Tag: Arvind Kejriwal

  • ನಿರ್ಭಯಾಗೆ ನ್ಯಾಯ ಕೊಡಿಸಲು ಬೀದಿಗಿಳಿದ ಕಾಲವಿತ್ತು – ಈಗ ಯಾರಿಗಾಗಿ ಬೀದಿಗಿಳಿದಿದ್ದೀರಿ?- ಮಲಿವಾಲ್‌ ಕಿಡಿ

    ನಿರ್ಭಯಾಗೆ ನ್ಯಾಯ ಕೊಡಿಸಲು ಬೀದಿಗಿಳಿದ ಕಾಲವಿತ್ತು – ಈಗ ಯಾರಿಗಾಗಿ ಬೀದಿಗಿಳಿದಿದ್ದೀರಿ?- ಮಲಿವಾಲ್‌ ಕಿಡಿ

    – ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ಬಂಧನ – ಬಿಜೆಪಿ ಪ್ರಧಾನ ಕಚೇರಿ ಎದುರು ಪ್ರತಿಭಟನೆಗೆ ಆಪ್‌ ಸಜ್ಜು

    ನವದೆಹಲಿ: ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ಬಂಧನ (Bibhav Kumar Arrest) ಖಂಡಿಸಿ ಆಪ್‌ ಬೃಹತ್‌ ಪ್ರತಿಭಟನೆಗೆ ಸಜ್ಜಾಗಿದೆ.

    ದೆಹಲಿ ಸಿಎಂ & ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಸುತ್ತಲೂ ಬಿಗಿ ಭದ್ರೆತೆಯನ್ನು ನಿಯೋಜಿಸಲಾಗಿದೆ. ದೆಹಲಿಯ ಟಾಪ್‌ ಅಧಿಕಾರಿಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ಹಾಗೂ ವಿವಿಧ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

    ಈ ನಡುವೆ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸ್ವಾತಿ ಮಲಿವಾಲ್‌, ಆಪ್‌ ಪ್ರತಿಭಟನೆಗೆ (AAP Protest) ವಿರೋಧ ವ್ಯಕ್ತಪಡಿಸಿದ್ದಾರೆ. ನಿರ್ಭಯಾಗೆ ನ್ಯಾಯ ಕೊಡಿಸಲು ನಾವೆಲ್ಲ ಬೀದಿಗಿಳಿದ ಕಾಲವೊಂದಿತ್ತು. ಆದರಿಂದು 12 ವರ್ಷಗಳ ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಕಣ್ಮರೆಯಾಗುವಂತೆ ಮಾಡಿ ಫೋನ್ ಫಾರ್ಮಾಟ್ ಮಾಡಿದ ಆರೋಪಿಗಳನ್ನು ಉಳಿಸಲು ಬೀದಿಗಿಳಿದಿದ್ದೇವೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

    ಇದೇ ವೇಳೆ ಸಚಿವ ಮನಿಷ್‌ ಸಿಸೋಡಿಯಾ ಪರ ಮಾತನಾಡಿರುವ ಮಲಿವಾಲ್‌, ಮನೀಶ್ ಸಿಸೋಡಿಯಾಜಿ (Manish Sisodia) ಅವರಿಗಾಗಿ ಇಷ್ಟು ಬಲಪ್ರಯೋಗ ಮಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದೆ. ಅವರು ಇಲ್ಲಿ ಇದ್ದಿದ್ದರೆ ಬಹುಶಃ ನನ್ನ ಮೇಲೆ ಹಲ್ಲೆ ನಡೆಯುತ್ತಿರಲಿಲ್ಲ ಎಂದು ಭಾವುಕರಾಗಿದ್ದಾರೆ.

    ನಿನ್ನೆಯಷ್ಟೇ ಬಂಧನ:
    ಸ್ವಾತಿ ಮಲಿವಲ್‌ ಮೇಲೆ ದೌರ್ಜನ್ಯ ಎಸಗಿದ ದೆಹಲಿ ಸಿಎಂ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅವರನ್ನು ಪೊಲೀಸರು ಶನಿವಾರವಷ್ಟೇ ಬಂಧಿಸಿದ್ದರು. ಇದೇ ಮೇ 13 ರಂದು ಸಿಎಂ ನಿವಾಸದಲ್ಲಿ ತನ್ನ ಮೇಲೆ ಬಿಭವ್‌ ಕುಮಾರ್‌ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಲಿವಾಲ್‌ ದೂರು ನೀಡಿದ್ದರು. ಸ್ವಾತಿ ಮಲಿವಾಲ್‌ ದೂರಿನ ಬೆನ್ನಲ್ಲೇ ವಿಧಿವಿಜ್ಞಾನ ತಜ್ಞರು, ಪೊಲೀಸರ ತಂಡ ಶುಕ್ರವಾರ ಸಂಜೆ ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿತ್ತು. ತನಿಖೆಯ ಭಾಗವಾಗಿ ವಿಡಿಯೋ ಸೆರೆ ಹಿಡಿದ ನಂತರ ಶನಿವಾರ ನಸುಕಿನ ಜಾವ 2:15ಕ್ಕೆ ತಂಡ ಸಿಎಂ ನಿವಾಸದಿಂದ ಹೊರಬಂದಿತ್ತು.

