Tag: Arvind Bellad

  • ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಅವಕಾಶ ಕೊಡ್ತಿಲ್ಲ: ಅರವಿಂದ ಬೆಲ್ಲದ್

    ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಅವಕಾಶ ಕೊಡ್ತಿಲ್ಲ: ಅರವಿಂದ ಬೆಲ್ಲದ್

    ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ (Hubballi Eidgah Maidan) ಗಣೇಶ ಪ್ರತಿಷ್ಠಾಪನೆಗೆ ಕಳೆದ ಬಾರಿ ಸುಪ್ರೀಂ ಕೋರ್ಟ್ ನಮಗೆ ಅವಕಾಶ ನೀಡಿದೆ. ಈ ಬಾರಿಯೂ ನಾವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲು ನಿರ್ಧಾರ ಮಾಡಿದ್ದು, ಕಾಂಗ್ರೆಸ್ (Congress) ಸರ್ಕಾರ ವಿನಾಕಾರಣ ಅಲ್ಪ ಸಂಖ್ಯಾತರ ತುಷ್ಟೀಕರಣಕ್ಕಾಗಿ ಪರ್ಮಿಶನ್ ಕೊಡ್ತಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ (Arvind Bellad) ಆರೋಪಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡುತ್ತಿಲ್ಲ. ಜಗತ್ತಿಗೆ ಬೇಡವಾದ ಟಿಪ್ಪು ಜಯಂತಿಯನ್ನು ಅಲ್ಲಿ ಮಾಡಿದ್ದಾರೆ. ನಮಾಜ್ ಕೂಡಾ ಮಾಡಿದ್ದಾರೆ. ನಾವು ಪ್ರತಿಷ್ಠಾಪನೆಗೆ ಮನವಿ ಕೇಳಿದರೆ ಅವಕಾಶ ಕೊಡುತ್ತಿಲ್ಲ. ಅನುಮತಿ ಕೋರಿ ನಾವು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇವೆ. ಅನುಮತಿ ಕೊಡಲಿ ಬಿಡಲಿ. ನಾವು ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಅಷ್ಟೇ ನಾವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ ಎಂದರು.

    ಯಾರೂ ಅನುಮತಿ ಕೊಡಬೇಡಿ ಅಂತಾರೆ ಅವರು ದೇಶ ವಿರೋಧಿ ಸಂಘಟನೆಗಳು. ಒಂದು ತಿಂಗಳ ಹಿಂದೆ ಡಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಸರ್ಕಾರದಿಂದ ಏನೂ ಬಂದಿಲ್ಲ. ಇದು ಪಾಲಿಕೆ ಜಾಗ, ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಬರಲ್ಲ. ಗಣಪತಿ ಪ್ರಿಯರ ಪರವಾಗಿ ನಾನು ಮಾತಾಡ್ತಿದ್ದೇನೆ. ಜನರ ಭಾವನೆ ನಾನು ಸರ್ಕಾರಕ್ಕೆ ಮುಟ್ಟಿಸುತ್ತೇನೆ. ಪಾಲಿಕೆ ಕಮಿಷನರ್ ಸರ್ಕಾರಕ್ಕೆ ಕೇಳೋ ಅವಶ್ಯಕತೆ ಇಲ್ಲ. ಗಣೇಶ ಹಬ್ಬ ಮಾಡಿದರೆ ಅಲ್ಪ ಸಂಖ್ಯಾತರು ಸಿಟ್ಟಾಗುತ್ತಾರೆ ಎಂದು ಕಾಂಗ್ರೆಸ್ ತಿಳಿದುಕೊಂಡಿದೆ. ಹೀಗಾಗಿ ಅನುಮತಿ ತಡ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ರೈಲು ಪ್ರಯಾಣದ ವೇಳೆ 8 ಯುವಕರಿಗೆ ಮತ್ತು ಬರೋ ಚಾಕ್ಲೇಟ್ ನೀಡಿ ದರೋಡೆ

    ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟೀಕರಣ ಬೇಕು. ಕಳೆದ ಒಂದು ತಿಂಗಳಿಂದ ಇದು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಅಧಿಕೃತವಾಗಿ ಪಾಲಿಕೆ ಲಿಖಿತವಾಗಿ ಅನುಮತಿ ಕೊಟ್ಟಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣ ಅಧಿಕಾರಿಗಳು ಅವರ ಕೈಗೊಂಬೆ ಆಗಿದ್ದಾರೆ. ದೇಶ ವಿರೋಧಿ ಸಂಘಟನೆಗಳಿಗೆ ಕಾಂಗ್ರೆಸ್ ಸರ್ಕಾರ ಬಂದರೆ ಕಾಂಗ್ರೆಸ್ ಕೊಂಬು ಚಿಗುರು ಬರುತ್ತದೆ ಎಂದರು.

    ಎಸ್‌ಡಿಪಿಐ, ಎಐಎಂಐಎಂ ಸಂಘಟನೆಗಳು ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಡಿ ಎಂದು ಮನವಿ ಕೊಟ್ಟಿವೆ. ಅವೆರಡು ದೇಶ ವಿರೋಧಿ ಸಂಘಟನೆಗಳು ಎಂದು ಬೆಲ್ಲದ್ ಹೇಳಿದರು. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್ ಆಗಲ್ಲ: ಅರವಿಂದ ಬೆಲ್ಲದ್

    ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್ ಆಗಲ್ಲ: ಅರವಿಂದ ಬೆಲ್ಲದ್

    ಧಾರವಾಡ: ರಾಜಕೀಯದ ನಂತರ ಜಗದೀಶ್ ಶೆಟ್ಟರ್ (Jagadish Shettar) ಕಾರ್ಯಕರ್ತರ ಜೊತೆ ಸೇರಿ ಬಿಜೆಪಿ (BJP) ಪಕ್ಷ ಇನ್ನಷ್ಟು ಬಲಪಡಿಸುವ ಕೆಲಸ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ ಅವರ ರಾಜೀನಾಮೆ (Resignation) ಪಕ್ಷಕ್ಕೆ ಬಹಳ ದುಃಖದ ಸಂಗತಿ. ಹಾಗೆಂದು ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ (Arvind Bellad) ಹೇಳಿದ್ದಾರೆ.

