Tag: Arvind Kejriwal

  • ಕೇಜ್ರಿವಾಲ್‍ರನ್ನು ಭಯೋತ್ಪಾದಕನಂತೆ ನಡೆಸಿಕೊಳ್ಳಲಾಗುತ್ತಿದೆ: ಪಂಜಾಬ್ ಸಿಎಂ

    ಕೇಜ್ರಿವಾಲ್‍ರನ್ನು ಭಯೋತ್ಪಾದಕನಂತೆ ನಡೆಸಿಕೊಳ್ಳಲಾಗುತ್ತಿದೆ: ಪಂಜಾಬ್ ಸಿಎಂ

    ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಭಯೋತ್ಪಾದಕನಂತೆ ನಡೆಸಿಕೊಳ್ಳಲಾಗುತ್ತಿದ್ದು, ಅಗತ್ಯ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಆರೋಪಿಸಿದ್ದಾರೆ.

    ದೆಹಲಿಯ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ (BJP) ಈ ಚುನಾವಣೆಯಲ್ಲಿ ಆಪ್‍ನ (AAP) ತನ್ನ ರಾಜಕೀಯ ಪ್ರತಿಸ್ಪರ್ಧಿಯನ್ನು ಇರದಂತೆ ನೋಡಿಕೊಳ್ಳುತ್ತಿದೆ. ಅವರನ್ನು ಉಗ್ರನಂತೆ ಬಂಧಿಸಲಾಗಿದೆ. ಅವರು ಮಾಡಿದ ತಪ್ಪೇನು ಎಂದು ಮಾನ್ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ

    ಜೈಲಿನ ಒಳಗಿನ ಗಾಜಿನ ಕೋಣೆಯಲ್ಲಿ ಕೇಜ್ರಿವಾಲ್ ಅವರನ್ನು ಮಾನ್ ಭೇಟಿಯಾದರು. ಬಳಿಕ ಇಬ್ಬರು ವಿರೋಧ ಪಕ್ಷದ ನಾಯಕರು ದೂರವಾಣಿ ಸಂಪರ್ಕದ ಮೂಲಕ 30 ನಿಮಿಷಗಳ ಕಾಲ ಮಾತನಾಡಿದರು. ಅವರನ್ನು ನೋಡಿ ನಾನು ಭಾವುಕನಾದೆ ಎಂದು ಮಾನ್ ಹೇಳಿದ್ದಾರೆ.

    ಜೈಲಿನೊಳಗೂ ಕೇಜ್ರಿವಾಲ್ ದೆಹಲಿಯ ಜನರ ಬಗ್ಗೆ ಕಾಳಜಿ ವಹಿಸಿದ್ದಾರೆ. ಮುಂದಿನ ವಾರ ಇಬ್ಬರು ಸಚಿವರನ್ನು ತಿಹಾರ್ ಜೈಲಿಗೆ ಕರೆಸಿಕೊಂಡು ಆಡಳಿತದ ಕುರಿತು ಚರ್ಚಿಸಲು ಕೇಜ್ರಿವಾಲ್ ಯೋಜಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಭೇಟಿಯ ಬಳಿಕ ಮಾನ್ ಅವರು, ತಮ್ಮ ಎಕ್ಸ್ ಖಾತೆಯಲ್ಲಿ ಬಿಜೆಪಿಯ ರಾಜಕೀಯ ತಂಡ – ಇಡಿ, ಕೇಜ್ರಿವಾಲ್ ಅವರ ಚಿಂತನೆಯನ್ನು ಬಂಧಿಸಲು ಸಾಧ್ಯವಿಲ್ಲ. ಎಎಪಿ ಮಾತ್ರ ಬಿಜೆಪಿಯನ್ನು ತಡೆಯಬಹುದು ಎಂದು ಬರೆದುಕೊಂಡಿದ್ದಾರೆ.

    ಮದ್ಯ ನೀತಿ ಹಗರಣಕ್ಕೆ (Liquor policy scam) ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿಯನ್ನು ಕಳೆದ ತಿಂಗಳು ಜಾರಿ ನಿರ್ದೇಶನಾಲಯ ಬಂಧಿಸಿದೆ. ಒಂದು ವಾರಕ್ಕೂ ಹೆಚ್ಚು ಕಾಲ ಇಡಿ ತನ್ನ ಕಸ್ಟಡಿಯಲ್ಲಿ ವಿಚಾರಣೆ ನಡೆಸಿದ ನಂತರ ಜೈಲಿಗೆ ಕಳುಹಿಸಲಾಯಿತು. ಅವರ ಬಂಧನವನ್ನು ಏಪ್ರಿಲ್ 23ಕ್ಕೆ ವಿಸ್ತರಿಸಲಾಗಿದೆ. ಅವರ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏ.29ಕ್ಕೆ ಮುಂದೂಡಿದೆ. ಇದನ್ನೂ ಓದಿ: ಭಾರತೀಯ ಸಿಬ್ಬಂದಿ ಭೇಟಿಗೆ ಅಧಿಕಾರಿಗಳಿಗೆ ಇರಾನ್‌ ಅವಕಾಶ

  • ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ

    ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ

    ನವದೆಹಲಿ: ತಮ್ಮ ಬಂಧನವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಏ.29ಕ್ಕೆ ಮುಂದೂಡಿದೆ.

    ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯಕ್ಕೆ (ED) ನೋಟಿಸ್ ನೀಡಿದ್ದು ಏಪ್ರಿಲ್‌ 24 ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ.

    ದೆಹಲಿ ಮದ್ಯ ನೀತಿಯಲ್ಲಿ (Delhi Liquor Scam) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಬಂಧಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇಡಿ ಬಂಧನ‌ ಕಾನೂನು ವ್ಯಾಪ್ತಿಯಲ್ಲಿದೆ. ಪ್ರಕರಣವನ್ನು ರಾಜಕೀಯಗೊಳಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜ ವಜಾ ಮಾಡಿತ್ತು. ಇದನ್ನೂ ಓದಿ: ಮಿಸ್ಟರ್ ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ – ಏಕವಚನದಲ್ಲೇ ಹರಿಹಾಯ್ದ ಡಿಕೆಶಿ

    ಹೈಕೋರ್ಟ್‌ನಲ್ಲಿ ಅರ್ಜಿ ವಜಾ ಆದ ಹಿನ್ನಲೆ ಕೇಜ್ರಿವಾಲ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಲು ನಿರಾಕರಿಸಿತು ಮತ್ತು ಇಡಿಗೆ ನೋಟಿಸ್ ಜಾರಿ ಮಾಡಿ ಸುದೀರ್ಘ ವಿಚಾರಣೆ ನಡೆಸುವುದಾಗಿ ಹೇಳಿತು.

    ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ, ಶುಕ್ರವಾರ ಸಣ್ಣ ದಿನಾಂಕವನ್ನು ಕೋರುತ್ತಿದ್ದೇನೆ ಈ ಪ್ರಕರಣದಲ್ಲಿ ಆಯ್ದ ಸೋರಿಕೆಗಳಿವೆ ಎಂದು ಹೇಳಿದರು. ಇದಕ್ಕೆ ಜಸ್ಟಿಸ್ ಖನ್ನಾ ನಿಮಗೆ ಒಂದು ಸಣ್ಣ ದಿನಾಂಕವನ್ನು ನೀಡುತ್ತೇನೆ ಆದರೆ ನೀವು ಸೂಚಿಸಿದ ದಿನಾಂಕ ಸಾಧ್ಯವಿಲ್ಲ ಎಂದು ಉತ್ತರಿಸಿದರು.

    ಬಳಿಕ ಕೇಜ್ರಿವಾಲ್ ಅವರನ್ನ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿ (ಇಸಿಐಆರ್) ಅಥವಾ ಚಾರ್ಜ್‌ಶೀಟ್‌ನಲ್ಲಿ ಬಂಧಿಸಿಲ್. ಬದಲಿಗೆ ಇತರೆ ಆರೋಪಿಗಳ 15 ಹೇಳಿಕೆಗಳ ಮೇಲೆ ಬಂಧಿಸಿದೆ. ಚುನಾವಣಾ ಪ್ರಚಾರದಿಂದ ತಪ್ಪಿಸಲು ಬಂಧನ ಮಾಡಲಾಗಿದೆ ಎಂದು ಸಿಂಘ್ವಿ ಹೇಳಿದರು.

    ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಏ. 23 ವರೆಗೂ ರೋಸ್ ಅವೆನ್ಯೂ ಕೋರ್ಟ್ ವಿಸ್ತರಿಸಿದೆ.

     

  • ಕೇಜ್ರಿವಾಲ್ ನೇರ ಭೇಟಿಗೆ ಪತ್ನಿ ಸುನಿತಾಗೆ ಅನುಮತಿ ನಿರಾಕರಿಸಿದೆ: ತಿಹಾರ್ ಅಧಿಕಾರಿಗಳ ವಿರುದ್ಧ ಆಪ್ ಆರೋಪ

    ಕೇಜ್ರಿವಾಲ್ ನೇರ ಭೇಟಿಗೆ ಪತ್ನಿ ಸುನಿತಾಗೆ ಅನುಮತಿ ನಿರಾಕರಿಸಿದೆ: ತಿಹಾರ್ ಅಧಿಕಾರಿಗಳ ವಿರುದ್ಧ ಆಪ್ ಆರೋಪ

    ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ (Liquor Policy Case) ಬಂಧನಕ್ಕೊಳಗಾಗಿ ಸದ್ಯ ನ್ಯಾಯಂಗ ಬಂಧನದಡಿ ತಿಹಾರ್ ಜೈಲಿನಲ್ಲಿರುವ (Tihar Jail) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ನೇರ ಭೇಟಿ ಮಾಡಲು ಪತ್ನಿ ಸುನೀತಾ (Sunita) ಅವರಿಗೆ ಅನುಮತಿ ನಿರಾಕರಿಸಲಾಗಿದೆ. ಕೇವಲ ಕಿಟಕಿಯ ಮೂಲಕ ಭೇಟಿಗೆ ಅವಕಾಶ ನೀಡಲಾಗಿದೆ. ಇದು ಅಮಾನವೀಯ ನಡೆ ಎಂದು ಆಮ್ ಆದ್ಮಿ ಪಕ್ಷದ (AAP) ನಾಯಕ ಸಂಜಯ್ ಸಿಂಗ್ ಶನಿವಾರ ಆರೋಪಿಸಿದ್ದಾರೆ.

