋಪಿಯನ್ನು ಮುರಳೀಧರನ್ ಎಂದು ಗುರುತಿಸಲಾಗಿದೆ. ಈತ ಎರ್ನಾಕುಲಂ ಮೂಲದವನಾಗಿದ್ದು, ಕೋಯಿಕ್ಕೋಡ್ ನ ವಲಿಯವಯಾಲ್ ಮುಲ್ಲೆರಿಕುನುಮೆಲ್ ನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಈತ ವಾಸವಿದ್ದ 12 ಮೈಲಿ ದೂರದಲ್ಲಿದ್ದ ಚಥಮಂಗಲಂ ಎಂಬವರ ಮನೆಯ ಹಸುವಿನ ಮೇಲೆ ಆರೋಪಿ ಈ ಕೃತ್ಯ ಎಸಗಿದ್ದಾನೆ. ರಾತ್ರಿ ಎಲ್ಲರೂ ಮಲಗಿದ ಬಳಿಕ ಆರೋಪಿ ಚಥಮಂಗಲಂ ನಿವಾಸದ ಬಳಿ ಬಂದು ಕೊಟ್ಟಿಗೆಯಿಂದ ಹಸುವನ್ನು ಬಿಚ್ಚಿಕೊಂಡು ಹೊರಗಡೆ ಕರೆದೊಯ್ಯುತ್ತಾನೆ. ಬಳಿಕ ಅದರ ಮೇಲೆ ಅಸಹಜ ಲೈಂಗಿಕ ಕ್ರಿಯೆ ಎಸಗುತ್ತಿದ್ದನು. ತನ್ನ ಕಾಮ ತೃಷೆ ತೀರಿಸಿಕೊಂಡ ನಂತರ ಹಸುವನ್ನು ಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗುತ್ತಿದ್ದನು.

    ಹೀಗೆ ಅನೇಕ ಬಾರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಬೆಳಗಾಗುವಾಗ ಇಲ್ಲದಿರುವುದರಿಂದ ಆತಂಕಗೊಂಡ ಮಾಲೀಕ ಕುಂತಮಂಗಳಂ ಪೊಲೀಸರಿಗೆ ದೂರು ನೀಡಿದ್ದಾರೆ. ಇತ್ತ ಮಾಲೀಕ ಕೊಟ್ಟಿಗೆಯ ಬಳಿ ಸಿಸಿಟಿವಿ ಕೂಡ ಫಿಕ್ಸ್ ಮಾಡಿದರು. ಹೀಗಾಗಿ ವ್ಯಕ್ತಿಯ ದುರ್ವರ್ತನೆ ಸಿಸಿಟಿಯಲ್ಲಿ ಸೆರೆಯಾಗಿದ್ದು, ನೀಚ ಕೃತ್ಯ ಬಯಲಾಗಿದೆ.

    ಹಸುವನ್ನು ಪಶುವೈದ್ಯರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅದರ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆದಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

  • ಗ್ಯಾಂಗ್‍ರೇಪ್ ಮಾಡಿ ಮಹಿಳೆ ಜೊತೆ ಮಗುವನ್ನ ನದಿಗೆ ಎಸೆದ್ರು- 5ರ ಕಂದಮ್ಮ ಸಾವು

    ಗ್ಯಾಂಗ್‍ರೇಪ್ ಮಾಡಿ ಮಹಿಳೆ ಜೊತೆ ಮಗುವನ್ನ ನದಿಗೆ ಎಸೆದ್ರು- 5ರ ಕಂದಮ್ಮ ಸಾವು

    – ಕಿಡ್ನಾಪ್ ಮಾಡಿ ಸಾಮೂಹಿಕ ಅತ್ಯಾಚಾರ
    – ಸಂತ್ರಸ್ತೆಯನ್ನ ರಕ್ಷಿಸಿದ ಸ್ಥಳೀಯರು

    ಪಾಟ್ನಾ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಆಕೆಯ ಐದು ವರ್ಷದ ಮಗುವಿನೊಂದಿಗೆ ನದಿಗೆ ಎಸೆದಿದ್ದಾರೆ. ಆದರೆ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದು, ಮಗು ಸಾವನ್ನಪ್ಪಿರುವ ಅಮಾನವೀಯ ಘಟನೆ ಬಿಹಾರದ ಬಕ್ಸಾರ್‌ನಲ್ಲಿ ನಡೆದಿದೆ.

