Tag: Article 370

  • POK ನಮ್ಮದೇ, 24 ಅಸೆಂಬ್ಲಿ ಸೀಟ್‌ಗಳನ್ನು ಮೀಸಲಿಟ್ಟಿದ್ದೇವೆ: ಅಮಿತ್‌ ಶಾ

    POK ನಮ್ಮದೇ, 24 ಅಸೆಂಬ್ಲಿ ಸೀಟ್‌ಗಳನ್ನು ಮೀಸಲಿಟ್ಟಿದ್ದೇವೆ: ಅಮಿತ್‌ ಶಾ

    ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರವೂ (POK) ನಮ್ಮದೇ. ಅದಕ್ಕೆ ಅಲ್ಲಿಯೂ 24 ಅಸೆಂಬ್ಲಿ ಸೀಟುಗಳನ್ನು (Assembly Seats) ರಿಸರ್ವ್ ಮಾಡಿದ್ದೇವೆ. ಪಿಓಕೆಯನ್ನು ಪಡೆಯುವುದೇ ನಮ್ಮ ಗುರಿ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

    ಜಮ್ಮುಕಾಶ್ಮೀರದಲ್ಲಿ (Jammu Kashmir) ಆರ್ಟಿಕಲ್ 370 ರದ್ದು ಮಾಡಿದ್ದ ಕೇಂದ್ರ ಸರ್ಕಾರ ಈಗ ಅಲ್ಲಿ ಅಸೆಂಬ್ಲಿ ಏರ್ಪಾಡು ಮಾಡಲು ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ ಜಮ್ಮುಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ ಮತ್ತು ಜಮ್ಮು ಕಾಶ್ಮೀರ ಮರುವರ್ಗೀಕರಣ ತಿದ್ದುಪಡಿ ಮಸೂದೆಗಳು ಪಾಸ್ ಆಗಿವೆ. ಇದನ್ನೂ ಓದಿ: ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ಎರಡು ದಿನ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಮಂತ್ರಿ ಅಮಿತ್ ಶಾ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಮ್ಮ ಕೈ ತಪ್ಪಲು ನೆಹರು ನೀತಿಯೇ (Nehru Policy) ಕಾರಣ. ಕಾಶ್ಮೀರದಲ್ಲಿ ಮೋದಿ (Narendra Modi) ಸರ್ಕಾರ ಕೇವಲ ಉಗ್ರರನ್ನು ನಿರ್ಮೂಲನೆ ಮಾಡಿಲ್ಲ. ಇದು 70 ವರ್ಷಗಳಿಂದ ಧ್ವನಿ ಇಲ್ಲದ ಜನರ ಪ್ರಾತಿನಿಧ್ಯಕ್ಕೆ ಅವಕಾಶ ಕಲ್ಪಿಸುತ್ತದೆ. ತಮ್ಮ ಮನೆಗಳನ್ನು ತೊರೆದು ದೇಶದ ವಿವಿಧ ಮೂಲೆಗಳಲ್ಲಿ ನಿರಾಶ್ರಿತರಾಗಿ ಬದುಕಲು ಒತ್ತಾಯಿಸಲ್ಪಟ್ಟವರಿಗೆ ನ್ಯಾಯ ಒದಗಿಸುವ ಮಸೂದೆಗಳು ಇದಾಗಿದೆ. ಈಗ ಉಗ್ರರಿಗೆ ಹಣ ಕೊಡುವ ವ್ಯವಸ್ಥೆಗೆ ಕಡಿವಾಣ ಹಾಕಿದೆ ಎಂದರು. ಇದನ್ನೂ ಓದಿ: ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ- ಏಮ್ಸ್ ವೈದ್ಯರಿಂದ ಹೊಸ ವರದಿ

    ಮಸೂದೆಯೂ ಕಾಶ್ಮೀರಿ ವಲಸಿಗರು, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಿಂದ ಸ್ಥಳಾಂತರಗೊಂಡ ವ್ಯಕ್ತಿಗಳು ಮತ್ತು ಪರಿಶಿಷ್ಟ ಪಂಗಡಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಪ್ರಾತಿನಿಧ್ಯವನ್ನು ಒದಗಿಸಲು ಪ್ರಯತ್ನಿಸುತ್ತದೆ. ಇತರ ಮಸೂದೆಯು ಮೀಸಲಾತಿ ಕಾಯ್ದೆಯ ಸೆಕ್ಷನ್ 2 ಅನ್ನು ತಿದ್ದುಪಡಿ ಮಾಡಲಿದ್ದು, ದುರ್ಬಲ ಮತ್ತು ಹಿಂದುಳಿದ ವರ್ಗಗಳ (ಸಾಮಾಜಿಕ ಜಾತಿಗಳು) ನಾಮಕರಣವನ್ನು ಇತರ ಹಿಂದುಳಿದ ವರ್ಗಗಳಿಗೆ ಬದಲಾಯಿಸುತ್ತದೆ ಎಂದರು. ಇದನ್ನೂ ಓದಿ: ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ- ಏಮ್ಸ್ ವೈದ್ಯರಿಂದ ಹೊಸ ವರದಿ

    ಜಮ್ಮು ಮತ್ತು ಕಾಶ್ಮೀರದ ಎರಡು ಮಸೂದೆಗಳಲ್ಲಿ ಒಂದು ಮಹಿಳೆ ಸೇರಿದಂತೆ ಇಬ್ಬರು ಕಾಶ್ಮೀರಿ ವಲಸಿಗ ಸಮುದಾಯದ ಸದಸ್ಯರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಲು ಪ್ರಯತ್ನಿಸುತ್ತದೆ. ಮಸೂದೆಯ ಅಗತ್ಯ ನಿಬಂಧನೆಗಳಿಗೆ ಯಾರೂ ಆಕ್ಷೇಪಿಸಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: BSF ಯೋಧರನ್ನು ಬಲಿ ಪಡೆದಿದ್ದ ಉಗ್ರ ಪಾಕ್‌ನಲ್ಲಿ ಗುಂಡಿನ ದಾಳಿಗೆ ಬಲಿ- 2015ರಲ್ಲಿ ನಡೆದಿದ್ದೇನು?

    ಈ ಮಸೂದೆಯ ಪ್ರಕಾರ ಜಮ್ಮು ಕಾಶ್ಮೀರದಲ್ಲಿ ಅಸೆಂಬ್ಲಿ ಕ್ಷೇತ್ರಗಳ ಸಂಖ್ಯೆ 90ಕ್ಕೆ ಏರಿಕೆಯಾಗಲಿದೆ. ಕಾಶ್ಮೀರದಲ್ಲಿ 2 ಸ್ಥಾನಗಳನ್ನು ಕಾಶ್ಮೀರದಿಂದ ವಲಸೆ ಹೋದವರಿಗೆ, ಒಂದು ಸ್ಥಾನವನ್ನು ಪಾಕ್ ಆಕ್ರಮಿತ ಕಾಶ್ಮೀರದಿಂದ ಬಂದು ನೆಲೆಸಿರುವವರಿಗೆ ಮೀಸಲಿಡಲಾಗುತ್ತದೆ. ಮೋದಿ ಸರ್ಕಾರ ಬಂದ ಬಳಿಕ ಕಣಿವೆ ನಾಡಿನಲ್ಲಿ ಜನರ ಸಾವಿನಲ್ಲಿ 70% ರಷ್ಟು ಭದ್ರತಾ ಸಿಬ್ಬಂದಿಗಳ ಸಾವಿನಲ್ಲಿ 62%ರಷ್ಟು ಕಡಿಮೆಯಾಗಿದೆ ಎಂದು ಅಮಿತ್ ಶಾ ಸದನಕ್ಕೆ ವಿವರಿಸಿದರು. ಇದನ್ನೂ ಓದಿ: ಡಿ.13ಕ್ಕೂ ಮುನ್ನ ಸಂಸತ್ತಿನ ಮೇಲೆ ದಾಳಿ- ಮತ್ತೆ ಬೆದರಿಕೆ ವೀಡಿಯೋ ಹರಿಬಿಟ್ಟ ಪನ್ನುನ್

    ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದಾಗಿ 45,000 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕೊನೆಗೊಳಿಸುವುದು ನಮ್ಮ ಗಮನವಾಗಿದೆ. ಯಾರಿಗಾದರೂ ಅವರ ಹಕ್ಕುಗಳನ್ನು ನೀಡುವುದಕ್ಕೂ ಮತ್ತು ಇನ್ನೊಬ್ಬರಿಗೆ ಅವರ ಹಕ್ಕುಗಳನ್ನು ಘನತೆಯಿಂದ ನೀಡುವುದಕ್ಕೂ ವ್ಯತ್ಯಾಸವಿದೆ ಎಂದರು. ಇದನ್ನೂ ಓದಿ: ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಕಮಲ್ ನಾಥ್ ರಾಜೀನಾಮೆ?

    ಯಾರಿಗೆ ಅನ್ಯಾಯವಾಗಿದೆಯೋ, ಯಾರನ್ನು ಅವಮಾನಿಸಲಾಯಿತು ಮತ್ತು ನಿರ್ಲಕ್ಷಿಸಲ್ಪಟ್ಟಿದೆಯೋ ಅವರಿಗೆ ನ್ಯಾಯವನ್ನು ಒದಗಿಸುವುದು ಮತ್ತು ಹಕ್ಕುಗಳನ್ನು ಒದಗಿಸುವ ಮಸೂದೆ ಇದಾಗಿದೆ. ಯಾವುದೇ ಸಮಾಜದಲ್ಲಿ ವಂಚಿತರನ್ನು ಮುಂದೆ ತರಬೇಕು. ಅದು ಸಂವಿಧಾನದ ಮೂಲ ಪ್ರಜ್ಞೆಯಾಗಿದೆ. ಆದರೆ ಅವರ ಗೌರವವನ್ನು ಕಡಿಮೆ ಮಾಡದ ರೀತಿಯಲ್ಲಿ ಅವರನ್ನು ಮುಂದೆ ತರಬೇಕು ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಈಗ ವಿಶ್ವದ ಶಕ್ತಿಶಾಲಿ ಮಹಿಳೆ – ನಂ.1 ಸ್ಥಾನದಲ್ಲಿ ಯಾರಿದ್ದಾರೆ?

    2024ರಲ್ಲಿ ಮೋದಿ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನಾನು ನಂಬುತ್ತೇನೆ. 2026ರ ವೇಳೆಗೆ ಜಮ್ಮು ಕಾಶ್ಮೀರದಲ್ಲಿ ಯಾವುದೇ ಭಯೋತ್ಪಾದಕ ಘಟನೆಗಳು ನಡೆಯುವುದಿಲ್ಲ ಎಂದು ನಾನು ಆಶಿಸುತ್ತೇನೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ‘ಮಿಚಾಂಗ್’‌ ಎಫೆಕ್ಟ್‌; 5,060 ಕೋಟಿ ಪರಿಹಾರ ನೀಡಿ – ಪ್ರಧಾನಿಗೆ ತ.ನಾಡು ಸಿಎಂ ಪತ್ರ

  • ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ

    ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು (Article 370 Case) ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, 16 ದಿನಗಳ ಮ್ಯಾರಥಾನ್ ವಿಚಾರಣೆಯ ನಂತರ ಸುಪ್ರೀಂಕೋರ್ಟ್ (Supreme Court) ತನ್ನ ಆದೇಶವನ್ನು ಕಾಯ್ದಿರಿಸಿದೆ.

    ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠವು ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರವನ್ನು ಪ್ರಶ್ನಿಸುವ ಒಂದು ಬ್ಯಾಚ್ ಅರ್ಜಿಗಳನ್ನು ಆಲಿಸಿತು.

    ಕೇಂದ್ರವು ತನ್ನ ಲಾಭಕ್ಕಾಗಿ ಎಲ್ಲವನ್ನೂ ಮಾಡುತ್ತಿದೆ ಮತ್ತು ನೆಲದ ನಿಯಮಕ್ಕೆ ಬದ್ಧವಾಗಿಲ್ಲ ಎಂದು ಅರ್ಜಿದಾರರು ವಿಚಾರಣೆ ವೇಳೆ ಆರೋಪಿಸಿದರು. ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, 370 ನೇ ವಿಧಿಯನ್ನು ರದ್ದುಗೊಳಿಸಿರುವುದು ಅಧಿಕಾರದ ದುರುಪಯೋಗದ ಶ್ರೇಷ್ಠ ಉದಾಹರಣೆಯಾಗಿದೆ ಎಂದು ವಾದಿಸಿದ್ದರು.  ಇದನ್ನೂ ಓದಿ: ಹಿಂದೂ ಹೆಸರನ್ನು ನೀಡಿದವರೇ ವಿದೇಶಿಯರು: ಅಧೀರ್‌ ರಂಜನ್‌ ಚೌಧರಿ

    ಕೇಂದ್ರವು ಆರ್ಟಿಕಲ್ 370ರ ರದ್ದತಿಗೆ ಬೆಂಬಲವಾಗಿ ವಾದಿಸಿತು ಮತ್ತು ಹಿಂದಿನ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ನಿಬಂಧನೆಯನ್ನು ರದ್ದುಗೊಳಿಸುವಲ್ಲಿ ಯಾವುದೇ ʼಸಾಂವಿಧಾನಿಕ ವಂಚನೆ ಎಸಗಿಲ್ಲ ಎಂದು ಪ್ರತಿಪಾದಿಸಿತು.

    ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಜಮ್ಮು ಮತ್ತು ಕಾಶ್ಮೀರದ ಸಂವಿಧಾನವು ಭಾರತದ ಸಂವಿಧಾನಕ್ಕೆ ಅಧೀನವಾಗಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕ್ರಮವು ʼತಾತ್ಕಾಲಿಕ ಕ್ರಮʼ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಭವಿಷ್ಯದಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ರಾಜ್ಯವಾಗಿ ಹಿಂತಿರುಗಿಸಿದರೆ, ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುತ್ತದೆ ಎಂದು ಅವರು ಹೇಳಿದರು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Jammu Kashmir Article 370 Abrogation – ಅಗಸ್ಟ್ 2 ರಿಂದ ಅಂತಿಮ ವಿಚಾರಣೆ

    ನವದೆಹಲಿ : ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು (Abrogation of Article 370) ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಆಗಸ್ಟ್‌ 2 ರಿಂದ ಆರಂಭಿಸುವುದಾಗಿ ಸುಪ್ರೀಂ ಕೋರ್ಟ್‌ (Supreme Court) ಹೇಳಿದೆ. ಸೋಮವಾರ ಮತ್ತು ಶುಕ್ರವಾರ ಹೊರತುಪಡಿಸಿ ಪ್ರತಿದಿನವೂ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಕೋರ್ಟ್ ಹೇಳಿದೆ.

    ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ಜುಲೈ 27 ರೊಳಗೆ ಎಲ್ಲಾ ದಾಖಲೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದೆ. ಜೊತೆಗೆ ಈ ದಾಖಲೆಗಳನ್ನು ನಿರ್ವಹಿಸಲು ಇಬ್ಬರು ವಕೀಲರನ್ನು ನೊಡೆಲ್ ಅಧಿಕಾರಿಗಳಾಗಿ ನೇಮಿಸಲಾಗುವುದು ಎಂದು ಪೀಠ ಹೇಳಿದೆ.  ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್ – ಅಂಬುಲೆನ್ಸ್ ಅಡ್ಡಗಟ್ಟಿದ ದೃಶ್ಯ ಪತ್ತೆ

    ಮುಖ್ಯ ಅರ್ಜಿದಾರರಾದ ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಶೆಹ್ಲಾ ರಶೀದ್ ಪ್ರಕರಣದಿಂದ ಹಿಂದೆ ಸರಿಯುವುದಾಗಿ ಮತ್ತು ಅರ್ಜಿದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ಮನವಿ ಮಾಡಿದರು. ಈ‌ ಮನವಿಯನ್ನು ಸುಪ್ರೀಂಕೋರ್ಟ್ ಅನುಮತಿಸಿತು.

    ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಸುಮಾರು ನಾಲ್ಕು ವರ್ಷಗಳ ಬಳಿಕ ವಿಚಾರಣೆ ನಡೆಯುತ್ತಿದೆ.

    ಮುಖ್ಯನ್ಯಾಯಮೂರ್ತಿ ಡಿ. ಚಂದ್ರಚೂಡ್​​​ ಸೇರಿದಂತೆ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನು ಒಳಗೊಂಡ 5 ನ್ಯಾಯಮೂರ್ತಿಗಳಿರುವ ಪೀಠ ವಿಚಾರಣೆ ನಡೆಸಲಿದೆ.

     

    2019ರ ಆಗಸ್ಟ್‌ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Article 370 ರದ್ದು- ವಿಚಾರಣೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ: ಸಿಜೆಐ ಡಿವೈ ಚಂದ್ರಚೂಡ್

    Article 370 ರದ್ದು- ವಿಚಾರಣೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ: ಸಿಜೆಐ ಡಿವೈ ಚಂದ್ರಚೂಡ್

    ನವದೆಹಲಿ: ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ (Jammu Kashmir) ಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಪಟ್ಟಿ ಮಾಡುವ ಬಗ್ಗೆ ನಾವು ಅಂತಿಮ ತಿರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಜೆಐ ಡಿವೈ ಚಂದ್ರಚೂಡ್ (CJI DY Chandrachud) ಹೇಳಿದ್ದಾರೆ.

    ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಮುಂದೆ ವಿಷಯ ಪ್ರಸ್ತಾಪಿಸಿದ ಹಿರಿಯ ವಕೀಲ ರಾಜು ರಾಮಚಂದ್ರನ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಉಳಿದಿವೆ. ಇವುಗಳ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಭಾರತದಲ್ಲಿದ್ದ ಮೂರರ ಪೈಕಿ ಎರಡು ಟ್ವಿಟ್ಟರ್ ಕಚೇರಿ ಬಂದ್!

    ಮಾರ್ಚ್ 2020 ರಲ್ಲಿ ಸುಪ್ರೀಂಕೋರ್ಟ್ (Supreme Court) ನ 5 ನ್ಯಾಯಾಧೀಶರ ಸಾಂವಿಧಾನಿಕ ಪೀಠವು ವಿಚಾರಣೆ ನಡೆಸಿದ್ದರು. ಅರ್ಜಿದಾರರು ಏಳು ಮಂದಿ ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ಮನವಿ ಮಾಡಲಾಗಿತ್ತು. ಆದರೆ ಏಳು ಮಂದಿ ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ಸಾಂವಿಧಾನಿಕ ಪೀಠ ನಿರಾಕರಿಸಿತ್ತು.

    370 ನೇ ವಿಧಿಯ ವ್ಯಾಖ್ಯಾನದೊಂದಿಗೆ ವ್ಯವಹರಿಸಿದ ಅರ್ಜಿದಾರರು ಪ್ರೇಮ್ ನಾಥ್ ಕೌಲ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಮತ್ತು ಸಂಪತ್ ಪ್ರಕಾಶ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನೀಡಿದ ಎರಡು ತೀರ್ಪುಗಳು ಸಂಘರ್ಷದಲ್ಲಿದೆ ಎಂದು ಅರ್ಜಿದಾರರು ವಾದಿಸಿದರು. ಆದರೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ 5 ನ್ಯಾಯಾಧೀಶರ ಪೀಠವು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು, ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪೀಠ ಹೇಳಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆರ್ಟಿಕಲ್ 370 ರದ್ದು, ದಸರಾ ರಜೆ ಬಳಿಕ ವಿಚಾರಣೆ – ಸಿಜೆಐ

    ಆರ್ಟಿಕಲ್ 370 ರದ್ದು, ದಸರಾ ರಜೆ ಬಳಿಕ ವಿಚಾರಣೆ – ಸಿಜೆಐ

    ನವದೆಹಲಿ: ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮುಂಬರುವ ದಸರಾ ರಜೆಯ (Dasara) ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದೆ.

    ಈ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ (Uday Umesh Lalit) ಅವರ ಮುಂದೆ ಪ್ರಸ್ತಾಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ದಸರಾ ವಿರಾಮದ ನಂತರ ಅದನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಅಕ್ಟೋಬರ್ 3 ರಿಂದ 10ರವರೆಗೂ ಒಂದು ವಾರದ ದಸರಾ ಹಬ್ಬದ ಹಿನ್ನೆಲೆ ಕೋರ್ಟ್ ರಜೆಯಲ್ಲಿರಲಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗಿನ ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ತಾಯಿಯನ್ನೇ ಕೊಂದ ಮಗ

    court order law

    ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಆಗಸ್ಟ್ 2019ರ ನಿರ್ಧಾರವನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂಕೋರ್ಟ್‍ನಲ್ಲಿ ಬಾಕಿ ಉಳಿದಿವೆ. ಈ ವಿಧಿಯನ್ನು ರದ್ದುಪಡಿಸುವ ಮೂಲಕ ಕೇಂದ್ರವು ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ತರುವಾಯ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು, ಲಡಾಖ್, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಿವೆ. ಇದನ್ನೂ ಓದಿ: Bigg Boss 9- ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ದಿಢೀರ್ ಅಂತ ರಾಜೇಶ್ ಸಾವು: ಬಿಗ್ ಬಾಸ್ ಮನೆಗೆ ಬರ್ತಾರಾ ನಟ ಸುನೀಲ್?