    ಕಳೆದ ಅಕ್ಟೋಬರ್‌ನಲ್ಲಿ ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ತಿಹಾರ್‌ನಲ್ಲಿ ಆರು ತಿಂಗಳು ಕಳೆದು ಈ ತಿಂಗಳ ಆರಂಭದಲ್ಲಿ ಜಾಮೀನು ಪಡೆದ ಸಂಜಯ್ ಸಿಂಗ್ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಅಪರಾಧಿಗಳು ಕುಟುಂಬಸ್ಥರನ್ನು ಭೇಟಿಯಾಗಲು ಜೈಲಿನಲ್ಲಿ ಅನುಮತಿ ಇದೆ. ಆದರೆ ಕೇಜ್ರಿವಾಲ್ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ – ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

    ಅರವಿಂದ್ ಕೇಜ್ರಿವಾಲ್ ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದವರು ತಮ್ಮ ಪತ್ನಿಯನ್ನು ನಡುವೆ ಗಾಜಿನಿಂದ ಕಿಟಕಿಯ ಮೂಲಕ ಭೇಟಿಯಾಗುವಂತೆ ಮಾಡುತ್ತಿದ್ದಾರೆ. ಇಂತಹ ಅಮಾನವೀಯ ವರ್ತನೆ ಏಕೆ? ಎಂದು ಸಂಜಯ್ ಸಿಂಗ್ ಪ್ರಶ್ನಿಸಿದರು. ನಮ್ಮನ್ನು ಅವಮಾನಿಸಲು ಮತ್ತು ನೈತಿಕತೆ ಸ್ಥೈರ್ಯ ಕುಗ್ಗಿಸಲು ಇದನ್ನು ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಬೇಕರಿಯಲ್ಲಿ ಗುಲಾಬ್ ಜಾಮೂನು ಖರೀದಿಸಿದ ರಾಹುಲ್ ಗಾಂಧಿ

    ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರ ಒತ್ತಾಯದ ಮೇರೆಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಜೈಲಿನಲ್ಲಿ ಅವರು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಂಜಾಬ್ ಸಿಎಂ ಭಗವಂತ್ ಮಾನ್ ನಡುವಿನ ಸಭೆಯನ್ನು ಕೊನೆಯ ಕ್ಷಣದಲ್ಲಿ ಅಧಿಕಾರಿಗಳು ರದ್ದುಗೊಳಿಸಿದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: 6 ವರ್ಷಗಳ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

    ಸಹಾರಾ ಇಂಡಿಯಾದ ದಿವಂಗತ ಸಂಸ್ಥಾಪಕ ಮತ್ತು ಅಧ್ಯಕ್ಷ ಸುಬ್ರತಾ ರಾಯ್ ಅವರು ತಿಹಾರ್‌ನಲ್ಲಿ ಇಂಟರ್‌ನೆಟ್, ಫೋನ್ ಮತ್ತು ಕಚೇರಿ ಸೌಲಭ್ಯಗಳನ್ನು ಹೊಂದಿದ್ದರು. ಚಂದ್ರ ಬ್ರದರ್ಸ್ಗೆ ಜೈಲು ಆವರಣದಲ್ಲಿ ನಿಯಮಿತ ಸಭೆಗಳನ್ನು ನಡೆಸಲು ಮತ್ತು ಫೈಲ್‌ಗಳಿಗೆ ಸಹಿ ಹಾಕಲು ಅವಕಾಶವಿದೆ. ಆದರೆ ಅರವಿಂದ್ ಕೇಜ್ರಿವಾಲ್ ಬಗ್ಗೆ ನೀವು ಯಾಕೆ ಹೆದರುತ್ತೀರಿ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್‌ ತೊರೆದ 400 ಕಾರ್ಯಕರ್ತರು

  • ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ – ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

    ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ – ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

    ನವದೆಹಲಿ: ಇಡಿ ಬಂಧನ ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

    ನ್ಯಾ. ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠದ ಮುಂದೆ ಈ ಅರ್ಜಿಯನ್ನು ಪಟ್ಟಿ ಮಾಡಲಾಗಿದೆ. ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿ ವಿಚಾರಣೆ ಬಳಿಕ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ.

    ಈ ಮೊದಲು ತಮ್ಮ ಬಂಧನವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸ್ವರಣಾ ಕಾಂತ ಶರ್ಮಾ, ಇಡಿ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾ ಮಾಡಿದ್ದರು. ಇದಾದ ಒಂದು ದಿನದ ನಂತರ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೆ ತಮ್ಮ ಮೇಲ್ಮನವಿಯನ್ನು ಆದಷ್ಟು ಬೇಗ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾರ್ಚ್ 21 ರ ರಾತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಮಾರ್ಚ್ 22 ರಂದು ವಿಚಾರಣಾ ನ್ಯಾಯಾಲಯವು ಅವರನ್ನು ಆರು ದಿನಗಳ ಇಡಿ ಕಸ್ಟಡಿಗೆ ನೀಡಿತು. ಅದನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಯಿತು. ಏಪ್ರಿಲ್ 1 ರಂದು ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

  • ದೆಹಲಿ ಸರ್ಕಾರ ಉರುಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಸಂಚು – ಆಪ್‌ ಸಚಿವೆ ಆರೋಪ

    ದೆಹಲಿ ಸರ್ಕಾರ ಉರುಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಸಂಚು – ಆಪ್‌ ಸಚಿವೆ ಆರೋಪ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಸುತ್ತಿರುವ ಬಿಜಪಿ, ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿರುವುದಾಗಿ ದೆಹಲಿ ಸಚಿವೆ ಅತಿಶಿ (Atishi) ಆರೋಪಿಸಿದ್ದಾರೆ.

    ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ (Liquor Policy Scam) ಬಂಧಿಸಲಾಗಿದೆ. ಅವರ ವಿರುದ್ಧ ಅಪರಾಧ ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ. ಆದ್ದರಿಂದ ದೆಹಲಿಯ ಚುನಾಯಿತ ಸರ್ಕಾರ ಉರುಳಿಸಲು ಸಂಚು ನಡೆಯುತ್ತಿದೆ. ಈ ಹಿಂದೆ ನಡೆದ ಕೆಲವು ಬೆಳವಣಿಗೆಗಳನ್ನು ನೋಡಿದಾಗ ಪೂರ್ವನಿಯೋಜಿತವಾಗಿಯೇ ಪ್ಲ್ಯಾನ್‌ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತಿದೆ ಎಂದು ಅತಿಶಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸ್ವತಂತ್ರ ಭಾರತದ 2ನೇ ಲೋಕಸಭಾ ಚುನಾವಣೆ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಜೆಪಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಂಚು ರೂಪಿಸುತ್ತಿದೆ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತಿದೆ. ಅದರ ಸೂಚನೆಗಳು ನಮಗೆ ಸಿಕ್ಕಿವೆ. ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ದೆಹಲಿಯಲ್ಲಿ ಯಾವುದೇ ಅಧಿಕಾರಿಯ ನೇಮಕಾತಿ, ವರ್ಗಾವಣೆ ಆಗಿಲ್ಲ. ಅಧಿಕಾರಿಗಳು ಸರ್ಕಾರದ ಸಭೆಗಳಿಗೆ ಬರುತ್ತಿಲ್ಲ. ಕಳೆದ ವಾರ, ಲೆಫ್ಟಿನೆಂಟ್ ಗವರ್ನರ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಆಧಾರರಹಿತ ಪತ್ರ ಬರೆದು, ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯನ್ನೂ ವಜಾ ಮಾಡಿಸಿದ್ದಾರೆ. ಇವೆಲ್ಲವೂ ದೆಹಲಿ ಸರ್ಕಾರವನ್ನು ಮುಗಿಸಲು ಮಾಡಿರುವ ಸಂಚು ಎಂದು ಅತಿಶಿ ಆರೋಪಿಸಿದ್ದಾರೆ.

    ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರುವುದು ಕಾನೂನು ಬಾಹಿರ, ಅಸಾಂವಿಧಾನಿಕ ಮತ್ತು ಜನರ ತೀರ್ಪಿಗೆ ವಿರುದ್ಧವಾದದ್ದು ಎಂದು ಬಿಜೆಪಿಯನ್ನು ಎಚ್ಚರಿಸಲು ಬಯಸುತ್ತೇನೆ. ದೆಹಲಿಯ ಜನರು ಅರವಿಂದ್‌ ಕೇಜ್ರವಾಲ್ ಮತ್ತು ಆಪ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಮನಗರಲ್ಲಿ 30 ಕೆಜಿಗೂ ಅಧಿಕ ಪ್ರಮಾಣದ ಚಿನ್ನ; ದಾವಣಗೆರೆಯಲ್ಲಿ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ!

  • ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಕೇಜ್ರಿವಾಲ್ ಮೇಲ್ಮನವಿ ಸಲ್ಲಿಕೆ

    ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಕೇಜ್ರಿವಾಲ್ ಮೇಲ್ಮನವಿ ಸಲ್ಲಿಕೆ

    ನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸುಪ್ರೀಂಕೋರ್ಟ್‌‌ಗೆ (Supreme Court) ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರ ಹೈಕೋರ್ಟ್ ನಲ್ಲಿ ತಮ್ಮ ಅರ್ಜಿ ವಜಾ ಆದ ಹಿನ್ನೆಲೆ ಸುಪ್ರೀಂಕೋರ್ಟ್ ನಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಲಾಗಿದೆ.

    ಅರ್ಜಿ ಸಲ್ಲಿಕೆ ಬೆನ್ನಲ್ಲೇ ದೆಹಲಿ ಹೈಕೋರ್ಟ್ (High Court) ತೀರ್ಪಿನ ವಿರುದ್ಧ ಕೇಜ್ರಿವಾಲ್ ಅವರ ಮನವಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಮನವಿ ಮಾಡಿದರು. ಬಂಧನವು ಅವಲಂಬಿತ ದಾಖಲೆಯನ್ನು ಆಧರಿಸಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಮಾಹಿತಿಯನ್ನು ಇಮೇಲ್ ಕಳುಹಿಸಿ ಪರಿಶೀಲಿಸಲಾಗುವುದು ಎಂದು ಸೂಚಿಸಿದರು.