    ಐದು ವರ್ಷದ ಮಗು ಸಾವನ್ನಪ್ಪಿದೆ. ಈ ಪ್ರಕರಣದ ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದೆ. ಸದ್ಯಕ್ಕೆ ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಹಿಳೆ ತನ್ನ ಐದು ವರ್ಷದ ಮಗುವಿನೊಂದಿಗೆ ಬ್ಯಾಂಕಿಗೆ ಹೋಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಆಕೆಯನ್ನು ಸುತ್ತುವರಿದಿದ್ದು, ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಆರೋಪಿಗಳು ತಾಯಿ-ಮಗನನ್ನು ಕಟ್ಟಿ ಹಾಕಿ ನದಿಗೆ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಸಂತ್ರಸ್ತೆ ತಕ್ಷಣ ಸಹಾಯಕ್ಕಾಗಿ ಕೂಗಾಡಿದ್ದಾರೆ. ಆಗ ಸ್ಥಳೀಯರು ಆಕೆಯನ್ನು ನೋಡಿ ನದಿಗೆ ಹಾರಿ ರಕ್ಷಣೆ ಮಾಡಿದ್ದಾರೆ. ಆದರೆ ಮಗುವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಸದ್ಯಕ್ಕೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ. ಇತ್ತ ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದ್ದು, ಆಕೆಯ ಪತಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

    ಈಗಾಗಲೇ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಆತನನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಎಫ್‍ಐಆರ್ ದಾಖಲಿಸಿದ್ದು, ಇತರ ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಕೆ.ಕೆ.ಸಿಂಗ್ ಹೇಳಿದ್ದಾರೆ.

  • ಪ್ರೇಮಿಗಳಿಗೆ ವಿಷ ನೀಡಿ ಕೊಲೆಗೈದು ಬಳಿಕ ಸುಟ್ಟು ಹಾಕಿದ ಕುಟುಂಬಸ್ಥರು!

    ಪ್ರೇಮಿಗಳಿಗೆ ವಿಷ ನೀಡಿ ಕೊಲೆಗೈದು ಬಳಿಕ ಸುಟ್ಟು ಹಾಕಿದ ಕುಟುಂಬಸ್ಥರು!

    – ಕಳೆದ ತಿಂಗ್ಳು ಪರಾರಿಯಾಗಿದ್ರು
    – ಪೋಷಕರು ಜೊತೆ ಪೊಲೀಸರು ಕಳಿಸಿದ್ದೆ ತಪ್ಪಾಯ್ತು

    ರಾಯ್ಪುರ: ಪ್ರೇಮಿಗಳಿಬ್ಬರನ್ನು ಕುಟುಂಬಸ್ಥರೇ ವಿಷ ಕೊಟ್ಟು ಕೊಲೆ ಮಾಡಿರುವ ಘಟನೆ ಚತ್ತೀಸ್‍ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ಇದು ಮರ್ಯಾದಾ ಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಮೃತ ಪ್ರೇಮಿಗಳನ್ನು ಶ್ರೀಹರಿ (21) ಮತ್ತು ಈತನ ಸಂಬಂಧಿಯಾದ ಐಶ್ವರ್ಯಾ (20) ಎಂದು ಗುರುತಿಸಲಾಗಿದೆ. ಇವರಿಬ್ಬರು ಕೃಷ್ಣನಗರದವರಾಗಿದ್ದು, ಈ ಘಟನೆ ಶನಿವಾರ ನಡೆದಿದೆ. ಈಗಾಗಲೇ ಆರೋಪಿಗಳಾದ ಶ್ರೀಹರಿಯ ಚಿಕ್ಕಪ್ಪ ರಾಮು ಮತ್ತು ಐಶ್ವರ್ಯಾಳ ಸಹೋದರ ಚರಣ್ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಯಾದವ್ ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಕಳೆದ ತಿಂಗಳು ಶ್ರೀಹರಿ ಮತ್ತು ಐಶ್ವರ್ಯಾ ಇಬ್ಬರು ತಮ್ಮ ಮನೆಗಳಿಂದ ಓಡಿಹೋಗಿದ್ದರು. ಇತ್ತ ಇವರ ಕುಟುಂಬವು ಪೊಲೀಸ್ ಠಾಣೆಗೆ ಹೋಗಿ ನಾಪತ್ತೆ ದೂರನ್ನು ದಾಖಲಿಸಿದೆ. ನಂತರ ದುರ್ಗ್ ಪೊಲೀಸರು ಚೆನ್ನೈನಲ್ಲಿ ಶ್ರೀಹರಿ ಮತ್ತು ಐಶ್ವರ್ಯಾ ಇಬ್ಬರನ್ನು ಪತ್ತೆಹಚ್ಚಿದ್ದರು. ಕೂಡಲೇ ಪೊಲೀಸರ ತಂಡವನ್ನು ಅಲ್ಲಿಗೆ ಕಳುಹಿಸಲಾಗಿತ್ತು. ಅಕ್ಟೋಬರ್ 7 ರಂದು ಇಬ್ಬರನ್ನು ವಾಪಾಸ್ ಕೃಷ್ಣನಗರಕ್ಕೆ ಕರೆದುಕೊಂಡು ಬಂದಿದ್ದಾರೆ. ನಂತರ ಇಬ್ಬರನ್ನು ಅವರ ಕುಟುಂಬದವರ ಜೊತೆ ಕಳುಹಿಸಿದ್ದಾರೆ.

