Tag: ashwath narayana

  • ಈದ್ಗಾ ಮೈದಾನದಲ್ಲಿ ಶಿವಲಿಂಗ ಪ್ರತಿಷ್ಠಾಪನೆಗೆ ಪ್ಲ್ಯಾನ್‌ – ವಿವಾದ ತಿಳಿಗೊಳಿಸಲು ಶಾಂತಿ ಸಭೆ

    ಈದ್ಗಾ ಮೈದಾನದಲ್ಲಿ ಶಿವಲಿಂಗ ಪ್ರತಿಷ್ಠಾಪನೆಗೆ ಪ್ಲ್ಯಾನ್‌ – ವಿವಾದ ತಿಳಿಗೊಳಿಸಲು ಶಾಂತಿ ಸಭೆ

    ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಸ್ಪಷ್ಟಪಡಿಸುತ್ತಿದ್ದಂತೆ ವಿವಾದ ಮತ್ತಷ್ಟು ತಾರಕಕ್ಕೇರುತ್ತಿದೆ.

    ಸ್ವಾತಂತ್ರ್ಯ ದಿನಾಚರಣೆಗಾಗಲಿ, ಗಣೇಶೋತ್ಸವಕ್ಕಾಗಲಿ ಯಾರಾದ್ರೂ ಅರ್ಜಿ ಸಲ್ಲಿಸಿದರೆ ಮುಂದಿನ ನಿರ್ಧಾರ ಮಾಡೋದಾಗಿ ಸಚಿವ ಅಶೋಕ್ ಹೇಳಿದ್ದರು. ಈ ಬೆನ್ನಲ್ಲೇ ಗಣೇಶೋತ್ಸವಕ್ಕೆ ಪ್ರತ್ಯೇಕವಾಗಿ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಶ್ರೀರಾಮಸೇನೆ, ಹಿಂದೂ ಸಂಘಟನೆಗಳು ಮುಂದಾಗಿವೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಶುರುವಾಗುತ್ತಾ ಮೈನಿಂಗ್ ಚಾಪ್ಟರ್ 2? – ಅನುಮತಿ ಕೇಳಿದ ರೆಡ್ಡಿ

    ಒಂದು ವೇಳೆ ಗಣೇಶೋತ್ಸವಕ್ಕೆ ಅನುಮತಿ ಕೊಡದಿದ್ರೆ, ಇದೇ ಮೈದಾನದಲ್ಲಿ ಶಿವಲಿಂಗ ಸ್ಥಾಪನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿವೆ. ಅಲ್ಲದೇ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಮಾಡೇ ಮಾಡ್ತೀವಿ ಎಂದು ಶ್ರೀ ರಾಮಸೇನೆ ಬೆಂಗಳೂರು ಘಟಕ ಸಾಮಾಜಿಕ ಜಾಲತಾಣದಲ್ಲಿ ಸವಾಲು ಹಾಕಿದೆ. ಇದನ್ನೂ ಓದಿ: ನಾನು ಉತ್ಸವ ಮಾಡೋಕೆ ಹೋಗಿಲ್ಲ- ಸಚಿವರು ಕಾಣೆಯಾಗಿದ್ದಾರೆ ಎಂದ ಕಾಂಗ್ರೆಸ್‌ಗೆ ಬಿ.ಸಿ ಪಾಟೀಲ್ ಟಾಂಗ್

    ಇನ್ನೂ ಈದ್ಗಾ ಮೈದಾನವನ್ನು ಇಂಥದ್ದಕ್ಕೇ ಕೊಡ್ಬೇಕು ಎಂಬ ಜಮೀರ್ ವಾದ ಸರಿಯಲ್ಲ ಎಂದು ಸಚಿವ ಅಶ್ವಥ್‌ನಾರಾಯಣ್ ಹೇಳಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಕೇಂದ್ರ ವಲಯ ಡಿಸಿಪಿ, ಧಾರ್ಮಿಕ ಮುಖಂಡರ ಜೊತೆ ಶಾಂತಿ ಸಭೆ ನಡೆಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಧ್ವಜಾರೋಹಣ ನಿರ್ಧಾರದಿಂದ ಹಿಂದೆ ಸರಿಯಲ್ಲ ಅಂತ ಚಾಮರಾಜಪೇಟೆ ನಾಗರಿಕರ ವೇದಿಕೆ ಎಚ್ಚರಿಕೆ ಕೊಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಆಟದ ಮೈದಾನಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ? ಡಿಕೆಶಿಗೆ ನಟಿ ರಮ್ಯಾ ಪ್ರಶ್ನೆ

    ಕಾಂಗ್ರೆಸ್ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ? ಡಿಕೆಶಿಗೆ ನಟಿ ರಮ್ಯಾ ಪ್ರಶ್ನೆ

    ಬೆಂಗಳೂರು: ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣವು ಈಗಾಗಲೇ ಕಲಬುರಗಿ ಜಿಲ್ಲೆಯಿಂದ ಸಿಲಿಕಾನ್‌ಸಿಟಿ ಬೆಂಗಳೂರು ಹಾಗೂ ಹಾಸಜನ ಜಿಲ್ಲೆಗಳಿಗೂ ವ್ಯಾಪಿಸಿದೆ.

    ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು 50ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಈ ನಡುವೆ ಉನ್ನತಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಅವರ ಸಹೋದರನೂ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬರುತ್ತಿದ್ದಂತೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವೆ ವಾಕ್‌ಸಮರ ಶುರುವಾಗಿದೆ. ಇದನ್ನೂ ಓದಿ: 2-3 ದಿನದಲ್ಲಿ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ

    ಈ ನಡುವೆ ಸ್ಯಾಂಡಲ್‌ವುಡ್ ಕ್ವೀನ್ ಹಾಗೂ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಎತ್ತಿದ್ದಾರೆ. ಇದನ್ನೂ ಓದಿ: ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ

    `ತಮ್ಮ ಇಲಾಖೆ ಹಗರಣಗಳ ವಿಚಾರಗಳ ಬಗ್ಗೆ ಯಾರು ಧ್ವನಿ ಎತ್ತರಬಾರದೆಂದು ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವ ಉದ್ದೇಶದಿಂದ ಅಶ್ವಥ್ ನಾರಾಯಣ್ ಅವರು ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ’ ಎಂದು ಡಿ.ಕೆ.ಶಿವಕುಮಾರ್ ನಿನ್ನೆಯಷ್ಟೇ ಆರೋಪಿಸಿದ್ದರು.

