ಇಟಾನಗರ: ಅರುಣಾಚಲ ಪ್ರದೇಶದ (Arunachal Pradesh) ಶಿ-ಯೋಮಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ (Fire) ಸಂಭವಿಸಿದೆ. ಅವಘಡದಲ್ಲಿ 3 ನೇ ತರಗತಿಯ ವಿದ್ಯಾರ್ಥಿ ಸಜೀವ ದಹನವಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಶಾಲೆಗೆ ಹತ್ತಿರದಲ್ಲಿ ಯಾವುದೇ ಆಸ್ಪತ್ರೆಗಳು ಇಲ್ಲದ ಕಾರಣ ಗಾಯಾಳುಗಳನ್ನು ಸುಮಾರು 85 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಪಶ್ಚಿಮ ಸಿಯಾಂಗ್ ಜಿಲ್ಲೆಯ ಆಲೊದಲ್ಲಿರುವ ವಲಯ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಪತ್ನಿಗೆ ಬೆಂಕಿ ಹಚ್ಚಿ ಕೊಂದವನ ಕಾಲಿಗೆ ಗುಂಡೇಟು – ನನಗ್ಯಾವ ಪಶ್ಚಾತ್ತಾಪ ಇಲ್ಲ ಎಂದ ಪಾಪಿ!
ಶಾಲೆಯು ಮೋನಿಗಾಂಗ್ ಪಟ್ಟಣದಿಂದ 17 ಕಿ.ಮೀ ದೂರದಲ್ಲಿರುವ ದೂರದ ಹಳ್ಳಿಯಲ್ಲಿದೆ. ಗ್ರಾಮದಲ್ಲಿ ವಿದ್ಯುತ್ ಸಂಪರ್ಕವಿಲ್ಲ. ಇನ್ನೂ ಅವಘಡಕ್ಕೆ ಕಾರಣವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಸಾಂಗ್ ಗ್ರಾಮದ ಮಾಜಿ ಹಂಗಾಮಿ ಅಧ್ಯಕ್ಷ ದಿವಂಗತ ವಾಂಗ್ಮೇಯ್ ರಾಜ್ಕುಮಾರ್ ಅವರ ಪುತ್ರ ಕಪ್ಚೆನ್ ರಾಜ್ಕುಮಾರ್ 1985-1990ರ ಅವಧಿಯಲ್ಲಿ ಹಿಂದಿನ ಖೋನ್ಸಾ ಉತ್ತರ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಆರಂಭಿಕ ಶಿಕ್ಷಣವನ್ನು ದೇವಮಾಲಿಯ ನರೋತ್ತಮ್ನಗರದ ರಾಮಕೃಷ್ಣ ಮಿಷನ್ ಶಾಲೆಯಲ್ಲಿ ಮತ್ತು ನಂತರ ಖೋನ್ಸಾದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪೂರ್ಣಗೊಳಿಸಿದರು. ನವದೆಹಲಿಯ ಸಫ್ದರ್ಜಂಗ್ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಪೈಲಟ್ ತರಬೇತಿ ಕೋರ್ಸ್ ಅನ್ನು ಸಹ ಪಡೆದರು. ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..
ಕುಟುಂಬದ ಮೂಲಗಳ ಪ್ರಕಾರ, ಅವರ ಅಂತ್ಯಕ್ರಿಯೆಯನ್ನು ನಾಳೆ ಬೆಳಗ್ಗೆ ಅವರ ಹುಟ್ಟೂರು ನಾಮ್ಸಾಂಗ್ನಲ್ಲಿ ನಡೆಸಲಾಗುವುದು.
ಇಟಾನಗರ: ಭಾರೀ ಮಳೆಯ (Rain) ಪರಿಣಾಮ ಅರುಣಾಚಲ ಪ್ರದೇಶದ (Arunachal Pradesh) ಪೂರ್ವ ಕಮೆಂಗ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ – 13ರಲ್ಲಿ ಭೂಕುಸಿತ (Landslide) ಸಂಭವಿಸಿದೆ. ಪರಿಣಾಮ ವಾಹನವೊಂದು ಕೊಚ್ಚಿಹೋಗಿದ್ದು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ.
ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದೆ. ಈ ವೇಳೆ, ಮಾರುತಿ ಕಾರು ಸೆಪ್ಪಾ ಕಡೆಗೆ ಚಲಿಸುತ್ತಿತ್ತು. ಇದೇ ವೇಳೆ ಭೂಕುಸಿತ ಸಂಭವಿಸಿದೆ. ಪರಿಣಾಮ ವಾಹನ ಕೊಚ್ಚಿಹೋಗಿದೆ. ವಾಹನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ರಕ್ಷಣಾ ಸಿಬ್ಬಂದಿ ಮೃತರ ಶವವನ್ನು ಹೊರಗೆ ತೆಗೆದಿದ್ದಾರೆ.
ಅರುಣಾಚಲ ಪ್ರದೇಶದ ಗೃಹ ಸಚಿವೆ ಮತ್ತು ಸ್ಥಳೀಯ ಶಾಸಕಿ ಮಾಮಾ ನಟುಂಗ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದು, ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಏಳು ಅಮಾಯಕರು ಸಾವಿಗೀಡಾಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.
ಮಳೆ ಮತ್ತು ಭೂಕುಸಿತದಿಂದಾಗಿ, ಅರುಣಾಚಲ ಪ್ರದೇಶದಾದ್ಯಂತ ಅನೇಕ ಜಿಲ್ಲೆಗಳಲ್ಲಿ ರಸ್ತೆ ಸಂಚಾರ ಕಷ್ಟವಾಗಿದೆ. ಇದರಿಂದ ಜನ ಪರದಾಡುವಂತಾಗಿದೆ.
ದಿಸ್ಪುರ್: ಅಪರೂಪದ ಟೋಕೆ ಗೆಕ್ಕೊ ಹಲ್ಲಿಗಳನ್ನು (Tokay Gecko Lizards) ಕಳ್ಳಸಾಗಾಣಿಕೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅಸ್ಸಾಂನ (Assam) ದಿಬ್ರುಗಢದಲ್ಲಿ ಪೊಲೀಸರು ಬಂಧಿಸಿದ್ದಾರೆ.
₹60 lakhs + for a lizard? Not on our watch.
Acting on intel from @WJCommission South Asia, @STFAssam & @dibrugarhpolice rescued 11 Tokay Geckos from traffickers, 3 persons have been arrested & vehicles seized.
ಬಂಧಿತರನ್ನು ದೇಬಾಶಿಸ್ ದೋಹುಟಿಯಾ (34), ಮನಾಶ್ ದೋಹುಟಿಯಾ (28) ಮತ್ತು ದೀಪಂಕರ್ ಘರ್ಫಾಲಿಯಾ (40) ಎಂದು ಗುರುತಿಸಲಾಗಿದೆ. ಆರೋಪಿಗಳು ವಿಚಾರಣೆಯ ವೇಳೆ, ಅರುಣಾಚಲ ಪ್ರದೇಶದಿಂದ (Arunachal Pradesh) 11 ಟೋಕೆ ಗೆಕ್ಕೊಗಳನ್ನು ತಂದಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೇ ಪ್ರತಿಯೊಂದನ್ನು 60 ಲಕ್ಷ ರೂ.ಗೆ ಮಾರಾಟ ಮಾಡಲು ಯೋಜಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸಮರ ಸಾರಿದ ಸೇನೆ – ಜೈಶ್ ಕಮಾಂಡೋ ಸೇರಿ ಮೂವರು ಭಯೋತ್ಪಾದಕರ ಹತ್ಯೆ
ದಿಬ್ರುಗಢದಲ್ಲಿ ಟೋಕೆ ಗೆಕ್ಕೊ ಹಲ್ಲಿಗಳ ಕಳ್ಳಸಾಗಣೆ ಬಗ್ಗೆ ಸುಳಿವಿನ ಮೇರೆಗೆ ಪೊಲೀಸರ ತಂಡವನ್ನು ರಚಿಸಲಾಗಿತ್ತು. ಈ ತನಿಖಾ ತಂಡವು ತಂಡವು ದಿಬ್ರುಗಢ ಜಿಲ್ಲಾ ಪೊಲೀಸರು, ವನ್ಯಜೀವಿ ನ್ಯಾಯ ಆಯೋಗ ಮತ್ತು ಗುಪ್ತಚರ ದಳದ ಸಹಾಯದೊಂದಿಗೆ ಕಳ್ಳಸಾಗಾಣಿಕೆದಾರರನ್ನು ಗುರುತಿಸಿತ್ತು.