    ಧಾರವಾಡದಲ್ಲಿ (Dharwad) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬಿಜೆಪಿಯ ಹಿರಿಯ ನಾಯಕರಾಗಿದ್ದರು. ವಕೀಲರಾಗಿದ್ದ ಅವರಿಗೆ ಬಿಜೆಪಿ ಪಕ್ಷ ಕರೆದು ಟಿಕೆಟ್ ನೀಡಿ, ಶಾಸಕರನ್ನಾಗಿ ಮಾಡಿತ್ತು. ಜೊತೆಗೆ ಮುಖ್ಯಮಂತ್ರಿಯನ್ನಾಗಿಯೂ ಮಾಡಿತ್ತು. ಆದರೆ ಅವರು ಬಿಜೆಪಿ ತೊರೆದು ಕಾಂಗ್ರೆಸ್ (Congress) ಪಕ್ಷ ಸೇರುತ್ತಿರುವುದರಿಂದ ನಮಗೆ ಬಹಳ ನೋವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಕ್ಕರೆ ನಾಡು ಮೀಸಲು ಕ್ಷೇತ್ರದಲ್ಲಿ ಕೈ, ಕಮಲ, ತೆನೆ ಪೈಪೋಟಿ 

    ನರೇಂದ್ರ ಮೋದಿಯವರ (Narendra Modi) ಸರ್ಕಾರ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಎನ್ನುವ ರೀತಿಯಲ್ಲಿ ಹೊರಟಿದೆ. ಜಗದೀಶ ಶೆಟ್ಟರ್ ಸಾಮಾನ್ಯ ಕಾರ್ಯಕರ್ತನಾಗಿ ಜೀವನ ಆರಂಭ ಮಾಡಿದರು. ಅಂತಹ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದು ಬಿಜೆಪಿ. ಎಲ್ಲಾ ಸ್ಥಾನಮಾನಗಳನ್ನು ಅಲಂಕರಿಸಿ ಈಗ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಇದು ನಮ್ಮೆಲ್ಲಾ ಕಾರ್ಯಕರ್ತರಿಗೆ ಬಹಳ ನೋವು ತಂದಿದೆ ಎಂದರು. ಇದನ್ನೂ ಓದಿ: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆದ್ರೂ ಖಾಲಿ ಸ್ಥಾನ ತುಂಬಲು ಪ್ರಯತ್ನಿಸುತ್ತೇವೆ: ಬೊಮ್ಮಾಯಿ

    ಬಿಜೆಪಿ ಪಕ್ಷ ಇಂದು ದೊಡ್ಡ ಪ್ರಮಾಣದಲ್ಲಿ ಬೆಳೆದಿದೆ. ಹಿರಿಯರೊಬ್ಬರು ಮನೆ ತೊರೆದಿದ್ದಕ್ಕೆ ಬೇಜಾರಾಗಿದೆ. ಕೇಂದ್ರದಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡುತ್ತೇವೆ ಎಂದರೂ ಶೆಟ್ಟರ್ ಕೇಳಲಿಲ್ಲ. ಲಿಂಗಾಯತರನ್ನು ಸಿಎಂ ಮಾಡಿದ್ದೇ ಬಿಜೆಪಿ ಪಕ್ಷ. ಬಿಜೆಪಿ 67 ಸೀಟುಗಳನ್ನು ಲಿಂಗಾಯತರಿಗೆ ಕೊಟ್ಟಿದೆ. ಲಿಂಗಾಯತರಿಗೆ ಮಾನ್ಯತೆ ಕೊಟ್ಟಿದ್ದು ಯಾವ ಪಕ್ಷ ಎಂಬುದು ಜನರಿಗೆ ಗೊತ್ತಿದೆ. ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇ ಆದಲ್ಲಿ ಅವರನ್ನು ಮೂಲೆಗುಂಪು ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರ ಜನರ ಹಣ ಕದ್ದಿದೆ: ರಾಗಾ ಆರೋಪ 

    ನಮ್ಮ ಪಕ್ಷದ ವರಿಷ್ಠರು ಶೆಟ್ಟರ್ ಅವರೊಂದಿಗೆ ಚರ್ಚೆ ಮಾಡಿದ್ದರು. ಈ ಬಾರಿ ಬಿಜೆಪಿ ಸರ್ಕಾರದಲ್ಲಿ ಕಿರಿಯ ವಯಸ್ಸಿನವರು ಮುಖ್ಯಮಂತ್ರಿಯಾಗಲಿದ್ದಾರೆ. ಅವರ ಸಚಿವ ಸಂಪುಟದಲ್ಲಿ ನೀವು ಸಚಿವರಾಗಿರುವುದು ಅಷ್ಟೊಂದು ಸರಿಯಲ್ಲ ಎಂದು ಹೇಳಿದ್ದರು. ಆದರೂ ಶೆಟ್ಟರ್ ಸಮ್ಮತಿ ಸೂಚಿಸಲಿಲ್ಲ ಎಂದರು. ಇದನ್ನೂ ಓದಿ: ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ: ಶೆಟ್ಟರ್ ವಿರುದ್ಧ ಜಾರಕಿಹೊಳಿ ಕಿಡಿ 

    ಈ ಬಾರಿ ಚಿಕ್ಕ ವಯಸ್ಸಿನವರು ಬಿಜೆಪಿಯಲ್ಲಿ ಸಿಎಂ ಆಗಬಹುದು. ಲಿಂಗಾಯತ ಸಮುದಾಯದ ಚಿಕ್ಕ ವಯಸ್ಸಿನವರೇ ಸಿಎಂ ಆಗಲಿದ್ದಾರೆ ಎಂಬ ಕುತೂಹಲಕಾರಿ ಸಂಗತಿಯನ್ನು ಬಿಚ್ಚಿಟ್ಟಿರುವ ಅವರು, ಈ ಬಾರಿ ಬೊಮ್ಮಾಯಿ ಸಿಎಂ ಆಗಿ ಮುಂದುವರೆಯುವುದಿಲ್ಲ. ಬದಲಿಗೆ ಲಿಂಗಾಯತ ಸಮುದಾಯದ ಚಿಕ್ಕ ವಯಸ್ಸಿನವರೇ ಸಿಎಂ ಆಗಲಿದ್ದಾರೆ ಎಂಬ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಸೋಲಿಲ್ಲದ ಸರದಾರ ಡಿಕೆಶಿಗೆ ಸಾಮ್ರಾಟ್ ಸವಾಲ್..!

