ರಾಮನ ಪಾತ್ರವನ್ನು ಮಾಡುವ ಮೂಲಕ ಅಸಂಖ್ಯಾತ ಹೃದಯಗಳಲ್ಲಿ ರಾಮನೇ ಆಗಿ ಉಳಿದಿರುವ ನಟ ಅರುಣ್ ಗೋವಿಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಬಾರಿ ಲೋಕಸಭೆ (Lok Sabha) ಅಖಾಡದಲ್ಲಿ ಅರುಣ್ ಗೋವಿಲ್ (Arun Govil) ಕಾಣಿಸಿಕೊಂಡಿದ್ದು, ಟಿಕೆಟ್ ನೀಡಿದ್ದಕ್ಕಾಗಿ ಭಾರತಿ ಜನತಾ ಪಾರ್ಟಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಈ ಕಡೆ ನಟಿ ಕಂಗನಾ ರಣಾವತ್ ಅವರಿಗೂ ಬಿಜೆಪಿಯಿಂದ ಟಿಕೆಟ್ ಸಿಕ್ಕಿದೆ. ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut)ಗೆ ತವರು ರಾಜ್ಯ ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಹಲವು ತಿಂಗಳುಗಳಿಂದ ಕಂಗನಾ ರಣಾವತ್ ರಾಜಕೀಯಕ್ಕೆ (Elections) ಬರುತ್ತಾರೆ ಎನ್ನುವ ಸುದ್ದಿ ಇತ್ತು. ಅವರು ಕೂಡ ಕೃಷ್ಣ ಕಣ್ಬಿಟ್ಟರೆ ರಾಜಕೀಯಕ್ಕೆ ಬರೋದು ದೊಡ್ಡ ವಿಷಯವೇ ಅಲ್ಲ ಎಂದೂ ಹೇಳಿದ್ದರು. ಜೊತೆಗೆ ರಾಜಕೀಯ ಮುಖಂಡರನ್ನು ಭೇಟಿ ಮಾಡುವ ಮೂಲಕ ಟಿಕೆಟ್ ಬೇಡಿಕೆಯನ್ನೂ ಇಟ್ಟಿದ್ದರು.
ಇದೀಗ ಕೊನೆಗೂ ಕಂಗನಾಗೆ ಟಿಕೆಟ್ ಘೋಷಣೆ ಆಗಿದೆ. ಇಂದಿನಿಂದ ಮಂಡಿ ಕ್ಷೇತ್ರದಾದ್ಯಂತ ನಟಿ ಪ್ರವಾಸ ಮಾಡಲಿದ್ದಾರೆ. ಇಂದು ಮಂಡಿ ಕ್ಷೇತ್ರದ ಮುಖಂಡರ ಜೊತೆ ಭೇಟಿಗಳು ನಿಗದಿ ಆಗಿವೆ. ಅಧಿಕೃತವಾಗಿ ಇಂದಿನಿಂದ ಸಕ್ರೀಯ ರಾಜಕಾರಣದಲ್ಲಿ ಕಂಗನಾ ಇರಲಿದ್ದಾರೆ.
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಬೆನ್ನಲ್ಲೇ ದೂರದರ್ಶನವು ಮತ್ತೆ ರಾಮಾಯಣ (Ramayana) ಧಾರಾವಾಹಿಯನ್ನು ಪ್ರಸಾರ ಮಾಡಲು ಹೊರಟಿದೆ. ಇಂದಿನಿಂದ ಸಂಜೆ 6 ಗಂಟೆಗೆ ಮತ್ತು ಮರುದಿನ ಮಧ್ಯಾಹ್ನ 12ಕ್ಕೆ ಮರು ಪ್ರಸಾರ ವಾಗಲಿದೆ. ಪ್ರತಿ ದಿನವೂ ವೀಕ್ಷಕರು ರಾಮಾಯಣವನ್ನು ಕಣ್ತುಂಬಿಕೊಳ್ಳಬಹುದಾಗಿದೆ.
