Tag: Ashadevi

  • ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ

    ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ

    – ಇಂದಿನ ರಾಷ್ಟ್ರೀಯ ಹೀರೋ ಆಶಾದೇವಿ

    ಬೆಂಗಳೂರು: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಯಾರಾದರೂ ಸಿನಿಮಾ ಮಾಡಿದರೆ ಹೇಳಿ ನಾನು ನಿರ್ಭಯಾ ತಾಯಿ ಪಾತ್ರವನ್ನು ಮಾಡುತ್ತೇನೆ ಎಂದು ಹಿರಿಯ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ.

    ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇಂದು ನಿರ್ಭಯಾ ದೋಷಿಗಳಿಗೆ ಮರಣದಂಡನೆ ಆಗಿದೆ. ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದರು. ಇದೀಗ ನಿರ್ಭಯಾ ತಾಯಿ ಮಾತಿಗೆ ನಟಿ ಮಾಳವಿಕಾ ಅವಿನಾಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿರ್ಭಯಾ ಪ್ರಕರಣದ ಅಪರಾಧಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ಮಾಳವಿಕಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ನಿರ್ಭಯಾ ದೋಷಿಗಳ ಗಲ್ಲು ಶಿಕ್ಷೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ಯಾರಾದರೂ ಸಿನಿಮಾ ಮಾಡುತ್ತಿದ್ದರೆ ಹೇಳಿ, ನಾನು ನಿರ್ಭಯಾ ತಾಯಿ ಆಶಾದೇವಿ ಪಾತ್ರ ಮಾಡುತ್ತೇನೆ. ಇಂದಿನ ರಾಷ್ಟ್ರೀಯ ಹೀರೋ ಅವರು. ಎಂತಹ ತಾಯಿ” ಎಂದು ಮಾಳವಿಕಾ ನಿರ್ಭಯಾ ತಾಯಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನನ್ನ ಮಗನನ್ನು ಜೈಲಿನಲ್ಲಿಯೇ ಸುರಕ್ಷಿತವಾಗಿ ನೋಡಿಕೊಳ್ಳಿ: ವೈರಲ್ ಆಯ್ತು ಅಪರಾಧಿ ತಾಯಿಯ ವಿಡಿಯೋ 

    ನಿರ್ಭಯಾ ತಾಯಿ ಹೇಳಿದ್ದೇನು?
    ಹಂತಕರಿಗೆ ಗಲ್ಲು ಆಗುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಆಶಾದೇವಿ, ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು. ಸರ್ಕಾರ, ರಾಷ್ಟ್ರಪತಿ ಮತ್ತು ದೇಶದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸುತ್ತೇನೆ. ಅಪರಾಧಿಗಳು ಪದೇ ಪದೇ ನ್ಯಾಯಾಲಯದ ಮೊರೆ ಹೋಗಿದ್ದರಿಂದ ಮೂರು ಬಾರಿ ಡೆತ್ ವಾರೆಂಟ್ ಮುಂದೂಡಿಕೆಯಾಗಿತ್ತು. ಹಾಗಾಗಿ ನ್ಯಾಯ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಎದ್ದಿತ್ತು. ಇಂದು ಏಕಕಾಲದಲ್ಲಿ ನಾಲ್ವರಿಗೂ ಗಲ್ಲಿಗೆ ಹಾಕಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನಿರ್ಭಯಾ ಪ್ರಕರಣ- 2012ರಿಂದ 2020ರವರೆಗೆ ಏನೇನಾಯ್ತು?

    ನಿರ್ಭಯಾ ತಂದೆ ಹೇಳಿದ್ದೇನು?
    ಮಾಧ್ಯಮಗಳ ಜೊತೆ ಮಾತನಾಡಿದ ನಿರ್ಭಯಾ ತಂದೆ ಬದ್ರಿನಾಥ್ ಸಿಂಗ್, ಅಪರಾಧಿಗಳು ಕೊನೆಯವರೆಗೆ ಹೋರಾಟ ಮಾಡಿದ್ದಾರೆ. ಆದರೆ ನಮ್ಮ ವಕೀಲರು ಕೂಡ ಪ್ರತಿ ಕ್ಷಣ, ಪ್ರತಿ ನಿಮಿಷ ಹೋರಾಡಿದ್ದಾರೆ. ನಾವು ಇದ್ದ ಕಡೆ ಅವರು ಇರುತ್ತಿದ್ದರು. ಆದರೆ ಕೊನೆಯದಾಗಿ ನಮಗೆ ಜಯವಾಯಿತು. ಏಕೆಂದರೆ ನಾವು ಸತ್ಯದ ಕಡೆ ಇದ್ದವು ಎಂದು ಪ್ರತಿಕ್ರಿಯಿಸಿದರು.

    2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ದೊರಕಿದೆ. ನಿರ್ಭಯಾ ಪ್ರಕರಣದ ದೋಷಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ. ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿದ್ದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್‍ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

    ಹೈಕೋರ್ಟಿನಲ್ಲಿ ಅರ್ಜಿ ವಜಾಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ಸುಪ್ರೀಂಕೋರ್ಟಿಗೆ ಹೋಗಿ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ದೋಷಿಗಳು ಮನವಿ ಮಾಡಿಕೊಂಡಿದ್ದರು. ಮಧ್ಯರಾತ್ರಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದವನ್ನು ಆಲಿಸಿತು. ತದನಂತರ ಅರ್ಜಿಯನ್ನು ವಜಾಗೊಳಿಸಿತ್ತು.

  • ದೆಹಲಿ ಚುನಾವಣಾ ಕಣಕ್ಕೆ ನಿರ್ಭಯ ಸಂತ್ರಸ್ತೆಯ ತಾಯಿ?

