Tag: asi

  • ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

    ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

    ನವದೆಹಲಿ: ಮಥುರಾದಲ್ಲಿ ಕೃಷ್ಣ ದೇವಸ್ಥಾನವನ್ನು (Krishna Janmabhoomi in Mathura) ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಾಹಿತಿ ನೀಡಿದೆ.

    ಉತ್ತರ ಪ್ರದೇಶದ ಮೈನ್‌ಪುರಿ ನಿವಾಸಿ ಅಜಯ್ ಪ್ರತಾಪ್ ಸಿಂಗ್ ಅವರು ಮಾಹಿತಿ ಹಕ್ಕು ಕಾಯ್ದೆ (RTI) ಅಡಿ ಕೇಳಿದ ಪ್ರಶ್ನೆಗೆ ಎಎಸ್‌ಐ ಉತ್ತರ ನೀಡಿದೆ.

    ಪ್ರಶ್ನೆ ಏನಿತ್ತು?
    1670ರಲ್ಲಿ ಕೇಶವದೇವ ದೇವಸ್ಥಾನವನ್ನು ಕೆಡವಿ ಶಾಹಿ ಈದ್ಗಾ ನಿರ್ಮಾಣವಾದ ಬಗ್ಗೆ 1920ರ ನವೆಂಬರ್‌ನಲ್ಲಿ ಬ್ರಿಟಿಷರು (British) ನಡೆಸಿದ ಸರ್ವೆ ಮಾಹಿತಿ ನೀಡುವಂತೆ ಪ್ರಶ್ನೆ ಕೇಳಲಾಗಿತ್ತು.

    ಎಎಸ್‌ಐ ಉತ್ತರ ಏನಿತ್ತು?
    1920 ರಲ್ಲಿ ಅಲಹಾಬಾದ್‌ನಿಂದ ಬ್ರಿಟಿಷರು ಪ್ರಕಟಿಸಿದ ಗೆಜೆಟ್‌ನಲ್ಲಿ (ರಾಜ್ಯಪತ್ರ) ಲೋಕೋಪಯೋಗಿ ಇಲಾಖೆಯು ಉತ್ತರ ಪ್ರದೇಶದ (Uttar Pradesh) ವಿವಿಧೆಡೆ 39 ಸ್ಮಾರಕಗಳ ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಕತ್ರಾ ಕೇಶವ ದೇವ್ ಭೂಮಿಯಲ್ಲಿರುವ ಶ್ರೀ ಕೃಷ್ಣ ಭೂಮಿಯನ್ನು 37ನೇ ಸ್ಥಾನದಲ್ಲಿ ಉಲ್ಲೇಖಿಸಲಾಗಿದೆ. ಹಿಂದೆ ಕತ್ರಾ ದಿಬ್ಬದ ಮೇಲೆ ಕೇಶವದೇವ್‌ ದೇವಸ್ಥಾನವಿತ್ತು. ಅದನ್ನು ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಉತ್ತರ ನೀಡಿದೆ.

    ಕೃಷ್ಣ ಜನ್ಮಭೂಮಿ ಮುಕ್ತಿ ನ್ಯಾಸ್ ಅಧ್ಯಕ್ಷ ವಕೀಲ ಮಹೇಂದ್ರ ಪ್ರತಾಪ್ ಪ್ರತಿಕ್ರಿಯಿಸಿ, ರಾಜ್ಯಪತ್ರದಲ್ಲಿ ಉಲ್ಲೇಖವಾದ ಹಾಗೂ ಈಗ ಆರ್‌ಟಿಐ ಅಡಿ ನೀಡಿದ ಪ್ರಶ್ನೆಗೆ ಎಎಸ್‌ಐ ನೀಡಿದ ಮಾಹಿತಿಯನ್ನೇ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ಸಾಕ್ಷ್ಯವಾಗಿ ಸೇರಿಸುತ್ತೇವೆ ಎಂದು ಹೇಳಿದ್ದಾರೆ.

    ಮಥುರಾದ ಕೇಶವದೇವ ದೇವಾಲಯವನ್ನು ಸುಮಾರು 5000 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ನಂಬಲಾಗುತ್ತಿದೆ. ಮಥುರಾ ಶ್ರೀಕೃಷ್ಣನ ಜನ್ಮಸ್ಥಳ. ಶ್ರೀಕೃಷ್ಣನ ಮೊಮ್ಮಕ್ಕಳಾದ ವ್ರಜ ಮತ್ತು ವ್ರಜನಾಭ ರಾಜ ಪರೀಕ್ಷಿತನ ಸಹಾಯದಿಂದ ಮಥುರಾದಲ್ಲಿ ಕೇಶದೇವ ದೇವಾಲಯವನ್ನು ನಿರ್ಮಿಸಿದರು ಎಂಬ ಕಥೆಯಿದೆ.

    ಮೊಘಲ್ ರಾಜ ಔರಂಗಜೇಬ್‌ (Aurangzeb) 1670ರಲ್ಲಿ ಕೇಶವದೇವನ ದೇವಾಲಯವನ್ನು ಕೆಡವಲು ಆದೇಶಿಸಿದ್ದ. ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ನಿರ್ಮಿಸಲಾದ ಮಸೀದಿಯಲ್ಲಿ ಔರಂಗಜೇಬ ಸ್ವತಃ ನಮಾಜ್ ಮಾಡಿದ್ದ.