    ಎಲ್ಲರನ್ನೂ ಜೈಲಿಗೆ ಹಾಕಿ:
    ಆಪ್ತನ ಬಂಧನದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಅರವಿಂದ್‌ ಕೇಜ್ರಿವಾಲ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ನಾಯಕರು ಆಪ್ ಪಕ್ಷದ ಹಿಂದೆ ಬಿದ್ದಿದ್ದಾರೆ. ಒಬ್ಬರಾದ ಬಳಿಕ ಒಬ್ಬರಂತೆ ನಮ್ಮ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ. ಮನೀಶ್ ಸಿಸೋಡಿಯ, ಸತ್ಯೇಂದ್ರ ಜೈನ್, ಸಂಜಯ್ ಸಿಂಗ್ ಮತ್ತು ನನ್ನನ್ನು ಜೈಲಿಗೆ ಹಾಕಲಾಯಿತು. ಈಗ ನನ್ನ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ. ನಾವು ಸಹ ಬಿಜೆಪಿ ಕಚೇರಿಗೆ ಬರಲಿದ್ದೇವೆ. ಯಾರ‍್ಯಾರನ್ನು ಜೈಲಿಗೆ ಹಾಕಬೇಕು ಒಟ್ಟಿಗೆ ಹಾಕಿ. ಹೀಗೆ ಜೈಲಿಗೆ ಹಾಕಿ ಆಪ್ ಪಕ್ಷವನ್ನು ನಾಶ ಮಾಡಬೇಕು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ಆಪ್ ಪಕ್ಷ ಒಂದೇ ಚಿಂತನೆಯಾಗಿದೆ. ಇದನ್ನು ನಾಶ ಮಾಡಲು ಪ್ರಯತ್ನಿಸಿದಷ್ಟು ಈ ಚಿಂತನೆ ದೇಶದಲ್ಲಿ ಹೆಚ್ಚಲಿದೆ ಎಂದು ಬಿಜೆಪಿಗೆ ಸವಾಲು ಹಾಕಿದ್ದರು.

  • ಎಲ್ಲಾ ನಾಯಕರು ಬಿಜೆಪಿ ಕಚೇರಿಗೆ ಬರ್ತೀವಿ.. ಎಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ: ಕೇಜ್ರಿವಾಲ್‌ ಕಿಡಿ

    ಎಲ್ಲಾ ನಾಯಕರು ಬಿಜೆಪಿ ಕಚೇರಿಗೆ ಬರ್ತೀವಿ.. ಎಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ: ಕೇಜ್ರಿವಾಲ್‌ ಕಿಡಿ

    – ಆಪ್ತ ಸಹಾಯಕನ ಬಂಧನಕ್ಕೆ ದೆಹಲಿ ಸಿಎಂ ಅಸಮಾಧಾನ

    ನವದೆಹಲಿ: ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಅವರ ಮೇಲೆ ಹಲ್ಲೆ ಪ್ರಕರಣದಲ್ಲಿ ತಮ್ಮ ಆಪ್ತ ಸಹಾಯಕನನ್ನು ಬಂಧಿಸಿದ ಬೆನ್ನಲ್ಲೇ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಬಿಜೆಪಿ (BJP) ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಬಿಜೆಪಿ ನಾಯಕರು ಆಪ್ ಪಕ್ಷದ ಹಿಂದೆ ಬಿದ್ದಿದ್ದಾರೆ. ಒಬ್ಬರಾದ ಬಳಿಕ ಒಬ್ಬರಂತೆ ನಮ್ಮ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ. ಮನೀಶ್ ಸಿಸೋಡಿಯ, ಸತ್ಯೇಂದ್ರ ಜೈನ್, ಸಂಜಯ್ ಸಿಂಗ್ ಮತ್ತು ನನ್ನನ್ನು ಜೈಲಿಗೆ ಹಾಕಲಾಯಿತು. ಈಗ ನನ್ನ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಅರೆಸ್ಟ್‌

    ಈಗಷ್ಟೇ ಲಂಡನ್‌ನಿಂದ ವಾಪಸ್ ಆಗಿರುವ ರಾಘವ್ ಚಡ್ಡಾ ಅವರನ್ನು ಬಂಧಿಸಲಿದ್ದಾರಂತೆ. ಸೌರಭ್ ಭಾರಧ್ವಾಜ್ ಮತ್ತು ಅತಿಯನ್ನು ಜೈಲಿಗೆ ಹಾಕಲಾಗುವುದು ಎನ್ನಲಾಗುತ್ತಿದೆ. ನಮ್ಮನ್ನು ಜೈಲಿಗೆ ಹಾಕಲಾಗುತ್ತಿದೆ. ಅಷ್ಟಕ್ಕೂ ನಮ್ಮ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

    ದೆಹಲಿ ಬಡ ಜನರಿಗೆ ಒಳ್ಳೆಯ ಶಿಕ್ಷಣ, ಉತ್ತಮ ಆರೋಗ್ಯ ನೀಡುತ್ತಿರುವುದು ನಮ್ಮ ತಪ್ಪಾ? ಇದನ್ನು ಅವರು ಮಾಡಲು ಸಾಧ್ಯವಿಲ್ಲ. ಹೀಗಾಗಿ ನಮ್ಮನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿಗಳು ಜೈಲಿ ಕಾ ಕೇಲ್ (ಜೈಲಿನ ಆಟ) ಆಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌

    ನಾಳೆ ಮಧ್ಯಾಹ್ನ 12 ಗಂಟೆಗೆ ಎಲ್ಲ ಹಿರಿಯ ನಾಯಕರೊಂದಿಗೆ ನಾನು ಬಿಜೆಪಿ ಕಚೇರಿಗೆ ಬರಲಿದ್ದೇವೆ. ಯಾರ‍್ಯಾರನ್ನು ಜೈಲಿಗೆ ಹಾಕಬೇಕು ಒಟ್ಟಿಗೆ ಹಾಕಿ. ಹೀಗೆ ಜೈಲಿಗೆ ಹಾಕಿ ಆಪ್ ಪಕ್ಷವನ್ನು ನಾಶ ಮಾಡಬೇಕು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ಆಪ್ ಪಕ್ಷ ಒಂದೇ ಚಿಂತನೆಯಾಗಿದೆ. ಇದನ್ನು ನಾಶ ಮಾಡಲು ಪ್ರಯತ್ನಿಸಿದಷ್ಟು ಈ ಚಿಂತನೆ ದೇಶದಲ್ಲಿ ಹೆಚ್ಚಲಿದೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

  • ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಅರೆಸ್ಟ್‌

    ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಅರೆಸ್ಟ್‌

    ನವದೆಹಲಿ: ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಲ್‌ (Swati Maliwal) ಮೇಲೆ ದೌರ್ಜನ್ಯ ಎಸಗಿದ ದೆಹಲಿ ಸಿಎಂ ಕೇಜ್ರಿವಾಲ್‌ (Arvind Kejriwal) ಆಪ್ತ ಸಹಾಯಕ ಬಿಭವ್‌ ಕುಮಾರ್‌ (Bibhav Kumar) ಅವರನ್ನು ಪೊಲೀಸರು ಬಂಧಿಸಿದ್ದರು.

    ಮೇ 13 ರಂದು ಸಿಎಂ ನಿವಾಸದಲ್ಲಿ ತನ್ನ ಮೇಲೆ ಬಿಭವ್‌ ಕುಮಾರ್‌ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಲಿವಾಲ್‌ ದೂರು ನೀಡಿದ್ದರು. ಸ್ವಾತಿ ಮಲಿವಾಲ್‌ ದೂರಿನ ಬೆನ್ನಲ್ಲೇ ವಿಧಿವಿಜ್ಞಾನ ತಜ್ಞರು, ಪೊಲೀಸರ ತಂಡ ಶುಕ್ರವಾರ ಸಂಜೆ ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿತ್ತು. ತನಿಖೆಯ ಭಾಗವಾಗಿ ವಿಡಿಯೋ ಸೆರೆ ಹಿಡಿದ ನಂತರ ಶನಿವಾರ ನಸುಕಿನ ಜಾವ 2:15ಕ್ಕೆ ತಂಡ ಸಿಎಂ ನಿವಾಸದಿಂದ ಹೊರಬಂದಿತ್ತು.

     

    ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ನಿವಾಸದ ಸಿಸಿಟಿವಿ ಪೊಲೀಸರು ಸೀಲ್ ಮಾಡಿದ್ದಾರೆ. ತನಿಖೆಯ ದೃಷ್ಟಿಯಿಂದ ತಾಂತ್ರಿಕ ಸಾಕ್ಷಿಯಾಗಿ ಪರಿಗಣನೆ ಮಾಡಲು ಡಿವಿಆರ್‌ ಸಹಿತ ದತ್ತಾಂಶವನ್ನು ದೆಹಲಿ ಪೊಲೀಸರು ಸೀಲ್ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

     

  • ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌

    ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌

    ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್‌ (Delhi CM Arvind Kejriwal) ನಿವಾಸದ ಸಿಸಿಟಿವಿಯನ್ನು ಟ್ಯಾಂಪರಿಂಗ್‌ (CCTV Tampering ) ಮಾಡುತ್ತಿದ್ದಾರೆ ಎಂದು ಆಪ್‌ (AAP) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಗಂಭೀರ ಆರೋಪ ಮಾಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು, ಈಗ ಈ ವ್ಯಕ್ತಿಗಳು ಮನೆಯ ಸಿಸಿಟಿವಿಯನ್ನು ಟ್ಯಾಂಪರಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಸಿಕ್ಕಿದೆ ಎಂದು ಆರೋಪಿಸಿ ತಮ್ಮ ಪೋಸ್ಟ್‌ನಲ್ಲಿ ದೆಹಲಿ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.

    ಶುಕ್ರವಾರದವರೆಗೆ ಸ್ವಾತಿ ಮಲಿವಾಲ್‌ ಅವರ ಡಿಪಿಯಲ್ಲಿ ಬಂಧನಕ್ಕೆ ಒಳಗಾದ ಕೇಜ್ರಿವಾಲ್‌ ಅವರ ಚಿತ್ರವಿತ್ತು. ಆದರೆ ಈಗ ಕಪ್ಪು ಬಣ್ಣದ ಚಿತ್ರವನ್ನು ಹಾಕಿದ್ದಾರೆ. ಇದನ್ನೂ ಓದಿ: ಸ್ವಾತಿ ಆರೋಪ ಸುಳ್ಳು – ಮಲಿವಾಲ್‌ ಸಿಎಂ ಮನೆಗೆ ಕಳುಹಿಸಿದ್ದೇ ಬಿಜೆಪಿ: ಸಚಿವೆ ಅತಿಶಿ ತಿರುಗೇಟು!

    ಸ್ವಾತಿ ಮಲಿವಾಲ್‌ ದೂರಿನ ಬೆನ್ನಲ್ಲೇ ವಿಧಿವಿಜ್ಞಾನ ತಜ್ಞರು, ಪೊಲೀಸರ ತಂಡ ಶುಕ್ರವಾರ ಸಂಜೆ ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿತು. ತನಿಖೆಯ ಭಾಗವಾಗಿ ವಿಡಿಯೋ ಸೆರೆ ಹಿಡಿದ ನಂತರ ಶನಿವಾರ ನಸುಕಿನ ಜಾವ 2:15ಕ್ಕೆ ತಂಡ ಸಿಎಂ ನಿವಾಸದಿಂದ ಹೊರಟಿತು.

    ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ನಿವಾಸದ ಸಿಸಿಟಿವಿ ಪೊಲೀಸರು ಸೀಲ್ ಮಾಡಿದ್ದಾರೆ. ತನಿಖೆಯ ದೃಷ್ಟಿಯಿಂದ ತಾಂತ್ರಿಕ ಸಾಕ್ಷಿಯಾಗಿ ಪರಿಗಣನೆ ಮಾಡಲು ಡಿವಿಆರ್‌ ಸಹಿತ ದತ್ತಾಂಶವನ್ನು ದೆಹಲಿ ಪೊಲೀಸ್ ಸೀಲ್ ಮಾಡಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್‌ ತಿರುಗೇಟು

     

    ಪ್ರತಿ ಬಾರಿಯಂತೆ ಈ ಬಾರಿಯೂ ಈ ರಾಜಕೀಯ ಹಿಟ್‌ಮ್ಯಾನ್ ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾನೆ. ತನ್ನ ಜನರ ಮೂಲಕ ಸರಿಯಾದ ವಿವರ ಇಲ್ಲದ ವೀಡಿಯೋವನ್ನು ಟ್ವೀಟ್‌ ಮಾಡಿ ತಪ್ಪು ಮಾಡಿಯೂ ತಾನು ಪಾರಾಗಬಹುದು ಎಂದು ಭಾವಿಸಿದ್ದಾನೆ. ಮನೆಯಲ್ಲಿ ಥಳಿಸುವ ವಿಡಿಯೋವನ್ನು ಯಾರಾದರೂ ಮಾಡುತ್ತಾರಾ? ಕೊಠಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗಲೇ ಸತ್ಯಾಂಶ ಎಲ್ಲರಿಗೂ ಬಹಿರಂಗವಾಗುವುದು. ನೀವು ಯಾವ ಮಟ್ಟಕ್ಕೆ ಇಳಿಯುತ್ತಿದ್ದೀರಿ. ದೇವರು ಎಲ್ಲವನ್ನೂ ನೋಡುತ್ತಿದ್ದಾನೆ. ಮುಂದೊಂದು ದಿನ ಪ್ರತಿಯೊಬ್ಬರ ಸತ್ಯವೂ ಜಗತ್ತಿನ ಮುಂದೆ ಅನಾವರಣವಾಗಲಿದೆ ಎಂದು ಸ್ವಾತಿ ಮಲಿವಾಲ್‌ ಶುಕ್ರವಾರ ಹೇಳಿದ್ದರು.

  • ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಕೇಸ್‌ – ಪ್ರತಿ ದೂರು ದಾಖಲಿಸಿದ ಆರೋಪಿ ಬಿಭವ್‌

    ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಕೇಸ್‌ – ಪ್ರತಿ ದೂರು ದಾಖಲಿಸಿದ ಆರೋಪಿ ಬಿಭವ್‌

    ನವದೆಹಲಿ: ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ (Bibhav Kumar) ಪ್ರತಿದೂರು ದಾಖಲಿಸಿದ್ದಾರೆ.

    ಸ್ವಾತಿ ಮಲಿವಾಲ್‌ ವಿರುದ್ಧವೇ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ಇಮೇಲ್ ಮೂಲಕ ನವದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತನಾಗಿರುವ ಬಿಭವ್‌ ಕುಮಾರ್‌ ಪ್ರತಿ ದೂರು ನೀಡಿದ್ದಾರೆ. ಇದನ್ನೂ ಓದಿ: ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂದ್ಕೊಂಡಿದ್ದಾನೆ: ಸ್ವಾತಿ ಮಲಿವಾಲ್‌ ಕಿಡಿ

    ಸ್ವಾತಿ ಮಲಿವಾಲ್ ಬಲವಂತವಾಗಿ ದೂರು ದಾಖಲಿಸಿದ್ದಾರೆ.‌ ಸಿಎಂ ನಿವಾಸಕ್ಕೆ ಅಕ್ರಮವಾಗಿ ಅತಿಕ್ರಮಣ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

    ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಬಿಭವ್ ಕುಮಾರ್ ವಿರುದ್ಧ ಸ್ವಾತಿ ಮಲಿವಾಲ್‌ ದೂರು ನೀಡಿದ್ದು ಎಫ್‌ಐಆರ್‌ (FIR) ದಾಖಲಾಗಿದೆ. ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಆಪ್ತ ಬಿಭವ್‌ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್‌ ನೀಡಿತ್ತು. ಆಯೋಗದ ಎದುರು ವಿಚಾರಣೆಗೆ ಆರೋಪಿ ಹಾಜರಾಗಿಲ್ಲ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

    ಸಿಎಂ ನಿವಾಸಕ್ಕೆ ತೆರಳಿದ್ದಾಗ, ಅವರ ಕಾರ್ಯದರ್ಶಿಯಾಗಿರುವ ಬಿಭವ್‌ ನನ್ನ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ದೈಹಿಕವಾಗಿ ಹಲ್ಲೆ ನಡೆಸಿದ್ದರು ಎಂದು ಸಂಸದೆ ಸ್ವಾತಿ ಮಲಿವಾಲ್‌ ಆರೋಪಿಸಿದ್ದರು. ಸಿಎಂ ಕಚೇರಿಯಲ್ಲಿ ಪ್ರಮುಖ ಸ್ಥಾನದಲ್ಲಿರುವ ಬಿಭವ್‌ ಕುಮಾರ್‌ ವಿರುದ್ಧ ಕೇಳಿಬಂದ ಆರೋಪವು ಈಗ ವಿವಾದಕ್ಕೆ ತಿರುಗಿದೆ. ಪ್ರತಿಪಕ್ಷಗಳ ತೀವ್ರ ಟೀಕೆಗೂ ಗುರಿಯಾಗಿದೆ.