    ಹಗರಣದಲ್ಲಿ ಕೇಜ್ರಿವಾಲ್ ಶಾಮೀಲಾಗಿರುವುದನ್ನು ಸಾಬೀತುಪಡಿಸಲು ಪುರಾವೆಗಳಿವೆ ಎಂದು ಇಡಿ ಹೇಳಿದೆ. ಕಿಕ್‌ಬ್ಯಾಕ್ ಆಗಿ ಪಡೆದ ಹಣವನ್ನು 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರಚಾರಕ್ಕಾಗಿ ಬಳಸಲಾಗಿದೆ ಎಂದು ಇದಕ್ಕೆ ಸಂಬಂಧಿಸಿದ ಲಿಂಕ್‌ಗಳು ಸಹ ಪತ್ತೆಯಾಗಿದೆ ಎಂದು ಇಡಿ ಹೇಳಿದೆ. ಹೀಗಾಗಿ ಬಂಧನ ಕಾನೂನು ಬಾಹಿರವಾಗಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.

    2 ಸಭೆಗಳಿಗೆ ಅನುಮತಿ: ಈ‌ ನಡುವೆ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ವಾರಕ್ಕೆ ಐದು ಸಭೆಗಳಿಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರೋಸ್ ಅವೆನ್ಯೂ ಕೋರ್ಟ್ ವಜಾ ಮಾಡಿದೆ. ಸದ್ಯಕ್ಕೆ ವಾರಕ್ಕೆ ಎರಡು ಸಭೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಇದನ್ನು ಐದಕ್ಕೆ ಹೆಚ್ಚಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಇಡಿ, ಒಬ್ಬ ವ್ಯಕ್ತಿ ಒಮ್ಮೆ ಜೈಲಿನಲ್ಲಿದ್ದರೆ, ಹೊರಗೆ ಅವರ ನಿಲುವು ಅಪ್ರಸ್ತುತವಾಗುತ್ತದೆ. ಅವರನ್ನು ಇತರರಂತೆ ಸಮಾನವಾಗಿ ನೋಡಬೇಕಾಗುತ್ತದೆ ಎಂದು ವಾದಿಸಿತು. ಇದಕ್ಕೆ ಒಪ್ಪಿದ ಕೋರ್ಟ್ ಹೆಚ್ಚುವರಿ ಸಭೆಗಳು ನಡೆಸಲು ಅನುಮತಿ ನೀಡಲು ನಿರಾಕರಿಸಿತು.

  • ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿ ಮೂರನೇ ಅರ್ಜಿ – ಅರ್ಜಿದಾರರನ್ನು ತರಾಟೆ ತೆಗೆದುಕೊಂಡ ಕೋರ್ಟ್; ದಂಡದ ಎಚ್ಚರಿಕೆ

    ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿ ಮೂರನೇ ಅರ್ಜಿ – ಅರ್ಜಿದಾರರನ್ನು ತರಾಟೆ ತೆಗೆದುಕೊಂಡ ಕೋರ್ಟ್; ದಂಡದ ಎಚ್ಚರಿಕೆ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲದಿಂದ ಬಂಧನಕ್ಕೊಳ್ಳಪಟ್ಟಿರುವ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ದೆಹಲಿಯ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ನಿರ್ದೇಶನಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದ ಆಮ್ ಆದ್ಮಿ ಪಕ್ಷದ (AAP) ಮಾಜಿ ಶಾಸಕರನ್ನು ದೆಹಲಿ ಹೈಕೋರ್ಟ್ (Delhi High Court) ಸೋಮವಾರ ಟೀಕಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸುಬ್ರಮೋನಿಯಂ ಪ್ರಸಾದ್ ನೇತೃತ್ವದ ಪೀಠ ಅರ್ಜಿದಾರರಾದ ಸಂದೀಪ್ ಕುಮಾರ್ ಅವರನ್ನ ತರಾಟೆಗೆ ತೆಗೆದುಕೊಂಡಿತು. ಈ ಹಿಂದೆ ಇಂತಹ ಎರಡು ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ. ಅದಾಗ್ಯೂ ನೀವು ಅರ್ಜಿ ಸಲ್ಲಿಸಿದ್ದೀರಿ. ಹೀಗಾಗಿ ನಿಮ್ಮ ಮೇಲೆ ಭಾರೀ ವೆಚ್ಚವನ್ನು ವಿಧಿಸಬೇಕು ಎಂದು ಕೋರ್ಟ್ ಹೇಳಿತು. ಇದನ್ನೂ ಓದಿ: ಕೇಂದ್ರ, ರಾಜ್ಯದ ನಡುವೆ ಸ್ಪರ್ಧೆ ಬೇಡ – ಬರ ಪರಿಹಾರ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಸಲಹೆ

    Delhi High Court

    ಪ್ರಚಾರ ಹಿತಾಸಕ್ತಿ ಅರ್ಜಿಯಲ್ಲದೆ ಬೇರೇನೂ ಅಲ್ಲ ಎಂದ ಪೀಠ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರ ಪೀಠವು ಇದೇ ರೀತಿಯ ವಿಷಯಗಳನ್ನು ಆಲಿಸಿದೆ ಮತ್ತು ತಿರಸ್ಕರಿಸಿದೆ‌. ಇದೇ ರೀತಿಯ ಅರ್ಜಿಗಳನ್ನು ಆಲಿಸಿದ್ದರಿಂದ ಅಂತಿಮವಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಈ ಅರ್ಜಿಯನ್ನು ವರ್ಗಾಯಿಸಲಾಯಿತು.

