Tag: Ashok Pattan

  • ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

    ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

    ಬೆಂಗಳೂರು: ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ (ED Raid) ಮಾಡಿದೆ ಎಂದು ವಿಧಾನಸಭೆ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ (Ashok Pattan) ಇಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಇಡಿ ದಾಳಿ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂಸದ ತುಕಾರಾಂ, ಶಾಸಕ ನಾಗೇಂದ್ರ ಸೇರಿದಂತೆ ಹಲವರ ಮೇಲೆ ಇಡಿ ದಾಳಿ ಮಾಡಿದೆ. ಎಂಪಿ ತುಕಾರಾಂ ಸಭ್ಯಸ್ಥ ವ್ಯಕ್ತಿ. ಬಳ್ಳಾರಿಯಲ್ಲಿ ಕಾಂಗ್ರೆಸ್‌ನವರ ಮೇಲೆ ದಾಳಿ ನಡೆದಿದೆ. ಇಡಿ ದಾಳಿ ಮಾಡಿ ತೇಜೊವಧೆಗೆ ಮಾಡೋ ಕೆಲಸ ಮಾಡ್ತಿದ್ದಾರೆ. ಈಗಾಗಲೇ ತನಿಖೆ ನಡೆಯುತ್ತಿದೆ. ಈಗ ದಾಳಿ ಮಾಡ್ತಿರೋದಕ್ಕೆ ರಾಜಕೀಯ ಕಾರಣ ಇದೆ ಅಂತ ಆರೋಪ ಮಾಡಿದರು. ಇದನ್ನೂ ಓದಿ: ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

    ಚುನಾವಣೆಗೆ ಹಣ ಬಳಕೆಯಾಗಿದೆ ಅನ್ನೋದಕ್ಕೆ ತನಿಖೆ ನಡೆಯುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಆಗ್ತಿದೆ. ತನಿಖೆಯಲ್ಲಿ ತಪ್ಪಾಗಿರೋದು ಕಂಡು ಬಂದ್ರೆ ಶಿಕ್ಷೆಯಾಗಲಿ‌. ಅದು ಬಿಟ್ಟು ಹೀಗೆ ತೇಜೋವಧೆ ಮಾಡೋದು ಸರಿಯಲ್ಲ ಎಂದರು.

    ನಾಗೇಂದ್ರ ಅವರನ್ನ ಮತ್ತೆ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾಗೇಂದ್ರ ಅವರನ್ನ ಸಂಪುಟಕ್ಕೆ ತೆಗೆದುಕೊಳ್ಳೋದು ಹೈಕಮಾಂಡ್, ಸಿಎಂಗೆ ಬಿಟ್ಟಿದ್ದು ಎಂದು ತಿಳಿಸಿದರು. ಇದನ್ನೂ ಓದಿ: ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

  • ರಾಜ್ಯಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಶಾಸಕರಿಗೆ ವಿಪ್‌ ಜಾರಿ

    ರಾಜ್ಯಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಶಾಸಕರಿಗೆ ವಿಪ್‌ ಜಾರಿ

    – ಅಡ್ಡಮತದಾನ ಮಾಡಿದ್ರೆ ಶಾಸಕ ಸ್ಥಾನದಿಂದ ವಜಾ – ಅಶೋಕ್ ಪಟ್ಟಣ್

    ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾವಣೆಗೆ ಕಡ್ಡಾಯ ಹಾಜರಾತಿಗೆ ಕಾಂಗ್ರೆಸ್ ಶಾಸಕರಿಗೆ ವಿಪ್ (WIP) ಜಾರಿ ಮಾಡಲಾಗಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ (Ashok Pattan) ತಿಳಿಸಿದ್ದಾರೆ.

