Tag: Arvind Kejriwal

  • ಹೊಸ ಮದ್ಯ ನೀತಿ ಪ್ರಕರಣದ ಕಿಂಗ್‌ಪಿನ್ ಸರದಿಯೂ ಬರಲಿದೆ; ದೆಹಲಿ ಸಿಎಂಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಅನುರಾಗ್ ಠಾಕೂರ್

    ಹೊಸ ಮದ್ಯ ನೀತಿ ಪ್ರಕರಣದ ಕಿಂಗ್‌ಪಿನ್ ಸರದಿಯೂ ಬರಲಿದೆ; ದೆಹಲಿ ಸಿಎಂಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಅನುರಾಗ್ ಠಾಕೂರ್

    ನವದೆಹಲಿ: ದೆಹಲಿ ಹೊಸ ಮದ್ಯ ನೀತಿ ಪ್ರಕರಣದಲ್ಲಿ (Delhi Liquor Policy Case) ಡಿಸಿಎಂ ಮನೀಶ್ ಸಿಸೊಡಿಯಾ ಸೇರಿ‌ ಹಲವು ನಾಯಕರು ಬಂಧನಕ್ಕೊಳಪಟ್ಟಿದ್ದಾರೆ. ಪ್ರಕರಣದ ಕಿಂಗ್‌ಪಿನ್ ಇನ್ನೂ ಹೊರಗಿದ್ದು ಅವರ ಸರದಿಯೂ ಬರಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ವಾಗ್ದಾಳಿ ನಡೆಸಿದ್ದಾರೆ. ತಮ್ಮ ಹೇಳಿಕೆಯಲ್ಲಿ ಪರೋಕ್ಷವಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಟಾರ್ಗೆಟ್‌ ಮಾಡಿದ್ದಾರೆ.

    ಛತ್ತೀಸ್‌ಗಢದ ರಾಯ್‌ಪುರದಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಠಾಕೂರ್, ಭ್ರಷ್ಟಾಚಾರದ ವಿರುದ್ಧ ಭಾರತ ಎನ್ನುವ ಘೋಷಣೆಯ ಮೇಲೆ ಅಧಿಕಾರಕ್ಕೆ ಬಂದವರು ಈಗ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಎಎಪಿಯನ್ನ (AAP) ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: Bigg Boss Kannada 10: ದೊಡ್ಮನೆಗೆ ಜಗ್ಗೇಶ್ ಎಂಟ್ರಿ: ನಟ ಹೇಳಿದ್ದೇನು?

    ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿಕೆ ನೋಡಿ ಜನರು ನಗುತ್ತಿದ್ದಾರೆ. ಇದೇ ವ್ಯಕ್ತಿಗಳು ಆರಂಭದಲ್ಲಿ ಭ್ರಷ್ಟಾಚಾರದ ವಿರುದ್ಧ ಭಾರತ ಎಂಬ ಘೋಷಣೆಯನ್ನು ಪ್ರತಿಪಾದಿಸಿದ್ದರು. ಆದರೀಗ ಅದೇ ಭ್ರಷ್ಟ ಅಭ್ಯಾಸಗಳಲ್ಲಿ ಸಿಲುಕಿಕೊಂಡಿದ್ದಾರೆ. ಪಂಜಾಬ್‌ನಲ್ಲಿ, ಆಪ್‌ ಅಧಿಕಾರಕ್ಕೆ ಬಂದಿತು, ಆದರೆ  ಎರಡು ತಿಂಗಳೊಳಗೆ ರಾಜ್ಯದ ಆರೋಗ್ಯ ಸಚಿವರು ಭ್ರಷ್ಟಾಚಾರದ ಕಾರಣದಿಂದ ಕೆಳಗಿಳಿಯಬೇಕಾಯಿತು ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಇಸ್ಪೀಟ್ ಅಡ್ಡೆಯ ಮೇಲೆ ದಾಳಿ – 1.78 ಲಕ್ಷ ರೂ. ಜಪ್ತಿ

    ಕೇಜ್ರಿವಾಲ್ ಅವರು ತಮ್ಮ ಖ್ಯಾತಿಗೆ ಕಳಂಕ ತಂದಿರುವ ಮದ್ಯದ ಹಗರಣದ ಬಗ್ಗೆ ವಿವರಣೆ ನೀಡಲು ವಿಫಲರಾಗಿದ್ದಾರೆ. ದೆಹಲಿಯ ಉಪಮುಖ್ಯಮಂತ್ರಿ ಮತ್ತು ಇತರರು ಜೈಲುವಾಸದಲ್ಲಿದ್ದಾಗ, ಅದರ ಹಿಂದಿನ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ ಮತ್ತು ಮಾಸ್ಟರ್ ಮೈಂಡ್ ಕೂಡ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಠಾಕೂರ್ ಪರೋಕ್ಷವಾಗಿ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿ ದೇಶದಲ್ಲೇ ಅತಿ ಹೆಚ್ಚು ಎಲೆಕ್ಟ್ರಿಕ್ ಬಸ್ ಉಳ್ಳ ನಗರ – 400 ಬಸ್‌ಗಳಿಗೆ ಚಾಲನೆ

    ದೆಹಲಿ ದೇಶದಲ್ಲೇ ಅತಿ ಹೆಚ್ಚು ಎಲೆಕ್ಟ್ರಿಕ್ ಬಸ್ ಉಳ್ಳ ನಗರ – 400 ಬಸ್‌ಗಳಿಗೆ ಚಾಲನೆ

    ನವದೆಹಲಿ: ಜಿ20 ಶೃಂಗಸಭೆಗೂ ಮುನ್ನ 400 ಎಲೆಕ್ಟ್ರಿಕ್ ಬಸ್‌ಗಳಿಗೆ (Electric Bus) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಚಾಲನೆ ನೀಡಿದ್ದಾರೆ. 400 ಬಸ್‌ಗಳ ಸೇರ್ಪಡೆಯಿಂದ ದೆಹಲಿಯಲ್ಲಿ (Delhi) ಎಲೆಕ್ಟ್ರಿಕ್ ಬಸ್‌ಗಳು 800 ಕ್ಕೂ ಹೆಚ್ಚಾಗಲಿದ್ದು, ಈ ಮೂಲಕ ಭಾರತದಲ್ಲಿ ದೆಹಲಿ ಅತಿ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳನ್ನು ಹೊಂದಿದ ನಗರವಾಗಿದೆ.