    ಮಾರ್ಚ್ 28 ರಂದು, ಸುರ್ಜಿತ್ ಸಿಂಗ್ ಯಾದವ್ ಎಂಬಾತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ತಿರಸ್ಕರಿಸಿತ್ತು. ಕಾರ್ಯಾಂಗ ಮತ್ತು ಅಧ್ಯಕ್ಷರು ಸಮಸ್ಯೆಯನ್ನು ಪರಿಶೀಲಿಸಬೇಕು ಮತ್ತು ನ್ಯಾಯಾಲಯವು ಅದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆಗ ಹೇಳಿತ್ತು. ಏಪ್ರಿಲ್ 4 ರಂದು, ಹಿಂದೂ ಸೇನೆಯ ಅಧ್ಯಕ್ಷರಾದ ವಿಷ್ಣು ಗುಪ್ತಾ ಅವರ ಮತ್ತೊಂದು ಪಿಐಎಲ್ ಅನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿತು. ಸಿಎಂ ಆಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಕರೆ ಎಂದು ಕೋರ್ಟ್ ಹೇಳಿತ್ತು. ಇದನ್ನೂ ಓದಿ: ಈ ಬಾರಿ ಅಯೋಧ್ಯೆಯಲ್ಲಿ ರಾಮನವಮಿ ಅದ್ಧೂರಿ ಆಚರಣೆ- ಸೂರ್ಯ ತಿಲಕಕ್ಕೆ ಸಿದ್ಧತೆ

  • ಕೇಜ್ರಿವಾಲ್‌ ಬಂಧನ ಖಂಡಿಸಿ ದೇಶಾದ್ಯಂತ ಎಎಪಿಯಿಂದ ಸಾಮೂಹಿಕ ಉಪವಾಸ

    ಕೇಜ್ರಿವಾಲ್‌ ಬಂಧನ ಖಂಡಿಸಿ ದೇಶಾದ್ಯಂತ ಎಎಪಿಯಿಂದ ಸಾಮೂಹಿಕ ಉಪವಾಸ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನ ಖಂಡಿಸಿ ಎಎಪಿ (Mass Fasting From AAP) ಪಕ್ಷವು ಇಂದು ದೇಶಾದ್ಯಂತ ಸಾಮೂಹಿಕ ಉಪವಾಸವನ್ನು ಕೈಗೊಂಡಿದೆ.

    ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಈ ಸತ್ಯಾಗ್ರಹದಲ್ಲಿ ಎಎಪಿ ಪಕ್ಷದ ಉನ್ನತ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಬೆಳಗ್ಗೆದ್ದು ಸೆಲ್‌ ಕ್ಲೀನ್‌, ಯೋಗ ನಂತ್ರ 2 ಪೀಸ್‌ ಬ್ರೆಡ್-‌ ಜೈಲಲ್ಲಿರೋ ಕೇಜ್ರಿವಾಲ್‌ ದಿನಚರಿ ಹೇಗಿದೆ?

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಿದಾಗಿನಿಂದ ಇಡೀ ದೇಶದಲ್ಲಿ ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಮಾರ್ಚ್ 21 ರಂದು ಬಂಧನವಾದ ದಿನದಿಂದ ಇಲ್ಲಿಯವರೆಗೆ ಜನರು ಬೀದಿಗಿಳಿದಿದ್ದಾರೆ. ಹೀಗಾಗಿ ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತ ಜನರು ಕೇಜ್ರಿವಾಲ್‌ಗಾಗಿ ಸಾಮೂಹಿಕ ಉಪವಾಸವನ್ನು ಆಚರಿಸುತ್ತಿದ್ದಾರೆ ಎಂದು ದೆಹಲಿ ಸಚಿವ ಗೋಪಾಲ್ ರೈ ಹೇಳಿದ್ದಾರೆ.

    ದೆಹಲಿಯ ಜನರು ಕೇಜ್ರಿವಾಲ್ ಅವರನ್ನು ತುಂಬಾ ಪ್ರೀತಿಸುತ್ತಾರೆ. ಅವರನ್ನು ಸಿಎಂ ಎಂದು ಪರಿಗಣಿಸದೆ ತಮ್ಮ ಮಗ ಅಥವಾ ಸಹೋದರ ಎಂದು ಪರಿಗಣಿಸುತ್ತಾರೆ. ಅರವಿಂದ್ ಕೇಜ್ರಿವಾಲ್ ಬೇಗ ಬಿಡುಗಡೆಯಾಗಲಿ ಎಂದು ಎಲ್ಲರೂ ಬಯಸುತ್ತಾರೆ. ಬಿಜೆಪಿಯ ಇಡಿ ಮತ್ತು ಸಿಬಿಐಗೆ ಮದ್ಯ ಹಗರಣದ ಒಂದು ಪೈಸೆಯೂ ತೋರಿಸಲು ಸಾಧ್ಯವಾಗಿಲ್ಲ ಎಂದು ಸಚಿವೆ ಅತಿಶಿ ಹೇಳಿದ್ದಾರೆ.

