Tag: Assam Police

  • ಗಾಯಕ ಜುಬೀನ್ ಗರ್ಗ್ ಸಾವು ಕೇಸ್; ಸಹೋದರ ಸಂಬಂಧಿ ಡಿಎಸ್‌ಪಿ ಬಂಧನ

    ಗಾಯಕ ಜುಬೀನ್ ಗರ್ಗ್ ಸಾವು ಕೇಸ್; ಸಹೋದರ ಸಂಬಂಧಿ ಡಿಎಸ್‌ಪಿ ಬಂಧನ

    ಗುವಾಹಟಿ: ಕಳೆದ ತಿಂಗಳು ಸಿಂಗಾಪುರದಲ್ಲಿ ನಡೆದ ಖ್ಯಾತ ಗಾಯಕ ಜುಬೀನ್ ಗರ್ಗ್ (Zubeen Garg) ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗರ್ಗ್ ಸೋದರಸಂಬಂಧಿ, ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡಿಎಸ್‌ಪಿ ಹುದ್ದೆಯಲ್ಲಿರುವ ಸಂದೀಪನ್ ಗರ್ಗ್‌ನನ್ನು (Sandipan Garg) ಬಂಧಿಸಲಾಗಿದೆ. ಜುಬೀನ್ ಗರ್ಗ್ ನಿಧನದ ವೇಳೆ ಸಂದೀಪನ್ ಗರ್ಗ್ ಅವರ ಜೊತೆಗಿದ್ದರು ಎನ್ನಲಾಗಿದೆ.

    ಸಂದೀಪನ್ ಗರ್ಗ್ ಅವರನ್ನು ಕಳೆದ ಕೆಲವು ದಿನಗಳಲ್ಲಿ ಹಲವಾರು ಬಾರಿ ವಿಚಾರಣೆ ನಡೆಸಲಾಯಿತು. ಇದೀಗ ಸಂದೀಪನ್ ಗಾರ್ಗ್ರನ್ನು ಬಂಧಿಸಿದ್ದೇವೆ. ಪ್ರಕರಣದ ಸಂಬಂಧ ನಾವು ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ:  ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

    ಈ ಪ್ರಕರಣದಲ್ಲಿ ಇದೀಗ ಐದನೇ ಆರೋಪಿಯ ಬಂಧನವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ಭಾರತ ಉತ್ಸವದ ಮುಖ್ಯ ಸಂಘಟಕ ಶ್ಯಾಮಕಾನು ಮಹಾಂತ, ಗಾಯಕನ ವ್ಯವಸ್ಥಾಪಕ ಸಿದ್ಧಾರ್ಥ್ ಶರ್ಮಾ ಮತ್ತು ಅವರ ಇಬ್ಬರು ಬ್ಯಾಂಡ್‌ಮೇಟ್‌ಗಳಾದ ಶೇಖರ್ ಜ್ಯೋತಿ ಗೋಸ್ವಾಮಿ ಮತ್ತು ಅಮೃತ್ ಪ್ರಭಾ ಮಹಾಂತರನ್ನ ಈಗಾಗಲೇ ಬಂಧಿಸಲಾಗಿದೆ. ಆರೋಪಿಗಳೆಲ್ಲ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

    ತನಿಖೆ ವೇಳೆ ಶೇಖರ್ ಜ್ಯೋತಿ ಗೋಸ್ವಾಮಿ, ಸಿಂಗಾಪುರದಲ್ಲಿ ಮ್ಯಾನೇಜರ್ ಸಿದ್ಧಾರ್ಥ್ ಶರ್ಮಾ ಮತ್ತು ಶ್ಯಾಮಕಾನು ಮಹಾಂತ ಸೇರಿ ಜುಬೀನ್‌ಗೆ ವಿಷಪ್ರಾಶನ ಮಾಡಿದ್ದಾರೆ ಎಂದು ಹೇಳಿದ್ದರು.

  • ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ

    ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ

    • ಸ್ಕೂಬಾ ಡೈವಿಂಗ್ ವೇಳೆ ಸಾವನ್ನಪ್ಪಿದ್ದ ಪ್ರಸಿದ್ಧ ಗಾಯಕ

    ದಿಸ್ಪುರ: ಸ್ಕೂಬಾ ಡೈವಿಂಗ್ ವೇಳೆ ಸಾವನ್ನಪ್ಪಿದ್ದ ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ ಅವರ (Zubeen Garg) ಮರಣೋತ್ತರ ಪರೀಕ್ಷೆ ಸಿಂಗಾಪುರದಲ್ಲಿ ನಡೆಯುತ್ತಿದ್ದು, ಇದೀಗ ಅಸ್ಸಾಂ ಸರ್ಕಾರ (Assam Govt) ಸಾವಿನ ತನಿಖೆ ನಡೆಸಲು ಮುಂದಾಗಿದೆ.