    ವಿಧಾನನಸೌಧದಲ್ಲಿ (Vidhan Soudha) ಮಾತನಾಡಿದ ಅವರು, ಎಲ್ಲಾ ಶಾಸಕರಿಗೂ (Congress MLAs) ವಿಪ್ ಕೊಟ್ಟಿದ್ದೀವಿ. ಸಂಜೆ 6 ಗಂಟೆಗೆ ಕಂಪಲ್ಸರಿ ಹಾಜರಾಗಲು ಹೇಳಿದ್ದೀವಿ ಹಿಲ್ಟನ್ ಹೋಟೆಲ್‌ಗೆ ಬರುವಂತೆ ವಾಟ್ಸಪ್‌ನಲ್ಲಿ ಸಂದೇಶ ಕಳಿಸಿದ್ದೀವಿ, ವೈಯಕ್ತಿಕವಾಗಿಯೂ ಫೋನ್‌ ಮಾಡಿ ಹೇಳಿದ್ದೀವಿ. ಎಲ್ಲಾ ಶಾಸಕರು ರಾತ್ರಿ ಅಲ್ಲೇ ಉಳಿದುಕೊಳ್ತೀವಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕುಸಿದ ಕಬಿನಿ ಡ್ಯಾಂ ನೀರಿನ ಮಟ್ಟ – ಬೆಂಗಳೂರು, ಮೈಸೂರಿಗೆ ಹೆಚ್ಚಾಗಲಿದೆ ನೀರಿನ ಸಮಸ್ಯೆ

    ಮಂಗಳವಾರ ಬೆಳಗ್ಗೆ ಎಲ್ಲಾ ಶಾಸಕರು ಹೋಟೆಲ್‌ನಿಂದ ಬಸ್‌ನಲ್ಲಿ ಬರ್ತೀವಿ. ಬಸ್ ವ್ಯವಸ್ಥೆ ಆಗಿದೆ, ಎಲ್ಲರೂ ಒಟ್ಟಿಗೆ ಬಂದು ಮತ ಹಾಕಿ ಹೋಗ್ತೀವಿ. ವೋಟಿಂಗ್‌ ಪ್ಯಾಟ್ರನ್ ಟ್ರೈನಿಂಗ್ ಕೊಡೋಕೆ, ಯಾವ ರೀತಿ ಮಾರ್ಕ್ ಮಾಡಬೇಕು ಅಂತಲೇ ಶಾಸಕಾಂಗ ಪಕ್ಷದ ಸಭೆ ಕರೆದಿರೋದು. ಅಡ್ಡ ಮತದಾನದ ಭೀತಿನೇ ಇಲ್ಲ. ಏಕೆಂದರೆ ತೋರಿಸಿ ವೋಟ್ ಹಾಕಬೇಕು, ಆದ್ದರಿಂದ ಯಾರೂ ಬೇರೆಯವರಿಗೆ ಮತ ಹಾಕಲ್ಲ. ಅಡ್ಡ ಮತದಾನ ಮಾಡಿದ್ರೆ ಸ್ಪೀಕರ್‌ಗೆ ದೂರು ಕೊಟ್ಟು ಶಾಸಕ ಸ್ಥಾನದಿಂದ ವಜಾ ಗೊಳಿಸ್ತೀವಿ, ಕ್ರಮ ಕೈಗೊಳ್ತೀವಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಟೂರ್ನಮೆಂಟ್‍ಗಳಲ್ಲಿ ಆಡುವ ಅವಕಾಶ ಕೊಡಿಸೋದಾಗಿ 12 ಲಕ್ಷ ರೂ. ವಂಚಿಸಿದ ಕೋಚ್!

  • ಡಿಕೆಶಿ ಬೆಳಗಾವಿ ಮಾತ್ರವಲ್ಲ ರಾಜ್ಯ, ರಾಷ್ಟ್ರ ರಾಜಕಾರಣವನ್ನೂ ಮಾಡ್ತಾರೆ: ಅಶೋಕ್ ಪಟ್ಟಣ

    ಡಿಕೆಶಿ ಬೆಳಗಾವಿ ಮಾತ್ರವಲ್ಲ ರಾಜ್ಯ, ರಾಷ್ಟ್ರ ರಾಜಕಾರಣವನ್ನೂ ಮಾಡ್ತಾರೆ: ಅಶೋಕ್ ಪಟ್ಟಣ

    ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಬೆಳಗಾವಿ ರಾಜಕೀಯದಲ್ಲಿ (Politics) ಮಾತ್ರವಲ್ಲ, ರಾಜ್ಯ ರಾಜಕೀಯ ಮತ್ತು ರಾಷ್ಟ್ರ ರಾಜಕೀಯವನ್ನೂ ಮಾಡುತ್ತಾರೆ ಎಂದು ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ (Ashok Pattan) ತಿಳಿಸಿದ್ದಾರೆ.