    ಮದ್ಯ ಹಗರಣಕ್ಕೆ (Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾದ ಕೇಜ್ರಿವಾಲ್‌ ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಸೋಮವಾರ ತಿಹಾರ್ ಜೈಲಿಗೆ ಸ್ಥಳಾಂತರಿಸಲಾಯಿತು.

  • ಬೆಳಗ್ಗೆದ್ದು ಸೆಲ್‌ ಕ್ಲೀನ್‌, ಯೋಗ ನಂತ್ರ 2 ಪೀಸ್‌ ಬ್ರೆಡ್-‌ ಜೈಲಲ್ಲಿರೋ ಕೇಜ್ರಿವಾಲ್‌ ದಿನಚರಿ ಹೇಗಿದೆ?

    ಬೆಳಗ್ಗೆದ್ದು ಸೆಲ್‌ ಕ್ಲೀನ್‌, ಯೋಗ ನಂತ್ರ 2 ಪೀಸ್‌ ಬ್ರೆಡ್-‌ ಜೈಲಲ್ಲಿರೋ ಕೇಜ್ರಿವಾಲ್‌ ದಿನಚರಿ ಹೇಗಿದೆ?

    ನವದೆಹಲಿ: ಮದ್ಯ ಹಗರಣಕ್ಕೆ (Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾದ ನಂತರ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ತಮ್ಮ ಸೆಲ್‌ನಲ್ಲಿ ಧ್ಯಾನ, ಪುಸ್ತಕಗಳನ್ನು ಓದುವುದು ಮತ್ತು ಯೋಗ ಮಾಡುವುದರಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಾರೆ.

    ಸೆಲ್‌ನಲ್ಲಿ ಟಿವಿ ವ್ಯವಸ್ಥೆ ಮಾಡಲಾಗಿದೆ. ಆದರೆ ಟಿವಿ ವೀಕ್ಷಿಸಲು ಕುರ್ಚಿ ಅಥವಾ ಸ್ಟೂಲ್ ಹೊಂದಿಲ್ಲ. ಇನ್ನು ಬೆಳಗ್ಗೆ ಬೇಗನೆ ಎದ್ದು ತನ್ನ ಸೆಲ್ ಅನ್ನು ಗುಡಿಸಿ, ಬಳಿಕ ಯೋಗ ಮಾಡುತ್ತಾರೆ. ನಂತರ ಉಪಾಹಾರಕ್ಕಾಗಿ ಎರಡು ಪೀಸ್ ಬ್ರೆಡ್ ಮತ್ತು ಚಹಾವನ್ನು ತೆಗೆದುಕೊಳ್ಳುತ್ತಾರೆ. ಬಳಿಕ ಜೈಲಿನ ಆವರಣದಲ್ಲಿ ನಡೆಯುತ್ತಾರೆ ಎಂದು ಜೈಲು ಮೂಲಗಳು ತಿಳಿಸಿವೆ.

    ದಿನದ ಬಹುಪಾಲು ಪುಸ್ತಕಗಳನ್ನು ಓದುತ್ತಾರೆ ಮತ್ತು ಯೋಗ ಮಾಡುತ್ತಾರೆ ಮತ್ತು ದಿನಕ್ಕೆ ಎರಡು ಬಾರಿ ಧ್ಯಾನ ಮಾಡುತ್ತಾರೆ. ಅವರಿಗೆ ಒದಗಿಸಿದ ಪುಸ್ತಕಗಳಲ್ಲಿ ಹಿಂದೂ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತ ಸೇರಿದೆ. ಕೆಲವೊಮ್ಮೆ ತಮ್ಮ ಪಾಡಿಗೆ ಬರೆಯುತ್ತಾ ಕುಳಿತಿರುತ್ತಾರೆ. ಕೇಜ್ರಿವಾಲ್ ಅವರು ಸ್ವಲ್ಪ ಬೆರಗುಗೊಂಡಂತೆ ತೋರುತ್ತಿದ್ದಾರೆ. ಸ್ವಲ್ಪ ಗೊಂದಲಕ್ಕೊಳಗಾಗಿದ್ದಾರೆ. ಅವರು ಇನ್ನೂ ಜೈಲಿನೊಳಗೆ ತಮ್ಮ ಸುತ್ತಮುತ್ತಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಪತ್ರ