    ಏನಿದು ವಿವಾದ?
    ಮಥುರಾದ ವಿವಾದವು 13.37 ಎಕರೆ ಭೂಮಿಯ ಮಾಲೀಕತ್ವದ ಹಕ್ಕುಗಳಿಗೆ ಸಂಬಂಧಿಸಿದೆ. ಶ್ರೀ ಕೃಷ್ಣ ಜನ್ಮಭೂಮಿ 10.9 ಎಕರೆ ಜಮೀನು ಹೊಂದಿದ್ದರೆ, ಶಾಹಿ ಈದ್ಗಾ ಮಸೀದಿ ಎರಡೂವರೆ ಎಕರೆ ಜಮೀನು ಹೊಂದಿದೆ. ಪ್ರಸ್ತುತ ಈಗ ಇರುವ ಶಾಹಿ ಈದ್ಗಾ ಮಸೀದಿಯನ್ನು ಅಕ್ರಮ ಎಂದು ಘೋಷಿಸಿ ಅದನ್ನು ನೆಲಸಮಗೊಳಿಸಬೇಕು ಮತ್ತು 13.37 ಎಕರೆ ಸಂಪೂರ್ಣ ಭೂಮಿಯನ್ನು ಡಿ-ಫಾಕ್ಟೋ ಮಾಲೀಕ ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ಹಸ್ತಾಂತರಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

    ವಕೀಲರಾದ ರಂಜನಾ ಅಗ್ನಿಹೋತ್ರಿ ಸೇರಿ ಇತರ ಆರು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಇನ್ನೂ ಅನೇಕ ಮಂದಿ ಅರ್ಜಿ ಸಲ್ಲಿಸಿದ್ದರು. ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್, ಶಾಹಿ ಈದ್ಗಾ ಮಸೀದಿ, ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ಮತ್ತು ಶ್ರೀಕೃಷ್ಣ ಜನ್ಮಭೂಮಿ ಸೇವಾ ಸಂಸ್ಥಾನವನ್ನು ಪ್ರಕರಣದಲ್ಲಿ ಭಾಗಿ ಮಾಡಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ತ್ತರ ಪ್ರದೇಶದ ಮಥುರಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು.

    ಅರ್ಜಿಯಲ್ಲಿ ಏನಿತ್ತು?
    ಶಾಹಿ ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ 1669-70ರಲ್ಲಿ ಶ್ರೀಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರಾ ಕೇಶವ್ ದೇವ್ ದೇವಸ್ಥಾನದ ಬಳಿ ನಿರ್ಮಿಸಲಾಗಿದೆ. 13.37 ಎಕರೆ ಜಾಗದಲ್ಲಿ ಹರಡಿರುವ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ. ಈ ಜಾಗದ ಸಂಪೂರ್ಣ ಹಕ್ಕು ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ನೀಡಬೇಕು. ಹೀಗಾಗಿ ಶಾಹಿ ಈದ್ಗಾ ಮಸೀದಿಯನ್ನು ತೆರವು ಮಾಡಿ ಮಂದಿರಕ್ಕೆ ಭೂಮಿಯನ್ನು ವಾಪಸ್ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

  • ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ

    ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ

    ಹುಬ್ಬಳ್ಳಿ: ವಿಷ ಸೇವಿಸಿ ಎಎಸ್‌ಐ (ASI) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ (Dharawada) ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ಘಟನೆ ನಡೆದಿದೆ.

    ಗುಡಿಗೇರಿ ಪೊಲೀಸ್ ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದರು. ವಸತಿ ಗೃಹದ ಆವರಣದಲ್ಲಿ ದೇಗುಲದ ಬಳಿ ಮಲಗಿದ್ದರು. ಇದನ್ನೂ ಓದಿ: ವಿವಾಹಿತೆಯಿಂದ ಹನಿಟ್ರ್ಯಾಪ್ – ಡೆತ್‍ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

    ಕುಟುಂಬಸ್ಥರು ಊಟಕ್ಕೆ ಎಬ್ಬಿಸಲು ಹೋದಾಗ ಎದ್ದೇಳಲಿಲ್ಲ. ಆಗ ಆತ್ಮಹತ್ಯೆ ವಿಷಯ ಬೆಳಕಿಗೆ ಬಂದಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ಮೃತ ಎಎಸ್‌ಐ ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು. ಅದೇ ಆತ್ಮಹತ್ಯೆಗೆ ಕಾರಣವಿರಬಹುದೆಂದು ಶಂಕಿಸಲಾಗಿದೆ. ಮೃತ ಬಸವರಾಜ ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಢ ಸಮೀಪದ ಶಾಂತಗಿರಿ ಗ್ರಾಮದವರು. ಇದನ್ನೂ ಓದಿ: ಪ್ಯಾಂಟ್‌ ಜಿಪ್‌ನಲ್ಲಿ ಚಿನ್ನ ಕಳ್ಳಸಾಗಣೆ – ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ತಗ್ಲಾಕ್ಕೊಂಡ ಪ್ರಯಾಣಿಕ

    ಬಸವರಾಜ ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳು ಇದ್ದರು. ಗುಡುಗೇರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • ಟೈಟ್‌ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ

    ಟೈಟ್‌ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ

    ಲಕ್ನೋ: ಅಲಹಾಬಾದ್‌ ಹೈಕೋರ್ಟ್‌ನಿಂದ (Allahabad High Court) ಆದೇಶ ಹೊರಬಿದ್ದ ಬೆನ್ನಲ್ಲೇ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ತಂಡವು ಬಿಗಿ ಭದ್ರತೆಯೊಂದಿಗೆ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಸರ್ವೆ ಕಾರ್ಯ ಆರಂಭಿಸಿದೆ.

