Tag: Asha Bhosle

  • ಅಮಿತ್ ಶಾ ಎದುರು ಜನಪ್ರಿಯ ಗೀತೆ ಹಾಡಿದ  ಗಾಯಕಿ ಆಶಾ ಭೋಸ್ಲೆ

    ಅಮಿತ್ ಶಾ ಎದುರು ಜನಪ್ರಿಯ ಗೀತೆ ಹಾಡಿದ ಗಾಯಕಿ ಆಶಾ ಭೋಸ್ಲೆ

    ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಬಾಲಿವುಡ್ ನ ಹೆಸರಾಂತ ಹಿರಿಯ  ಗಾಯಕಿ ಆಶಾ ಭೋಸ್ಲೆ (Asha Bhosle) ಭೇಟಿಯಾಗಿದ್ದಾರೆ. ಈ ಸಮಯದಲ್ಲಿ ಆಶಾ ಭೋಸ್ಲೆ ಅವರು ಹಿಂದಿಯ ಅತ್ಯಂತ ಜನಪ್ರಿಯ ಗೀತೆ ಅಭಿ ನಾ ಜಾವೋ ಚೋಡ್ಕರ್ ಗೀತೆ ಹಾಡಿದ್ದಾರೆ. 1961ರಲ್ಲಿ ಈ ಹಾಡು ಬಹುಬೇಡಿಕೆಯಾಗಿತ್ತು ಎನ್ನುವುದು ವಿಶೇಷ.

    ಆಶಾ ಭೋಸ್ಲೆ ಅವರ ಅತ್ಯುತ್ತಮ ಫೋಟೋಗಳ ಸರಮಾಲೆಯನ್ನು ಅಮಿತ್ ಶಾ ಅವರು ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆಶಾ ಮತ್ತು ಅಮಿತ್ ಶಾ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಸಂಭ್ರಮದ ಕ್ಷಣವನ್ನೂ ಅಮಿತ್ ಶಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

     

    ಸಂಗೀತ, ಪರಂಪರೆ, ಸಂಸ್ಕೃತಿ ಹೀಗೆ ಹಲವಾರು ವಿಚಾರಗಳನ್ನು ಆಶಾ ಭೋಸ್ಲೆ ಅವರ ಜೊತೆ ಚರ್ಚಿಸಿದೆ. ಅದೊಂದು ಅವಿಸ್ಮರಣೀಯ ಕ್ಷಣವಾಗಿತ್ತು. ಆಶಾ ಅವರ ಜೀವನ ಮತ್ತು ಸಂಗೀತ ಪರಂಪರೆ ಎಲ್ಲರಿಗೂ ಸ್ಪೂರ್ತಿ ಆಗುವಂಥದ್ದು ಎಂದು ಅವರು ಬರೆದುಕೊಂಡಿದ್ದಾರೆ.

  • ಆಶಾ ಭೋಸ್ಲೆ ಕುಟುಂಬಕ್ಕೆ ಮತ್ತೊಂದು ಆಘಾತ

    ಆಶಾ ಭೋಸ್ಲೆ ಕುಟುಂಬಕ್ಕೆ ಮತ್ತೊಂದು ಆಘಾತ

    ತಾ ಮಂಗೆಶ್ಕರ್ ಅವರ ನಿಧನದಿಂದ ಇನ್ನೂ ಆಚೆ ಬಾರದ ಸಹೋದರಿ ಆಶಾ ಭೋಸ್ಲೆಗೆ ಮತ್ತೊಂದು ಆಘಾತ ಉಂಟಾಗಿದೆ. ದಂತಕಥೆ ಗಾಯಕಿಯ ಆಶಾ ಅವರ ಪುತ್ರ ಆನಂದ್ ಭೋಸ್ಲೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

