Tag: artist

  • ವೈದ್ಯರ ನಿರ್ಲಕ್ಷ್ಯಕ್ಕೆ ಜ್ಯೂನಿಯರ್ ಆರ್ಟಿಸ್ಟ್  ಬಲಿ : ತಾಯಿಯ ಆರೋಪ

    ವೈದ್ಯರ ನಿರ್ಲಕ್ಷ್ಯಕ್ಕೆ ಜ್ಯೂನಿಯರ್ ಆರ್ಟಿಸ್ಟ್ ಬಲಿ : ತಾಯಿಯ ಆರೋಪ

    ವೈದ್ಯರ (Doctor) ನಿರ್ಲಕ್ಷ್ಯ ಕಾರಣದಿಂದಾಗಿ ಜ್ಯೂನಿಯರ್ ಆರ್ಟಿಸ್ಟ್ (Junior Artist)ಒಬ್ಬರು ಬಲಿಯಾದ ಪ್ರಕರಣ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ. ಹದಿನೈದರ ವಯಸ್ಸಿನ ಸಿಂಚನಾ (Sinchana) ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಹ ಕಲಾವಿದೆಯಾಗಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರು ವಾಂತಿ ಬೇಧಿಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಮನೆಯ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ನಿರ್ಲಕ್ಷ್ಯ ಕಾರಣದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಸಿಂಚನಾ ತಾಯಿ ನೇತ್ರಾವತಿ (Netravati) ಆರೋಪಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಎರಡು ದಿನಗಳಿಂದ ನನ್ನ ಮಗಳು ವಾಂತಿ ಬೇಧಿಯಿಂದ ಬಳಲುತ್ತಿದ್ದಳು. ಮೊದಲು ಕ್ಲಿನಿಕ್ ನಲ್ಲಿ ತೋರಿಸಿದ್ದೆವು. ತುಂಬಾ ಸುಸ್ತಾಗಿದ್ದರಿಂದ ದೊಡ್ಡ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸಲಹೆ ನೀಡಿದರು. ಮನೆಯ ಸಮೀಪದಲ್ಲೇ ಇದ್ದ ಖಾಸಗಿ ಆಸ್ಪತ್ರೆಗೆ ಮಗಳನ್ನು ದಾಖಲಿಸಲಾಯಿತು. ಆದರೆ, ಅವಳಿಗೆ ಸರಿಯಾದ ವೇಳೆಗೆ ಚಿಕಿತ್ಸೆ ದೊರೆಯಲಿಲ್ಲ. ಇದೇ ನನ್ನ ಮಗಳ ಸಾವಿಗೆ ಕಾರಣವಾಗಿದೆ’ ಎನ್ನುತ್ತಾರೆ ಸಿಂಚನಾ ತಾಯಿ.

    ಮುಂದುವರೆದು ಮಾತನಾಡಿದ ಅವರು, ‘ಸಿಂಚನಾಗೆ ಕತ್ತಿನ ಭಾಗಕ್ಕೆ ಇಂಜೆಕ್ಷನ್ ನೀಡಿದ್ದರು. ಕತ್ತಿನಲ್ಲಿ ರಕ್ತಸ್ರಾವ ಹೆಚ್ಚಾಯಿತು. ಅದನ್ನು ವೈದ್ಯರ ಗಮನಕ್ಕೆ ತಂದರೂ, ಅವರು ಅದನ್ನು ಗಂಭೀರವಾಗಿ ತಗೆದುಕೊಳ್ಳಲಿಲ್ಲ. ತರಬೇತಿ ವೈದ್ಯರು ನನ್ನ ಮಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ನುರಿತ ವೈದ್ಯರನ್ನು ಕರೆಯಿಸುವಂತೆ ಬೇಡಿಕೊಂಡರೂ, ಅವರು ಕೇಳಲಿಲ್ಲ. ಹಾಗಾಗಿ ನನ್ನ ಮಗಳನ್ನು ಕಳೆದುಕೊಳ್ಳಬೇಕಾಯಿತು’ ನೇತ್ರಾವತಿ. ಇದನ್ನೂ ಓದಿ:ಬಾಲಿವುಡ್‌ನ `ಸಿಟಾಡೆಲ್’ ಸೀರಿಸ್ ಒಪ್ಪಿಕೊಂಡಿದ್ಯಾಕೆ? ಕಾರಣ ಬಿಚ್ಚಿಟ್ಟ ಸಮಂತಾ

    ಈ ಸಾವಿನ ಕುರಿತಂತೆ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಗತ್ಯ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ತಗೆದುಕೊಳ್ಳುವ ಕುರಿತು ಪೊಲೀಸರು ಆಶ್ವಾಸನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೀವಂತ ಹಾವು ಕೊರಳಿಗೆ ಧರಿಸಿ ಶಿವನ ಪಾತ್ರ ನಿರ್ವಹಿಸಿದ ಕಲಾವಿದ – ಬೆಚ್ಚಿಬಿದ್ದ ಪ್ರೇಕ್ಷಕರು

