Tag: Arun Singh

  • ಸಿಎಂ ಬಿಎಸ್‍ವೈ ನೇತೃತ್ವದಲ್ಲಿ ಉತ್ತಮ ಕೆಲಸವಾಗುತ್ತಿದೆ: ಅರುಣ್ ಸಿಂಗ್

    ಸಿಎಂ ಬಿಎಸ್‍ವೈ ನೇತೃತ್ವದಲ್ಲಿ ಉತ್ತಮ ಕೆಲಸವಾಗುತ್ತಿದೆ: ಅರುಣ್ ಸಿಂಗ್

    ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಉತ್ತರ ಕೆಲಸಗಳಾಗುತ್ತಿವೆ. ನಾನು ಇದನ್ನು ಪ್ರತಿ ಬಾರಿ ಹೇಳಿದ್ದೇನೆ. ಈ ಬಗ್ಗೆ ಹೆಚ್ಚು ಪ್ರಶ್ನಿಸುವ ಅಗತ್ಯವಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

    ಕುಮಾರ ಕೃಪಾ ಗೆಸ್ಟ್ ಹೌಸ್‍ನಲ್ಲಿ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಉತ್ತರ ಕೆಲಸಗಳಾಗುತ್ತಿವೆ. ನಾನು ಇದನ್ನು ಪ್ರತಿ ಬಾರಿ ಹೇಳಿದ್ದೇನೆ. ಈ ಬಗ್ಗೆ ಹೆಚ್ಚು ಪ್ರಶ್ನಿಸುವ ಅಗತ್ಯವಿಲ್ಲ. ಬಿಜೆಪಿ ಸಚಿವರು, ಶಾಸಕರು, ನಾಯಕರು ಒಟ್ಟಾಗಿದ್ದಾರೆ. ಅಲ್ಲದೆ ಯಾರೂ ಸಹ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಮಾತನಾಡಬಾರದು. ಪಕ್ಷದ ವೇದಿಕೆಯಲ್ಲೇ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಅರುಣ್ ಸಿಂಗ್ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರಿಗೆ ಸೂಚಿಸಿದರು.

    ಅಲ್ಲದೆ ಪಕ್ಷದ ಸಂಘಟನೆ, ಕಾರ್ಯಕರ್ತರ ಬಗ್ಗೆ ಚರ್ಚಿಸಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರು ಸಾಕಷ್ಟು ಸೇವೆಯಲ್ಲಿ ತೊಡಗಿದ್ದಾರೆ. ಅಲ್ಲದೆ ಅಂತರಾಷ್ಟ್ರೀಯ ಯೋಗ ದಿನದ ಕುರಿತು ಸಹ ಚರ್ಚಿಸಬೇಕಿದೆ ಎಂದು ತಿಳಿಸಿದರು.

    ಸಿಎಂ ಬದಲಾವಣೆ ಬಗ್ಗೆ ಮುಂದೆ ತಿಳಿಸ್ತೇನೆ
    ಇದಕ್ಕೂ ಮೊದಲು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಕುರಿತು ಮುಂದೆ ತಿಳಿಸುತ್ತೇನೆ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆ ಕುರಿತು ಮಾಹಿತಿ ನೀಡಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಿರಾಕರಿಸಿದ್ದಾರೆ.

    ಕೋವಿಡ್ ಸಂಕಷ್ಟ ಕಾಲದಲ್ಲಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಜೀವವನ್ನು ಲೆಕ್ಕಿಸದೆ, ಸಾರ್ವಜನಿಕರ ಸೇವೆ ಮಾಡಿದ್ದಾರೆ, ಸೇವೆಯೇ ಸಂಘಟನೆ ಎಂಬ ಮನೋಭಾವದಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಸೇವೆ ಮಾಡುವುದು ನಮ್ಮ ಪರಮ ಕರ್ತವ್ಯವಾಗಿದೆ. ಆದರೆ ಇಂತಹ ಕಠಿಣ ಪರಿಸ್ಥಿತಿಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಜೆಡಿಎಸ್‍ನವರು ಇಂತಹ ಸಂದರ್ಭದಲ್ಲಿ ಕ್ವಾರಂಟೈನ್‍ನಲ್ಲಿ ಉಳಿದಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಏನ್ ಹೇಳ್ಬೇಕೋ ಅದನ್ನು ಕರ್ನಾಟಕದಲ್ಲೇ ಹೇಳ್ತೀನಿ: ಅರುಣ್ ಸಿಂಗ್

    ಅವರು ಜನತೆಯ ಸೇವೆಯನ್ನು ಮಾಡುತ್ತಿಲ್ಲ, ಆದರೆ ಬಿಜೆಪಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದು ಜನತೆಗೆ ತಿಳಿದಿದೆ ಸಹ, ಅವರ ಕಾರ್ಯದ ಕುರಿತು ಸಮೀಕ್ಷೆ ಮಾಡಬೇಕಿದೆ. ಈ ಮೂಲಕ ಸೇವೆಯ ಮುಂದೆ ಹೇಗೆ ನಡೆಸಬೇಕು ಎಂಬುದರ ಕುರಿತು ಸಹ ನೋಡಬೇಕಿದೆ. ಬಿಜೆಪಿ ಕಾರ್ಯಕರ್ತರು ಗಿಡ ನೆಡುವುದು, ಒನ್ ಟೈಪ್ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುವುದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದ್ದಾರೆ. ಅಲ್ಲದೆ ಮುಂದೆ ಯೋಗ ದಿನಾಚರಣೆಯನ್ನು ಸಹ ಅದ್ಧೂರಿಯಾಗಿ ಮಾಡಬೇಕಿದೆ. ಈ ಕಾರ್ಯಕ್ರಮಗಳ ಕುರಿತು ಸಹ ಕಾರ್ಯಕರ್ತರೊಂದಿಗೆ ಹಾಗೂ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಬೇಕಿದೆ ಎಂದು ವಿವರಿಸಿದರು.

