Tag: Arun Jaitley Stadium

  • ರಣಜಿ ಟ್ರೋಫಿ ಪಂದ್ಯದ ವೇಳೆ ಮತ್ತೆ ಭದ್ರತಾ ಲೋಪ – ಕೊಹ್ಲಿಯತ್ತ ಧಾವಿಸಿದ ಮೂವರು ಅಭಿಮಾನಿಗಳು

    ರಣಜಿ ಟ್ರೋಫಿ ಪಂದ್ಯದ ವೇಳೆ ಮತ್ತೆ ಭದ್ರತಾ ಲೋಪ – ಕೊಹ್ಲಿಯತ್ತ ಧಾವಿಸಿದ ಮೂವರು ಅಭಿಮಾನಿಗಳು

    ನವದೆಹಲಿ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ (Ranaji Trophy) ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಮತ್ತೆ ಮೂವರು ಅಭಿಮಾನಿಗಳು ಕೊಹ್ಲಿಯತ್ತ ಓಡಿ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (Arun Jaitley) ದೆಹಲಿ ಮತ್ತು ರೈಲ್ವೇಸ್ ತಂಡಗಳ ನಡುವೆ ನಡೆದ ಮೊದಲ ರಣಜಿ ಪಂದ್ಯದ ಮೂರನೇ ದಿನದಲ್ಲಿ ಕೊಹ್ಲಿ ಭೇಟಿಗಾಗಿ ಮತ್ತೆ ಮೂವರು ಅಭಿಮಾನಿಗಳು ಭದ್ರತೆಯನ್ನು ಉಲ್ಲಂಘಿಸಿದ್ದಾರೆ.ಇದನ್ನೂ ಓದಿ: Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

    ರಣಜಿ ಟ್ರೋಫಿಯ ಮೊದಲ ದಿನ ಪಂದ್ಯದಲ್ಲಿ ಓರ್ವ ಅಭಿಮಾನಿಯೊಬ್ಬ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಮೈದಾನದೊಳಗೆ ಬಂದು ಕೊಹ್ಲಿಗೆ ಕಾಲು ಮುಟ್ಟಿ ನಮಸ್ಕರಿಸಿದ್ದರು. ಇದಾದ ಬಳಿಕ ಇಂದು ಮತ್ತೆ ಅದೇ ಘಟನೆ ಸಂಭವಿಸಿದೆ. ಮೂರನೇ ದಿನದಾಟದ ವೇಳೆ ಮದ್ಯಾಹ್ನದ ಊಟದ ವಿರಾಮಕ್ಕೂ ಮುನ್ನ ಅಂತಿಮ ಓವರ್‌ನಲ್ಲಿ ಕೊಹ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಮೂವರು ಅಭಿಮಾನಿಗಳು ಮೈದಾನಕ್ಕೆ ನುಗ್ಗಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ಹೊರಗೆ ಕರೆದುಕೊಂಡು ಹೋದರು.

    ದೆಹಲಿಗೆ ಇನ್ನಿಂಗ್ಸ್, 19 ರನ್‌ಗಳ ಭರ್ಜರಿ ಗೆಲುವು:
    ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ದೆಹಲಿ ತಂಡ ಇನ್ನಿಂಗ್ಸ್ ಮುನ್ನಡೆಯೊಂದಿಗೆ 19 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

    ಟಾಸ್ ಸೋತು ಮೊದಲು ಕ್ರೀಸ್‌ಗಿಳಿದ ರೈಲ್ವೇಸ್ ತಂಡ 67.4 ಓವರ್‌ಗಳಲ್ಲಿ 241 ರನ್ ಗಳಿಸಿತ್ತು. ಆದ್ರೆ ತನ್ನ ಸರದಿಯ ಮೊದಲ ಇನ್ನಿಂಗ್ಸ್ ಆಡಿದ ದೆಹಲಿ ತಂಡ 106.4 ಓವರ್‌ಗಳಲ್ಲಿ 374 ರನ್ ಪೇರಿಸಿತ್ತು. 133 ರನ್‌ಗಳ ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ರೈಲ್ವೇಸ್ ತಂಡ 30.5 ಓವರ್‌ಗಳಲ್ಲಿ 114 ರನ್‌ಗಳಿಗೆ ಸರ್ವಪತನ ಕಂಡಿತು. ಇದರಿಂದ ದೆಹಲಿ ತಂಡ ಇನ್ನಿಂಗ್ಸ್ ಮುನ್ನಡೆಯೊಂದಿಗೆ 19 ರನ್‌ಗಳ ಗೆಲುವು ಕಂಡಿತು.ಇದನ್ನೂ ಓದಿ: 3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಸ್ಫೂರ್ತಿದಾಯಕ ಬಜೆಟ್ – ಪ್ರಹ್ಲಾದ್ ಜೋಶಿ