    ದೆಹಲಿ ಸರ್ಕಾರ ಒಟ್ಟು 1,500 ಎಲೆಕ್ಟ್ರಿಕ್ ಬಸ್‌ಗಳನ್ನು ಆರ್ಡರ್ ಮಾಡಿದೆ. ಅವುಗಳಲ್ಲಿ 921 ಬಸ್‌ಗಳು ಎಫ್‌ಎಎಮ್‌ಇ (ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ವೇಗದ ಅಡಾಪ್ಷನ್ ಮತ್ತು ತಯಾರಿಕೆ) ಯೋಜನೆಯಡಿಯಲ್ಲಿ ಸಬ್ಸಿಡಿಗಳನ್ನು ಪಡೆದಿವೆ. 12 ವರ್ಷಗಳಲ್ಲಿ ಈ 921 ಬಸ್‌ಗಳ ಕಾರ್ಯಾಚರಣೆಯ ವೆಚ್ಚವು 4,091 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ. ಕೇಂದ್ರ ಸರ್ಕಾರವು 417 ಕೋಟಿ ರೂ.ಗಳನ್ನು ಎಫ್‌ಎಎಮ್‌ಇ ಸಬ್ಸಿಡಿಯಾಗಿ ಒದಗಿಸುತ್ತದೆ ಮತ್ತು ದೆಹಲಿ ಸರ್ಕಾರವು 3,674 ಕೋಟಿ ರೂ.ಗಳನ್ನು ಭರಿಸುತ್ತದೆ.

    ಉಳಿದ 579 ಬಸ್‌ಗಳನ್ನು ದೆಹಲಿ ಸರ್ಕಾರವು ಸಂಪೂರ್ಣವಾಗಿ ಖರೀದಿಸುತ್ತದೆ ಮತ್ತು ನಿರ್ವಹಿಸುತ್ತದೆ. ಒಟ್ಟು ವೆಚ್ಚದ 90% ರಷ್ಟು ದೆಹಲಿ ಸರ್ಕಾರ ಮತ್ತು 10% ಕೇಂದ್ರ ಸರ್ಕಾರವು ಫ್‌ಎಎಮ್‌ಇ ಸಬ್ಸಿಡಿಯಾಗಿ ಭರಿಸಲಿದೆ. ದೆಹಲಿಯು ಈಗ 7,135 ಬಸ್‌ಗಳ ಫ್ಲೀಟ್ ಗಾತ್ರವನ್ನು ಹೊಂದಿದೆ. ದೆಹಲಿ ಸಾರಿಗೆ ನಿಗಮದ (ಡಿಟಿಸಿ) ಅಡಿಯಲ್ಲಿ 4,088 ಬಸ್‌ಗಳು ಮತ್ತು ಡಿಐಎಮ್‌ಟಿಎಸ್ (ದೆಹಲಿ ಇಂಟಿಗ್ರೇಟೆಡ್ ಮಲ್ಟಿ-ಮೋಡಲ್ ಟ್ರಾನ್ಸಿಟ್ ಸಿಸ್ಟಮ್) ಅಡಿಯಲ್ಲಿ 3,047 ಬಸ್‌ಗಳನ್ನು ಒಳಗೊಂಡಿದೆ. ಇದನ್ನೂ ಓದಿ: ಬ್ಯಾಲೆನ್ಸ್ ಕಳೆದುಕೊಂಡು ಬಿದ್ರೂ ನಗುತ್ತಲೇ ಎದ್ದು ನಡೆದ ಬಿಹಾರ ಸಿಎಂ

    ಸದ್ಯ 800 ಎಲೆಕ್ಟ್ರಿಕ್ ಬಸ್‌ಗಳು ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಎದುರಿಸಲು ಮತ್ತು ಅದರ ಇಂಗಾಲದ ಹೆಜ್ಜೆಗುರುತನ್ನು ಕಡಿಮೆ ಮಾಡಲು ನಗರದ ಪ್ರಯತ್ನಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ. 800 ಎಲೆಕ್ಟ್ರಿಕ್ ಬಸ್‌ಗಳು ವಾರ್ಷಿಕವಾಗಿ ಸುಮಾರು 45,000 ಟನ್ ಸಿಒ2 ಹೊರಸೂಸುವಿಕೆಯನ್ನು ಉಳಿಸುವ ನಿರೀಕ್ಷೆಯಿದೆ. ಇದು ಹಸಿರು ಮತ್ತು ಸ್ವಚ್ಛ ದೆಹಲಿಗೆ ಕೊಡುಗೆ ನೀಡುತ್ತದೆ. 12 ವರ್ಷಗಳ ಜೀವಿತಾವಧಿಯಲ್ಲಿ, ಈ ಬಸ್‌ಗಳು ಒಟ್ಟು 5.4 ಲಕ್ಷ ಟನ್‌ಗಳಷ್ಟು ಸಿಒ2 ಅನ್ನು ಉಳಿಸುತ್ತದೆ ಎಂದು ಅಂದಾಜಿಸಲಾಗಿದೆ.

    2023 ರ ಅಂತ್ಯದ ವೇಳೆಗೆ ದೆಹಲಿಯು ತನ್ನ ಎಲೆಕ್ಟ್ರಿಕ್ ಬಸ್‌ಗಳ ಸಂಖ್ಯೆಯನ್ನು 1,900 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಜಾಗತಿಕವಾಗಿ ಹೆಚ್ಚಿನ ಸಂಖ್ಯೆಯ ಎಲೆಕ್ಟ್ರಿಕ್ ಬಸ್‌ಗಳನ್ನು ಹೊಂದಿರುವ ನಗರಗಳಲ್ಲಿ ಒಂದಾಗಲು ಪ್ರಯತ್ನಿಸುತ್ತಿದೆ. 2025 ಕ್ಕೆ ಒಟ್ಟು 10,480 ಬಸ್‌ಗಳನ್ನು ಹೊಂದಲು ಯೋಜಿಸಿದೆ. 80% ರಷ್ಟು ಅಥಾವ 8,280 ಬಸ್‌ಗಳು ಎಲೆಕ್ಟ್ರಿಕ್ ಆಗಿರುತ್ತವೆ. ಈ ಪರಿವರ್ತನೆಯು ವಾರ್ಷಿಕವಾಗಿ 4.67 ಲಕ್ಷ ಟನ್ ಸಿಒ2 ಹೊರಸೂಸುವಿಕೆಯನ್ನು ಉಳಿಸಲು ಯೋಜಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಗರಿಷ್ಠ ತಾಪಮಾನ- 85 ವರ್ಷಗಳಲ್ಲೇ ಸೆಪ್ಟೆಂಬರ್‌ನಲ್ಲಿ ಅತಿ ಹೆಚ್ಚಿನ ಬಿಸಿಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅರವಿಂದ್ ಕೇಜ್ರಿವಾಲ್ INDIA ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ: ಎಎಪಿ ಮುಖ್ಯ ವಕ್ತಾರೆ