    ಈ ಕುರಿತು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಜುಬೀನ್ ಗಾರ್ಗ್ ಸಾವನ್ನಪ್ಪುವ ಮುನ್ನ ಕಾರ್ಯಕ್ರಮ ಆಯೋಜಕರಾದ ಶ್ಯಾಮ್ ಕನು ಮಹಾಂತ ಹಾಗೂ ಸಿದ್ಧಾರ್ಥ ಶರ್ಮಾ ಅವರ ಜೊತೆಗಿದ್ದರು. ಹೀಗಾಗಿ ಈ ಕುರಿತು ಅಸ್ಸಾಂ ಸರ್ಕಾರ ತನಿಖೆ ನಡೆಸಲಿದ್ದು, ಕಾರ್ಯಕ್ರಮ ಆಯೋಜಕರ ವಿರುದ್ಧ ಮೋರಿಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಸ್ಕೂಬಾ ಡೈವಿಂಗ್‌ ವೇಳೆ ಬಾಲಿವುಡ್‌ನ ಖ್ಯಾತ ಗಾಯಕ ಜುಬೀನ್ ಗಾರ್ಗ್ ಸಾವು

    ಆಯೋಜಕರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಸಿಐಡಿಗೆ ವರ್ಗಾಯಿಸಿ, ವಿಚಾರಣೆ ನಡೆಸಿ ಎಂದು ಅಸ್ಸಾಂ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ. ಸಿಂಗಾಪುರ ಕಮಿಷನರ್ ಅವರೊಂದಿಗೆ ಮಾತನಾಡಿ ವಿವರವಾಗಿ ತನಿಖೆ ಮಾಡುವಂತೆ ಮನವಿ ಮಾಡಿಕೊಂಡಿದ್ದೇನೆ ಎಂದಿದ್ದಾರೆ.

    ಈಶಾನ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಜುಬೀನ್ ಗಾರ್ಗ್ ಅವರು ಸಿಂಗಾಪುರಕ್ಕೆ ತೆರಳಿದ್ದರು. ಈ ವೇಳೆ ಸಮುದ್ರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅವಘಡಕ್ಕೆ ಸಿಲುಕಿ ಗಂಭೀರ ಸ್ಥಿತಿಯಲ್ಲಿದ್ದ ಗರ್ಗ್ ಅವರನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

    ಜುಬೀನ್ ಗರ್ಗ್ ಅಸ್ಸಾಮಿ ಮತ್ತು ಹಿಂದಿ ಮಾತ್ರವಲ್ಲದೆ, ಬಂಗಾಳಿ, ಮರಾಠಿ, ತಮಿಳು, ತೆಲುಗು ಮತ್ತು ನೇಪಾಳಿ ಸೇರಿದಂತೆ ಹಲವು ಭಾಷೆಗಳಿಗೆ ಹಾಡಿದ್ದಾರೆ. ತಮ್ಮ ಮೂರನೇ ವಯಸ್ಸಿನಲ್ಲೇ ಹಾಡಲು ಪ್ರಾರಂಭಿಸಿದರು. ಅವರ ಮೊದಲ ಆಲ್ಬಂ ‘ಅನಾಮಿಕಾ’ 1992 ರಲ್ಲಿ ಬಿಡುಗಡೆಯಾಯಿತು. ‘ಮಾಯಾ’, ‘ಜುಬೀನೋರ್ ಗಾನ್’, ‘ಕ್ಸಾಬ್ಡಾ’, ‘ಪಾಖಿ’, ‘ಶಿಶು’, ‘ಜಂತ್ರ’ ಅವರ ಅತ್ಯಂತ ಪ್ರೀತಿಯ ಅಸ್ಸಾಮೀಸ್ ಆಲ್ಬಂಗಳಲ್ಲಿ ಕೆಲವು. ಅವರು ‘ದಿಲ್ ಸೆ’, ‘ವಾಸ್ತವ್’, ‘ಫಿಜಾ’, ‘ಅಶೋಕ’, ‘ಕಾಂಟೆ’, ‘ಗ್ಯಾಂಗ್‌ಸ್ಟರ್’, ‘ಕ್ರಿಶ್ 3’ ಮತ್ತು ಇನ್ನೂ ಹೆಚ್ಚಿನ ಹಿಂದಿ ಚಿತ್ರಗಳಿಗೂ ಹಾಡಿದ್ದಾರೆ. ಆದಾಗ್ಯೂ, ಗ್ಯಾಂಗ್‌ಸ್ಟರ್‌ಗಾಗಿ ಅವರು ಹಾಡಿದ್ದ ‘ಯಾ ಅಲಿ’ ಹಾಡು ಅವರಿಗೆ ಅಸ್ಸಾಂನ ಹೊರಗೂ ಜನಪ್ರಿಯತೆ ತಂದುಕೊಟ್ಟಿತು.ಇದನ್ನೂ ಓದಿ: ಮಾರಿಗಲ್ಲು ವೆಬ್ ಸರಣಿ : ಅಪ್ಪು ಕನಸು ನನಸು

  • Assam | 45 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ನಾಲ್ವರು ಅರೆಸ್ಟ್

    Assam | 45 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ನಾಲ್ವರು ಅರೆಸ್ಟ್

    ಗುವಾಹಟಿ: ಅಸ್ಸಾಂ ಪೊಲೀಸರು (Assam Police) ನಡೆಸಿದ ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆಯಲ್ಲಿ 45 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಖಚಿತ ಮಾಹಿತಿಯ ಮೇರೆಗೆ ಕಚಾರ್ (Cachar) ಜಿಲ್ಲೆಯ ಎರಡು ಕಡೆ ದಾಳಿ ನಡೆಸಿ 45 ಕೋಟಿ ಮೌಲ್ಯದ 1.5 ಲಕ್ಷ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ದೆಹಲಿಯ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – ಪಾರಾಗಲು ಮಹಡಿಯಿಂದ ಹಾರಿದ ಜನ

