Tag: arrest

  • ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿ

    ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿ

    – ಸಾಯುತ್ತೇನೆಂದವಳ ಕುಣಿಕೆಯ ಹಗ್ಗ ಎಳೆದು ಕುರ್ಚಿ ತಳ್ಳಿ ಸಾಯಿಸಿದ ಪ್ರಿಯಕರ

    ಬೆಂಗಳೂರು: ಅನೈತಿಕ ಸಂಬಂಧ (Illegal Relation) ಹೊಂದಿದ್ದನ್ನು ಪ್ರಶ್ನಿಸಿ ಸಾಯುತ್ತೇನೆ ಎಂದು ಹೆದರಿಸಿದ ಮಹಿಳೆಯ ಕುಣಿಕೆ ಎಳೆದು ಕುರ್ಚಿಯನ್ನು ತಳ್ಳಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ (Bengaluru) ಬಸವೇಶ್ವರನಗರದಲ್ಲಿ (Basaveshwar Nagar) ನಡೆದಿದೆ.

    ಸರವಣ (35) ಮೃತ ಮಹಿಳೆ. ಈಕೆಗೆ ಮದುವೆಯಾಗಿ ಎರಡು ಮಕ್ಕಳಿದ್ದರೂ ಸಹ ಗಣೇಶ್ (22) ಎಂಬ ಯುವಕನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಅಷ್ಟೇ ಅಲ್ಲದೇ ಯುವಕನಿಗೆ 50 ಸಾವಿರ ರೂ. ಹಣ ಹಾಗೂ ಒಂದು ಮನೆಯನ್ನೂ ಸಹ ಮಾಡಿಕೊಟ್ಟಿದ್ದಳು. ಇಷ್ಟೆಲ್ಲಾ ಇದ್ದರೂ ಗಣೇಶ್ ಬೇರೆ ಹುಡುಗಿಯೊಂದಿಗೆ ಸಲುಗೆಯನ್ನು ಬೆಳೆಸಿಕೊಂಡಿದ್ದ. ಇದನ್ನು ತಿಳಿದ ಮಹಿಳೆ ಆತನನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಬಳಿಕ ಆತ ಸಲುಗೆ ಬೆಳೆಸಿಕೊಂಡಿರುವ ಹುಡುಗಿ ಯಾರೆಂದು ಪ್ರಶ್ನಿಸಿದ್ದಾಳೆ. ಅಲ್ಲದೇ ತಾನು ನೀಡಿದ ಹಣವನ್ನು ವಾಪಸ್ ಕೊಡುವಂತೆ ಕೇಳಿದ್ದಾಳೆ. ಇದರಿಂದಾಗಿ ಇವರಿಬ್ಬರ ಮಧ್ಯೆ ಗಲಾಟೆ ನಡೆದಿದೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ಹಾರಲು ಸಂಚು ರೂಪಿಸಿದ್ದ ಆರೋಪಿ ಅಂದರ್‌

    ಈ ವೇಳೆ ಗಣೇಶ್ ಸಾಯುತ್ತೇನೆ ಎಂದು ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಮುಂದಾಗಿದ್ದ. ಇದನ್ನು ನೋಡಿದ ಮಹಿಳೆ ತಾನೂ ಕೂಡಾ ಸಾಯುವುದಾಗಿ ಕುಣಿಕೆ ಹಾಕಿಕೊಂಡಿದ್ದಾಳೆ. ಈ ವೇಳೆ ಗಣೇಶ್ ಆಕೆಯ ಕುಣಿಕೆಯ ಹಗ್ಗ ಎಳೆದು ಕುರ್ಚಿಯನ್ನು ತಳ್ಳಿದ್ದಾನೆ. ಇದರಿಂದಾಗಿ ಕುಣಿಕೆ ಕುತ್ತಿಗೆಗೆ ಬಿಗಿದು ಮಹಿಳೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಕುಡಿಯಲು ಹಣ ಕೊಡದಿದ್ದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ

    ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಣೇಶ್‌ನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಲಿಫ್ಟ್‌ಗೆ ಸಿಲುಕಿ 26ರ ಯುವಕ ಸಾವು

  • ಬಲವಂತದಿಂದ ಮಕ್ಕಳಿಗೆ ಹಚ್ಚೆ, ಚರ್ಮ ಕಿತ್ತು ಅಳಿಸುವ ಪ್ರಯತ್ನ – ಯುಎಸ್ ದಂಪತಿಗಳು ಅರೆಸ್ಟ್

    ಬಲವಂತದಿಂದ ಮಕ್ಕಳಿಗೆ ಹಚ್ಚೆ, ಚರ್ಮ ಕಿತ್ತು ಅಳಿಸುವ ಪ್ರಯತ್ನ – ಯುಎಸ್ ದಂಪತಿಗಳು ಅರೆಸ್ಟ್

    ವಾಷಿಂಗ್ಟನ್: ಇಬ್ಬರು ಮಕ್ಕಳಿಗೆ ಬಲವಂತದಿಂದ ಹಚ್ಚೆ (Tattoo) ಹಾಕಿಸಿ ನಂತರ ಚರ್ಮವನ್ನು ಕಿತ್ತು ಹಾಕುವ ಮೂಲಕ ಹಚ್ಚೆ ಅಳಿಸಲು ಪ್ರಯತ್ನಿಸಿದ ಆರೋಪದಡಿ ದಂಪತಿಯನ್ನು ಬಂಧಿಸಿದ (Arrest) ಘಟನೆ ಅಮೆರಿಕಾದ (America) ಟೆಕ್ಸಾಸ್‌ನಲ್ಲಿ (Texas) ನಡೆದಿದೆ.

