Tag: ashwini nakshatra

  • ಕನ್ನಡ ಚಿತ್ರರಂಗಕ್ಕೆ ಜೆಕೆ ಗುಡ್‌ ಬೈ- ಅಷ್ಟಕ್ಕೂ ಆಗಿದ್ದೇನು.?

    ಕನ್ನಡ ಚಿತ್ರರಂಗಕ್ಕೆ ಜೆಕೆ ಗುಡ್‌ ಬೈ- ಅಷ್ಟಕ್ಕೂ ಆಗಿದ್ದೇನು.?

    ಶ್ವಿನಿ ನಕ್ಷತ್ರ, ಬಿಗ್ ಬಾಸ್ (Bigg Boss) ಮೂಲಕ ಮನೆ ಮಾತಾದ ಕಿರುತೆರೆಯ ಸೂಪರ್ ಸ್ಟಾರ್ ಜೆಕೆ (Jk) ಅವರು ಚಿತ್ರರಂಗ ಬಿಡುವ ಬಗ್ಗೆ ಮಾತನಾಡಿದ್ದಾರೆ. ಸಿನಿಮಾರಂಗದಿಂದ ದೂರ ಉಳಿಯುವ ಬಗ್ಗೆ ಮಾತನಾಡಿದ್ದಾರೆ. ಜೆಕೆ, ನಟನೆಗೆ ಗುಡ್ ಬೈ ಹೇಳಲು ಕಾರಣವೇನು.? ಅಷ್ಟಕ್ಕೂ ಆಗಿದ್ದಾರೂ ಏನು.? ಇಲ್ಲಿದೆ ಡಿಟೈಲ್ಸ್.

    ನಟ ಜೆಕೆಗೆ, ಕನ್ನಡ- ಹಿಂದಿ ಕಿರುತೆರೆಯಲ್ಲಿ ಸಕ್ಸಸ್ ಸಿಕ್ಕ ಹಾಗೇ ಸಿನಿಮಾದಲ್ಲಿ ಸಕ್ಸಸ್ ಸಿಗಲಿಲ್. ಆದರೆ, ಜೆಕೆ ಅವರು ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ. ಆದರೆ ಈಗ ಹಠಾತ್ತನೇ ಚಿತ್ರರಂಗ ಬಿಡುವ ನಿರ್ಧಾರಕ್ಕೆ ಬಂದಿದ್ದಾರೆ. ಈ ವೇಳೆ ಕನ್ನಡ ಚಿತ್ರರಂಗದಲ್ಲಿ ಕೆಲವರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ತುಳಿಯುತ್ತಿದ್ದಾರೆ ಅಂತಾ ಆರೋಪ ಮಾಡಿದ್ದಾರೆ. ಅಲ್ಲದೆ ಎರಡು ಸಿನಿಮಾಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಗುಡ್ ಬೈ ಹೇಳುವುದಕ್ಕೆ ನಿರ್ಧಾರ ಮಾಡಿದ್ದಾರೆ. ಅಷ್ಟಕ್ಕೂ ಕನ್ನಡ ಚಿತ್ರರಂಗದಲ್ಲಿ ಜೆಕೆಗೆ ಅಂತಹದ್ದೇನಾಯ್ತು?

    ‘ಅಶ್ವಿನಿ ನಕ್ಷತ್ರ’ (Ashwini Nakshatra) ಸೀರಿಯಲ್ ಸಮಯದಲ್ಲೇ ಬಳಿಕ ಎರಡು ದೋಣೆಯ ಮೇಲೆ ಕಾಲಿಡುವುದು ಸೂಕ್ತವಲ್ಲ ಎನಿಸಿ ಕೆಲಸ ಬಿಟ್ಟು ನಟನೆಯನ್ನು ಪೂರ್ಣ ವೃತ್ತಿಯನ್ನಾಗಿ ಮಾಡಿಕೊಂಡೆ. ನನ್ನ ಮೊದಲ ಸೀರಿಯಲ್‌ನಿಂದಲೇ ಜನ ಪ್ರೀತಿಸಲು ಶುರು ಮಾಡಿದ್ದರು. ನನ್ನ ನಟನೆಯನ್ನ ಒಪ್ಪಿಕೊಂಡರು. ನಾನು ಕನ್ನಡ ಭಾಷೆಯನ್ನು ಬಹುವಾಗಿ ಪ್ರೀತಿಸುತ್ತೇನೆ, ಆದರೆ ಕೆಲವರಿಗೆ ನಾನಿಲ್ಲಿ ಇರುವುದು ಇಷ್ಟವಿಲ್ಲ ಹಾಗಾಗಿ ನಾನು ಹೋಗುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:‘ಘೋಸ್ಟ್’ ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ

    ಹಿಂದಿ ಧಾರಾವಾಹಿ ಮಾಡುತ್ತಿದ್ದೆ ಒಳ್ಳೆಯ ಹೆಸರು ಗಳಿಸಿದ್ದೆ. ಹಿಂದಿ ಸಿನಿಮಾ ಒಂದರ ಹಿಂದೆ ಮತ್ತೊಂದು ಅವಕಾಶ ಸಹ ನನಗೆ ದೊರಕಿತ್ತು ಇನ್ನೇನು ಚಿತ್ರೀಕರಣ ಪ್ರಾರಂಭವಾಗಬೇಕು ಎಂಬ ಅನ್ನೋವಷ್ಟರಲ್ಲಿ ಆ ಅವಕಾಶವನ್ನ ತಪ್ಪಿದ್ದರು. ನನಗೇ ನೇರವಾಗಿ ಸವಾಲು ಹಾಕಿ 2022ರ ವೇಳೆಗೆ ಇಂಡಸ್ಟ್ರಿ ಬಿಡುಸುತ್ತೇವೆ ಎಂದರು ಅವಾಜ್ ಹಾಕಿದ್ದಾರೆ ಎಂದು ಜೆಕೆ ಮಾತನಾಡಿದ್ದಾರೆ. ಯಾರು ಹಾಗೆ ಮಾಡಿದವರು? ಯಾರಿಗೆ ನಿಮ್ಮ ಮೇಲೆ ದ್ವೇಷ ಎಂಬ ಪ್ರಶ್ನೆಗೆ ಉತ್ತರಿಸಿರುವ ಜೆಕೆ, ಯಾರಿಗೆ ಎಂದು ಹೇಳಿದರೆ ವಿವಾದವಾಗುತ್ತದೆ, ಅದಕ್ಕೆ ಪೂರಕವಾದ ವಿಡಿಯೋ ಸಾಕ್ಷಿಗಳನ್ನೆಲ್ಲ ಒದಗಿಸಬೇಕಾಗುತ್ತದೆ ಅವೆಲ್ಲವೂ ನನ್ನ ಬಳಿ ಇಲ್ಲ. ಆದರೆ ಚಿತ್ರರಂಗದಿಂದ ದೂರ ಹೋಗುವ ವಿಚಾರವನ್ನಂತೂ ಮಾಡಿದ್ದೇನೆ ಎಂದಿದ್ದಾರೆ.

    ಈಗ ಸದ್ಯಕ್ಕೆ ನನ್ನ ಮುಂದಿರುವ ಸವಾಲೆಂದರೆ ‘ಐರಾವನ್’ ಸಿನಿಮಾದ ಬಿಡಗುಡೆ ಮತ್ತು ‘ಕಾಡ’ ಸಿನಿಮಾದ ಬಿಡುಗಡೆ ಇದೆರಡನ್ನೂ ಮುಗಿಸಿ ನಾನು ಮುಂದಿನ ಹೆಜ್ಜೆ ಇಡುತ್ತೇನೆ. ಈ ನಿರ್ಧಾರ ನನ್ನ ಪಾಲಿಗೆ ಬಹಳ ಕಠಿಣವಾದ ನಿರ್ಧಾರ ಆದರೆ ಈ ನಿರ್ಧಾರವನ್ನು ನಾನು ತೆಗೆದುಕೊಳ್ಳಲೇ ಬೇಕಿದೆ ಎಂದಿದ್ದಾರೆ ಜೆಕೆ. ಅವರ ನಟನೆಯ ‘ಐರಾವನ್’ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಜೆಕೆ ತಮ್ಮ ನಿರ್ಧಾರದ ಬಗ್ಗೆ ಬಾಯ್ಬಿಟ್ಟ ಬೆನ್ನಲ್ಲೇ ನಟನಿಗೆ ಬೆದರಿಕೆ ಹಾಕಿದ್ಯಾರು ಎಂಬುದರರ ಬಗ್ಗೆ ಗುಸು ಗುಸು ಶುರುವಾಗಿದೆ. ಮುಂದಿನ ದಿನಗಳಲ್ಲಿ ತೆರೆ ಮರೆಯಲ್ಲಿರುವ ಆ ವಿಲನ್ ಯಾರು.? ಎಂಬುದಕ್ಕೆ ಉತ್ತರ ಸಿಗುತ್ತಾ ಕಾದುನೋಡಬೇಕಿದೆ.