    ಮಾದಕವಸ್ತು ವ್ಯಾಪಾರವು ಯುವಜನರು ಮತ್ತು ಸಮುದಾಯದ ಸುರಕ್ಷತೆಗೆ ಗಂಭೀರ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ನಮ್ಮ ಯುವಕರನ್ನು ರಕ್ಷಿಸುವಲ್ಲಿ ಅಸ್ಸಾಂ ಪೊಲೀಸರು ದೃಢವಾಗಿ ನಿಂತಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಇದನ್ನೂ ಓದಿ: ನಾಳೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

  • Pahalgam Terror Attack | ಪಾಕಿಸ್ತಾನ ಸಮರ್ಥಿಸಿಕೊಂಡಿದ್ದ ಅಸ್ಸಾಂ ಶಾಸಕ ಅರೆಸ್ಟ್‌

    Pahalgam Terror Attack | ಪಾಕಿಸ್ತಾನ ಸಮರ್ಥಿಸಿಕೊಂಡಿದ್ದ ಅಸ್ಸಾಂ ಶಾಸಕ ಅರೆಸ್ಟ್‌

    ಗುವಾಹಟಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧ (Pahalgam Terror Attack) ಕೃತ್ಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು (Pakistan) ಸಮರ್ಥಿಸಿಕೊಂಡಿದ್ದ ಎಐಯುಡಿಎಫ್‌ ಶಾಸಕ ಅಮಿನುಲ್‌ ಇಸ್ಲಾಂ ಅವರನ್ನ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

    ನಾಗಾಂವ್ ಜಿಲ್ಲೆಯ ನಿವಾಸದಲ್ಲಿ ಶಾಸಕರನ್ನ ಬಂಧಿಸಲಾಗಿದೆ. ಪಕ್ಷದ ಶಾಸಕರ ಹೇಳಿಕೆ ಕುರಿತು ರಾಜ್ಯದ ವಿರೋಧಪಕ್ಷವಾಗಿರುವ ಎಐಯುಡಿಎಫ್ (AIUDF) ಅಂತರ ಕಾಯ್ದುಕೊಂಡಿದೆ. ಇದು ಅವರ ವೈಯಕ್ತಿಕ ಹೇಳಿಕೆ, ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: Pahalgam Attack | ಕೇಂದ್ರ ಯಾವ್ದೇ ಕ್ರಮ ತೆಗೆದುಕೊಂಡ್ರೂ‌ ಪೂರ್ಣ ಬೆಂಬಲ ಇದೆ: ರಾಹುಲ್‌ ಗಾಂಧಿ

    ಪಾಕಿಸ್ತಾನ ಸಮರ್ಥಿಸಿಕೊಂಡಿರುವ ಶಾಸಕರ ವಿಡಿಯೋ ನೋಡಿದ್ದೇವೆ. ಕ್ರಮಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಶಾಸಕರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ಮಾಹಿತಿ ನೀಡಿದ್ದಾರೆ. ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಿದ್ದು, ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದ ಉಗ್ರರ ದಾಳಿ ಹೊಣೆಯನ್ನ ಕೇಂದ್ರ ಸರ್ಕಾರವೇ ಹೊರಬೇಕು: ಹೆಚ್.ಸಿ ಬಾಲಕೃಷ್ಣ

  • ಡೀಸೆಲ್‌ ಟ್ಯಾಂಕ್‌ನಲ್ಲಿಟ್ಟು ಸಾಗಿಸ್ತಿದ್ದ 30 ಕೋಟಿ ಮೌಲ್ಯದ 1,00,000 ಡ್ರಗ್ಸ್‌ ಮಾತ್ರೆ ಜಪ್ತಿ – ಇಬ್ಬರು ಖತರ್ನಾಕ್‌ ಅರೆಸ್ಟ್‌!

    ಡೀಸೆಲ್‌ ಟ್ಯಾಂಕ್‌ನಲ್ಲಿಟ್ಟು ಸಾಗಿಸ್ತಿದ್ದ 30 ಕೋಟಿ ಮೌಲ್ಯದ 1,00,000 ಡ್ರಗ್ಸ್‌ ಮಾತ್ರೆ ಜಪ್ತಿ – ಇಬ್ಬರು ಖತರ್ನಾಕ್‌ ಅರೆಸ್ಟ್‌!

    – ಖತರ್ನಾಕ್‌ ದಂಧೆಕೋರರು ಸಿಕ್ಕಿಬಿದ್ದಿದ್ದೇ ರೋಚಕ

    ಗುವಾಹಟಿ: ಡೀಸೆಲ್‌ ಟ್ಯಾಂಕ್‌ನಲ್ಲಿಟ್ಟು ಡ್ರಗ್ಸ್‌ಗೆ ಸಂಬಂಧಿಸಿದ ಮಾತ್ರೆ (Yaba Tablets) ಸಾಗಿಸುತ್ತಿದ್ದ ಕರಾಳ ದಂಧೆಕೋರರನ್ನು ಅಸ್ಸಾಂನ ಕರೀಗಂಜ್‌ ಪೊಲೀಸರು (Karimganj Police) ಬಂಧಿಸಿರುವ ಘಟನೆ ನಡೆದಿದೆ.

