Tag: arun jaitely

  • ಬಜೆಟ್‍ನಲ್ಲಿ ವಿಶ್ವದ ಅತೀ ದೊಡ್ಡ ಆರೋಗ್ಯ ಸಂರಕ್ಷಣಾ ಯೋಜನೆ ಘೋಷಿಸಿದ ಜೇಟ್ಲಿ

    ಬಜೆಟ್‍ನಲ್ಲಿ ವಿಶ್ವದ ಅತೀ ದೊಡ್ಡ ಆರೋಗ್ಯ ಸಂರಕ್ಷಣಾ ಯೋಜನೆ ಘೋಷಿಸಿದ ಜೇಟ್ಲಿ

    ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು 2018ರ ಕೇಂದ್ರ ಬಜೆಟ್ ನಲ್ಲಿ 10 ಕೋಟಿ ಕುಟುಂಬಗಳನ್ನ ಒಳಗೊಂಡ ವಿಶ್ವದ ಅತೀ ದೊಡ್ಡ ಆರೋಗ್ಯ ಸಂರಕ್ಷಣಾ ಯೋಜನೆಯನ್ನ ಘೋಷಣೆ ಮಾಡಿದ್ದಾರೆ.

    ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆಯಡಿ ಬರುವ ಪ್ರತಿ ಕುಟುಂಬಕ್ಕೂ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಛಕ್ಕಾಗಿ ವೈದ್ಯಕೀಯ ಮರುಪಾವತಿಯಾಗಿ ಪ್ರತಿ ವರ್ಷ ಗರಿಷ್ಠ 5 ಲಕ್ಷ ರೂ. ಸಿಗಲಿದೆ. ಇದು ವಿಶ್ವದ ಅತೀ ದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ಸಂರಕ್ಷಣಾ ಯೋಜನೆ- ಆಯುಶ್ಮಾನ್ ಭಾರತ್ ಯೋಜನೆ ಎಂದು ಜೇಟ್ಲಿ ಹೇಳಿದ್ರು

    ಈ ಬಗ್ಗೆ ಘೋಷಣೆ ಮಾಡಿದ ಸಚಿವ ಜೇಟ್ಲಿ, ಆಸ್ಪತ್ರೆ ಸೇರುವಿಕೆಯಿಂದ ಜನ ದುರ್ಬಲರಾಗುತ್ತಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲು ಬಯಸಿತ್ತು ಎಂದು ಹೇಳಿದರು.

    ಜೇಟ್ಲಿ ಈ ಯೋಜನೆಯನ್ನ ಘೋಷಣೆ ಮಾಡುತ್ತಿದ್ದಂತೆ ಲೋಕಸಭೆಯಲ್ಲಿ ಟೇಬಲ್ ಬಡಿಯುವುದರ ಮೂಲಕ ಶ್ಲಾಘನೆ ವ್ಯಕ್ತವಾಯ್ತು. ಈ ಯೋಜನೆ 50 ಕೋಟಿ ಜನರಿಗೆ ನೆರವಾಗಲಿದೆ. ಅಂದ್ರೆ ದೇಶದ ಶೇ.40 ರಷ್ಟು ಜನಸಂಖ್ಯೆ ಇದರ ಲಾಭ ಪಡೆಯಲಿದ್ದಾರೆ. ಈ ಹಿಂದೆಯೂ ಸರ್ಕಾರ ಬಡವರಿಗಾಗಿ ಇದೇ ರೀತಿಯ ಆರೋಗ್ಯ ರಕ್ಷಣಾ ಯೋಜನೆಯನ್ನ ತಂದಿತ್ತು. ಆದ್ರೆ ಮರುಪಾವತಿ 30 ಸಾವಿರ ರೂ. ಗೆ ಸೀಮಿತವಾಗಿತ್ತು.

    ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಈ ಹಿಂದೆ ತನ್ನ ಅಧಿಕಾರಾವಧಿಯಲ್ಲಿ ಒಬಾಮಾ ಕೇರ್ ಎಂಬ ಹೆಸರಿನಲ್ಲಿ ಇದೇ ರೀತಿಯ ಆರೋಗ್ಯ ವಿಮಾ ಯೋಜನೆಯನ್ನ ಪರಿಚಯಿಸಿದ್ದರು.