    ಶನಿವಾರ ರಾತ್ರಿ ಪೊಲೀಸರು ಅವರ ಮನೆಗಳಲ್ಲಿ ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ್ದಾರೆ. ನಂತರ ವಿಚಾರಣೆಗಾಗಿ ಮನೆಯ ಒಳಗೆ ಹೋಗಿದ್ದಾರೆ. ಈ ವೇಳೆ ಆರೋಪಿಗಳಿಬ್ಬರು ಶ್ರೀಹರಿ ಮತ್ತು ಐಶ್ವರ್ಯಾ ಇಬ್ಬರು ವಿಷ ಕುಡಿದು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಕೂಡಲೇ ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದ್ದಾರೆ.

    ವಿಚಾರಣೆ ವೇಳೆ ತಾವೇ ಕೊಲೆ ಮಾಡಿರುವ ಬಗ್ಗೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಅಲ್ಲದೇ ಆರೋಪಿಗಳು ಸುಪೇಲಾದಿಂದ 10 ಕಿ.ಮೀ ದೂರದಲ್ಲಿರುವ ಜೆವ್ರಾ ಸಿರ್ಸಾ ಗ್ರಾಮದ ಸಮೀಪ ಶಿವನಾಥ್ ನದಿಯ ದಡದಲ್ಲಿ ಮೃತದೇಹಗಳನ್ನು ಸುಟ್ಟುಹಾಕಿದ್ದಾರೆ ಎಂದು ಯಾದವ್ ತಿಳಿಸಿದ್ದಾರೆ.

    ಶ್ರೀಹರಿ ಮತ್ತು ಐಶ್ವರ್ಯಾ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಬಯಸಿದ್ದರು. ಆದರೆ ಎರಡು ಕುಟುಂಬದವರು ಇದಕ್ಕೆ ವಿರುದ್ಧ ವ್ಯಕ್ತಪಡಿಸಿದ್ದಾರೆ. ಭಾಗಶಃ ಸುಟ್ಟ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

  • ಕಾರು ನಿಲ್ಲಿಸಿ ವಿಳಾಸ ಕೇಳಿದ – ಮಹಿಳೆ ಹತ್ತಿರ ಬರ್ತಿದ್ದಂತೆ ಫ್ಯಾಂಟ್ ಬಿಚ್ಚಿದ

    ಕಾರು ನಿಲ್ಲಿಸಿ ವಿಳಾಸ ಕೇಳಿದ – ಮಹಿಳೆ ಹತ್ತಿರ ಬರ್ತಿದ್ದಂತೆ ಫ್ಯಾಂಟ್ ಬಿಚ್ಚಿದ

    ಮುಂಬೈ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಮುಂದೆ ಪ್ಯಾಂಟ್ ಬಿಚ್ಚಿ ಅಶ್ಲೀಲವಾಗಿ ವರ್ತಿಸಿದ್ದಕ್ಕೆ 27 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

     ಆರೋಪಿಯನ್ನು ಬಿಥು ಪರ್ಚಾ ಎಂದು ಗುರುತಿಸಲಾಗಿದೆ. ಪೂರ್ವ ಘಾಟ್ಕೋಪರ್ ನಗರದ ರಾಜವಾಡಿ ರಸ್ತೆಯಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ತನ್ನ ಕಾರಿನಲ್ಲಿ ಬಂದು ರಾಜವಾಡಿ ರಸ್ತೆಯಲ್ಲಿ ನಿಲ್ಲಿಸಿದ್ದಾನೆ. ಈ ವೇಳೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬಳಿ ವಿಳಾಸದ ಬಗ್ಗೆ ಕೇಳಿದ್ದಾನೆ. ಆಗ ಮಹಿಳೆ ವಿಳಾಸ ಹೇಳಲು ಕಾರಿನ ಸಮೀಪ ಬರುತ್ತಿದ್ದಂತೆ ಆರೋಪಿ ತನ್ನ ಪ್ಯಾಂಟ್ ಬಿಚ್ಚಿ ಅಶ್ಲೀಲವಾಗಿ ವರ್ತಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಮಹಿಳೆ ಇದರಿಂದ ಭಯಗೊಂಡು ಕೂಗಿಕೊಂಡಿದ್ದಾರೆ. ಆಗ ಆರೋಪಿ ಭಯದಿಂದ ಪರಾರಿಯಾಗಿದ್ದನು. ನಂತರ ಮಹಿಳೆ ತಿಲಕ್ ನಗರ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಬಳಿಕ ಪೊಲೀಸರು ಆ ಪ್ರದೇಶದ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಿ ಕೂಡಲೇ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯಕ್ಕೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