    ಇಬ್ಬರು ದಂಧೆಕೋರರನ್ನು (Drug Peddlers) ಬಂಧಿಸಿದ್ದು, 30 ಕೋಟಿ ರೂ. ಮೌಲ್ಯದ 1 ಲಕ್ಷ ಮಾತ್ರೆಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ನಜ್ಮುಲ್ ಹುಸೇನ್ ಮತ್ತು ಮುತ್ಲಿಬ್ ಅಲಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ವಿಜಯೇಂದ್ರ

    ಕರೀಂಗಂಜ್ (Karimganj) ಎಸ್ಪಿ ಪಾರ್ಥ ಪ್ರೋತಿಮ್ ದಾಸ್ ಪ್ರಕಾರ, ಕರೀಂಗಂಜ್ ಜಿಲ್ಲೆಯ ರತಾಬರಿ ಪೊಲೀಸ್ ಠಾಣೆ ವ್ಯಾಪ್ತಿಯ ಗಂಧರಾಜ್ ಬರಿ ಪ್ರದೇಶದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆ ಸಂದರ್ಭದಲ್ಲಿ ದಂಧೆಕೋರರು ಸಿಕ್ಕಿಬಿದ್ದಿದ್ದು, ಅವರಿಂದ ಡ್ರಗ್ಸ್‌ ರೂಪದ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ – ಬಿಪಿಎಲ್‌ ಕಾರ್ಡ್‌ದಾರರಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಿಸಲು ಸೂಚನೆ!

    drug

    ಖತರ್ನಾಕ್‌ಗಳು ಸಿಕ್ಕಿಬಿದ್ದಿದ್ದೇ ರೋಚಕ:
    ಮಿಜೋರಂ ಕಡೆಯಿಂದ ಯಾಬಾ ಮಾತ್ರೆಗಳನ್ನು ಸಾಗಿಸುತ್ತಿರುವುದಾಗಿ ಮಾಹಿತಿ ಬಂದಿತ್ತು. ತಕ್ಷಣ ರಟಾಬರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಾಕಾಬಂಧಿ ರಚಿಸಿ ತಪಾಸಣೆ ಶುರು ಮಾಡಿದ್ದೆವು. ಮೊದಲು ಇಡೀ ವಾಹನ ಜಾಲಾಡಿದರೂ ಏನೂ ಸಿಕ್ಕಿರಲಿಲ್ಲ. ಕೊನೆಗೆ ಡೀಸೆಲ್‌ ಟ್ಯಾಂಕ್‌ (Diesel Tank) ಪರಿಶೀಲಿಸಿದಾಗ ಯಾಬಾ ಮಾತ್ರೆಗಳುಳ್ಳ 10 ಪ್ಯಾಕೆಟ್‌ ಪತ್ತೆಯಾಯಿತು. ಬಳಿಕ ಮಾತ್ರೆಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಯಿತು. ಮಾದಕ ವಸ್ತುಗಳ ಮಾರುಕಟ್ಟೆಯಲ್ಲಿ ಈ ಮಾತ್ರೆಗಳ ಮೌಲ್ಯ ಸುಮಾರು 30 ಕೋಟಿ ರೂ. ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಪ್ರಕರಣಕ್ಕೂ ಮುನ್ನ ಕಳೆದ ಜೂ.7ರಂದು ಅಸ್ಸಾಂ ಪೊಲೀಸರು 8.5 ಕೋಟಿ ರೂ. ಮೌಲ್ಯದ 1.7 ಕಿಲೋಗ್ರಾಮ್‌ ಹೆರಾಯಿನ್‌ ವಶಪಡಿಸಿಕೊಂಡಿದ್ದರು. ಇದನ್ನೂ ಓದಿ: ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮಾಸ್ಟರ್‌ಮೈಂಡ್‌ ಬಂಧನ 

  • ಪತಿಯನ್ನ ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ

    ಪತಿಯನ್ನ ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ

    ದಿಸ್ಪುರ್: ಅಸ್ಸಾಂ ಸರ್ಕಾರ (Assam Government) ಬಾಲ್ಯವಿವಾಹ (Child Marriage) ವಿರುದ್ಧ ಕಠಿಣ ಕಾರ್ಯಾಚರಣೆ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ತನ್ನ ಪತಿಯನ್ನು ಬಂಧಿಸುತ್ತಾರೆ ಅಂತಾ ಹೆದರಿ 3 ತಿಂಗಳ ಹಿಂದೆಯಷ್ಟೇ ಮದುವೆಯಾದ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಮಹಿಳೆಯನ್ನ ದಕ್ಷಿಣ ಸಾಲ್ಮರ ಪೊಲೀಸ್ ಠಾಣಾ (Salmar Police Station) ವ್ಯಾಪ್ತಿಯ ಕಮರ್ ಪದ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಸ್ಸಾಂ ಸರ್ಕಾರ ಕಠಿಣ ಕಾರ್ಯಾಚರಣೆ ಕೈಗೊಂಡ ಬಳಿಕ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ 2ನೇ ಪ್ರಕರಣ ಇದಾಗಿದೆ. ಇದನ್ನೂ ಓದಿ: ಮದುವೆ ಸೀರೆಯ ಮೇಲೆ ಲ್ಯಾಬ್ ಕೋಟ್, ಸ್ಟೆತಸ್ಕೋಪ್ ಧರಿಸಿ ಪರೀಕ್ಷೆಗೆ ಬಂದ ವಧು

    Child Marriage Bride

    ಈ ತಿಂಗಳ ಆರಂಭದಲ್ಲಿ, ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ 17 ವರ್ಷದ ಹುಡುಗಿ ಪೋಷಕರು ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಸಲಿಲ್ಲ ಅಂತಾ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮತ್ತೊಂದು ಪ್ರಕರಣದಲ್ಲಿ, ಧುಬ್ರಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣದಲ್ಲಿ ಬಂಧಿಸಿರುವ ತನ್ನ ಪತಿ ಮತ್ತು ತಂದೆಯನ್ನ ಬಿಡುಗಡೆ ಮಾಡದಿದ್ದರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಂಪಾಟ ಮಾಡಿದ್ದಳು. ಹೊರತಾಗಿಯೂ ಪೊಲೀಸರು ತನ್ನ ಪತಿ ಮತ್ತು ತಂದೆಯನ್ನು ನ್ಯಾಯಾಲಯಕ್ಕೆ ಕರೆದೊಯ್ದಿದ್ದನ್ನ ಕಂಡು ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದಳು.