  • ಬಾಂಗ್ಲಾ ವಿರುದ್ಧದ ಟಿ-20 ಪಂದ್ಯಕ್ಕೂ ಮುನ್ನವೇ ಹಿಟ್‍ಮ್ಯಾನ್‍ಗೆ ಗಾಯ

    ಬಾಂಗ್ಲಾ ವಿರುದ್ಧದ ಟಿ-20 ಪಂದ್ಯಕ್ಕೂ ಮುನ್ನವೇ ಹಿಟ್‍ಮ್ಯಾನ್‍ಗೆ ಗಾಯ

    ನವದೆಹಲಿ: ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಮೂರು ಟಿ-20 ಪಂದ್ಯಗಳ ಕ್ರಿಕೆಟ್ ಸರಣಿಗೆ ದಿನಗಣನೆ ಆರಂಭವಾಗಿದೆ. ಆದರೆ ನೆಟ್ ಅಭ್ಯಾಸದ ವೇಳೆ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.

    ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಇಂದು ಟೀಂ ಇಂಡಿಯಾ ನೆಟ್ ಅಭ್ಯಾಸ ನಡೆಸಿತ್ತು. ಈ ವೇಳೆ ಭಾರತದ ಥ್ರೋಡೌನ್ ಪರಿಣಿತ ನುವಾನ್ ಸೆನೆವಿರತ್ನ ಬೌಲಿಂಗ್ ಮಾಡುತ್ತಿದ್ದರು. ಚೆಂಡು ಏಕಾಏಕಿ ರೋಹಿತ್ ಶರ್ಮಾ ಕಾಲಿಗೆ ಬಡಿದ ಪರಿಣಾಮ ನೋವಿನಿಂದ ತಕ್ಷಣವೇ ಅಭ್ಯಾಸ ಮೊಟಕುಗೊಳಿಸಿ ಕ್ರೀಡಾಂಗಣದಿಂದ ಹೊರ ನಡೆದಿದ್ದಾರೆ.

    ದಿನವಿಡಿ ಅಭ್ಯಾಸದಿಂದ ರೋಹಿತ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ರೋಹಿತ್ ಶರ್ಮಾ ಬಾಂಗ್ಲಾ ವಿರುದ್ಧ ಟಿ-20 ಪಂದ್ಯಕ್ಕೆ ಅಲಭ್ಯರಾಗುತ್ತಾರಾ ಎನ್ನುವ ಆತಂಕ ಅಭಿಮಾನಿಗಳಲ್ಲಿ ಶುರುವಾಗಿದೆ.

    ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ನಾಯಕತ್ವದ ಜವಾಬ್ದಾರಿ ರೋಹಿತ್ ಶರ್ಮಾ ಹೊತ್ತುಕೊಂಡಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನವೆಂಬರ್ 3ರಂದು ಬಾಂಗ್ಲಾ ವಿರುದ್ಧದ ಮೊದಲ ಟಿ-20 ಪಂದ್ಯ ನಡೆಯಲಿದೆ. ಅದಕ್ಕಾಗಿ ಈಗಾಗಲೇ ಉಭಯ ತಂಡಗಳು ನೆಟ್‍ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿವೆ.

    ರೋಹಿತ್ ಶರ್ಮಾ ಇನ್ನೆರಡು ದಿನಗಳಲ್ಲಿ ಚೇತರಿಸಿಕೊಂಡು ಬಾಂಗ್ಲಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಅಂತ ಟೀಂ ಇಂಡಿಯಾ ತಿಳಿಸಿದೆ ಎಂದು ವರದಿಯಾಗಿದೆ.