    ಮೇಗನ್ ಮೇ ಫರ್ (27) ಹಾಗೂ ಗನ್ನರ್ ಫರ್ (23) ಬಂಧಿತ ದಂಪತಿ. ದಂಪತಿ ತಮ್ಮ 9 ಮತ್ತು 5 ವರ್ಷದ ಇಬ್ಬರು ಮಕ್ಕಳನ್ನು ಹಗ್ಗದಿಂದ ಕಟ್ಟಿಹಾಕಿ, ಕಿರುಚದಂತೆ ಬಾಯಿಗೆ ಟೇಪ್ ಹಾಕಿ ಬಲವಂತವಾಗಿ ಹಚ್ಚೆ ಹಾಕಿಸಿದ್ದಾರೆ. ಒಂದು ಮಗುವಿಗೆ ಪಾದದ ಮೇಲೆ ಹಚ್ಚೆ ಹಾಕಿಸಿದರೆ ಇನ್ನೊಂದು ಮಗುವಿಗೆ ಭುಜದ ಮೇಲೆ ಹಾಕಲಾಗಿದೆ. ಇದನ್ನೂ ಓದಿ: 1 ಕೆಜಿ ಗಾಂಜಾ ಕಳ್ಳಸಾಗಣೆ ಆರೋಪ – ಭಾರತ ಮೂಲದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಸಿಂಗಾಪುರ

    ಆ ಮಕ್ಕಳ ನಿಜವಾದ ತಂದೆ ಹಾಗೂ ಮಲತಾಯಿ ಹಚ್ಚೆ ನೋಡಿ ಮಕ್ಕಳ ರಕ್ಷಣಾ ಸೇವೆಗಳಿಗೆ (CPS) ವಿಷಯ ತಿಳಿಸಿದ್ದಾರೆ. ಸಿಪಿಎಸ್ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದ ತಕ್ಷಣ ನಿಜವಾದ ತಾಯಿ ಹಾಗೂ ಆಕೆಯ ಗಂಡ ಎಚ್ಚೆತ್ತುಕೊಂಡು ಬಲವಂತವಾಗಿ ಹಚ್ಚೆಗಳನ್ನು ಅಳಿಸುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಬಂಧನದಿಂದ ತಪ್ಪಿಸಿಕೊಳ್ಳಬಹುದು ಎಂದುಕೊಂಡಿದ್ದರು. ಇದನ್ನೂ ಓದಿ: ಸುಡಾನ್ ಹಿಂಸಾಚಾರ – ವಿಮಾನ ನಿಲ್ದಾಣಗಳ ಸ್ಥಗಿತ; ಪ್ರಜೆಗಳನ್ನು ಕರೆತರಲು ಭೂಮಾರ್ಗ ಹುಡುಕಾಟದಲ್ಲಿ ಭಾರತ


    ಚರ್ಮವನ್ನು ಕಿತ್ತುತೆಗೆದು ಬಳಿಕ ನಿಂಬೆರಸದಿಂದ ಉಜ್ಜುವ ಮೂಲಕ ಹಚ್ಚೆಯನ್ನು ಅಳಿಸಿದ್ದರು ಎನ್ನಲಾಗಿದೆ. ಹಚ್ಚೆ ಹಾಕಿಸಿದ್ದ ನಿರ್ದಿಷ್ಟ ಜಾಗದಲ್ಲಿ ಗಾಯಗಳು ಕಂಡು ಬಂದಿವೆ. ಅಲ್ಲದೇ ಅದೇ ಜಾಗದಿಂದ ಸ್ವಲ್ಪ ಪ್ರಮಾಣದ ಚರ್ಮವನ್ನೂ ಕಿತ್ತು ತೆಗೆದಿರುವುದು ಕಂಡುಬಂದಿದೆ. ಈ ಕುರಿತು ಮಗುವಿಗೆ ಗಾಯ ಹಾಗೂ ಕಾನೂನು ಬಾಹಿರ ಸಂಯಮಗಳ ಆರೋಪದಡಿಯಲ್ಲಿ ದಂಪತಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಾಕ್‌ನಲ್ಲಿ ಭೀಕರ ಸ್ಫೋಟ – 12 ಮಂದಿ ಪೊಲೀಸರ ದಾರುಣ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

    ಇಬ್ಬರು ಮಕ್ಕಳನ್ನು ಸಿಪಿಎಸ್‌ನಲ್ಲಿ ಇರಿಸಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ: ವಿಮಾನದಲ್ಲಿ ಬಾಟಲಿ ಹಿಡಿದು ಬಡಿದಾಟ; ಫ್ಲೈಟ್‌ ತುರ್ತು ಭೂಸ್ಪರ್ಶ – ಇಬ್ಬರು ಮಹಿಳೆಯರು ಸೇರಿ ನಾಲ್ವರು ಅರೆಸ್ಟ್