    ಎಎಸ್‌ಐ ತಂಡ ಶುಕ್ರವಾರ ಬೆಳಗ್ಗೆ ಉತ್ತರ ಪ್ರದೇಶದ ವಾರಣಾಸಿಯ (Varanasi) ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣಕ್ಕೆ ಆಗಮಿಸಿತು. ಬಿಗಿ ಭದ್ರತೆಯ ನಡುವೆ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪ್ರಾರಂಭಿಸಿತು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸರ್ವೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ

    Gyanvapi mosque, 

    ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ಪ್ರಶ್ನಿಸಿ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಯ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಸಮೀಕ್ಷೆ ನಡೆಸಲು ಅನುಮತಿ ನೀಡಿ ಗುರುವಾರ ಆದೇಶ ಹೊರಡಿಸಿದೆ. ಈಗ ಮತ್ತೆ ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

    ಎಎಸ್‌ಐ ಅಧಿಕಾರಿಗಳು ಸೇರಿದಂತೆ ಅನೇಕರು ಸ್ಥಳಕ್ಕೆ ತಲುಪಿದ್ದಾರೆ. ಸಮೀಕ್ಷೆ ಪ್ರಾರಂಭವಾಗಿದೆ. ನಾವೂ ಒಳಗೆ ಹೋಗುತ್ತಿದ್ದೇವೆ ಎಂದು ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂ ಪರ ವಕೀಲ ಸುಭಾಷ್ ನಂದನ್ ಚತುರ್ವೇದಿ ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ ವಿಶೇಷ ಏರ್ ಶೋ ನಡೆಸಲು ಸಿಎಂ ಮನವಿ

    ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಮಸೀದಿ ನಿರ್ಮಿಸಲಾಗಿದೆ. ಇದನ್ನು ನಿರ್ಧರಿಸುವ ಏಕೈಕ ಮಾರ್ಗ ಮಸೀದಿಯನ್ನು ಸರ್ವೆಗೆ ಒಳಪಡಿಸುವುದು ಎಂದು ನಾಲ್ವರು ಮಹಿಳೆಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ವಾರಣಾಸಿ ನ್ಯಾಯಾಲಯವು ಮಸೀದಿ ಸಮೀಕ್ಷೆ ನಡೆಸಲು ಅನುಮತಿಸಿ ಜು.21 ರಂದು ಆದೇಶ ಹೊರಡಿಸಿತ್ತು.

    ಜುಲೈ 24 ರಂದು ಸಮೀಕ್ಷೆ ಪ್ರಾರಂಭವಾಯಿತು. ಆದರೆ ಅದನ್ನು ವಿರೋಧಿಸಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಸರ್ವೆ ಆರಂಭವಾದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆ – ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

    ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆ – ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

    ಲಕ್ನೋ: ಜ್ಞಾನವಾಪಿ ಮಸೀದಿಯ (Gyanvapi Mosque) ಎಎಸ್‌ಐ ಸಮೀಕ್ಷೆಗೆ ಅನುಮತಿ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಲಯದ ಆದೇಶ ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ (Allahabad High Court) ಆಗಸ್ಟ್ 3 ರವರೆಗೂ ತೀರ್ಪು ಕಾಯ್ದಿರಿಸಿದೆ.

    ಮುಖ್ಯ ನ್ಯಾಯಮೂರ್ತಿ ಪ್ರಿಟಿಂಕರ್ ದಿವಾಕರ್ ನೇತೃತ್ವದ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ನಂತರ ಈ ಆದೇಶವನ್ನು ನೀಡಿದ್ದು, ಅಂತಿಮ ಆದೇಶದವರೆಗೂ ಮಸೀದಿಯ ಸರ್ವೆ ನಡೆಸದಂತೆ ತಡೆ ನೀಡಿದೆ.

    ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಎಂದಿಗೂ ಮೊಕದ್ದಮೆಯಲ್ಲಿ ಭಾಗಿಯಾಗಿಲ್ಲ ಅಥವಾ ವಾರಣಾಸಿ ನ್ಯಾಯಾಲಯದ ಗಮನಕ್ಕೆ ಬಂದಿಲ್ಲ ಮತ್ತು ಇದರ ಹೊರತಾಗಿಯೂ, ಮಸೀದಿ ಆವರಣದ ಸಮೀಕ್ಷೆ ನಡೆಸಲು ಜಿಲ್ಲಾ ನ್ಯಾಯಲಯ ಅನುಮತಿ ನೀಡಿದೆ. ಇದನ್ನೂ ಓದಿ: ಹಿಂದಿನ ತಪ್ಪು ಮರೆಮಾಚಲು UPAಯಿಂದ INDIA ಅಂತ ಬದಲಾಯಿಸಿಕೊಂಡಿದ್ದಾರೆ: ಮೋದಿ ವಾಗ್ದಾಳಿ

