Tag: Assam Election

  • ಅಸ್ಸಾಂನಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಏರಿದ ಬಿಜೆಪಿ

    ಅಸ್ಸಾಂನಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಏರಿದ ಬಿಜೆಪಿ

    ಭುವನೇಶ್ವರ: ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಗೆದ್ದಿದೆ. ಸಿಎಂ ಸರ್ಬಾನಂದ ಸೋನಾವಾಲ್ ಆಡಳಿತಕ್ಕೆ ಅಸ್ಸಾಂ ಜನತೆ ಜೈ ಎಂದಿದ್ದಾರೆ. ಕಾಂಗ್ರೆಸ್ ನೀಡಿದ ಬಿಗ್‍ಫೈಟ್ ಹೊರತಾಗಿಯೂ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ.

    ಬಿಜೆಪಿಯೇತರ ಪಕ್ಷಗಳಿಗೆ ಮತ ಹಾಕಿ ಎಂದು ಅಖಿಲ್ ಗೋಗಯ್ ಜೈಲಿನಿಂದ ನೀಡಿದ ಕರೆಗೆ ಜನ ಓಗೊಟ್ಟಿಲ್ಲ. ಸಿಎಎ, ಎನ್‍ಆರ್‍ಸಿಗೆ ಭಾರೀ ವಿರೋಧ ವ್ಯಕ್ತವಾದ ಹೊರತಾಗಿಯೂ ಕಮಲ ಅರಳಿದೆ. ಅಸ್ಸಾಂನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಾಲು ಸಾಲು ಬೃಹತ್ ಸಮಾವೇಶಗಳನ್ನು ನಡೆಸಿದ್ದರು. ಇತ್ತ ಬಿಜೆಪಿಯೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬೃಹತ್ ಕ್ಯಾಂಪೇನ್ ಗಳನ್ನ ನಡೆಸಿದ್ದರು.

    ಒಟ್ಟು 126 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 78, ಕಾಂಗ್ರೆಸ್ 46 ಮತ್ತು ಇತರರು ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ. 2016ರಲ್ಲಿ ಬಿಜೆಪಿ 60, ಕಾಂಗ್ರೆಸ್ 26, ಅಸ್ಸಾಂ ಗಣ್ ಪರಿಷದ್ 14 ಮತ್ತು ಬೊಡೊಲ್ಯೆಂಡ್ ಪೀಪಲ್ಸ್ ಫ್ರಂಟ್ 12ರಲ್ಲಿ ಗೆಲುವು ಕಂಡಿದ್ದವು.

    ಅಸ್ಸಾಂನಲ್ಲಿ ಬಿಜೆಪಿ ಗೆಲುವಿಗೆ ಕಾರಣವೇನು?
    ಸಿಎಂ ಸರ್ಬಾನಂದ ಸೋನೊವಾಲ್ ಜನಪ್ರಿಯತೆ ಮತ್ತು ಹಿಮಂತ್ ಬಿಸ್ವಾಸ್ ಶರ್ಮಾ ಸಂಘಟನಾ ಚತುರತೆ ಗೆಲುವಿಗೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಸಿಎಎ ವಿಚಾರದಲ್ಲಿ ಅಮಿತ್ ಶಾ ನೀಡಿದ ಭರವಸೆ ವರ್ಕೌಟ್ ಆಗಿದೆ. ಇತ್ತು ಬದ್ರುದ್ದಿನ್ ಅಜ್ಮಲ್ ಪಕ್ಷದ ಜೊತೆಗೆ ಮೈತ್ರಿ ಕಾಂಗ್ರೆಸ್‍ಗೆ ಮೈನಸ್ ಆಗಿದ್ದು, ಪ್ರಚಾರಕ್ಕೆ ತೆರಳಲು ರಾಹುಲ್ ಗಾಂಧಿ ನಿರಾಸಕ್ತಿ ತೋರಿದ್ದರು ಎನ್ನಲಾಗುತ್ತಿದೆ.

  • ಅಧಿಕಾರಕ್ಕೆ ಬಂದ್ರೆ ಗೃಹಿಣಿಯರಿಗೆ ಪ್ರತಿ ತಿಂಗಳು 2 ಸಾವಿರ: ಪ್ರಿಯಾಂಕಾ ಗಾಂಧಿ ಘೋಷಣೆ

    ಅಧಿಕಾರಕ್ಕೆ ಬಂದ್ರೆ ಗೃಹಿಣಿಯರಿಗೆ ಪ್ರತಿ ತಿಂಗಳು 2 ಸಾವಿರ: ಪ್ರಿಯಾಂಕಾ ಗಾಂಧಿ ಘೋಷಣೆ

    – ಗೃಹಿಣಿ ಸಮ್ಮಾನ್ ಯೋಜನೆ ಮೂಲಕ ಹಣ

    ದಿಸ್ಪುರ್: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಿಣಿ ಸಮ್ಮಾನ್ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಣೆ ಮಾಡಿದ್ದಾರೆ.

    ಅಸ್ಸಾಂನಲ್ಲಿ ಭರ್ಜರಿಯಾಗಿ ಚುನಾವಣೆ ಪ್ರಚಾರ ಆರಂಭಿಸಿರುವ ಪ್ರಿಯಾಂಕಾ ಗಾಂಧಿ, ಟೀ ಎಸ್ಟೇಟ್‍ಗಳಿಗೂ ಭೇಟಿ ನೀಡಿ ಅಲ್ಲಿನ ಕಾರ್ಮಿಕರೊಂದಿಗೆ ಸಮಯ ಕಳೆಯುತ್ತಿದ್ದಾರೆ. ಈ ವೇಳೆ ತೇಜಪುರ್‍ದಲ್ಲಿ ಮಾತನಾಡಿ, ಗೃಹಿಣಿ ಸಮ್ಮಾನ್ ಯೋಜನೆ ಮೂಲಕ ಗೃಹಣಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತೇವೆ. ಅಲ್ಲದೆ ಟೀ ಗಾರ್ಡನ್‍ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ದಿನ 365 ರೂ. ನೀಡುತ್ತೇವೆ. ಅಲ್ಲದೆ 5 ಲಕ್ಷ ಹೊಸ ಸರ್ಕಾರಿ ಕೆಲಸಗಳನ್ನು ಸೃಷ್ಟಿಸುತ್ತೇವೆ ಎಂದು ಹೇಳಿದ್ದಾರೆ.

    ಈ ಎಲ್ಲ ಹೇಳಿಕೆಗಳು ಕೇವಲ ಆಶ್ವಾಸನೆಗಳಲ್ಲ, ಭರವಸೆಗಳು. ಅಲ್ಲದೆ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಇಲ್ಲಿ ಸಿಎಎಯನ್ನು ಜಾರಿ ಮಾಡುವುದಿಲ್ಲ ಎಂದು ಹೇಳುವ ಮೂಲಕ ಜನರನ್ನು ಮನವೊಲಿಸಲು ಮುಂದಾಗಿದ್ದಾರೆ.

    ಅಸ್ಸಾಂನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಇಂದು ಬೆಳಗ್ಗೆ ಸಹ ಪ್ರಿಯಾಂಕಾ ಗಾಂಧಿ ವಾದ್ರಾ ಟೀ ಎಲೆಗಳನ್ನು ಕಿತ್ತಿದ್ದಾರೆ. ಈ ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಸಖತ್ ವೈರಲ್ ಆಗುತ್ತಿದೆ.

    ಅಸ್ಸಾಂನಲ್ಲಿ ಚುನಾವಣಾ ಪ್ರಚಾರದಲ್ಲಿರುವ ಪ್ರಿಯಾಂಕಾ ವಾದ್ರಾ ಪ್ರಚಾರದ ಅಂಗವಾಗಿ ಆದಿವಾಸಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಅಲ್ಲದೇ ಟೀ ಎಲೆಗಳನ್ನು ಕೊಯ್ದಿದಿದ್ದಾರೆ. ಚಹಾ ತೋಟ ಕಾರ್ಮಿಕರ ಜೀವನವು ಸತ್ಯ ಮತ್ತು ಸರಳತೆಯಿಂದ ಕೂಡಿದೆ ಮತ್ತು ಅವರ ಶ್ರಮ ದೇಶಕ್ಕೆ ಅಮೂಲ್ಯವಾಗಿದೆ. ಇಂದು ಅವರೊಂದಿಗೆ ಕುಳಿತುಕೊಳ್ಳುವುದು ಅವರ ಕೆಲಸ, ಕುಟುಂಬದ ಯೋಗಕ್ಷೇಮ ಮತ್ತು ಅವರ ಜೀವನದ ಕಷ್ಟಗಳನ್ನು ಅನುಭವ ತಿಳಿದುಕೊಂಡೆ. ಅವರಿಂದ ನನಗೆ ದೊರೆತ ಪ್ರೀತಿ ಮತ್ತು ಈ ಅನ್ಯೋನ್ಯತೆಯನ್ನು ನಾನು ಮರೆಯುವುದಿಲ್ಲ ಎಂದು ಬರೆದುಕೊಂಡು ಸುಂದರ ಕ್ಷಣಗಳ ಕೆಲವು ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದರು.

    ತೋಟದಲ್ಲಿ ಮಹಿಳಾ ಕಾರ್ಮಿಕರಿಂದ ಚಹಾ ಎಲೆಗಳನ್ನು ಬಿಡಿಸಿದ್ದಾರೆ ಎಂದು ಬರೆದುಕೊಂಡು ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪ್ರೀಯಾಂಕಾ ಅವರು ಎಲೆ ಕೀಳುತ್ತಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

    ಅಸ್ಸಾಂನಲ್ಲಿ ಮಾರ್ಚ್ 27 ರಿಂದ ಚುನಾವಣೆ ಆರಂಭವಾಗಲಿದ್ದು, ಪ್ರಿಯಾಂಕ ಗಾಂಧಿ 2 ದಿನಗಳ ಕಾಲ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಅಸ್ಸಾಂನ ವಿಧಾನಸಭಾ ಚುನಾವಣೆ ಮೂರು ಹಂತದಲ್ಲಿ ನಡೆಯಲಿದೆ.