  • ಕುದಿಯುವ ನೀರಿನಲ್ಲಿ ಮುಳುಗಿಸಿ ಮಗು ಕೊಂದ ಪಾಪಿ

    ಮುಂಬೈ: ಒಂದೂವರೆ ವರ್ಷದ ಅಂಬೆಗಾಲಿಡುವ ಮಗುವನ್ನು ಕುದಿಯುವ ನೀರಿದ್ದ ಬಕೆಟ್‌ನಲ್ಲಿ ಮುಳುಗಿಸಿ ಕೊಂದ ಆರೋಪಿಯನ್ನು ಪುಣೆ (Pune) ಪೊಲೀಸರು ಸೋಮವಾರ ಬಂಧಿಸಿದ್ದಾರೆ.

    ಆರೋಪಿಯನ್ನು ವಿಕ್ರಮ್ ಕೋಲೇಕಾರ್ ಎಂದು ಗುರುತಿಸಲಾಗಿದೆ. ಈತ ಮಗುವಿನ ತಾಯಿಯೊಂದಿಗೆ ಅನೈತಿಕ ಸಂಬಂಧ (Illegal Relation) ಹೊಂದಿದ್ದ ಎನ್ನಲಾಗಿದೆ. ಕಿರಣ ಎಂಬಾಕೆ ಮೃತ ಮಗುವಿನ ತಾಯಿ. ವಿಕ್ರಮ್, ಕಿರಣಳನ್ನು ಮದುವೆಯಾಗಲು ಬಯಸಿದ್ದ. ಆದರೆ ಆಕೆ ಅವನ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು. ತನ್ನನ್ನು ನಿರಾಕರಿಸಿದ ಕೋಪಕ್ಕೆ ಆಕೆಯ ಮಗುವನ್ನು ಕೊಂದಿದ್ದಾನೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ – American Airlines ನಲ್ಲಿ ಮತ್ತೊಂದು ಕೇಸ್‌

    ಮಹಾರಾಷ್ಟ್ರದ (Maharashtra) ಪಿಂಪ್ರಿ ಚಿಂಚ್‌ವಾಡ್‌ನಲ್ಲಿ (Pimpri-Chinchwad) ಈ ಘಟನೆ ನಡೆದಿದ್ದು, ಏಪ್ರಿಲ್ 6ರಂದು ವಿಕ್ರಮ್ ಒಂದೂವರೆ ವರ್ಷದ ಮಗುವನ್ನು ಕುದಿಯುತ್ತಿದ್ದ ನೀರಿನಲ್ಲಿ ಮುಳುಗಿಸಿ ಕೊಂದಿದ್ದಾನೆ. ಈ ದುಷ್ಕೃತ್ಯವನ್ನು ಮಹಿಳೆಯೊಬ್ಬರು ನೋಡಿದ್ದರಾದರೂ ಭಯಗೊಂಡ ಕಾರಣ ಈ ವಿಷಯವನ್ನು ಯಾರಿಗೂ ಹೇಳಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ವೈಭವ್ ಶಿಂಗಾರೆ ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಮೇಲೆ ಹಲ್ಲೆ – ಆಂಧ್ರ ಸಿಎಂ ಸಹೋದರಿ ವೈಎಸ್ ಶರ್ಮಿಳಾ ಖಾಕಿ ವಶಕ್ಕೆ

    ಇವರಿಬ್ಬರ ಪ್ರೇಮದಾಟಕ್ಕೆ ಏನೂ ಅರಿಯದ ಮುದ್ದು ಕಂದಮ್ಮ ಬಲಿಯಾಗಿದೆ ಎಂದು ಸ್ಥಳೀಯರು ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು

  • 15 ವರ್ಷದ ಬಾಲಕಿಯನ್ನು ಅಪಹರಿಸಿ 6 ತಿಂಗಳವರೆಗೆ ಅತ್ಯಾಚಾರ – ಆರೋಪಿ ಅರೆಸ್ಟ್

    ಲಕ್ನೋ: 15 ವರ್ಷದ ಬಾಲಕಿಯನ್ನು ಅಪಹರಿಸಿ ಆರು ತಿಂಗಳ ಕಾಲ ಅತ್ಯಾಚಾರ (Rape) ಎಸಗಿದ ಘಟನೆ ಉತ್ತರಪ್ರದೇಶದ (Uttar Pradesh) ಬಲ್ಲಿಯಾದಲ್ಲಿ (Ballia) ನಡೆದಿದೆ.