  • ಎರಡೇ ಕುಟುಂಬಗಳಿಗೆ ಮಣೆಹಾಕುತ್ತಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ

    ಎರಡೇ ಕುಟುಂಬಗಳಿಗೆ ಮಣೆಹಾಕುತ್ತಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ

    ಧಾರವಾಡ: ಜಿಲ್ಲೆಯ 7 ಕ್ಷೇತ್ರಗಳಲ್ಲಿ ಹುಬ್ಬಳ್ಳಿ-ಧಾರವಾಡ (Hubballi-Dharwad) ಪಶ್ಚಿಮ ಕ್ಷೇತ್ರ ಬೆಲ್ಲದ್ ಹಾಗೂ ಮೋರೆ ಕುಟುಂಬಗಳಿಗೇ ಮಣೆಹಾಕುತ್ತಾ ಬಂದಿದೆ. ಈ ಪೈಕಿ ಬೆಲ್ಲದ ಕುಟುಂಬವೇ ಹೆಚ್ಚಿನ ಗೆಲುವು ಸಾಧಿಸಿದೆ.

    ಚಂದ್ರಕಾಂತ ಬೆಲ್ಲದ್ ರಾಜಕೀಯ ನಿವೃತ್ತಿ ಪಡೆದ ಮೇಲೆ ಅವರ ಮಗನೇ ಎರಡು ಬಾರಿ ಶಾಸಕರಾಗಿದ್ದಾರೆ. ಹಾಗಾದ್ರೆ ಬೆಲ್ಲದ್ ಹಾಗೂ ಮೋರೆ ಕುಟುಂಬ ಎಷ್ಟು ಬಾರಿ ಇಲ್ಲಿ ಶಾಸಕರಾಗಿ ಆಡಳಿತ ನಡೆಸಿದ್ದಾರೆ ಅನ್ನೋ ಮಾಹಿತಿ ಇಲ್ಲಿದೆ ನೋಡಿ.

    1983 ರಲ್ಲಿ ಮಾಜಿ ಸಚಿವ ಎಸ್.ಆರ್ ಮೋರೆ (SR More) ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಗೆದ್ದು ಶಾಸಕರಾದರು. ನಂತರ 1985ರ ಚುನಾವಣೆಯಲ್ಲಿ (Elections) ಚಂದ್ರಕಾಂತ ಬೆಲ್ಲದ್ ಮೊದಲ ಬಾರಿಗೆ ಪಕ್ಷೇತರರಾಗಿ ಗೆಲುವು ಸಾಧಿಸಿದರು. ಇದೇ ಕ್ಷೇತ್ರದಲ್ಲಿ 1989ರಲ್ಲಿ ನಡೆದ ಚುನಾವಣೆಯಲ್ಲಿ ಚಂದ್ರಕಾಂತ ಬೆಲ್ಲದ್ ಅವರನ್ನ ಸೋಲಿಸಿದ ಎಸ್.ಆರ್ ಮೋರೆ ಕಾಂಗ್ರೆಸ್ ಪಕ್ಷದಿಂದ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಇದರಿಂದ ಮತ್ತೆ 2ನೇ ಬಾರಿಗೆ ಮೋರೆಗೆ ಮಣಿಸಲು 1994ರಲ್ಲಿ ಚಂದ್ರಕಾಂತ ಬೆಲ್ಲದ್ ಬಿಜೆಪಿ ಸೇರಿ, ಪಕ್ಷದಿಂದ ಗೆದ್ದು ಶಾಸಕರಾದರು.

    ಹೀಗೆ ಪ್ರತಿ ಚುನಾವಣೆಯಲ್ಲಿ ಎಸ್.ಆರ್ ಮೋರೆ ಒಮ್ಮೆ ಗೆದ್ದರೆ, ಚಂದ್ರಕಾಂತ ಬೆಲ್ಲದ್ ಮತ್ತೊಮ್ಮೆ ಗೆದ್ದು ಬರುವ ಮೂಲಕ ಈ ಕ್ಷೇತ್ರ ಎರಡೇ ಕುಟುಂಬದ ಗೆಲುವಿಗೆ ಸೀಮಿತವಾಗಿದೆ. ಚಂದ್ರಕಾಂತ ಬೆಲ್ಲದ್ ಈ ಕ್ಷೇತ್ರದಲ್ಲಿ 4 ಬಾರಿ ಶಾಸಕರಾಗಿದ್ದರೆ, ಎಸ್.ಆರ್ ಮೋರೆ 3 ಬಾರಿ ಶಾಸಕರಾಗಿ ಆಡಳಿತ ನಡೆಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಪಕ್ಷ ನಾನು ಬಿಡ್ಲಿಲ್ಲ, ಅವರೇ ನನ್ನ ಹೊರಗೆ ಹಾಕಿದ್ರು: ಎಟಿ ರಾಮಸ್ವಾಮಿ

    ಇದಾದ ಬಳಿಕ 2013ರ ಚುನಾವಣೆಗೆ ಚಂದ್ರಕಾಂತ ಬೆಲ್ಲದ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ನಂತರವೂ ಅದೇ ಕುಟುಂಬದ ಆಡಳಿತ ಮುಂದುವರಿದಿದೆ. ಏಕೆಂದರೆ 2013 ಚುನಾವಣಾ ರಾಜಕಾರಣದಿಂದ ಚಂದ್ರಕಾಂತ ಬೆಲ್ಲದ್ ಹಿಂದೆ ಸರಿದ ನಂತರ, ತನ್ನ ಮಗನಾದ ಅರವಿಂದ ಬೆಲ್ಲದ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಕೊಡಲಾಯಿತು. ಅರವಿಂದ ಬೆಲ್ಲದ್ ಭರ್ಜರಿ ಗೆಲುವು ಸಾಧಿಸಿದರು. ಚಂದ್ರಕಾಂತ ಬೆಲ್ಲದ್ ಎದುರು ಸೋತಿದ್ದ ಎಸ್.ಆರ್ ಮೋರೆ, 2013 ರಲ್ಲಿ ಮಗ ಅರವಿಂದ ಬೆಲ್ಲದ್ (Arvind Bellad) ವಿರುದ್ಧವೂ ಸೋತರು. ಈ ಬೆಳವಣಿಗೆ ನಂತರ 2018ರಲ್ಲಿ ಕಾಂಗ್ರೆಸ್ ಎಸ್.ಆರ್ ಮೋರೆ ಅವರಿಗೆ ಟಿಕೆಟ್ ನಿರಾಕರಿಸಿತು.

    ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ರಾಜಕೀಯ ಹಿನ್ನೋಟ ನೋಡುತ್ತಾ ಹೋದರೆ, ಈ ಎರಡೇ ಕುಟುಂಬಗಳಿಗೆ ಮಣೆ ಹಾಕುತ್ತಾ ಬಂದಿರುವುದು ಕಾಣುತ್ತದೆ. ಇದನ್ನೂ ಓದಿ: ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ಫಿಕ್ಸಾ?

    2023ರ ವಿಧಾನಸಭಾ ಚುನಾವಣೆಯಲ್ಲೂ ಅರವಿಂದ ಬೆಲ್ಲದ್ ಮತ್ತೆ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಭರ್ಜರಿ ತಯಾರಿ ನಡೆಸಿದ್ದಾರೆ. ಇತ್ತ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿಯಲು ಎಸ್.ಆರ್ ಮೋರೆ ಅವರ ಮಗಳು ಕೀರ್ತಿ ಮೋರೆ ಸಿದ್ಧತೆ ನಡೆಸುತ್ತಿದ್ದು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಇಬ್ಬರಿಗೂ ಟಿಕೆಟ್ ಸಿಕ್ಕಿದ್ದೇ ಆದಲ್ಲಿ ಮತ್ತೊಮ್ಮೆ ಈ ಕ್ಷೇತ್ರ ಬೆಲ್ಲದ್ ವರ್ಸಸ್ ಮೋರೆಯಾಗಲಿದೆ.

  • ಚಂದಮಾಮ ಪುಸ್ತಕದಲ್ಲಿ ‘ದಿನಕ್ಕೊಂದು ಕತೆ’ ಎಂದು ಬರ್ತಿತ್ತು – ಬಿಜೆಪಿ ಸರ್ಕಾರದಿಂದ ‘ದಿನಕ್ಕೊಂದು ಹಗರಣ’ ಬರುತ್ತಿದೆ: ಕಾಂಗ್ರೆಸ್

    ಚಂದಮಾಮ ಪುಸ್ತಕದಲ್ಲಿ ‘ದಿನಕ್ಕೊಂದು ಕತೆ’ ಎಂದು ಬರ್ತಿತ್ತು – ಬಿಜೆಪಿ ಸರ್ಕಾರದಿಂದ ‘ದಿನಕ್ಕೊಂದು ಹಗರಣ’ ಬರುತ್ತಿದೆ: ಕಾಂಗ್ರೆಸ್

    ಬೆಂಗಳೂರು: ಹಿಂದೆ ಚಂದಮಾಮ ಪುಸ್ತಕದಲ್ಲಿ ‘ದಿನಕ್ಕೊಂದು ಕತೆ’ ಎಂದು ಬರ್ತಿತ್ತು. ಈಗ ಬಿಜೆಪಿ (BJP) ಸರ್ಕಾರದಲ್ಲಿ ‘ದಿನಕ್ಕೊಂದು ಹಗರಣ’ ಹೊರಬರುತ್ತಿವೆ. ನಿಗಮಗಳಲ್ಲಿ ಭ್ರಷ್ಟಾಚಾರ ಸುಗಮ’ ಎಂಬಂತಾಗಿದೆ ಎಂದು ಬಿಜೆಪಿ ಸರ್ಕಾರವನ್ನು ಟೀಕಿಸಿ ಕಾಂಗ್ರೆಸ್ (Congress) ಸರಣಿ ಟ್ವೀಟ್ ಮಾಡಿದೆ.

    ಟ್ವೀಟ್‍ನಲ್ಲಿ ಏನಿದೆ?
    ದಲಿತರ ಸ್ವಾವಲಂಬನೆಗೆ ನಾವು ಜಾರಿಗೊಳಿಸಿದ್ದ ಐರಾವತ, ಸಮೃದ್ಧಿ ಯೋಜನೆಗಳಲ್ಲಿ ಅಕ್ರಮ ನಡೆದರೂ ಸರ್ಕಾರ ಕೈಕಟ್ಟಿ ಕುಳಿತಿದ್ದೇಕೆ ಬೊಮ್ಮಾಯಿ (Basavaraj Bommai) ಅವರೇ? ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ. ಶಾಸಕ ಅರವಿಂದ್ ಬೆಲ್ಲದ್ (Arvind Bellad) ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯನ್ನು ಅವಮಾನಿಸಿದ ಕಾರಣ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಹಳೆಯ ಪಿಂಚಣಿ ಯೋಜನೆ ಜಾರಿಗೆ: ರಾಹುಲ್ ಗಾಂಧಿ

    ಸ್ತ್ರೀ ಪೀಡಕರ ಸಾಮ್ರಾಜ್ಯವಾಗಿರುವ ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಗೌರವವಿಲ್ಲವೇಕೆ ಬೊಮ್ಮಾಯಿ ಅವರೇ? ಇದರ ವಿರುದ್ಧ ನಿಮ್ಮ ಕ್ರಮವೇನು? ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನದಿಂದಾಗಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಸಕರ ದುರ್ವರ್ತನೆಯೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂಬುದು ಮಹಿಳೆ ಬರೆದ ಡೆತ್‍ನೋಟ್‍ನಲ್ಲಿ ಸ್ಪಷ್ಟವಾಗಿದೆ, ಬೊಮ್ಮಾಯಿ ಅವರೇ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರಾ ಅಥವಾ ಸಿದ್ದು ಸವದಿ ಪ್ರಕರಣದಂತೆ ಮುಚ್ಚಿ ಹಾಕುವಿರಾ? ಶಾಸಕ ಅರವಿಂದ್ ಲಿಂಬಾವಳಿಯಿಂದ ಮಹಿಳೆಗೆ ನಿಂದನೆ. ಸಚಿವ ವಿ.ಸೋಮಣ್ಣರಿಂದ (V.Somanna) ಮಹಿಳೆಯ ಮೇಲೆ ಹಲ್ಲೆ. ಶಾಸಕ ಅರವಿಂದ್ ಬೆಲ್ಲದ್‍ರಿಂದ ಮಹಿಳೆಗೆ ನಿಂದನೆ. ಇತ್ತೀಚಿನ ಕೆಲವೇ ದಿನಗಳಲ್ಲಿ ನಡೆದ ಈ ಮೂರು ಘಟನೆಗಳು ಬಿಜೆಪಿಯ ಮಹಿಳಾ ವಿರೋಧಿ ಧೋರಣೆಯನ್ನು ಬೆತ್ತಲಾಗಿಸಿವೆ. ಬೊಮ್ಮಾಯಿ ಅವರೇ, ಮಹಿಳೆಯರ ಘನತೆ ನಿಮ್ಮ ಅದ್ಯತೆಯಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೇಕಿಲ್ಲ ಗೌರವ – ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