    ರಾಜ್ಯದಲ್ಲಿ ಶಿಶು ಮರಣ ಪ್ರಮಾಣ ತಗ್ಗಿಸುವ ಸಲುವಾಗಿ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಬಾಲ್ಯ ವಿವಾಹದ ವಿರುದ್ಧ ಸಮರ ಸಾರಿದೆ. ಈಗಾಗಲೇ 2 ಸಾವಿರಕ್ಕೂ ಅಧಿಕ ಆರೋಪಿಗಳನ್ನ ಬಂಧಿಸಿ, ಜೈಲಿಗಟ್ಟಿದ್ದಾರೆ. ಇನ್ನಷ್ಟು ಆರೋಪಿಗಳನ್ನ ಬಂಧಿಸುವ ಕಾರ್ಯಾಚರಣೆ ಮುಂದುವರಿದಿದೆ. ಸರ್ಕಾರದ ಈ ನಡೆ ವಿರುದ್ಧ ಅಸ್ಸಾಂ ರಾಜ್ಯಾದ್ಯಂತ ವಿವಿಧೆಡೆ ಮಹಿಳೆಯರು ಪ್ರತಿಭಟಿಸಿ ಬೀದಿಗಿಳಿದಿದ್ದಾರೆ. ಇದನ್ನೂ ಓದಿ: ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ 4 ದಂಪತಿ – ಜಡ್ಜ್ ಎದುರೇ ವಿರಸ ಮರೆತು ಮತ್ತೆ ಒಂದಾದ ಜೋಡಿಗಳು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Child Marriage Crackdown: ಕಾನೂನಿಗೆ ಹೆದರಿ ಮದ್ವೆ ನಿಲ್ಲಿಸಿದ ಪೋಷಕರು, ಆತ್ಮಹತ್ಯೆ ಮಾಡಿಕೊಂಡ ಮಗಳು

    Child Marriage Crackdown: ಕಾನೂನಿಗೆ ಹೆದರಿ ಮದ್ವೆ ನಿಲ್ಲಿಸಿದ ಪೋಷಕರು, ಆತ್ಮಹತ್ಯೆ ಮಾಡಿಕೊಂಡ ಮಗಳು

    ದಿಸ್ಪುರ್: ಅಸ್ಸಾಂ ಸರ್ಕಾರ (Assam Government) ಬಾಲ್ಯ ವಿವಾಹದ (Child Marriage) ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಬೆನ್ನಲ್ಲೇ ಪೋಷಕರು ಎಚ್ಚೆತ್ತುಕೊಂಡಿದ್ದಾರೆ. ತಮ್ಮ ಮಕ್ಕಳ ಮೇಲೆ ನಿಗಾ ವಹಿಸಿದ್ದು, ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಿಕೊಳ್ಳುತ್ತಿದ್ದಾರೆ.

    ಸರ್ಕಾರದ ಕಠಿಣ ನೀತಿಗೆ ಹೆದರಿ ಕುಟುಂಬವೊಂದು ತಮ್ಮ ಮಗಳ ಮದುವೆ ಮಾಡಲು ನಿರಾಕರಿಸಿದೆ. ಇದರಿಂದ 17 ವರ್ಷದ ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ನಡೆದಿದೆ.

    ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ 17 ವರ್ಷದ ಹುಡುಗಿ ತನ್ನ ಪೋಷಕರು ಭರವಸೆ ಮುರಿದು ತಾನು ಪ್ರೀತಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

    ಕ್ಯಾಚಾರ್‌ನ ಧಲೈ ಪೊಲೀಸ್ (Assam Police) ಠಾಣಾ ವ್ಯಾಪ್ತಿಯ ಖಾಸ್ಪುರ ಗ್ರಾಮದಲ್ಲಿ ವಾಸಿಸುತ್ತಿದ್ದ ಹುಡುಗಿ ಯುವಕನೊಬ್ಬನನ್ನ ಪ್ರೀತಿಸುತ್ತಿದ್ದಳು. ಪೋಷಕರು ಸಹ ಮದುವೆಗೆ ಒಪ್ಪಿದ್ದರು. ಆದರೆ ಅಸ್ಸಾಂ ಸರ್ಕಾರ ಬಾಲ್ಯ ವಿವಾಹಕ್ಕೆ ಕಾನೂನು ನಿರ್ಬಂಧ ಹೇರಿದ ಬಳಿಕ ಹುಡುಗಿ ಪೋಷಕರು ಮದುವೆ ಮಾಡಲು ನಿರಾಕರಿಸಿದರು. ಇದರಿಂದ ಮನನೊಂದ ಹುಡುಗಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.

    ಧುಬ್ರಿ ಜಿಲ್ಲೆಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಬಂಧಿಸಿರುವ ತನ್ನ ಪುರುಷ ಹಾಗೂ ತಂದೆಯನ್ನು ಬಿಡುಗಡೆ ಮಾಡುವಂತೆ 23 ವರ್ಷದ ಮಹಿಳೆ ರಂಪಾಟ ಮಾಡಿದ್ದಾಳೆ. ಪೊಲೀಸ್ ಠಾಣೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಇಬ್ಬರನ್ನೂ ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ.