    ಅರುಣ್ ಸಿಂಗ್ ಸ್ವಾಗತಕ್ಕೆ ದೆಹಲಿ ವಿಶೇಷ ಪ್ರತಿನಿಧಿ ಶಂಕರ್ ಗೌಡ ಪಾಟೀಲ್ ಆಗಮಿಸಿದ್ದರು. ಜೊತೆಗೆ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಸಹ ಆಗಮಿಸಿದ್ದರು. ಅಲ್ಲದೆ ಹವಾಮಾನದ ವೈಪರೀತ್ಯ ಹಿನ್ನೆಲೆ ವಿಮಾನ 25 ನಿಮಿಷ ತಡವಾಗಿ ವಿಮಾನ ಲ್ಯಾಂಡ್ ಆಯಿತು. 3.55ಕ್ಕೆ ಏರ್ಪೋರ್ಟ್ ಗೆ ಆಗಮಿಸಲಿರುವ ಅರುಣ್ ಸಿಂಗ್, ಕಾರ್ಯಕರ್ತರೊಂದಿಗೆ ನಡೆದರು. ಈ ವೇಳೆ ಸಾಮಾಜಿಕ ಅಂತರ ಕಾಪಾಡದ್ದಕ್ಕೆ ಕಾರ್ಯಕರ್ತರು ಹಾಗೂ ಪೋಲೀಸರ ನಡುವೆ ಮಾತಿನ ಚಕಮಕಿ ಸಹ ನಡೆಯಿತು.

  • ನಾಯಕತ್ವ ಬದಲಾವಣೆ ನೂರಕ್ಕೆ ನೂರು ಸುಳ್ಳು: ಈಶ್ವರಪ್ಪ

    ನಾಯಕತ್ವ ಬದಲಾವಣೆ ನೂರಕ್ಕೆ ನೂರು ಸುಳ್ಳು: ಈಶ್ವರಪ್ಪ

    ಬೆಂಗಳೂರು: ನಾಯಕತ್ವ ಬದಲಾವಣೆ ಅನ್ನೋದು ನೂರಕ್ಕೆ ನೂರು ಸುಳ್ಳು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕರ್ನಾಟಕದ ಭಾರತೀಯ ಜನತಾ ಪಾರ್ಟಿಯಲ್ಲಿ ಶಾಸಕರು ಸಚಿವರ ನಡುವೆ ಸ್ವಲ್ಪ ಗೊಂದಲ ಇರುವುದು ನಿಜ. ಅದರ ಬಗ್ಗೆ ಮಾತುಕತೆ ನಡೆಸಿ ಗೊಂದಲ ನಿವಾರಣೆ ಮಾಡಲು ಅರುಣ್ ಸಿಂಗ್ ಬರುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯೇ ಪ್ರಮುಖ ಅಂಶ ಅನ್ನೋದು ಸುಳ್ಳು ಎಂದರು.

    ಭಾರತಿಯ ಜನತಾ ಪಾರ್ಟಿಯಲ್ಲಿ ಮಾತ್ರ ಈ ರೀತಿ ನಾಲ್ಕು ಗೋಡೆಯ ಮಧ್ಯದಲ್ಲಿ ಮಾತನಾಡುವ ಅವಕಾಶ ಇರುವುದು. ಜಮೀರ್, ಸಿದ್ದರಾಮಯ್ಯ ಚಾಮರಾಜಪೇಟೆಗೆ ಬರ್ತಾರೆ, ಮುಂದೆ ಸಿಎಂ ಆಗ್ತಾರೆ ಅಂತಾರೆ. ಅವರೆ ಬಿಫಾರಂ ಕೊಡುವುದಾ…? ಅವರೆ ಸಿಎಂ ಮಾಡುವುದಾ..? ಹೈಕಮಾಂಡ್ ಇಲ್ವಾ, ಕೆಪಿಸಿಸಿ ಅಧ್ಯಕ್ಷರು ಇಲ್ವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಯಡಿಯೂರಪ್ಪ ಸಮರ್ಥ ನಾಯಕ, ಅವರನ್ನೇ ಮುಂದುವರಿಸಿ – ವೀರಶೈವ ಲಿಂಗಾಯತ ಯುವ ವೇದಿಕೆ

    ರೇಣುಕಾಚಾರ್ಯ, ಯೋಗೇಶ್ವರ್, ಸುನೀಲ್ ಕುಮಾರ್ ಎಲ್ಲರು ಮಾತನಾಡಿದಾರೆ ಹೌದು. ಅವರಿಗೆ ಮಾತನಾಡಬೇಡಿ ಅಂತ ನಾನು ಹೇಳಿದ್ದೇನೆ. ಆ ಕಾರಣಕ್ಕೆ ಅರುಣ್ ಸಿಂಗ್ ಬರುತ್ತಿದ್ದಾರೆ. ಎಲ್ಲಾ ಗೊಂದಲ ಪರಿಹಾರವಾಗುತ್ತೆ. ಭಾರತೀಯ ಜನತಾ ಪಾರ್ಟಿಯ ಈ ವ್ಯವಸ್ಥೆ ಕಾಂಗ್ರೆಸ್ಸಿನಲ್ಲಿ ಇಲ್ಲಾ. 17 ಜನ ಬಂದಿದ್ದರಿಂದಲೇ ನಮಗೆ ಸರ್ಕಾರ ಬಂದಿದೆ. ಪೂರ್ಣ ಬಹುಮತ ಬಂದಿದ್ದರೆ ಈ ರೀತಿ ಸಮಸ್ಯೆ ಇರುತ್ತಿರಲಿಲ್ಲ ಅನ್ನೋದು ನನ್ನ ಅಭಿಪ್ರಾಯ. ನೀವು ಏನು ಬೇಕಾದರು ತಿಳಿದುಕೊಳ್ಳಿ. ಕೇಂದ್ರದ ನಾಯಕರು ಏನು ಹೇಳ್ತಾರೋ ಅದನ್ನ ಶಿರಸ್ಸಾವಹಿಸಿ ಪಾಲಿಸುತ್ತೇನೆ. ನಮ್ಮ ನಾಯಕರ ತೀರ್ಮಾನವನ್ನ ರಾಜ್ಯದ ಎಲ್ಲರು ಪಾಲಿಸಲೇಬೇಕು ಎಂದು ಈಶ್ವರಪ್ಪ ತಿಳಿಸಿದ್ದಾರೆ.