    Live Tv
    [brid partner=56869869 player=32851 video=960834 autoplay=true]

  • ಶಾಸಕ ಬೆಲ್ಲದ್‌ ಹೆಸರಿನಲ್ಲಿ ಡೆತ್‌ನೋಟ್‌ ಬರೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಶಾಸಕ ಬೆಲ್ಲದ್‌ ಹೆಸರಿನಲ್ಲಿ ಡೆತ್‌ನೋಟ್‌ ಬರೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಧಾರವಾಡ: ಶಾಸಕ ಅರವಿಂದ ಬೆಲ್ಲದ್‌(Arvind Bellad) ಹೆಸರಲ್ಲಿ ಡೆತನೋಟ್(Death Note) ಬರೆದು ಮಹಿಳೆಯೋರ್ವಳು ಆತ್ಮಹತ್ಯೆಗೆ(Suicide) ಯತ್ನಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.

    ಶಕುಂತಲಾ ಮನಸೂರ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆಗಾಗಿ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.

    ಕಳೆದ 20 ವರ್ಷಗಳಿಂದ ಶಕುಂತಲಾ ಕರ್ನಾಟಕ ಮಹರ್ಷಿ ವಾಲ್ಮಿಕಿ ಪಂಗಡದಲ್ಲಿ ಕಿರಿಯ ಸಹಾಯಕಿಯಾಗಿ ಕೆಲಸ ಮಾಡುತಿದ್ದಳು. ಅಧಿಕಾರಿ ರವಿ ಬೆಂತೂರ ನಿರ್ದೇಶಕರಾಗಿ ಬಂದ ಮೇಲೆ ಈಕೆಯ ಮೇಲೆ ಲಂಚ‌(Corruption) ಪಡೆದ ಆರೋಪ ಮಾಡಿ ನಾಲ್ಕು ತಿಂಗಳ‌ ಹಿಂದೆ ಕೆಲಸದಿಂದ ತೆಗೆದಿದ್ದರು. ಇದನ್ನೂ ಓದಿ: ನನ್ನ ಭಾಗವಹಿಸುವಿಕೆ ಬಯಸಿದ್ರೆ ರಾಜಕೀಯಕ್ಕೆ ಬರುವೆ – ಕಂಗನಾ ಬಿಗ್ ಸ್ಟೇಟ್‌ಮೆಂಟ್

    ಶನಿವಾರ ಸಚಿವ ಶ್ರೀರಾಮುಲು ಧಾರವಾಡಕ್ಕೆ ಬಂದಾಗ ಮನವಿ ಕೊಡಲು ಶಕುಂತಲಾ ಬಂದಿದ್ದಳು. ಶ್ರೀರಾಮುಲು ಸಿಗದೇ ಇದ್ದಾಗ ಧಾರವಾಡ ಶಾಸಕ ಅರವಿಂದ ಬೆಲ್ಲದ್‌ ಬಳಿ ಮನವಿ ಕೊಡಲು ಹೋಗಿದ್ದಳು.

    ಈ ವೇಳೆ ಶಾಸಕರು ನನಗೆ ಅಪಮಾನ ಮಾಡಿದ್ದಾರೆ. ಲಂಚ ಪಡೆದಿದ್ದೆನೆ ಎಂದು ಶಾಸಕರೇ ನನ್ನನ್ನು ಕೆಲಸದಿಂದ ತೆಗೆಸಿದ್ದಾರೆ ಎಂದು ಆರೋಪ ಮಾಡಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ. ಜನರು ಇದ್ದಾಗ ಲಂಚ‌ ತೆಗೆದುಕೊಂಡಿದ್ದಿಯಾ ಎಂದು ಶಾಸಕರು ನನಗೆ ಅಪಮಾನ ಮಾಡಿದ್ದಾರೆ. ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂದು ದೂರಿದ್ದಾಳೆ.

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಆರೋಗ್ಯ ಸ್ವಲ್ಪ ಚೇತರಿಕೆ ಕಂಡಿದ್ದು ಚಿಕಿತ್ಸೆ ಮುಂದುವರೆದಿದೆ.

    Live Tv
    [brid partner=56869869 player=32851 video=960834 autoplay=true]

  • ಅಪಘಾತದಲ್ಲಿ ಗಾಯಗೊಂಡಿದ್ದ ಶಾಸಕ ಅರವಿಂದ ಬೆಲ್ಲದ ಚಿಕ್ಕಪ್ಪ ಚಿಕಿತ್ಸೆ ಫಲಿಸದೆ ಸಾವು

    ಅಪಘಾತದಲ್ಲಿ ಗಾಯಗೊಂಡಿದ್ದ ಶಾಸಕ ಅರವಿಂದ ಬೆಲ್ಲದ ಚಿಕ್ಕಪ್ಪ ಚಿಕಿತ್ಸೆ ಫಲಿಸದೆ ಸಾವು

    ಧಾರವಾಡ: (Dharwad) ಅಪಘಾತದಲ್ಲಿ ಗಾಯಗೊಂಡಿದ್ದ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ (Arvind Bellad) ಅವರ ಚಿಕ್ಕಪ್ಪ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರ ಸಹೋದರರೂ ಆಗಿದ್ದ ಶಿವಣ್ಣ ಬೆಲ್ಲದ ಅವರು ಅಪಘಾತದಲ್ಲಿ ಗಾಯಗೊಂಡಿದ್ದರು‌‌. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ಭೇಟಿಗೆ ಅವಕಾಶ ಕೊಡದ ಸೋನಿಯಾ ಗಾಂಧಿ!