    ವೈಜ್ಞಾನಿಕ ಸಮೀಕ್ಷೆ ವೇಳೆ ಮಸೀದಿಯ ಆವರಣವನ್ನು ನಾಶಪಡಿಸುವ ಸಾಧ್ಯತೆ ಇದೆ ಎಂದು ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಪರ ವಕೀಲರು ವಾದಿಸಿದ್ದರು. ಮಸೀದಿಯಲ್ಲಿ ಹಿಂದೂ ದೇವರ ಕುರುಹುಗಳಿರುವ ಹಿನ್ನೆಲೆ ಅದರ ಸರ್ವೆ ಅಗತ್ಯ ಎಂದು ಹಿಂದೂ ಪರ ವಕೀಲರು ವಾದ ಮಂಡಿಸಿದರು.

    ಇದಕ್ಕೂ ಮುನ್ನ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ವಾರಾಣಾಸಿ ಜಿಲ್ಲಾ ನ್ಯಾಯಲಯದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ ಸರ್ವೆ ಕಾರ್ಯ ಆರಂಭಿಸಿದೆ ಎಂದು ಆರೋಪಿಸಿತ್ತು. ಈ ಹಿನ್ನೆಲೆ ಮೇಲ್ಮನವಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿತ್ತು. ಇದನ್ನೂ ಓದಿ: ಮಣಿಪುರದಲ್ಲಿ ಹೊಸ ಸಂಘರ್ಷ – ಎರಡು ಸಮುದಾಯಗಳ ನಡುವೆ ಗುಂಡಿನ ಚಕಮಕಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

    ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

    ಲಕ್ನೋ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ತಂಡ ಇಂದು (ಸೋಮವಾರ) ವಾರಣಾಸಿಯ (Varanasi) ಜ್ಞಾನವಾಪಿ (Gyanvapi) ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭಿಸಿದೆ.

    ಮಸೀದಿ ಪರಿಶೀಲನೆಗೆ ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ (Court) ಆದೇಶದ ವಿರುದ್ಧ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಈ ಸರ್ವೆ ಆರಂಭಗೊಂಡಿದೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಸಮೀಕ್ಷೆ ಸೀಲ್ ಮಾಡಿದ ಶಿವಲಿಂಗದ ಆಕೃತಿ ಇರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಾ ಪ್ರದೇಶಗಳಲ್ಲೂ ನಡೆಯಲಿದೆ. ಮಸೀದಿಯಲ್ಲಿ ಶಿವಲಿಂಗದಂತೆ ಕಾಣುವ ರಚನೆ 2022 ರಲ್ಲಿ ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿತ್ತು. ಈಗ ನಡೆಯುತ್ತಿರುವ ಸಮೀಕ್ಷೆಯ ವರದಿಯನ್ನು ಆ.4ರ ಒಳಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಐವರು ಹಿಂದೂ ಮಹಿಳೆಯರಿಗೆ ಗೆಲುವು

    ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಈ ತಪಾಸಣೆ ನಡೆಸಲಾಗುತ್ತಿದೆ. ಪುರಾತನ ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ನಂತರ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ಬಗ್ಗೆ ಸಂಪೂರ್ಣ ಸತ್ಯವನ್ನು ಹೊರತರಲು ವೈಜ್ಞಾನಿಕ ಅಧ್ಯಯನದ ಅಗತ್ಯವಿದೆ ಎಂದಿದ್ದರು. ಆದರೆ ಜ್ಞಾನವಾಪಿ ಮಸೀದಿಯ ಸಿಬ್ಬಂದಿ ಶಿವಲಿಂಗದ ರಚನೆಯು ವಝುಖಾನಾದಲ್ಲಿ ಕಾರಂಜಿಯ ಒಂದು ಭಾಗವಾಗಿದೆ ಎಂದು ಹೇಳಿದ್ದರು. ವಿಚಾರಣೆಯ ಭಾಗವಾಗಿ ವೈಜ್ಞಾನಿಕ ತನಿಖೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

    ಅರ್ಜಿದಾರರ ಪರವಾಗಿಯೂ ಪ್ರತಿನಿಧಿಸುವ ಸುಭಾಷ್ ನಂದನ್ ಚತುರ್ವೇದಿ, ನ್ಯಾಯಾಲಯದ ನಿರ್ಧಾರವು ಪ್ರಕರಣದಲ್ಲಿ ಮಹತ್ವದ ತಿರುವು ಎಂದು ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನಿಂದ ಲಂಚ ಪಡೆದ ಆರೋಪ – ಎಎಸ್‌ಐ ಅಮಾನತು

    ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನಿಂದ ಲಂಚ ಪಡೆದ ಆರೋಪ – ಎಎಸ್‌ಐ ಅಮಾನತು

    ಹುಬ್ಬಳ್ಳಿ: ಸಂಚಾರ ನಿಯಮ ಉಲ್ಲಂಘನೆ ಮಾಡಿದ ಬೈಕ್ ಸವಾರರೊಬ್ಬರಿಗೆ ರಶೀದಿ ನೀಡದೆ ಲಂಚದ (Bribe) ರೂಪದಲ್ಲಿ ಹಣ ಪಡೆದ ಆರೋಪದ ಮೇಲೆ ಉತ್ತರ ಸಂಚಾರ ಠಾಣೆ ಎಎಸ್‌ಐ (ASI) ರಮ್ಜಾನಬಿ ಅಳಗವಾಡಿ ಅವರನ್ನು ಅಮಾನತು ಮಾಡಲಾಗಿದೆ.