  • ಹಿಂದಿ ಕಿರುತೆರೆಗೆ ಜಯರಾಂ ಕಾರ್ತಿಕ್ ಕಂಬ್ಯಾಕ್

    ಹಿಂದಿ ಕಿರುತೆರೆಗೆ ಜಯರಾಂ ಕಾರ್ತಿಕ್ ಕಂಬ್ಯಾಕ್

    ನ್ನಡ ಚಿತ್ರರಂಗದ ಪ್ರತಿಭಾವಂತ ನಟ ಜೆಕೆ ಅಲಿಯಾಸ್ ಜಯರಾಂ ಕಾರ್ತಿಕ್ ಮತ್ತೆ ಹಿಂದಿ ಕಿರುತೆರೆಗೆ ಮರಳಿದ್ದಾರೆ. ಕಿರುತೆರೆ ಮತ್ತು ಹಿರಿತೆರೆ ಎರಡಲ್ಲೂ ಜನಪ್ರಿಯತೆ ಗಿಟ್ಟಿಸಿಕೊಂಡಿರುವ ಜೆಕೆ, ಈ ಹಿಂದೆ `ಸಿಯಾ ಕೆ ರಾಮ್’ ಧಾರಾವಾಹಿಯಲ್ಲಿ ರಾವಣನಾಗಿ ಅಬ್ಬರಿಸಿದ್ದರು. ಈಗ ಮತ್ತೆ ಹಿಂದಿ ಕಿರುತೆರೆಗೆ ಜೆಕೆ ಮರಳಿದ್ದಾರೆ.

    `ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಕನ್ನಡಿಗರಿಗೆ ಹತ್ತಿರವಾಗಿದ್ದ ಜೆಕೆ ಬೆಳ್ಳಿಪರದೆಯಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಕಮಾಲ್ ಮಾಡಿದ್ದಾರೆ. ಇನ್ನು ಹಿಂದಿಯ `ಸಿಯಾ ಕೆ ರಾಮ್’ ಸೀರಿಯಲ್ ಜೆಕೆ ವೃತ್ತಿಬದುಕಿಗೆ ಬಿಗ್ ಬ್ರೇಕ್ ನೀಡಿತ್ತು. ರಾಮನ ಎದುರು ರಾವಣನಾಗಿ ಖಡಕ್ ಆಗಿ ಅಭಿನಯಿಸಿದ್ದರು. ಈಗ ಮತ್ತೆ ಸತತ 5 ವರ್ಷಗಳ ನಂತರ ಹಿಂದಿ ಕಿರುತೆರೆಗೆ ಖಳನಾಯಕನಾಗಿ ಖಡಕ್ ಎಂಟ್ರಿ ಕೊಡ್ತಿದ್ದಾರೆ.

     

    View this post on Instagram

     

    A post shared by Karthik Jayaram (@karthik.jayaram)

    ಹಿಂದಿಯಲ್ಲಿ `ಅಲಿಬಾಬಾ ದಸ್ತಾನ್-ಎ-ಕಾಬೂಲ್’ ಎಂಬ ಫ್ಯಾಂಟಸಿ ಧಾರಾವಾಹಿ ಇದೇ ತಿಂಗಳು ಸೆಟ್ಟೇರಲಿದೆ. ಇದೇ ಧಾರಾವಾಹಿಯಲ್ಲಿ ಜಯರಾಂ ಕಾರ್ತಿಕ್ ಕೂಡ ನಟಿಸಲಿದ್ದಾರೆ. ಮಾನ್ ಸಿಂಗ್ ಈ ಧಾರಾವಾಹಿಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಈ ಸೀರಿಯಲ್ ಮತ್ತೆ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಳ್ತಿದ್ದು, ಪವರ್‌ಫುಲ್ ಪಾತ್ರಕ್ಕೆ ಜೆಕೆ ಬಣ್ಣ ಹಚ್ಚಲಿದ್ದಾರೆ. ಇದನ್ನೂ ಓದಿ:ಖ್ಯಾತ ಗಾಯಕ ಕೆಕೆ ಅಂತ್ಯ ಸಂಸ್ಕಾರ ಮುಂಬೈನಲ್ಲಿ : ಅಂತಿಮ ನಮನ ಸಲ್ಲಿಸಿದ ಬಿಟೌನ್

    ಈಗಾಗಲೇ ಪಾತ್ರಕ್ಕಾಗಿ ಸಕಲ ತಯಾರಿ ಮಾಡಿಕೊಂಡಿರುವ ಜೆಕೆ, ಸೀರಿಯಲ್‌ನ ಮೊದಲ ಹಂತದ ಚಿತ್ರೀಕರಣಕ್ಕಾಗಿ ಲಡಾಖ್‌ಗೆ ತೆರಳಿದ್ದಾರೆ. ಇನ್ನು ಯಾವುದೇ ಪಾತ್ರ ಕೊಟ್ರು ಆ ಪಾತ್ರವೇ ತಾವಾಗಿ ನಟಿಸೋ ಪ್ರತಿಭಾವಂತ ಕಲಾವಿದ ಜೆಕೆಯ ಹೊಸ ಅವತಾರ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.