    ಅರವಿಂದ್ ಕೇಜ್ರಿವಾಲ್ INDIA ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ: ಎಎಪಿ ಮುಖ್ಯ ವಕ್ತಾರೆ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) INDIA ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಬೇಕು ಎಂದು ಎಎಪಿಯ (AAP) ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ (Priyanka Kakkar) ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್ ಅವರು ಜನರಿಗೆ ಅನುಕೂಲವಾಗುವ ಮಾದರಿಯನ್ನು ನೀಡಿದ್ದಾರೆ. ಅವರು ಪ್ರಧಾನಿ ಅಭ್ಯರ್ಥಿ ಆಗಬೇಕೆಂದು ನಾನು ಬಯಸುತ್ತೇನೆ. ಆದರೆ ನಿರ್ಧಾರ ನನ್ನ ಕೈಯಲ್ಲಿಲ್ಲ ಎಂದು ಹೇಳಿದ್ದಾರೆ.

    ನಾಳೆಯಿಂದ ಎರಡು ದಿನಗಳ ಕಾಲ ಒಕ್ಕೂಟದ ಸಭೆ ನಡೆಯಲಿದ್ದು, ಪದಾಧಿಕಾರಿಗಳ ನೇಮಕವಾಗುವ ಸಾಧ್ಯತೆ ಇದೆ. ಇದೇ ವೇಳೆ‌ ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಎನ್ನುವ ಚರ್ಚೆಯೂ ಶುರುವಾಗಿದ್ದು, ಈ ನಡುವೆ ಆಪ್ ನಾಯಕರು, ಅರವಿಂದ್ ಕೇಜ್ರಿವಾಲ್ ಇದಕ್ಕೆ ಅತ್ಯುತ್ತಮ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ನಾಳೆಯಿಂದ INDIA ಒಕ್ಕೂಟದ 3ನೇ ಸಭೆ – ‘ಬಿಜೆಪಿ ಚಲೇ ಜಾವೋ’ ಅಭಿಯಾನಕ್ಕೆ ಚಾಲನೆ ನಿರೀಕ್ಷೆ

    ಈ ಬಗ್ಗೆ ಮಾತನಾಡಿದ ಎಎಪಿಯ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್, ನಮ್ಮ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನು ಪ್ರಧಾನಿ ಅಭ್ಯರ್ಥಿ ಹುದ್ದೆಗೆ ಪ್ರಸ್ತಾಪಿಸುತ್ತೇನೆ. ಕೇಜ್ರಿವಾಲ್ ಯಾವಾಗಲೂ “ಲಾಭ ಮತ್ತು ಜನಪರ” ಬಜೆಟ್ ಅನ್ನು ಮಂಡಿಸಿದ್ದಾರೆ. ಭಾರತ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಗೆ ಅವರು ಸೂಕ್ತ ವ್ಯಕ್ತಿ ಎಂದಿದ್ದಾರೆ.

    ಕೇಜ್ರಿವಾಲ್ ಉಮೇದುವಾರಿಕೆ ಕುರಿತು ಮಾತನಾಡಿದ ಆಪ್‌ನ ದೆಹಲಿ ಸಂಚಾಲಕ ಗೋಪಾಲ್ ರೈ, ಪ್ರತಿಯೊಂದು ಪಕ್ಷಕ್ಕೂ ತಮ್ಮ ನಾಯಕ ಪ್ರಧಾನಿಯಾಗಬೇಕೆಂದು ಬಯಸುತ್ತದೆ. ಆಪ್ ಸದಸ್ಯರು ಕೂಡ ತಮ್ಮ ರಾಷ್ಟ್ರೀಯ ಸಂಚಾಲಕ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ ಎಂದು ಹೇಳಿದ್ದಾರೆ. ಇದಲ್ಲದೆ, ಎಎಪಿ ಕೇಜ್ರಿವಾಲ್ ಅವರ ಹೆಸರನ್ನು ಪ್ರಧಾನಿ ಅಭ್ಯರ್ಥಿಯಾಗಿ ಪ್ರಸ್ತಾಪಿಸುತ್ತದೆಯೇ ಎಂದು ಕೇಳಿದಾಗ, “ಹೆಸರು ನೀಡುವಂತೆ ಏನೂ ಇಲ್ಲ. ನಾವು ಈಗಾಗಲೇ ಅದರ ಭಾಗವಾಗಿದ್ದೇವೆ ಮತ್ತು ಅರವಿಂದ್ ಕೇಜ್ರಿವಾಲ್ ಬಣದ ಭಾಗವಾಗಿದ್ದಾರೆ” ಎಂದು ಹೇಳಿದರು. ಇದನ್ನೂ ಓದಿ: ನಾವು ಯಾವತ್ತೂ ನಿಮಗೆ ಸುಳ್ಳು ಹೇಳಲ್ಲ, ಸುಳ್ಳು ಆಶ್ವಾಸನೆ ಕೊಡಲ್ಲ: ರಾಹುಲ್ ಗಾಂಧಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 14ರ ಬಾಲಕಿ ಮೇಲೆ ರೇಪ್ ಮಾಡಿದ ಅಧಿಕಾರಿಗೆ ಇಂದು ಸಾಮರ್ಥ್ಯ ಪರೀಕ್ಷೆ

    14ರ ಬಾಲಕಿ ಮೇಲೆ ರೇಪ್ ಮಾಡಿದ ಅಧಿಕಾರಿಗೆ ಇಂದು ಸಾಮರ್ಥ್ಯ ಪರೀಕ್ಷೆ

    – ಸಂತಾನಹರಣ ಚಿಕಿತ್ಸೆ ಪಡೆದವರಿಂದ ರೇಪ್ ಮಾಡಲು ಸಾಧ್ಯವಿಲ್ಲ – ಆರೋಪಿ ಪರ ವಕೀಲರ ವಾದ

    ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ತಿಂಗಳುಗಟ್ಟಲೇ ಅತ್ಯಾಚಾರ ಎಸಗಿ ಆಕೆಯನ್ನ ಗರ್ಭಧರಿಸುವಂತೆ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿರುವ ದೆಹಲಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರೇಮೋದಯ್ ಖಾಖಾ (Premoday Khakha) ನನ್ನ ಮಂಗಳವಾರ (ಇಂದು) ಪುರುಷತ್ವ ಸಾಮರ್ಥ್ಯ ಪರೀಕ್ಷೆಗೆ ಒಳಪಡಿಸಲಾಗಿದೆ.