ರಾಮಾಯಣ. ಹೀಗಂದರೆ ಸಾಕು ಈಗಲೂ ಆ ದಿನಗಳು ನೆನಪಾಗುತ್ತವೆ. ಸುಮಾರು ಮೂವತ್ತಾರು ವರ್ಷಗಳ ಹಿಂದೆ ಭಾರತಿಯರ ಪಾಲಿಗೆ ದೈವಸ್ವರೂಪಿಯಂತೆ ಕಾಣಿಸಿದ ರಮಾನಂದ್ ಸಾಗರ್ ನಿರ್ದೇಶನದ ಆ ಮಹಾ ಧಾರಾವಾಹಿ (Serial). 1987ರಲ್ಲಿ ಅಂದಿನ ದೂರದರ್ಶನದಲ್ಲಿ ಪ್ರತಿ ಭಾನುವಾರ ಬೆಳಿಗ್ಗೆ ಪ್ರಸಾರವಾಗುತ್ತಿತ್ತು. ಆಗ ಈಗಿನಷ್ಟು ಟಿವಿ ಮತ್ತು ಚಾನೆಲ್ಗಳು ಇರಲಿಲ್ಲ. ಒಂದು ಮನೆಯಲ್ಲಿ ಟಿವಿ ಇದ್ದರೆ ಅವರು ಶ್ರೀಮಂತರು ಎಂದು ಭಾವಿಸುವ ದಿನಮಾನ ಅವು. ಕಪ್ಪು ಬಿಳುಪು ಹಾಗೂ ಕಲರ್ ಟಿವಿಗಳಲ್ಲಿ ರಾಮಾಯಣ ನೋಡಲು ಜನರು ಮುಗಿ ಬೀಳುತ್ತಿದ್ದರು. ಬರೀ ಕತೆ ನೋಡಲು ಅಲ್ಲ, ಅಲ್ಲಿಯ ಶ್ರೀರಾಮಚಂದ್ರ ಹಾಗೂ ಸೀತಾದೇವಿಯನ್ನು ಕಣ್ಣು ತುಂಬಿಕೊಂಡು ಕೈ ಮುಗಿಯುತ್ತಿದ್ದರು.
ಭಾನುವಾರ ಬೆಳಿಗ್ಗೆ ಹತ್ತು ಗಂಟಗೆ ದೇಶದ ಬೀದಿ ಬೀದಿಗಳು ಭಣಗುಡುತ್ತಿದ್ದವು. ಮುಂಜಾನೆದ್ದು ಹೆಂಗಸರು ಮನೆ ಮಂದಿಗೆಲ್ಲ ತಿಂಡಿ ವ್ಯವಸ್ಥೆ ಮಾಡಿ, ಒಂಬತ್ತೂವರೆಗೆ ಟಿವಿ ಮುಂದೆ ಹಾಜರಾಗುತ್ತಿದ್ದರು. ಕೆಲವರು ಟಿವಿ ಪರದೆಗೆ ಪೂಜೆ ಮಾಡುತ್ತಿದ್ದರು. ಹೂವಿನ ಹಾರ ಹಾಕಿ, ದೀಪ ಬೆಳಗಿ, ಆರತಿ ಎತ್ತಿ ಶ್ರೀರಾಮ ಹಾಗೂ ಸೀತಾದೇವಿಯನ್ನು ಬರಮಾಡಿಕೊಳ್ಳುತ್ತಿದ್ದರು. ಅದು ಆ ರಾಮಾಯಣಕ್ಕೆ ಇದ್ದ ಗತ್ತು ಹಾಗೂ ಗೌರವ. ರಾಮಾಯಣ ಪ್ರಸಾರ ಆಗುತ್ತಿದ್ದ ಹೊತ್ತಿಗೆ ವಿದ್ಯುತ್ ಕೂಡ ತೆಗೆಯುತ್ತಿರಲಿಲ್ಲ. ಅಕಸ್ಮಾತ್ ತೆಗೆದರೆ ಮುಗಿಯಿತು. ಕೆಲವು ಕಡೆ ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ ಹಾಕಿ ಗಲಾಟೆ ಕೂಡ ನಡೆಯುತ್ತಿದ್ದವು. ರಾಮಾಯಣ ಅಷ್ಟೊಂದು ಮೋಡಿ ಮಾಡಿತ್ತು.
ರಮಾನಂದ್ ಸಾಗರ್ ಅದ್ಯಾವ ಗಳಿಗೆಯಲ್ಲಿ ರಾಮಾಯಣವನ್ನು ನಿರ್ದೇಶಿಸಲು ಮನಸು ಮಾಡಿದರೋ ಏನೊ? ಅವರು ಅಲ್ಲಿವರೆಗೆ ಮಾಡಿದ ಸಿನಿಮಾ ಕೆಲಸಗಳು ಮರೆತು ಹೋದವು. ರಾಮಾಯಣ ಮಾತ್ರ ಅವರಿಗೆ ಕೊನೇವರೆಗೂ ದೇಶವ್ಯಾಪಿ ಮೆರವಣಿಗೆ ಮಾಡಿದವು. ಅದಕ್ಕೆ ಕಾರಣ ಅವರು ಕತೆಯನ್ನು ಹೇಳಿದ ರೀತಿ ಮಾತ್ರ ಅಲ್ಲ, ಪ್ರತಿಯೊಂದು ಪಾತ್ರಕ್ಕೂ ಆಯ್ಕೆ ಮಾಡಿಕೊಂಡಿದ್ದ ಕಲಾವಿದರೂ ಕಾರಣ. ರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಕ್ಲಿಯಾ, ರಾವಣನಾಗಿ ಅರವಿಂದ್ ತ್ರಿವೇದಿ ಹಾಗೂ ಹನುಮಂತನಾಗಿ ಧಾರಾಸಿಂಗ್ ಜೀವ ತುಂಬಿದ್ದರು. ಪೌರಾಣಿಕ ಪಾತ್ರಗಳು ಹೀಗೆ ಇದ್ದಿರಬೇಕೆನ್ನುವಷ್ಟು ಭಕ್ತಿ ಮೂಡಿಸಿದ್ದವು.