  • ಏನ್ ಹೇಳ್ಬೇಕೋ ಅದನ್ನು ಕರ್ನಾಟಕದಲ್ಲೇ ಹೇಳ್ತೀನಿ: ಅರುಣ್ ಸಿಂಗ್

    ಏನ್ ಹೇಳ್ಬೇಕೋ ಅದನ್ನು ಕರ್ನಾಟಕದಲ್ಲೇ ಹೇಳ್ತೀನಿ: ಅರುಣ್ ಸಿಂಗ್

    ನವದೆಹಲಿ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

    ಕರ್ನಾಟಕಕ್ಕೆ ಹೊಗ್ತಿದ್ದಿನಿ, ಏನು ಹೇಳಬೇಕೋ ಅದನ್ನು ಕರ್ನಾಟಕದಲ್ಲಿಯೇ ಹೇಳುತ್ತೇನೆ. ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಇರಲಿದ್ದೇನೆ. ಹೀಗಾಗಿ ಅಲ್ಲಿಯೇ ಹೋಗಿ ಮಾತನಾಡುವುದಾಗಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

    ಅರುಣ್ ಸಿಂಗ್ ಅವರು ಬೆಂಗಳೂರಿಗೂ ಭೇಟಿಗೂ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಚರ್ಚಿಸಬೇಕಾದ ಪ್ರಮುಖ ವಿಚಾರಗಳ ಬಗ್ಗೆ ಅರುಣ್ ಸಿಂಗ್, ನಡ್ಡಾ ಚರ್ಚೆ ಮಾಡಿದರು. ಈ ವೇಳೆ ನಡ್ಡಾ ಹಲವು ಸಲಹೆಗಳನ್ನು ನೀಡಿದ್ದು, ನಡ್ಡಾ ನೀಡಿರುವ ಸಲಹೆಗಳ ಆಧಾರದ ಮೇಲೆ ಅರುಣ್ ಸಿಂಗ್ ರಾಜ್ಯದಲ್ಲಿ ಮಾಹಿತಿ ಕಲೆ ಹಾಕಲಿದ್ದಾರೆ. ಇದನ್ನೂ ಓದಿ: ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ: ರೇಣುಕಾಚಾರ್ಯ

    ಇತ್ತ ಇಂದು ಅರುಣ್ ಸಿಂಗ್ ಆಗಮನ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗುತ್ತಿದ್ದಾರೆ. ಶಾಸಕ ರಾಜುಗೌಡ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಶಾಸಕರು ಇಂದು ಸಿಎಂ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ.

  • ಬಿಜೆಪಿ ಬಿಕ್ಕಟ್ಟು – ಹೈಕಮಾಂಡ್ ಮುಂದಿರುವ 3 ಆಯ್ಕೆಗಳು ಏನು?

    ಬಿಜೆಪಿ ಬಿಕ್ಕಟ್ಟು – ಹೈಕಮಾಂಡ್ ಮುಂದಿರುವ 3 ಆಯ್ಕೆಗಳು ಏನು?

    ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಯಡಿಯೂರಪ್ಪಗೆ ಹೈಕಮಾಂಡ್ ಶಾಕ್ ಕೊಡುತ್ತಾ? ಅಥವಾ ಅವರ ವಿರೋಧಿ ಬಣಕ್ಕೆ ಶಾಕ್ ಕೊಡುತ್ತಾ? ರಾಜ್ಯ ಬಿಜೆಪಿಯಲ್ಲಿ ಮುಂದೇನು? ಭಿನ್ನಮತ ಶಮನವಾಗುತ್ತಾ ಇಲ್ವಾ? ಈ ಎಲ್ಲಾ ಪ್ರಶ್ನೆಗಳಿಗೆ, ಗೊಂದಲಗಳಿಗೆ ಉತ್ತರ ಸಿಗುವ ಕಾಲ ಸನ್ನಿಹಿತವಾಗಿದೆ.

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಪ್ರತಿನಿಧಿ ಅರುಣ್ ಸಿಂಗ್ ಈಗಾಗಲೇ ಹೇಳಿದ್ದಾರೆ. ಯಡಿಯೂರಪ್ಪ ಕೂಡ ಇನ್ನು ಎರಡು ವರ್ಷವೂ ನಾನೇ ಸಿಎಂ ಎನ್ನುತ್ತಿದ್ದಾರೆ. ಆದರೆ ಬಿಎಸ್‍ವೈ ವಿರೋಧಿಗಳು ಮಾತ್ರ ರಣತಂತ್ರ ರೂಪಿಸುವುದನ್ನು ನಿಲ್ಲಿಸಿಲ್ಲ. ಮೇಲಿಂದ ಮೇಲೆ ದಾಳ ಉರುಳಿಸುತ್ತಿದ್ದಾರೆ.