  • ಬಜೆಟ್ ಹೈಲೈಟ್ಸ್: ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ಸಿಗುತ್ತೆ 500 ರೂ.

    ಬಜೆಟ್ ಹೈಲೈಟ್ಸ್: ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ಸಿಗುತ್ತೆ 500 ರೂ.

    ನವದೆಹಲಿ: ಕ್ಷಯ ರೋಗಿಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು 500 ರೂ. ಸಹಾಯ ಧನ ನೀಡಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

    ಎಲ್ಲಾ ಟಿಬಿ ರೋಗಿಗಳ ಪೌಷ್ಠಿಕ ಆಹಾರ ನೀಡಲು 600 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಜೇಟ್ಲಿ ಬಜೆಟ್ ಭಾಷಣದಲ್ಲಿ ತಿಳಿಸಿದರು.

    ಬಜೆಟ್ ಹೈಲೈಟ್ಸ್
    – ಎಸ್‍ಸಿ ಗಳಿಗಾಗಿ- 279 ಕಾರ್ಯಕ್ರಮಗಳು, 52,719 ಕೋಟಿ ರೂ. ಮೀಸಲು
    – ಎಸ್‍ಟಿ ಗಳಿಗಾಗಿ – 305 ಕಾರ್ಯಕ್ರಮಗಳು, 32,508 ಕೋಟಿ ರೂ. ಮೀಸಲು
    – ಭಾರತದ ಆರ್ಥಿಕತೆ ಶೀಘ್ರದಲ್ಲೇ 5ನೇ ಅತೀ ದೊಡ್ಡದಾಗುವ ಆರ್ಥಿಕತೆಯಾಗುವ ದೇಶವಾಗಲಿದೆ.

    – ರೈತರ ಆದಾಯ ಹೆಚ್ಚಿಸುವುದರ ಬಗ್ಗೆ ಆದ್ಯತೆ, ಕೃಷಿ ಮಾರುಕಟ್ಟೆ ಅಭೀವೃದ್ಧಿಗೆ 2 ಸಾವಿರ ಕೋಟಿ ರೂ.
    – 473 ಎಪಿಎಮ್‍ಸಿ ಗಳು ಇ-ಎನ್‍ಎಎಮ್ (ರಾಷ್ಟ್ರೀಯ ಕೃಷಿ ಮಾರುಕಟ್ಟೆ ಪೋರ್ಟಲ್) ಜೊತೆ ಸಂಪರ್ಕಿಸಲಾಗುತ್ತದೆ. ಉಳಿದವನ್ನ ಮಾರ್ಚ್ 18ರೊಳಗೆ ಸಂಪಕಿಸಲಾಗುತ್ತದೆ.

    – ಆಹಾರ ಸಂಸ್ಕರಣಾ ವಲಯಕ್ಕೆ 1400 ಕೋಟಿ ರೂ. ದುಪ್ಪಟ್ಟು ಹಣ ಮೀಸಲು
    – ಆಪರೇಷನ್ ಗ್ರೀನ್‍ಗಾಗಿ 500 ಕೋಟಿ ರೂ.
    – ಕಿಸಾನ್ ಕ್ರೆಡಿಟ್ ಕಾರ್ಡ್‍ಗಳು ಮೀನುಗಾರಿಕೆ ಹಾಗೂ ಪಶುಸಂಗೋಪನೆ ರೈತರಿಗೂ ವಿಸ್ತರಣೆ

    – ಬಿದಿರು ವಲಯಕ್ಕೆ 1290 ಕೋಟಿ ರೂ.
    – ಮೀನುಗಾರಕಾ ನಿಧಿ ಹಾಗೂ ಪಶುಸಂಗೋಪನೆ ನಿಧಿಗಾಗಿ 10 ಸಾವಿರ ಕೋಟಿ ರೂ.
    – ರಾಷ್ಟ್ರ ರಾಜಧಾನಿಯಾದ ದೆಹಲಿಯ ಪ್ರದೇಶದ ವಾಯು ಮಾಲಿನ್ಯ ನಿಯಂತ್ರಣಕ್ಕೆ ವಿಶೇಷ ಯೋಜನೆ