    ಹುಬ್ಬಳ್ಳಿ (Hubballi) ಹೊಸೂರಿನ ಗಾಳಿ ದುರ್ಗಮ್ಮ ದೇವಸ್ಥಾನದ ಎದುರು ಹೆಲ್ಮೆಟ್ ಧರಿಸದೆ ಬೈಕ್ ಸವಾರರೊಬ್ಬರು ತೆರಳುತ್ತಿದ್ದರು. ಅವರನ್ನು ತಡೆದು ದಂಡ ಪಾವತಿಸುವಂತೆ ಎಎಸ್‌ಐ ಹೇಳಿದ್ದರು. ಇದನ್ನೂ ಓದಿ: ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಜೆಡಿಎಸ್‌-ಬಿಜೆಪಿ ಹೊಂದಾಣಿಕೆ: ಕಾಲೆಳೆದ ಕಾಂಗ್ರೆಸ್‌

    ಸವಾರ ನೀಡಿದ ದಂಡದ ಶುಲ್ಕವನ್ನು ಎಎಸ್‌ಐ ಜೇಬಿಗೆ ಹಾಕಿಕೊಂಡು, ಅದಕ್ಕೆ ರಶೀದಿ ನೀಡಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಮಾಹಿತಿ ತಿಳಿದ ತಕ್ಷಣ ಪ್ರಕರಣ ಮಾಹಿತಿ ಪಡೆದ ಪೊಲೀಸ್ ಕಮಿಷನರ್ ಸಂತೋಷ್ ಬಾಬು ಎಎಸ್‌ಐಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: KSRTC ನೌಕರ ಆತ್ಮಹತ್ಯೆ – ಮ್ಯಾನೇಜರ್ ಕಿರುಕುಳ ಆರೋಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ

    ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ

    ಲಕ್ನೋ: ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಸರ್ವೆ (Survey) ನಡೆಸಲು ವಾರಣಾಸಿ ನ್ಯಾಯಾಲಯ (Varanasi Court) ಶುಕ್ರವಾರ ಅನುಮತಿ ನೀಡಿದೆ.

    ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ವಿವಾದಿತ ಶಿವಲಿಂಗದ (Shivling) ರಚನೆಯನ್ನು ಹೊರತುಪಡಿಸಿ ಸಂಕೀರ್ಣದಲ್ಲಿ ಕಾರ್ಬನ್ ಡೇಟಿಂಗ್ ನಡೆಸಲು ಅನುಮತಿ ನೀಡಲಾಗಿದೆ. ವೈಜ್ಞಾನಿಕ ಸಮೀಕ್ಷೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ನಡೆಸಲಿದೆ. ವಿಚಾರಣೆಗೆ ಮುಂದಿನ ದಿನಾಂಕವಾಗಿರುವ ಆಗಸ್ಟ್ 4 ರೊಳಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ನ್ಯಾಯಾಲಯ ಎಎಸ್‌ಐಗೆ ತಿಳಿಸಿದೆ.

    ಹಿಂದೂಗಳ ದೇವಾಲಯ ಇರುವ ಜಾಗದಲ್ಲಿ ಮಸೀದಿ ಕಟ್ಟಲಾಗಿದ್ದು, ಈ ಕುರಿತು ವೈಜ್ಞಾನಿಕ ಸರ್ವೇ ಆಗಬೇಕು ಎಂದು ಹಿಂದೂಗಳ ಪರವಾಗಿ ಎಕೆ ವಿಶ್ವೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಇದಕ್ಕೂ ಮುನ್ನ ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ವಾದ-ಪ್ರತಿವಾದಗಳನ್ನು ನ್ಯಾಯಾಲಯ ಆಲಿಸಿತ್ತು. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಜ್ಞಾನವಾಪಿ ಮಸೀದಿಯ ಸಂಪೂರ್ಣ ಸರ್ವೇ ನಡೆಸಬೇಕು ಎಂದು ಹಿಂದೂ ಭಕ್ತರ ಪರ ವಕೀಲರು ಒತ್ತಾಯಿಸಿದ್ದರು. ಇದನ್ನೂ ಓದಿ: ನಾಳೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

    ಸದ್ಯ ಮಸೀದಿಯ ಕಾರ್ಬನ್ ಡೇಟಿಂಗ್‌ಗೆ ವಾರಣಾಸಿ ನ್ಯಾಯಲಯ ಆದೇಶಿಸಿದೆ. ಇದಕ್ಕೂ ಮೊದಲು ವಜೂ ಸ್ಥಳದಲ್ಲಿದ್ದ ಶಿವಲಿಂಗ ಆಕೃತಿಯು ಶಿವಲಿಂಗ ಅಥವಾ ಕಾರಂಜಿಯೇ ಎಂದು ತಿಳಿಯಲು ಕಾರ್ಬನ್ ಡೇಟಿಂಗ್ ಮಾಡಲು ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ಆದರೆ ವಿವಾದಿತ ಶಿವಲಿಂಗ ರಚನೆಯ ಕಾರ್ಬನ್ ಡೇಟಿಂಗ್ ನಡೆಸದಂತೆ ಎಎಸ್‌ಐಗೆ ಕಳೆದ ಮೇನಲ್ಲಿ ಸೂಚಿಸಿತ್ತು.