ಆರೋಪಿಗಳಲ್ಲಿ ಇಬ್ಬರು ಕಾರಿನಲ್ಲಿ ಹಾಗೂ ಮತ್ತೋರ್ವ ಬೈಕ್ನಲ್ಲಿ ಬಂದು, ದಿಬ್ರುಗಢದ ಡಾಬಾದೊಳಗೆ ತೆರಳಿದ್ದರು. ಸ್ವಲ್ಪ ಸಮಯದ ನಂತರ, ಒಬ್ಬ ಕಾರಿನಿಂದ ಬ್ಯಾಗ್ ತೆಗೆದುಕೊಂಡು ಡಾಬಾದೊಳಗೆ ತೆರಳಿದ್ದ. ಈ ವೇಳೆ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಟೋಕೆ ಗೆಕ್ಕೊಗಳು ಅಳಿವಿನಂಚಿನಲ್ಲಿರುವ ಪ್ರಾಣಿಗಳಾಗಿವೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಅವುಗಳ ರಫ್ತನ್ನು ನಿಷೇಧಿಸಲಾಗಿದೆ. ಕಳ್ಳಸಾಗಾಣಿಕೆಯಲ್ಲಿ ಭಾಗಿಯಾದ ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾದರೆ, ಅವರಿಗೆ ಗರಿಷ್ಠ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಇದನ್ನೂ ಓದಿ: ವಾಟ್ಸಪ್ ಫೋಟೋ ಡೌನ್ಲೋಡ್ ಮಾಡೋ ಮುನ್ನ ಎಚ್ಚರವಾಗಿರಿ – ನಿಮ್ಮ ಫೋನ್ ಹ್ಯಾಕ್ ಆಗಬಹುದು!
ಮಂಡ್ಯ/ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ (Malavalli) ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ (HD Kumaraswamy ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿ ತಾಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಇದರಿಂದ ನನಗೆ ಬಹಳ ನೋವುಂಟಾಗಿದೆ. ಮೃತ ವಿದ್ಯಾರ್ಥಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮತ್ತೆ ಇಂಥ ಘಟನೆಗಳು ಮರುಕಳಿಸದಿರಲಿ.
ಘಟನೆ ಬಗ್ಗೆ ಸಂಬಂಧಿತ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 16, 2025
ಅಲ್ಲದೇ ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸೂಚನೆ ನೀಡಿರುವ ಸಚಿವರು, ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ಸಂತಾಪ ಸೂಚಿಸಿದ್ದಾರೆ.
ಘಟನೆ ಬಗ್ಗೆ ನನಗೆ ಮಾಹಿತಿ ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಈ ವಸತಿ ಶಾಲೆಯಲ್ಲಿ ಬಹುತೇಕ ಹೊರರಾಜ್ಯಗಳ ಮಕ್ಕಳೇ ಇದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆಗೆ ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಸೂಸೈಡ್ – ಪುತ್ರಿ ಸಾವಿನ ಬಳಿಕ ತಾಯಿ ನೇಣಿಗೆ ಶರಣು
ಮಂಡ್ಯ: ಫುಡ್ ಪಾಯಿಸನ್ಗೆ ಓರ್ವ ವಿದ್ಯಾರ್ಥಿ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಖಾಸಗಿ ವಿದ್ಯಾಸಂಸ್ಥೆಯಲ್ಲಿ ನಡೆದಿದೆ.
ಊಟ ಸೇವಿಸಿದ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಶನಿವಾರ ಏರುಪೇರಾಗಿತ್ತು. ಆದರೂ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸದೇ ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿತ್ತು. ಶನಿವಾರ ರಾತ್ರಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು (ಭಾನುವಾರ) ಬೆಳಗ್ಗೆ ಬಾಲಕ ಮೃತಪಟ್ಟಿದ್ದು, ಅಸ್ವಸ್ಥಗೊಂಡ ಮಕ್ಕಳನ್ನ ಆಡಳಿತ ಮಂಡಳಿ ಆಸ್ಪತ್ರೆಗೆ ದಾಖಲಿಸಿತ್ತು.