    -ಉಜ್ವಲಾ ಯೋಜನೆಯ ಮೂಲಕ 8 ಕೋಟಿ ಗ್ರಾಮೀಣ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ
    – ಕೈಗೆಟುಕುವ ಬೆಲೆಯಲ್ಲಿ ವಸತಿ ನಿಧಿ ಸ್ಥಾಪನೆ ನ್ಯಾಷನಲ್ ಲೈವ್ಲಿಹುಡ್ ಮಿಷನ್‍ಗಾಗಿ 5750 ಕೋಟಿ ರೂ.
    – ಕೃಷಿ ಚಟುವಟಿಕೆಗಾಗಿ ಸಾಲ 10 ಲಕ್ಷ ಕೋಟಿಯಿಂದ 11 ಲಕ್ಷ ಕೋಟಿಗೆ ಹೆಚ್ಚಳ

    – ಬುಡಕಟ್ಟು ಮಕ್ಕಳಿಗಾಗಿ ಏಕಲವ್ಯ ಶಾಲೆಗಳ ಸ್ಥಾಪನೆ, ವಡೋದರಾದಲ್ಲಿ ರೈಲ್ವೆ ವಿಶ್ವವಿದ್ಯಾಲಯಕ್ಕಾಗಿ ಪ್ರಸ್ತಾವನೆ
    – ಆರೋಗ್ಯ ಕೇಂದ್ರಗಳಿಗೆ 1200 ಕೋಟಿ ರೂ.
    – 10 ಕೋಟಿ ಬಡ ಕುಟುಂಬಗಳಿಗಾಗಿ ಆರೋಗ್ಯ ಸುರಕ್ಷಾ ಯೋಜನೆ
    – ಬಡ ಹಾಗೂ ದುರ್ಬಲ ಕುಟುಂಬಗಳಿಗಾಗಿ ಒಂದು ವರ್ಷಕ್ಕೆ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ವಿಮೆ

    – ನೀರಾವರಿ ಯೋಜನೆಗೆ ರೂ. 2600 ಕೋಟಿ ರೂ.
    – 2022ರ ವೇಳೆಗೆ ಪ್ರತೀ ಬಡ ವ್ಯಕ್ತಿಯೂ ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ಮನೆ ಹೊಂದಬೇಕು. ಈಗಾಗಲೇ 1 ಕೋಟಿ ಮನೆಗಳು ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣವಾಗಿದ್ದು, 37 ಲಕ್ಷ ಮನೆಗಳು ನಗರ ಪ್ರದೇಶದಲ್ಲಿ ನಿರ್ಮಾಣವಾಗಿವೆ.

    – ಮುಂದಿನ ಹಣಕಾಸು ಯೋಜನೆಯಲ್ಲಿ ಸುಮಾರು 2 ಕೋಟಿಗೂ ಅಧಿಕ ಶೌಚಾಲಯಗಳನ್ನು ನಿರ್ಮಾಣದ ಗುರಿ
    – ಉಚಿತ ವಿದ್ಯುತ್ ಸಂಪರ್ಕಕ್ಕಾಗಿ 16,000 ಕೋಟಿ ರೂ. ಮೀಸಲು

  • ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಬರುತ್ತಾ: ಅರುಣ್ ಜೇಟ್ಲಿ ಹೇಳಿದ್ದು ಹೀಗೆ

    ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಬರುತ್ತಾ: ಅರುಣ್ ಜೇಟ್ಲಿ ಹೇಳಿದ್ದು ಹೀಗೆ

    ನವದೆಹಲಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲವನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವ ನಿರ್ಧಾರವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬೆಂಬಲಿಸಿದ್ದಾರೆ.