    ಆರೋಪಿಯು (Accused) ಲೈಂಗಿಕ ಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಸಮರ್ಥನಾಗಿದ್ದಾನೆಯೇ? ಇಲ್ಲವೇ? ಎಂಬುದನ್ನ ತಿಳಿಯಲು ಪ್ರಮಾಣೀಕೃತ ಮೂತ್ರಶಾಸ್ತ್ರಜ್ಞರಿಂದ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರದ ಅಪರಾಧ ಪ್ರಕರಣದಲ್ಲಿ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲು ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯಿಂದ್ಲೇ 14ರ ಬಾಲಕಿ ಮೇಲೆ ರೇಪ್‌ – ಪತಿ, ಪತ್ನಿ ಅರೆಸ್ಟ್‌

    ಆರೋಪಿಗಳಾದ ಪ್ರಮೋದ್ ಖಾಖಾ ಮತ್ತು ಅವನ ಪತ್ನಿ ಸೀಮಾ ರಾಣಿ ಇಬ್ಬರನ್ನೂ ದೆಹಲಿ ನ್ಯಾಯಾಲಯಕ್ಕೆ (Delhi court) ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿಗಳ ಪರ ವಕೀಲರು ಖಾಖಾ ವಿರುದ್ಧ ಹೊರಿಸಿರುವ ಆರೋಪಗಳು ನಿರಾಧಾರ ಎಂದು ಹೇಳಿದ್ದಾರೆ. ಅಲ್ಲದೇ ಪ್ರಮೋದ್ ಕಳೆದ 20 ವರ್ಷಗಳ ಹಿಂದೆಯೇ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅವರಿಂದ ಅತ್ಯಾಚಾರ ಮಾಡಲು ಹೇಗೆ ಸಾಧ್ಯ? ಆದ್ದರಿಂದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗುವ ಸಾಧ್ಯತೆಗಳಿಲ್ಲ ಎಂದು ವಾದಿಸಿದ್ದರು.

    ಈ ಮಧ್ಯೆ ಆರೋಪಿ ಚರ್ಚ್ನಲ್ಲಿಯೂ ತನಗೆ ಕಿರುಕುಳ ನೀಡುತ್ತಿದ್ದ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತು. ಆರೋಪಿ ಅಧಿಕಾರಿ ಚರ್ಚ್ನಲ್ಲಿಯೂ ಉಪಕಾರ್ಯದರ್ಶಿ ಹುದ್ದೆ ಹೊಂದಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಾಫಿ ಶಾಪ್‌ನಲ್ಲಿ ಶುರುವಾದ ಪ್ರೀತಿ – ಭಾರತದ ಪ್ರೇಮಿಗಾಗಿ ದಕ್ಷಿಣ ಕೊರಿಯಾದಿಂದ ಹಾರಿ ಬಂದ ಮಹಿಳೆ!

    ಏನಿದು ಪ್ರಕರಣ?
    ಅಮಾನತಿನಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರೇಮೋದಯ್ ಖಾಖಾ ಎಂಬಾತ ತನ್ನ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ (ಆಗ 14 ವರ್ಷ, ಈಗ 17 ವರ್ಷ) ತಿಂಗಳುಗಟ್ಟಲೇ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ಅಲ್ಲದೇ ಅಧಿಕಾರಿಯ ಪತ್ನಿ ಸೀಮಾ ರಾಣಿ ಬಾಲಕಿಗೆ ಗರ್ಭಪಾತದ ಮಾತ್ರೆಗಳನ್ನು ನೀಡಿದ ಆರೋಪದ ಮೇಲೆ ಅರೆಸ್ಟ್ ಆಗಿದ್ದಾಳೆ. ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಆದೇಶದ ಮೇರೆಗೆ ಸೋಮವಾರ ಅಧಿಕಾರಿಯನ್ನ ಹುದ್ದೆಯಿಂದ ಅಮಾನತುಗೊಳಿಸಲಾಗಿತ್ತು.

    ಆರೋಪಿ ವಿರುದ್ಧ ಪೋಕ್ಸೋ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 376(2)(F), ಸೆಕ್ಷನ್ 509, 506, 323, 313, 120 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯಿಂದ್ಲೇ 14ರ ಬಾಲಕಿ ಮೇಲೆ ರೇಪ್‌ – ಪತಿ, ಪತ್ನಿ ಅರೆಸ್ಟ್‌

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯಿಂದ್ಲೇ 14ರ ಬಾಲಕಿ ಮೇಲೆ ರೇಪ್‌ – ಪತಿ, ಪತ್ನಿ ಅರೆಸ್ಟ್‌

    – ಬಾಲಕಿಗೆ ಗರ್ಭಪಾತ ಮಾತ್ರೆ ನೀಡಿದ್ದ ಪತ್ನಿ

    ನವದೆಹಲಿ: ದೆಹಲಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬ ತನ್ನ ಸ್ನೇಹಿತನ 14 ವರ್ಷದ ಮಗಳ ಮೇಲೆ (ಈಗ 17) ತಿಂಗಳುಗಳ ಕಾಲ ಅತ್ಯಾಚಾರವೆಸಗಿ ಆಕೆಯನ್ನ ಗರ್ಭ ಧರಿಸುವಂತೆ ಮಾಡಿದ ಆರೋಪದ ಮೇಲೆ ಸೋಮವಾರ ಪೊಲೀಸರು (Delhi Police) ಬಂಧಿಸಿದ್ದಾರೆ. ಅಲ್ಲದೇ ಸಂತ್ರಸ್ತೆಗೆ ಗರ್ಭಪಾತ ಮಾತ್ರೆಗಳನ್ನ ನೀಡಿದ ಆರೋಪದ ಮೇಲೆ ಅಧಿಕಾರಿಯ ಪತ್ನಿಯನ್ನೂ ಬಂಧಿಸಲಾಗಿದೆ. ಬಂಧನದ ಬಳಿಕ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ಆದೇಶದ ಮೇರೆಗೆ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ.