    ಮಾರ್ಚ್ 2020ರಲ್ಲಿ ಸುಪ್ರೀಂಕೋರ್ಟ್‍ನ 5 ನ್ಯಾಯಾಧೀಶರ ಸಂವಿಧಾನಿಕ ಪೀಠವು 370ನೇ ವಿಧಿಯನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಅನ್ನು 7 ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಉಲ್ಲೇಖಿಸುವ ಅಗತ್ಯವಿಲ್ಲ ಎಂದು ಹೇಳಿತ್ತು. ಕೆಲವು ಅರ್ಜಿದಾರರು ಸುಪ್ರೀಂಕೋರ್ಟ್‍ನ ಎರಡು ತೀರ್ಪುಗಳ ನಡುವೆ ಸಂಘರ್ಷವಿದೆ ಎಂದು ವಾದಿಸಿ 7 ನ್ಯಾಯಾಧೀಶರ ಪೀಠಕ್ಕೆ ಪ್ರಕರಣ ವರ್ಗಾಯಿಸಲು ಮನವಿ ಮಾಡಲಾಗಿತ್ತು. ಆದರೆ, ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಐವರು ನ್ಯಾಯಾಧೀಶರ ಪೀಠ, ಹಿಂದಿನ ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪರಿಗಣಿಸಿ ಪ್ರಕರಣವನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು.

    Live Tv
    [brid partner=56869869 player=32851 video=960834 autoplay=true]

  • ಆರ್ಟಿಕಲ್ 370ಯನ್ನು ಮತ್ತೆ ತರುವ ಭರವಸೆ ನಾನು ನೀಡಲ್ಲ: ಆಜಾದ್

    ಆರ್ಟಿಕಲ್ 370ಯನ್ನು ಮತ್ತೆ ತರುವ ಭರವಸೆ ನಾನು ನೀಡಲ್ಲ: ಆಜಾದ್

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ(Jammu and Kashmir) 370 ನೇ ವಿಧಿಯನ್ನು(Article 370) ಮರುಸ್ಥಾಪಿಸುವ ಭರವಸೆಯನ್ನು ನಾನು ನೀಡುವುದಿಲ್ಲ. ಸುಳ್ಳು ಭರವಸೆಗಳನ್ನು ನೀಡುವುದರಲ್ಲಿ ನನಗೆ ನಂಬಿಕೆಯಿಲ್ಲ ಎಂದು ಕಾಂಗ್ರೆಸ್‌ನ ಮಾಜಿ ನಾಯಕ ಗುಲಾಂ ನಬಿ ಆಜಾದ್(Ghulam Nabi Azad) ಅವರು ಭಾನುವಾರ ಹೇಳಿದರು.

    ಉತ್ತರ ಕಾಶ್ಮೀರದ ಬಾರಾಮುಲ್ಲಾ ಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಆಜಾದ್, 370 ನೇ ವಿಧಿಯನ್ನು ಮರುಸ್ಥಾಪಿಸಲು ಲೋಕಸಭೆಯಲ್ಲಿ ಸುಮಾರು 350 ಮತಗಳು ಮತ್ತು ರಾಜ್ಯಸಭೆಯಲ್ಲಿ 175 ಮತಗಳು ಬೇಕು. ಇದು ಯಾವುದೇ ರಾಜಕೀಯ ಪಕ್ಷಗಳು ಹೊಂದಿರದ ಅಥವಾ ಎಂದಿಗೂ ಪಡೆಯದಿರುವ ಸಂಖ್ಯೆ. ಕಾಂಗ್ರೆಸ್ 50 ಕ್ಕಿಂತ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಆದರೂ ಅವರು 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ ಎಂದು ಹೇಳಿ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.

    ನಮ್ಮ ರಾಜಕೀಯ ಅಜೆಂಡಾದಲ್ಲಿ ರಾಜ್ಯತ್ವ, ಭೂಮಿ ಮತ್ತು ಸ್ಥಳೀಯರಿಗೆ ಉದ್ಯೋಗಗಳನ್ನು ನೀಡುವುದೇ ಸೇರಿವೆ. ಏಕೆಂದರೆ ಇವು ಸಾಧಿಸಬಹುದಾದ ವಿಚಾರಗಳು. ಗೃಹ ಸಚಿವರು ತಂದ 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಣಯದ ಪರವಾಗಿ ಮತ ಚಲಾಯಿಸಿದ್ದೇನೆ ಎಂದು ಕೆಲವರು ನನ್ನನ್ನು ದೂಷಿಸಿದ್ದಾರೆ. ಆದರೆ ನಾನು ರದ್ದತಿಯ ವಿರುದ್ಧ ಮತ ಹಾಕಿದ್ದೇನೆ. ಸಂಸತ್ತಿನ ಕೆಲಸದ ಬಗ್ಗೆ ತಿಳಿಯದ ಈ ಜನರು, ನಾನು 370 ನೇ ವಿಧಿಯ ವಿರುದ್ಧ ಮತ ಹಾಕಿದ್ದೇನೆ ಎಂದು ಹೇಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್‌ – ಉದ್ಧವ್‌ ಬಣದ ಐವರು ಅರೆಸ್ಟ್‌, 40 ಮಂದಿ ವಿರುದ್ಧ FIR

    ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಣಿವೆ ಪ್ರದೇಶದಲ್ಲಿ 4 ಹಾಗೂ ಜಮ್ಮು ವಿಭಾಗದಲ್ಲಿ 3 ಹೊಸ ಜಿಲ್ಲೆಗಳನ್ನು ರಚಿಸಲಾಗಿದೆ. ಆ ಅವಧಿಯಲ್ಲಿ ನಾನು ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಿದ್ದೇನೆ. ಚುನಾವಣೆ ಸಂದರ್ಭದಲ್ಲಿ ನನಗೆ 4 ಮತ ಬಿದ್ದರೂ, ಲಕ್ಷಗಟ್ಟಲೆ ಮತ ಪಡೆದರೂ ಜನರಿಗೆ ಮೋಸ ಮಾಡುವುದಿಲ್ಲ ಎಂದು ಸಾರ್ವಜನಿಕ ಸಭೆಗೆ ಭರವಸೆ ನೀಡಿದರು. ಇದನ್ನೂ ಓದಿ: 21 ವರ್ಷಗಳ ಬಳಿಕ ಈಡೇರಿದ ಸಂಕಲ್ಪ- ಕೊನೆಗೂ ಗಡ್ಡ ತೆಗೆಸಿಕೊಂಡ ವ್ಯಕ್ತಿ

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ: ಎ. ನಾರಾಯಣಸ್ವಾಮಿ

    ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ: ಎ. ನಾರಾಯಣಸ್ವಾಮಿ

    ಚಾಮರಾಜನಗರ: ಮಂಗಳೂರಿನಲ್ಲಿ ಹಲವು ಸಂಘಟನೆಗಳಿದ್ದು, ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಅಲ್ಲಿ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

    ಮುಸ್ಲಿಂ ಡಿಫೆನ್ಸ್ ಫೋರ್ಸ್ ಎಂಬ ಸಂಘಟನೆ ಬಗ್ಗೆ ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಮಂಗಳೂರು, ಕೇರಳ, ದೆಹಲಿ ಸೇರಿದಂತೆ ಎಲ್ಲೇ ಸಂಘಟನೆಗಳು ಹುಟ್ಟಿಕೊಳ್ಳಲಿ, ಅವರನ್ನು ಸದೆಬಡಿಯುತ್ತೇವೆ. ಯಾವುದೇ ಕಾರಣಕ್ಕೂ ಅವರನ್ನು ಬಿಡಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಗೌರವ, ಸಾರ್ವಭೌಮತೆಗೆ ಕುಂದು ತರುವ ಸಂಸ್ಥೆಗಳನ್ನು ಬಿಡುತ್ತಿಲ್ಲ. ಯಾವುದನ್ನು ಯಾವ ಕಾಲಘಟ್ಟದಲ್ಲಿ ಬ್ಯಾನ್ ಮಾಡಬೇಕೋ, ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಏನೇ ಮಾಡಿದ್ರು ಅಂಜುವ ಮಗ ನಾನಲ್ಲ: ಯತ್ನಾಳ್