    ರಾಜ್ಯಸಭೆಯಲ್ಲಿ ಮಾಜಿ ಹಣಕಾಸು ಸಚಿವ ಪಿಚಿದಂಬರಂ ಮಾತನಾಡಿ, ಪ್ರಸ್ತುತ 19 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿ ಅಡಿಯಲ್ಲಿ ತರಲು ಅಡ್ಡಿಯಾಗಿರುವುದು ಏನು? ಯಾವಾಗ ಜಿಎಸ್‍ಟಿ ಕೌನ್ಸಿಲ್ ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: 2014ರ ನಂತರ ಮೋದಿ ಸಾಮ್ರಾಜ್ಯ ಎಲ್ಲೆಲ್ಲಿ ವಿಸ್ತರಣೆಯಾಗಿದೆ? ಮ್ಯಾಪ್ ನೋಡಿ

    ಇದಕ್ಕೆ ಪ್ರತಿಕ್ರಿಯಿಸಿದ ಜೇಟ್ಲಿ, ಜಿಎಸ್‍ಟಿ ಕರಡು ನಿಯಮಗಳನ್ನು ರಚಿಸುವ ವೇಳೆ ಯುಪಿಎ ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್‍ಟಿ ವ್ಯಾಪ್ತಿಯ ಒಳಗಡೆ ಸೇರಿಸಲಿಲ್ಲ. ಕೇಂದ್ರ ಮತ್ತು ರಾಜ್ಯಗಳ ಸಂಬಂಧ ಹಾಳಾಗಬಹುದು ಎನ್ನುವ ಕಾರಣಕ್ಕೆ ಯುಪಿಎ ಸೇರಿಸಲಿಲ್ಲ. ಆದರೆ ಈಗ ರಾಜ್ಯಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗುವ ಬಗ್ಗೆ ರಾಜ್ಯಗಳು ಶೀಘ್ರ ಅಥವಾ ನಂತರವಾದರೂ ಒಪ್ಪಿಗೆ ನೀಡಬಹುದು ಎನ್ನುವ ಆಶಾವಾದವನ್ನು ನಾವು ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.

    ಕಳೆದ ವಾರ ಬಿಹಾರದ ಹಣಕಾಸು ಸಚಿವ ಸುಶೀಲ್ ಮೋದಿ ಕಳೆದ ವಾರ ಜಿಎಸ್‍ಟಿ ವ್ಯಾಪ್ತಿಯ ಅಡಿಯಲ್ಲಿ ವಿದ್ಯುತ್, ಪೆಟ್ರೋಲಿಯಂ ಉತ್ಪನ್ನಗಳನ್ನು ತರುವ ಬಗ್ಗೆ ಸುಳಿವು ನೀಡಿದ್ದರು. ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ಮಾತನಾಡಿದ ಸುಶೀಲ್ ಮೋದಿ, ಎಲೆಕ್ಟ್ರಿಸಿಟಿ, ರಿಯಲ್ ಎಸ್ಟೇಟ್, ಪೆಟ್ರೋಲಿಯಂ ಜಿಎಸ್‍ಟಿ ವ್ಯಾಪ್ತಿಗೆ ತರಬೇಕಿದೆ. ಆದರೆ ಇದನ್ನು ವ್ಯಾಪ್ತಿಗೆ ತರುವುದು ಜಿಎಸ್‍ಟಿ ಕೌನ್ಸಿಲ್‍ಗೆ ಬಹಳ ಸವಾಲಿದೆ ಎಂದು ತಿಳಿಸಿದ್ದರು.

    ಬೆಂಗ್ಳೂರಿನಲ್ಲಿ ಎಷ್ಟು ಇರಲಿದೆ?
    ಪೆಟ್ರೋಲ್, ಡೀಸೆಲ್ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ವ್ಯಾಪ್ತಿಗೆ ತಂದರೆ ಬೆಂಗಳೂರಿನಲ್ಲಿ 40 ರೂ. ಆಗಬಹುದು ಎಂದು ಈ ಹಿಂದೆ ವೆಬ್‍ಸೈಟ್ ಸುದ್ದಿ ಪ್ರಕಟ ಮಾಡಿತ್ತು. Factly.in ವೆಬ್‍ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್‍ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್‍ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್‍ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್‍ಸೈಟ್ ಪ್ರಕಟಿಸಿದೆ.