    dkshivakumar

    ಈ ಕುರಿತು ಟ್ವೀಟ್ ಮಾಡಿರುವ ನಟಿ ರಮ್ಯಾ, ಪಕ್ಷಾತೀತವಾಗಿ ಜನರು ಪರಸ್ಪರ ಭೇಟಿಯಾಗುತ್ತಾರೆ. ಸಮಾರಂಭಗಳಿಗೆ ಹೋಗುತ್ತಾರೆ. ಕೆಲವರು ಅಂತಹ ಕುಟುಂಬಗಳಲ್ಲಿ ಮದುವೆಯಾಗುತ್ತಾರೆ. ಆದರೆ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ನನಗೆ ಆಶ್ಚರ್ಯವಾಗಿದೆ. ಎಂ.ಬಿ.ಪಾಟೀಲ್ ಒಬ್ಬ ಕಟ್ಟಾ ಕಾಂಗ್ರೆಸ್ಸಿಗ. ಹಾಗಿದ್ದ ಮೇಲೆ ಪಕ್ಷ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ? ಎಂದು ಬರೆದುಕೊಂಡಿದ್ದಾರೆ.

     

  • ನನ್ನ ಆಸ್ತಿ, ಅಶ್ವಥ್ ನಾರಾಯಣ ಆಸ್ತಿಯನ್ನು ತನಿಖೆಗೆ ಒಳಪಡಿಸಲಿ: ಉಗ್ರಪ್ಪ

    ನನ್ನ ಆಸ್ತಿ, ಅಶ್ವಥ್ ನಾರಾಯಣ ಆಸ್ತಿಯನ್ನು ತನಿಖೆಗೆ ಒಳಪಡಿಸಲಿ: ಉಗ್ರಪ್ಪ

    ಬೆಂಗಳೂರು: ನನ್ನ ಆಸ್ತಿ, ಅಶ್ವಥನಾರಾಯಣ ಅವರ ಆಸ್ತಿಯನ್ನು ಎರಡೂ ತನಿಖೆಗೆ ಒಳಪಡಿಸಲಿ. ಇವರ ಹಾಗೆ ವಾಮಾ ಮಾರ್ಗದಿಂದ ಆಸ್ತಿ ಮಾಡಿ ದುರಹಂಕಾರ ತಲೆಗೆ ಏರಿಸಿಕೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ಉಗ್ರಪ್ಪ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಅಶ್ವಥ್ ನಾರಾಯಣ ಈ ರಾಜ್ಯದ ಮಂತ್ರಿ. ಒಂದು ಪಕ್ಷದ ವಕ್ತಾರರನ್ನು ಏಕವಚನದಲ್ಲಿ ಮಾತನಾಡಿದ್ದು ನೋಡಿದರೆ ಅವರ ಸಂಸ್ಕಾರ ತೋರಿಸುತ್ತದೆ. ದರ್ಶನ್ ಗೌಡ ಅವರು ಮಾಗಡಿಯವರು. ನೀವು ಅಲ್ಲಿ ಉಸ್ತುವಾರಿ ಸಚಿವರು. ಇದರಿಂದಾಗಿ ದರ್ಶನ್ ಗೌಡ ಅರೆಸ್ಟ್ ಆಗಿಲ್ಲ. ನಿಮ್ಮ ಸಹೋದರ ಸತೀಶ್ ಹಣ ಪಡೆದಿದ್ದಾರೆ ಅಂತ ಜನ ಮಾತನಾಡ್ತಾರೆ ಎಂದು ಟೀಕಿಸಿದರು.

    ಡಿಕೆಶಿ ಭ್ರಷ್ಟಾಚಾರದ ಬಗ್ಗೆ ನಾನು ಎಲ್ಲಿಯೂ ಮಾತನಾಡಿಲ್ಲ. ಮಾತನಾಡಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನಾನು ಡಿಕೆಶಿ ಭ್ರಷ್ಟ ಅಂತ ಹೇಳಿದ ದಾಖಲೆ ಕೊಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಪಡೆಯಿರಿ. ಈ ಹಂತದಲ್ಲಿ ದಾಖಲೆ ಪ್ರಶ್ನೆ ಉದ್ಬವವಾಗಲ್ಲ ಎಂದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮ – ಕೈ ನಾಯಕರು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ: ಅಶ್ವಥ್ ನಾರಾಯಣ

    ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದ ದಾಖಲೆ ಇದೆ ಅಂತಾರೆ. ಒಬ್ಬ ಸಚಿವರಾಗಿ ನೀವು ಅದನ್ನು ಸಾಬೀತುಪಡಿಸಿ. ದಾಖಲಾತಿ ಇದ್ದರೆ ದೂರು ದಾಖಲು ಮಾಡಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ

  • ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು: ಡಿ.ಕೆ.ಶಿವಕುಮಾರ್

    ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು: ಡಿ.ಕೆ.ಶಿವಕುಮಾರ್

    ಬೆಂಗಳೂರು: ಮುಖ್ಯಮಂತ್ರಿಗಳ ಮುಂದೆಯೇ ಉಸ್ತುವಾರಿ ಸಚಿವರು ಗಂಡಸರು ಯಾರಿದ್ದಾರೆ ಅಂತ ಕೇಳಿದ್ದರು. ಅವರೊಬ್ಬರೇ ಗಂಡಸರು. ರಾಮನಗರದಲ್ಲಿ ಗಂಡಸರಿಲ್ಲ ನಾವೆಲ್ಲಾ ಹೆಂಗಸರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಜೋರಾಗಿ ಅಧಿಕಾರ ಚಲಾಯಿಸಿದರೆ ಡಿ.ಕೆ.ಶಿವಕುಮಾರ್ ಉಸಿರು ನಿಂತು ಹೋಗುತ್ತದೆ ಅಂತ ಸಿಎಂ ಹೇಳಿದ್ದಾರೆ. ಇದರಿಂದ ನನಗೂ ಸಹ ಭಯವಾಗುತ್ತಿದೆ. ಮತ್ತೊಂದೆಡೆ ಮುಖ್ಯಮಂತ್ರಿಗಳ ಮುಂದೆಯೇ ಉಸ್ತುವಾರಿ ಸಚಿವರು ಗಂಡಸರು ಯಾರಿದ್ದಾರೆ ಅಂತ ಕೇಳಿದ್ದರು. ಅವರೊಬ್ಬರೇ ಗಂಡಸರು. ರಾಮನಗರದಲ್ಲಿ ಗಂಡಸರಿಲ್ಲ ನಾವೆಲ್ಲಾ ಹೆಂಗಸರು, ನಾನು, ನನ್ನ ತಮ್ಮ ಅನಿತಾ ಕುಮಾರಸ್ಚಾಮಿ ಎಲ್ಲರು ಅವರ ಗಂಡಸ್ತನ ನೋಡಿ ಗಢ, ಗಢ ಅಂತ ನಡುಗುತ್ತಿದ್ದೇವೆ. ಇದೀಗ ಪಿಎಸ್‍ಐ ಅಕ್ರಮದಲ್ಲಿ ಸಚಿವರೊಬ್ಬರ ಹೆಸರು ಕೇಳಿ ಬರುತ್ತಿದೆ. ಅವರ ತಮ್ಮ ಅನ್ನಲ್ಲ ಅವರ ಕುಟುಂಬಸ್ಥರು ಸಂಬಂಧಿಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಬಗ್ಗೆ ಸಿಎಂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದರು.