    ಮನೆಯಲ್ಲಿದ್ದ ಆನಂದ್ ಏಕಾಏಕಿ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ಪ್ರಜ್ಞೆ ಕಳೆದುಕೊಂಡಿದ್ದ ಅವರನ್ನು ಕೂಡಲೇ ಅವರನ್ನು ದುಬೈನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಏಕಾಏಕಿ ನೆಲದ ಮೇಲೆ ಬಿದ್ದ ಪರಿಣಾಮದಿಂದಾಗಿ ಅವರಿಗೆ ಕೆಲವು ಗಾಯಗಳಾಗಿವೆ. ಈ ವಿಷಯ ತಿಳಿಯುತ್ತಿದಂತೆ ಕುಟುಂಬಸ್ಥರು ಮತ್ತು ಅಭಿಮಾನಿಗಳಲ್ಲಿ ಆತಂಕ ಮನೆಮಾಡಿದೆ.

    ಕೆಲವು ದಿನಗಳ ಹಿಂದೆಯಷ್ಟೇ ಈ ಘಟನೆ ನಡೆದಿದ್ದು, ಆನಂದ್ ಭೋಸ್ಲೆ ಅವರನ್ನು ಮೊದಲು ಐಸಿಯುಗೆ ದಾಖಲಿಸಲಾಗಿತ್ತು. ಈಗವರು ಚೇತರಿಸಿಕೊಂಡಿದ್ದು, ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಗಾಗಲೇ ಲತಾ ಅವರನ್ನು ಕಳೆದುಕೊಂಡು ದುಃಖಿಸುತ್ತಿರುವ ಕುಟುಂಬಕ್ಕೆ ಈ ಘಟನೆಯು ತೀವ್ರ ಆತಂಕ ಸೃಷ್ಟಿ ಮಾಡಿತ್ತು. ಇನ್ನೂ ಆಸ್ಪತ್ರೆಯಲ್ಲಿ ಆನಂದ್ ಚಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸ್ಥಿತಿ ವಿಚಾರಿಸಲು ಪ್ರತಿದಿನವೂ ಆಶಾ ಭೋಸ್ಲೆಗೆ ಕರೆ ಮಾಡುತ್ತಿದ್ದಾರೆ.

    ಆಶಾ ಭೋಂಸ್ಲೆ ಅವರು ತಮ್ಮ ಮಗ ಕೆಳಗೆ ಬಿದ್ದು ಆಸ್ಪತ್ರೆಗೆ ಸೇರಿದಾಗ ದುಬೈನಲ್ಲಿದ್ದರು ಎಂದು ಹೇಳಲಾಗುತ್ತಿದೆ. ಹಾಗಾಗಿ ಅವರು ಶೀಘ್ರದಲ್ಲೇ ಮುಂಬೈಗೆ ಹಿಂತಿರುಗುವುದಿಲ್ಲವಂತೆ. ಆನಂದ್ ಚೇತರಿಸಿಕೊಳ್ಳುತ್ತಿದ್ದು, ಮನೆಗೆ ಯಾವತ್ತು ತೆರಳಲಿದ್ದಾರೆ ಎನ್ನುವ ಮಾಹಿತಿ ಸದ್ಯಕ್ಕಿಲ್ಲ.

    ಈ ವರ್ಷದ ಆರಂಭದಲ್ಲಿ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್ ಅವರ ಹಠಾತ್ ನಿಧನದಿಂದಾಗಿ ಇಡೀ ರಾಷ್ಟ್ರಕ್ಕೆ ಮತ್ತು ಮಂಗೇಶ್ಕರ್ ಕುಟುಂಬಕ್ಕೆ ದೊಡ್ಡ ಆಘಾತವಾಗಿತ್ತು.