    ಜೀವಂತ ಹಾವು ಕೊರಳಿಗೆ ಧರಿಸಿ ಶಿವನ ಪಾತ್ರ ನಿರ್ವಹಿಸಿದ ಕಲಾವಿದ – ಬೆಚ್ಚಿಬಿದ್ದ ಪ್ರೇಕ್ಷಕರು

    ಚಿಕ್ಕೋಡಿ: ಹಲ್ಲು ತಗೆದ ಜೀವಂತ ನಾಗರಹಾವನ್ನು ಶಿವನ ಪಾತ್ರಧಾರಿ ಕೊರಳಲ್ಲಿ ಧರಿಸಿ ಸ್ಟೇಜ್ ಮೇಲೆ ಬಂದು ನಟನೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ.

    ಇಂಚಗೇರಿ ಮಠದ ಸಪ್ತಾಹ ಹಿನ್ನೆಲೆ ಗುರುವಾರ ರಾತ್ರಿ ಜಗಜ್ಯೋತಿ ಬಸವೇಶ್ವರ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಈ ವೇಳೆ ನಾಗರಹಾವನ್ನು ಕೊರಳಲ್ಲಿ ಹಾಕಿಕೊಂಡು ಶಿವನ ಪಾತ್ರಧಾರಿ ಚರಂತಯ್ಯ ಕಾಜಿಬೀಳಗಿ ನಟನೆ ಮಾಡಿದ್ದಾರೆ. ಇದನ್ನೂ ಓದಿ: ಬಹುಮತ ಇಲ್ಲದಿದ್ದರೂ ಮೂರು ಪಕ್ಷದ ಬೆಂಬಲದಿಂದ ಸಭಾಪತಿಯಾಗಿದ್ದೆ: ಬಸವರಾಜ ಹೊರಟ್ಟಿ

    ಚರಂತಯ್ಯ ಕಳೆದ 30 ವರ್ಷಗಳಿಂದ ಬಸವೇಶ್ವರ ನಾಟಕದಲ್ಲಿ ಶಿವನ ಪಾತ್ರವನ್ನು ಮಾಡುತ್ತಿದ್ದಾರೆ. ಪಾತ್ರ ನಿರ್ವಹಣೆ ವೇಳೆ ಮೈಮೇಲೆಲ್ಲಾ ಹಾವು ಓಡಾಡಿದರೂ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದಾರೆ.

    ವೇದಿಕೆ ಮೇಲೆ ಹಾವು ಕಂಡು ಇತರ ಪಾತ್ರಧಾರಿಗಳು ಹಾಗೂ ಪ್ರೇಕ್ಷಕರು ಕೆಲ ಸಮಯ ದಂಗಾಗಿ ಹೋಗಿದ್ದರು. ಇದನ್ನೂ ಓದಿ: ಯಲಹಂಕ ವಾಯುನೆಲೆ ಸುತ್ತಮುತ್ತಲಿರುವ ಕಟ್ಟಡಗಳಿಗೆ BBMP ನೋಟಿಸ್

  • ಬೆಳ್ಳಂಬೆಳಗ್ಗೆ ಮಡಿಕೇರಿ ನಗರದಲ್ಲಿ ಜೆಸಿಬಿ ಘರ್ಜನೆ

    ಬೆಳ್ಳಂಬೆಳಗ್ಗೆ ಮಡಿಕೇರಿ ನಗರದಲ್ಲಿ ಜೆಸಿಬಿ ಘರ್ಜನೆ

    ಮಡಿಕೇರಿ: ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿಕೊಂಡು ನಗರಸಭೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಕಲಾವಿದನ ಫೋಟೋ ಗ್ಯಾಲರಿಯನ್ನು ಇಂದು ಬೆಳ್ಳಂಬೆಳಗ್ಗೆ ನಗರಸಭೆಯ ಅಧಿಕಾರಿಗಳು ತೆರವು ಮಾಡಿದರು.