    ಪ್ರೇಮೋದಯ್ ಖಾಖಾ (Premoday Khakha) ಮತ್ತು ಪತ್ನಿ ಸೀಮಾ ರಾಣಿ ಬಂಧಿತ ಆರೋಪಿಗಳು. ಸಂತ್ರಸ್ತ ಬಾಲಕಿ 12ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, 2020ರಲ್ಲಿ ತನ್ನ ಮರಣದ ನಂತರ ಆರೋಪಿ ಪ್ರಮೋದಯ್‌ ಖಾಖಾ ಮತ್ತು ಅವನ ಕುಟುಂಬದೊಂದಿಗೆ ವಾಸಿಸುತ್ತಿದ್ದಳು. ಪ್ರಮೋದಯ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ. ಬಾಲಕಿಯನ್ನ ತನ್ನ ಮನೆಯಲ್ಲಿರಿಸಿಕೊಂಡೇ ನೋಡಿಕೊಳ್ಳುತ್ತಿದ್ದ. ಆಕೆ 2020ರ ಅವಧಿಯಲ್ಲಿ 12ನೇ ತರಗತಿ ಓದುತ್ತಿದ್ದಾಗ 2020-21ರ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಅತ್ಯಾಚಾರ ಆರೋಪದ ಮೇಲೆ ಕೇಸ್‌ ದಾಖಲಿಸಲಾಗಿದೆ. ಇದನ್ನೂ ಓದಿ: Welcome, buddy.. ಚಂದ್ರಯಾನ-3ಗೆ ಸ್ವಾಗತ ಕೋರಿದ ಚಂದ್ರಯಾನ-2 ಆರ್ಬಿಟರ್‌; ಇಸ್ರೋಗೆ ಇನ್ನಷ್ಟು ತಾಂತ್ರಿಕ ಬಲ

    ಈ ಕುರಿತು ಮಾಹಿತಿ ನೀಡಿರುವ ದೆಹಲಿ ಉತ್ತರ ವಿಭಾಗದ ಡಿಸಿಪಿ ಸಾಗರ್ ಸಿಂಗ್, 2020ರ ಅವಧಿಯಲ್ಲಿ ಸಂತ್ರಸ್ತ ಬಾಲಕಿಯ ತಂದೆ ತೀರಿಕೊಂಡ ನಂತರ ಆರೋಪಿ ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದಳು. ಆಗ ಪದೇ ಪದೇ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ, ಪ್ರೇಮೋದಯ್ ಖಾಖಾ ಅತ್ಯಾಚಾರ ಎಸಗಿದ ಮೇಲೆ ಪತ್ನಿ ಸೀಮಾ ರಾಣಿ ಬಾಲಕಿಗೆ ಗರ್ಭಪಾತ ಮಾತ್ರೆ ನೀಡಿ, ಪ್ರಕರಣವನ್ನ ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾಳೆ. ಇದರಿಂದ ಮಾನಸಿಕ ಹಿಂಸೆ ಅನುಭವಿಸುತ್ತಿದ್ದ ಬಾಲಕಿ ಕೊನೆಗೆ ಪೊಲೀಸರಿಗೆ ವಿಷಯ ತಿಳಿಸಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸದ್ಯ ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರ ಆರೈಕೆಯಲಿದ್ದಾಳೆ. ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ನಂತರ ವಿವರಗಳನ್ನ ಬಹಿರಂಗಪಡಿಸಲಾಗುತ್ತದೆ ಎಂದು ಸಾಗರ್‌ ಸಿಂಗ್‌ ಹೇಳಿದ್ದಾರೆ, ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಕಾಫಿ ಶಾಪ್‌ನಲ್ಲಿ ಶುರುವಾದ ಪ್ರೀತಿ – ಭಾರತದ ಪ್ರೇಮಿಗಾಗಿ ದಕ್ಷಿಣ ಕೊರಿಯಾದಿಂದ ಹಾರಿ ಬಂದ ಮಹಿಳೆ!

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ – ಆಪ್‌ಗೆ ಭಾರೀ ಹಿನ್ನಡೆ

    ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ – ಆಪ್‌ಗೆ ಭಾರೀ ಹಿನ್ನಡೆ

    – ಮೋದಿ ಭರವಸೆ ನಂಬಬೇಡಿ ಎಂದು ಕೇಜ್ರಿವಾಲ್ ಟೀಕೆ

    ನವದೆಹಲಿ: ಪ್ರತಿಪಕ್ಷಗಳ ವಿರೋಧದ ನಡುವೆಯೂ ದೆಹಲಿ ಸೇವೆಗಳ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಒದಗಿಸುವ 2023ರ ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶ(ತಿದ್ದುಪಡಿ) ವಿಧೇಯಕವನ್ನು (Delhi Services Bill) ಲೋಕಸಭೆಯಲ್ಲಿ (Lok Sabha) ಗುರುವಾರ ಅಂಗೀಕರಿಸಲಾಯಿತು.

    ಈ ಮಧ್ಯೆ ಪ್ರತಿಪಕ್ಷಗಳು ಲೋಕಸಭೆ ಕಲಾಪ ಬಹಿಷ್ಕರಿಸಿ ಹೊರನಡೆದವು. ಚರ್ಚೆ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತಗಳ‌ ನಿಯಂತ್ರಣಕ್ಕೆ ಗಡ್ಕರಿಗೆ ಸಿದ್ದರಾಮಯ್ಯ ಮನವಿ

    ರಾಷ್ಟ್ರರಾಜಧಾನಿ ಕುರಿತು ಯಾವುದೇ ಕಾನೂನು ಮಾಡುವ ಹಕ್ಕು ಸಂಸತ್ತಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ದೆಹಲಿಗೆ ಪ್ರತ್ಯೇಕ ಕಾನೂನು ಮಾಡುವ ಅಧಿಕಾರವನ್ನು ಸಂವಿಧಾನವೇ ನೀಡಿದೆ ಎಂದು ಹೊಸ ಮಸೂದೆಯನ್ನು ಉಲ್ಲೇಖಿಸಿ ಶಾ ಚರ್ಚೆ ವೇಳೆ ಹೇಳಿದರು.