    ಶನಿವಾರ ಬಾಲಕಿಯನ್ನು ರಕ್ಷಿಸಿದ್ದು, ಆರೋಪಿ ಆಶಿಶ್ ಕುಮಾರ್‌ನನ್ನು (24) ಬಂಧಿಸಲಾಗಿದೆ (Arrest) ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಇದನ್ನೂ ಓದಿ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ; ನಾಲ್ವರು ಸಾವು, 22 ಜನರಿಗೆ ಗಾಯ 

    ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಾಲಕಿ ಕಾಣೆಯಾಗಿದ್ದಾಳೆ ಎಂಬ ದೂರನ್ನು ಬಾಲಕಿ ಪೋಷಕರು ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿತ್ತು ಎಂದು ತಖಾ ಪೊಲೀಸ್ ಹೊರಠಾಣೆ ಪ್ರಭಾರಿ ಫೂಲ್‌ಚಂದ್ರ ಯಾದವ್ ಹೇಳಿದ್ದಾರೆ. ಸುಳಿವಿನ ಮೇರೆಗೆ ಶನಿವಾರ ಬಾಲಕಿಯನ್ನು ಗದ್ವಾರ್ ಪ್ರದೇಶದಿಂದ ರಕ್ಷಿಸಲಾಗಿದ್ದು, ಆಶಿಶ್ ಕುಮಾರ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ – 12 ಶಂಕಿತರು ವಶಕ್ಕೆ 

    ಬಾಲಕಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಕಳೆದ ಆರು ತಿಂಗಳಿನಿಂದ ಆರೋಪಿಯು ತನ್ನ ಮೇಲೆ ಪದೇ ಪದೇ ಅತ್ಯಾಚಾರವೆಸಗಿರುವುದಾಗಿ ತಿಳಿಸಿದ್ದಾಳೆ. ಇದನ್ನೂ ಓದಿ: ವಕೀಲನಂತೆ ವೇಷ ಧರಿಸಿದ್ದ ವ್ಯಕ್ತಿಯಿಂದ ದೆಹಲಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ – ಮಹಿಳೆಯ ಸ್ಥಿತಿ ಗಂಭೀರ 

    ಈ ಕುರಿತು ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅತೀಕ್ ಅಹ್ಮದ್ 1,169 ಕೋಟಿ ರೂ. ಒಡೆಯ- ಹುಡುಕಿದಷ್ಟು ಸಿಗುತ್ತಿದೆ ಗ್ಯಾಂಗಸ್ಟರ್‌ನ ಆಸ್ತಿ

  • ಪರಾರಿಯಾಗಿದ್ದ ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಸರೆಂಡರ್

    ಪರಾರಿಯಾಗಿದ್ದ ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಸರೆಂಡರ್

    ಚಂಡೀಗಢ: ಪರಾರಿಯಾಗಿದ್ದ ಸಿಖ್ ಮೂಲಭೂತವಾದಿ, ಧರ್ಮಪ್ರಚಾರಕ ಅಮೃತಪಾಲ್ ಸಿಂಗ್ (Amritpal Singh) ಭಾನುವಾರ ಮೊಗಾದಲ್ಲಿ ಪಂಜಾಬ್ ಪೊಲೀಸರ (Punjab Police) ಮುಂದೆ ಶರಣಾಗಿದ್ದಾನೆ. ಆತನನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.

    ಮಾಚ್ 18 ರಂದು ಪರಾರಿಯಾಗಿದ್ದ ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್ ಸಿಂಗ್‌ನನ್ನು ಪತ್ತೆ ಹಚ್ಚಲು ಪಂಜಾಬ್ ಪೊಲೀಸರು ಹಲವು ರಾಜ್ಯಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೂ ಅಮೃತ್‌ಪಾಲ್ ಯಾರ ಕಣ್ಣಿಗೂ ಬೀಳದಂತೆ ತನ್ನ ಸ್ಥಳಗಳನ್ನು ಆಗಾಗ ಬದಲಿಸುತ್ತಾ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿದ್ದ. ಆತನಿಗಾಗಿ ಹುಡುಕಾಟ ನಡೆಸುತ್ತಿದ್ದ ಸಂದರ್ಭದಲ್ಲಿ ನೂರಾರು ಬೆಂಬಲಿಗರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

    ಇದೀಗ ಅಮೃತ್‌ಪಾಲ್ ಸಿಂಗ್ ಬಂಧನವನ್ನು ಪಂಜಾಬ್ ಪೊಲೀಸರು ದೃಢೀಕರಿಸಿದ್ದಾರೆ. ನಗರದಲ್ಲಿ ಶಾಂತಿ ಕಾಪಾಡುವಂತೆ ಹಾಗೂ ಸುಳ್ಳು ಸುದ್ದಿಗಳನ್ನು ಹರಡದಂತೆ ಅಧಿಕಾರಿಗಳು ಕೇಳಿಕೊಂಡಿದ್ದಾರೆ.