ಅಸ್ವಸ್ಥ 27 ವಿದ್ಯಾರ್ಥಿಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದ್ದು, ಐವರನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಅಭಿಮಾನಿಗಳೊಂದಿಗೆ ‘ಅಪ್ಪು’ ಸಿನಿಮಾ ವೀಕ್ಷಿಸಲಿದ್ದಾರೆ ರಮ್ಯಾ
ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಡಿಎಚ್ಓ ಮೋಹನ್ ಭೇಟಿ ನೀಡಿ, ಮಕ್ಕಳ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರ್ವಾಡಿಗಳು ಹೋಳಿ ಹಬ್ಬ ಪ್ರಯುಕ್ತ ಶುಕ್ರವಾರ ರಾತ್ರಿ ಊಟ ಮಾಡಿಸಿದ್ದರು. ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೂ ಅದೇ ಊಟ ವಿತರಿಸಲಾಗಿದೆ. ಶನಿವಾರ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಶುರುವಾಗಿದೆ. ವೈದ್ಯರು ಚಿಕಿತ್ಸೆ ನೀಡಿ ಬಂದಿದ್ದರು. ಚೆನ್ನಾಗಿ ಓಡಾಡಿಕೊಂಡಿದ್ದ ವಿದ್ಯಾರ್ಥಿಯೊಬ್ಬ ಸಡನ್ ಆಗಿ ಡೆತ್ ಆಗಿದ್ದಾನೆ. ಪೋಸ್ಟ್ ಮಾರ್ಟಮ್ನಲ್ಲಿ ಸಾವಿಗೆ ಕಾರಣ ನಿಖರವಾಗಿ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಬಸ್ ಉರುಳಿಸಿ 9 ಮಂದಿ ತೀರ್ಥಯಾತ್ರಿಗಳನ್ನು ಹತೈಗೈದ ಉಗ್ರ ಪಾಕ್ನಲ್ಲಿ ಮಟಾಷ್
ಅಸ್ವಸ್ಥಗೊಂಡ ವಿದ್ಯಾರ್ಥಿಗಳಲ್ಲಿ 27 ಮಂದಿ ಹೊರರಾಜ್ಯದವರಾಗಿದ್ದಾರೆ. ಇಬ್ಬರು ಸ್ಥಳೀಯ ವಿದ್ಯಾರ್ಥಿಗಳಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಹಬ್ಬದ ಊಟ ಮಾಡಿಸಿ, ಸೇವಿಸಿದ್ದ ಮಾರ್ವಾಡಿಗಳಿಗೂ ವಾಂತಿ, ಭೇದಿ ಆಗಿದೆ. ಅವರು ಚಿಕಿತ್ಸೆ ಪಡೆದಿದ್ದಾರೆ. ಪ್ರಕರಣ ಸಂಬAಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮಧ್ಯ ಅಮೆರಿಕದಲ್ಲಿ ಭೀಕರ ಚಂಡಮಾರುತಕ್ಕೆ 33 ಮಂದಿ ಬಲಿ
ಅನುಮತಿ ಪಡೆಯದೇ ಆಕ್ರಮವಾಗಿ ವಿದ್ಯಾರ್ಥಿಗಳನ್ನ ವಿದ್ಯಾಸಂಸ್ಥೆಯು ಇಟ್ಟುಕೊಂಡಿದೆ ಎಂಬ ಆರೋಪವು ಕೇಳಿಬಂದಿದೆ. ಮೇಘಾಲಯ ರಾಜ್ಯದ ಬುಡಕಟ್ಟು ಮಕ್ಕಳನ್ನು ಇಟ್ಟುಕೊಳ್ಳಲು ಜಿಲ್ಲಾಡಳಿತದಿಂದ ಯಾವುದೇ ಅನುಮತಿ ಪಡೆದಿಲ್ಲ. ಆದರೂ ವಿದ್ಯಾರ್ಥಿಗಳ ಪೋಷಕರಿಂದ ಸಹಿ ಪಡೆದು ವಿದ್ಯಾರ್ಥಿಗಳನ್ನ ವಿದ್ಯಾಸಂಸ್ಥೆ ಇಟ್ಟುಕೊಂಡಿದೆ. ಈ ಬಗ್ಗೆ ಮಾಹಿತಿ ಇದ್ದರೂ ಕಣ್ಣುಮುಚ್ಚಿ ಕುಳಿತಿರುವ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆಡಳಿತ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಸಮಂತಾ ನಿರ್ಮಾಣದ ಚೊಚ್ಚಲ ಸಿನಿಮಾ ರಿಲೀಸ್ಗೆ ರೆಡಿ
ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
– ಪೋಕ್ಸೋ ಕಾಯ್ದೆ ಅಡಿ ಮರಣದಂಡನೆ ಸಿಕ್ಕಿರುವ ಮೊದಲ ಪ್ರಕರಣ ಎಂದ ಲಾಯರ್
ಗುವಾಹಟಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ (Arunachal school hostel) 2014ರಿಂದ 2022ರ ವರೆಗೆ 21 ಮಕ್ಕಳ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ್ದ ಹಾಸ್ಟೆಲ್ ವಾರ್ಡನ್ (Hostel Warden) ಯುಮ್ಕೆನ್ ಬಾಗ್ರಾಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.