  • ಸ್ವಾತಿ ಆರೋಪ ಸುಳ್ಳು – ಮಲಿವಾಲ್‌ ಸಿಎಂ ಮನೆಗೆ ಕಳುಹಿಸಿದ್ದೇ ಬಿಜೆಪಿ: ಸಚಿವೆ ಅತಿಶಿ ತಿರುಗೇಟು!

    ಸ್ವಾತಿ ಆರೋಪ ಸುಳ್ಳು – ಮಲಿವಾಲ್‌ ಸಿಎಂ ಮನೆಗೆ ಕಳುಹಿಸಿದ್ದೇ ಬಿಜೆಪಿ: ಸಚಿವೆ ಅತಿಶಿ ತಿರುಗೇಟು!

    ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ನಡೆದಿದೆ ಎನ್ನುವ ಸ್ವಾತಿ ಮಲಿವಾಲ್‌ ಅವರ ಆರೋಪ ಸುಳ್ಳು. ಇದು ಬಿಜೆಪಿಯ ಒಳಸಂಚು, ಆ ದಿನ ಸ್ವಾತಿ ಮಲಿವಾಲ್‌ರನ್ನ ಸಿಎಂ ಮನೆಗೆ ಕಳುಹಿಸಿದ್ದೇ ಬಿಜೆಪಿ ಎಂದು ಸಚಿವೆ ಅತಿಶಿ (Atishi) ತಿರುಗೇಟು ನೀಡಿದ್ದಾರೆ.

    ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ವಿರುದ್ಧ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ಮಾಡುತ್ತಿರುವ ಆರೋಪಗಳೆಲ್ಲವೂ ಆಧಾರ ರಹಿತ ಮತ್ತು ಸುಳ್ಳು. ಇದು ಬಿಜೆಪಿಯ ಸಂಚು ಎಂದು ಅಲ್ಲಗಳೆದಿದ್ದಾರೆ.

    ಈ ಆರೋಪವು ಬಿಜೆಪಿ (BJP) ಒಳಸಂಚು, ಸ್ವಾತಿ ಮಲಿವಾಲ್‌ ಅದರ ಮುಖವಾಡ. ಮೇ 13ರಂದು ಬೆಳಗ್ಗೆ ಕೇಜ್ರಿವಾಲ್‌ ನಿವಾಸಕ್ಕೆ ಮಲಿವಾಲ್‌ರನ್ನ ಕಳುಹಿಸಿದ್ದೇ ಬಿಜೆಪಿ. ಮುಖ್ಯವಾಗಿ ಸ್ವಾತಿಗೆ ಸಿಎಂ ಮೇಲೆಯೇ ಆರೋಪ ಮಾಡುವ ಉದ್ದೇಶವಿತ್ತು. ಆ ಸಂದರ್ಭದಲ್ಲಿ ಸಿಎಂ ಇಲ್ಲದಿದ್ದ ಕಾರಣ ಬಚಾವ್‌ ಆಗಿದ್ದಾರೆ. ಸಿಎಂ ಇಲ್ಲದಿದ್ದರಿಂದ ಅವರ ಆಪ್ತ ಸಹಾಯಕನ ವಿರುದ್ಧ ದೂರು ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

    ಮುಂದುವರಿದು ಮಾತನಾಡಿ, ಸ್ವಾತಿ ಮಲಿವಾಲ್‌ ಪೊಲೀಸರಿಗೆ ನೀಡಿದ ದೂರಿನಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದ್ರೆ ಸಿಸಿಟಿವಿ ವೀಡಿಯೋದಲ್ಲಿ, ಮಲಿವಾಲ್‌ ಸಿಎಂ ಮನೆ ಡ್ರಾಯಿಂಗ್‌ ರೂಮಿನಲ್ಲಿ ಆರಾಮಾಗಿ ಕುಳಿತಿರುವುದು ಕಂಡುಬಂದಿದೆ. ಅವರೇ ಅಲ್ಲಿದ್ದ ಪೊಲೀಸರಿಗೆ ಮತ್ತು ಬಿಭವ್‌ ಕುಮಾರ್‌ಗೆ ಬೆದರಿಕೆ ಹಾಕಿದ್ದಾರೆ. ಇದಕ್ಕಿಂತ ಸಾಕ್ಷಿ ಇನ್ನೇನು ಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

    ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ರಾಜ್ಯಸಭೆ ಆಪ್‌ ಸಂಸದೆ ಸ್ವಾತಿ ಮಾಲಿವಾಲ್‌ ಅವರು ಆರೋಪಿಸಿರುವುದು ದೇಶಾದ್ಯಂತ ಸುದ್ದಿಯಾಗಿದೆ. ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಸಹಾಯಕ ವಿಭವ್‌ ಕುಮಾರ್‌ ಅವರೇ ಹಲ್ಲೆ ಮಾಡಿದ್ದಾರೆ ಎಂದು ಸ್ವಾತಿ ಮಾಲಿವಾಲ್‌ ಅವರು ಆರೋಪಿಸಿ ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ. ಆದರೆ, ಈ ಪ್ರಕರಣಕ್ಕೀಗ ಟ್ವಿಸ್ಟ್‌ ಸಿಕ್ಕಿದ್ದು, ಸ್ವಾತಿ ಮಾಲಿವಾಲ್‌ ಆರೋಪ ಸುಳ್ಳು ಎಂದು ಆಪ್‌ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ದೆಹಲಿ ಸಿಎಂ ಕಚೇರಿಯಲ್ಲಿ ಗಲಾಟೆ ನಡೆದಿದೆ ಎನ್ನಲಾದ ವೀಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ.