    ನಾನು ಆ ಸಚಿವರ ಬಗ್ಗೆ ಮಾತನಾಡುತ್ತೇನೆ ಅಂತ ನನಗೆ ಕಾಲ್ ಬರುತ್ತಿವೆ. ಅಣ್ಣ ಅವರ ಬಗ್ಗೆ ಮಾತನಾಡಬೇಡಿ ಅವರು ಈ ಬಾರಿ ಸಿಎಂ ಆಗಿ ಬಿಡುತ್ತಾರೆ. ಅವರ ಬಗ್ಗೆ ಮಾತನಾಡಿ ತೊಂದರೆ ಮಾಡಬೇಡಿ ಅಂತ ಯಾರ್ಯಾರೋ ಕಾಲ್ ಮಾಡಿದ್ದರು. ಇದನ್ನೂ ಓದಿ:  ಪಿಎಸ್‍ಐ ಅಕ್ರಮ – ಕೈ ನಾಯಕರು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ: ಅಶ್ವಥ್ ನಾರಾಯಣ

    ಪಿಎಸ್‍ಐ ನೇಮಕಾತಿ ಅಕ್ರಮದ ಬಗ್ಗೆ ಸಿಎಂ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಮುಂದಾಗಬೇಕು. ಪಿಎಸ್‍ಐ ಪರೀಕ್ಷಾ ಅಕ್ರಮದಲ್ಲಿ ಬೊಮ್ಮಾಯಿ ಅವರು ಭಾಗಿಯಾಗಿದ್ದಾರೆ ಅಂತ ನಾನು ಹೇಳಲ್ಲ. ಸಿಎಂ ಬೊಮ್ಮಾಯಿ ಅವರ ಕಾಲದಲ್ಲಿ ಈ ಅಕ್ರಮ ನಡೆದಿಲ್ಲ. ಅದು ನನಗೆ ಚೆನ್ನಾಗಿ ಗೊತ್ತಿದೆ. ಆದರೆ ಸಿಎಂ ಅವರು ಸಚಿವರ ರಕ್ಷಣೆ ಮಾಡಬಾರದು. ಯಾರೇ ಇರಲಿ. ಎಷ್ಟೇ ದೊಡ್ಡವರಾಗಿರಲಿ ನಿಷ್ಪಕ್ಷಪಾತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

    ಸಿಒಡಿ ಅಧಿಕಾರಿಗಳು ಆಯ್ಕೆಯಾದ ವಿದ್ಯಾರ್ಥಿಗಳು ಹಳ್ಳಿಗಳಿಗೆ ಹೋಗಿದ್ದಾರಾ, ಅವರೆಲ್ಲ ಎಷ್ಟು ದುಡ್ಡು ಕೊಟ್ಟಿದ್ದಾರೆ ಎಂಬ ಮಾಹಿತಿ ಕಲೆಹಾಕಬಹುದಿತ್ತು. ಆದರೆ ಯಾವ ಅಧಿಕಾರಿಗಳು ಮಾಡಲಿಲ್ಲ. ಸರ್ಕಾರ ಅಕ್ರಮವನ್ನು ಮುಚ್ವಿಹಾಕಲು ಹೊರಟಿದೆ ಅನಿಸುತ್ತಿದೆ. ಪ್ರಭಾವಿ ಸಚಿವರೊಬ್ಬರು ಕರೆ ಮಾಡಿ, ಅಕ್ರಮದಲ್ಲಿರುವರೊಬ್ಬರನ್ನು ಪೊಲೀಸರಿಂದ ಬಿಡಿಸಿದ್ದಾರೆ ಎಂಬ ಮಾಹಿತಿ ಇದೆ. ಯಾರು ಕರೆ ಮಾಡಿದ್ದು, ಏಕೆ ಮಾಡುತ್ತಿದ್ದಾರೆ. ಅವರ ಪಾತ್ರ ಏನು ತನಿಖೆ ನಡೆಸಲಿ. ಭ್ರಷ್ಟಾಚಾರವನ್ನು ಬಹಳ ದಿನ ಮುಚ್ಚಿಡಲು ಸಾಧ್ಯವಿಲ್ಲ. ಅದು ಹೊರಗೆ ಬಂದೇ ಬರುತ್ತದೆ ಎಂದು ವಾಗ್ದಳಿ ನಡೆಸಿದರು. ಇದನ್ನೂ ಓದಿ: ಈಗ ಸಿಕ್ಕವರು ಕಿಂಗ್‌ಪಿನ್‌ಗಳಲ್ಲ, ಗೃಹ ಸಚಿವರ ಮೇಲೆಯೇ ನನಗೆ ಅನುಮಾನ – ಪ್ರಿಯಾಂಕ್ ಖರ್ಗೆ

    ಈ ವಿಚಾರದ ಬಗ್ಗೆ ಡಿ.ಜಿ ಹಾಗೂ ಗೃಹ ಸಚಿವರು ಬೇರೆ, ಬೇರೆ ಮಾಹಿತಿ ನೀಡಿದ್ದಾರೆ. ನನಗೆ ಮಾಹಿತಿ ಇರುವ ಪ್ರಕಾರ ಕೆಲವರ ಹೆಸರು ತನಿಖೆ ವೇಳೆ ಗೊತ್ತಾಗಿದೆ. ಆದರೆ ಸಿಐಡಿ ಯಾರ ಮನೆಗೆ ಹೋಗಿದ್ದರು. ಅವರ ತನಿಖೆ ಮಾಡಿದ್ದಾರಾ? ನೋಡೋಣ ಸರ್ಕಾರ ಯಾರ, ಯಾರ ರಕ್ಷಣೆ ಮಾಡುತ್ತಾರೆ. ಸಿಎಂಗೆ ಬದ್ದತೆ ಇದ್ದರೆ ನಿರ್ದಾಕ್ಷಣ್ಯ ಕೈಗೊಳ್ಳುವುದೇ ಆಗಿದ್ದರೆ, ಮೊದಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