    ಎಷ್ಟು ತೆರಿಗೆ ಆದ್ರೆ ಎಷ್ಟು ರೂ.?
    ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ ಎಂದು ಪರಿಗಣಿಸಿಜಿಎಸ್‍ಟಿ ವ್ಯಾಪ್ತಿಗೆ ತಂದು ಶೇ.12 ತೆರಿಗೆ ವಿಧಿಸಿದರೆ 38.01 ರೂ., ಶೇ.18 ತೆರಿಗೆ ವಿಧಿಸಿದರೆ 40.05 ರೂ., ಶೇ.28 ತೆರಿಗೆ ವಿಧಿಸಿದರೆ 43.44 ರೂ. ಆಗಬಹುದು. ಒಂದು ವೇಳೆ ಜಿಎಸ್‍ಟಿ ಶೇ. 28 ಮತ್ತು ಹೆಚ್ಚುವರಿಯಾಗಿ ಶೇ.22 ಜಿಎಸ್‍ಟಿ ಸೆಸ್ ವಿಧಿಸಿದರೂ ಬೆಲೆ 50.91 ರೂ. ಆಗಲಿದೆ.

    ಬೆಂಗಳೂರಿನಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ 58.82 ರೂ. ಇದೆ. ಜಿಎಸ್‍ಟಿ ಅಡಿಯಲ್ಲಿ ಡೀಸೆಲ್ ಬಂದರೆ ಶೇ.12 ತೆರಿಗೆ ಹಾಕಿದ್ರೆ 36.65 ರೂ. ಆಗುತ್ತದೆ. ಒಂದು ವೇಳೆ ಶೇ.18ರಷ್ಟು ತೆರಿಗೆ ವಿಧಿಸಿದರೆ 38.61 ರೂ. ಆದರೆ ಶೇ.28 ತೆರಿಗೆ ವಿಧಿಸಿದರೆ 41.88 ರೂ. ಆಗುತ್ತದೆ. ಜಿಎಸ್‍ಟಿ ಶೇ.28 ಜೊತೆಗೆ ಹೆಚ್ಚುವರಿ ಸೆಸ್ 22 ಹಾಕಿದ್ರೆ ಡೀಸೆಲ್ ಬೆಲೆ 49.8 ಆಗಬಹುದು.

    ಪೆಟ್ರೋಲ್ ಜಿಎಸ್‍ಟಿಯಲ್ಲಿ ಬರಲ್ಲ:
    ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ.

    ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
    ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್‍ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.

    ಬೆಲೆ ಯಾಕೆ ಜಾಸ್ತಿ?
    ಪ್ರವೇಶ ತೆರಿಗೆ, ವ್ಯಾಟ್, ಅಬಕಾರಿ ಸುಂಕ, ಅಕ್ಟ್ರಾಯ್, ಪೆಟ್ರೋಲ್ ಪಂಪ್ ಮಾಲೀಕರ ಕಮಿಷನ್ ಸೇರಿ ಪೆಟ್ರೋಲ್, ಡೀಸೆಲ್ ದರ ನಿಗದಿಯಾಗುತ್ತದೆ. 2014ರಿಂದ ಲೀಟರ್ ಪೆಟ್ರೋಲ್ ಮೇಲೆ 11.77 ರೂ. ಮತ್ತು ಡೀಸೆಲ್ ಮೇಲೆ 13.47 ರೂ. ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಹೇರಿದೆ. ಇದರಿಂದ 99,000 ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಸರ್ಕಾರ ಹೊಂದಿದೆ.  ಇದನ್ನೂ ಓದಿ: 70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?

    ಜಿಎಸ್‍ಟಿಯಲ್ಲಿ ಪೆಟ್ರೋಲ್ ಬೆಲೆ

    ಜಿಎಸ್‍ಟಿಯಲ್ಲಿ ಡೀಸೆಲ್ ಬೆಲೆ