Tag: ashwath narayana

  • ಐಎಂಎ ವಂಚನೆಯಲ್ಲಿ ಸರ್ಕಾರದ ಮಂತ್ರಿಗಳು, ಶಾಸಕರು ಭಾಗಿ – ಅಶ್ವತ್ಥನಾರಾಯಣ

    ಐಎಂಎ ವಂಚನೆಯಲ್ಲಿ ಸರ್ಕಾರದ ಮಂತ್ರಿಗಳು, ಶಾಸಕರು ಭಾಗಿ – ಅಶ್ವತ್ಥನಾರಾಯಣ

    ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಸರ್ಕಾರದ ಮಂತ್ರಿಗಳು, ಶಾಸಕರು ಭಾಗಿಯಾಗಿದ್ದಾರೆ. ಹೀಗಾಗಿ ಈ ಹಗರಣವನ್ನು ಸಿಬಿಐಗೆ ನೀಡಬೇಕೆಂದು ಮಲ್ಲೇಶ್ವರ ಶಾಸಕ ಡಾ.ಅಶ್ವತ್ಥನಾರಾಯಣ ಅವರು ಆಗ್ರಹಿಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐಎಂಎ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸುತ್ತಿದ್ದರೂ, ಎಸ್‍ಐಟಿಗೆ ವಹಿಸಲಾಗಿದೆ. 2019ರಿಂದಲೇ ಈ ಸಂಸ್ಥೆಯ ವಂಚನೆ ಬಗ್ಗೆ ರಿಸರ್ವ್ ಬ್ಯಾಂಕ್ ನೇರವಾಗಿ ಸರ್ಕಾರ ಹಾಗೂ ವಿವಿಧ ತನಿಖಾ ಸಂಸ್ಥೆಗಳ ಗಮನಕ್ಕೆ ತಂದು ಎಚ್ಚರಿಕೆ ನೀಡುತ್ತಲೇ ಇದೆ. ಆದರೆ ಆರ್ಥಿಕ ಇಲಾಖೆ ಶಿಫಾರಸ್ಸಿನಂತೆ ಸಿಐಡಿ ತನಿಖೆ ಮಾಡಿ ಐಎಂಎಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಆರೋಪಿಸಿದರು.

    ಐಎಂಎ ಸಂಸ್ಥೆ ಹೂಡಿಕೆದಾರ ಸಂಸ್ಥೆ ಎಂದು ಸರ್ಕಾರ ವಾದಿಸುತಿತ್ತು. ಆದರೆ ವಾಸ್ತವದಲ್ಲಿ ಐಎಂಎ ಬ್ಯಾಂಕಿಂಗ್ ವ್ಯವಹಾರವನ್ನೂ ನಡೆಸಿದ್ದು, ಅದಕ್ಕೆ ಪೂರಕ ದಾಖಲೆಗಳಿವೆ. ಆದರೂ ಸರ್ಕಾರ ಕೇವಲ ಕಂದಾಯ ಇಲಾಖೆ ಮತ್ತು ಕಾನೂನು ಇಲಾಖೆ ನಡುವೆ ಪತ್ರ ವ್ಯವಹಾರ ಮಾಡಿ ಸಮಯ ವ್ಯರ್ಥ ಮಾಡಿವೆ. ರಾಜ್ಯ ಸರ್ಕಾರದಿಂದಲೂ ಐಎಂಎಗೆ 600 ಕೋಟಿ ರೂ. ಸಾಲಕ್ಕೆ ಗ್ಯಾರಂಟಿ ಕೊಡಲು ಸಿದ್ದವಾಗಿತ್ತು ಎಂದು ಅಶ್ವತ್ಥ ನಾರಾಯಣ ಕಿಡಿ ಕಾರಿದ್ದಾರೆ.