ಮೂವತ್ತಾರು ವರ್ಷ. ಆಗ ಈಗಿನಷ್ಟು ತಂತ್ರಜ್ಞಾನ ಬೆಳೆದಿರಲಿಲ್ಲ. ಗ್ರೀನ್ ಮ್ಯಾಟ್, ವಿಎಫ್ಎಕ್ಸ್ ಇತ್ಯಾದಿ ಹೆಸರುಗಳೇ ಗೊತ್ತಿರಲಿಲ್ಲ. ಎಲ್ಲವನ್ನೂ ಕ್ಯಾಮೆರಾ ಟೆಕ್ನಿಕ್ನಿಂದ ಮಾಡಬೇಕಿತ್ತು. ಅಂಥ ಕ್ಯಾಮೆರಾಮನ್ ಕೂಡ ಇದ್ದರು. ರಾಮಾಯಣದಲ್ಲಿ ಎಂತೆಂಥ ಪವಾಡ ಸದೃಶ್ಯ ದೃಶ್ಯಗಳು ಬರುತ್ತವೆಂದು ಎಲ್ಲರಿಗೂ ಗೊತ್ತು. ಯುದ್ಧ, ಕಲ್ಲಿನಿಂದ ಸೇತುವೆ ಕಟ್ಟುವುದು, ಹನುಮಂತ ಬೆಟ್ಟವನ್ನು ಹೊತ್ತುಕೊಳ್ಳುವುದು, ಲಂಕಾ ದಹನ, ವಾನರ ಸೇನೆಯ ಕದನ ಪ್ರತಿಯೊಂದಕ್ಕೂ ಕ್ಯಾಮೆರಾ ಟೆಕ್ನಿಕ್ನಿಂದ ಮಾಡಿದ್ದರು ರಮಾನಂದ್ ಸಾಗರ್. ಈಗ ಈ ವೈಭವನ್ನು ಮತ್ತೆ ಕಣ್ತುಂಬಿಕೊಳ್ಳಬಹುದು.
ನವದೆಹಲಿ: ಪ್ರಸಿದ್ಧ ರಾಮಾಯಾಣ ಧಾರಾವಾಹಿ ಖ್ಯಾತಿಯ ಶ್ರೀರಾಮನ ಪಾತ್ರ ನಿರ್ವಹಿಸಿದ್ದ ಹಿರಿಯ ನಟ ಅರುಣ್ ಗೋವಿಲ್ ಬಿಜೆಪಿ ಸೇರ್ಪಡೆಯಾದರು. ದೆಹಲಿಯ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದಲ್ಲಿ ಅರುಣ್ ಗೋವಿಲ್ ಕಮಲ ಧ್ವಜ ಹಿಡಿದರು.
ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಅರುಣ್ ಗೋವಿಲ್, ದೇಶಕ್ಕಾಗಿ ಸೇವೆ ಸಲ್ಲಿಸುವ ಉದ್ದೇಶದಿಂದ ಬಿಜೆಪಿ ಸೇರಿದ್ದೇನೆ. ದೇಶ ಸೇವೆ ಸಲ್ಲಿಸಲು ಬಿಜೆಪಿ ಉತ್ತಮ ವೇದಿಕೆಯಾಗಿದೆ. ಜೈ ಶ್ರೀರಾಮ ಘೋಷಣೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಅಲರ್ಜಿ ಇರೋದನ್ನ ನಾನು ಗಮನಿಸಿದ್ದೇನೆ. ಜೈಶ್ರೀರಾಮ ಕೇವಲ ಘೋಷಣೆಯಲ್ಲ ಅದೊಂದು ಶಕ್ತಿ ಎಂದು ದೀದಿ ವಿರುದ್ಧ ವಾಗ್ದಾಳಿ ನಡೆಸಿದರು.
ಸದ್ಯ ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದು, ಅರುಣ್ ಗೋವಿಲ್ ಅವರನ್ನ ಬಿಜೆಪಿ ಪ್ರಚಾರದ ಅಖಾಡಕ್ಕೆ ಇಳಿಸಲಿದೆ ಎಂದು ಹೇಳಲಾಗುತ್ತಿದೆ. ಶ್ರೀರಾಮನ ಪಾತ್ರ ನಿರ್ವಹಿಸಿದ್ದ ಅರುಣ್ ಗೋವಿಲ್ ದೇಶಾದ್ಯಂತ ಚಿರಪರಿಚಿತರು. ಲಾಕ್ಡೌನ್ ವೇಳೆ ಸರ್ಕಾರ ರಾಮಾಯಾಣ ಧಾರಾವಾಹಿಯನ್ನ ಪುನರ್ ಪ್ರಸಾರ ಮಾಡಿತ್ತು.