    ವಾರಣಾಸಿ ಕೋರ್ಟ್‌ನಲ್ಲಿ ಹಿಂದೂ ಅರ್ಜಿದಾರರಿಗೆ ಗೆಲುವು ಸಿಕ್ಕಿದೆ. ಆದರೆ ಮಸೀದಿಯ ಆಡಳಿತ ಮಂಡಳಿ ಅಲಹಾಬಾದ್ ಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, ಕೋರ್ಟ್ ಇಲ್ಲಿ ಅನುಮತಿ ನೀಡಲಿದ್ಯಾ ಕಾದು ನೋಡಬೇಕು. ಇದನ್ನೂ ಓದಿ: ಶಸ್ತ್ರಾಸ್ತ್ರ ಹಿಡಿದುಕೊಂಡು ಮಮತಾ ಮನೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಲಸೂರು ಗೇಟ್ ಸಂಚಾರಿ ಎಎಸ್‌ಐ ಮಲಗಿದ್ದಲ್ಲೇ ಸಾವು

    ಹಲಸೂರು ಗೇಟ್ ಸಂಚಾರಿ ಎಎಸ್‌ಐ ಮಲಗಿದ್ದಲ್ಲೇ ಸಾವು

    ಬೆಂಗಳೂರು: ಹಲಸೂರಿನ ಗೇಟ್ ಸಂಚಾರಿ ಎಎಸ್‌ಐ (ASI) ಮಲಗಿದ್ದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಆನಂದ್ ಕುಮಾರ್ ಮೃತ ಎಎಸ್‌ಐ. ನೈಟ್ ಶಿಫ್ಟ್‌ನಲ್ಲಿ ಕೆಲಸ ಮಾಡಿ ಮನೆಗೆ ತೆರಳಿದ್ದ ಆನಂದ್ ಕುಮಾರ್ ಕಳೆದ ರಾತ್ರಿ ಮಲಗಿದ್ದವರು ಅಲ್ಲಿಯೇ ಸಾವನ್ನಪ್ಪಿದ್ದಾರೆ.

    ನಾಗರಬಾವಿ ಬಳಿಯ ಮನೆಯಲ್ಲಿ ಆನಂದ್ ಕುಮಾರ್ ಮಲಗಿದ್ದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ್ದಾರೆ. ಬಳಿಕ ವೈದ್ಯರು ಆನಂದ್ ಕುಮಾರ್ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ಅಂಗಳದಲ್ಲಿ ಸಿಎಂ ಚೆಂಡು – ಸಿದ್ದು ಅಥವಾ ಡಿಕೆಶಿ ಪರ ಹೆಚ್ಚು ಶಾಸಕರಿದ್ದರೆ ಏನಾಗಬಹುದು?

  • ಒಡಿಶಾ ಆರೋಗ್ಯ ಸಚಿವರ ಹತ್ಯೆ ಕೇಸ್ – ASIಗೆ ಇತ್ತು Bipolar Disorder ಮಾನಸಿಕ ಕಾಯಿಲೆ

    ಒಡಿಶಾ ಆರೋಗ್ಯ ಸಚಿವರ ಹತ್ಯೆ ಕೇಸ್ – ASIಗೆ ಇತ್ತು Bipolar Disorder ಮಾನಸಿಕ ಕಾಯಿಲೆ

    ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ (Naba Kishore Das) ಅವರನ್ನ ಗುಂಡಿಕ್ಕಿ ಕೊಂದ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ASI) ಓರ್ವ ಮಾನಸಿಕ ರೋಗಿಯಾಗಿದ್ದು, ಬೈಪೋಲಾರ್ ಡಿಸಾರ್ಡರ್ (Bipolar Disorder) ಹೆಸರಿನ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

    ಮಾನಸಿಕ ಅಸ್ವಸ್ಥತೆಯ (Mental Disorder) ಹೊರತಾಗಿಯೂ ಗೋಪಾಲಕೃಷ್ಣ ದಾಸ್‌ಗೆ ಸೇವಾ ರಿವಾಲ್ವರ್ ನೀಡಿ, ಬ್ರಜರಾಜನಗರದ ಉಸ್ತುವಾರಿಯಾಗಿ ನೇಮಿಸಲಾಗಿತ್ತು. ಅಲ್ಲಿಯೇ ಆತ ಆರೋಗ್ಯ ಸಚಿವರನ್ನ ಗುಂಡಿಕ್ಕಿ ಕೊಂದಿದ್ದಾನೆ ಎಂದು ತನಿಖಾ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಗುಂಡಿನ ದಾಳಿಗೆ ಒಡಿಶಾದ ಆರೋಗ್ಯ ಸಚಿವ ಸಾವು