    ಅಮೃತ್‌ಪಾಲ್‌ ಸಿಂಗ್‌ ಯಾರು?: ಪಂಜಾಬ್‌ನಲ್ಲಿ ತನ್ನದೇ ಸಶಸ್ತ್ರ ಗುಂಪುಗಳನ್ನು ಕಟ್ಟಿಕೊಂಡು ತಿರುಗಾಡುತ್ತಿದ್ದ ಈತ ‘ವಾರಿಸ್ ಪಂಜಾಬ್ ದಿ’ ಹೆಸರಿನ ಧಾರ್ಮಿಕ ಸಂಘಟನೆ ನಡೆಸುತ್ತಿದ್ದ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ 3 ದಿನಗಳ ಕಾಲ ಮಳೆ

    ಅಮೃತ್‍ಪಾಲ್ ಸಿಂಗ್‌ಗೆ ಪಾಕಿಸ್ತಾನದ (Pakistan) ಗುಪ್ತಚರ ಇಲಾಖೆ ಐಎಸ್‌ಐ (ISI) ಬೆಂಬಲವಿದೆ ಎಂದು ಗುಪ್ತಚರ ಇಲಾಖೆ ಹೇಳಿತ್ತು. ಅಮೃತಪಾಲ್‌ ಸಿಂಗ್‌ ಜಾರ್ಜಿಯಾಕ್ಕೆ ಭೇಟಿಯಾಗಿದ್ದ. ಅಲ್ಲಿ ಆತನಿಗೆ ಬೋಧನೆ ಮಾಡಲಾಗಿದೆ. ಖಲಿಸ್ತಾನ ಹೋರಾಟವನ್ನು ಜೀವಂತವಾಗಿಡಲು ಭಾರತದಲ್ಲಿ ಐಎಸ್‌ಐಗೆ ವ್ಯಕ್ತಿ ಬೇಕಿತ್ತು ಎಂದು ಗುಪ್ತಚರ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿತ್ತು. ಇದನ್ನೂ ಓದಿ:  ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ

  • ಪೊಲೀಸರ ಭರ್ಜರಿ ಕಾರ್ಯಾಚರಣೆ – 1 ಕೋಟಿ 65 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    ಪೊಲೀಸರ ಭರ್ಜರಿ ಕಾರ್ಯಾಚರಣೆ – 1 ಕೋಟಿ 65 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    ಬೀದರ್: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1 ಕೋಟಿ 65 ಲಕ್ಷ ಮೌಲ್ಯದ 165 ಕೆಜಿ ಗಾಂಜಾವನ್ನು (Marijuana) ಪೊಲೀಸರು ಜಪ್ತಿ ಮಾಡಿರುವ ಘಟನೆ ಬೀದರ್‌ನಲ್ಲಿ (Bidar) ನಡೆದಿದೆ.

    ಆಂದ್ರಪ್ರದೇಶದ (Andhra Pradesh) ವಿಜಯವಾಡದಲ್ಲಿ ಗಾಂಜಾದ ಮೂಲ ಕಿಂಗ್‌ಪಿನ್ ಓರ್ವನನ್ನು ಬಂಧಿಸಲಾಗಿತ್ತು. ಆತ ನೀಡಿದ ಖಚಿತ ಮಾಹಿತಿಯ ಮೇರೆಗೆ ಹೈದರಾಬಾದ್‌ನಿಂದ (Hyderabad) ಮಹಾರಾಷ್ಟ್ರಕ್ಕೆ (Maharashtra) ಕಾರಿನಲ್ಲಿ ಸಾಗಿಸುತ್ತಿದ್ದ 156 ಕೆಜಿ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಚಿಟ್ಟಗುಪ್ಪ (Chittaguppa) ತಾಲೂಕಿನ ಬೆಳಕೇರಾ ಗ್ರಾಮದ ಬಳಿ 1 ಕೋಟಿ 56 ಲಕ್ಷ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: BWSSB ಅರೆಬರೆ ಕಾಮಗಾರಿ – ಗುಂಡಿಗೆ ಬಿದ್ದ ಬಾಲಕ ಬಲಿ 

    ಅದೇ ರೀತಿ ಬೀದರ್ ನಗರದ ರೈಲ್ವೇ ಟ್ರ್ಯಾಕ್‌ (Railway Track) ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ತಲಾ 5 ಕೆಜಿಯಂತೆ ಒಟ್ಟು 10 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ರೈಸ್ ಪುಲ್ಲಿಂಗ್ ದಂಧೆ – ನಿವೃತ್ತ ಕಾನ್ಸ್‌ಟೇಬಲ್ ಸಹಿತ ಮೂವರ ಬಂಧನ 

    ಒಟ್ಟು ಮೂರು ಪ್ರಕರಣದಲ್ಲಿ 165 ಕೆಜಿ ಗಾಂಜಾ ಜಪ್ತಿ ಮಾಡಿದ ಬೀದರ್ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಎಸ್ಪಿ ಚನ್ನಬಸವಣ್ಣ ಲಂಗೋಟಿಯವರ ಮಾರ್ಗದರ್ಶನದಲ್ಲಿ ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಕಾರ್ಯಾಚರಣೆ ಮಾಡಿದ ಪೊಲೀಸರಿಗೆ ಎಸ್ಪಿ ಪ್ರಶಂಸಾ ಪತ್ರ ಹಾಗೂ 1 ಲಕ್ಷ ಬಹುಮಾನ ನೀಡಿ ಗೌರವಿಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಹಂತಕರು ಜೈಲಿಗೆ