    ಪಾಕಿಸ್ತಾನ್ ಜಿಂದಾಬಾದ್, ಛೋಟಾ ಪಾಕಿಸ್ತಾನ್ ಎಂದು ಕೂಗುವ ಪ್ರವೃತ್ತಿಗಳು ಜಮ್ಮು ಕಾಶ್ಮೀರದಲ್ಲಿ ಪ್ರಾರಂಭವಾಗಿತ್ತು. ಹಿಂದಿನ ಸರ್ಕಾರಗಳು ಇದನ್ನು ನಿಗ್ರಹಿಸಲು ವಿಫಲವಾಗಿದ್ದವು. ಪಾಕಿಸ್ತಾನದಲ್ಲಿ ಸರ್ಕಾರ ಬದಲಾವಣೆಯಾದಾಗ ಇಂತಹ ಘಟನೆಗಳು ಮತ್ತೆ ಪ್ರಾರಂಭವಾಗಿವೆ. ಇದನ್ನು ನಿಗ್ರಹಿಸುವ ಶಕ್ತಿ ಭಾರತಕ್ಕಿದ್ದು, ನಿಗ್ರಹ ಮಾಡುತ್ತೇವೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್ ಓರ್ವ ಅರಾಜಕತೆ ಸೃಷ್ಟಿ ಮಾಡುವ ನಾಯಕ: ಸಂದೀಪ್

    ಪಾಕಿಸ್ತಾನದ ಏಜೆಂಟ್‌ನಂತೆ ನಡೆದುಕೊಳ್ಳುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ, ಕೇಂದ್ರ ಸರ್ಕಾರ ಶಕ್ತವಾಗಿದೆ. ಧರ್ಮ ಸಂಘರ್ಷ ಪ್ರಕರಣಗಳು ನಡೆದಾಗ ನಿರ್ಲಕ್ಷ್ಯ ಮಾಡಿಲ್ಲ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗುವುದು. ಕವಲಂದೆ ಪ್ರಕರಣದಲ್ಲೂ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದರು.

    ಪಾಕಿಸ್ತಾನ ಏಜೆಂಟ್‌ಗಳು ದೇಶದಲ್ಲಿ ಸಕ್ರಿಯವಾಗಿದ್ದಾರೆ. ಅದಕ್ಕಾಗಿಯೇ ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದು ಹಾಕಿದ್ದೇವೆ. ದೇಶದಲ್ಲಿ ರಾಷ್ಟ್ರೀಯತೆ ಮೈಗೂಡಿಸಲು ಏನೇನು ಕಾನೂನು ಬೇಕು ಅದನ್ನು ತರಲಾಗುತ್ತಿದೆ ಎಂದರು.

  • ಜನರನ್ನು ನೇರವಾಗಿ ಮಾತನಾಡಿಸಬೇಕು ಎಂದು ಬುಲೆಟ್ ಪ್ರೂಫ್ ಶೀಲ್ಡ್ ತೆಗೆದ ಶಾ

    ಜನರನ್ನು ನೇರವಾಗಿ ಮಾತನಾಡಿಸಬೇಕು ಎಂದು ಬುಲೆಟ್ ಪ್ರೂಫ್ ಶೀಲ್ಡ್ ತೆಗೆದ ಶಾ

    ಶ್ರೀನಗರ: ನಾನು ಜನರನ್ನು ನೇರವಾಗಿ ಮಾತನಾಡಿಸಬೇಕು ಎಂದು ಕೇಂದ್ರದ ಗೃಹ ಸಚಿವ ಅಮಿತ್ ಶಾ ಬುಲೆಟ್ ಪ್ರೂಫ್ ಶೀಲ್ಡ್ ತೆಗೆದು ಶ್ರೀನಗರದಲ್ಲಿ ಜನರನ್ನು ಮಾತನಾಡಿಸಿದ್ದಾರೆ.

    ಅಮಿತ್ ಶಾ ಅವರು ಇಂದು ಶ್ರೀನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೊದಲು ಬುಲೆಟ್ ಪ್ರೂಫ್ ಗ್ಲಾಸ್ ಶೀಲ್ಡ್ ಅನ್ನು ತೆಗೆದು ಜನರನ್ನು ನೇರವಾಗಿ ಮಾತನಾಡಿದರು. ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಶೇರ್-ಎ-ಕಾಶ್ಮೀರ್ ಕನ್ವೆನ್ಷನ್ ಸೆಂಟರ್‍ನಲ್ಲಿ ವೇದಿಕೆಯ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಜನರನ್ನು ನೋಡಿ ಬುಲೆಟ್ ಪ್ರೂಫ್ ಶೀಲ್ಡ್ ಅನ್ನು ತೆಗೆದು ಹಾಕಲು ಆದೇಶಿಸಿದರು. ಲೆಫ್ಟಿನೆಂಟ್ ಗವರ್ನರ್ ಅವರ ಮೇಲ್ವಿಚಾರಣೆಯಲ್ಲಿ ಭದ್ರತಾ ಸಿಬ್ಬಂದಿ ಗಾಜಿನ ಹೊದಿಕೆಯನ್ನು ತೆಗೆದರು. ಈ ವೇಳೆ ಜನರೊಂದಿಗೆ ಶಾ ಮಾತನಾಡಿದರು. ಇದನ್ನೂ ಓದಿ: ತಂದೆ ಹಿಂದೂ, ತಾಯಿ ಮುಸ್ಲಿಂ, ನಾನು ಜಾತ್ಯತೀತ ಕುಟುಂಬಕ್ಕೆ ಸೇರಿದ್ದೇನೆ: ಸಮೀರ್ ವಾಂಖೆಡೆ ತೀಕ್ಷ್ಣ ಪ್ರತಿಕ್ರಿಯೆ

    ಬಳಿಕ ವೇದಿಕೆ ಮೇಲೆ ಬಂದು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ನನ್ನನ್ನು ನಿಂದಿಸಲಾಯಿತು, ಖಂಡಿಸಲಾಯಿತು. ಇಂದು ನಾನು ನಿಮ್ಮೊಂದಿಗೆ ಸ್ಪಷ್ಟವಾಗಿ ಮಾತನಾಡಲು ಬಯಸುತ್ತೇನೆ, ಅದಕ್ಕಾಗಿಯೇ ಇಲ್ಲಿ ಬುಲೆಟ್ ಪ್ರೂಫ್ ಶೀಲ್ಡ್ ಅಥವಾ ಭದ್ರತೆ ಇಲ್ಲ. ನಾನು ನಿಮ್ಮ ಮುಂದೆ ಈ ರೀತಿ ನಿಂತಿದ್ದೇನೆ ಎಂದರು.