    ಧಾರವಾಡದ ಎಸ್‌ಪಿ ಕಚೇರಿ ಬಳಿಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಶಿವಣ್ಣ ಬೆಲ್ಲದ ಅವರು ತೀವ್ರವಾಗಿ ಗಾಯಗೊಂಡಿದ್ದರು. ನಿನ್ನೆ ರಾತ್ರಿಯೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಶಿವಣ್ಣ ಬೆಲ್ಲದ ಅವರು ನಿಧನರಾಗಿದ್ದಾರೆ.

    ಶಿವಣ್ಣ ಬೆಲ್ಲದ ಅವರು ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ ಈ ಹಿಂದೆ ಸಹೋದರರಾದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ವಿರುದ್ಧ ಇವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಇದನ್ನೂ ಓದಿ: ಮತ್ತದೇ ಎಡವಟ್ಟು – ಗುಜಿರಿ BMTC ಬಸ್‍ಗಳಿಗೆ CCTV ಭಾಗ್ಯ

    Live Tv
    [brid partner=56869869 player=32851 video=960834 autoplay=true]

  • ಬೆಲ್ಲದ್ ಮನೆ ಬಳಿಯಿದ್ದ ಬಾವಿ ನಾಪತ್ತೆ- ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್ ಮುಖಂಡ

    ಬೆಲ್ಲದ್ ಮನೆ ಬಳಿಯಿದ್ದ ಬಾವಿ ನಾಪತ್ತೆ- ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್ ಮುಖಂಡ

    ಧಾರವಾಡ: ಶಾಸಕ ಅರವಿಂದ್ ಬೆಲ್ಲದ್ (Arvind Bellad) ಅವರ ಧಾರವಾಡ (Dharwad) ಮನೆ ಮುಂದಿನ ಬಾವಿ (well) ಕಾಣೆಯಾಗಿದ್ದು, ಅದನ್ನು ಹುಡುಕಿಕೊಡುವಂತೆ ಕಾಂಗ್ರೆಸ್ (Congress) ಮುಖಂಡ ನಾಗರಾಜ ಗೌರಿ ಧಾರವಾಡ ಉಪನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

    ಧಾರವಾಡದ ಸರ್ವೇ ನಂಬರ್ 31/1ರಲ್ಲಿ ಸಾರ್ವಜನಿಕ ಬಾವಿ ಇತ್ತು. ಅಲ್ಲಿಯೇ ಶಾಸಕ ಅರವಿಂದ್ ಬೆಲ್ಲದ್ ಅವರ ನಿವಾಸವಿದೆ. ಆದರೆ ಬೆಲ್ಲದ್ ಅವರು ಜೋತಿಷ್ಯ ಕೇಳಿ ಆ ಬಾವಿಯನ್ನು ಮುಚ್ಚಿ ಹಾಕಿದ್ದಾರೆ. ಆ ಬಾವಿ ಮುಚ್ಚಿದರೆ, ನೀವು ಸಿಎಂ ಆಗುತ್ತೀರಿ ಎಂದು ಯಾರೋ ಬೆಲ್ಲದ್ ಅವರಿಗೆ ಭವಿಷ್ಯ ಹೇಳಿದ್ದರಂತೆ, ಹೀಗಾಗಿ ಬೆಲ್ಲದ ಅವರು ಆ ಬಾವಿ ಮುಚ್ಚಿಸಿದ್ದಾರೆ ಎಂದು ಅಲ್ಲಿನ ಅಕ್ಕಪಕ್ಕದ ನಿವಾಸಿಗಳು ಆರೋಪಿಸಿದ್ದಾರೆ ಎಂದು ಗೌರಿ ತಿಳಿಸಿದರು. ಇದನ್ನೂ ಓದಿ: 11ನೇ ಮಹಡಿಯಿಂದ ಲಿಫ್ಟ್ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

    Congress

    ಬಾವಿ ಹುಡುಕಿಕೊಡುವಂತೆ ಮಹಾನಗರ ಪಾಲಿಕೆಗೆ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಳೆದ ಕೆಲವು ವರ್ಷಗಳ ಹಿಂದೆಯೇ ಈ ಬಾವಿಯನ್ನು ಶಾಸಕರು ಮುಚ್ಚಿಸಿದ್ದಾರೆ. ಹೀಗಾಗಿ ಪೊಲೀಸರು ಈ ಬಾವಿಯನ್ನು ಹುಡುಕಿಕೊಡಬೇಕು ಎಂದು ಗೌರಿ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರ ಆಸ್ತಿ ಪತ್ತೆ ಮಾಡದೇ ಹೋದಲ್ಲಿ ಲೋಕಾಯುಕ್ತಕ್ಕೂ ದೂರು ನೀಡುವುದಾಗಿ ಗೌರಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅಳುವ ಗಂಡಸರನ್ನ ನೋಡಬಾರದು- ಡಿಕೆಶಿ ಕಣ್ಣೀರಿಗೆ ಯತ್ನಾಳ್ ವ್ಯಂಗ್ಯ

    Live Tv
    [brid partner=56869869 player=32851 video=960834 autoplay=true]

  • ಬ್ಯಾನರ್ ಎಡವಟ್ಟು – ದೇಶದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬರೆಸಿದ ಶಾಸಕರು

    ಬ್ಯಾನರ್ ಎಡವಟ್ಟು – ದೇಶದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬರೆಸಿದ ಶಾಸಕರು

    ಧಾರವಾಡ: ದೇಶದ ಮೊದಲ ಮಹಿಳಾ ರಾಷ್ಟ್ರಪತಿ (President) ಯಾರು ಎಂದು ಎಲ್ಲರಿಗೆ ಗೊತ್ತಿರುವ ವಿಚಾರ. ಆದರೆ ಧಾರವಾಡದ ಶಾಸಕರೊಬ್ಬರು ದೇಶದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಸ್ವಾಗತ ಎಂದು ಬ್ಯಾನರ್‌ನಲ್ಲಿ ಹಾಕಿಕೊಂಡು ಎಡವಟ್ಟು ಮಾಡಿದ್ದಾರೆ.