  • ರಾಜಕಾರಣ ಬ್ಯುಸಿನೆಸ್ ಅಲ್ಲ, ಅಪ್ಪ ಮಕ್ಕಳ ಸಂಸ್ಕೃತಿ ರಾಜಕಾರಣದಲ್ಲಿ ಇರಬಾರದು: ಅಶ್ವಥ್ ನಾರಾಯಣ

    ರಾಜಕಾರಣ ಬ್ಯುಸಿನೆಸ್ ಅಲ್ಲ, ಅಪ್ಪ ಮಕ್ಕಳ ಸಂಸ್ಕೃತಿ ರಾಜಕಾರಣದಲ್ಲಿ ಇರಬಾರದು: ಅಶ್ವಥ್ ನಾರಾಯಣ

    ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಈಗ ಅಪ್ಪ-ಮಕ್ಕಳು, ಕುಟುಂಬ ರಾಜಕಾರಣದ ಸದ್ದು ಜೋರಾಗಿ ಮಾಡುತ್ತಿದೆ. ಬಿಜೆಪಿ ರಾಷ್ಟ್ರೀಯ ಸಂಘಟನೆ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆ ತಲ್ಲಣ ಸೃಷ್ಟಿಸಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಆತಂಕ ಸೃಷ್ಟಿ ಮಾಡಿದೆ.

    ಕುಟುಂಬ ರಾಜಕಾರಣದ ವಿರುದ್ಧ ಹೇಳಿಕೆ ಕೊಟ್ಟರುವ ಬಿ.ಎಲ್.ಸಂತೋಷ್ ಹೇಳಿಕೆಯನ್ನು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸ್ವಾಗತ ಮಾಡಿದ್ದಾರೆ. ಅಲ್ಲದೆ ರಾಜಕಾರಣದಲ್ಲಿ ಅಪ್ಪ-ಮಕ್ಕಳ ಸಂಸ್ಕೃತಿ ಇರಬಾರದು ಅಂತ ಸಂತೋಷ್ ಮಾತಿಗೆ ಧ್ವನಿಗೂಡಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ಅನ್ನೋದು ಬ್ಯುಸಿನೆಸ್ ಅಲ್ಲ. ಪಕ್ಷ ವಿನೂತನವಾಗಿ, ಹೊಸದಾಗಿ ಏನೇ ಮಾಡಿದರು ನಮಗೆ ಸಂತೋಷ ಇದೆ. ನಮ್ಮ ಅಭ್ಯಂತರ ಇಲ್ಲ. ಪಕ್ಷಕ್ಕೆ ವ್ಯಕ್ತಿಗಳು ಮುಖ್ಯ ಅಲ್ಲ. ವ್ಯಕ್ತಿಗಿಂತ ವ್ಯವಸ್ಥೆ ಮುಖ್ಯವಾಗಿ ಇರುತ್ತದೆ. ವ್ಯವಸ್ಥೆಯಲ್ಲಿ ಯಾರಾದರೇನು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ: ಬಿ.ಎಲ್.ಸಂತೋಷ್

    ಕುಟುಂಬ ರಾಜಕಾರಣವನ್ನು ಇಡೀ ಸಮಾಜ ವಿರೋಧ ಮಾಡುತ್ತದೆ. ಕುಟುಂಬ ಆಧಾರಿತ ರಾಜಕೀಯ ಇರಬಾರದು ಅನ್ನೋದು ಸಮಾಜದ ಇಚ್ಛೆ. ಆ ದಿಕ್ಕಿನಲ್ಲಿ ಬಿಜೆಪಿ ಯೋಚನೆ ಮಾಡ್ತಿರೋದು ಒಳ್ಳೆ ಬೆಳವಣಿಗೆ. ಕೆಲವರಿಗೆ ಮೀಸಲು ಇರೋದಕ್ಕೆ ಇದು ಬ್ಯುಸಿನೆಸ್ ಅಲ್ಲ, ಇದೊಂದು ಸೇವೆ. ನಾವು ಸಮಾಜಕ್ಕೆ ಸೇವೆ ಸಲ್ಲಿಸಬೇಕು. ರಾಜಕೀಯಕ್ಕೆ ಬಂದು ನಮ್ಮ ಸೇವೆ ಮಾಡಿಕೊಳ್ಳೋದು ಸರಿಯಲ್ಲ. ಅಪ್ಪ-ಮಕ್ಕಳ ಸಂಸ್ಕೃತಿ ಸಮಾಜದಲ್ಲಿ ಇರಬಾರದು ಎಂದಿದ್ದಾರೆ.

    ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳಲ್ಲಿ ಕುಟುಂಬ ರಾಜಕಾರಣ, ಅಪ್ಪ ಮಕ್ಕಳ ಪಕ್ಷ ಅಂತ ಇದೆ. ಎಲ್ಲಾ ರಾಜ್ಯದಲ್ಲೂ ಅಪ್ಪ-ಮಕ್ಕಳ ಪಕ್ಷ ಆಗಿ ಬಿಟ್ಟಿದೆ. ಹೀಗಾಗಿ ಪ್ರಧಾನಿ ಮೋದಿ ಅವರು ಇದನ್ನ ಸ್ಪಷ್ಟವಾಗಿ ವಿರೋಧ ಮಾಡಿದ್ದಾರೆ. ಇದನ್ನ ನಾವೂ ವಿರೋಧ ಮಾಡಬೇಕು. ಇದೇನು ಬ್ಯುಸಿನೆಸ್ ಮಾಡೆಲ್ ಅಲ್ಲ. ಈ ನಿಟ್ಟಿನಲ್ಲಿ ಪ್ರಧಾನಿಗಳು ನಿರ್ಧಾರ ಮಾಡಿದ್ದಾರೆ. ಯಾರು ಯಾರು ಇರಬೇಕು ಅಂತ ಪಕ್ಷ ತೀರ್ಮಾನ ಮಾಡುತ್ತದೆ. ಅದಕ್ಕೆ ನಾವು ಬದ್ಧರಾಗಿ ಇರಬೇಕು. ನಾನೇ ಒಬ್ಬ, ನಾನೇ ಎಲ್ಲಾ ಅಂತ ಹೇಳೋದು ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ಆಗಿ ಕಾಫಿನಾಡ ಬಿ.ಎಸ್.ರಾಜು ನೇಮಕ