  • ಮೋದಿ, ಅವರ ಸಚಿವರು ವಿಮಾನಗಳಲ್ಲಿ ಫ್ರೀಯಾಗಿ ಓಡಾಡ್ತಾರೆ.. ಮಹಿಳೆ ಯಾಕೆ ಫ್ರೀ ಬಸ್‌ ಪ್ರಯಾಣ ಮಾಡಬಾರದು: ಕೇಜ್ರಿವಾಲ್‌ ಪ್ರಶ್ನೆ

    ಮೋದಿ, ಅವರ ಸಚಿವರು ವಿಮಾನಗಳಲ್ಲಿ ಫ್ರೀಯಾಗಿ ಓಡಾಡ್ತಾರೆ.. ಮಹಿಳೆ ಯಾಕೆ ಫ್ರೀ ಬಸ್‌ ಪ್ರಯಾಣ ಮಾಡಬಾರದು: ಕೇಜ್ರಿವಾಲ್‌ ಪ್ರಶ್ನೆ

    – ಮಹಿಳೆಯರ ಉಚಿತ ಬಸ್‌ ಪ್ರಯಾಣದ ಬಗ್ಗೆ ಮೋದಿ ಹೇಳಿಕೆಗೆ ದೆಹಲಿ ಸಿಎಂ ಟಾಂಗ್‌

    ನವದೆಹಲಿ: ಪ್ರಧಾನಿ ಮೋದಿ (Narendra Modi) ಹಾಗೂ ಅವರ ಸಚಿವರು ವಿಮಾನಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾದರೆ, ದೇಶಾದ್ಯಂತ ಮಹಿಳೆಯರು ಯಾಕೆ ಉಚಿತ ಬಸ್‌ ಪ್ರಯಾಣ ಮಾಡಬಾರದು ಎಂದು ನವದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಪ್ರಶ್ನಿಸಿದ್ದಾರೆ.

    ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್‌ ಹೊರಗಿದ್ದಾರೆ. ಉಚಿತ ಬಸ್‌ ಪ್ರಯಾಣ ಕುರಿತ ಮೋದಿ ಹೇಳಿಕೆಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಕೇಜ್ರಿವಾಲ್‌ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ ಕೇಸ್‌ – ದೇಶದಲ್ಲೇ ಮೊದಲ ಬಾರಿಗೆ `ಎಎಪಿ’ ಅನ್ನು ಆರೋಪಿ ಎಂದು ಹೆಸರಿಸಿದ ಇಡಿ!

    ದೆಹಲಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವುದನ್ನು ಪ್ರಧಾನಿ ಬಹಿರಂಗವಾಗಿ ವಿರೋಧಿಸುತ್ತಿದ್ದಾರೆ. ದೇಶಾದ್ಯಂತ ಉಚಿತ ಬಸ್ ಪ್ರಯಾಣವನ್ನು ಪರಿಚಯಿಸಬೇಕೆಂದು ಮಹಿಳೆಯರು ಬಯಸುತ್ತಾರೆ. ಆದರೆ ಪ್ರಧಾನಿ ಮತ್ತು ಅವರ ಮಂತ್ರಿಗಳು ಉಚಿತ ವಿಮಾನ ಪ್ರಯಾಣವನ್ನು ಪಡೆಯಬಹುದಾದರೆ, ದೇಶಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಏಕೆ ಪಡೆಯಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಪ್ರಧಾನಿ ಮೋದಿಯವರ ಸಂದರ್ಶನದ ವೀಡಿಯೋ ಕ್ಲಿಪ್ ಅನ್ನು ನವದೆಹಲಿ ಸಿಎಂ ಹಂಚಿಕೊಂಡಿದ್ದಾರೆ. ಉಚಿತ ಬಸ್ ಪ್ರಯಾಣ ಕಲ್ಪಿಸುವುದು ಆರ್ಥಿಕವಾಗಿ ಲಾಭದಾಯಕವಲ್ಲ ಎಂದು ಹೇಳಲಾಗಿದೆ. ಇದನ್ನೂ ಓದಿ: ನನ್ನ ಮಗನನ್ನು ನಿಮ್ಮ ಕೈಗೆ ನೀಡುತ್ತಿದ್ದೇನೆ: ರಾಹುಲ್‌ ಗೆಲುವಿಗೆ ಜನರಲ್ಲಿ ಸೋನಿಯಾ ಗಾಂಧಿ ಮನವಿ

    ಮೆಟ್ರೋ ಸೇವೆಯನ್ನು ಹೊಂದಿರುವ ನಗರದಲ್ಲಿ ಸರ್ಕಾರದ ಉಚಿತ ಬಸ್ ಪ್ರಯಾಣ ಯೋಜನೆ ಚುನಾವಣೆಗಳನ್ನು ಗೆಲ್ಲುವ ಪ್ರಯತ್ನವಾಗಿದೆ. ಅದು ಮೆಟ್ರೋ ಸೇವೆಯನ್ನು ಪಡೆಯುವ 50% ಪ್ರಯಾಣಿಕರನ್ನು ತನ್ನತ್ತ ತೆಗೆದುಕೊಳ್ಳುತ್ತದೆ ಎಂದು ವೀಡಿಯೋದಲ್ಲಿ ಪ್ರಧಾನಿ ಮೋದಿ ವಿವರಿಸಿದ್ದಾರೆ.

  • ದೆಹಲಿ ಅಬಕಾರಿ ನೀತಿ ಹಗರಣ ಕೇಸ್‌ – ದೇಶದಲ್ಲೇ ಮೊದಲ ಬಾರಿಗೆ `ಎಎಪಿ’ ಅನ್ನು ಆರೋಪಿ ಎಂದು ಹೆಸರಿಸಿದ ಇಡಿ!