  • ಸುಳ್ಳು ಬರ್ತ್ ಡೇ ಪಾರ್ಟಿಗೆ ಆಹ್ವಾನ – ಜ್ಯೂಸ್ ಕೊಟ್ಟು ಹೋಟೆಲ್ ರೂಮಿನಲ್ಲಿ ಗ್ಯಾಂಗ್‍ರೇಪ್

    ಸುಳ್ಳು ಬರ್ತ್ ಡೇ ಪಾರ್ಟಿಗೆ ಆಹ್ವಾನ – ಜ್ಯೂಸ್ ಕೊಟ್ಟು ಹೋಟೆಲ್ ರೂಮಿನಲ್ಲಿ ಗ್ಯಾಂಗ್‍ರೇಪ್

    – ಯುವತಿಯನ್ನ ಮನೆಗೆ ಸೇರಿಸಿಕೊಳ್ಳದ ಕುಟುಂಬಸ್ಥರು
    – ಆತ್ಮಹತ್ಯೆಗೆ ಮುಂದಾಗಿದ್ದ ಸಂತ್ರಸ್ತೆಯ ರಕ್ಷಣೆ

    ಲಕ್ನೋ: ಉತ್ತರ ಪ್ರದೇಶದಲ್ಲಿ ದಿನೇ ದಿನೇ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ. ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು 23 ವರ್ಷದ ಯುವತಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ.

    ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಸಂತ್ರಸ್ತೆಯನ್ನು ತನ್ನ ಕುಟುಂಬದವರು ಮನೆಗೆ ಸೇರಿಸದ ಕಾರಣ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಳು. ಅಷ್ಟರಲ್ಲಿ ಆಕೆಯ ಸ್ನೇಹಿತ ಬಂದು ಕಾಪಾಡಿದ್ದಾನೆ.

    ಏನಿದು ಪ್ರಕರಣ?
    ಸಂತ್ರಸ್ತೆಯ ನೆರೆಹೊರೆಯ ಹುಡುಗಿಯೊಬ್ಬಳು ತನ್ನ ಸಹೋದರ ಅಶಿಶ್ ಹುಟ್ಟುಹಬ್ಬದ ಪಾರ್ಟಿಗೆ ಕರೆದಿದ್ದಳು. ಆಕೆಯ ತಂದೆ ಇನ್ಸ್‌ಪೆಕ್ಟರ್ ಆಗಿದ್ದರು. ನಂತರ ಸಂತ್ರಸ್ತೆ ಪಾರ್ಟಿಗೆಂದು ಹೋಟೆಲ್ ರೂಮಿಗೆ ಹೋಗಿದ್ದಾಳೆ. ಅಲ್ಲಿ ಆಶಿಶ್ ತನ್ನ ಸ್ನೇಹಿತ ಅಭಿಷೇಕ್ ಜೊತೆ ರೂಮಿನಲ್ಲಿದ್ದನು. ಇವರಿಬ್ಬರು ಸ್ವಲ್ಪ ಸಮಯದವರೆಗೆ ಸಂತ್ರಸ್ತೆ ಜೊತೆ ಮಾತನಾಡಿದ್ದಾರೆ. ನಂತರ ಆಕೆಗೆ ನಿದ್ದೆ ಬರುವ ಔಷಧಿ ಮಿಕ್ಸ್ ಮಾಡಿ, ಕುಡಿಯಲು ಜ್ಯೂಸ್ ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆ ಪಾನೀಯವನ್ನು ಕುಡಿದ ತಕ್ಷಣ ಪ್ರಜ್ಞೆ ಕಳೆದುಕೊಂಡಿದ್ದು, ಈ ವೇಳೆ ಇಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಸಂತ್ರಸ್ತೆ ಎಚ್ಚರಗೊಂಡು ಅತ್ಯಾಚಾರಕ್ಕೊಳಗಾಗಿರುವ ಬಗ್ಗೆ ತಿಳಿದುಕೊಂಡಿದ್ದಾಳೆ. ಘಟನೆಯ ನಂತರ ಸಂತ್ರಸ್ತೆ ತನ್ನ ಮನೆಗೆ ಹೋಗಿದ್ದಾಳೆ. ಆದರೆ ಆಕೆಯ ಕುಟುಂಬದವರು ಅವಳಿಗೆ ಬೈದು, ಮನೆಯೊಳಗೆ ಬರಬಾರದೆಂದು ಹೇಳಿದ್ದಾರೆ. ಇದರಿಂದ ಬೇಸರಗೊಂಡ ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಳು.