    MODi

    ನಾಯಕತ್ವ ಬದಲಾವಣೆ ಹೈಕಮಾಂಡ್ ತೀರ್ಮಾನ:
    ನಾಯಕತ್ವ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಪಕ್ಷ ಆಲೋಚನೆ ಮಾಡಿ ನಿರ್ಧಾರ ಮಾಡುತ್ತದೆ. ಅದಕ್ಕೆ ನಾವೆಲ್ಲ ಸಹಕಾರ ಕೊಡಬೇಕು. ನಾವೆಲ್ಲ ಒಟ್ಟಾಗಿ ಇರಬೇಕು. ಪಕ್ಷವಾಗಿ ಏನು ನಿರ್ಧಾರ ಆಗುತ್ತೋ ಅದರಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

    ಅನೇಕರಲ್ಲಿ ಬೇರೆ ಬೇರೆ ಅಭಿಪ್ರಾಯಗಳು ಇರಬಹುದು. ಆದರೆ ಪಕ್ಷದ ತೀರ್ಮಾನವೇ ಅಂತಿಮ. ಅದಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು. ನಾವು ಬಂದಿರೋದು ಸಮಾಜಕ್ಕೆ ಒಳ್ಳೆಯದು ಮಾಡಲು. ಪಕ್ಷ ಏನು ತೀರ್ಮಾನ ಮಾಡುತ್ತೋ ಹಾಗೆ ನಡೆಯಬೇಕು. ಈ ದಿಕ್ಕಿನಲ್ಲಿ ಪಕ್ಷ ತೆಗೆದುಕೊಳ್ಳೊವ ತೀರ್ಮಾನಕ್ಕೆ ನಾನು ಬದ್ಧವಾಗಿ ಇರುತ್ತೇನೆ ಎಂದು ಹೇಳಿದ್ದಾರೆ.

  • ದೇಶದ ಸಮಗ್ರ ಅಭಿವೃದ್ಧಿಗೆ ಎನ್‍ಇಪಿ ಅವಶ್ಯಕ: ಅಶ್ವಥ್ ನಾರಾಯಣ

    ದೇಶದ ಸಮಗ್ರ ಅಭಿವೃದ್ಧಿಗೆ ಎನ್‍ಇಪಿ ಅವಶ್ಯಕ: ಅಶ್ವಥ್ ನಾರಾಯಣ

    ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಭಾರತ ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವಾಗಲಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜದ ಪರಿವರ್ತನೆಗೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಎನ್‍ಇಪಿ ಅವಶ್ಯಕ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ತಿಳಿಸಿದರು.

    ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆದ ‘ರಾಷ್ಟೀಯ ಶಿಕ್ಷಣ ನೀತಿ-2020 ಅನುಷ್ಠಾನದ ರಾಷ್ಟ್ರೀಯ ಸಮ್ಮೇಳನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದನ್ನೂ ಓದಿ:  ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ :ಪ್ರೀತಂ ಸವಾಲು

    ಪ್ರಸ್ತುತ ಕಾಲಘಟ್ಟದಲ್ಲಿ ವಿಶ್ವದ ಅನೇಕ ದೇಶಗಳು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಳವಣಿಗೆ ಹೊಂದಿವೆ ಇದಕ್ಕೆ ಅನುಗುಣವಾಗಿ ಬಲಿಷ್ಠ ಭಾರತ ನಿರ್ಮಾಣಕ್ಕೆ ರಾಷ್ಟೀಯ ಶಿಕ್ಷಣ ನೀತಿ ಅವಶ್ಯವಿದ್ದು, ದೇಶದಲ್ಲಿ 34 ವರ್ಷಗಳ ನಂತರ ಈ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆಗೆ ವೃತ್ತಿಪರ ಬೆಳವಣಿಗೆ ಮೂಲಕ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಅಭಿವೃದ್ದಿ ಹೆಚ್ಚಿಸುವುದು ಈ ಶೈಕ್ಷಣಿಕ ಪದ್ಧತಿಯ ಉದ್ದೇಶವಾಗಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನಂತರ ಸಲೀಸಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುಬಹುದು ಎಂದು ಹೇಳಿದರು.

    ಮಾನವ ಸಂಪನ್ಮೂಲ ಶಕ್ತಿ ಸದ್ಬಳಕೆ
    ಸ್ವಾಂತಂತ್ರ್ಯ ನಂತರ ನೂತನ ರಾಷ್ಟೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದು ಬಹಳ ಸವಾಲಿನ ಕೆಲಸವಾಗಿತ್ತು. ಆದರೆ ಮುಂಬರುವ ದಿನಗಳಲ್ಲಿ ಈ ಶಿಕ್ಷಣ ನೀತಿ ದೇಶದ ಅಭಿವೃದ್ಧಿಗೆ ಅನುಕೂಲವಾಗಲಿದೆ. ಭವಿಷ್ಯದಲ್ಲಿ ಸಮಾಜ ಬದಲಾವಣೆಯ ಉತ್ತಮ ಶಿಕ್ಷಣ ನೀತಿ ಇದಾಗಲಿದೆ.

    ವಿದ್ಯಾರ್ಥಿಗಳು, ಯುವಕರು ಉದ್ಯೋಗ ಅರಸಿ ಹೋಗದೆ ಕೌಶಲ್ಯಾಭಿವೃದ್ಧಿಯಿಂದ ಸ್ವಯಂ ಉದ್ಯೋಗ ಸೃಷ್ಟಿಸುವ ಕಾರ್ಯಕ್ಕೆ ಮುಂದಾಗಬೇಕು. ದೇಶದಲ್ಲಿನ ಮಾನವ ಸಂಪನ್ಮೂಲನ ಶಕ್ತಿ ಸದ್ಬಳಕೆ ಮಾಡಿಕೊಂಡು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬದಲಾವಣೆ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎನ್‍ಇಪಿ ಸಹಾಯ ಆಗಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿಯಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ:  ಬೆಂ.ನ.ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರು: ಒತ್ತುವರಿಯಾಗಿದ್ದ ರಾಜಕಾಲುವೆ, ಖಾಸಗಿ ಬಡಾವಣೆ ತೆರವು 

    ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಿ, ಕಲೆ, ವಾಣಿಜ್ಯ ಹಾಗೂ ತಂತ್ರಜ್ಞಾನ ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳ ಜ್ಞಾನಮಟ್ಟವನ್ನು ಸುಧಾರಿಸಲಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲಿದೆ ಎಂದು ತಿಳಿಸಿದರು.