    ಮಡಿಕೇರಿ ನಗರದ ಚೈನ್ ಗೇಟ್ ಬಳಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿದ ಚಿತ್ರ ಕಲಾವಿದ ಹಾಗೂ ಕುಟುಂಬ ವರ್ಗದವರು ತೆರವು ಕಾರ್ಯಚರಣೆ ನಡೆಸುವ ಸಂದರ್ಭದಲ್ಲಿ ಹೈಡ್ರಾಮ ನಡೆಯಿತು. ಕಳೆದ ಬಾರಿಯು ತೆರವು ಕಾರ್ಯಚರಣೆ ಮಾಡಲು ಮುಂದಾಗಿರುವ ಸಂದರ್ಭದಲ್ಲಿ ಚಿತ್ರಕಲಾವಿದ ಸಂದೀಪ್ ಮತ್ತು ಕುಟುಂಬದಿಂದ ಗ್ಯಾಸ್ ಆನ್ ಮಾಡಿ ಬೆಂಕಿ ಹಚ್ಚಿಕೊಳ್ಳುತ್ತೇವೆ ಎಂದು ನಗರಸಭೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಆನ್‍ಲೈನ್ ವ್ಯವಹಾರಕ್ಕೂ ಮುನ್ನ ಎಚ್ಚರ- 100 ರೂ. ಲಿಪ್‍ಸ್ಟಿಕ್‍ಗೆ ಕಳೆದುಕೊಂಡಿದ್ದು 3 ಲಕ್ಷ ರೂ.!

    ಆದರೆ ಇಂದು ಮಡಿಕೇರಿ ತಹಶೀಲ್ದಾರ್ ಮಹೇಶ್ ನಗರಸಭೆ ಆಯುಕ್ತ ರಾಮದಾಸ್ ನೇತೃತ್ವದಲ್ಲಿ ಫೋಟೋ ಗ್ಯಾಲರಿ ತೆರವು ಕಾರ್ಯಚರಣೆ ಮಾಡಲಾಯಿತು. ಬೆಳಿಗ್ಗೆ 6:30ರ ಸುಮಾರಿಗೆ ನೂರಾರು ಪೊಲೀಸರೊಂದಿಗೆ ಆಗಮಿಸಿದ ನಗರಸಭೆಯ ಅಧಿಕಾರಿಗಳು ಯಾವುದೇ ಮಾಹಿತಿ ಹಾಗೂ ನೋಟಿಸ್ ನೀಡದೆ ಏಕಾಏಕಿ ಬಂದು ದೌರ್ಜನ್ಯ ನಡೆಸಿದ್ದಾರೆ ಎಂದು ಕಲಾವಿದನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಆ್ಯಸಿಡ್ ದಾಳಿಗೊಳಗಾದ ಯುವತಿ ಆರೋಗ್ಯದಲ್ಲಿ ಚೇತರಿಕೆ

  • 23,000 ರುದ್ರಾಕ್ಷಿ ಬಳಸಿ ಶಿವನ ಶಿಲ್ಪಕಲೆ – ಕಲಾವಿದನ ಕೈಚಳಕಕ್ಕೆ ಮನಸೋತ ನೆಟ್ಟಿಗರು

    23,000 ರುದ್ರಾಕ್ಷಿ ಬಳಸಿ ಶಿವನ ಶಿಲ್ಪಕಲೆ – ಕಲಾವಿದನ ಕೈಚಳಕಕ್ಕೆ ಮನಸೋತ ನೆಟ್ಟಿಗರು

    ಭುವನೇಶ್ವರ: ದೇಶಾದ್ಯಂತ ಜನರು ಇಂದು ಮಹಾ ಶಿವರಾತ್ರಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಈ ನಡುವೆ ಕಲಾವಿದರೊಬ್ಬರು ಕಡಲತೀರದ ಮರಳಿನಲ್ಲಿ 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.

    ಜನಪ್ರಿಯ ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ 23,436 ರುದ್ರಾಕ್ಷಿ ಮಣಿಗಳಿಂದ ಅಲಂಕರಿಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು ಸುದರ್ಶನ್ ಪಟ್ನಾಯಕ್ 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ ಮತ್ತು ಮೊದಲ ಬಾರಿಗೆ ತಮ್ಮ ಮರಳಿನ ಕಲೆಯಲ್ಲಿ ರುದ್ರಾಕ್ಷಿಯನ್ನು ಬಳಸಿದ್ದಾರೆ. ಜೊತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಇದನ್ನೂ ಓದಿ: ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿ

    ಪ್ರತಿ ಬಾರಿಯೂ ಸುದರ್ಶನ್ ಮರಳಿನ ಮೇಲೆ ಹೊಸ ರೀತಿಯದ್ದೇನಾದರೂ ಮಾಡಲು ಪ್ರಯತ್ನಿಸುತ್ತಾರೆ. ಕಳೆದ ಬಾರಿ ಶಿವರಾತ್ರಿ ಹಬ್ಬದಂದು ತರಕಾರಿ, ಕೆಂಪು ಗುಲಾಬಿ ಇತ್ಯಾದಿಗಳನ್ನು ಬಳಸಿದ್ದ ಅವರು ಈ ಬಾರಿ ಶಿವನ ಶಿಲ್ಪಕ್ಕೆ ರುದ್ರಾಕ್ಷಿಯನ್ನು ಬಳಸಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ ದೇಶಕ್ಕೆ ಹಲವು ಬಹುಮಾನಗಳನ್ನು ಗಳಿಸಿದ್ದಾರೆ. ಕಲೆಯ ಮೂಲಕ ಆಗಾಗ ಜಾಗತಿಕ ಶಾಂತಿ, ಜಾಗತಿಕ ತಾಪಮಾನ, ಭಯೋತ್ಪಾದನೆಯನ್ನು ನಿಲ್ಲಿಸಿ, ಎಚ್‍ಐವಿ/ಏಡ್ಸ್ ಮತ್ತು ಕೋವಿಡ್ -19 ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಮರಳು ಶಿಲ್ಪಕಲೆಯ ಮೂಲಕ ಸಾಮಾಜಿಕ ಸಂದೇಶಗಳನ್ನು ಸಾರುತ್ತಿರುತ್ತಾರೆ. ಇದನ್ನೂ ಓದಿ: CBI ಎಂದು ಸುಳ್ಳು ಹೇಳಿ ಲಕ್ಷಾಂತರ ರೂ. ಹಣ, ಕೆಜಿಗಟ್ಟಲೆ ಚಿನ್ನದೋಚಿದರು!