    ಅಫ್ರೋಜಾ ಖಾತುನ್ ಎಂಬಾಕೆ ತಾನು 1999ರಲ್ಲಿ ಜನಿಸಿದ್ದೇನೆ 2018ರಲ್ಲಿ ಮದುವೆಯಾಗಿದ್ದೇನೆ. ಸರಿಯಾಗಿ 19ನೇ ವಯಸ್ಸಿನಲ್ಲಿ ಮದುವೆಯಾಗಿದ್ದೇನೆ. ನಾನು ವಯಸ್ಕಳಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

    ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ನನ್ನ ಪತಿಯನ್ನು ಏಕೆ ಬಂಧಿಸಲು ಹೇಳಿದ್ದಾರೆ? ನನ್ನ ಪತಿ ಮತ್ತು ತಂದೆಯನ್ನ ಜೈಲಿಂದ ಬಿಡುಗಡೆ ಮಾಡದೇ ಇದ್ದರೇ ನಾನು ನ್ಯಾಯಾಲಯ ಆವರಣದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾಳೆ.

    ಇದರ ಹೊರತಾಗಿಯೂ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದನ್ನು ಕಣ್ಣಾರೆ ಕಂಡ ಮಹಿಳೆ ಸ್ಥಳದಲ್ಲೇ ಕುಸಿದುಬಿದ್ದಿದ್ದಾಳೆ. ಇದನ್ನೂ ಓದಿ: ಬಿನ್‌ ಲಾಡೆನ್‌ನ ಹೊಗಳಿದ್ದ ವ್ಯಕ್ತಿ, ರಾಹುಲ್‌ ಗಾಂಧಿ ಪಿಎಂ ಆಗಬೇಕೆಂದು ಬಯಸಿದ್ದರು – ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

    ಅಸ್ಸಾಂನಲ್ಲಿ ಬಾಲ್ಯ ವಿವಾಹ ತಡೆ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಬಂಧಿತರ ಸಂಖ್ಯೆ 2,441ಕ್ಕೆ ಏರಿಕೆಯಾಗಿದೆ. ಅಲ್ಲದೇ ಈ ಕಾರ್ಯಾಚರಣೆ 2026ರ ವಿಧಾನಸಭಾ ಚುನಾವಣೆವರೆಗೂ ಮುಂದುವರಿಯಲಿದೆ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

    ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

    ದಿಸ್ಪುರ್: ಅಸ್ಸಾಂ ರಾಜ್ಯ ಸರ್ಕಾರ (Assam Government) ಬಾಲ್ಯ ವಿವಾಹ (Child Marriage) ತಡೆಗೆ ಕೈಗೊಂಡಿರುವ ಕಠಿಣ ಕ್ರಮದಿಂದ ನಲುಗಿಹೋಗಿರುವ ಹೆಣ್ಣುಮಕ್ಕಳನ್ನ ಯಾರು ನೋಡಿಕೊಳ್ಳುತ್ತಾರೆ? ಜೈಲಿಗೆ ಹೋದವರ ಹೆಂಡತಿಯರು ಹಾಗೂ ಮಕ್ಕಳನ್ನ ಸಿಎಂ ನೋಡಿಕೊಳ್ತಾರಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi), ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ಅವರನ್ನ ಪ್ರಶ್ನಿಸಿದ್ದಾರೆ.

    ಅವರಿಂದು ಸುದ್ದಿಗಾರರೊಂದಿಗೆ ಮಾತಮಾಡಿ, ಅಸ್ಸಾಂ ರಾಜ್ಯ ಸರ್ಕಾರ ಬಾಲ್ಯ ವಿವಾಹ ತಡೆಗೆ ಕೈಗೊಂಡಿರುವ ಕಠಿಣ ಕ್ರಮದಿಂದ ನಲುಗಿಹೋಗಿರುವ ಹೆಣ್ಣುಮಕ್ಕಳನ್ನ ಯಾರು ನೋಡಿಕೊಳ್ಳುತ್ತಾರೆ. ಕಳೆದ 6 ವರ್ಷಗಳಿಂದಲೂ ಮೌನ ವಹಿಸಿದ್ದದ್ದು ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಸಮರ – ಪತಿ, ಪುತ್ರರ ಬಂಧನ ವಿರೋಧಿಸಿ ಬೀದಿಗಿಳಿದ ಮಹಿಳೆಯರು

    ಬಾಲ್ಯ ವಿವಾಹ (Child Marriage) ತಡೆಗೆ ಅಸ್ಸಾಂ ಸರ್ಕಾರ ಕೈಗೊಂಡಿರುವ ಕಠಿಣ ಕಾರ್ಯಾಚರಣೆ ವಿರುದ್ಧ ಅವರು ಕಿಡಿಕಾರಿದ್ದಾರೆ. ಕಳೆದ 6 ವರ್ಷಗಳಿಂದ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವಿದೆ. ಅಷ್ಟು ವರ್ಷಗಳಿಂದ ನೀವು ಏನು ಮಾಡುತ್ತಿದ್ರಿ? ಅದು ನಿಮ್ಮ ಸರ್ಕಾರದ ವೈಫಲ್ಯ. ನೀವು ಪುರುಷರನ್ನ ಜೈಲಿಗೆ ಕಳುಹಿಸುತ್ತಿದ್ದೀರಿ. ಈಗ ಅವರ ಪತ್ನಿಯರು, ಹೆಣ್ಣುಮಕ್ಕಳನ್ನ ಸಿಎಂ ನೋಡಿಕೊಳ್ತಾರಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