ಅಲ್ಲದೇ ಮಕ್ಕಳು ದೂರು ನೀಡಿದರೂ ಅಪರಾಧವನ್ನು ವರದಿ ಮಾಡುವಲ್ಲಿ ವಿಫಲರಾದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ ಪೋಕ್ಸೊ ಕಾಯ್ದೆ ಅಡಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶರಾದ ಜಾವೆಪ್ಲು ಚೈ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಮತ್ತು POCSO ಕಾಯ್ದೆ ಅಡಿಯಲ್ಲಿ ಮೂವರನ್ನು ದೋಷಿಗಳೆಂದು ಘೋಷಿಸಿದ್ದಾರೆ. ವಿದ್ಯಾರ್ಥಿಗಳು ದೂರು ನೀಡಿದರೂ ಸಹ ಶಾಲೆಯ ಖ್ಯಾತಿಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಮೌನವಾಗಿರುವಂತೆ ಕೇಳಿಕೊಂಡಿದ್ದರು ಎಂಬ ಕಾರಣಕ್ಕೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.
ಈ ಕುರಿತು ಮಾತನಾಡಿರುವ 21 ಮಕ್ಕಳ ಪರ ವಕೀಲ ಓಯಾಮ್ ಬಿಂಗೆಪ್, ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದು ಸಂತೋಷವಾಗಿದೆ. ಇದು ದೇಶದಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ನೀಡಲಾದ ಮೊದಲ ಮರಣದಂಡನೆ ಪ್ರಕರಣವಾಗಿದೆ. ಇದರಲ್ಲಿ ಸಂತ್ರಸ್ತರು ಸತ್ತಿಲ್ಲ, ದೌರ್ಜನ್ಯ ಎಸಗಿದವರು ಸಾಯುತ್ತಾರೆ ಎಂದು ಸಹ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಭಯಾನಕ ಹತ್ಯೆ ಕೇಸ್ | ಮಹಾಲಕ್ಷ್ಮಿ ಮಗನನ್ನು ಟ್ರ್ಯಾಪ್ ಮಾಡಿದ್ದಳು: ಆರೋಪಿಯ ತಾಯಿ
ಕೇಸ್ ಬೆಳಕಿಗೆ ಬಂದಿದ್ದು ಯಾವಾಗ?
2022ರ ನವೆಂಬರ್ನಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ವಸತಿ ಶಾಲೆಯಲ್ಲಿ 12 ವರ್ಷದ ಅವಳಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕಾಗಿ ಆರೋಪಿ ಬಾಗ್ರಾ ವಿರುದ್ಧ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು. ಬಳಿಕ ವಿಶೇಷ ತನಿಖಾ ತಂಡ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತು. ಬಳಿಕ ಬ್ರಾಗ್ರಾ ಹಾಸ್ಟೆಲ್ ವಾರ್ಡನ್ ಆಗಿದ್ದ 2014-2022ರ ಅವಧಿಯಲ್ಲಿ 6 ರಿಂದ 14 ವರ್ಷ ವಯಸ್ಸಿನ 6 ಹುಡುಗರು ಸೇರಿದಂತೆ, 21 ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದನ್ನು ಪತ್ತೆ ಮಾಡಿತು.