  • 25 ಸಾವಿರ ಬಿಸ್ಕೆಟ್, ಬೇಕರಿ ತಿಂಡಿಯಿಂದ ತೆಯ್ಯಂ ಕಲಾಕೃತಿ -ಕೇರಳ ಕಲಾಕಾರನ ಕೈಚಳಕ

    25 ಸಾವಿರ ಬಿಸ್ಕೆಟ್, ಬೇಕರಿ ತಿಂಡಿಯಿಂದ ತೆಯ್ಯಂ ಕಲಾಕೃತಿ -ಕೇರಳ ಕಲಾಕಾರನ ಕೈಚಳಕ

    ತಿರುವನಂತಪುರಂ: ಕೇವಲ ಬಿಸ್ಕೆಟ್, ಬೇಕರಿ ಉತ್ಪನ್ನಗಳನ್ನು ಬಳಸಿಕೊಂಡು ಕೇರಳದ ಕಲಾ ಪ್ರಕಾರವಾದ ತೆಯ್ಯಂ ಕಲಾಕೃತಿಯನ್ನು ತಯಾರಿಸಲಾಗಿದೆ. ಕಲಾಕಾರನ ಈ ಬುದ್ದಿವಂತಿಕೆ ಮತ್ತು ಕೈಚಳಕಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಕಲಾಕಾರ ಡಾವಿಂಚಿ ಸುರೇಶ್ ಈ ಕಾಲಕೃತಿಯನ್ನು ರಚಿಸಿದ್ದಾರೆ. ಇವರು ಸುಮಾರು 15 ಗಂಟೆಗಳ ಸಮಯ ತೆಗೆದುಕೊಂಡು 24 ಅಡಿ ಉದ್ದದ ತ್ಯೆಯಂ ಚಿತ್ರವನ್ನು ರಚಿಸಿದ್ದಾರೆ. ಕೇರಳದ ಕಣ್ಣೂರಿನ ಬೇಕರಿ ಅಂಗಡಿಯೊಂದರಲ್ಲಿ ತೆಯ್ಯಂ ಕಲಾಕೃತಿಯನ್ನು ರಚಿಸಿದ್ದಾರೆ. ಇದನ್ನೂ ಓದಿ:  ಗೊಬ್ಬರಕ್ಕೆ 28,6555 ಕೋಟಿ ಸಬ್ಸಿಡಿ

    ಹಲವು ಟೇಬಲ್‍ಗಳನ್ನು ಜೋಡಿಸಿ ಅದರ ಮೇಲೆ ಬಿಳಿ ಬಣ್ಣದ ವಸ್ತ್ರವನ್ನಿಟ್ಟು, ಬಳಿಕ ವಿವಿಧ ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಈ ಕಲಾಕೃತಿ ರಚಿಸಲು ಬಳಸಲಾಗಿದೆ. ನನ್ನ ಸ್ನೇಹಿತರು ನನಗೆ ಸಹಾಯ ಮಾಡಿದರು. ಅವರ ಬೆಂಬಲದಿಂದ ಕೆಲಸ ಸುಲಭವಾಯಿತು. ನಾವು 24 ಅಡಿ ಉತ್ತದ ಈ ಕಲಾಕೃತಿಗೆ 25,000 ಬಿಸ್ಕೆಟ್ ಬಳಕೆ ಮಾಡಲಾಗಿದೆ. ಬೇಕರಿ ಉತ್ಪನ್ನಗಳಿಂದಲೇ ಮಾಡಿದ್ದೇವೆ ಎಂದು ಕಲಾಕಾರ ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ:  ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ಬೇಕರಿ ಬಾಣಸಿಗ ಮಹಮ್ಮದ್ ರಶೀದ್ ಬೇಕ್ ಸ್ಟೋರಿ ಬೇಕರಿ ಎಂಬ ಹೊಸ ಯೋಜನೆಯನ್ನು ಯೋಚಿಸಿ, ಈ ಚಿತ್ರವನ್ನು ರಚಿಸುವಂತೆ ಕಲಾಕಾರ ಸುರೇಶ್ ಬಳಿ ಕೇಳಿಕೊಂಡಿದ್ದೆ. ಬಳಿಕ ಎಲ್ಲರೂ ಸೇರಿ ಬೇಕರಿ ಅಂಗಡಿಯ ಹಾಲ್‍ನಲ್ಲಿ ಟೇಬಲ್ ಮೇಲೆ ವಿಶಿಷ್ಟ ಕಲಾಕೃತಿಯನ್ನು ರಚನೆ ಮಾಡಿದ್ದಾರೆ ಎಂದು ಮಹಮ್ಮದ್ ರಶೀದ್ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಮಂತಾರಿಂದ ದೂರವಾಗ್ತಿದ್ದಂತೆ ಹೊಸ ಮನೆ ಖರೀದಿಸಿದ ನಟ ನಾಗಚೈತನ್ಯ