    ನಾಳೆ ಧಾರವಾಡಕ್ಕೆ (Dharwada) ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತಿದ್ದಾರೆ. ಇಡಗಟ್ಟಿ ಹಾಗೂ ತಡಸಿನಕೊಪ್ಪ ಗ್ರಾಮದ ಹತ್ತಿರ ನಿರ್ಮಾಣಗೊಂಡಿರುವ ಐಐಟಿ (IIT) ಉದ್ಘಾಟನಾ ಕಾರ್ಯಕ್ರಮಕ್ಕೆ ದ್ರೌಪದಿ ಮುರ್ಮು ಬರುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡ ಶಾಸಕ ಅರವಿಂದ ಬೆಲ್ಲದ್ (Arvind Bellad) ರಾಷ್ಟ್ರಪತಿಗೆ ಸ್ವಾಗತ ಕೋರಿ ಬ್ಯಾನರ್ ಹಾಕಿದ್ದು, ಅದರಲ್ಲಿ ಎಡವಟ್ಟು ಮಾಡಿದ್ದಾರೆ. ದೇಶದ ಮೊಲದ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಎಂದು ಬರೆಸಿದ್ದಾರೆ. ಇದನ್ನೂ ಓದಿ: ಆ ಭಾಗ್ಯ ಈ ಭಾಗ್ಯ ಅಂತಾ ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟರು: ಸಿದ್ದುಗೆ ಬೊಮ್ಮಾಯಿ ಟಾಂಗ್‌

    ಮುರ್ಮು ಅವರು ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಅಲ್ಲ. ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಪ್ರತಿಭಾ ಪಾಟೀಲ್ (Pratibha Patil). ಇದೀಗ ಬ್ಯಾನರ್‌ನಲ್ಲಿ ತಪ್ಪಾಗಿ ಹಾಕಿರುವುದರಿಂದಾಗಿ ಶಾಸಕರಿಗೆ ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಯಾರೆಂದು ಗೊತ್ತಿಲ್ಲ ಎಂದು ಜನರೇ ವ್ಯಂಗ್ಯವಾಡುತ್ತಿದ್ದಾರೆ. ಇದನ್ನೂ ಓದಿ: ಅವರೆಲ್ಲಾ ಸಿಎಂ ಆಗಿದ್ದಾಗ ಬೀಗರ ಊಟ, ಮದುವೆಗೆ ಬರ್ತಿದ್ರು, ಬೊಮ್ಮಾಯಿ ಅಭಿವೃದ್ಧಿ ಕೆಲಸಕ್ಕೆ ಬರ್ತಿದ್ದಾರೆ: ಪ್ರತಾಪ್ ಸಿಂಹ

    Live Tv
    [brid partner=56869869 player=32851 video=960834 autoplay=true]

  • ದೇವಸ್ಥಾನ ಆವರಣದಲ್ಲಿ ಮುಸ್ಲಿಂ ವ್ಯಾಪಾರಿ ಇದ್ದರೂ, ಯಾವ ವೇಷದಲ್ಲಿರಬೇಕು: ಶಾಸಕ ಬೆಲ್ಲದ್

    ದೇವಸ್ಥಾನ ಆವರಣದಲ್ಲಿ ಮುಸ್ಲಿಂ ವ್ಯಾಪಾರಿ ಇದ್ದರೂ, ಯಾವ ವೇಷದಲ್ಲಿರಬೇಕು: ಶಾಸಕ ಬೆಲ್ಲದ್

    ಧಾರವಾಡ: ದೇವಸ್ಥಾನ ಆವರಣದಲ್ಲಿ ಮುಸ್ಲಿಂ ವ್ಯಾಪಾರಿ ಇದ್ದರೂ ಯಾವ ರೀತಿ ವೇಷದಲ್ಲಿರಬೇಕು, ತಲೆ ಮೇಲೆ ಟೋಪಿ ಹಾಕಿ, ಗಡ್ಡ ಬಿಟ್ಟುಕೊಂಡು, ಮೀಸೆ ಬೋಳಿಸಿಕೊಂಡು, ಪಾಯಿಜಾಮ ಹಾಕಿಕೊಂಡಾಗ ಹಿಂದೂ ಭಕ್ತರ ಮನಸಿನಲ್ಲಿ ಇವರಿಗ್ಯಾಕೆ ವ್ಯಾಪಾರಕ್ಕೆ ಅವಕಾಶ ಕೊಡಬೇಕು ಅನಿಸುತ್ತದೆ ಎಂದು ಶಾಸಕ ಅರವಿಂದ್‌ ಬೆಲ್ಲದ್ ಹೇಳಿದರು.

    ಧಾರವಾಡ ನುಗ್ಗಿಕೇರಿ ಧರ್ಮ ವ್ಯಾಪಾರ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಕಲ್ಲಂಗಡಿ ಒಡೆದ ಘಟನೆ ನಡೆಯಬಾರದಿತ್ತು, ಆದರೆ ಇದು ಯಾಕೆ ಆಗುತ್ತಿದೆ ಎನ್ನುವುದರ ಕುರಿತು ವಿಚಾರ ಮಾಡಬೇಕಿದೆ ಎಂದರು.

    ಘಟನೆ ನಡೆಯಲು ಕಾರಣವಾದ ವಿಷಯಗಳ ಬಗ್ಗೆ ನೋಡಬೇಕಿದೆ. ಹೈಕೋರ್ಟ್ ಹಿಜಬ್ ಕುರಿತು ಶಾಲೆಗಳಲ್ಲಿ ಸಮವಸ್ತ್ರ ಧರಿಸಬೇಕು ಎಂದು ತೀರ್ಪು ನೀಡಿತ್ತು. ಇದನ್ನು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಅಂಗಡಿ ಬಂದ್ ಮಾಡಿದ್ದವು. ಆಗಲೇ ಅವರಿಗೆ ಕಾನೂನಿನ ಬಗ್ಗೆ ಕಾಳಜಿ ಹಾಗೂ ಗೌರವ ಇಲ್ಲ ಎನ್ನುವುದು ಗೊತ್ತಾಗಿದೆ ಎಂದ ಅವರು, ತಲೆ ಒಡೆದಾಗ ಇಲ್ಲದ ಕಾಳಜಿ, ಕಲ್ಲಂಗಡಿ ಒಡೆದಾಗ ಏಕೆ ಎಂದು ಸಿಟಿ ರವಿ ಹೇಳಿದ್ದು ಸರಿಯಾಗಿದೆ ಎಂದು ಸಮರ್ಥಿಸಿಕೊಂಡರು.