    ವಿಧೇಯಕ ಅಂಗೀಕಾರವಾಗುವುದಕ್ಕೂ ಮುನ್ನ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದ ಕೇಜ್ರಿವಾಲ್, ಈ ವಿಧೇಯಕವು ರಾಜ್ಯದ ಜನರನ್ನ ಗುಲಾಮರನ್ನಾಗಿ ಮಾಡುತ್ತದೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ನಿವಾರಣೆಗೆ ಎಕ್ಸ್‌ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್: ಡಿಕೆಶಿ

    ದೆಹಲಿ ಜನರ ಹಕ್ಕುಗಳನ್ನು ಕಸಿದುಕೊಳ್ಳುವ ವಿಧೇಯಕದ ಕುರಿತು ಅಮಿತ್ ಶಾ ಅವರು ಲೋಕಸಭೆಯಲ್ಲಿ ಮಾತನಾಡುವುದನ್ನೂ ನಾನು ಕೇಳಿದ್ದೇನೆ. ವಿಧೇಯಕವನ್ನು ಬೆಂಬಲಿಸುವ ಒಂದೇ ಒಂದು ವಾದವೂ ಅವರಲ್ಲಿಲ್ಲ. ಇದು ಜನರನ್ನು ಅಸಹಾಯಕರನ್ನಾಗಿ ಮಾಡುತ್ತದೆ ಎಂದು ದೂರಿದ್ದರು.

    ಅಲ್ಲದೇ ಈ ಹಿಂದೆ ಬಿಜೆಪಿ ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡುವುದಾಗಿ ಬಿಜೆಪಿ ಭರವಸೆ ನೀಡಿತ್ತು. 2014ರಲ್ಲಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದಾಗಲೂ ಈ ಭರವಸೆ ನೀಡಿದ್ದರು. ಈಗ ದೆಹಲಿ ಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಮೋದಿ ಭರವಸೆಗಳನ್ನ ನಂಬಬೇಡಿ ಎಂದು ಕರೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿಯಲ್ಲಿ ಯಮುನಾ ನದಿ ಮಟ್ಟ ಮತ್ತಷ್ಟು ಏರಿಕೆ – ಕೇಜ್ರಿವಾಲ್ ನಿವಾಸದ ಬಳಿಯೂ ಪ್ರವಾಹ ಸ್ಥಿತಿ

    ದೆಹಲಿಯಲ್ಲಿ ಯಮುನಾ ನದಿ ಮಟ್ಟ ಮತ್ತಷ್ಟು ಏರಿಕೆ – ಕೇಜ್ರಿವಾಲ್ ನಿವಾಸದ ಬಳಿಯೂ ಪ್ರವಾಹ ಸ್ಥಿತಿ

    ನವದೆಹಲಿ: ಯಮುನಾ ನದಿಯಲ್ಲಿ (Yamuna River) ರಾತ್ರಿ ವೇಳೆ ನೀರಿನ ಮಟ್ಟ ಏರಿಕೆಯಾಗಿದ್ದು, ದೆಹಲಿಯಲ್ಲಿ (Delhi) ಮನೆ, ರಸ್ತೆಗಳಿಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ಉಂಟಾಗಿದೆ.

    ಹರಿಯಾಣದ ಹತ್ನಿಕುಂಡ್ ಬ್ಯಾರೇಜ್‌ನಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆ ಗುರುವಾರ ಬೆಳಗ್ಗೆ 7 ಗಂಟೆ ವೇಳೆಗೆ ನೀರಿನ ಮಟ್ಟ 208.46 ಮೀ. ಆಗಿದೆ. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತಲೂ 3 ಮೀ.ನಷ್ಟು ಹೆಚ್ಚಾಗಿದೆ.

    ಈ ನಡುವೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬ್ಯಾರೇಜ್ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಆದರೆ ಕೇಂದ್ರ ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವುದು ಅಗತ್ಯವಾಗಿದೆ ಎಂದು ಹೇಳಿದೆ.

    ಹಿಮಾಚಲ ಪ್ರದೇಶದಲ್ಲಿ ಮುಂಗಾರು ಅವಾಂತರವನ್ನೇ ಸೃಷ್ಟಿಸಿದ್ದು, ಭಾರೀ ಪ್ರಮಾಣದ ನಾಶವಾಗಿದೆ. ಉತ್ತರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಬ್ಯಾರೇಜ್ ತುಂಬಿದ್ದು, ಈ ಹಿನ್ನೆಲೆ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ದೆಹಲಿಯಾದ್ಯಂತ ರಸ್ತೆ, ಮನೆಗಳಿಗೆ ನೀರು ನುಗ್ಗಿದೆ. ಇದನ್ನೂ ಓದಿ: ಜೆಜೆಎಂ ಪೈಪ್‌ಗೆ ಚರಂಡಿ ನೀರು ಸೇರ್ಪಡೆ; ನೀರು ಸೇವಿಸಿದ 30ಕ್ಕೂ ಹೆಚ್ಚು ಜನರು ಅಸ್ವಸ್ಥ

    ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದೆ. ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಮುಚ್ಚಲಾಗಿದೆ. ಈ ಸ್ಥಳ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ದೆಹಲಿ ವಿಧಾನಸಭೆಯಿಂದ ಕೇವಲ 500 ಮೀ. ದೂರದಲ್ಲಿದೆ.

    ಪ್ರವಾಹ ಪರಿಸ್ಥಿತಿಯ ಹಿನ್ನೆಲೆ ಕೇಜ್ರಿವಾಲ್ ತುರ್ತು ಸಭೆ ನಡೆಸಿ, ನಿವಾಸಿಗಳಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಯಮುನಾ ನದಿಯ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಮನೆಗಳನ್ನು ಖಾಲಿ ಮಾಡಿ, ನಿಮ್ಮ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಟೆಂಟ್‌ಗಳು ಅಥವಾ ಸುರಕ್ಷಿತ ಸ್ಥಳಗಳಿಗೆ ಹೊರಡಿ. ಪ್ರವಾಹದ ನೀರನ್ನು ವೀಕ್ಷಿಸಲು ಹೋಗಬೇಡಿ. ನೀರಿನ ಮಟ್ಟದಲ್ಲಿ ತ್ವರಿತ ಏರಿಕೆ ಅಪಾಯಕಾರಿ ಎಂದಿದ್ದಾರೆ.