    ಅದರಂತೆಯೇ ಸಮೀಪದ ರೈಲ್ವೆ ನಿಲ್ದಾಣಕ್ಕೆ ಸಂತ್ರಸ್ತೆ ಹೋಗಿದ್ದಾಳೆ. ಅಷ್ಟರಲ್ಲಿ ಸಂತ್ರಸ್ತೆ ಸ್ನೇಹಿತರೊಬ್ಬರು ನಡೆದ ಘಟನೆ ಬಗ್ಗೆ ತಿಳಿದುಕೊಂಡು ಕೂಡಲೇ ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಕಾಪಾಡಿದ್ದಾರೆ. ನಂತರ ಇಬ್ಬರು ಬಾರ್ರಾ ಪೊಲೀಸ್ ಠಾಣೆಗೆ ಬಂದು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.

    ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಆರೋಪಿಗಳಾದ ಆಶಿಶ್ ಮತ್ತು ಆತನ ಸ್ನೇಹಿತ ಅಭಿಷೇಕ್ ಇಬ್ಬರನ್ನು ಬಂಧಿಸಲಾಗಿದೆ. ಸದ್ಯಕ್ಕೆ ಸಂತ್ರಸ್ತೆ ಹೇಳಿಕೆಯ ನಂತರ ಹುಟ್ಟುಹಬ್ಬದ ಪಾರ್ಟಿ ಇದೆ ಎಂದು ಆಮಿಷವೊಡ್ಡಿದ್ದ ಹುಡುಗಿಯ ವಿರುದ್ಧ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ‘ಎಂದು ಇನ್ಸ್‌ಪೆಕ್ಟರ್  ಹರ್ಮೀತ್ ಸಿಂಗ್ ತಿಳಿಸಿದ್ದಾರೆ.

  • ಸಣ್ಣ ವಿಚಾರಕ್ಕೆ ಗಲಾಟೆ – ಸ್ನೇಹಿತನ ಎದೆಗೆ ಚಾಕು ಇರಿದ

    ಸಣ್ಣ ವಿಚಾರಕ್ಕೆ ಗಲಾಟೆ – ಸ್ನೇಹಿತನ ಎದೆಗೆ ಚಾಕು ಇರಿದ

    ಬೆಂಗಳೂರು: ಸಣ್ಣ ವಿಚಾರಕ್ಕೆ ಶುರುವಾದ ಗಲಾಟೆಯಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಯಾರಂಡಳ್ಳಿಯಲ್ಲಿ ನಡೆದಿದೆ.

    ವಿಕಾಸ್ ಕೊಲೆಯಾದ ಯುವಕ. ಆರೋಪಿ ಪೀಟರ್ ಕುಡಿದ ಮತ್ತಿನಲ್ಲಿ ತನ್ನ ಗೆಳೆಯ ವಿಕಾಶ್‍ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮೃತ ವಿಕಾಸ್ ಮತ್ತು ಪೀಟರ್ ಇಬ್ಬರು ಇಟ್ಟಿಗೆ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರಾಗಿದ್ದರು.

    ಶುಕ್ರವಾರ ಸಂಜೆ ಮೃತ ವಿಕಾಸ್ ಮತ್ತು ಪೀಟರ್ ಒಟ್ಟಿಗೆ ಕುಳಿತು ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಸಣ್ಣ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಜಗಳ ಶುರುವಾಗಿದೆ. ಗಲಾಟೆ ವಿಕೋಪಕ್ಕೆ ಹೋಗಿ ಆರೋಪಿ ಪೀಟರ್ ಕೋಪದಿಂದ ವಿಕಾಶ್‍ನ ಎದೆ ಮತ್ತು ಕುತ್ತಿಗೆ ಭಾಗಕ್ಕೆ ಚೂಪಾದ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ವಿಕಾಶ್ ತೀವ್ರ ಗಾಯಗಳಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

    ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಆರೋಪಿ ಪೀಟರ್‌ನನ್ನು ಬಂಧಿಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಟ್ಯೂಷನ್ ತರಗತಿ ಬಗ್ಗೆ ಕೇಳುವ ನೆಪದಲ್ಲಿ ಕರೆದು ಯುವಕನನ್ನ ಥಳಿಸಿ ಕೊಂದ್ರು