  • ಲತಾ ಮಂಗೇಶ್ಕರ್ ಚೇತರಿಕೆಗಾಗಿ ವಿಶೇಷ ಪೂಜೆ ಸಲ್ಲಿಸುತ್ತಿರುವ ಆಶಾ ಭೋಂಸ್ಲೆ

    ಲತಾ ಮಂಗೇಶ್ಕರ್ ಚೇತರಿಕೆಗಾಗಿ ವಿಶೇಷ ಪೂಜೆ ಸಲ್ಲಿಸುತ್ತಿರುವ ಆಶಾ ಭೋಂಸ್ಲೆ

    ಮುಂಬೈ: ಜನಪ್ರಿಯ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಶೀಘ್ರವೇ ಗುಣಮುಖರಾಗಲಿ ಎಂದು ಆಶಾ ಭೋಂಸ್ಲೆ ವಿಶೇಷ ಪೂಜೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

    ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರಿಗೆ 92 ವರ್ಷವಾಗಿರುವುದರಿಂದ ಅವರ ಆರೋಗ್ಯದ ದೃಷ್ಟಿಯಿಂದ ಕಳೆದ ವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ದಾಖಲಿಸಲಾಗಿತ್ತು. ಇದೀಗ ಲತಾ ಮಂಗೇಶ್ಕರ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

    ಈ ಮಧ್ಯೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಆಶಾ ಭೋಂಸ್ಲೆ ಅವರು ಲತಾ ಮಂಗೇಶ್ಕರ್ ಅವರ ಮುಂಬೈ ನಿವಾಸದಲ್ಲಿ ಶಿವನ ಮೂರ್ತಿಯನ್ನು ಇಟ್ಟು, ಅವರ ಚೇತರಿಕೆಗಾಗಿ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಜನಪ್ರಿಯ ಗಾಯಕಿ ಲತಾ ಮಂಗೇಶ್ಕರ್‌ಗೆ ಕೊರೊನಾ – ಐಸಿಯುವಿನಲ್ಲಿ ಚಿಕಿತ್ಸೆ

    ಮತ್ತೊಂದೆಡೆ ಭಾನುವಾರ ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು, ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ನಾನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅವರು ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ನನಗೆ ಅಪ್‍ಡೇಟ್ ಮಾಡುತ್ತಿದ್ದಾರೆ. ಲತಾ ಮಂಗೇಶ್ಕರ್ ಅವರ ಅಭಿಮಾನಿಗಳಿ ಆತಂಕದಲಿರುವುದರಿಂದ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿಯ ಅಪ್‍ಡೇಟ್ ನೀಡುತ್ತಿರುವಂತೆ ತಿಳಿಸಿದ್ದಾರೆ.

    ಲತಾ ಮಂಗೇಶ್ಕರ್ ಅವರು ಇಲ್ಲಿಯವರೆಗೂ ಹಲವಾರು ಭಾಷೆಗಳಲ್ಲಿ ಸುಮಾರು 30,000ಕ್ಕಿಂತಲೂ ಹೆಚ್ಚು ಹಾಡುಗಳನ್ನು ಹಾಡಿದ್ದು, ಭಾರತೀಯ ಚಿತ್ರರಂಗ ಕಂಡ ಮಹಾನ್ ಪ್ರತಿಭಾವಂತ ಗಾಯಕಿ ಎನಿಸಿಕೊಂಡಿದ್ದಾರೆ. ಇವರು 2001ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೇ ಪದ್ಮಭೂಷಣ, ಪದ್ಮವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಹಲವಾರು ರಾಷ್ಟ್ರ ಪ್ರಶಸ್ತಿಗಳು ಮತ್ತು ಚಲನಚಿತ್ರ ಪ್ರಶಸ್ತಿಗಳನ್ನು ತಮ್ಮ ಮೂಡಿಗೆರಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಫಿನಾಡಿನ ಎರಡು ವಸತಿ ಶಾಲೆಯ 55 ಮಕ್ಕಳಿಗೆ ಕೊರೊನಾ

  • ಎಲ್ಲರೂ ಇದ್ದಾರೆ ಆದ್ರೆ ಮಾತನಾಡೋಕ್ಕೆ ಯಾರು ಇಲ್ಲ- ಕಣ್ಣೀರು ತರಿಸುತ್ತೆ ಆಶಾ ಬೋಸ್ಲೆ ಟ್ವೀಟ್