    ಕಳ್ಳನಿಂದಲೇ ಕಳ್ಳತನ: ಮನ್ಸೂರ್ ಕಳ್ಳ ಅವನಿಂದಲೇ ಅಧಿಕಾರಿಗಳು ಹಾಗೂ ಸರ್ಕಾರದ ಪ್ರಮುಖರು ಕಳ್ಳತನ ಮಾಡಿದ್ದಾರೆ. ಐಎಂಎ ಕಂಪನಿಯದ್ದು ಶೇರ್ ಯೋಜನೆಯಲ್ಲ, ಅದು ಠೇವಣಿ ಯೋಜನೆ ಎಂಬುದು ಖಚಿತವಾಗಿದೆ. ಐಎಂಎ ಸಂಸ್ಥೆ ವಾರ್ಷಿಕ ಲೆಕ್ಕ ತಪಾಸಣೆ ಹಾಗೂ ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡಿ ಎಷ್ಟೋ ವರ್ಷಗಳಾಗಿವೆ. ಮನ್ಸೂರ್ ಖಾನ್ ಯಾವ ದೇಶದಲ್ಲಿದ್ದಾನೆ ಎಂಬುದೇ ಸರ್ಕಾರಕ್ಕೆ ಇನ್ನೂ ಖಚಿತವಿಲ್ಲ. ಅಲ್ಲದೆ, ಅವನನ್ನು ಬೆಂಗಳೂರಿಗೆ ಕರೆತರುವ ಪ್ರಯತ್ನವನ್ನೂ ಮಾಡುತ್ತಿಲ್ಲ ಎಂದು ಆರೋಪಿಸಿದರು.

    ಸರ್ಕಾರದಿಂದಲೇ ರಕ್ಷಣೆ: ಈ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖರ ರಕ್ಷಣೆಗೆ ಸರ್ಕಾರ ಪ್ರಯತ್ನಿಸುತ್ತಿದ್ದು, ಎಸ್‍ಐಟಿ ತನಿಖೆಯಿಂದ ಪ್ರಯೋಜನವಿಲ್ಲ. ಹೀಗಾಗಿ ಸಿಬಿಐ ತನಿಖೆಯೇ ಆಗಬೇಕು. ಐಎಂಎ ಪ್ರಕರಣದಲ್ಲಿ ಸರ್ಕಾರವೇ ಭಾಗಿಯಾಗಿದ್ದು, ಸಚಿವರು, ಶಾಸಕರು ಶಾಮೀಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‍ಐಟಿ ತನಿಖೆಯಿಂದ ನ್ಯಾಯ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಎಸ್‍ಐಟಿ ಮೂಲಕ ಸಾಕ್ಷ್ಯ ನಾಶಕ್ಕೂ ಪ್ರಯತ್ನಗಳು ನಡೆಸಬಹುದು. ಹೀಗಾಗಿ ಸಾಕ್ಷ್ಯ ನಾಶದ ಭೀತಿ ಇದೆ ಎಂದು ಶಾಸಕ ಅಶ್ವಥನಾರಾಯಣ ಅನುಮಾನ ವ್ಯಕ್ತಪಡಿಸಿದರ

  • ಬೆಂಗಳೂರು ಗ್ರಾಮಾಂತರಕ್ಕೆ ಅಶ್ವಥ್ ನಾರಾಯಣ

    ಬೆಂಗಳೂರು ಗ್ರಾಮಾಂತರಕ್ಕೆ ಅಶ್ವಥ್ ನಾರಾಯಣ

    ಬೆಂಗಳೂರು: ಕೊನೆಗೂ ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಶ್ವಥ್ ನಾರಾಯಣ ಆಯ್ಕೆಯಾಗಿದ್ದಾರೆ.

    ಅಳೆದೂ ತೂಗಿ ಅಭ್ಯರ್ಥಿ ಹಾಕಿರುವ ಕೇಸರಿ ಪಾಳಯ ಮಗಳಿಗೆ ಟಿಕೆಟ್ ನೀಡುವಂತೆ ಕೇಳಿದ್ದ ಸಿ.ಪಿ ಯೋಗೇಶ್ವರ್ ಬೇಡಿಕೆಯನ್ನ ತಳ್ಳಿ ಹಾಕಿದೆ. ಅಷ್ಟೇ ಅಲ್ಲದೇ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್ ಅವರಿಗೂ ಟಿಕೆಟ್ ನಿರಾಕರಿಸಿದೆ.