    ಬೆಳಗಾವಿ (Belagavi) ರಾಜಕೀಯದಲ್ಲಿ ಡಿಕೆಶಿ ಹಸ್ತಕ್ಷೇಪ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದ ಅಧ್ಯಕ್ಷರಾದ ಅವರು ಇಡೀ ರಾಜ್ಯಕ್ಕೆ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಅವರು ಬೆಳಗಾವಿ ಪಾಲಿಟಿಕ್ಸ್ ಮಾತ್ರ ಮಾಡುವುದಿಲ್ಲ. ಇಡೀ ರಾಜ್ಯದ ಪಾಲಿಟಿಕ್ಸ್ ಮಾಡುತ್ತಾರೆ. ಬೆಳಗಾವಿಗೆ ಮಾತ್ರ ಅವರು ಸೀಮಿತವಲ್ಲ, ರಾಷ್ಟ್ರ ಮಟ್ಟದ ರಾಜಕೀಯವನ್ನೂ ಅವರು ಮಾಡುತ್ತಾರೆ. ಬೆಳಗಾವಿಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ. ಯಾಕೆ ಅವರು ಹಸ್ತಕ್ಷೇಪ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ನೂರಕ್ಕೆ ನೂರರಷ್ಟು ತಪ್ಪಿತಸ್ಥ, ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ಲಿ- ಈಶ್ವರಪ್ಪ ಆಗ್ರಹ

    ಡಿಕೆಶಿ ಬೆಳಗಾವಿಗೆ ತೆರಳಿದ್ದ ವೇಳೆ ಶಾಸಕರು ಆಗಮಿಸಿದ ವಿಚಾರಕ್ಕೆ, ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಇದ್ದರು. ನಾನು ವೈಯಕ್ತಿಕ ಕಾರಣಕ್ಕೆ ಬೆಂಗಳೂರಿನಲ್ಲಿ ಇದ್ದೆ. ಹೀಗಾಗಿ ಹೋಗಲು ಆಗಿಲ್ಲ. ಸಭೆ ಕರೆದಿದ್ದರೆ ನಾವು ಹೋಗುತ್ತಿದ್ದೆವು. ಅವರು ಬರುವುದು ಗೊತ್ತಿತ್ತು, ಸಭೆ ಇಲ್ಲದ ಕಾರಣ ನಾವು ಹೋಗಿಲ್ಲ. ಸಿಎಂ, ಅಧ್ಯಕ್ಷರು ಹಾಗೂ ಸಚಿವರು ಬಂದರೆ ನಾವು ಹೋಗೇ ಹೋಗ್ತೀವಿ. ಊರಲ್ಲಿ ಇಲ್ಲದ ಕಾರಣ ಹೋಗಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಸತೀಶ್ ಜಾರಕಿಹೊಳಿ ಟೀಂನಿಂದ ಪ್ರವಾಸ ವಿಚಾರಕ್ಕೆ, ನಾನು ಬೆಳಗಾವಿ ಜಿಲ್ಲೆಯವನು, ಅವರು ಯಾವಾಗಲೂ ಮೈಸೂರಿಗೆ ನನ್ನನ್ನು ಕರೆದಿಲ್ಲ. ನನ್ನ ಪಾಡಿಗೆ ನಾನು ಒಂದು ದಿನ ಅವರ ಮನೆಗೆ ಹೋಗಿದ್ದೆ. ಕಾಕತಾಳಿಯ ಎಂಬಂತೆ 4-5 ಶಾಸಕರು ಬಂದರು. ನಾನು ಅಭಿವೃದ್ಧಿ ವಿಚಾರವಾಗಿ ಮಾತನಾಡಿಕೊಂಡು ಬಂದೆ. ಅಲ್ಲಿ ಮೈಸೂರಿಗೆ ಹೋಗುವ ವಿಷಯವಾಗಿ ಯಾವ ಮೀಟಿಂಗ್ ಕೂಡಾ ಆಗಿಲ್ಲ. ಮೀಟಿಂಗ್ ಇದ್ದರೆ ನಾನೇ ಹೇಳುತ್ತೇನೆ. ಆಗ ಶಾಸಕರು ಸೇರುತ್ತಾರೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ ಕಾಂಗ್ರೆಸ್ ಕಲೆಕ್ಷನ್ ವಂಶಾವಳಿ, ನಿಗಮ ಮಂಡಳಿಗಳ ರೇಟ್ ಕಾರ್ಡ್ ರಿಲೀಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]