    ಜೆಪಿ ನಡ್ಡಾ, ಅರುಣ್ ಸಿಂಗ್ ಅವರನ್ನು ದೆಹಲಿಯಲ್ಲಿ ಅರವಿಂದ್ ಬೆಲ್ಲದ್ ಭೇಟಿ ಆಗಿದ್ದರೆ ಮಂಗಳವಾರ ಬೆಂಗಳೂರಿನಲ್ಲಿ ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಒಂದು ಗಂಟೆ ಚರ್ಚೆ ನಡೆಸಿದ್ದಾರೆ. ಇದ್ದಕ್ಕಿದ್ದಂತೆ ಸಚಿವ ಯೋಗೇಶ್ವರ್ ಹೈದರಾಬಾದ್‍ಗೆ ತೆರಳಿದ್ದು, ಬಿಎಸ್‍ವೈ ಕೆಳಗಿಳಿಸಲು ಭಾರೀ ಪ್ಲಾನ್ ರೂಪಿಸ್ತಿದ್ದಾರಾ ಎಂಬ ಅನುಮಾನ ಮೂಡಿದೆ.  ಇದನ್ನೂ ಓದಿ : ನಾವು ಬಿಜೆಪಿಗೆ ಬಂದಿದ್ದಕ್ಕೆ ಈಶ್ವರಪ್ಪ ಮಿನಿಸ್ಟರ್ ಆಗಿದ್ದು: ಬಿ.ಸಿ.ಪಾಟೀಲ್ ತಿರುಗೇಟು

    ಈ ಬೆಳವಣಿಗೆ ನಡುವೆ ಇಂದಿನಿಂದ ಮೂರು ದಿನ ಅರುಣ್ ಸಿಂಗ್ ಬೆಂಗಳೂರು ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅರುಣ್ ಸಿಂಗ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ವಿರೋಧಿ ಬಣ, ಶಾಸಕರನ್ನು ಒಗ್ಗೂಡಿಸುವ ಪ್ರಯತ್ನ ನಡೆಸುತ್ತಿದೆ. ಅದರಲ್ಲೂ, ಉತ್ತರ ಕರ್ನಾಟಕದ ಇಬ್ಬರು ಶಾಸಕರು ತಮಗೆ ಬೆಂಬಲ ನೀಡುವಂತೆ ಕಂಡ ಕಂಡ ಶಾಸಕರಿಗೆ ದೂರವಾಣಿ ಕರೆ ಮಾಡಿ ಮನವಿ ಮಾಡುತ್ತಿದ್ದಾರೆ.

    ಅರುಣ್ ಸಿಂಗ್ ಪ್ರವಾಸದ ಮೊದಲ ದಿನವಾದ ನಾಳೆ ಸಂಜೆ ಬಿಜೆಪಿ ಕಚೇರಿಯಲ್ಲಿ ಸಚಿವರ ಮೌಲ್ಯಮಾಪನ ನಡೆಯಲಿದ್ದು, ಈ ಸಭೆಯಲ್ಲಿ ಹಾಜರಿರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‍ಗೆ ಸೂಚಿಸಲಾಗಿದೆ. ಒಂದು ವೇಳೆ ನಾಯಕತ್ವ ಬದಲಾವಣೆ ಆಗದಿದ್ದರೆ, ಸಂಪುಟ ಪುನಾರಚನೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದು ಕೆಲ ಸಚಿವರ ಆತಂಕಕ್ಕೆ ಕಾರಣವಾಗಿದೆ.

    ಹೈಕಮಾಂಡ್ ಮುಂದಿರುವ ಆಯ್ಕೆಗಳೇನು?
    ನಾಯಕತ್ವ ಬದಲಾವಣೆ:
    ಈಗಾಗಲೇ ಸಿಎಂ ಬದಲಾವಣೆ ಇಲ್ಲ ಅಂತ ಸ್ಪಷ್ಟವಾಗಿ ಹೇಳಿರುವ ಹಿನ್ನೆಲೆಯಲ್ಲಿ ಈ ಆಯ್ಕೆ ಜಾರಿಯಾಗುವುದು ಅನುಮಾನ.

    ಸಂಪುಟ ಪುನಾರಚನೆ:
    ಈ ಸಾಧ್ಯತೆ ಹೆಚ್ಚಿದೆ. ಖಾಲಿ ಇರುವ ಸಚಿವ ಸ್ಥಾನ ಜೊತೆಗೆ ಕೆಲವು ಸಚಿವರು ಕೈಬಿಡುವ ಸಾಧ್ಯತೆ ಇದೆ. ಮೌಲ್ಯಮಾಪನ ಬಳಿಕ ಅಂತಿಮ ನಿರ್ಧಾರವಾಗಲಿದೆ.

    ಶಾಸಕಾಂಗ ಸಭೆ
    ಅತೃಪ್ತರ ಬೇಡಿಕೆಯಂತೆ ಶಾಸಕಾಂಗ ಸಭೆ ಕರೆಯಬಹುದು. ನಾಡಿದ್ದು ಯಾವುದೇ ಕಾರ್ಯಕ್ರಮ ಇಲ್ಲದಿರುವುದರಿಂದ ಶಾಸಕರ ಸಭೆ ನಡೆಸಿ, ಹೈಕಮಾಂಡಿಗೆ ವರದಿ ಸಲ್ಲಿಸಬಹುದು. ಈಗಾಗಲೇ ಕಾರ್ಕಳ ಶಾಸಕ ಸುನಿಲ್ ಕುಮಾರ್, ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದರು.

  • ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ: ಸಚಿವ ಬಿ.ಸಿ.ಪಾಟೀಲ್

    ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ: ಸಚಿವ ಬಿ.ಸಿ.ಪಾಟೀಲ್

    ಚಾಮರಾಜನಗರ: ಸಿಎಂ ಯಡಿಯೂರಪ್ಪ ಪರ ಮಠಾಧೀಶರ ಬ್ಯಾಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ. ಪ್ರತಿಯೊಬ್ಬರಿಗು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ, ವಾಕ್ ಸ್ವಾತಂತ್ರ್ಯ ಇದೆ, ಮಠಾಧೀಶರು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

    ಚಾಮರಾಜನಗರ ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸ್ಪಷ್ಡಪಡಿಸಿದ್ದಾರೆ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಮೂಲಿಯಂತೆ ಪಕ್ಷದ ಆಗು ಹೋಗುಗಳು ಹಾಗು ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲು ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಬಿಜೆಪಿಗೆ ಬಂದಿದ್ದಕ್ಕೆ ಈಶ್ವರಪ್ಪ ಮಿನಿಸ್ಟರ್ ಆಗಿದ್ದು: ಬಿ.ಸಿ.ಪಾಟೀಲ್ ತಿರುಗೇಟು

    ಮುಖ್ಯಮಂತ್ರಿ ಬದಲಾವಣೆ ವಿಚಾರ ಸಂಪೂರ್ಣ ಸುಳ್ಳು, ಮುಂದಿನ ಎರಡು ವರ್ಷ ಕಾಲ ಯಡಿಯೂರಪ್ಪ ನವರೇ ಸಿಎಂ ಆಗಿರುತ್ತಾರೆ. ನಾನೇ ಮುಂದಿನ ಸಿಎಂ ಎಂದು ಯತ್ನಾಳ್ ಎಲ್ಲಾ ಶಾಸಕರಿಗೆ ಫೋನ್ ಮಾಡಿ ಬೆಂಬಲ ಕೋರುತ್ತಿದ್ದಾರೆಂಬ ರೇಣುಕಾಚಾರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನಗೆ ಯಾರಿಂದಲೂ ಯಾವುದೇ ಫೋನ್ ಬಂದಿಲ್ಲ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆ

  • ನಾಯಕತ್ವ ಬದಲಾವಣೆಗೆ ದೆಹಲಿಯಲ್ಲಿ ಬೆಲ್ಲದ್ ರಣತಂತ್ರ- ಅರುಣ್ ಸಿಂಗ್ ಮುಂದೆ ಬೆಲ್ಲದ್ ಹೇಳಿದ್ದೇನು?

    ನಾಯಕತ್ವ ಬದಲಾವಣೆಗೆ ದೆಹಲಿಯಲ್ಲಿ ಬೆಲ್ಲದ್ ರಣತಂತ್ರ- ಅರುಣ್ ಸಿಂಗ್ ಮುಂದೆ ಬೆಲ್ಲದ್ ಹೇಳಿದ್ದೇನು?

    ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಆರುವ ಲಕ್ಷಣ ಕಾಣಿಸುತ್ತಿಲ್ಲ. ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಬೀಡುಬಿಟ್ಟಿರುವ ಬಿಎಸ್‍ವೈ ವಿರೋಧಿ ಬಣದ ಶಾಸಕ ಅರವಿಂದ್ ಬೆಲ್ಲದ್ ಕೊನೆಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‍ರನ್ನು ಭೇಟಿ ಮಾಡಿ ಅರ್ಧಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಆದರೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ನಿರ್ಗಮಿಸಿದ್ದಾರೆ.

    ಇದೇ ವೇಳೆ, ಅಮಿತ್ ಶಾ, ಜೆಪಿ ನಡ್ಡಾ ಭೇಟಿಗೂ ಬೆಲ್ಲದ್ ಪ್ರಯತ್ನ ನಡೆಸಿದ್ದಾರೆ. ಈ ಬೆನ್ನಲ್ಲೇ ಬುಧವಾರ ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಸಚಿವರ ಸಭೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಬೇಕಾ? ಬೇಡ್ವಾ ಎಂದು ಸಂಧಿಗ್ಧತೆಯಲ್ಲಿ ಅರುಣ್ ಸಿಂಗ್ ಸಿಲುಕಿದ್ದಾರೆ ಎನ್ನಲಾಗಿದೆ. ಅರುಣ್ ಸಿಂಗ್ ಜೊತೆಗೆ ವೀಕ್ಷಕರೊಬ್ಬರನ್ನು ಕಳಿಸಿ ಎಂದು ಬಿಎಸ್‍ವೈ ವಿರೋಧಿ ಬಣ ಹೈಕಮಾಂಡ್‍ಗೆ ಮನವಿ ಮಾಡಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆ ಮುಖ್ಯಮಂತ್ರಿ ಬಣದ ಚಿಂತೆಗೆ ಕಾರಣವಾಗಿದೆ.

    ಈ ಮಧ್ಯೆ ಅರವಿಂದ್ ಬೆಲ್ಲದ್ ವಿರುದ್ಧ ಎಂಎಲ್‍ಸಿ ಆಯನೂರು ಮಂಜುನಾಥ್ ಕಿಡಿಕಾರಿದ್ದಾರೆ. ಅರವಿಂದ್ ಬೆಲ್ಲದ್ ಎಂಬ ಮನುಷ್ಯ ಮುಖ್ಯಮಂತ್ರಿ ಕನಸು ಕಾಣುತ್ತಿದ್ದಾರೆ. ತಾವೇ ಗೆದ್ದು ಬರಲು ತಿಣುಕಾಡುವ ಮನುಷ್ಯ ಆತ. ಅವರು ಸಿಎಂ ಕನಸು ಕಾಣಲಿ ಯಾರು ಬೇಡ ಅಂತಾರೆ ಎಂದು ಆಯನೂರು ಮಂಜುನಾಥ್ ವ್ಯಂಗ್ಯ ಮಾಡಿದ್ದಾರೆ. ಇನ್ನು ವಿಜಯಪರದ ಶಾಸಕ ಯತ್ನಾಳ್ ಶಾಸಕರಿಗೆ ಕರೆ ಮಾಡಿ ನಾನೇ ಮುಂದಿನ ಸಿಎಂ, ಸಹಕಾರ ಕೊಡಿ ಎಂದು ಕೇಳ್ತಿದ್ದಾರೆ ಅಂತಾ ರೇಣುಕಾಚಾರ್ಯ ಆರೋಪಿಸಿದ್ದಾರೆ.