    ಇಬ್ಬರ ನಡುವಿನ ಜಟಾಪಟಿಯಲ್ಲಿ ಮೂರನೇಯವನಿಗೆ ಲಾಭ ಎನ್ನುವಂತೆ ಅಶ್ವಥ್ ನಾರಾಯಣಗೆ ಬಿಜೆಪಿ ಮಣೆ ಹಾಕಿದೆ. ಇನ್ನೂ ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿರುವುದರಿಂದ ಮಧ್ಯಾಹ್ನ ಅಶ್ವಥ್ ನಾರಾಯಣ್ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

    ಈ ಹಿಂದೆಯೇ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಾವು ಸುತಾರಾಂ ಸಿದ್ಧವಿಲ್ಲ. ತಮಗೆ ರಾಷ್ಟ್ರ ರಾಜಕಾರಣಕ್ಕೆ ಹೋಗಲು ಇಷ್ಟವಿಲ್ಲ. ಕ್ಷೇತ್ರದ ಟಿಕೆಟ್ ನೀಡುವುದಾದರೆ ನನ್ನ ಮಗಳಿಗೆ ಕೊಡಿ. ಇಲ್ಲವಾದರೆ ಬೇರೆ ಯಾರಿಗಾದ್ರೂ ಕೊಡಿ ತಮ್ಮ ಅಭ್ಯಂತರ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರು.

  • ನಿನ್ನಂಥ ಕ್ಷುಲ್ಲಕ, ಯೋಗ್ಯವಲ್ಲದ ವ್ಯಕ್ತಿ ಪಕ್ಷಕ್ಕೆ ಬೇಡ: ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಅಶ್ವಥ್ ನಾರಾಯಣ ವಾಗ್ದಾಳಿ

    ನಿನ್ನಂಥ ಕ್ಷುಲ್ಲಕ, ಯೋಗ್ಯವಲ್ಲದ ವ್ಯಕ್ತಿ ಪಕ್ಷಕ್ಕೆ ಬೇಡ: ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಅಶ್ವಥ್ ನಾರಾಯಣ ವಾಗ್ದಾಳಿ

    ಬೆಂಗಳೂರು: ನೀನು ಪಕ್ಷದಲ್ಲಿ ಇಷ್ಟು ದೊಡ್ಡವನಾಗಿದ್ದು ಹೇಗೆ? ಬೆಳೆದು ಬಂದಿದ್ದು ಹೇಗೆ ಅಂತ ಯೋಚಿಸು ಎಂದು ಈಶ್ವರಪ್ಪ ವಿರುದ್ಧ ಶಾಸಕ ಅಶ್ವಥ್ ನಾರಾಯಣ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

    ತುಮಕೂರು ಜಿಲ್ಲೆಯ ಬಿಜೆಪಿ ಪಕ್ಷದ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿದ್ದ ‘ಸಂಘಟನೆ ಉಳಿಸಿ ಸಮಾವೇಶ’ದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಕ್ಕೆ ಮಲ್ಲೇಶ್ವರಂ ನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಎಸ್‍ವೈ ಬಣ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದೆ.

    ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಶ್ವಥ್ ನಾರಾಯಣ, ಯಾರು ಪಕ್ಷದಲ್ಲಿ ಯಡಿಯೂರಪ್ಪ ನಾಯಕತ್ವವನ್ನು ಪ್ರಶ್ನಿಸುತ್ತಿದ್ದಾರೋ ಅವರು ಪಕ್ಷಕ್ಕೆ ಬೇಕಿಲ್ಲ. ನಿನ್ನಂಥ ಕ್ಷುಲ್ಲಕ, ಯೋಗ್ಯವಲ್ಲದ ವ್ಯಕ್ತಿ ಪಕ್ಷಕ್ಕೆ ಬೇಡ. ನೀನು ಪಕ್ಷದಲ್ಲಿ ಇಷ್ಟು ದೊಡ್ಡವನಾಗಿದ್ದು ಹೇಗೆ? ಬೆಳೆದು ಬಂದಿದ್ದು ಹೇಗೆ ಅಂತ ಯೋಚಿಸು ಎಂದು ಪ್ರಶ್ನಿಸಿ ಕಿಡಿಕಾರಿದರು.