  • ವೇಶ್ಯಾವಾಟಿಕೆ ದಂಧೆ: ಕಿರುತೆರೆ ನಟಿ ಆರತಿ ಅರೆಸ್ಟ್

    ವೇಶ್ಯಾವಾಟಿಕೆ ದಂಧೆ: ಕಿರುತೆರೆ ನಟಿ ಆರತಿ ಅರೆಸ್ಟ್

    ಕಿರುತೆರೆಯ ಖ್ಯಾತ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ (Aarti Harish Chandra Mittal) ಅವರನ್ನು ವೇಶ್ಯಾವಾಟಿಕೆ (Prostitution) ಆರೋಪದ ಅಡಿ ಪೊಲೀಸರು (Police)ಬಂಧಿಸಿದ್ದಾರೆ . ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು ಆರತಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಗೊತ್ತಾಗಿದೆ. ಮಾಹಿತಿ ಸಿಗುತ್ತಿದ್ದಂತೆಯೇ ಆರತಿಯನ್ನು ಬೆನ್ನತ್ತಿದ್ದ ಪೊಲೀಸರು ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ.

    ಅಪ್ನಾಪನ್ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿರುವ ಆರತಿ, ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಗುರುತಿಸಿಕೊಂಡವರು. ಇವುಗಳ ಜೊತೆಗೆ ಮುಂಬೈನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಗ್ರಾಹಕರ ಮಾರುವೇಶದಲ್ಲಿ ಆರತಿಯನ್ನು ಸಂಪರ್ಕಿಸಿರುವ ಪೊಲೀಸರು ನಂತರ ಆರತಿಯನ್ನು ಬಂಧಿಸಿದ್ದಾರೆ. ಇವರ ಜೊತೆ ರಾಕೆಟ್ ನಲ್ಲಿ ಇಬ್ಬರು ಮಾಡೆಲ್ ಗಳು ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಪೊಲೀಸ್ ಅಧಿಕಾರಿ ಮನೋಜ್ ಸುತಾರ್ ಅವರಿಗೆ ಆರತಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಬಗ್ಗೆ ಸುಳಿವು ಸಿಕ್ಕಿತ್ತು. ಕೂಡಲೇ ಎಚ್ಚೆತ್ತುಕೊಂಡ ಅಧಿಕಾರಿ ತಮಗೆ ಇಬ್ಬರು ಹುಡುಗಿಯನ್ನು ಕಳುಹಿಸುವಂತೆ ಆರತಿಯನ್ನು ಸಂಪರ್ಕಿಸಿದ್ದಾರೆ. 60 ಸಾವಿರ ಬೇಡಿಕೆ ಇಟ್ಟು, ಹುಡುಗಿಯರನ್ನು ಕಳುಹಿಸುವುದಾಗಿ ಆರತಿ ತಿಳಿಸಿದ್ದರು. ಹಣ ಕೊಡುವುದಾಗಿಯೂ ಅಧಿಕಾರಿ ತಿಳಿಸಿದ್ದರು.

    ಹೋಟೆಲ್ ರೂಮ್ ಗೆ ತೆರಳುವ ಮುನ್ನ ಸ್ವತಃ ಆರತಿಯೇ ಅಧಿಕಾರಿಗಳಿಗೆ ಕಾಂಡೋಮ್ ನೀಡಿದ್ದಾರೆ. ಇವೆಲ್ಲವನ್ನೂ ಪೊಲೀಸರು ರೆಕಾರ್ಡ್ ಮಾಡಿಕೊಂಡೇ ಆರತಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರತಿ ಜೊತೆ ಯಾರೆಲ್ಲ ಇದ್ದಾರೆ ಎನ್ನುವುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

  • ರೈಸ್ ಪುಲ್ಲಿಂಗ್ ದಂಧೆ – ನಿವೃತ್ತ ಕಾನ್ಸ್‌ಟೇಬಲ್ ಸಹಿತ ಮೂವರ ಬಂಧನ

    ರೈಸ್ ಪುಲ್ಲಿಂಗ್ ದಂಧೆ – ನಿವೃತ್ತ ಕಾನ್ಸ್‌ಟೇಬಲ್ ಸಹಿತ ಮೂವರ ಬಂಧನ

    ಬೆಂಗಳೂರು: ರೈಸ್ ಪುಲ್ಲಿಂಗ್ (Rice Pulling) ಹೆಸರಲ್ಲಿ ಕೋಟ್ಯಂತರ ರೂ. ಹಣ ಪಡೆದು ಜನರನ್ನು ವಂಚಿಸುತ್ತಿದ್ದ ಮಾಜಿ ಪೊಲೀಸ್ ಕಾನ್ಸ್‌ಟೇಬಲ್ (Police Constable) ಸೇರಿದಂತೆ ಮೂವರು ಆರೋಪಿಗಳನ್ನು ಸಿಸಿಬಿ (CCB) ಪೊಲೀಸ್ ಬಂಧಿಸಿದ್ದಾರೆ.

    ನಿವೃತ್ತ ಕಾನ್ಸ್‌ಟೇಬಲ್ ನಟೇಶ್, ವೆಂಕಟೇಶ್ ಮತ್ತು ಸೋಮಶೇಖರ್ ಬಂಧಿತ ಆರೋಪಿಗಳು. ಇವರು ಬೆಂಗಳೂರು (Bengaluru) ಹಾಗೂ ರಾಜ್ಯದ ವಿವಿಧೆಡೆ ರೈಸ್ ಪುಲ್ಲಿಂಗ್ ದಂಧೆ ನಡೆಸುತ್ತಿದ್ದರು. ರೈಸ್ ಪುಲ್ಲಿಂಗ್ ಮಿಷನ್ ನೀಡುವುದಾಗಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸೇನಾ ನೆಲೆಯಲ್ಲಿ ಸೈನಿಕರಿಗೆ ಗುಂಡಿಕ್ಕಿ ಹತ್ಯೆ – ಓರ್ವ ಯೋಧನ ಬಂಧನ 

    ಆರೋಪಿ ನಟೇಶ್ 2007ರಲ್ಲಿ ಸಿಎಆರ್‌ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದ. ಬಳಿಕ ರೈಸ್ ಪುಲ್ಲಿಂಗ್ ದಂಧೆಗೆ ಸಿಲುಕಿ ಹಣ ಕಳೆದುಕೊಂಡಿದ್ದ. ಹಣ ಲಾಸ್ ಆದ ಬಳಿಕ ಪೊಲೀಸ್ ಕೆಲಸ ಬಿಟ್ಟು ರಿಯಲ್ ಎಸ್ಟೇಟ್ (Real Estate) ವ್ಯವಹಾರದಲ್ಲಿ ಭಾಗಿಯಾಗಿದ್ದ. ನಂತರ ಇನ್ನಿಬ್ಬರು ಆರೋಪಿಗಳ ಜೊತೆಗೂಡಿ ತಾನೂ ರೈಸ್ ಪುಲ್ಲಿಂಗ್ ದಂಧೆಗೆ ಇಳಿದಿದ್ದ. ಇದನ್ನೂ ಓದಿ: ಹಳೆ ದ್ವೇಷ – ಮಡಿಕೇರಿಯಲ್ಲಿ ಗುಂಡೇಟಿಗೆ ವ್ಯಕ್ತಿ ಬಲಿ 

    ಬಂಧಿತ ಆರೋಪಿಗಳಿಂದ ರೈಸ್ ಪುಲ್ಲಿಂಗ್ ಯಂತ್ರ, 28 ಲಕ್ಷ ರೂ. ನಗದು ಹಾಗೂ 3 ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರು-ಬಸ್ ನಡುವೆ ಡಿಕ್ಕಿ ; ಐವರ ಸಾವು

  • ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯ – ಯುವತಿ ನೇಣು ಬಿಗಿದು ಆತ್ಮಹತ್ಯೆ

    ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯ – ಯುವತಿ ನೇಣು ಬಿಗಿದು ಆತ್ಮಹತ್ಯೆ

    ಲಕ್ನೋ: ಇಸ್ಲಾಂ ಧರ್ಮಕ್ಕೆ (Islam Religion) ಮತಾಂತರಗೊಂಡು ಮದುವೆಯಾಗಲು ನಿರಾಕರಿಸಿ ಯುವತಿಯೊಬ್ಬಳು ಆತ್ಮಹತ್ಯೆಗೆ (Suicide) ಶರಣಾಗಿದ್ದು, ಆರೋಪಿಯನ್ನು ಉತ್ತರಪ್ರದೇಶ (Uttar Pradesh) ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯನ್ನು ಶಾರುಖ್ (24) ಎಂದು ಗುರುತಿಸಲಾಗಿದೆ. ಆರೋಪಿ ಆತ್ಮಹತ್ಯೆಗೆ ಶರಣಾದ ಯುವತಿಯೊಂದಿಗೆ ಸಂಬಂಧ ಹೊಂದಿದ್ದು, ಸಾಮಾಜಿಕ ಅವಮಾನದಿಂದ ತಪ್ಪಿಸಿಕೊಳ್ಳಲು ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ (Conversion) ಪೀಡಿಸುತ್ತಿದ್ದ. ಅಷ್ಟೇ ಅಲ್ಲದೇ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳದೇ ಹೋದರೆ ಸಾಯಬೇಕು ಎಂದು ಷರತ್ತನ್ನೂ ವಿಧಿಸಿದ್ದ. ಇದರಿಂದ ಬೇಸತ್ತ ಯುವತಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಮುಂಬೈ-ಪುಣೆ ಹೆದ್ದಾರಿಯಲ್ಲಿ ಪ್ರಪಾತಕ್ಕೆ ಉರುಳಿದ ಬಸ್; 12 ಸಾವು 

    24 ವರ್ಷದ ಮೃತ ಯುವತಿ ಕೆಲವು ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದ (Social Media) ಮೂಲಕ ಆರೋಪಿಯ ಸಂಪರ್ಕಕ್ಕೆ ಬಂದಿದ್ದು, ಆರೋಪಿ ತನ್ನನ್ನು ಸೌರಭ್ ಎಂದು ಗುರುತಿಸಿಕೊಂಡಿದ್ದ. ಈ ಆರೋಪದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಇದನ್ನೂ ಓದಿ: ಬಾಲಕನನ್ನು ಥಳಿಸಿ, ಬೆತ್ತಲಾಗಿಸಿ ಧಾರ್ಮಿಕ ಘೋಷಣೆ ಕೂಗುವಂತೆ ಅಪ್ರಾಪ್ತರಿಂದಲೇ ಒತ್ತಾಯ

    ಮೃತ ಯುವತಿಯ ತಂದೆ ತನ್ನ ಮಗಳಿಗೆ ಆರೋಪಿ ಕಿರುಕುಳ ನೀಡುತ್ತಿದ್ದ ಮತ್ತು ಇಸ್ಲಾಮಿಕ್ ಸಂಪ್ರದಾಯದಂತೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಎಂದು ಶುಕ್ರವಾರ ದೂರು ನೀಡಿದ್ದು ಎಫ್‌ಐಆರ್ (FIR) ದಾಖಲಾಗಿದೆ. ಅಲ್ಲದೇ ಆರೋಪಿ ತನ್ನ ಮಗಳ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಸಹ ಹೊಂದಿದ್ದು, ಇಸ್ಲಾಂ ಧರ್ಮವನ್ನು ಸ್ವೀಕರಿಸಿ ಮದುವೆಯಾಗುವಂತೆ ಬೆದರಿಕೆ ಹಾಕಿದ್ದಾನೆ ಎಂದು ಎಸಿಪಿ ಬಳಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಇಬ್ಬರು ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ ಬ್ಯಾಂಕ್‍ನಲ್ಲಿ 13.28 ಲಕ್ಷ ಲೂಟಿ 

    ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು ಯುಪಿ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರ ಸೆಕ್ಷನ್ 3 ಮತ್ತು 5 (I) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ಕೋರ್ಟಿಗೆ (Court) ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಎಸಿಪಿ ತಿಳಿಸಿದ್ದಾರೆ. ಇದನ್ನೂ ಓದಿ: ವರನಿಗೆ ಅಶ್ಲೀಲ ಫೋಟೋ ಕಳಿಸಿ ಮದುವೆ ನಿಲ್ಲಿಸಿದ ವಧುವಿನ ಮಾಜಿ ಪ್ರಿಯತಮ!

  • ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಶಿಕ್ಷಕ ಅರೆಸ್ಟ್

    ಮುಂಬೈ: 12 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ (Student) ಮೇಲೆ ಪದೇ ಪದೇ ಅತ್ಯಾಚಾರ (Rape) ಎಸಗಿದ ಆರೋಪದಡಿ ಶಾಲೆಯ ಗಣಿತ ಶಿಕ್ಷಕನನ್ನು (Teacher) ಪೊಲೀಸರು ಬಂಧಿಸಿರುವ (Arrest) ಘಟನೆ ಮಹಾರಾಷ್ಟ್ರದ (Maharashtra) ನಾಗಪುರದಲ್ಲಿ ನಡೆದಿದೆ.

    57 ವರ್ಷದ ಆರೋಪಿ ಶಿಕ್ಷಕ ಕಳೆದ ಮೂರು ತಿಂಗಳಿನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತೆ ಆರನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಕೆಲವು ದಿನಗಳಿಂದ ಆಕೆಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಆಕೆಯ ತಾಯಿ ಏನಾಯಿತು ಎಂದು ವಿಚಾರಿಸಿದಾಗ ಸಂತ್ರಸ್ತೆ ತನಗಾದ ಅನ್ಯಾಯವನ್ನು ವಿವರಿಸಿದ್ದಾಳೆ ಎಂದು ಸಕ್ಕರೆದಾರ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: 4 ವರ್ಷದ ಪ್ರೀತಿಗೆ ಎಳ್ಳುನೀರು- ರೊಚ್ಚಿಗೆದ್ದು ಅಪ್ರಾಪ್ತ ಪ್ರಿಯತಮೆಗೆ ಚಾಕು ಇರಿದ! 

    ಏಪ್ರಿಲ್ 5ರಂದು ಆರೋಪಿಯು ಪರೀಕ್ಷೆಯ ನಂತರ ತನ್ನನ್ನು ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ವರ್ಷ ಡಿಸೆಂಬರ್ 10ರಿಂದ ತನ್ನನ್ನು ಮದುವೆಯಾಗುವುದಾಗಿ ಹೇಳಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ನಮ್ಮ ನಡುವಿನ ಸಂಬಂಧವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ (Threat) ಹಾಕಿದ್ದಾನೆ ಎಂದು ಸಂತ್ರಸ್ತೆ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ಬೀದಿ ನಾಯಿಗಳ ದಾಳಿ – ಅಪ್ರಾಪ್ತ ಬಾಲಕ ಮೃತ್ಯು 

    CRIME COURT

    ಈ ಕುರಿತು ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಐಪಿಸಿ (IPC) ಸೆಕ್ಷನ್ 376 (2) (f) (ಹನ್ನೆರಡು ವರ್ಷದೊಳಗಿನ ಬಾಲಕಿ ಮೇಲೆ ಅತ್ಯಾಚಾರ), 376 (2) (n) (ಪುನರಾವರ್ತಿತ ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆ) ಮತ್ತು ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಾರ್‌ನಲ್ಲಿ ರಾಮಾಯಣ ವೀಡಿಯೋ – ಓರ್ವ ಅರೆಸ್ಟ್