    ಎಲ್ಲರೂ ಇದ್ದಾರೆ ಆದ್ರೆ ಮಾತನಾಡೋಕ್ಕೆ ಯಾರು ಇಲ್ಲ- ಕಣ್ಣೀರು ತರಿಸುತ್ತೆ ಆಶಾ ಬೋಸ್ಲೆ ಟ್ವೀಟ್

    ಮುಂಬೈ: ಬಾಲಿವುಡ್ ದಂತಕತೆ, ಗಾಯಕಿ ಆಶಾ ಬೋಸ್ಲೆ ಅವರು ಎರಡು ದಿನದ ಹಿಂದೆ ಟ್ವಿಟ್ಟರ್ ನಲ್ಲಿ ಒಂದು ಫೋಟೋ ಅಪ್ಲೋಡ್ ಮಾಡಿದ್ದು ಬಹಳ ಚರ್ಚೆಯಾಗುತ್ತಿದೆ.

    ಆಶಾ ಬೋಸ್ಲೆ ಅವರು ಒಂದು ಕಾರ್ಯಕ್ರಮಕ್ಕೆ ಕೋಲ್ಕತ್ತಾಗೆ ತೆರೆಳಿದ್ದರು. ಈ ವೇಳೆ ಆಶಾ ಅವರ ಜೊತೆ ಗಾಯಕರಾದ ಸುದೇಶ್ ಬೋಸ್ಲೆ ಹಾಗೂ ಸಿದ್ಧಾಂತ್ ಬೋಸ್ಲೆ ಕೂಡ ತೆರೆಳಿದ್ದು, ಅಲ್ಲಿ ವೇಟಿಂಗ್ ರೂಮಿನಲ್ಲಿ ಎಲ್ಲರು ಜೊತೆಯಲ್ಲಿ ಇದ್ದರು.

    ಆಶಾ ವೇಟಿಂಗ್ ರೂಮಿನಲ್ಲಿ ಕುಳಿತ ಫೋಟೋವನ್ನು ಹಾಕಿ ಅದಕ್ಕೆ, “ಬಾಗ್ಡೋಗ್ರದಿಂದ ಕೋಲ್ಕತ್ತಾವರೆಗೂ…. ಎಲ್ಲರೂ ಜೊತೆಯಲ್ಲಿಯೇ ಇದ್ದಾರೆ. ಆದರೆ ಮಾತನಾಡುವುದಕ್ಕೆ ಯಾರೂ ಇಲ್ಲ. ಅಲೆಕ್ಸಾಂಡ್ ಗ್ರಹಾಂ ಬೆಲ್ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

    ಆಶಾ ಅವರು ಟ್ವೀಟ್ ಮಾಡಿದ ಫೋಟೋದಲ್ಲಿ ಅವರ ಜೊತೆ ಐದು ಜನ ಇದ್ದಾರೆ. ಆದರೆ ಬೋಸ್ಲೆ ಅವರನ್ನು ಹೊರತುಪಡಿಸಿ ಉಳಿದ ನಾಲ್ಕು ಮಂದಿ ತಮ್ಮ ತಮ್ಮ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು. ಆದರೆ ಆಶಾ ಅವರು ಯಾವುದೇ ಮೊಬೈಲ್ ಬಳಸದೇ ತಮ್ಮ ಜೊತೆಯಲ್ಲಿದ್ದವನ್ನು ನೋಡುತ್ತಿದ್ದರು.

    ಆಶಾ ಅವರ ಈ ಟ್ವೀಟ್ ಸಾಕಷ್ಟು ವೈರಲ್ ಆಗುತ್ತಿದೆ. ಈ ಟ್ವೀಟ್ ನೋಡಿ ಕೆಲವರು ಆಶಾ ಅಂತಹ ಮಹಾನ್ ಗಾಯಕರು ನಮ್ಮ ಪಕ್ಕದಲ್ಲಿ ಇದ್ದರೆ, ದಿನ ಪೂರ್ತಿ ಅವರ ಮಾತುಗಳನ್ನೇ ಕೇಳುತ್ತಿದ್ದೇವು ಎಂದು ಟ್ವೀಟ್ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv