Tag: asi

  • ಬೈಕಿಗೆ ಟ್ರ್ಯಾಕ್ಟರ್ ಡಿಕ್ಕಿ – ಸ್ಥಳದಲ್ಲೇ ಎಎಸ್‍ಐ ಸಾವು

    ಬೈಕಿಗೆ ಟ್ರ್ಯಾಕ್ಟರ್ ಡಿಕ್ಕಿ – ಸ್ಥಳದಲ್ಲೇ ಎಎಸ್‍ಐ ಸಾವು

    ಹಾವೇರಿ: ಬೈಕಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಎಎಸ್‍ಐ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊರ್ವ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ.

    ರಾಚಪ್ಪ ಚಾಕಲಬ್ಬಿ(56) ಮೃತಪಟ್ಟ ಎಎಸ್‍ಐ. ಹವಾಲ್ದಾರ ಇಸ್ಮಾಯಿಲ್ ಹುಡೇದ(45) ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

    ಚಾಕಲಬ್ಬಿ ಗುತ್ತಲ ಪೊಲೀಸ್ ಠಾಣೆಯಲ್ಲಿ ಎಎಸ್‍ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹಾವೇರಿ ತಾಲೂಕಿನ ಹಾವನೂರು ಜಾತ್ರೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ಕೆ. ಪರಶುರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಈ ಬಗ್ಗೆ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಗ ಮಾಡಿದ ನೀಚ ಕೃತ್ಯದಿಂದ ಅಪ್ಪನ ಕೆಲಸವೇ ಹೋಯ್ತು!

    ಮಗ ಮಾಡಿದ ನೀಚ ಕೃತ್ಯದಿಂದ ಅಪ್ಪನ ಕೆಲಸವೇ ಹೋಯ್ತು!

    ನವದೆಹಲಿ: ಮಗ ಮಾಡಿದ ನೀಚ ಕೃತ್ಯದಿಂದ ಎಎಸ್‍ಐ ಕೆಲಸದಿಂದ ತಂದೆಯನ್ನು ದೆಹಲಿ ಪೊಲಿಸರು ವಜಾ ಮಾಡಿದ್ದಾರೆ. ಅಶೋಕ್ ಕುಮಾರ್ ಅಮಾನತ್ತಾದ ಎಎಸ್‍ಐ ಆಗಿದ್ದು, ಇವರು ಜಿಲ್ಲೆಯಲ್ಲಿ ಎಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು.

    ಅಮಾನತು ಮಾಡಿದ್ದು ಯಾಕೆ?:
    ಅಶೋಕ್ ಮಗ ತೋಮರ್ ಯುವತಿಯೊಬ್ಬಳಿಗೆ ಹಿಗ್ಗಾಮುಗ್ಗಾ ಥಳಿಸಿ, ಮೊಣ ಕೈ ಹಾಗೂ ಮೊಣಕಾಲಿನಿಂದ ಬೆನ್ನು ಮತ್ತು ಮುಖಕ್ಕೆ ಪಂಚ್ ಕೊಟ್ಟಿದ್ದನು. ಅಲ್ಲದೇ ಮಗನ ಜೊತೆ ಸೇರಿ ತಂದೆ ಅಶೋಕ್ ಕೂಡ ಸಂತ್ರಸ್ತೆಯ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. ಈ ಕಾರಣಕ್ಕೆ ಅಶೋಕ್ ಅವರನ್ನು ಎಎಸ್‍ಪಿ ಉದ್ದೆಯಿಂದ ದೆಹಲಿ ಪೊಲೀಸರು ವಜಾ ಮಾಡಿದ್ದಾರೆ.

    ಘಟನೆ ವಿವರ:
    ಸೆಪ್ಟೆಂಬರ್ 2ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿರುವ ಬಿಪಿಓ ಕಚೇರಿಯಲ್ಲಿ ಆರೋಪಿ ರೋಹಿತ್ ತೋಮರ್ ಯುವತಿಯೊಬ್ಬಳಿಗೆ ಥಳಿಸಿದ್ದಾನೆ. ತನ್ನನ್ನು ಮದುವೆಯಾಗಲು ಒಪ್ಪುತ್ತಿಲ್ಲವೆಂದು ಯುವತಿಗೆ ಚೆನ್ನಾಗಿ ಥಳಿಸಿ, ಮೊಣಕೈ ಹಾಗೂ ಮೊಣಕಾಲಿನಿಂದ ಬೆನ್ನು ಮತ್ತು ಮುಖಕ್ಕೆ ಪಂಚ್ ಕೊಟ್ಟಿದ್ದನು. ಈ ಎಲ್ಲಾ ಘಟನೆಯನ್ನು ಗೆಳೆಯ ಕಚೇರಿ ಮಾಲೀಕ ರೋಹಿತ್ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದನು. ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೇ ಈ ವಿಡಿಯೋವನ್ನು ಗಮನಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ದೆಹಲಿ ಪೊಲೀಸ್ ಕಮಿಷನರ್ ಅಮೂಲ್ಯ ಪಾಟ್ನಾಯಕ್ ಅವರಿಕೆ ಕರೆ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಇದನ್ನೂ ಓದಿ: ಪೊಲೀಸ್ ಅಧಿಕಾರಿ ಮಗನಿಂದ ಹುಡ್ಗಿಗೆ ಹಿಗ್ಗಾಮುಗ್ಗಾ ಥಳಿತ, ಮೊಣಕಾಲಿನಿಂದ ಮುಖಕ್ಕೆ ಪಂಚ್!

    ಈ ಹಿನ್ನೆಲೆಯಲ್ಲಿ ಯುವತಿಯ ದೂರನ್ನು ಸ್ವೀಕರಿಸಿದ ಪೊಲೀಸರು, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಬಲೆ ಬೀಸಿ, ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದಾಗ ಆಕೆ ತನ್ನನ್ನು ಮದುವೆಯಾಗುತ್ತಿಲ್ಲವೆಂದು ಸಿಟ್ಟಿನಿಂದ ಈ ರೀತಿ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದನು.

    ಯುವತಿ ನೀಡಿದ್ದ ದೂರುನಲ್ಲೇನಿತ್ತು?:
    ತೋಮರ್ ಹಾಗೂ ನಾನು ಕಳೆದ ಒಂದೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದೆವು. ಆದ್ರೆ ಕಳೆದ ತಿಂಗಳು ನಮ್ಮಿಬ್ಬರ ಮಧ್ಯೆ ಬ್ರೇಕಪ್ ಆಗಿದೆ. ಯಾಕಂದ್ರೆ ನನ್ನ ಮನೆಯವರು ನಮ್ಮಿಬ್ಬರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆ ಬಳಿಕದಿಂದ ತೋಮರ್ ನನಗೆ ಬೆದರಿಕೆ ಹಾಕುತ್ತಿದ್ದಾನೆ ಅಂತ ದೂರಿನಲ್ಲಿ ಯುವತಿ ತಿಳಿಸಿದ್ದಾಳೆ. ಇದನ್ನೂ ಓದಿ: ಮದ್ವೆಯಾಗಲು ಒಪ್ಪದಿದ್ದಕ್ಕೆ ಪ್ರಿಯತಮೆಗೆ ಥಳಿಸಿ, ಮೊಣಕಾಲಿಂದ ಪಂಚ್ ಕೊಟ್ಟ!

    ಇಷ್ಟು ಮಾತ್ರವಲ್ಲದೇ ನಾನು ನೆಲೆಸಿದ್ದ ಕಾಲೋನಿಗೆ ಆಗಾಗ ಬಂದು ನಮ್ಮ ಮನೆಗೆ ಕಲ್ಲು ತೂರಾಟ ಮಾಡುತ್ತಾನೆ. ನನ್ನ ತಾಯಿ ಮೇಲೆಯೂ ಹಲ್ಲೆ ಮಾಡಿದ್ದಾನೆ. 4 ದಿನದ ಹಿಂದೆ ಆತ ವಾಟ್ಸಪ್ ಗೆ ಒಂದು ವಿಡಿಯೋ ಕಳುಹಿಸಿದ್ದಾನೆ. ಅದರಲ್ಲಿ, ಒಂದು ವೇಳೆ ನಾನು ಆತನನ್ನು ಮದುವೆಯಾಗದಿದ್ದರೆ ನನಗೆ ಚೆನ್ನಾಗಿ ಥಳಿಸಿ, ಅದನ್ನು ವಿಡಿಯೋ ಮಾಡಿ ಬಳಿಕ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವ ಮೂಲಕ ನನ್ನ ಹೆಸರಿಗೆ ಧಕ್ಕೆ ತರುವುದಾಗಿ ಬೆದರಿಕೆ ಹಾಕಿದ್ದಾನೆ ಅಂತ ಯುವತಿ ಪೊಲೀಸರಲ್ಲಿ ದುಃಖ ತೋಡಿಕೊಂಡಿದ್ದಾಳೆ.

    ಯುವತಿಯ ದೂರಿನಂತೆ ಪೊಲೀಸರು ತೋಮರ್ ನನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದಾರೆ. ಕೆಲ ಗಂಟೆಗಳ ಬಳಿಕ ಯುವತಿ, ಆರೋಪಿ ತೋಮರ್ ತಂದೆ ಸಹಾಯಕ ಸಬ್ ಇನ್ಸ್ ಪೆಕ್ಟರ್ ವಿರುದ್ಧವೂ ದೂರು ದಾಖಲಿಸಿದ್ದಾಳೆ. ಅದರಲ್ಲಿ ಆರೋಪಿ ತಂದೆಯೂ ಬೆದರಿಕೆ ಹಾಕಿರುವುದಾಗಿ ದೂರಿದ್ದಾಳೆ. ಬಳಿಕ ಶುಕ್ರವಾರ ಉತ್ತಮ್ ನಗರ್ ಪೊಲೀಸ್ ಠಾಣೆಗೆ ತೆರಳಿ ಆರೋಪಿ ತೋಮರ್ ವಿರುದ್ಧ ಅತ್ಯಾಚಾರ ದೂರು ದಾಖಲಿಸಿಕೊಳ್ಳುವಂತೆ ಕೇಳಿಕೊಂಡಿದ್ದಾಳೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಬ್ಲಿಕ್ ಟಿವಿ ವರದಿ ಫಲಶೃತಿ: ಲಂಚ ಪಡೆಯುತ್ತಿದ್ದ ಪೊಲೀಸ್ ಅಧಿಕಾರಿಗಳ ಅಮಾನತು

    ಪಬ್ಲಿಕ್ ಟಿವಿ ವರದಿ ಫಲಶೃತಿ: ಲಂಚ ಪಡೆಯುತ್ತಿದ್ದ ಪೊಲೀಸ್ ಅಧಿಕಾರಿಗಳ ಅಮಾನತು

    ಬಳ್ಳಾರಿ: ಪಬ್ಲಿಕ್ ಟಿವಿಯಲ್ಲಿ ಲಂಚ ಪ್ರಕರಣ ವರದಿ ಆಗುತ್ತಿದ್ದಂತೆ ಹಗರಿಬೊಮ್ಮನಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಬಳ್ಳಾರಿ ಎಸ್‍ಪಿ ಅರುಣ್ ರಂಗರಾಜನ್ ಆದೇಶ ಹೊರಡಿಸಿದ್ದಾರೆ.

    ಪಿಎಸ್‍ಐ ಪುಲ್ಲಯ್ಯ ರಾಠೋಡ್ ಹಾಗೂ ಎಎಸ್‍ಐ ಪರಮೇಶ್ವರಪ್ಪ ಅಮಾನತು ಆಗಿರುವ ಪೊಲೀಸ್ ಅಧಿಕಾರಿಗಳು. ಪುಲ್ಲಯ್ಯ ರಾಠೋಡ್ ಹಾಗೂ  ಎಎಸ್‍ಐ ಪರಮೇಶ್ವರಪ್ಪ ರೈತರಿಂದ ಲಂಚ ವಸೂಲಿ ಮಾಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಇಬ್ಬರು ಅಧಿಕಾರಿಗಳು ಟ್ರ್ಯಾಕ್ಟರ್ ಗಳನ್ನು ಹಿಡಿದು, ಪ್ರಕರಣ ದಾಖಲಿಸಿ 500 ರೂ. ದಂಡ ವಿಧಿಸುತ್ತಿದ್ದರು. ಆದರೆ ರೈತರು ಹಾಗೂ ಮಾಲೀಕರಿಂದ 5 ಸಾವಿರ ರೂ., 10 ಸಾವಿರ ರೂ. ಲಂಚ ಪಡೆದು ವಸೂಲಿ ಮಾಡಿ, ಟ್ರ್ಯಾಕ್ಟರ್ ಬಿಟ್ಟು ಕಳುಹಿಸುತ್ತಿದ್ದರು.  ಇದನ್ನು ಓದಿ:  ಹಗರಿಬೊಮ್ಮನಹಳ್ಳಿ ಠಾಣೆ ನಿರ್ವಹಣೆ ನೆಪದಲ್ಲಿ ಲಂಚಕ್ಕೆ ಇಳಿದ ಪೊಲೀಸ್ ಅಧಿಕಾರಿಗಳು!

    ಮಂಗಳವಾರ ಪಿಎಸ್‍ಐ ಪುಲ್ಲಯ್ಯ ಹಾಗೂ ಎಎಸ್‍ಐ ಪರಮೇಶ್ವರಪ್ಪ ಇಬ್ಬರು ಸೇರಿ ಲಂಚ ವಸೂಲಿ ಮಾಡುತ್ತಿದ್ದಾಗ ಮಾನವ ಹಕ್ಕುಗಳ ಸಂರಕ್ಷಣಾ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಚನ್ನವೀರ ಅವರು ತಮ್ಮ ಮೊಬೈಲ್‍ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ. ವಿಡಿಯೋಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಅರುಣ ರಂಗರಾಜನ್ ಅವರಿಗೆ ನೀಡಿ, ಲಂಚ ವಸೂಲಿ ಮಾಡುತ್ತಿದ್ದ ಇಬ್ಬರು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ದೂರು ಸಲ್ಲಿಸಿದ್ದರು. ಪ್ರಕರಣದ ಕುರಿತು ಪಬ್ಲಿಕ್ ಟಿವಿಯಲ್ಲಿ ವರಿದಿಯಾಗುತ್ತಿದ್ದಂತೆ ಬಳ್ಳಾರಿ ಎಸ್‍ಪಿ ಅಮಾನತು ಆದೇಶ ಹೊರಡಿಸಿದ್ದಾರೆ.

  • ಖಾಸಗಿ ವೈದ್ಯರ ಮುಷ್ಕರ – ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಎಎಸ್‍ಐ ಸಾವು

    ಖಾಸಗಿ ವೈದ್ಯರ ಮುಷ್ಕರ – ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಎಎಸ್‍ಐ ಸಾವು

    ರಾಯಚೂರು: ಖಾಸಗಿ ವೈದ್ಯರ ಮುಷ್ಕರದ ಪರಿಣಾಮ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

    ಕೊಪ್ಪಳ ಮೂಲದ 62 ವರ್ಷದ ನಿವೃತ್ತ ಎಎಸ್‍ಐ ಈಶ್ವರಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೊಪ್ಪಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಈಶ್ವರಪ್ಪರನ್ನ ಧಾರವಾಡದ ಖಾಸಗಿ ಆಸ್ಪತ್ರೆಗೆ ಕರೆದ್ಯೊಯ್ಯಲಾಗಿತ್ತು. ಆದ್ರೆ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಚಿಕಿತ್ಸೆ ಸಿಗದ ಕಾರಣ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು.

    ಗಂಭೀರ ಸ್ಥಿತಿಯಲ್ಲಿದ್ದ ಈಶ್ವರಪ್ಪ ಆಕ್ಸಿಜನ್ ಸಹಾಯದಿಂದ ನಿನ್ನೆಯವರೆಗೂ ಉಸಿರಾಡುತ್ತಿದ್ದರು. ಆದ್ರೆ ಇದೀಗ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ.

    ವೈದ್ಯರ ಮುಷ್ಕರ ಮುಂದುವರೆಯುವ ಹಿನ್ನೆಲೆಯಲ್ಲಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಪ್ರತಿದಿನ 800 ರೋಗಿಗಳು ಬರುತ್ತಿದ್ದರೆ ಕಳೆದ 4 ದಿನಗಳಿಂದ 1500ಕ್ಕೂ ಅಧಿಕ ಸಂಖ್ಯೆಯಲ್ಲಿ ಹೊರರೋಗಿಗಳು ಬರುತ್ತಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್ ಸಮಸ್ಯೆ ತಲೆದೋರಿದ್ದು, ಒಂದೇ ಬೆಡ್ ನಲ್ಲಿ ಇಬ್ಬರು ರೋಗಿಗಳನ್ನು ಮಲಗಿಸುತ್ತಿದ್ದಾರೆ.

  • ಎಎಸ್‍ಐ ಪತ್ನಿಯಿಂದ ಮೀಟರ್ ಬಡ್ಡಿ-ಪಂಚಾಯ್ತಿ ಉಪಾಧ್ಯಕ್ಷನ ಪತ್ನಿಯೂ ಸಾಥ್!

    ಎಎಸ್‍ಐ ಪತ್ನಿಯಿಂದ ಮೀಟರ್ ಬಡ್ಡಿ-ಪಂಚಾಯ್ತಿ ಉಪಾಧ್ಯಕ್ಷನ ಪತ್ನಿಯೂ ಸಾಥ್!

    ಕೊಪ್ಪಳ: ಜಿಲ್ಲೆಯ ಕಾರಟಗಿ ಎಎಸ್‍ಐ ವೆಂಕಟೇಶ್ ತಮ್ಮ ಪತ್ನಿಯನ್ನು ಮುಂದೆ ಬಿಟ್ಟು ಭರ್ಜರಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪವೊಂದು ಕೇಳಿ ಬರುತ್ತಿದೆ.

    ಚಿಕ್ಕದಾಗಿ ಬಡ್ಡಿ ವ್ಯವಹಾರ ಮಾಡುತ್ತಾರೆ ಎಂದು ತಿಳಿದರೆ ತಪ್ಪು. ಅಸಲಿಗೆ ಎಎಸ್‍ಐ ಅವರ ಪತ್ನಿ ಪದ್ಮಾವತಿ 12 ಲಕ್ಷ ರೂ. ಸಾಲ ಪಡೆದಿದ್ದ ಗಂಗಾವತಿ ತಾಲೂಕಿನ ಉಳೇನೂರು ಗ್ರಾಮದ ಹೊನ್ನುರಪ್ಪನ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ.

    ಇನ್ನು ರೈತ ಉಳಿದ 1 ಎಕರೆಯಲ್ಲಿ ಜಮೀನಿನಲ್ಲಿ ಉಳಿಮೆ ಮಾಡಲು ಹೋದ್ರೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕ್ತಿದ್ದಾರೆ ಅಂತ ನೊಂದ ಕುಟುಂಬ ಎಸ್‍ಪಿಗೆ ದೂರು ನೀಡಿದೆ. 12 ಲಕ್ಷದ ಬದಲು 35 ಲಕ್ಷ ರೂ.ಯ ಪತ್ರ ಬರೆಸಿಕೊಂಡು ಈಗ ರೈತನ 3 ಎಕರೆ ಜಮೀನನ್ನೇ ಕಬಳಿಸಿದ್ದಾರೆ ಎಂದು ಹೊನ್ನುರಪ್ಪರ ಮಗ ಅಂಬಣ್ಣ ಆರೋಪ ಮಾಡಿದ್ದಾರೆ.

    ಎಎಸ್‍ಐ ವೆಂಕಟೇಶ್‍ರ ಪತ್ನಿ ಪದ್ಮಾವತಿಗೆ ಬೆನ್ನೆಲುಬಾಗಿರೋದು ಗಂಗಾವತಿ ತಾ.ಪಂ ಉಪಾಧ್ಯಕ್ಷ ಗವಿಸಿದ್ದಪ್ಪ, ಆತನ ಹೆಂಡ್ತಿ ಶಾರದಮ್ಮ ಉಳೇನೂರು ಗ್ರಾಪಂ ಅಧ್ಯಕ್ಷೆಯ ಬೆಂಬಲವಿದೆ ಎಂದು ರೈತ ಕುಟುಂಬ ಆರೋಪಿಸುತ್ತಿದೆ.

  • ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್, ಮಂಗಳಮುಖಿಯನ್ನ ತಬ್ಬಿ ಮುದ್ದಾಡಿದ ಎಎಸ್‍ಐ!

    ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್, ಮಂಗಳಮುಖಿಯನ್ನ ತಬ್ಬಿ ಮುದ್ದಾಡಿದ ಎಎಸ್‍ಐ!

    ಬಳ್ಳಾರಿ: ಗಣೇಶ ವಿಸರ್ಜನೆ ವೇಳೆ ಎಎಸ್‍ಐವೊಬ್ಬರು ಮಂಗಳಮುಖಿಯೊಂದಿಗೆ ಡ್ಯಾನ್ಸ್ ಮಾಡುತ್ತಾ ಸಾರ್ವಜನಿಕವಾಗಿಯೇ ಮಂಗಳಮುಖಿಯನ್ನು ತಬ್ಬಿ ಮುದ್ದಾಡಿದ ಘಟನೆಯೊಂದು ಬೆಳಕಿಗೆ ಬಂದಿದೆ.

    ಬಳ್ಳಾರಿ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ಮಂಗಳವಾರ ಬಡಾವಣೆ ಠಾಣೆಯ ಎಎಸ್‍ಐ ಎಜಿ ಗಡಗಡೆ ಮಂಗಳಮುಖಿಯರ ಜೊತೆ ಸಾರ್ವಜನಿಕವಾಗಿ ಡ್ಯಾನ್ಸ್ ಮಾಡಿ ಮಸ್ತಿ ಮಾಡಿದ್ದಾರೆ. ಅಷ್ಟೆ ಅಲ್ಲ ಮಂಗಳಮುಖಿಯನ್ನು ತಬ್ಬಿ ಮುದ್ದಾಡಿದ ವಿಡಿಯೋ ಹಾಗೂ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

    ಹೊಸಪೇಟೆ ಪಟ್ಟಣದ ಗಾಂಧಿ ವೃತ್ತದ ಬಳಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಎಎಸ್‍ಐ ಗಡಗಡೆಯವರು, ನಸುಕಿನ ಜಾವ ಮೆರವಣಿಗೆ ನಡೆಸುತ್ತಾ ಗಣೇಶ ವಿಸರ್ಜನೆಗೆ ಹೊರಟ್ಟಿದ್ದ ಜಂಬೂ ಗಜಾನನ ಯುವಕ ಮಂಡಳಿಯ ಡಿಜೆ ಮೆರವಣಿಗೆ ಆಗಮಿಸುತ್ತಿದ್ದಂತೆ ಯುವಕರು ಹಾಗೂ ಮಂಗಳಮುಖಿಯರ ಜೊತೆಗೂಡಿ ಡ್ಯಾನ್ಸ್ ಮಾಡಿದ್ದಾರೆ.

    ಮಫ್ತಿಯಲ್ಲಿದ್ದ ಎಎಸ್‍ಐ ಸಾಹೇಬರು ಮೊದಮೊದಲು ಯಾರಿಗೂ ಗೊತ್ತಾಗದಿದ್ದರೂ ಇದೀಗ ವಿಡಿಯೋ ವೈರಲ್ ಆದ ಬಳಿಕ ಎಎಸ್‍ಐ ಬಣ್ಣ ಬಯಲಾಗಿದೆ.

    ಇದೇ ಎಎಸ್‍ಐ ಅಗಸ್ಟ್ 3ರಂದು ಶಾಮಿಯಾನ ಸಪ್ಲೈಯರ್ಸ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲೂ ಸಹ ಸಮವಸ್ತ್ರದಲ್ಲೆ ಡ್ಯಾನ್ಸ್ ಮಾಡಿದ್ದರು. 2 ವಿಡಿಯೋ ವೈರಲ್ ಆದ್ರೂ ಕೂಡ ಪೊಲೀಸ್ ಇಲಾಖೆ ಮಾತ್ರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಹೇಳಿದ್ದಾರೆ.

    https://www.youtube.com/watch?v=7kMAht2vjGE&feature=youtu.be

  • ಸಮವಸ್ತ್ರದಲ್ಲೇ ಡಾಬಾಗೆ ನುಗ್ಗಿ ಮದ್ಯಪಾನ ಮಾಡಿದ ಎಎಸ್‍ಐ

    ಸಮವಸ್ತ್ರದಲ್ಲೇ ಡಾಬಾಗೆ ನುಗ್ಗಿ ಮದ್ಯಪಾನ ಮಾಡಿದ ಎಎಸ್‍ಐ

    ಬಳ್ಳಾರಿ: ಎಎಸ್‍ಐವೊಬ್ಬರು ಪೊಲೀಸ್ ಸಮವಸ್ತ್ರದಲ್ಲೇ ಡಾಬಾಗೆ ನುಗ್ಗಿ ಮದ್ಯಪಾನ ಮಾಡಿದ ಪ್ರಕರಣ ಇದೀಗ ಬಯಲಾಗಿದೆ.

    ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಎಎಸ್‍ಐ ಮೋಹನಕುಮಾರ ಕಳೆದ ರಾತ್ರಿ ಹಗರಿಬೊಮ್ಮನಹಳ್ಳಿ ಹೊರವಲಯದ ಡಾಬಾ ಪರಿಶೀಲನೆ ಮಾಡೋ ನೆಪದಲ್ಲಿ ಅಡುಗೆ ಮನೆಗೆ ನುಗ್ಗಿ ಅಲ್ಲೆ ಗಡದ್ದಾಗಿ ಕಂಠಪೂರ್ತಿ ಕುಡಿದಿರುವ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಎಎಸ್‍ಐ ಮೋಹನಕುಮಾರ ಡಾಬಾ ಮೇಲೆ ಕೇಸ್ ಮಾಡೋದಾಗಿ ಬೆದರಿಸಿ ಅವರಿಂದಲೇ ಎಣ್ಣೆ ತರಿಸಿಕೊಂಡು ಸಮವಸ್ತ್ರದಲ್ಲೆ ಎಣ್ಣೆ ಏರಿಸುವುದು ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ್ರೂ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

  • ನೈಟ್ ರೌಂಡ್ಸ್ ವೇಳೆ ಚೀತಾ ಬೈಕ್‍ಗೆ ಕಾರು ಡಿಕ್ಕಿ – ಎಎಸ್‍ಐಗೆ ಗಂಭೀರ ಗಾಯ

    ನೈಟ್ ರೌಂಡ್ಸ್ ವೇಳೆ ಚೀತಾ ಬೈಕ್‍ಗೆ ಕಾರು ಡಿಕ್ಕಿ – ಎಎಸ್‍ಐಗೆ ಗಂಭೀರ ಗಾಯ

    ಬೆಂಗಳೂರು: ಪೊಲೀಸ್ ಚಿತಾ ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಎಸ್‍ಐ ಜಗದೀಶ್ ಎಂಬವರಿಗೆ ಗಂಭಿರವಾಗಿ ಗಾಯವಾಗಿರೋ ಘಟನೆ ಬೆಂಗಳೂರಿನ ತಿಮ್ಮಯ್ಯ ಸರ್ಕಲ್ ಬಳಿ ನಡೆದಿದೆ.

    ಕಬ್ಬನ್ ಪಾರ್ಕ್ ಎಎಸ್‍ಐ ಆಗಿರೋ ಜಗದೀಶ್ ಅವರು ತಡರಾತ್ರಿ ನೈಟ್ ರೌಂಡ್ಸ್ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ರೋಹನ್ ಎಂಬಾತ ಹಿಂದಿನಿಂದ ಚಿತಾ ಬೈಕ್‍ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಜಗದೀಶ್ ಅವರನ್ನ ಮಲ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕಾರ್ ಚಾಲಕ ರೋಹನ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಂಗಳೂರು: ಗಸ್ತಿನಲ್ಲಿ ತಿರುಗುತ್ತಿದ್ದ ಎಎಸ್‍ಐ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

    ಮಂಗಳೂರು: ಗಸ್ತಿನಲ್ಲಿ ತಿರುಗುತ್ತಿದ್ದ ಎಎಸ್‍ಐ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

    ಮಂಗಳೂರು: ಉರ್ವಾ ಪೊಲೀಸ್ ಠಾಣೆ ಎಎಸ್‍ಐ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಹಲ್ಲೆ ನಡೆಸಿದ್ದಾರೆ. ಲೇಡಿಹಿಲ್ ಸರ್ಕಲ್ ಬಳಿ ಬೈಕಿನಲ್ಲಿ ಬಂದ ಇಬ್ಬರು, ರಾತ್ರಿ ಗಸ್ತಿನಲ್ಲಿದ್ದ ಐತಪ್ಪ ಅವರನ್ನು ಅಡ್ಡಗಟ್ಟಿ ಅವರ ತಲೆಗೆ ರಾಡ್‍ನಿಂದ ಹೊಡೆದು ಪರಾರಿಯಾಗಿದ್ದಾರೆ.

    ತೀವ್ರ ರಕ್ತಸ್ತ್ರವವಾಗಿ ಬಿದ್ದಿದ್ದ ಎಎಸ್‍ಐ ಐತಪ್ಪ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದ್ದು ಚೇತರಿಸಿಕೊಂಡಿದ್ದಾರೆ.

    ಮಂಗಳವಾರದಂದು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಎದುರು ಅನುಮತಿ ಇಲ್ಲದೆ ಪ್ರತಿಭಟಿಸಿದ್ದ ಪಿಎಫ್‍ಐ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ರು. ಈ ವೇಳೆ 7 ಮಂದಿ ಪೊಲೀಸ್ ಸೇರಿದಂತೆ ಹಲವು ಪ್ರತಿಭಟನಾಕಾರರಿಗೂ ಗಾಯಗಳಾಗಿತ್ತು. ಆದ್ರೆ ಪ್ರತಿಭಟನಾಕಾರರು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ, ಅವರನ್ನ ಸುಮ್ಮನೆ ಬಿಡೋದಿಲ್ಲ ಎಂದು ಘೋಷಣೆ ಕೂಗಿದ್ದರು. ಹೀಗಾಗಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದಲೇ ಎಎಸ್‍ಐ ಐತಪ್ಪ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಇದನ್ನೂ ಓದಿ: ಅನುಮತಿ ಇಲ್ಲದೇ ಮಂಗಳೂರಿನಲ್ಲಿ ಪ್ರತಿಭಟನೆ: ಪಿಎಫ್‍ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

    ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.