    ಟ್ಯೂಷನ್ ತರಗತಿ ಬಗ್ಗೆ ಕೇಳುವ ನೆಪದಲ್ಲಿ ಕರೆದು ಯುವಕನನ್ನ ಥಳಿಸಿ ಕೊಂದ್ರು

    – ಯುವತಿಯ ಜೊತೆ ಸಂಬಂಧ ಹೊಂದಿದ್ದಕ್ಕೆ ಸೋದರ ಕೋಪ
    – ಸ್ಥಳೀಯ ಮಕ್ಕಳಿಗೆ ಇಂಗ್ಲಿಷ್ ಟ್ಯೂಷನ್ ಹೇಳಿಕೊಡ್ತಿದ್ದ

    ನವದೆಹಲಿ: ಬೇರೆ ಸಮುದಾಯಕ್ಕೆ ಸೇರಿದ ಯುವತಿಯ ಜೊತೆ ಸಂಬಂಧ ಹೊಂದಿದ್ದ ಆರೋಪದ ಮೇಲೆ 18 ವರ್ಷದ ಟ್ಯೂಷನ್ ಶಿಕ್ಷಕನನ್ನು ಗುಂಪೊಂದು ಥಳಿಸಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

    ಈ ಘಟನೆ ವಾಯುವ್ಯ ದೆಹಲಿಯ ಆದರ್ಶ್ ನಗರ ಪ್ರದೇಶದಲ್ಲಿ ನಡೆದಿದೆ. ಮೃತನನ್ನು ರಾಹುಲ್ ರಜಪೂತ್ ಎಂದು ಗುರುತಿಸಲಾಗಿದೆ. ಈತ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದು, ಸ್ಥಳೀಯ ಮಕ್ಕಳಿಗೆ ಇಂಗ್ಲಿಷ್ ಟ್ಯೂಷನ್ ನಡೆಸುತ್ತಿದ್ದನು. ಈತ ಬೇರೆ ಸಮುದಾಯಕ್ಕೆ ಸೇರಿದ ಯುವತಿಯ ಜೊತೆ ಸ್ನೇಹ ಬೆಳೆಸಿದ್ದನು. ಹುಡುಗಿಯ ಕುಟುಂಬವು ಇಬ್ಬರ ನಡುವಿನ ಸಂಬಂಧಕ್ಕೆ ವಿರುದ್ಧ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ.

    ರಾಹುಲ್ ರಜಪೂತ್‍ನಿಗೆ ಇಂಗ್ಲಿಷ್ ಟ್ಯೂಷನ್ ತರಗತಿಗಳ ಬಗ್ಗೆ ವಿಚಾರಿಸುವ ನೆಪದಲ್ಲಿ ಫೋನ್ ಮಾಡಿದ್ದಾರೆ. ಈ ವೇಳೆ ರಜಪೂತ್ ಮನೆಯ ಸಮೀಪದಲ್ಲೇ ಭೇಟಿಯಾಗಲು ತಿಳಿಸಿದ್ದಾರೆ. ಅಲ್ಲಿಗೆ ಹೋದ ರಜಪೂತ್ ಮೇಲೆ 7-8 ಹುಡುಗರೊಂದಿಗೆ ಯುವತಿಯ ಸಹೋದರ ಕೋಲು ಮತ್ತು ದೊಣ್ಣೆಯಿಂದ ಹೊಡೆದಿದ್ದಾನೆ. ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಜಪೂತ್‍ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಜಪೂತ್ ಸಾವನ್ನಪ್ಪಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ.

    ಸುಮಾರು ಒಂದು ತಿಂಗಳ ಹಿಂದೆ ಹುಡುಗಿ ರಾಹುಲ್‍ಗೆ ಫೋನ್ ಮಾಡಿದ್ದಳು. ಆದರೆ ಆಕೆಯ ತಾಯಿ ಮತ್ತೆ ಕರೆ ಮಾಡದಂತೆ ಮಗಳಿಗೆ ಎಚ್ಚರಿಸಿದ್ದರು. ಇಬ್ಬರು ಈ ಹಿಂದೆ ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಸ್ನೇಹಿತರಾಗಿದ್ದರು. ಆದರೆ ಇಬ್ಬರು ಒಟ್ಟಿಗೆ ಮಾತನಾಡುವುದು ನೋಡಿದ ಆಕೆಯ ಸಹೋದರ ಕೋಪಕೊಂಡು ಈ ರೀತಿ ಮಾಡಿದ್ದಾನೆ. ಟ್ಯೂಷನ್ ತರಗತಿಗಳ ಬಗ್ಗೆ ವಿಚಾರಿಸುವ ನೆಪದಲ್ಲಿ ಕರೆದು ಕೊಲೆ ಮಾಡಿದ್ದಾರೆ. ನಮಗೆ ನ್ಯಾಯ ದೊರಕಿಸಿ ಕೊಡಿ ಎಂದು ರಾಹುಲ್ ತಂದೆ ಸಂಜಯ್ ರಜಪೂತ್ ಕಣ್ಣೀರು ಹಾಕಿದರು.