    ಹರಿಯಾಣ ಬ್ಯಾರೇಜ್‌ನಿಂದ ನೀರಿನ ಹರಿವು ಮಧ್ಯಾಹ್ನ 2 ಗಂಟೆಯ ನಂತರ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಜಲ ಆಯೋಗ ತಿಳಿಸಿದೆ. ಕಳೆದೆರಡು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಾಗದಿದ್ದರೂ ಹರಿಯಾಣದಿಂದ ಯಮುನಾಗೆ ಬಿಡುತ್ತಿರುವ ನೀರಿನಿಂದಾಗಿ ಅದರ ಸಮೀಪ ವಾಸಿಸುವ ಜನರಿಗೆ ಅಪಾರ ತೊಂದರೆಯಾಗಿದೆ. ನೀರು ನುಗ್ಗಿದ ನೂರಾರು ಮನೆಗಳನ್ನು ಜನರು ಖಾಲಿ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಸದ್ಯ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದ್ದು, ದುರ್ಘಟನೆಗಳನ್ನು ನಿಯಂತ್ರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 12 ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಇದನ್ನೂ ಓದಿ: 12 ಮದುವೆ, 6 ಮಕ್ಕಳು – ವಿಧವೆಯರು, ಡಿವೋರ್ಸ್‌ ಪಡೆದ ಮಹಿಳೆಯರನ್ನೇ ಟಾರ್ಗೆಟ್‌ ಮಾಡ್ತಿದ್ದ ವಂಚಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರೀ ಮಳೆ; ದೆಹಲಿಯ ಶಾಲೆಗಳಿಗೆ ನಾಳೆ ರಜೆ – ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

    ಭಾರೀ ಮಳೆ; ದೆಹಲಿಯ ಶಾಲೆಗಳಿಗೆ ನಾಳೆ ರಜೆ – ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

    ನವದೆಹಲಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದೆಹಲಿಯ (New Delhi) ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಭಾನುವಾರ ಘೋಷಿಸಿದ್ದಾರೆ.

    ಇಂದು ಬೆಳಿಗ್ಗೆಯಿಂದ ದೆಹಲಿಯಲ್ಲಿ ಮಳೆಯ (Delhi Rain) ಪ್ರಮಾಣ ಹೆಚ್ಚಾಗತೊಡಗಿದ್ದು, ದೆಹಲಿಯ ಹಲವು ಭಾಗಗಳಲ್ಲಿ ರಸ್ತೆಗಳು ಜಾಲವೃತವಾಗಿದೆ. ಸದ್ಯ ನಾಳೆ ಸಹ ದೆಹಲಿಯಲ್ಲಿ ಮಳೆ ಮುಂದುವರಿಯುವ ಸಂಭವವಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಭಾರೀ ಮಳೆ – ಕೊಚ್ಚಿ ಹೋಯ್ತು ಕಾರು, ಕುಸಿದು ಬಿದ್ದವು ಅಂಗಡಿಗಳು

    ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ಮಳೆಯಾಗಿದೆ. ಇದು 1982 ರಿಂದ ಇಲ್ಲಿಯವರೆಗೆ ಜುಲೈ ತಿಂಗಳಲ್ಲಿ ಒಂದೇ ದಿನದಲ್ಲಾದ ಅತಿ ಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

    ದೆಹಲಿಯಲ್ಲಿ ಮುಂದಿನ 2-3 ದಿನಗಳ ಕಾಲ ಹೆಚ್ಚಿನ ತೀವ್ರತೆಯ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಹೊಸ ಬಣ್ಣ – ಫೋಟೋ ಹಂಚಿಕೊಂಡ ಅಶ್ವಿನಿ ವೈಷ್ಣವ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಾಗುತ್ತಿದೆ ದರೋಡೆ ಕೇಸ್‌ – ಶಾ ವಿರುದ್ಧ ಕೇಜ್ರಿವಾಲ್ ಆಕ್ರೋಶ

    ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಾಗುತ್ತಿದೆ ದರೋಡೆ ಕೇಸ್‌ – ಶಾ ವಿರುದ್ಧ ಕೇಜ್ರಿವಾಲ್ ಆಕ್ರೋಶ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಭದ್ರತೆ ವಿಚಾರ ತೀವ್ರ ಚರ್ಚೆಯಾಗುತ್ತಿರುವ ಹೊತ್ತಲ್ಲೇ ಸರಣಿ ದರೋಡೆ ಪ್ರಕರಣಗಳು ವರದಿಯಾಗುತ್ತಿವೆ. ಇಂಡಿಯಾ ಗೇಟ್ ಕೂಗಳತೆ ದೂರದಲ್ಲಿರುವ ಪ್ರಗತಿ ಮೈದಾನ ಟನಲ್ ನಲ್ಲಿ (Pragati Maidan Tunnel) ನಡೆದ ದರೋಡೆ ಬಳಿಕ ಹಲವು ಲೂಟಿ ಪ್ರಕರಣಗಳು (Crime Case) ವರದಿಯಾಗುತ್ತಿವೆ.

    ಮಂಗಳವಾರ ಸಂಜೆ ಉದ್ಯಮಿಯೊಬ್ಬರಿಂದ ಸುಮಾರು 4 ಲಕ್ಷ ರೂ. ಲೂಟಿ ಮಾಡಿರುವ ಘಟನೆ ಕಾಶ್ಮೀರ್ ಗೇಟ್ ಪ್ರದೇಶದಲ್ಲಿ ನಡೆದಿದೆ‌. ಈ ನಡುವೆ ಲಾಹೋರಿ ಗೇಟ್ ಪ್ರದೇಶದ ಟೆಲಿಯಾನ್ ಮಾರುಕಟ್ಟೆಯಲ್ಲಿ ಮೂವರು ವ್ಯಕ್ತಿಗಳು 5 ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದಾರೆ. ಇದನ್ನೂ ಓದಿ: ಹಾಡಹಗಲೇ ದರೋಡೆ – ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿ, ಗನ್ ತೋರ್ಸಿ ಹಣ ದೋಚಿದ ದುಷ್ಕರ್ಮಿಗಳು

    ಇದಕ್ಕೂ ಮೊದಲು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Indira Gandhi International Airport) ಹೊರಗಡೆ ಕಸ್ಟಮ್ ಅಧಿಕಾರಿಗಳಂತೆ ನಟಿಸಿ ಇಬ್ಬರು ವ್ಯಕ್ತಿಗಳು ಸೌದಿ ಅರೇಬಿಯಾದಿಂದ ವಾಪಸ್ಸಾದ ಪ್ರಯಾಣಿಕನಿಂದ 4 ಲಕ್ಷ ಮೌಲ್ಯದ ವಿದೇಶಿ ನೋಟುಗಳನ್ನ ಪಡೆದು ವಂಚಿಸಿದ್ದರು. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಯಾರಿ – ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ಕೆಂಡ

    ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಗೋಲ್ಡಿ ಬ್ರಾರ್ ಹೆಸರಿನಲ್ಲಿ ಬೆದರಿಕೆ ಹಾಕಿ ಉದ್ಯಮಿಯಿಂದ 5 ಕೋಟಿ ಪಡೆದು ವಂಚಿಸಲಾಗಿದೆ. ಎಲ್ಲ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು ಸದ್ಯ ಪ್ರಗತಿ ಮೈದಾನ ಟನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಬಂಧಿಸಿದ್ದಾರೆ.