    ಗುಂಡಿನ ದಾಳಿಗೆ ಒಡಿಶಾದ ಆರೋಗ್ಯ ಸಚಿವ ಸಾವು

    ಈ ಕುರಿತು ಮಾಹಿತಿ ನೀಡಿರುವ ಮನೋವೈದ್ಯ ಡಾ.ಚಂದ್ರಶೇಖರ್ ತ್ರಿಪಾಠಿ, ASI ಗೋಪಾಲಕೃಷ್ಣ ದಾಸ್ ಮಾನಸಿಕ ಕಾಯಿಲೆಯಿಂದ (Mental Disorder) ಬಳಲುತ್ತಿದ್ದ. ಸುಮಾರು 10 ವರ್ಷಗಳ ಹಿಂದೆಯೇ ನನ್ನ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ್ದ. ತುಂಬಾ ಬೇಗನೆ ಕೋಪಗೊಳ್ಳುತ್ತಿದ್ದರು. ಅದಕ್ಕಾಗಿ ಚಿಕಿತ್ಸೆ ಸಹ ಪಡೆಯುತ್ತಿದ್ದ. ಆದರೆ ಅವರು ನಿಯಮಿತವಾಗಿ ಔಷಧಿ ತೆಗೆದುಕೊಳ್ಳುತ್ತಿದ್ದ ಬಗ್ಗೆ ಖಚಿತತೆಯಿಲ್ಲ. ಒಂದು ವೇಳೆ ಔಷಧಿ ತೆಗೆದುಕೊಳ್ಳದಿದ್ದರೆ ಮತ್ತೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದು ಹೇಳಿದ್ದೆ. ಆದರೂ ದಾಸ್ ಕಳೆದ ಒಂದು ವರ್ಷದಿಂದ ನನ್ನನ್ನ ಭೇಟಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

    ಏನಿದು ಬೈಪೋಲಾರ್ ಡಿಸಾರ್ಡರ್?
    ಬೈಪೋಲಾರ್ ಡಿಸಾರ್ಡರ್ (Bipolar Disorder) ಒಂದು ಮಾನಸಿಕ ಆರೋಗ್ಯ ಕಾಯಿಲೆ. ಇದು ಅತ್ಯಂತ ಹೆಚ್ಚಿನ ಒತ್ತಡದಿಂದ ತೀವ್ರ ಖಿನ್ನತೆವರೆಗಿನ ಮನಸ್ಥಿತಿಯನ್ನು ಉಂಟು ಮಾಡುತ್ತದೆ. ಆದರೆ ಆಪ್ತ ಸಮಾಲೋಚನೆಯಂತಹ ಚಿಕಿತ್ಸೆಗಳಿಂದ ಕಾಯಿಲೆ ಗುಣಪಡಿಸಹುದು ಎಂದು ವೈದ್ಯರು ಹೇಳಿದ್ದಾರೆ.

    ಎಎಸ್‌ಐ ಪತ್ನಿ ಕೂಡ `ಪತಿ ಮಾನಸಿಕ ಅಸ್ವಸ್ಥತೆಗೆ ಔಷಧಿ ಸೇವಿಸುತ್ತಿದ್ದರು’ ಎಂಬುದನ್ನ ಖಚಿತಪಡಿಸಿದ್ದಾರೆ. ಆದರೆ ಆಕೆ ಸುಮಾರು 400 ಕಿಮೀ ದೂರದಲ್ಲಿದ್ದರು. ಆದ್ದರಿಂದ ನಿಯಮಿತವಾಗಿ ಔಷಧಿ ತೆಗೆದುಕೊಳ್ಳುತ್ತಿದ್ದರೆ ಅನ್ನೋ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

    ಗಂಜಾಂ ಜಿಲ್ಲೆಯ ಜಲೇಶ್ವರಖಂಡಿ ಗ್ರಾಮದ ನಿವಾಸಿಯಾಗಿರುವ ದಾಸ್ ಬರ್ಹಮ್‌ಪುರಂದಲ್ಲಿ ಕಾನ್ಸ್ಟೇಬಲ್ ಆಗಿ ಪೊಲೀಸ್ ವೃತ್ತಿ ಜೀವನ ಆರಂಭಿಸಿದ್ದ. 12 ವರ್ಷಗಳ ನಂತರ ಜಾರ್ಸುಗುಡಾ ಜಿಲ್ಲೆಗೆ ವರ್ಗಾವಣೆಗೊಂಡಿದ್ದರು. ಬ್ರಜರಾಜನಗರ ಪ್ರದೇಶದ ಗಾಂಧಿ ಛಾಕ್‌ನಲ್ಲಿ ಪೊಲೀಸ್ ಉಸ್ತುವಾರಿಯಾಗಿ ವಹಿಸಿದ ನಂತರ ಎಎಸ್‌ಐ ಆಗಿ ಪರವಾನಿ ಪಡೆದ ರಿವಲ್ವಾರ್ ನೀಡಲಾಗಿತ್ತು ಎಂದು ಜರ್ಸುಗುಡಾ ಎಸ್‌ಡಿಪಿಒ ಗುಪ್ತೇಶ್ವರ ಭೋಯ್ ಹೇಳಿದ್ದಾರೆ.