    ಕಾಶ್ಮೀರ, ಜಮ್ಮು ಮತ್ತು ಹೊಸದಾಗಿ ಸೃಷ್ಟಿಯಾದ ಲಡಾಖ್ ಅನ್ನು ಅಭಿವೃದ್ಧಿಯ ಹಾದಿಯಲ್ಲಿ ಇರಿಸುವ ಉದ್ದೇಶದಿಂದ 370ನೇ ವಿಧಿಯನ್ನು ರದ್ದು ಮಾಡಲಾಯಿತು. 2024ರ ವೇಳೆಗೆ ನಮ್ಮ ಪ್ರಯತ್ನದ ಫಲವನ್ನು ನೀವು ನೋಡುತ್ತೀರಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಕಾಶ್ಮೀರ ಕಣಿವೆಯಲ್ಲಿ 5,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಮ್ಮುವಿನ ಜನರನ್ನು ಬದಿಗೆ ಸರಿಸುವ ಸಮಯ ಕೊನೆಗೊಂಡಿದೆ. ಈಗ ಕಾಶ್ಮೀರ ಮತ್ತು ಜಮ್ಮು ಎರಡನ್ನೂ ಒಟ್ಟಿಗೆ ಅಭಿವೃದ್ಧಿ ಪಡಿಸಲಾಗುವುದು ಎಂದು ಭರವಸೆಯನ್ನು ವ್ಯಕ್ತಪಡಿಸಿದರು.

    ಶನಿವಾರ ಶ್ರೀನಗರಕ್ಕೆ ಬಂದ ನಂತರ, ಅವರು ಈ ವರ್ಷದ ಆರಂಭದಲ್ಲಿ ಭಯೋತ್ಪಾದಕರಿಂದ ಕೊಲ್ಲಲ್ಪಟ್ಟ ಪೊಲೀಸ್ ಅಧಿಕಾರಿಯ ಕುಟುಂಬವನ್ನು ಭೇಟಿ ಮಾಡಿದರು. ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ಶಾ ಅವರು ಗಂದರ್‍ಬಾಲ್‍ನಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅಮಿತ್ ಶಾ ಅವರು ಸಾಂಪ್ರದಾಯಿಕವಾಗಿ ಫೆರಾನ್ ಧರಿಸಿದ್ದರು. ಇದನ್ನೂ ಓದಿ:  ಇಂದು ಕರ್ನಾಟಕದಲ್ಲಿ 290 ಪಾಸಿಟಿವ್, 10 ಸಾವು

    ಜಮ್ಮು ಮತ್ತು ಕಾಶ್ಮೀರಕ್ಕೆ ಮೂರು ದಿನಗಳ ಭೇಟಿ ನೀಡಿದ ಅಮಿತ್ ಶಾ, 2019 ರ ಆಗಸ್ಟ್ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವುದಾಗಿ ಘೋಷಿಸಿದರು. ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಇಳಿಸಿದರು. ಅದಕ್ಕೂ ಮೊದಲು, 2019ರಲ್ಲಿ ಬಿಜೆಪಿ ಅಧಿಕಾರವನ್ನು ಸ್ವೀಕರಿಸಿದ ನಂತರ, ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಇವರು ಕಾಶ್ಮೀರಕ್ಕೆ ಭೇಟಿ ನೀಡಿದ್ದರು.

  • ಆರ್ಟಿಕಲ್ 370 ರದ್ದು ಬಳಿಕ ಮೊದಲ ಬಾರಿಗೆ ಜಮ್ಮು, ಕಾಶ್ಮೀರ ನಾಯಕರೊಂದಿಗೆ ಮೋದಿ ಸಭೆ

    ಆರ್ಟಿಕಲ್ 370 ರದ್ದು ಬಳಿಕ ಮೊದಲ ಬಾರಿಗೆ ಜಮ್ಮು, ಕಾಶ್ಮೀರ ನಾಯಕರೊಂದಿಗೆ ಮೋದಿ ಸಭೆ

    – ಜಮ್ಮು, ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ಚಿಂತನೆ!

    ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370ನ್ನು ಕೇಂದ್ರ ರದ್ದು ಮಾಡಿದ ಬಳಿಕ ಕಣಿವೆ ನಾಡಿನ ರಾಜಕೀಯ ಪ್ರಮುಖರ ಜೊತೆ ಪ್ರಧಾನಿ ನರೇಂದ್ರ ಮೋದಿ ಮೊದಲ ಸಭೆ ನಡೆಸಿದರು. ಸುಮಾರು ಮೂರುವರೆ ಗಂಟೆಗಳ ಕಾಲ ಸಭೆ ನಡೆದಿದ್ದು, ಜಮ್ಮು, ಕಾಶ್ಮೀರ ನಾಯಕರು ತಮ್ಮ ಅಭಿಪ್ರಾಯಗಳನ್ನು ಪ್ರಧಾನಿಗಳ ಮುಂದೆ ಇರಿಸಿದ್ದಾರೆ.

    ರಾಜ್ಯ ಸ್ಥಾನಮಾನ ಶೀಘ್ರ ಸಿಗಲಿ:
    ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್, ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ಶೀಘ್ರ ಸಿಗಲಿ. ವಿಧಾನಸಭಾ ಚುನಾವಣೆ ಬಳಿಕ ಈ ಪ್ರಕ್ರಿಯೆ ಬೇಗ ನಡೆಯಲಿ. ಜೊತೆಗೆ ಕಾಶ್ಮೀರಿ ಪಂಡಿತರನ್ನು ವಾಪಸ್ ಕರೆತಂದು ಪುರ್ನವಸತಿಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದರು. ಇದೇ ವೇಳೆ ಮಾತನಾಡಿದ ಮುಜಫ್ಪರ್ ಹುಸೈನ್ ಬೇಗ್, ಆರ್ಟಿಕಲ್ 370 ರದ್ದು ನಿರ್ಧಾರ ವಿಧಾನಭೆ ಮೂಲಕ ನಡೆಯಬೇಕಿದೆ. ಜಮ್ಮು, ಕಾಶ್ಮೀರಕ್ಕೆ ಪೂರ್ಣ ರಾಜ್ಯದ ಸ್ಥಾನಮಾನ ನೀಡುವ ಕುರಿತು ಪ್ರಧಾನಿಗಳು ಸ್ಪಷ್ಟವಾಗಿ ಹೇಳಿಲ್ಲ ಎಂದರು.