    ಮುಸ್ಲಿಂ ಸಮಾಜದ ನಾಯಕರು ಮೊದಲು ವಿಚಾರ ಮಾಡಬೇಕಿದೆ. ಇಲ್ಲದೇ ಹೋದಲ್ಲಿ ಆ್ಯಕ್ಷನ್‍ಗೆ-ರಿಯಾಕ್ಷನ್ ಆಗುತ್ತಾ ಹೋಗುತ್ತದೆ ಎಂದ ಅವರು, ನುಗ್ಗಿಕೇರಿ ಖಾಸಗಿ ದೇವಸ್ಥಾನವಾಗಿದೆ. ಅಲ್ಲಿ ಯಾರ ಅಂಗಡಿ ಇರಬೇಕು ಎನ್ನುವುದು ಆಡಳಿತ ಮಂಡಳಿಗೆ ಬಿಟ್ಟ ವಿಷಯವಾಗಿದೆ. ಅದು ಹಿಂದೂ ದೇವಸ್ಥಾನ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೆಳಗಾವಿ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ಮುಂದಾದ ಅರುಣ್ ಸಿಂಗ್, ಬಿಎಸ್‍ವೈ

    ಒಂದು ಕಡೆ ಕಾನೂನು ವಿರೋಧಿಸುತ್ತಾರೆ. ಮತ್ತೊಂದೆಡೆ ನಮ್ಮ ದೇವಸ್ಥಾನಕ್ಕೆ ವ್ಯಾಪಾರಕ್ಕೆ ಬರುತ್ತಾರೆ. ಸಮಾಜದಲ್ಲಿ ಈಗ ಎರಡೂ ಕಡೆ ವಿಚಾರ ಮಾಡಬೇಕಿದೆ ಎಂದ ಅವರು, ಒಂದೇ ಕಡೆಯಿಂದ ಚಪ್ಪಾಳೆ ಆಗೋದಿಲ್ಲ, ಎರಡು ಕೈ ಸೇರಿಸಿಯೇ ಚಪ್ಪಾಳೆ ಆಗಬೇಕು, ಹಾಗಂತ ನಾನು ಗಲಾಟೆ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ ಎಂದರು.

    ಮುಸ್ಲಿಂ ಸಮಾಜದ ನಾಯಕರು ತಪ್ಪು ಆದಾಗ ತಪ್ಪು ಎಂದು ಹೇಳಬೇಕಿದೆ, ಹುಚ್ಚು ಹುಡುಗರು ಹೋಗಿ ದೇವಸ್ಥಾನದಲ್ಲಿ ಹಾಗೆ ಮಾಡಿದ್ದಾರೆ. ಅದಕ್ಕೆ ಪ್ರಚೋದನೆ ಆಗಿದ್ದೇನು ಅದನ್ನು ನೋಡಬೇಕು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರ – 7ನೇ ರ‍್ಯಾಂಕ್ ಪಡೆದಿದ್ದ ಕಲಬುರಗಿ ಅಭ್ಯರ್ಥಿ ಸಿಐಡಿ ವಶಕ್ಕೆ

  • ಅಮಿತ್ ಶಾ ನನ್ನನ್ನು ಕರೆದಿದ್ದರು ಭೇಟಿ ಮಾಡಿ ಬಂದಿದ್ದೇನೆ: ಬೆಲ್ಲದ್

    ಅಮಿತ್ ಶಾ ನನ್ನನ್ನು ಕರೆದಿದ್ದರು ಭೇಟಿ ಮಾಡಿ ಬಂದಿದ್ದೇನೆ: ಬೆಲ್ಲದ್

    ಧಾರವಾಡ: ನಾನು ಸಚಿವ ಸ್ಥಾನದ ಲಾಬಿಗಾಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ, ನಾನು 6 ತಿಂಗಳ ಹಿಂದೆಯೇ ಭೇಟಿಯಾಗಲು ಕೇಳಿದ್ದೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ಶಾ ಅವರು ನನ್ನನ್ನು ಕರೆದಿದ್ದರು, ಹೀಗಾಗಿ ಭೇಟಿ ಮಾಡಿ ಬಂದಿದ್ದೇನೆ. ಸಚಿವ ಸ್ಥಾನದ ಲಾಬಿಗಾಗಿ ಭೇಟಿ ಮಾಡಿಲ್ಲ. ರಾಜ್ಯ ಪ್ರವಾಸದ ಮುನ್ನ ಏಕಾಏಕಿ ಬಂದು ಭೇಟಿ ಮಾಡಲು ಹೇಳಿದರು. ದೆಹಲಿಯಲ್ಲಿ ಪ್ರಸಕ್ತ ರಾಜ್ಯದ ಸ್ಥಿತಿ ಗತಿ ಬಗ್ಗೆ ಚರ್ಚೆ ಮಾಡಿದರು ಎಂದರು. ಇದನ್ನೂ ಓದಿ: ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ. ಘೋಷಿಸಿದ ಬಸವರಾಜ ಬೊಮ್ಮಾಯಿ

    ಉತ್ತರ ಕರ್ನಾಟಕ ಹಾಗೂ ನನ್ನ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತುಕತೆ ಆಗಿದೆ. ನಾನಂತು ಅವರಿಗೆ ಏನು ಕೇಳುವುದಕ್ಕೆ ಹೋಗಿಲ್ಲ. ಡಿಸಿಎಂ ಸ್ಥಾನದಲ್ಲಿ ನಾನು ರೇಸ್‍ನಲ್ಲಿ ಇರುವುದು ಮಾಧ್ಯಮದವರಿಗೆ ಗೊತ್ತು ಎಂದು ಡಿಸಿಎಂ ಸ್ಥಾನದ ಆಕಾಂಕ್ಷಿ ಪ್ರಶ್ನೆ ಬಗ್ಗೆ ಉತ್ತರಿಸಿದರು. ಇದನ್ನೂ ಓದಿ: ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪೊಲೀಸರ ಮಸ್ತ್ ಡ್ಯಾನ್ಸ್: ಪರ,ವಿರೋಧ ಚರ್ಚೆ