  • ಪಂಚರಾಜ್ಯ ಚುನಾವಣೆಯಲ್ಲಿ ನಾವು ಫೋರ್ ಹೊಡೆಯುತ್ತೇವೆ: ಅಶ್ವಥ್ ನಾರಾಯಣ

    ಪಂಚರಾಜ್ಯ ಚುನಾವಣೆಯಲ್ಲಿ ನಾವು ಫೋರ್ ಹೊಡೆಯುತ್ತೇವೆ: ಅಶ್ವಥ್ ನಾರಾಯಣ

    ಧಾರವಾಡ: ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ನಾವು ಖಂಡಿತ ಫೋರ್ ಹೊಡೆಯುತ್ತೆವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ರಾಜ್ಯದಲ್ಲಿ ನಾಲ್ಕು ರಾಜ್ಯದ ಫಲಿತಾಂಶದ ಭರವಸೆ ಇದೆ. ನಾಲ್ಕು ರಾಜ್ಯದಲ್ಲಿ ನಮ್ಮ ಸರ್ಕಾರ ಆಗುತ್ತದೆ. ಒಂದು ರಾಜ್ಯದಲ್ಲಿ ಮಾತ್ರ ಹಿನ್ನೆಡೆ ಇದೆ. ಪ್ರತಿಪಕ್ಷ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಲ್ಲರಿಗೂ ಗೊತ್ತಿದೆ. ಅದು ರಾಷ್ಟ್ರೀಯ ಪಕ್ಷದ ಸ್ವರೂಪವನ್ನೇ ಕಳೆದುಕೊಂಡಿದೆ ಎಂದರು. ಇದನ್ನೂ ಓದಿ: ದೇಶಾದ್ಯಂತ ಸುದ್ದಿಯಾಗಿದ್ದ ಹತ್ರಾಸ್‌, ಲಖೀಂಪುರದಲ್ಲಿ ಬಿಜೆಪಿಗೆ ಮುನ್ನಡೆ

    ಜನ ಸಹ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟಿಲ್ಲ. ನಮ್ಮ ರಾಜ್ಯದಲ್ಲಿಯೂ ಕಾಂಗ್ರೆಸ್ ಇರುವುದಿಲ್ಲ. 2023ಕ್ಕೆ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ಪಂಜಾಬ್‍ನಲ್ಲಿ ನಮ್ಮದು ಪಾಲ್ಗೊಳ್ಳುವಿಕೆ ಹೆಚ್ಚಿರಲಿಲ್ಲ, ಅಲ್ಲಿನ ಜನಾಭಿಪ್ರಾಯ ಸ್ವೀಕರಿಸುತ್ತೇವೆ. ಮುಂದಿನ ದಿನಗಳಲ್ಲಿಯೂ ಪಂಜಾಬ್ ಸಹ ಪಡೆಯುತ್ತೇವೆ ಎಂದು ಹೇಳಿದರು ಇದನ್ನೂ ಓದಿ: ಉತ್ತರ ಪ್ರದೇಶ ಅಂಚೆ ಮತ ಎಣಿಕೆ: ಆರಂಭದಲ್ಲಿ ಬಿಜೆಪಿ ಮುನ್ನಡೆ

  • ಕಾಂಗ್ರೆಸ್ ಸೂಕ್ಷ್ಮತೆ ಕಳೆದುಕೊಂಡ ಪಕ್ಷ: ಅಶ್ವಥ್ ನಾರಾಯಣ

    ಕಾಂಗ್ರೆಸ್ ಸೂಕ್ಷ್ಮತೆ ಕಳೆದುಕೊಂಡ ಪಕ್ಷ: ಅಶ್ವಥ್ ನಾರಾಯಣ

    ಬೆಂಗಳೂರು: ಯಾವ ಸಮಯದಲ್ಲಿ ಏನು ಮಾತಾಡಬೇಕು ಅನ್ನೋ ಸೂಕ್ಷ್ಮತೆಯನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಉಕ್ರೇನ್‍ನಲ್ಲಿರುವ ಕನ್ನಡಿಗರ ರಕ್ಷಣೆ ಮಾಡುವುದರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅಶ್ವಥ್ ನಾರಾಯಣ ಕಾಂಗ್ರೆಸ್ ಯಾವಾಗಲೂ ರಾಜಕೀಯ ಪ್ರೇರಿತ ಹೇಳಿಕೆ ಕೊಡುವುದು ಅವರ ಕೆಲಸ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಪಕ್ಷ ಯಾವಾಗಲೂ ಜವಾಬ್ದಾರಿಯ ಹೇಳಿಕೆ ಕೊಡುವುದಿಲ್ಲ. ಯಾವಾಗ ಏನು ಹೇಳಿಕೆ ಕೊಡಬೇಕು ಅನ್ನೋ ಸೂಕ್ಷ್ಮತೆ ಕೂಡಾ ಕಾಂಗ್ರೆಸ್ ಕಳೆದುಕೊಂಡಿದೆ. ಭಾರತ ಸರ್ಕಾರ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಭಾರತ ಸರ್ಕಾರ ಸುತ್ತಮುತ್ತಲ ದೇಶಗಳ ಜೊತೆ ಮಾತುಕತೆ ನಡೆಸುತ್ತಿದೆ. 2 ಸಾವಿರ ಭಾರತೀಯರನ್ನು ಈಗಾಗಲೇ ವಾಪಸ್ ಕರೆ ತಂದಿದೆ ಎಂದು ಕಾಂಗ್ರೆಸ್‍ಗೆ ತಿರುಗೇಟು ಕೊಟ್ಟರು. ಇದನ್ನೂ ಓದಿ: ನೀಟ್ ವ್ಯವಸ್ಥೆ ಬಡವರ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಮಾಡುತ್ತಿದೆ: ಕುಮಾರಸ್ವಾಮಿ