    ಜಮ್ಮು, ಕಾಶ್ಮೀರ ನಾಯಕರ ಜೊತೆಗಿನ ಸಭೆ ಬಳಿಕ ಮಾತನಾಡಿದ ಬಿಜೆಪಿ ನಾಯಕ ಕವಿಂದರ್ ಗುಪ್ತಾ, ಎಲ್ಲ ರಾಜಕೀಯ ನಾಯಕರು ತಮ್ಮ ಪ್ರಸ್ತಾಪ ಮತ್ತು ಅಭಿಪ್ರಾಯವನ್ನ ಸರ್ಕಾರದ ಮುಂದೆ ಇರಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯ ಪ್ರಕ್ರಿಯೆಗಳು ನಡೆಯುವ ಸಾಧ್ಯತೆಗಳಿವೆ. ಗಡಿ ನಿರ್ಣಯದ ಬಳಿಕ ಕ್ಷೇತ್ರಗಳನ್ನ ಗುರುತಿಸಲಾಗುವುದು. ಮತ್ತೊಮ್ಮೆ ಜಮ್ಮು, ಕಾಶ್ಮೀರದಲ್ಲಿ ವಿಧಾನಸಭೆ ರಚನೆಯಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: 370ನೇ ವಿಧಿ ರದ್ದು : ಇದು ಯಾವ ರೀತಿಯ ಅರ್ಜಿ – ಅರ್ಜಿದಾರರಿಗೆ ಸುಪ್ರೀಂ ತರಾಟೆ

    ಆರ್ಟಿಕಲ್ 370 ವಿಷಯ ಚರ್ಚೆಗೆ ತಂದ ಮುಫ್ತಿ:
    ಸಭೆಯಲ್ಲಿ ಪಿಡಿಪಿ ಅಧ್ಯಕ್ಷೆ 370 ರದ್ದುಗೊಳಿಸುವ ವಿಷಯವನ್ನು ಚರ್ಚೆಗೆ ತಂದರು. ನೀವು ಆರ್ಟಿಕಲ್ 370 ರದ್ದುಗೊಳಿಸುವ ಮುನ್ನು ಜಮ್ಮು, ಕಾಶ್ಮೀರ ವಿಧಾನಸಭೆಯನ್ನು ಕರೆದು ನಿರ್ಧಾರ ಪ್ರಕಟಿಸಬೇಕಿತ್ತು. ಈ ರೀತಿ ಕಾನೂನು ಪಾಲಿಸದೇ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಹಕ್ಕು ಯಾರಿಗೂ ಇಲ್ಲ. ಸಾಂವಿಧಾನಿಕ ಮತ್ತು ಕಾನೂನು ರೀತಿಯಲ್ಲಿ ಆರ್ಟಿಕಲ್ 370 ಪುನಃಸ್ಥಾಪಿಸಲು ಬಯುಸುತ್ತೇವೆ ಎಂದು ಹೇಳಿರುವ ಬಗ್ಗೆ ವರದಿಯಾಗಿದೆ. ಇದನ್ನೂ ಓದಿ: ಮೋದಿಗೆ ದೇಶದ ಆರ್ಥಿಕತೆಗಿಂತ 370ರ ಬಗ್ಗೆಯೇ ಹೆಚ್ಚು ನಂಬಿಕೆ: ಎಚ್‍ಡಿಡಿ ಟಾಂಗ್

    ಉಮರ್ ಅಬ್ದುಲ್ಲಾ ಆಕ್ರೋಶ:
    ಸಭೆಯಲ್ಲಿ ಮಾಜಿ ಸಿಎಂ ಉಮರ್ ಅಬ್ದುಲ್ಲಾ ಆಕ್ರೋಶವಾಗಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ. ಆಗಸ್ಟ್ 8, 2019ರಂದು ಕೇಂದ್ರ ಸರ್ಕಾರ ಆರ್ಟಿಕಲ್ 370 ರದ್ದುಗೊಳಿಸಿರೋದನ್ನು ನಾವು ವಿರೋಧಿಸುತ್ತೇವೆ. ಕೇಂದ್ರದ ಈ ನಿರ್ಧಾರಕ್ಕೆ ನಮ್ಮ ಒಪ್ಪಿಗೆ ಇಲ್ಲ. ಆರ್ಟಿಕಲ್ 370ರ ಸಂಬಂಧ ನಾವು ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತೇವೆ. ಇದನ್ನೂ ಓದಿ: 370ನೇ ವಿಧಿ ರದ್ದು ಭಾರತದ ಆರ್ಥಿಕ ಅಭಿವೃದ್ಧಿಗೆ ನಾಂದಿ: ಅಮೆರಿಕ ಸಂಸದ

    ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ ನೀಡುವ ಚಿಂತನೆ ನಡೆಸಿದ್ದ ಕೇಂದ್ರ ಸರ್ಕಾರ, ಇಂದು ಕಣಿವೆ ನಾಡಿನ ರಾಜಕೀಯ ಪ್ರಮುಖರ ಜೊತೆ ಸಭೆ ನಡೆಸಿತು. ಪ್ರಧಾನಿ ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬೀ ಆಜಾದ್, ಮಾಜಿ ಸಿಎಂಗಳಾದ ಫರೂಖ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಯೂಸೂಫ್ ತರಿಗಾಮಿ, ರವೀಂದ್ರ ರೈನಾ, ನಿರ್ಮಲ್ ಸಿಂಗ್ ಸೇರಿ ಹಲವು ನಾಯಕರು ಪಾಲ್ಗೊಂಡಿದ್ರು. ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ರು. ಇದನ್ನೂ ಓದಿ: ಆರ್ಟಿಕಲ್ 370 ರದ್ದು ಭಾರತದ ಆಂತರಿಕ ವಿಚಾರ ಅಂತ ಒಪ್ಕೊಂಡ ಪಾಕ್

  • ದೇಶವಿರೋಧಿ ಚಿಂತನೆಯ ಕಾಂಗ್ರೆಸ್ ತನ್ನ ಹೆಸರು ಬದಲಿಸುವುದು ಸೂಕ್ತ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

    ದೇಶವಿರೋಧಿ ಚಿಂತನೆಯ ಕಾಂಗ್ರೆಸ್ ತನ್ನ ಹೆಸರು ಬದಲಿಸುವುದು ಸೂಕ್ತ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

    ಬೆಂಗಳೂರು: ಕಾಂಗ್ರೆಸ್ ಹಿರಿಯ ನೇತಾರ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ ಎಂದಿರುವ ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು, ದಿಗ್ವಿಜಯ ಸಿಂಗ್ ಅವರ ಹೇಳಿಕೆಯನ್ನು ಪಕ್ಷವು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.

    ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ವಿಶ್ವವಂದ್ಯ ಪ್ರಧಾನಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದೆ. ಟೂಲ್‍ಕಿಟ್ ವಿಷಯದಲ್ಲಿ ಈಗಾಗಲೇ ಬಿಜೆಪಿ, ಕಾಂಗ್ರೆಸ್ಸಿಗರ ದುರುದ್ದೇಶವನ್ನು ಜನರ ಗಮನಕ್ಕೆ ತಂದಿದೆ. ದಿಗ್ವಿಜಯ್ ಸಿಂಗ್ ಹೇಳಿಕೆಯಿಂದ ಆ ಪಕ್ಷವು ಚೀನಾ- ಪಾಕಿಸ್ತಾನದ ಜೊತೆ ನಿಂತಿರುವುದು ಸ್ಪಷ್ಟಗೊಳ್ಳುತ್ತದೆ. ಕಾಂಗ್ರೆಸ್ ಪಕ್ಷದ ಮುಖಂಡರು ಕ್ಲಬ್‍ಹೌಸ್ ಆ್ಯಪ್ ಮೂಲಕ ದೇಶವಿರೋಧಿ ಮಾತನ್ನಾಡುವ ನಾಚಿಗೆಗೆಟ್ಟ ಸಂದರ್ಶನ ನೀಡಿದ್ದು, ಆ ಪಕ್ಷವು ಪಾಕಿಸ್ತಾನದ ಪರ ಇರುವುದು ಸ್ಪಷ್ಟಗೊಳ್ಳುತ್ತಿದೆ. ಆದ್ದರಿಂದ ಕಾಂಗ್ರೆಸ್ಸಿನ ಹೆಸರನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಐಎನ್‍ಸಿ) ಹೆಸರಿನ ಬದಲಾಗಿ ಆ್ಯಂಟಿ ನ್ಯಾಷನಲ್ ಕ್ಲಬ್‍ಹೌಸ್ ಎಂದು ಬದಲಿಸಿಕೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.