    ಅತೃಪ್ತರ ಸಭೆ ನಡೆದಿದ್ದು ಖಂಡನೀಯವಾಗಿದ್ದು, ಪಕ್ಷದ ಸಂಘಟನೆಯಲ್ಲಿ ಇಂತಹ ಸಭೆಗಳು ಸರಿಯಲ್ಲ. ಪಕ್ಷ ಸಂಘಟನೆ ಬಗ್ಗೆ ನಾವೆಲ್ಲ ಶ್ರಮಿಸುತ್ತಿದ್ದೇವೆ. ಆದರೆ ಈ ಅತೃಪ್ತರು ಪಕ್ಷದ ಸಂಘಟನೆ ಹಾಳು ಮಾಡುತ್ತಿದ್ದಾರೆ. ಕೂಡಲೇ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರು ವಿರುದ್ಧ ಕ್ರಮ ಕೈಗೊಳ್ಳಬೇಕು. ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡವರಿಗೆ ವಿಪಕ್ಷ ನಾಯಕ ಸ್ಥಾನ ಕೊಟ್ಟಿದ್ದು ನಮಗೆ ಅಗೌರವ. ಯೋಗ್ಯತೆ ಗೊತ್ತಿದೆ, ಕೂಡಲೇ ಈಶ್ವರಪ್ಪ ಅವರನ್ನ ಪಕ್ಷದಿಂದ ಕಿತ್ತು ಹಾಕಲಿ ಎಂದು ಅಶ್ವಥನಾರಾಯಣ ಆಗ್ರಹಿಸಿದರು.

    ಸಂಸದ ಪಿ.ಸಿ.ಮೋಹನ್ ಮಾತನಾಡಿ ಈಶ್ವರಪ್ಪನವರು ನಾಲ್ಕು ಗೋಡೆಗಳ ಮಧ್ಯೆ ಸಮಸ್ಯೆ ಬಗೆಹರಿಸಿಕೊಳ್ಳಬೇಕಿತ್ತು. ಈಶ್ವರಪ್ಪ ಕರೆದಿದ್ದ ಸಭೆಗೆ ಸಾವಿರ ಜನ ಇರಲಿಲ್ಲ ಬಿಎಸ್‍ವೈ ಸಭೆ ಕರೆದ್ರೆ 2 ಲಕ್ಷ ಜನ ಬರುತ್ತಾರೆ. ಇದು ಪಕ್ಷ ವಿರೋಧಿ ಚಟುವಟಿಕೆ ಎಂದು ಟೀಕಿಸಿದರು.

    ಸುದ್ದಿಗೋಷ್ಠಿಯಲ್ಲಿ ಮುನಿರಾಜು, ನಾರಾಯಣಸ್ವಾಮಿ, ಪರಿಷತ್ ಸದಸ್ಯರಾದ ಪುಟ್ಟಸ್ವಾಮಿ, ಲೆಹರ್ ಸಿಂಗ್, ಮಾಜಿ ಶಾಸಕ ಕಟ್ಟಾ ಸುಬ್ರಮಣ್ಯನಾಯ್ಡು, ಬೆಂಗಳೂರು ನಗರಾಧ್ಯಕ್ಷ ಸದಾಶಿವ ಉಪಸ್ಥಿತರಿದ್ದರು.

    ಇದನ್ನೂ ಓದಿ: ಸಮಸ್ಯೆ ಪರಿಹಾರಕ್ಕೆ ಬಿಎಸ್‍ವೈಗೆ ಭಿನ್ನರಿಂದ ಡೆಡ್‍ಲೈನ್ ಫಿಕ್ಸ್

    https://www.youtube.com/watch?v=nFYZuu2deRU

    ಇದನ್ನೂ ಓದಿ: ನಾವು ತಂದೆ, ತಾಯಿಗೆ ಹುಟ್ಟಿದ ಜನ. ನಾವು ಪಕ್ಷ ಬಿಡಲ್ಲ, ಬೇರೆ ಪಕ್ಷ ಕಟ್ಟಲ್ಲ: ಬಿಎಸ್‍ವೈ ವಿರುದ್ಧ ಈಶ್ವರಪ್ಪ ಗುಡುಗು
    ಇದನ್ನೂ ಓದಿ: ಬಿಜೆಪಿ ಸಂಘಟನಾ ಸಮಾವೇಶದಲ್ಲಿ ಬಿಎಸ್‍ವೈ-ಈಶ್ವರಪ್ಪ ಬೆಂಬಲಿಗರ ಮಾರಾಮಾರಿ: ವಿಡಿಯೋ ನೋಡಿ

    https://www.youtube.com/watch?v=FnDvcFgKDoQ