ಕಳೆದ ಜುಲೈನಲ್ಲಿ ಈ ಸಂಬಂಧ ಚಾರ್ಜ್ಶೀಟ್ ಸಹ ಸಲ್ಲಿಸಲಾಗಿತ್ತು. ಈ ಮಾಹಿತಿ ಅನುಸಾರ, ವಾರ್ಡನ್ ಮಾದಕ ದ್ರವ್ಯ ಸೇವಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ. ಹಲ್ಲೆ ನಡೆಸಿರುವ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ. ಇದರಿಂದ 6 ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದನ್ನು ಎಸ್ಐಟಿ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ
ನಂತರ ಆರೋಪಿ ಬಾಗ್ರಾ ವಿರುದ್ಧ ಐಪಿಸಿಯ ಸೆಕ್ಷನ್ 328, 292 ಮತ್ತು 506 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 6, 10 ಮತ್ತು 12ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು. ಅಲ್ಲದೇ ಘಟನೆಯನ್ನು ವರದಿ ಮಾಡುವಲ್ಲಿ ವಿಫಲರಾದ ಮಹಿಳಾ ಶಿಕ್ಷಕಿ ನ್ಗೊಮ್ದಿರ್ಗೆ ಐಪಿಸಿ ಸೆಕ್ಷನ್ 506, ಪೋಕ್ಸೊ ಕಾಯ್ದೆಯ ಸೆಕ್ಷನ್ 17 ಮತ್ತು 21 (1)ರ ಅಡಿ ಶಿಕ್ಷೆ ವಿಧಿಸಲಾಗಿದೆ. ಇನ್ನೂ ಹಲ್ಲೆ ನಡೆಸಿದ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕನಾಗಿದ್ದ ಯೋರ್ಪೆನ್ಗೆ ಐಪಿಸಿ ಸೆಕ್ಷನ್ 17, 21 (2), ಶಿಕ್ಷೆ ವಿಧಿಸಲಾಗಿದೆ.
ಇಟಾನಗರ: ಟ್ರಕ್ (Truck) ಸ್ಕಿಡ್ ಆಗಿ ಪ್ರಪಾತಕ್ಕೆ ಬಿದ್ದ ಪರಿಣಾಮ ಮೂವರು ಭಾರತೀಯ ಯೋಧರು (Indian Soldiers) ಹುತಾತ್ಮರಾಗಿದ್ದು, ಅನೇಕರು ಗಾಯಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.
ಸೈನಿಕರನ್ನು ಸಾಗಿಸುತ್ತಿದ್ದ ಟ್ರಕ್ ಲೆಪರಾಡ ಜಿಲ್ಲೆಯ ಬಸರಾಗೆ ತೆರಳುತ್ತಿದ್ದ ವೇಳೆ ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿದೆ. ಇದರಿಂದ ಮೂವರು ಯೋಧರು ಹುತಾತ್ಮರಾಗಿದ್ದು ಅನೇಕರಿಗೆ ಗಾಯಗಳಾಗಿವೆ. ಅರುಣಾಚಲ ಪ್ರದೇಶದ (Arunachal Pradesh) ಅಪ್ಪರ್ ಸುಭನ್ಸಿರಿ ಎಂಬಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇದನ್ನೂ ಓದಿ: 2028ರ ವೇಳೆಗೆ 80 ಕೋಟಿ ಪ್ರವಾಸಿಗರನ್ನು ಆಕರ್ಷಿಸುವ ಗುರಿ – ಉತ್ತರ ಪ್ರದೇಶದಲ್ಲಿ ತಯಾರಿ ಹೇಗಿದೆ?