    ಯುವಕರ ಸಾವಿನ ಬಗ್ಗೆ ಆಸ್ಪತ್ರೆಯ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಹುಡುಗನ ಚಿಕ್ಕಪ್ಪ ನೀಡಿದ ದೂರಿನ ನಂತರ ನಾವು ಪ್ರಕರಣ ದಾಖಲಿಸಿದ್ದೇವೆ. ಈಗಾಗಲೇ ಯುವತಿಯ ಸಹೋದರ ಮೊಹಮ್ಮದ್ ರಾಜ್, ಆಕೆಯ ಸಂಬಂಧಿ ಮನ್ವರ್ ಹುಸೇನ್ ಮತ್ತು ಇತರ ಮೂವರು ಅಪ್ರಾಪ್ತರು ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಓರ್ವನ ಜೊತೆ ಮೂವರು ಮಹಿಳೆಯರನ್ನ ಬೆತ್ತಲೆ ಮಾಡಿ ಮೆರವಣಿಗೆ

    ಓರ್ವನ ಜೊತೆ ಮೂವರು ಮಹಿಳೆಯರನ್ನ ಬೆತ್ತಲೆ ಮಾಡಿ ಮೆರವಣಿಗೆ

    – 50 ಜನ ಸಮೂಹದಿಂದ ಹಲ್ಲೆ, ಮೆರವಣಿಗೆ

    ರಾಂಚಿ: ವಾಮಾಚಾರವನ್ನು ಅಭ್ಯಾಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 50 ಜನರ ಗುಂಪೊಂದು ಮೂವರು ಮಹಿಳೆಯರು ಮತ್ತು ಓರ್ವ ವ್ಯಕ್ತಿಯನ್ನು ಥಳಿಸಿದ್ದಾರೆ. ಅಲ್ಲದೇ ಬೆತ್ತಲು ಮಾಡಿ ಅವರನ್ನು ಹಳ್ಳಿಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ.

    ನಾಲ್ವರನ್ನು ಬಟ್ಟೆ ಇಲ್ಲದೆ ಮೆರವಣಿಗೆ ನಡೆಸಲಾಗಿದೆ. ನಾರಾಯಣಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಸುಮಾರು 10 ಗಂಟೆಗೆ ಈ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಉಳಿದವರನ್ನು ಬಂಧಿಸಲು ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಮಗೆ ಮಾಹಿತಿ ಬಂದ ಕೂಡಲೇ ಪೊಲೀಸರ ಒಂದು ತಂಡವನ್ನು ಗ್ರಾಮಕ್ಕೆ ಕಳುಹಿಸಲಾಯಿತು. ಈ ವೇಳೆ ಸುಮಾರು 50 ಜನರು ಸ್ಥಳದಲ್ಲಿದ್ದರು ಎಂದು ತಿಳಿದುಬಂದಿದೆ. ಇಬ್ಬರನ್ನು ಬಂಧಿಸಲಾಗಿದ್ದು, ಇತರರು ಓಡಿಹೋಗಿದ್ದಾರೆ. ಮೊದಲಿಗೆ ಪೊಲೀಸರು ಮಹಿಳೆಯರಿಗೆ ಮತ್ತು ಪುರುಷನಿಗೆ ಬಟ್ಟೆಗಳನ್ನು ನೀಡಿದ್ದಾರೆ. ನಂತರ ಇಬ್ಬರು ಆರೋಪಿಗಳಾದ ರವಿ ಕುಮಾರ್ ಮತ್ತು ವಾಸುದೇವ್‍ನನ್ನು ಸದರ್ ಪೊಲೀಸ್ ಠಾಣೆಗೆ ಕರೆ ತರಲಾಗಿದೆ ಎಂದು ಪೊಲೀಸ್ ಅಧಿಕಾರಿ ಬ್ರಾಹ್ಮಣ ತುಟ್ಟಿ ತಿಳಿಸಿದರು.