    ರಷ್ಯಾ-ಉಕ್ರೇನ್ ಪ್ರಧಾನಿಗಳ ಜೊತೆಯೂ ನಮ್ಮ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಭಾರತೀಯರ ರಕ್ಷಣೆಗೆ ಎಲ್ಲಾ ಕ್ರಮವಹಿಸುತ್ತಿದ್ದಾರೆ. ಭಾರತೀಯರ ರಕ್ಷಣೆಗೆ 4 ಕೇಂದ್ರ ಮಂತ್ರಿಗಳು ಹೋಗಿದ್ದಾರೆ. ಪ್ರಧಾನಿಗಳು ಖುದ್ದು ಮೇಲ್ ಉಸ್ತುವಾರಿ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೈದುನನ ಮೃತದೇಹವನ್ನಾದರೂ ನಮಗೆ ನೀಡಿ: ನವೀನ್ ಅತ್ತಿಗೆ ಕಣ್ಣೀರು

    ಸದ್ಯ ಉಕ್ರೇನ್‍ನಲ್ಲಿ ಯುದ್ಧ ನಡೆಯುತ್ತಿದೆ. ಹೀಗಾಗಿ ರಕ್ಷಣೆಗೆ ಸಮಸ್ಯೆಯಾಗುತ್ತಿದೆ. ಎಲ್ಲರ ಜೀವ ಉಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ತಿಳಿಸಿದರು.

    ನಮ್ಮ ರಾಜ್ಯದಲ್ಲೂ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಸಿಎಂ ಕೂಡಾ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲರನ್ನು ಕರೆದುಕೊಂಡು ಬರುವ ಕೆಲಸ ನಮ್ಮ ಸರ್ಕಾರ ಮಾಡಲಿದ್ದು, ಕಾಂಗ್ರೆಸ್ ರಾಜಕೀಯ ಮಾಡುವುದು ಬಿಡಲಿ ಎಂದು ವಾಗ್ದಾಳಿ ನಡೆಸಿದರು.

  • ನಿಮಗೆ ಗಂಡಸ್ತನ ಇದ್ದರೆ ಯೋಜನೆ ಜಾರಿ ಮಾಡಿ ತೋರಿಸಿ: ಅಶ್ವಥ್ ನಾರಾಯಣ

    ನಿಮಗೆ ಗಂಡಸ್ತನ ಇದ್ದರೆ ಯೋಜನೆ ಜಾರಿ ಮಾಡಿ ತೋರಿಸಿ: ಅಶ್ವಥ್ ನಾರಾಯಣ

    ರಾಮನಗರ: ಮೇಕೆದಾಟು ಯೋಜನೆ ಕಾಂಗ್ರೆಸ್‌ನಿಂದ ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಬಿಜೆಪಿಯಿಂದ ಮಾತ್ರ ಈ ಯೋಜನೆ ಜಾರಿ ಸಾಧ್ಯ. ನಿಮಗೆ ಗಂಡಸ್ತನ ಇದ್ದರೆ ಯೋಜನೆಯನ್ನು ಜಾರಿ ಮಾಡಿ ತೋರಿಸಿ ಎಂದು ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ.

    ಮೇಕೆದಾಟು ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ನಾಡಿನ ನೆಲ, ಜಲ ವಿಚಾರವಾಗಿ ಬಿಜೆಪಿ ನಾಡಿನ ಹಿತ ಕಾಪಾಡುವಲ್ಲಿ ಬದ್ದವಾಗಿದೆ. ನಮ್ಮ ಮೊದಲ ಆದ್ಯತೆ ನಮ್ಮ ರಾಜ್ಯ, ನಮ್ಮ ನಾಡು. ಅಧಿಕಾರಕೋಸ್ಕರ ನಾವು ಏನು ಬೇಕಾದರೂ ಮಾಡುವವರು ಅಲ್ಲ ಎಂದರು.  ಇದನ್ನೂ ಓದಿ: ಅಧಿಕಾರಕ್ಕಾಗಿ ಕಾಂಗ್ರೆಸ್‍ನಿಂದ ಮೇಕೆದಾಟು ಪಾದಯಾತ್ರೆ ನಾಟಕ: ಹಾಲಪ್ಪ ಆಚಾರ್

    ಮೇಕೆದಾಟು ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ನಾವು ಜಾರಿ ಮಾಡಲು ಮುಂದಾಗಿದ್ದಕ್ಕೆ ಡಿಕೆ ಶಿವಕುಮಾರ್ ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    2008ರಿಂದ ಕಾವೇರಿ ಜಲನಯನ ವ್ಯಾಪ್ತಿಯ 12-13 ಜಿಲ್ಲೆಗಳಲ್ಲಿ ನೀರಾವರಿ ಯೋಜನೆ ಜಾರಿಗೆ ತಂದವರು ಬಿಜೆಪಿಯವರು. ಯಡಿಯೂರಪ್ಪ ಸಿಎಂ ಬೊಮ್ಮಾಯಿ ನೀರಾವರಿ ಮಂತ್ರಿಯಾಗಿದ್ದರು. ದಕ್ಷಿಣ ಭಾರತದಲ್ಲಿ ನೀರಾವರಿ ಯೋಜನೆ ಕುಂಠಿತವಾದಾಗ ಅದನ್ನು ಅಭಿವೃದ್ಧಿಪಡಿಸಿದವರು ಬಿಜೆಪಿಯವರು ಎಂದು ತಿಳಿಸಿದರು. ಇದನ್ನೂ ಓದಿ: ಪಾದಯಾತ್ರೆಯಲ್ಲಿದ್ದ ಎಚ್.ಎಂ.ರೇವಣ್ಣಗೆ ಸೋಂಕು – ಕಾಂಗ್ರೆಸ್‍ನಿಂದ ರಾಜ್ಯಕ್ಕೆ ಕೊರೊನಾ ರಫ್ತು ಎಂದ ಬಿಜೆಪಿ

    ಕಾಂಗ್ರೆಸ್‌ಗೆ ನಾನು ನೇರ ಸವಾಲ್ ಹಾಕುತ್ತಿದ್ದೇನೆ. ನಾವು ಗಂಡಸರು, ಗಂಡಸ್ತನ ಇರುವುದಕ್ಕೆ ಈ ಯೋಜನೆ ಜಾರಿ ಮಾಡಿ ತೋರಿಸುತ್ತೇವೆ. ನಿಮಗೆ ಗಂಡಸ್ತನ ಇದ್ದರೆ ಮಾಡಿ ತೋರಿಸಿ. ಕಾವೇರಿ ಜಲನಯನ ವ್ಯಾಪ್ತಿಯಲ್ಲಿ ನೀವು ಏನು ಮಾಡಿದ್ದೀರಿ ಎಂಬುದು ತಿಳಿದಿದೆ. ಕಾಂಗ್ರೆಸ್‌ನವರು ಬಿಜೆಪಿಯೊಂದಿಗೆ ಪೈಪೋಟಿ ನೀಡಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದರು.