  • 5,000 ಬೆಂಕಿ ಕಡ್ಡಿ ಬಳಸಿ ಗಣಪತಿ ಮೂರ್ತಿ ರಚಿಸಿದ ಕಲಾವಿದ

    5,000 ಬೆಂಕಿ ಕಡ್ಡಿ ಬಳಸಿ ಗಣಪತಿ ಮೂರ್ತಿ ರಚಿಸಿದ ಕಲಾವಿದ

    ಭುವನೇಶ್ವರ: ಗಣೇಶ ಹಬ್ಬದ ಪ್ರಯುಕ್ತ ಒಡಿಶಾದ ಕಲಾವಿದರೊಬ್ಬರು ಬೆಂಕಿ ಕಡ್ಡಿಗಳನ್ನು ಬಳಸಿ ಗಣೇಶನ ಮೂರ್ತಿಯನ್ನು ರಚಿಸಿದ್ದಾರೆ. ಈ ಮೂರ್ತಿ 5,621 ಬೆಂಕಿ ಕಡ್ಡಿಗಳನ್ನು ಒಳಗೊಂಡಿರುವ ಕಲಾಕೃತಿಯಾಗಿದ್ದು, 23 ಇಂಚು ಉದ್ದ ಮತ್ತು 22 ಇಂಚು ಅಗಲವಿದೆ. ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಸ್ವಯಂ ಅನುಶಾಸನ ಅಗತ್ಯ: ಸುನಿಲ್ ಕುಮಾರ್

    Ganesha idol-

    ಕಲಾವಿದ ಸಾಸ್ವತ್ ಸಾಹೂ ಈ ಮೂರ್ತಿಯನ್ನು ಸಿದ್ಧ ಪಡಿಸಲು ಎಂಟು ದಿನಗಳನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಕೋವಿಡ್-19 ಮಧ್ಯೆ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಈ ಬಾರಿ ನಾನು ಹೊಸದಾಗಿ ಏನಾದರೂ ಮಾಡಬೇಕೆಂದು ಯೋಚಿಸಿ, ಈ ಮೂರ್ತಿಯನ್ನು ಸಿದ್ಧ ಪಡಿಸಿದ್ದೇನೆ ಮತ್ತು ಹಬ್ಬದ ದಿನ ಈ ಮೂರ್ತಿಯನ್ನು ಮನೆಯಲ್ಲಿಟ್ಟು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

    Ganesha idol-

    ಗಣೇಶ ಹಬ್ಬ ಹತ್ತು ದಿನಗಳ ಕಾಲ ಆಚರಿಸುವ ಹಬ್ಬವಾಗಿದ್ದು, ದೇಶಾದ್ಯಾಂತ ಜನರು ಬಹಳ ಅದ್ದೂರಿಯಾಗಿ ಹಬ್ಬವನ್ನು ಆಚರಿಸುತ್ತಾರೆ. ಆದರೆ ಈ ಬಾರಿ ಕೋವಿಡ್-19 ನಿಂದಾಗಿ ಗಣೇಶೋತ್ಸವವನ್ನು ಸರಳವಾಗಿ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಬೆಳಗಾವಿ ಕದನ, ಮರಾಠಿ ಜನರಿಗೆ ಪಾಠ – ಮತ್ತೆ ಕೆಣಕಿದ ಶಿವಸೇನೆ

  • ತಲೆ ಕೆಳಗಾಗಿ ಚಿತ್ರ ಬಿಡಿಸುವ ಗಂಗಾವತಿಯ ಯುವ ಕಲಾವಿದ

    ತಲೆ ಕೆಳಗಾಗಿ ಚಿತ್ರ ಬಿಡಿಸುವ ಗಂಗಾವತಿಯ ಯುವ ಕಲಾವಿದ

    ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಕಲ್ಗುಡಿಯ ನಿವಾಸಿ ಹಜರತ್ ಬಳಿಗಾರ ಕಾಲಿನಿಂದ ಚಿತ್ರ ಬಿಡಿಸುವ ಕಲಾವಿದ.