    ಬಾಲ್ಯ ವಿವಾಹ ತಡೆಗೆ ಕಠಿಣ ಕಾರ್ಯಾಚರಣೆ ಕೈಗೊಂಡಿರುವ ಅಸ್ಸಾಂ ಪೊಲೀಸರು ಈಗಾಗಲೇ 2,250 ಮಂದಿಯನ್ನ ಬಂಧಿಸಿದ್ದಾರೆ. ಸಚಿವ ಸಂಪುಟದಲ್ಲಿ ಅಸ್ಸಾಂ ಸರ್ಕಾರ ಕ್ರಮ ಕೈಗೊಳ್ಳಲು ನಿರ್ಧರಿಸಿದ ನಂತರ ರಾಜ್ಯಾದ್ಯಂತ ಬಾಲ್ಯ ವಿವಾಹದ ವಿರುದ್ಧ 4,074 ಕೇಸ್‌ಗಳು ದಾಖಲಾಗಿವೆ. 8 ಸಾವಿರ ಆರೋಪಿ ಪಟ್ಟಿಗಳನ್ನು ಹೊಂದಿರುವ ಪೊಲೀಸರು ಒಬ್ಬೊಬ್ಬರನ್ನೂ ಬಂಧಿಸುತ್ತಿದ್ದಾರೆ. ಈಗಾಗಲೇ 2,250 ಮಂದಿಯನ್ನ ಜೈಲಿಗಟ್ಟಿದ್ದಾರೆ.

    14 ವರ್ಷದೊಳಗಿನ ಹುಡುಗಿಯರನ್ನ ಮದುವೆಯಾದವರ ವಿರುದ್ಧ ಪೋಕ್ಸೋ (POCSO) ಕೇಸ್ ಹಾಗೂ 14 ರಿಂದ 18 ವರ್ಷದೊಳಗಿನ ಹುಡುಗಿಯರನ್ನು ಮದುವೆಯಾಗಿದ್ರೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಪ್ರಕರಣ ದಾಖಲಿಸಲು ಸಚಿವ ಸಂಪುಟ ನಿರ್ಧರಿಸಿತ್ತು. ಇದೀಗ ಅಸ್ಸಾಂ ಸಿಎಂ ಈ ಕ್ರಮ 2026ರ ವಿಧಾನಸಭಾ ಚುನಾವಣೆವರೆಗೂ ಮುಂದುವರಿಯಲಿದೆ ಎಂದು ಪ್ರತಿಪಾದಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲ್ಯ ವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಸಮರ – ಪತಿ, ಪುತ್ರರ ಬಂಧನ ವಿರೋಧಿಸಿ ಬೀದಿಗಿಳಿದ ಮಹಿಳೆಯರು

    ಬಾಲ್ಯ ವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಸಮರ – ಪತಿ, ಪುತ್ರರ ಬಂಧನ ವಿರೋಧಿಸಿ ಬೀದಿಗಿಳಿದ ಮಹಿಳೆಯರು

    ದಿಸ್ಪುರ್: ಬಾಲ್ಯವಿವಾಹ (Child Marriage) ತಡೆಗೆ ಅಸ್ಸಾಂ ಸರ್ಕಾರ ಕಠಿಣ ಕಾರ್ಯಾಚರಣೆ ಕೈಗೊಂಡಿದೆ. ಬಾಲ್ಯ ವಿವಾಹದ ವಿರುದ್ಧ ಸಮರ ಸಾರಿರುವ ಪೊಲೀಸರು (Assam Police) 2 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಈ ಕ್ರಮ ವಿರೋಧಿಸಿ ರಾಜ್ಯದ ವಿವಿಧೆಡೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ (Protest) ನಡೆಸುತ್ತಿದ್ದಾರೆ.

    ತಮ್ಮ ಪತಿ ಹಾಗೂ ಪುತ್ರರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ಕುಟುಂಬ ಆರ್ಥಿಕ ನಿರ್ವಹಣೆಗೆ ಬೇರೆ ದಾರಿಯಿಲ್ಲ, ಪುರುಷರನ್ನು ಮಾತ್ರ ಏಕೆ ಬಂಧಿಸಬೇಕು? ನಾವು ನಮ್ಮ ಮಕ್ಕಳು ಬದುಕುವುದಾದರೂ ಹೇಗೆ? ಎಂದು ಮಹಿಳೆಯರು ಪ್ರಶ್ನಿಸುತ್ತಿದ್ದಾರೆ.

    ಇದೇ ವೇಳೆ ಮಹಿಳೆಯೊಬ್ಬರು `ನನ್ನ ಮಗ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದಾನೆ. ಅವನು ತಪ್ಪು ಮಾಡಿದ್ದಾನೆ ನಿಜ. ಅದಕ್ಕಾಗಿ ನನ್ನ ಗಂಡನನ್ನ ಏಕೆ ಬಂಧಿಸಬೇಕು? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ಬಿಗ್ ಅಪ್‌ಡೇಟ್ ಕೊಟ್ಟ `ಮೌರ್ಯ’ ನಾಯಕಿ ಮೀರಾ ಜಾಸ್ಮಿನ್

    ಇದೇ ವೇಳೆ ಹೇಸರು ಹೇಳಲಿಚ್ಚಿಸದ ಮಹಿಳೆ, ನನ್ನ ಸೊಸೆ ಮದುವೆಯಾದಾಗ 17 ವರ್ಷ, ಈಗ ಅವಳಿಗೆ 19 ವರ್ಷವಾಗಿದೆ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದಾಳೆ (Pregnant Women). ಪತಿಯನ್ನ ಜೈಲಿಗೆ ಎಳೆದುಕೊಂಡು ಹೋದ್ರೆ ಅವಳನ್ನ ಯಾರು ನೋಡಿಕೊಳ್ತಾರೆ ಎಂದಿದ್ದಾರೆ.