    ಕೇಜ್ರಿವಾಲ್ ಅವರ ತೂಕ, ಶುಗರ್‌ ಹಾಗೂ ರಕ್ತದೊತ್ತಡ ಸಂಬಂಧ ಹಿರಿಯ ವೈದ್ಯರೊಬ್ಬರು ದಿನಕ್ಕೆ ಎರಡು ಬಾರಿ ಮೇಲ್ವಿಚಾರಣೆ ಮಾಡುತ್ತಾರೆ. ದೆಹಲಿ ಮುಖ್ಯಮಂತ್ರಿ ಸಂಪೂರ್ಣವಾಗಿ ಚೆನ್ನಾಗಿದ್ದಾರೆ. ಬಿಪಿ ಉತ್ತಮವಾಗಿದೆ, ಶುಗರ್ ನಿಯಂತ್ರಣದಲ್ಲಿದೆ ಮತ್ತು ಅವರ ತೂಕ 65 ಕೆಜಿ ಸ್ಥಿರವಾಗಿದ್ದು, ತೂಕ ಕಡಿಮೆಯಾಗಿಲ್ಲ ಎಂದು ಜೈಲು ಅಧಿಕಾರಿ ತಿಳಿಸಿದ್ದಾರೆ. ಆದರೆ ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದಾಗಿನಿಂದ 4.5 ಕೆಜಿ ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಮತ್ತು ದೆಹಲಿ ಸಚಿವ ಅತಿಶಿ ಆರೋಪಿಸಿದ್ದರು.

    55ರ ಹರೆಯದ ದೆಹಲಿ ಮುಖ್ಯಮಂತ್ರಿಗೆ ತಮ್ಮ ಸೆಲ್‌ನ ಹೊರಗೆ ನಡೆಯಲು ಅವಕಾಶ ನೀಡಲಾಗಿದೆ. ಆದರೆ ಭದ್ರತಾ ಕಾರಣಗಳಿಂದಾಗಿ ಅವರು ಇತರ ಕೈದಿಗಳೊಂದಿಗೆ ಮಾತನಾಡಲು ಸಾಧ್ಯವಿಲ್ಲ ಎಂದು ವರದಿ ಹೇಳಿದೆ.

    ಏಷ್ಯಾದ ಅತಿದೊಡ್ಡ ಜೈಲಿನಲ್ಲಿ ಇರಿಸಲಾಗಿರುವ ಮೊದಲ ಹಾಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್‌ನ ಜೈಲು ಸಂಖ್ಯೆ 2 ರ ಸಾಮಾನ್ಯ ವಾರ್ಡ್ ಸಂಖ್ಯೆ 3 ರಲ್ಲಿ 14×8 ಅಡಿ ಕೊಠಡಿಯಲ್ಲಿ ಇರಿಸಲಾಗಿದೆ. ಜೈಲು ಕೈದಿಗಳ ಪ್ರಕಾರ, ಎಲ್ಲಾ ಕೈದಿಗಳಂತೆ ಕೇಜ್ರಿವಾಲ್‌ ಅವರಿಗೂ ಅವರ ಸೆಲ್‌ ಶುಚಿಗೊಳಿಸಲೆಂದು ಪೊರಕೆ, ಬಕೆಟ್‌ ಮತ್ತು ಬಟ್ಟೆ ನೀಡಲಾಗಿದೆ.

  • ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಪತ್ರ

    ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಪತ್ರ

    ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಜೈಲಿನಿಂದಲೇ ಇದೀಗ ಮತ್ತೊಂದು ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ಮುಖ್ಯಮಂತ್ರಿಗಳು ತಮ್ಮ ಎಲ್ಲಾ ಶಾಸಕರಿಗೆ ಸಂದೇಶವನ್ನು ರವಾನಿಸಿದ್ದಾರೆ.

    ಈ ಪತ್ರವನ್ನು ಇಂದು ಸುದ್ದಿಗೋಷ್ಠಿ ನಡೆಸಿ ಪತ್ನಿ ಸುನಿತಾ ಕೇಜ್ರಿವಾಲ್‌ (Sunita Kejriwal) ಅವರು ಮಾಧ್ಯಮಗಳ ಮುಂದೆ ಓದಿದ್ದಾರೆ. ನಾನು ಜೈಲಿನಲ್ಲಿರುವ ಕಾರಣ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.

    ಪತ್ರದಲ್ಲಿ ಏನಿದೆ..?: ತಮ್ಮ ಗೈರುಹಾಜರಿಯಲ್ಲಿ ದೆಹಲಿ ಜನ ಯಾವುದೇ ತೊಂದರೆಗಳನ್ನು ಎದುರಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಆಪ್ (AAP) ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜೈಲು ಸೇರಿದ ಕೇಜ್ರಿವಾಲ್‌ 4.5 ಕೆಜಿ ಕಳೆದುಕೊಂಡಿದ್ದಾರೆ: ಆಪ್‌ ಗಂಭೀರ ಆರೋಪ

    ನಾನು ಜೈಲಿನಲ್ಲಿರುವ ಮಾತ್ರಕ್ಕೆ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು (Delhi MLA) ಪ್ರತಿದಿನ ತಮ್ಮ ಪ್ರದೇಶಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.

    ಮದ್ಯ ಹಗರಣಕ್ಕೆ (Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾದ ಕೇಜ್ರಿವಾಲ್‌ ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಸೋಮವಾರ ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಮುಖ್ಯಮಂತ್ರಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಮನೆಯ ಆಹಾರವನ್ನು ನೀಡಲಾಗುತ್ತದೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಗಾಗಿ ಅವರ ಸೆಲ್ ಬಳಿ ಕ್ವಿಕ್‌ ರೆಸ್ಪಾನ್ಸ್‌ ತಂಡವನ್ನು ನಿಯೋಜಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.