  • ಡಿಕೆಶಿಗೆ ದೇವರು ಆರೋಗ್ಯ, ಆಯಸ್ಸು ಕೊಡಲಿ: ಅಶ್ವಥ್ ನಾರಾಯಣ

    ಡಿಕೆಶಿಗೆ ದೇವರು ಆರೋಗ್ಯ, ಆಯಸ್ಸು ಕೊಡಲಿ: ಅಶ್ವಥ್ ನಾರಾಯಣ

    ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ದೇವರು ಆರೋಗ್ಯ, ಆಯಸ್ಸು ಕೊಡಲಿ. ಅವರು ನೂರು ಕಾಲ ಬದುಕಿ ಬಾಳಲಿ ಎಂದು ಸಚಿವ ಅಶ್ವಥ್ ನಾರಾಯಣ ಹೇಳಿದ್ದಾರೆ.

    ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನ ಹೆಚ್ಚಾಗುತ್ತಿದ್ದು, ಕೊರೊನಾ ನಿಯಂತ್ರಿಸಲು ಸರ್ಕಾರ ಮುಂಬೈ ಮಾದರಿ ಲಾಕ್‍ಡೌನ್ ಜಾರಿಗೊಳಿಸಲಿದೆ ಎಂಬುವುದರ ಬಗ್ಗೆ ಇಂದು ರಾಮನಗರದ ಮಾಗಡಿಯ ಚಿಕ್ಕಕಲ್ಯಾ ಗ್ರಾಮದಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರತಿನಿತ್ಯ ಸಭೆ ನಡೆಯುತ್ತಿದೆ. ಪ್ರತಿದಿನದ ಸ್ಥಿತಿ-ಗತಿ ಗಮನದಲ್ಲಿಟ್ಟುಕೊಂಡು ಸಿಎಂ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಕೋವಿಡ್ ಹೆಚ್ಚಾದ್ರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜ್ ಬಂದ್: ಮಮತಾ ಬ್ಯಾನರ್ಜಿ

    ಮೇಕೆದಾಟು ವಿಚಾರವಾಗಿ ಹೋರಾಟ ಮಾಡಲು ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ನಲ್ಲಿ ವಾಕಿಂಗ್ ಅಭ್ಯಾಸ ಮಾಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಡಿಕೆಶಿ ವಾಕ್ ಮಾಡುತ್ತಿದ್ದಾರೆ, ಅದು ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಕ್‍ನಲ್ಲಿ ವಾಕಿಂಗ್ ಮಾಡುತ್ತಿದ್ದಾರೆ. ಅವರ ಆರೋಗ್ಯ ಸದಾ ಚೆನ್ನಾಗಿರಲಿ. ಭಗವಂತ ಅವರಿಗೆ ಆರೋಗ್ಯ, ಆಯಸ್ಸು ನೀಡಲಿ. ಅವರು ನೂರುಕಾಲ ಬದುಕಿ ಬಾಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

    ಮೇಕೆದಾಟು ಯೋಜನೆ ಕುರಿತಂತೆ ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಸರ್ಕಾರ ರಾಜ್ಯ – ಕೇಂದ್ರದಲ್ಲಿ ಈ ಯೋಜನೆಗೆ ಬದ್ಧವಾಗಿದೆ. ಈ ಯೋಜನೆ ಬಿಜೆಪಿ ಸರ್ಕಾರದಿಂದ ಮಾತ್ರ ಆಗಲಿದೆ. ಯಡಿಯೂರಪ್ಪನವರು ಸಿಎಂ ಆಗಿದ್ದಾಗಲೂ ಹೇಳಿದ್ದರೂ, ಈಗಿನ ಸಿಎಂ ಬಸವರಾಜ್ ಬೊಮ್ಮಾಯಿಯವರು ಯೋಜನೆ ಬಗ್ಗೆ ಹೇಳಿದ್ದಾರೆ. ಈಗಾಗಲೇ ಐದು ಬಾರಿ ಸಂಬಂಧಿಸಿದ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಆದರೆ ಈಗ ಕಾಂಗ್ರೆಸ್‍ನವರು ಪಾದಯಾತ್ರೆ ಮಾಡುವುದು ಸರಿಯಲ್ಲ. ಸರ್ಕಾರ ಯೋಜನೆಯ ಬಗ್ಗೆ ಕ್ರಮವಹಿಸದಿದ್ದರೆ ಪಾದಯಾತ್ರೆ ಮಾಡಲಿ. ಆದರೆ ನಮ್ಮ ಸರ್ಕಾರ ಪ್ರತಿ ಹಂತದಲ್ಲಿಯೂ ಕ್ರಮವಹಿಸುತ್ತಿದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಕೋವಿಡ್-19 ಪ್ರಕರಣಗಳು ಏರಿಕೆಯಾಗಿದೆ, ಆದ್ರೆ ಆತಂಕ ಪಡಬೇಡಿ: ಅರವಿಂದ್ ಕೇಜ್ರಿವಾಲ್

    ಸಿಎಂ ಬಸವರಾಜ್ ಬೊಮ್ಮಾಯಿಯವರು ನಾಳೆ ಜಿಲ್ಲೆಗೆ ಬರುತ್ತಿದ್ದಾರೆ. ಮೊದಲಿಗೆ ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ – ಕೆಂಪೇಗೌಡರ ಪುತ್ಥಳಿ ಉದ್ಘಾಟಿಸಿ ನಂತರ ಗವರ್ನಮೆಂಟ್ ಟೂಲ್ಸ್ ಟ್ರೈನಿಂಗ್ ಸೆಂಟರ್ – 54 ಕೋಟಿ ವೆಚ್ಚದ ಯೋಜನೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಿದ್ದಾರೆ ಮತ್ತು ಮಾಗಡಿ ಕೆಂಪೇಗೌಡರ ಸಮಾಧಿ ಸ್ಥಳ ಕೆಂಪಾಪುರಕ್ಕೆ ಭೇಟಿ ನೀಡಲಿದ್ದಾರೆ. ಜೊತೆಗೆ 300 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.