    ಗುಂಡಿನ ದಾಳಿಗೆ ಒಡಿಶಾದ ಆರೋಗ್ಯ ಸಚಿವ ಸಾವು

    ಒಡಿಶಾದ ಆರೋಗ್ಯ ಸಚಿವರಾಗಿದ್ದ ನಬಾ ಕಿಶೋರ್ ದಾಸ್ ಅವರು ಕಾರ್ಯಕ್ರಮವೊಂದಕ್ಕೆ ಭೇಟಿ ನೀಡುತ್ತಿದ್ದರಿಂದ ಗೋಪಾಲಕೃಷ್ಣ ದಾಸ್ ಅವರನ್ನು ಭಾನುವಾರ ರಕ್ಷಣಾ ವ್ಯವಸ್ಥೆಗಾಗಿ ನಿಯೋಜಿಸಲಾಗಿತ್ತು. ಸಚಿವರು ಕಾರಿನಿಂದ ಇಳಿದಾಗ ಬೆಂಬಲಿಗರು ಹೂಮಾಲೆ ಹಾಕುತ್ತಿದ್ದ ವೇಳೆ ಎರಡು ಬಾರಿ ಆತ ಗುಂಡು ಹಾರಿಸಿದ್ದಾನೆ. ಬಳಿಕ ಪರಾರಿಯಾಗಲು ಯತ್ನಿಸಿ ದಾಸ್ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಒಡಿಶಾದ ಆರೋಗ್ಯ ಸಚಿವರ ಮೇಲೆ ASI ಗುಂಡಿನ ದಾಳಿ

    ಸದ್ಯ ಈ ಪ್ರಕರಣವನ್ನು ಒಡಿಶಾ ಪೊಲೀಸರ ಅಪರಾಧ ವಿಭಾಗ ತನಿಖೆ ನಡೆಸುತ್ತಿದೆ. ಇದಕ್ಕಾಗಿ ಸೈಬರ್ ತಜ್ಞರು ಮತ್ತು ಅಪರಾಧ ವಿಭಾಗದ ಅಧಿಕಾರಿಗಳನ್ನು ಒಳಗೊಂಡ 7 ಸದಸ್ಯರ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಈಗಾಗಲೇ ತನಿಖೆ ಪ್ರಾರಂಭಿಸಿದ್ದು, ಬ್ಯಾಲಿಸ್ಟಿಕ್ ತಜ್ಞರ (Ballistic Expert) (ಮದ್ದು-ಗುಂಡುಗಳನ್ನು ಪರಿಶೀಲಿಸುವ ತಜ್ಞರು) ಬಳಿ ಮಾಹಿತಿ ಪಡೆಯಲು ಮುಂದಾಗಿದ್ದಾರೆ.

    ಈ ಸಂಬಂಧ ಐಪಿಸಿ (IPC) 307 ಹಾಗೂ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಒಡಿಶಾದ ಆರೋಗ್ಯ ಸಚಿವರ ಮೇಲೆ ASI ಗುಂಡಿನ ದಾಳಿ

    ಒಡಿಶಾದ ಆರೋಗ್ಯ ಸಚಿವರ ಮೇಲೆ ASI ಗುಂಡಿನ ದಾಳಿ

    ಭುವನೇಶ್ವರ: ಒಡಿಶಾದ (Odisha) ಆರೋಗ್ಯ ಸಚಿವ (Health Minister) ಹಾಗೂ ಬಿಜೆಡಿ (BJD) ಹಿರಿಯ ನಾಯಕ ನಬಾ ದಾಸ್ (Naba Das) ಮೇಲೆ ಸಹಾಯಕ ಸಬ್ ಇನ್ಸ್‌ಪೆಕ್ಟರ್‌ (ASI) ಗುಂಡಿನ ದಾಳಿ ನಡೆಸಿದ ಘಟನೆ ಜರ್ಸುಗುಡಾ ಜಿಲ್ಲೆಯಲ್ಲಿ ನಡೆದಿದೆ.

    ಒಡಿಶಾದ ಜರ್ಸುಗುಡಾ ಜಿಲ್ಲೆಯ ಬ್ರಜರಾಜನಗರದ ಗಾಂಧಿ ಚಾಕ್ ಬಳಿ ಆರೋಗ್ಯ ಸಚಿವರ ಮೇಲೆ ಪೊಲೀಸ್ ಅಧಿಕಾರಿ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಈ ವೇಳೆ ಸಚಿವರ ಎದೆಗೆ ಗುಂಡು ತಗುಲಿದೆ. ತೀವ್ರವಾಗಿ ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

    ಆರೋಪಿಯನ್ನು ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ದಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಸಚಿವ ನಬಾ ದಾಸ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡುತ್ತಿದ್ದಾರೆ. ಇದನ್ನೂ ಓದಿ: ಬಸವ ಕಲ್ಯಾಣದಿಂದ ಸಿದ್ದರಾಮಯ್ಯ, ಕುರಡುಮಲೆಯಿಂದ ಡಿಕೆಶಿ ಬಸ್ ಯಾತ್ರೆ- ಫೆ. 3ರಿಂದ ಆರಂಭ

    ಮೂಲಗಳ ಪ್ರಕಾರ ನಬಾ ದಾಸ್ ಅವರು ಬ್ರಜರಾಜನಗರದ ಗಾಂಧಿ ಚೌಕ್‍ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದಾಳಿಯ ಹಿಂದಿನ ಉದ್ದೇಶಗಳು ಇನ್ನೂ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಎಲೆಕ್ಷನ್ ಟೈಂನಲ್ಲಿ ಬಿಬಿಎಂಪಿಯಿಂದ ಆಪರೇಷನ್ ಬುಲ್ಡೋಜರ್ ಸುಳಿವು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k