    ದೆಹಲಿ ಚುನಾವಣಾ ಕಣಕ್ಕೆ ನಿರ್ಭಯ ಸಂತ್ರಸ್ತೆಯ ತಾಯಿ?

    ನವದೆಹಲಿ : ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 7 ವರ್ಷಗಳ ಕಾನೂನು ಹೋರಾಟದ ಬಳಿಕ ಸಂತ್ರಸ್ತೆಗೆ ನ್ಯಾಯ ದೊರಕಿದೆ. ಜನವರಿ 22 ಬೆಳಗ್ಗೆ 7 ಗಂಟೆಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಡೆತ್ ವಾರಂಟ್ ಜಾರಿ ಮಾಡಿದೆ. ನಿರಂತರ ಕಾನೂನು ಹೋರಾಟ ಮಾಡಿದ ಸಂತ್ರಸ್ತೆಯ ತಾಯಿ ಆಶಾದೇವಿ ಅವರ ಧೈರ್ಯವನ್ನು ಇಡೀ ದೇಶವೇ ಮೆಚ್ಚಿ ಅಭಿನಂದಿಸಿದ್ದು ಈ ಜನಪ್ರಿಯತೆಯನ್ನು ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ಮುಂದಾಗಿವೆ.

    ಆಶಾದೇವಿ ದೆಹಲಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುದ್ದಿ ಕೇಳಿ ಬಂದಿದೆ. ಕೆಲವು ಪಕ್ಷಗಳು ಈ ನಿಟ್ಟಿನಲ್ಲಿ ಚರ್ಚೆ ಮಾಡಿದ್ದು, ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎನ್ನಲಾಗುತ್ತಿದೆ.

    ದೆಹಲಿಯಲ್ಲಿ ಫೆಬ್ರವರಿ 8 ರಂದು ಮತದಾನಕ್ಕೆ ದಿನಾಂಕ ನಿಗದಿಯಾಗಿದ್ದು, 11 ರಂದು ಫಲಿತಾಂಶ ಹೊರಬರಲಿದೆ. ಇದಕ್ಕೂ ಮೊದಲು ಅಂದರೆ ಜನವರಿ 22 ರಂದು ನಿರ್ಭಯ ದೋಷಿಗಳಿಗೆ ಗಲ್ಲು ಶಿಕ್ಷೆಯಾಗಲಿದೆ. ಈ ವೇಳೆ ಇಡೀ ದೇಶ ಸಂಭ್ರಮವನ್ನು ವ್ಯಕ್ತಪಡಿಸಲಿದೆ.

    ಪ್ರಕರಣದಿಂದ ಇಡೀ ದೇಶಕ್ಕೆ ಪರಿಚಯವಾಗಿರುವ ನಿರ್ಭಯ ತಾಯಿ ಆಶಾದೇವಿಯನ್ನು ಚುನಾವಣಾ ಕಣಕ್ಕೆ ಇಳಿಸಿದರೆ ಆ ಕ್ಷೇತ್ರದಲ್ಲಿ ಗೆಲುವು ಖಚಿತ ಮತ್ತು ಪಕ್ಷದ ಕೆಲವು ಕ್ಷೇತ್ರಗಳ ಮೇಲೂ ಇದು ಪರಿಣಾಮ ಬರಲಿದೆ ಎನ್ನುವುದು ರಾಜಕೀಯ ಪಕ್ಷಗಳ ಲೆಕ್ಕಾಚಾರ. ಹೀಗಾಗಿ ಆಶಾದೇವಿ ಮಾತುಕತೆ ನಡೆಸಿದ್ದು, ಯಾವುದು ಅಂತಿಮವಾಗದ ಹಿನ್ನೆಲೆ ಯಾವುದೇ ಪಕ್ಷ ಬಹಿರಂಗವಾಗಿ ಈ ಬಗ್ಗೆ ಮಾತನಾಡಿಲ್ಲ.

    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಆಶಾದೇವಿ, ಮಗಳನ್ನ ಅತ್ಯಾಚಾರ ಮಾಡಿದ ದೋಷಿಗಳು ನೇಣು ಕುಣಿಕೆಯಲ್ಲಿ ನೇತಾಡುವುದನ್ನು ಮೊದಲು ನೋಡಬೇಕು. ಬಳಿಕ ಚುನಾವಣೆ ಸ್ವರ್ಧಿಸುವ ಬಗ್ಗೆ ಯೋಚನೆ ಮಾಡುತ್ತೇನೆ ಎಂದಿದ್ದಾರೆ. ಈ ಮೂಲಕ ಅವರು ಚುನಾವಣೆ ಸ್ಪರ್ಧಿಸುವ ಸಾಧ್ಯತೆಗಳನ್ನು ತಳ್ಳಿ ಹಾಕಿಲ್ಲ.

    ದೆಹಲಿಯಲ್ಲಿ ನೇರ ಫೈಟ್ ನೀಡುತ್ತಿರುವ ಬಿಜೆಪಿ ಮತ್ತು ಆಮ್ ಅದ್ಮಿ ಆಶಾದೇವಿ ಅವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಅವರ ಪರ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದು ಏಳು ವರ್ಷಗಳ ಕಾಲ ಕಾನೂನು ಹೋರಾಟ ಮಾಡಿದ ಅವರ ಧೈರ್ಯವನ್ನು ಹಾಡಿ ಹೊಗಳುತ್ತಿದ್ದಾರೆ. ಕೆಲವು ಗುಪ್ತ ಸಭೆಗಳು ಕೂಡಾ ನಡೆದಿದ್ದು ಗೆಲ್ಲುವ ಕುದುರೆ ಸೆಳೆಯಲು ಎರಡು ಪಾರ್ಟಿಗಳು ನಿರಂತರ ಪ್ರಯತ್ನ ಮಾಡುತ್ತಿವೆ.