    ದಿಗ್ವಿಜಯ್ ಸಿಂಗ್ ಅವರು ಈ ಹಿಂದೆ ಪುಲ್ವಾಮಾ ದಾಳಿ ಇದೇನೂ ಗಂಭೀರ ವಿಚಾರವಲ್ಲ ಎಂದು ಹೇಳಿ ಪಾಕಿಸ್ತಾನದ ಕ್ರಮವನ್ನೇ ಸಮರ್ಥಿಸಲು ಮುಂದಾಗಿದ್ದರು. ಇದು ಭಯೋತ್ಪಾದಕರ ದಾಳಿ ಎಂದು ಒಪ್ಪಿಕೊಳ್ಳಲು ಅವರು ಸಿದ್ಧರಿರಲಿಲ್ಲ. ವಿದೇಶದ ಮಾಧ್ಯಮ ಪ್ರತಿನಿಧಿ ಜೊತೆ ಸಂದರ್ಶನದಲ್ಲಿ “ನರೇಂದ್ರ ಮೋದಿ ಅವರ ಅಧಿಕಾರ ಕಳೆದುಕೊಂಡರೆ” ಎಂಬ ಊಹಾತ್ಮಕ ಪ್ರಶ್ನೆಗೆ ದಿಗ್ವಿಜಯ್ ಸಿಂಗ್ ಅವರು ಈ ಉತ್ತರ ನೀಡಿರುವುದು ಕಾಂಗ್ರೆಸ್‍ನ ಪಾಕ್ ಪರ- ಚೀನಾಪರ ನೀತಿಯ ಪ್ರತಿಬಿಂಬದಂತಿದೆ. ಅಲ್ಲದೆ, ಜಮ್ಮು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣ ಬೇಡ ಎಂಬುದರ ಪ್ರತೀಕದಂತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಬೇಕು ಮತ್ತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಈ ಹಿಂದೆ ಕಾಂಗ್ರೆಸ್ ಮುಖಂಡರಾದ ಮಣಿಶಂಕರ್ ಅಯ್ಯರ್ ಅವರೂ ಪಾಕಿಸ್ತಾನದಲ್ಲಿ ಸಂದರ್ಶನವೊಂದರಲ್ಲಿ ತಿಳಿಸಿದ್ದರು. 2014ರಲ್ಲಿ ಅಯ್ಯರ್ ಅವರು ಈ ಸಂದರ್ಶನ ಕೊಟ್ಟಾಗ ಈ ಹೇಳಿಕೆ ಕೇಳಿ ಟಿ.ವಿ. ಆಂಕರ್ ಆತಂಕಗೊಂಡಿದ್ದರು. ಇದರಲ್ಲಿ ನಮ್ಮ ಪಾತ್ರ ಏನಿದೆ ಎಂಬ ಪ್ರಶ್ನೆ ಮುಂದಿಟ್ಟಿದ್ದರು. ಇದು ಕಾಂಗ್ರೆಸ್ಸಿಗರ ಷಡ್ಯಂತ್ರವಲ್ಲದೆ ಮತ್ತೇನು? ಪಾಕಿಸ್ತಾನ ಪರ ಕಾಂಗ್ರೆಸ್ ಇರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 370ನೇ ವಿಧಿ ರದ್ದತಿ ಬಳಿಕ ಜಮ್ಮು ಕಾಶ್ಮೀರದಲ್ಲಿ ಶೇ.54ರಷ್ಟು ಉಗ್ರ ಚಟುವಟಿಕೆ ಇಳಿಕೆ

    ಮಣಿಶಂಕರ್ ಅಯ್ಯರ್ ಅವರು ಈ ಹಿಂದೆ ಜಮ್ಮು ಕಾಶ್ಮೀರವನ್ನು ಅಫಘಾನಿಸ್ತಾನಕ್ಕೆ ಹೋಲಿಸಿದ್ದರು ಎಂಬುದೂ ಗಮನಾರ್ಹ. ರಾಹುಲ್ ಗಾಂಧಿ ಅವರೂ 370ನೇ ವಿಧಿ ರದ್ದತಿ ಬಹುದೊಡ್ಡ ಪ್ರಮಾದ ಎಂದು ಟ್ವೀಟ್ ಮಾಡಿದ್ದರು. 2019ರ ಆಗಸ್ಟ್ ನಲ್ಲಿ ಈ ಟ್ವೀಟ್ ಮಾಡಲಾಗಿತ್ತು. ಜಮ್ಮು ಕಾಶ್ಮೀರದಲ್ಲಿ ಸಾವಿರಾರು ಜನರ ಹತ್ಯೆ ಆಗಿದೆ, ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎಂದಿದ್ದರು. ಇದಾದ ಎರಡು ದಿನಗಳ ಬಳಿಕ ಪಾಕಿಸ್ತಾನದ ರಾಷ್ಟ್ರಾಧ್ಯಕ್ಷರಾದ ಇಮ್ರಾನ್ ಖಾನ್ ಅವರು ಈ ಕುರಿತು ವಿಶ್ವಸಂಸ್ಥೆಗೆ ಪತ್ರ ಬರೆದಿದ್ದರು, ಜಮ್ಮು ಕಾಶ್ಮೀರದ ಪರಿಸ್ಥಿತಿ ಚೆನ್ನಾಗಿಲ್ಲ ಎಂಬ ರಾಹುಲ್ ಗಾಂಧಿ ಅವರ ಟ್ವೀಟ್ ಅನ್ನೂ ಅವರು ಉಲ್ಲೇಖಿಸಿದ್ದರು. ಇದು ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಗುಪ್ತ ಒಪ್ಪಂದಕ್ಕೆ ಸಾಕ್ಷಿ ಅಲ್ಲವೇ ಎಂದು ಅವರು ಕೇಳಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ನಮಗೆ ರಾಷ್ಟ್ರೀಯತೆಯ ಪ್ರಶ್ನೆ: ಅಮಿತ್ ಶಾ

    ರಾಹುಲ್ ಗಾಂಧಿ ಅವರು ಕೋವಿಡ್ ಹೆಚ್ಚಳದ ಕುರಿತು 2020ರ ಫೆಬ್ರವರಿ 13ರಂದು ಟ್ವೀಟ್‍ನಲ್ಲಿ ಜಮ್ಮು -ಕಾಶ್ಮೀರವನ್ನು ಪಾಕಿಸ್ತಾನದ ಭಾಗ ಎಂದು ಭೂಪಟದಲ್ಲಿ ತೋರಿಸಿದ್ದರು. ಇದು ಕಾಂಗ್ರೆಸಿಗರ ದೇಶವಿರೋಧಿ ಚಿಂತನೆಯ ಭಾಗವಲ್ಲವೇ ಎಂದು ಅವರು ಪ್ರಶ್ನೆ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿನ ನಿರ್ಬಂಧ ಹಿಂಪಡೆಯುವವರೆಗೆ ದ್ವಿಪಕ್ಷೀಯ ಮಾತುಕತೆ ಇಲ್ಲ- ಇಮ್ರಾನ್ ಖಾನ್