    ಅರುಣ್ ಸಿಂಗ್ ಬಳಿ ಬೆಲ್ಲದ್ ಹೇಳಿದ್ದೇನು?
    ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸರ್ಕಾರ ನಡೆಸಲು ಸಾಧ್ಯವಾಗುತ್ತಿಲ್ಲ. ಮುಂದಿನ ಚುನಾವಣೆ ದೃಷ್ಟಿಯಿಂದ ನಾಯಕತ್ವ ಬದಲಾವಣೆ ಮಾಡಿ. ಹೊಸ ನಾಯಕತ್ವದಲ್ಲಿ ಮುಂದಿನ ಚುನಾವಣೆಗೆ ಸಜ್ಜಾಗಲು ಅವಕಾಶ ನೀಡಿ. ಶಾಸಕಾಂಗ ಸಭೆ ಕರೆಯಿರಿ. ಅಭಿಪ್ರಾಯ ಸಂಗ್ರಹಿಸಿ ಎಂದು ಹೇಳಿದ್ದಾರೆ ಎನ್ನಲಾಗಿದೆ.

    ಬಹಳಷ್ಟು ಶಾಸಕರಿಗೆ ಯಡಿಯೂರಪ್ಪ ಅವರ ವಿರುದ್ಧ ಅಸಮಾಧಾನ ಇದೆ. ವಿಜಯೇಂದ್ರ ಹಸ್ತಕ್ಷೇಪದಿಂದ ಪಕ್ಷದ ಶಾಸಕರ ಕೆಲಸ ಆಗುತ್ತಿಲ್ಲ. ಕೊರೊನಾ ನೆಪದಲ್ಲಿ ಎಲ್ಲವನ್ನೂ ಮುಂದೂಡೋದು ಸರಿಯಲ್ಲ, ಹಾಗಾಗಿ ಈ ಸಂದರ್ಭದಲ್ಲಿಯೇ ಸೂಕ್ತ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಸಿಎಂ ಬೆಂಬಲಕ್ಕೆ ನಿಂತ ಮಠಾಧೀಶರು:
    ಈ ನಡುವೆ ಸಿಎಂ ನಿವಾಸಕ್ಕೆ ಧಾವಿಸಿದ ಹಲವು ಆಪ್ತ ಶಾಸಕರು, ಯಡಿಯೂರಪ್ಪಗೆ ಜೈ ಎಂದಿದ್ದಾರೆ. ನಾವು ಯಡಿಯೂರಪ್ಪ ಪರ ಎಂದು ರಾಣೆಬೆನ್ನೂರು ಶಾಸಕ ಅರುಣ್ ಪೂಜಾರ್ ಪ್ರಕಟಿಸಿದ್ದಾರೆ. ಸಿಎಂ ಬದಲಾವಣೆ ರಾಜಕೀಯ ಜೋರಾದ ಬೆನ್ನಲ್ಲೇ ಬಿಎಸ್‍ವೈ ಬೆಂಬಲಕ್ಕೆ ವೀರಶೈವ ಲಿಂಗಾಯತ ಸ್ವಾಮೀಜಿಗಳು ಅಖಾಡದಲ್ಲಿ ಕಾಣಿಸಿಕೊಂಡಿದ್ದಾರೆ. ತುಮಕೂರಲ್ಲಿ ಸುದ್ದಿಗೋಷ್ಠಿ ನಡೆಸಿದ 10ಕ್ಕೂ ಹೆಚ್ಚು ಮಠಾಧೀಶರು, ವಯಸ್ಸಿನ ಕಾರಣ ಹೇಳಿ ಯಡಿಯೂರಪ್ಪ ವಿರುದ್ಧ ಷಡ್ಯಂತ್ರ್ಯ ನಡೀತಿದೆ. ಕರುಣಾನಿಧಿ ಗಾಲಿ ಕುರ್ಚಿಲಿ ಕುಳಿತು ಆಡಳಿತ ನಡೆಸಲಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬಿಎಸ್‍ವೈ ಅವ್ರೇ ಕಾರಣ.. ಅವ್ರನ್ನು ಮೂಲೆಗುಂಪು ಮಾಡಲು ನೋಡಿದ್ರೆ ನಾವು ಸುಮ್ಮನಿರಲ್ಲ. ಅವರಿಗೆ ಆಡಳಿತ ಪೂರೈಸಲು ಸಹಕರಿಸಿ ಎಂದು ಸ್ವಾಮೀಜಿಗಳು ಒತ್ತಾಯಿಸಿದ್ದಾರೆ.

    ಚಿಕ್ಕೋಡಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಇಲ್ಲ. 2 ವರ್ಷ ಯಡಿಯೂರಪ್ಪ ಸರ್ಕಾರ ಖಚಿತವಾಗಿ ಮುಂದುವರೆಯುತ್ತೆ ಎಂದಿದ್ದಾರೆ. ನಮ್ಮನ್ನು ಈ ವಿಚಾರದಲ್ಲಿ ಎಳೆದುತರಬೇಡಿ.. ನಾವು ಯಾರ ಬೆಂಬಲಕ್ಕೂ ಇಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

  • ನಾಯಕತ್ವ ಬದಲಾವಣೆಯಾಗಲೀ ಮುಖ್ಯಮಂತ್ರಿಯ ಬದಲಾವಣೆಯಾಗಲೀ ಇಲ್ಲ: ಬಿ.ಸಿ.ಪಾಟೀಲ್

    ನಾಯಕತ್ವ ಬದಲಾವಣೆಯಾಗಲೀ ಮುಖ್ಯಮಂತ್ರಿಯ ಬದಲಾವಣೆಯಾಗಲೀ ಇಲ್ಲ: ಬಿ.ಸಿ.ಪಾಟೀಲ್

    ಬೆಂಗಳೂರು: ನಾಯಕತ್ವ ಬದಲಾವಣೆಯ ಚರ್ಚೆಯು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೇರಿದಾಗಿನಿಂದಲೂ ಈ ಇದೆ. ಆದರೆ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅರುಣ್ ಸಿಂಗ್ ನಾಯಕತ್ವ ಬದಲಾವಣೆಯಾಗಲೀ ಮುಖ್ಯಮಂತ್ರಿಯ ಬದಲಾವಣೆಯಾಗಲೀ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬಿ.ಸಿ.ಪಾಟೀಲ್, ಜೂನ್ 16 ರಂದು ಉಸ್ತುವಾರಿಗಳು ಸಭೆ ಕರೆದಿದ್ದಾರಾದರೂ ಚರ್ಚೆಯ ವಿಷಯ ಗೊತ್ತಿಲ್ಲ. ಸಚಿವರ ಸಭೆಯದು. ಅದರಲ್ಲಿ ತಾವು ಸಹ ಭಾಗವಹಿಸುತ್ತಿದ್ದೇನೆ. ಇನ್ನೂ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ. ಇದನ್ನೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಸಹ ತಿಳಿಸಿದ್ದಾರೆ. ಪಕ್ಷದ ವರಿಷ್ಠರು ಯಾವುದೇ ತೀರ್ಮಾನ ಕೈಗೊಂಡರೂ ಎಲ್ಲರೂ ಅದಕ್ಕೆ ಬದ್ಧರಾಗಬೇಕು ಎಂದರು.

    ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ರಾಜ್ಯದಲ್ಲಿ ವಾಸ್ತವ್ಯ ಹೂಡಲಿರುವ ಅರುಣ್ ಸಿಂಗ್, ಸಿಎಂ, ರಾಜ್ಯಾಧ್ಯಕ್ಷರು, ಸಚಿವರು, ಸಂಸದರು, ಶಾಸಕರ ಜತೆ ಪ್ರತ್ಯೇಕ ಚರ್ಚೆ ನಡೆಸಲಿದ್ದಾರೆ.

  • ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬೆಂಗ್ಳೂರು ಭೇಟಿಗೆ ಮುಹೂರ್ತ ಫಿಕ್ಸ್

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬೆಂಗ್ಳೂರು ಭೇಟಿಗೆ ಮುಹೂರ್ತ ಫಿಕ್ಸ್

    ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರು ಜೂನ್ 16ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ರಾಜ್ಯದಲ್ಲಿ ವಾಸ್ತವ್ಯ ಹೂಡಲಿರುವ ಅರುಣ್ ಸಿಂಗ್, ಸಿಎಂ, ರಾಜ್ಯಾಧ್ಯಕ್ಷರು, ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ಪ್ರತ್ಯೇಕ ಚರ್ಚೆ ನಡೆಸಲಿದ್ದಾರೆ.

    ಅರುಣ್ ಸಿಂಗ್ ಪ್ರವಾಸ ವಿವರ ಹೀಗಿದೆ:
    – ಜೂನ್ 16 ರ ಮಧ್ಯಾಹ್ನ 3.30ಕ್ಕೆ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು.
    – ಸಂಜೆ 4.20ಕ್ಕೆ ಕುಮಾರಕೃಪಾ ಅತಿಥಿಗೃಹಕ್ಕೆ ತೆರಳುವರು.
    – ಸಂಜೆ 4.45ಕ್ಕೆ ರಾಜ್ಯ ಬಿಜೆಪಿ ಕಾರ್ಯಾಲಯ  ‘ಜಗನ್ನಾಥ ಭವನ’ಕ್ಕೆ ತೆರಳುವರು.

    – ಅಲ್ಲಿ 5 ಗಂಟೆಗೆ ರಾಜ್ಯದ ಸಚಿವರ ಜೊತೆ ಸಭೆ ನಡೆಸುವರು.
    – ರಾತ್ರಿ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಇರಲಿದ್ದಾರೆ.
    – ಜೂನ್ 17 ಮತ್ತು 18 ರಂದು ಅರುಣ್ ಸಿಂಗ್ ಸರಣಿ ಸಭೆಗಳು ನಡೆಸುವರು

    – ಜೂನ್ 18 ರಂದು ಸಂಜೆ 5 ಕ್ಕೆ ಪಕ್ಷದ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ
    – ಜೂನ್ 18 ರ ಸಂಜೆ 7 ರ ಬಳಿಕ ಅರುಣ್ ಸಿಂಗ್ ದೆಹಲಿಗೆ ವಾಪಸ್

    ಇತ್ತ ಅರುಣ್ ಸಿಂಗ್ ಆಗಮಿಸುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಭಿನ್ನರ ಬಣದಲ್ಲಿ ಬಗೆ ಬಗೆ ಚರ್ಚೆ, ಸಮಾಲೋಚನೆಗಳು ಶುರುವಾಗಿವೆ. ಅರುಣ್ ಸಿಂಗ್ ಎದುರು ಯಾರ್ಯಾರು, ಏನೇನು ಮಾತಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಅರುಣ್ ಸಿಂಗ್ ಬಳಿ ಯಾವೆಲ್ಲ ವಿಷಯಗಳ ಚರ್ಚೆ ಮಾಡಬೇಕು ಎಂಬುದರ ಬಗ್ಗೆ ನಾಳೆ ಗುಪ್ತ ಸಭೆ ನಡೆಸಲು ಭಿನ್ನರು ಚಿಂತನೆ ನಡೆಸಿದ್ದಾರೆ.