    ಗ್ರಾಮದ ನಿವಾಸಿ ಬಾಲಿ ರಾಜ್ವಾರ್ ಅವರ ಇಬ್ಬರು ಹೆಣ್ಣುಮಕ್ಕಳು ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ​ಯಲ್ಲಿ ಮಹಿಳೆಯರು ಮತ್ತು ಪುರುಷನನ್ನು ವಾಮಾಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮನೆಯಿಂದ ಹೊರಗೆ ಕರೆದುಕೊಂಡು ಬಂದು ಥಳಿಸಿದ್ದಾರೆ. ರಾಜ್ವಾರ್ ಕುಟುಂಬದ ವಿಕಾಸ್ ಕುಮಾರ್ ಸಾ, ಬಬ್ಲು ರಾಮ್, ರಜಾದ್ ಪಾಸ್ವಾನ್, ರವಿ ಕುಮಾರ್ ರಾಮ್ ಮತ್ತು ರಾಜು ರಾಮ್ ಸೇರಿದಂತೆ ಮೂವರು ಮಹಿಳೆಯರಿಗೆ ಥಳಿಸಿದ್ದಾರೆ. ನಂತರ ಗ್ರಾಮದಲ್ಲಿ ಬೆತ್ತಲಾಗಿದೆ ಮೆರವಣಿಗೆ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಕೆಲವು ಗ್ರಾಮಸ್ಥರು ಮಧ್ಯಪ್ರವೇಶಿಸಿ ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಅವರಿಗೆ ಬೆದರಿಕೆ ಹಾಕಿ ವಾಪಸ್ ಕಳುಹಿಸಿದ್ದಾರೆ. ಅಲ್ಲದೇ ನಾರಾಯಣಪುರದ ವಾರ್ಡ್ ಕೌನ್ಸಿಲರ್ ಬಂದು ಜನಸಮೂಹವನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ಆದರೆ ಯಾರೂ ಅವರ ಮಾತನ್ನು ಕೇಳಲಿಲ್ಲ.

    ಈ ಘಟನೆಯಲ್ಲಿ ಸುಮಾರು 50 ಜನರು ಭಾಗಿಯಾಗಿದ್ದಾರೆ ಎಂಬ ಮಾಹಿತಿಯಿದೆ. ಸದ್ಯಕ್ಕೆ ಅವರಿಗಾಗಿ ಶೋಧ ನಡೆಯುತ್ತಿದೆ. ಯಾವುದೇ ಸಂದರ್ಭದಲ್ಲೂ ಅಪರಾಧಿಗಳನ್ನು ಬಿಡಲಾಗುವುದಿಲ್ಲ. ಪರಾರಿಯಾಗಿದ್ದವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಜೊತೆಗೆ ಈ ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸದರ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

  • 5 ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮು ವಶ

    5 ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮು ವಶ

    ವಿಜಯಪುರ: ಜಿಲ್ಲೆಯ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐದು ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮನ್ನ ವಶಕ್ಕೆ ಪಡೆದಿದ್ದಾರೆ.

    ಕರ್ನಾಟಕ-ಮಹಾರಾಷ್ಟ್ರದ ವಿಜಯಪುರ ಜಿಲ್ಲೆಯ ಗಡಿ ಶಿರಾಡೋಣ ಗ್ರಾಮದ ಹತ್ತಿರ ರಾಜಸ್ಥಾನಕ್ಕೆ ಸೇರಿದ ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಅಫೀಮನ್ನ ವಶಕ್ಕೆ ಪಡೆಯಲಾಗಿದೆ. ಇನ್ನೂ 12.50 ಕೆಜೆ ಅಫೀಮು ಪುಡಿ ಸಿಕ್ಕಿದ್ದು, ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನ ಬಂಧಿಸಲಾಗಿದೆ. ಜೊತೆಗೆ ಐದು ಲಕ್ಷ ಮೌಲ್ಯದ ಅಫೀಮು ಮತ್ತು 25 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

    ವಿಜಯಪುರದ ಮೂಲಕ ಬೆಂಗಳೂರಿಗೆ ಅಫೀಮನ್ನು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜಸ್ಥಾನ-ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಅಲ್ಲಿಯೂ ತನಿಖೆ ನಡೆಸುವಂತೆ ಕೋರಲಾಗುವುದು. ಜೊತೆಗೆ ಬೆಂಗಳೂರಿನಲ್ಲಿಯೂ ತನಿಖೆ ನಡೆಸಲು ಶಿಫಾರಸು ಮಾಡಲಾಗುವುದು ಎಂದು ವಿಜಯಪುರ ಅಬಕಾರಿ ಡಿಸಿ ಕೆ.ಅರುಣ್‍ಕುಮಾರ್ ಹೇಳಿದ್ದಾರೆ.