    ಕೊಪ್ಪಳದ ಸರ್ಕಾರಿ ಕಾಲೇಜಿನಲ್ಲಿ ಪದವಿ ಓದುತ್ತಿರುವ ಹಜರತ್, ನಗರದ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿದ್ದನು. ಆದ್ರೆ ಕೊರೊನಾ ಲಾಕ್‍ಡೌನ್ ಆಗಿದ್ದರಿಂದ ಮನೆಗೆ ಬಂದಿದ್ದ ಹಜರತ್ ಓದಿನ ಜೊತೆಯಲ್ಲಿ ವಿಶೇಷ ಕಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಚಿತ್ರ ಬಿಡಿಸೋದು ದೊಡ್ಡ ಸವಾಲಿನ ಕೆಲಸ. ಆದರೆ ಹಜರತ್ ಈ ಸವಾಲಿನ ಕೆಲಸವನ್ನು ವಿಭಿನ್ನವಾಗಿ ಮಾಡುವ ಮೂಲಕ ಕಲಾಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದ್ದಾನೆ.

    ಹಜರತ್ ತಂದೆ ಚಾಂದ್‍ಪಾಶಾ ಕೃಷಿಕರಾಗಿದ್ದು, ತಾಯಿ ಅಲ್ಲಾಭಿ ಬಳೆ ವ್ಯಾಪಾರ ಮಾಡುತ್ತಾರೆ. ಹಜರತ್‍ಗೆ ಇಮಾಮ್ ಅನ್ನೋ ಪುಟ್ಟ ತಮ್ಮನಿದ್ದಾನೆ. ಚಿತ್ರಕಲೆ ಜೊತೆ ಓದಿನಲ್ಲಿ ಮುಂದಿರುವ ಹಜರತ್ ಶಿಕ್ಷಕರಿಗೂ ಅಚ್ಚುಮೆಚ್ಚು. ಇದನ್ನೂ ಓದಿ: ಜೋಕಾಲಿಯಿಂದ 6,300 ಅಡಿ ಕೆಳಗೆ ಬಿದ್ದ ಮಹಿಳೆಯರು- ವೀಡಿಯೋ ವೈರಲ್

    ಲಾಕ್‍ಡೌನ್ ಸಮಯವನ್ನು ಸದುಪಯೋಗಪಡಿಸಿಕೊಂಡಿರುವ ಹಜರತ್, ತಲೆ ಕೆಳೆಗಾಗಿ ಮತ್ತು ಕಾಲಿನಿಂದಲೂ ಚಿತ್ರ ಬಿಡಿಸುವ ಕಲೆಯನ್ನ ಕರಗತ ಮಾಡಿಕೊಂಡಿದ್ದಾನೆ. ಹಜರತ್ ಕುಂಚದಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ಅಬ್ದುಲ್ ಕಲಾಂ, ಅಂಬೇಡ್ಕರ್, ಧೋನಿ, ವಿರಾಟ್ ಕೊಹ್ಲಿ ಸೇರಿದಂತೆ ಹಲವು ಗಣ್ಯರ ಚಿತ್ರಗಳು ಅರಳಿವೆ. ಇದನ್ನೂ ಓದಿ: ಇಂಜಿನೀಯರ್ ಬಾಳಿಗೆ ಆಸರೆಯಾದ ನರೇಗಾ – ಹೆಚ್ಚಿನ ವಿದ್ಯಾಭ್ಯಾಸಕ್ಕೆ ಕೂಲಿ ಹಣ ಬಳಕೆ

  • ಕೋವಿಡ್ 2ನೇ ಅಲೆ ಪ್ಯಾಕೇಜ್ – 20,713 ಕಲಾವಿದರಿಗೆ ತಲಾ ಮೂರು ಸಾವಿರ ರೂ. ನೆರವು

    ಕೋವಿಡ್ 2ನೇ ಅಲೆ ಪ್ಯಾಕೇಜ್ – 20,713 ಕಲಾವಿದರಿಗೆ ತಲಾ ಮೂರು ಸಾವಿರ ರೂ. ನೆರವು

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ‘ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರುಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಿಕೆಗೆ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಕೋವಿಡ್ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ಡಿ.ಬಿ.ಟಿ. ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

    ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ ವರ್ಗದವರಿಗೆ ಒಟ್ಟು 2,050 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದು, ಈಗಾಗಲೇ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಬೀದಿಬದಿ ವ್ಯಾಪಾರಿಗಳು ಮೊದಲಾದವರಿಗೆ ಡಿ.ಬಿ.ಟಿ. ಮೂಲಕ ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಉಳಿದ ವರ್ಗಗಳಿಗೂ ಶೀಘ್ರವೇ ನೆರವು ನೀಡಲು ಕ್ರಮ ವಹಿಸಲಾಗುತ್ತಿದೆ. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡುವ ಮೊದಲು ಶಾಲೆ ಆರಂಭ ಬೇಡ: ಪ್ರತಾಪ್ ಸಿಂಹ