    ಅರುಣ್ ಸಿಂಗ್ ಈಗಾಗಲೇ ಯಡಿಯೂರಪ್ಪ ಮುಂದಿನ ಎರಡೂ ವರ್ಷ ಸಿಎಂ ಅಂತ ಹೇಳಿದ್ದಾರೆ. ಹೀಗಿದ್ದ ಮೇಲೆ ನಮ್ಮ ಬೇಡಿಕೆ, ನಮ್ಮ ಅಭಿಪ್ರಾಯಕ್ಕೆ ಬೆಲೆ ಕೊಡ್ತಾರಾ ಅಥವಾ ಅರುಣ್ ಸಿಂಗ್ ಬಿಎಸ್‍ವೈ ಪರ ಹೇಳಿಕೆ ಕೊಟ್ಮೇಲೆ ನಮ್ಮ ಅಭಿಪ್ರಾಯಕ್ಕೆ ಅರ್ಥ ಇರುತ್ತಾ ಎಂಬೆಲ್ಲ ಪ್ರಶ್ನೆ ಮೂಡಿದ್ದು, ಭಿನ್ನರ ಬಣದಲ್ಲಿ ಅರುಣ್ ಸಿಂಗ್ ಹೇಳಿಕೆ ಬಗ್ಗೆಯೂ ಬಿಸಿ ಬಿಸಿ ಚರ್ಚೆ ಆರಂಭವಾಗಿದೆ.

  • ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ, ಜಮೀರ್ ಪಾಕಿಸ್ತಾನದ ಪರ ಇರುವ ಕಾಂಗ್ರೆಸ್ಸಿಗರು: ಈಶ್ವರಪ್ಪ

    ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ, ಜಮೀರ್ ಪಾಕಿಸ್ತಾನದ ಪರ ಇರುವ ಕಾಂಗ್ರೆಸ್ಸಿಗರು: ಈಶ್ವರಪ್ಪ

    -ಅರುಣ್ ಸಿಂಗ್ ಭೇಟಿಯ ನಂತರ ಬಿಜೆಪಿ ಅಸಮಾಧಾನ ಸರಿ ಹೋಗಲಿದೆ

    ಶಿವಮೊಗ್ಗ: ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ ಹಾಗೂ ಜಮೀರ್ ಅಹಮದ್‍ರವರುಗಳು ಪಾಕಿಸ್ತಾನದ ಪರ ಇರುವ ಕಾಂಗ್ರೆಸ್ಸಿಗರು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370ನ್ನು ರದ್ದು ಮಾಡುತ್ತೇವೆ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ ಇದು ದಿಗ್ವಿಜಯ್ ಸಿಂಗ್ ಅವರ ರಾಷ್ಟ್ರದ್ರೋಹದ ಹೇಳಿಕೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವುಗಳನ್ನು ಪೂಜೆ ಮಾಡುತ್ತೇವೆ. ಅದೇ ರೀತಿ ಗೋವುಗಳನ್ನು ಹತ್ಯೆಯನ್ನು ಮಾಡುತ್ತೇವೆ ಎಂದು ಹೇಳುತ್ತಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆ ಪರ ಇದ್ದೇವೆ ಎಂದು ಜಮೀರ್ ಅಹಮದ್ ಹೇಳುತ್ತಾರೆ. ಹಾಗಾಗಿ, ಈ ಮೂರು ಜನ ಪಾಕಿಸ್ತಾನದ ಪರ ಇರುವವರು ಎಂದು ಸಚಿವ ಈಶ್ವರಪ್ಪನವರು ಕಿಡಿಕಾರಿದ್ದಾರೆ.

    ಕಾಂಗ್ರೆಸ್ ಹೇಳೋರು ಕೇಳೋರು ಇಲ್ಲದ ಪಕ್ಷ. ಈ ದೇಶದ ಗೋವಿನ ಬಗ್ಗೆ, ದೇಶದ ಭೂಮಿ ಕಾಶ್ಮೀರದ ಬಗ್ಗೆ ಗೌರವವಿಲ್ಲದ ಜನ ಕಾಂಗ್ರೆಸ್‍ನವರು. ಹೀಗಾಗಿಯೇ ಅವರು ಏನು ಬೇಕಾದರೂ ಹೇಳುತ್ತಾರೆ. ಆದರೆ ಬಿಜೆಪಿಯವರಿಗೆ ಹೇಳೋರು ಕೇಳೋರು ಇದ್ದಾರೆ ಎಂದರು.

    ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇದೇ ಜೂ. 16, 17,18ಕ್ಕೆ ರಾಜ್ಯಕ್ಕೆ ಆಗಮಿಸುವ ಅರುಣ್ ಸಿಂಗ್ ಸಚಿವರು ಜೊತೆ ಹಾಗೂ ಕೋರ್ ಕಮಿಟಿ ಸಮಿತಿ ಸದಸ್ಯರ ಜೊತೆ ಸಭೆ ಮಾಡಲಿದ್ದಾರೆ. ಶಾಸಕರಿಗೂ ತಮ್ಮ ಅಭಿಪ್ರಾಯ ತಿಳಿಸಲು ಅವಕಾಶ ಇದೆ. ಇದು ಬಿಜೆಪಿ ಪಕ್ಷದ ವಿಶೇಷ. ಬಿಜೆಪಿಯಲ್ಲಿ ಹೇಳೋರು ಕೇಳೋರು ಇದ್ದಾರೆ ಎನ್ನುವುದಕ್ಕೆ ಅರುಣ್ ಸಿಂಗ್ ಬರುತ್ತಿರುವುದೇ ಸಾಕ್ಷಿ ಎಂದರು. ಜೊತೆಗೆ ಪಕ್ಷದಲ್ಲಿ ಕೆಲ ಗೊಂದಲಗಳಿವೆ ಆದರೆ ಅರುಣ್ ಸಿಂಗ್ ಬಂದು ಹೋದ ನಂತರ ಎಲ್ಲವೂ ಸರಿಯಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆಯಲ್ಲಿ ಜೂ.21 ರವರೆಗೆ ಲಾಕ್‍ಡೌನ್ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