    ಇದೇ ವಿಚಾರದಲ್ಲಿ ರಾಜಕಾರಣವೂ ಆರಂಭವಾಗಿದ್ದು ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವ ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. ನಿಮ್ಮ ಕೈಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದರೆ ನಮಗೆ ಕೊಡಿ ನಾವು ಮಾಡಿ ತೋರಿಸುತ್ತೇವೆ ಎಂದು ಸವಾಲ್‌ ಹಾಕಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ ಕುರ್ಚಿ ನನ್ನ ಗಂಡ ಕೊಟ್ಟ ಗಿಫ್ಟ್‌ – ನವಜೋತ್ ಸಿಂಗ್‌ ಸಿಧು ಪರ ಪತ್ನಿ ಬ್ಯಾಟಿಂಗ್‌

    ಸಿಎಂ ಕುರ್ಚಿ ನನ್ನ ಗಂಡ ಕೊಟ್ಟ ಗಿಫ್ಟ್‌ – ನವಜೋತ್ ಸಿಂಗ್‌ ಸಿಧು ಪರ ಪತ್ನಿ ಬ್ಯಾಟಿಂಗ್‌

    ಚಂಡೀಗಢ: ತಮ್ಮ ಪತಿ ನವಜೋತ್ ಸಿಂಗ್ ಸಿಧು (Navjot Singh Sidhu) ಅವರು ಪಂಜಾಬ್‌ ಮುಖ್ಯಮಂತ್ರಿ ಸ್ಥಾನವನ್ನು ಭಗವಂತ್‌ ಮಾನ್‌ (Bhagwant Mann) ಅವರಿಗೆ ಉಡುಗೊರೆಯಾಗಿ ನೀಡಿರುವುದಾಗಿ ಸಿಧು ಪತ್ನಿ ನವಜೋತ್‌ ಕೌರ್‌ (Navjot Kaur) ಹೇಳಿದ್ದಾರೆ.

    ಪಂಜಾಬ್ ಸಿಎಂ ಭಗವಂತ್ ಮಾನ್ ಹಾಗೂ ಕಾಂಗ್ರೆಸ್ (Congress) ನಾಯಕ ನವಜೋತ್ ಸಿಂಗ್ ಸಿಧು ನಡುವಿನ ಮಾತಿನ ಚಕಮಕಿಯ ನಡುವೆ ಕೌರ್ ಸರಣಿ ಟ್ವೀಟ್‌ಗಳ ಮೂಲಕ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬ್ರಿಜ್ ಭೂಷಣ್ ಮನೆಗೆ ಸಂಗೀತಾ ಫೋಗಟ್ – ಪೊಲೀಸರಿಂದ ಘಟನೆಯ ಮರುಸೃಷ್ಟಿ

    ಸಿಧು ಅವರಿಗೇ ಪಂಜಾಬ್‌ನ ಚುಕ್ಕಾಣಿ ನೀಡಲು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಬಯಸಿದ್ದರು. ಆದ್ರೆ ಸಿಧು ಅವರು ತಮ್ಮ ಪಕ್ಷಕ್ಕೆ ದ್ರೋಹ ಬಗೆಯದಿರಲು ನಿರ್ಧರಿಸಿದ್ದರು. ಹಾಗಾಗಿ ಭಗವಂತ್‌ ಮಾನ್‌ ಅವರು ಸಿಎಂ ಆದರು ಎಂದು ಪತಿಯ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಶವ ಇಟ್ಟಿದ್ದಕ್ಕೆ ಶಾಲೆಗೆ ಬರಲು ಮಕ್ಕಳು ಹಿಂದೇಟು – ಶಾಲೆ ನೆಲಸಮ

    ಸಿಎಂ ಭಗವಂತ್ ಮಾನ್ ಅವರೇ ಮುಚ್ಚಿಟ್ಟ ರಹಸ್ಯವೊಂದನ್ನು ನಾನಿಂದು ಬಹಿರಂಗಪಡಿಸುತ್ತೇನೆ. ನೀವು ಇಂದು ಅಲಂಕರಿಸಿರುವ ಬಹಳ ಗೌರವಾನ್ವಿತ ಕುರ್ಚಿಯನ್ನು ನಿಮ್ಮ ಹಿರಿಯ ಸಹೋದರ ನವಜೋತ್ ಸಿಂಗ್ ಸಿಧು ಅವರು ನಿಮಗೆ ಉಡುಗೊರೆಯಾಗಿ ನೀಡಿರುವುದು. ನಿಮ್ಮದೇ ಹಿರಿಯ ನಾಯಕ ಪಂಜಾಬ್ ನಾಯಕತ್ವವನ್ನು ನವಜೋತ್ ಮುನ್ನಡೆಸಬೇಕು ಎಂದು ಬಯಸಿದ್ದರು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ರಾಜ್ಯವನ್ನ ಮುನ್ನಡೆಸಲು ಸಿಧು ಅವರನ್ನು ವಿವಿಧ ಮಾಧ್ಯಮಗಳ ಮೂಲಕ ಸಂಪರ್ಕಿಸಿದ್ದರು ಎಂದು ಟ್ವೀಟ್‌ ಮಾಡಿದ್ದಾರೆ.

    2022ರಲ್ಲಿ ಪಂಜಾಬ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನ ಸೋಲಿಸಿ ಎಎಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಇದಕ್ಕೂ ಮುನ್ನ ಸಿಧು ಅವರು ಕಾಂಗ್ರೆಸ್ ತೊರೆದು ಎಎಪಿ ಸೇರಲಿದ್ದಾರೆ ಎಂಬ ವದಂತಿ ಹರಡಿತ್ತು.