    ದೆಹಲಿ ಅಬಕಾರಿ ನೀತಿ ಹಗರಣ ಕೇಸ್‌ – ದೇಶದಲ್ಲೇ ಮೊದಲ ಬಾರಿಗೆ `ಎಎಪಿ’ ಅನ್ನು ಆರೋಪಿ ಎಂದು ಹೆಸರಿಸಿದ ಇಡಿ!

    – ದೆಹಲಿ ವಿಶೇಷ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

    ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ಜಾರಿ ನಿರ್ದೇಶನಾಲಯ (ED) ಪ್ರಕರಣವೊಂದರಲ್ಲಿ ರಾಜಕೀಯ ಪಕ್ಷವನ್ನು ಆರೋಪಿ ಎಂದು ಹೆಸರಿಸಿದೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಇಡಿ ಚಾರ್ಜ್‌ ಶೀಟ್‌ ಸಲ್ಲಿಸಿದ್ದು, ಆಮ್‌ ಆದ್ಮಿ ಪಕ್ಷವನ್ನು ಆರೋಪಿ ಎಂದು ಹೆಸರಿಸಿದೆ.

    ಜಾರಿ ನಿರ್ದೇಶನಾಲಯವು ದೆಹಲಿಯ ವಿಶೇಷ ಕೋರ್ಟ್‌ಗೆ ಪೂರಕ ದಾಖಲೆಗಳೊಂದಿಗೆ ಚಾರ್ಜ್‌ಶೀಟ್‌ ಸಲ್ಲಿಸಿದೆ. ಒಟ್ಟಾರೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ 8ನೇ ಚಾರ್ಜ್‌ಶೀಟ್‌ ಇದಾಗಿದ್ದು, ಒಟ್ಟು 18 ಮಂದಿಯನ್ನ ಬಂಧಿಸಲಾಗಿದೆ. ಎಎಪಿ ನಾಯಕರು, ಇತರ ವ್ಯಕ್ತಿಗಳೊಂದಿಗೆ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಇಡಿ ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

    ಮದ್ಯ ಮಾರಾಟಗಾರರರಿಗೆ ಅನುಕೂಲವಾಗಲಿ ಎಂಬ ದಿಸೆಯಲ್ಲಿ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ನೀತಿ ರೂಪಿಸಿದ್ದಾರೆ. ದಕ್ಷಿಣ ಭಾರತದ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದಾರೆ. ಲಾಭದ ಸ್ವಲ್ಪ ಮೊತ್ತವನ್ನು ಎಎಪಿಗೆ ನೀಡಲಾಗಿದೆ. ಆ ಮೊತ್ತವನ್ನು ಗೋವಾ ಚುನಾವಣೆಗೂ ಬಳಸಲಾಗಿದೆ. ಅಲ್ಲದೇ ಈ ಪ್ರಕರಣದ ಮಾತುಕತೆ ನಡೆಸಲು ಕೇಜ್ರಿವಾಲ್ ಅವರು ಸೆವೆನ್ ಸ್ಟಾರ್ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು ಎಂಬುದಕ್ಕೆ ನಮ್ಮ ಬಳಿ ಪೂರಕ ದಾಖಲೆಗಳಿವೆ. ಅವರು ತಂಗಿದ್ದ ಹೋಟೆಲ್‌ ಬಿಲ್‌ ಅನ್ನು ಪ್ರಕರಣದ ಆರೋಪಿಯೊಬ್ಬರು ಭಾಗಶಃ ಪಾವತಿಸಿದ್ದಾರೆ ಎಂಬುದಕ್ಕೂ ಪುರಾವೆಗಳಿವೆ ಎಂಬ ಮಾಹಿತಿಯನ್ನ ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿದೆ.

    ಮತ್ತೊಂದೆಡೆ, ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮನವಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ. ನ್ಯಾ. ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ತೀರ್ಪನ್ನು ಕಾಯ್ದಿರಿಸಿದ್ದರೂ, ಕಕ್ಷಿದಾರರ ವಾದಗಳಿಗೆ ಯಾವುದೇ ಧಕ್ಕೆಯಾಗದಂತೆ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಕೇಜ್ರಿವಾಲ್ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದೆ.

    ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21 ರಂದು ಬಂಧಿಸಲಾಗಿತ್ತು. ಸದ್ಯ ಜೂ.1 ರ ವರೆಗೆ ಅವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಮೇ 25 ರಂದು ದೆಹಲಿಯ 7 ಸ್ಥಾನಗಳಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಮತ್ತು ಇಂಡಿಯಾ ಬ್ಲಾಕ್‌ ಪರ ಕೇಜ್ರಿವಾಲ್‌ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

  • ಕೇಜ್ರಿವಾಲ್ ನಾಚಿಕೆಯಿಲ್ಲದೆ ಆರೋಪಿಯೊಂದಿಗೆ ತಿರುಗಾಡುತ್ತಿದ್ದಾರೆ: ಮಲಿವಾಲ್‌ ಹಲ್ಲೆಗೆ ಸೀತಾರಾಮನ್ ಕಿಡಿ

    ಕೇಜ್ರಿವಾಲ್ ನಾಚಿಕೆಯಿಲ್ಲದೆ ಆರೋಪಿಯೊಂದಿಗೆ ತಿರುಗಾಡುತ್ತಿದ್ದಾರೆ: ಮಲಿವಾಲ್‌ ಹಲ್ಲೆಗೆ ಸೀತಾರಾಮನ್ ಕಿಡಿ

    ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Malival) ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಗುಡುಗಿದ್ದಾರೆ.

    ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಅವರೊಂದಿಗೆ ತಿರುಗಾಡುತ್ತಿದ್ದಾರೆ ಎಂದು ಕೇಜ್ರಿವಾಲ್‌ (Arvind Kejriwal) ವಿರುದ್ಧ ನಿರ್ಮಲಾ ಕಿಡಿಕಾರಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್, ಎಎಪಿ ಸಂಚಾಲಕರು ಈ ವಿಷಯದ ಬಗ್ಗೆ ಮಾತನಾಡಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂದ್ಕೊಂಡಿದ್ದಾನೆ: ಸ್ವಾತಿ ಮಲಿವಾಲ್‌ ಕಿಡಿ

    ನವದೆಹಲಿ ಲೋಕಸಭಾ ಅಭ್ಯರ್ಥಿ ಸೋಮನಾಥ್‌ ಭಾರ್ತಿ ಸೇರಿದಂತೆ ಹಲವು ಎಎಪಿ ನಾಯಕರ ವಿರುದ್ಧ ಮಹಿಳೆಯರ ಮೇಲಿನ ಹಲ್ಲೆಯ ಆರೋಪಗಳಿವೆ. ಇದು ಮಹಿಳಾ ವಿರೋಧ ಪಕ್ಷ (ಎಎಪಿ) ಎಂದು ಸೀತಾರಾಮನ್‌ ವಾಗ್ದಾಳಿ ನಡೆಸಿದ್ದಾರೆ.

    ಎಎಪಿ ಸಂಸದ ಸಂಜಯ್ ಸಿಂಗ್, ಮಲಿವಾಲ್ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಒಂದು ದಿನದ ನಂತರ ಆರೋಪಿ ಬಿಭವ್ ಕುಮಾರ್ ಅವರು ಲಕ್ನೋದಲ್ಲಿ ಕೇಜ್ರಿವಾಲ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಕೇಜ್ರಿವಾಲ್ ಅವರು ತಮ್ಮ ಪಕ್ಷದ ಮಹಿಳಾ ಸಂಸದರ (ರಾಜ್ಯಸಭೆ) ಮೇಲಿನ ದಾಳಿಯ ಬಗ್ಗೆ ಒಂದು ಮಾತನ್ನೂ ಆಡದಿರುವುದು ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

    ಮುಖ್ಯಮಂತ್ರಿ ಕೇಜ್ರಿವಾಲ್‌ ಅವರ ನಿವಾಸದಲ್ಲಿ ಅವರ ಆಪ್ತ ಸಹಾಯಕರೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್‌ ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಬಿಭವ್‌ ಕುಮಾರ್ ಅವರನ್ನು ಆರೋಪಿ ಎಂದು ಹೆಸರಿಸಿದ್ದಾರೆ.

  • ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂದ್ಕೊಂಡಿದ್ದಾನೆ: ಸ್ವಾತಿ ಮಲಿವಾಲ್‌ ಕಿಡಿ

    ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂದ್ಕೊಂಡಿದ್ದಾನೆ: ಸ್ವಾತಿ ಮಲಿವಾಲ್‌ ಕಿಡಿ

    ನವದೆಹಲಿ: ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂತ ಭಾವಿಸಿದ್ದಾನೆ. ಕೊಠಡಿಯ ಸಿಸಿಟಿವಿಯನ್ನು (CCTV) ಪರಿಶೀಲಿಸಿದರೆ ಸತ್ಯಾಂಶ ಪ್ರಕಟವಾಗಲಿದೆ ಎಂದು ಆಪ್‌ (AAP) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಕಿಡಿಕಾರಿದ್ದಾರೆ.

    ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಬಿಭವ್ ಕುಮಾರ್ ವಿರುದ್ಧ ಸ್ವಾತಿ ಮಲಿವಾಲ್‌ ದೂರು ನೀಡಿದ್ದು ಎಫ್‌ಐಆರ್‌ (FIR) ದಾಖಲಾಗಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

    ಪೋಸ್ಟ್‌ನಲ್ಲಿ ಏನಿದೆ?
    ಪ್ರತಿ ಬಾರಿಯಂತೆ ಈ ಬಾರಿಯೂ ಈ ರಾಜಕೀಯ ಹಿಟ್‌ಮ್ಯಾನ್ ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾನೆ. ತನ್ನ ಜನರ ಮೂಲಕ ಸರಿಯಾದ ವಿವರ ಇಲ್ಲದ ವೀಡಿಯೋವನ್ನು ಟ್ವೀಟ್‌ ಮಾಡಿ ತಪ್ಪು ಮಾಡಿಯೂ ತಾನು ಪಾರಾಗಬಹುದು ಎಂದು ಭಾವಿಸಿದ್ದಾನೆ.

    ಮನೆಯಲ್ಲಿ ಥಳಿಸುವ ವಿಡಿಯೋವನ್ನು ಯಾರಾದರೂ ಮಾಡುತ್ತಾರಾ? ಕೊಠಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗಲೇ ಸತ್ಯಾಂಶ ಎಲ್ಲರಿಗೂ ಬಹಿರಂಗವಾಗುವುದು. ನೀವು ಯಾವ ಮಟ್ಟಕ್ಕೆ ಇಳಿಯುತ್ತಿದ್ದೀರಿ. ದೇವರು ಎಲ್ಲವನ್ನೂ ನೋಡುತ್ತಿದ್ದಾನೆ. ಮುಂದೊಂದು ದಿನ ಪ್ರತಿಯೊಬ್ಬರ ಸತ್ಯವೂ ಜಗತ್ತಿನ ಮುಂದೆ ಅನಾವರಣವಾಗಲಿದೆ.