    ಮೊದಲ ಅಲೆಯ ಸಂದರ್ಭದಲ್ಲಿಯೂ ಕಲಾವಿದರಿಗೆ ನೆರವು ನೀಡಲಾಗಿತ್ತು. ಈ ಬಾರಿಯೂ ಸರ್ಕಾರ ಅವರ ನೆರವಿಗೆ ಧಾವಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿ, ಕಲಾವಿದರ ದಾಖಲೆಗಳನ್ನು ಪರಿಶೀಲಿಸಿ, ಅತ್ಯಂತ ಪಾರದರ್ಶಕವಾಗಿ ನೆರವು ನೀಡಲು ಮಂಜೂರಾತಿ ನೀಡಲಾಗಿದೆ. ಫಲಾನುಭವಿಗಳು ಡಿ.ಬಿ.ಟಿ. ಆಪ್ ಮುಖಾಂತರ ತಮ್ಮ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಗೆ ನೆರವು ವರ್ಗಾವಣೆ ಆಗಿರುವುದನ್ನು ಖಾತರಿ ಪಡಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಇದೀಗ ವಿವಿಧ ಜಿಲ್ಲೆಗಳಲ್ಲಿ ನಿರ್ಬಂದಗಳನ್ನು ತೆರವು ಗೊಳಿಸಲಾಗಿದೆ. ಆದರೆ ಕಲಾವಿದರು ಮುನ್ನೆಚ್ಚರಿಕೆಯ ಕ್ರಮಗಳನ್ನು ತಪ್ಪದೆ ಪಾಲಿಸಬೇಕು. ಜೊತೆಗೆ ಲಸಿಕೆಯನ್ನು ಸಹ ಸರ್ಕಾರ ಉಚಿತವಾಗಿ ನೀಡುತ್ತಿದ್ದು, ತಪ್ಪದೆ ಹಾಕಿಸಿಕೊಳ್ಳುವ ಮೂಲಕ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದರು.

    ಸಮಾರಂಭದಲ್ಲಿ ಮಾತನಾಡಿದ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಮೊದಲ ಅಲೆಯ ಸಂದರ್ಭದಲ್ಲಿಯೂ 17 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೆರವು ನೀಡಲಾಗಿತ್ತು. ಈಗ ಮತ್ತೆ ಕಲಾವಿದರಿಗೆ ತಲಾ 3 ಸಾವಿರ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

    ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ.ರವಿಶಂಕರ್, ನಿರ್ದೇಶಕ ಎಸ್. ರಂಗಪ್ಪ, ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.

  • ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಆಹಾರ ಕಿಟ್ ವಿತರಿಸಿದ ಎಸ್‍ಟಿಎಸ್

    ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಆಹಾರ ಕಿಟ್ ವಿತರಿಸಿದ ಎಸ್‍ಟಿಎಸ್

    ಮೈಸೂರು: ಕೊರೊನಾದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ನೂರಾರು ಚಲನಚಿತ್ರ ಕಲಾವಿದರು, ಸಹ ಕಲಾವಿದರು ಮತ್ತು ಹವ್ಯಾಸಿ ರಂಗಕರ್ಮಿಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಆಹಾರ ಕಿಟ್ ವಿತರಿಸಿದ್ದಾರೆ.

    ಮೈಸೂರಿನಲ್ಲಿ ನೂರಾರು ಕಲಾವಿದರು ಕೊರೊನಾದಿಂದಾಗಿ ಯಾವುದೇ ಶೂಟಿಂಗ್ ಹಾಗೂ ಕಾರ್ಯಕ್ರಮವಿಲ್ಲದೆ ಕಷ್ಟಪಡುತ್ತಿರುವುದನ್ನು ಮನಗಂಡು ಸೋಮಶೇಖರ್ ಅವರು ಕೃಷಿ ಸಚಿವ ಬಿ.ಸಿ ಪಾಟೀಲ್ ಉಪಸ್ಥಿತಿಯಲ್ಲಿ ಆಹಾರ ಕಿಟ್ ವಿತರಣೆ ಮಾಡಿ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: ರಸಗೊಬ್ಬರ, ಬಿತ್ತನೆ ಬೀಜದ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್

    ಕಲಾವಿದರಿಗೆ 520ಕ್ಕೂ ಹೆಚ್ಚು ಆಹಾರ ಕಿಟ್‍ಗಳನ್ನು ನೀಡಿದ್ದು, ಈ ಪೈಕಿ 120 ಚಲನಚಿತ್ರ ಸಹ ಕಲಾವಿದರಿಗೆ ಹಾಗೂ 400 ರಂಗಕರ್ಮಿಗಳಿಗೆ ವಿತರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಕಿಟ್ ಅಗತ್ಯವಿದ್ದರೆ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ ಅವರು ಮಾಹಿತಿ ನೀಡಿದ್ದಾರೆ.