Lt Gen RC Tiwari, #ArmyCdrEC & All Ranks express deepest condolences on the sad demise of Bravehearts Hav Nakhat Singh, Nk Mukesh Kumar and Gdr Ashish who made the supreme sacrifice in the line of duty in… pic.twitter.com/LcRAdHKK5h
ಘಟನೆಯ ಕುರಿತು ಸೇನೆಯ ಪೂರ್ವ ಕಮಾಂಡ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಈಸ್ಟೆನ್ ಕಮಾಂಡ್ ಆರ್ಮಿ ಕೇಡರ್ ಮತ್ತು ಎಲ್ಲಾ ಶ್ರೇಣಿಯ ಲೆಫ್ಟಿನೆಂಟಲ್ ಜನರಲ್ ಆರ್ ಸಿ ತಿವಾರಿ, ಬ್ರೇವ್ಹಾರ್ಟ್ಸ ಹವ್ ನಖತ್ ಸಿಂಗ್, ಎನ್ಕೆ ಮುಖೇಶ್ ಕುಮಾರ್, ಮತ್ತು ಜಿಡಿಆರ್ ಆಶಿಶ್ರವರ ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊಯ್ನಾ ಜಲಾಶಯ ಸಂಪೂರ್ಣ ಭರ್ತಿ – ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ
ಅರುಣಾಚಲ ಪ್ರದೇಶದ ಸಿಎಂ ಪ್ರೇಮ ಖಂಡು (CM Prema Khundu) ಕೂಡ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ವ್ಯಕ್ತಪಡಿಸಿದ್ದು, ಹುತಾತ್ಮ ಯೋಧರನ್ನು ಗೌರವಪೂರ್ವಕವಾಗಿ ಸ್ಮರಿಸಲಾಗುವುದು, ಈ ದುಖಃವನ್ನು ಭರಿಸುವ ಶಕ್ತಿ ಹುತಾತ್ಮ ಯೋಧರ ಕುಟುಂಬಸ್ಥರಿಗೆ ಸಿಗಲಿ ಎಂದು ನಾನು ಬುದ್ಧನಲ್ಲಿ ಪ್ರಾರ್ಥನೆ ಮಾಡುತ್ತೆನೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ದರ್ಶನ್ ವಿಶೇಷ ಆತಿಥ್ಯಕ್ಕೆ ಪ್ರಭಾವಿ ಸಚಿವರ ಆದೇಶ?
ಇಟಾನಗರ: ಬಿಜೆಪಿ ನಾಯಕ ಪೆಮಾ ಖಂಡು (Pema Khandu) ಅವರು ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಿ ಸತತ ಮೂರನೇ ಅವಧಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಟಾನಗರದಲ್ಲಿರುವ ಡಿಕೆ ರಾಜ್ಯ ಸಮಾವೇಶ ಕೇಂದ್ರದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ, ಕಿರಣ್ ರಿಜಿಜು ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು. ಇದನ್ನೂ ಓದಿ: ಒಡಿಶಾದ ಮೊದಲ ಬಿಜೆಪಿ ಸಿಎಂ ಆಗಿ ಮೋಹನ್ ಚರಣ್ ಪ್ರಮಾಣವಚನ ಸ್ವೀಕಾರ
ಖಂಡು ಅವರು ಬುಧವಾರ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 44 ವಯಸ್ಸಿನ ಖಂಡು 2016 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಗೆ ಲೋಕಸಭೆ ಚುನಾವಣೆಯ ಜೊತೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಹತ್ತು ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿತ್ತು.
ಇಟಾನಗರ: ಪೆಮಾ ಖಂಡು (Pema Khandu) ಅವರು ಸತತ ಮೂರನೇ ಅವಧಿಗೆ ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಲಿದ್ದಾರೆ. ಬುಧವಾರ ನಡೆದ ಸಭೆಯಲ್ಲಿ ಖಂಡು ಅವರನ್ನು ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಅರುಣಾಚಲ ಪ್ರದೇಶದ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ಬಿಜೆಪಿಯ ಹಿರಿಯ ನಾಯಕರಾದ ರವಿಶಂಕರ್ ಪ್ರಸಾದ್ ಮತ್ತು ತರುಣ್ ಚುಗ್ ಅವರನ್ನು ವೀಕ್ಷಕರನ್ನಾಗಿ ಕಳುಹಿಸಲಾಗಿತ್ತು. ಖಂಡು ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಗುರುವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣವಚನ ಸ್ವೀಕಾರ
ಅರುಣಾಚಲ ಪ್ರದೇಶದಲ್ಲಿ ಪೆಮಾ ಖಂಡು ನೇತೃತ್ವದ ಬಿಜೆಪಿ 60 ಸದಸ್ಯ ಬಲದ ವಿಧಾನಸಭೆಯಲ್ಲಿ 46 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿತ್ತು. ರಾಜ್ಯದಲ್ಲಿ ಈಚೆಗೆ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ 5, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ 3, ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ 2, ಕಾಂಗ್ರೆಸ್ 1 ಮತ್ತು ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಗೆ ಎನ್ಪಿಪಿ ಬೆಂಬಲವನ್ನು ನೀಡಿದೆ. ಆದರೆ ಹೊಸ ಕ್ಯಾಬಿನೆಟ್ನಲ್ಲಿ ಪಕ್ಷಕ್ಕೆ ಪ್ರಾತಿನಿಧ್ಯ ಸಿಗುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೂನ್ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