  • ರಂಗಭೂಮಿ ಕಲಾವಿದ ರಾಜಾರಾಂ ನಿಧನ

    ರಂಗಭೂಮಿ ಕಲಾವಿದ ರಾಜಾರಾಂ ನಿಧನ

    ಬೆಂಗಳೂರು: ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ರಾಜಾರಾಂ ಅವರು ಕೊರೊನಾಗೆ ಬಲಿಯಾಗಿದ್ದಾರೆ.

    ರಾಜಾರಾಂ (84) ಅವರು ಸಿನಿಮಾ, ಧಾರಾವಾಹಿ ಹಾಗೂ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ಸಿನಿಮಾಗಿಂತ ಹೆಚ್ಚಾಗಿ ರಾಜಾರಾಂ ಅವರು ರಂಗಭೂಮಿಯಲ್ಲೇ ಸಕ್ರಿಯವಾಗಿದ್ದರು. ರಾಜಾರಾಂ ಅವರಿಗೆ ಕೊರೊನಾ ಸೋಂಕು ಧೃಡವಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಕುಟುಂಬದ ಕಡೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಟ ಇಂದು ಕೊನೆಯುಸಿರೆಳೆದಿದ್ದಾರೆ.

    1971ರಿಂದ ಇಲ್ಲಿಯವರೆಗೆ 62 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಸಿನಿರಂಗದಲ್ಲಿ ರಾಜ್‍ಕುಮಾರ್ ಸೇರಿದಂತೆ ಬಹುತೇಕ ಎಲ್ಲ ನಾಯಕರೊಂದಿಗೆ ತೆರೆ ಹಂಚಿಕೊಂಡಿದ್ದಾರೆ ರಾಜಾರಾಂ. ಶಾಲಾ ದಿನಗಳಿಂದಲೇ ರಂಗಭೂಮಿಯಲ್ಲಿ ಆಸಕ್ತಿ ತೋರಿದ ರಾಜಾರಾಂ ನಂತರದಲ್ಲಿ ಸಿನಿಮಾಗಳಿಗೆ ಬಂದು ಹೆಸರು ಸಹ ಮಾಡಿದರು. ನೂರಾರು ನಾಟಕಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿದ್ದ ಹಿರಿಯ ಕಲಾವಿದರಾಗಿದ್ದ ಇವರ ಅಗಲಿಕೆಯ ಬಗ್ಗೆ ನಟ ಸೃಜನ್ ಲೋಕೇಶ್ ಸೇರಿದಂತೆ ಅನೇಕ ಸ್ಯಾಂಡಲ್‍ವುಡ್ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮೀಡಿದಿದ್ದಾರೆ.

     

    View this post on Instagram

     

    A post shared by Srujan Lokesh (@srujanlokesh)

    1971ರಲ್ಲಿ ಕೃಷ್ಣಸ್ವಾಮಿ ನಿರ್ದೇಶಕ ಪಾಪಪುಣ್ಯ ಸಿನಿಮಾ ರಾಜಾರಾಂ ಅವರ ಅಭಿನಯದ ಮೊದಲ ಸಿನಿಮಾ. ಸರೋಜಾ ದೇವಿ, ಕಲ್ಯಾಣ್ ಕುಮಾರ್ ಅಶ್ವತ್ಥ್ ಪ್ರಮುಖ ಪಾತ್ರದಲ್ಲಿದ್ದರು. ವಿಧಾನಸೌಧದಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡಿಕೊಂಡೇ ಸಿನಿಮಾ ಹಾಗೂ ರಂಗಭೂಮಿಯಲ್ಲಿ ಸಕ್ರಿಯವಾಗಿದ್ದರು ರಾಜಾರಾಂ. ನಟ ಲೋಕೇಶ್ ಅವರೊಂದಿಗೆ ಬಹಳ ಹಳೆಯ ಗೆಳೆತನವಿತ್ತು. ರಂಗಭೂಮಿಯಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದರು.

    ಕೊರೊನಾ ಮಹಾಮಾರಿಗೆ ಕಲಾ ಸೇವೆ ಮಾಡುತ್ತಿರುವ ಹಲವಾರು ಮಂದಿ ಕಲಾವಿದರು ಕೊರೊನಾಗೆ ಬಲಿಯಾಗಿದ್ದಾರೆ. ಶಂಖನಾದ ಅರವಿಂದ್, ರೇಣುಕಾ ಶರ್ಮಾ, ರಾಮು ಸೇರಿದಂತೆ ಹಲವರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.