    ಬಾಲ್ಯ ವಿವಾಹ ತಡೆಗೆ ಕಠಿಣ ಕಾರ್ಯಾಚರಣೆ ಕೈಗೊಂಡಿರುವ ಅಸ್ಸಾಂ ಪೊಲೀಸರು ಈಗಾಗಲೇ 2000ಕ್ಕೂ ಹೆಚ್ಚು ಮಂದಿಯನ್ನ ಬಂಧಿಸಿದ್ದಾರೆ. ಜನವರಿ 23ರಂದು ಸಚಿವ ಸಂಪುಟದಲ್ಲಿ ಅಸ್ಸಾಂ ಸರ್ಕಾರ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, 10 ದಿನಗಳಲ್ಲೇ 4,004 ಕೇಸ್‌ಗಳು ದಾಖಲಾಗಿವೆ. 8 ಸಾವಿರ ಆರೋಪಿ ಪಟ್ಟಿಗಳನ್ನು ಹೊಂದಿರುವ ಪೊಲೀಸರು ಒಬ್ಬೊಬ್ಬರನ್ನೂ ಬಂಧಿಸುತ್ತಿದ್ದಾರೆ. ಈಗಾಗಲೇ 2 ಸಾವಿರಕ್ಕೂ ಅಧಿಕ ಮಂದಿಯನ್ನ ಜೈಲಿಗಟ್ಟಿದ್ದಾರೆ. ಅವರಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ವಿವಾಹ ಕಾರ್ಯಕ್ರಮ ನಡೆಸಿದ 51 ಪುರೋಹಿತರೂ ಇದ್ದಾರೆ.

    14 ವರ್ಷದೊಳಗಿನ ಹುಡುಗಿಯರನ್ನ ಮದುವೆಯಾದವರ ವಿರುದ್ಧ ಪೋಕ್ಸೋ (POCSO) ಕೇಸ್ ಹಾಗೂ 14 ರಿಂದ 18 ವರ್ಷದೊಳಗಿನ ಹುಡುಗಿಯರನ್ನು ಮದುವೆಯಾಗಿದ್ರೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಪ್ರಕರಣ ದಾಖಲಿಸಲು ಸಚಿವ ಸಂಪುಟ ನಿರ್ಧರಿಸಿತ್ತು. ಇದನ್ನೂ ಓದಿ: ತುಮಕೂರಿನ HAL ಭಾರತದಲ್ಲೇ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಕೇಂದ್ರ – ಏನಿದರ ವೈಶಿಷ್ಟ್ಯ?

    ಅಸ್ಸಾಂನಲ್ಲಿ ತಾಯಂದಿರು ಹಾಗೂ ಶಿಶುಗಳ ಮರಣ ಪ್ರಮಾಣ ಹೆಚ್ಚಾಗಲು ಬಾಲ್ಯವಿವಾಹವು ಪ್ರಾಥಮಿಕ ಕಾರಣವಾಗಿದೆ. ರಾಜ್ಯದಲ್ಲಿ ನೋಂದಣಿಯಾದ ಶೇ.31ರಷ್ಟು ವಿವಾಹಗಳು ನಿಷೇಧಿತ ವಯೋಮಿತಿಯಲ್ಲಿವೆ ಎಂದು ಗುರುತಿಸಲಾಗಿದೆ. ಇನ್ನೂ 6 ದಿನಗಳ ಕಾಲ ಈ ಕಾರ್ಯಾರಣೆ ಮುಂದುವರಿಯಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲಕಿ ಮೇಲೆ 6 ಹುಡುಗರಿಂದ ಅತ್ಯಾಚಾರ – ಕೃತ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದು ವಿಕೃತಿ

    ಬಾಲಕಿ ಮೇಲೆ 6 ಹುಡುಗರಿಂದ ಅತ್ಯಾಚಾರ – ಕೃತ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದು ವಿಕೃತಿ

    ದಿಸ್ಪುರ್: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ 13 ರಿಂದ 15 ವರ್ಷದೊಳಗಿನ 6 ಹುಡುಗರನ್ನು ಬಂಧಿಸಿರುವ ಘಟನೆ ದಕ್ಷಿಣ ಅಸ್ಸಾಂನ ಕರೀಂಗಂಜ್‌ನಲ್ಲಿ ನಡೆದಿದೆ.

    ಪೊಲೀಸರ (Police) ಪ್ರಕಾರ, ಸಂತ್ರಸ್ತ ಬಾಲಕಿ ನವೆಂಬರ್ 1ರಂದು ಅತ್ಯಾಚಾರ ನಡೆದಿರುವುದಾಗಿ ರಾಮಕೃಷ್ಣನಗರದ ಕಾಳಿನಗರ ಪೊಲೀಸ್ ಠಾಣೆಯಲ್ಲಿ (Assam Police Station) ದೂರು ದಾಖಲಿಸಿದ್ದಳು. ಪ್ರಕರಣ (FIR) ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಜಾರಕಿಹೊಳಿಯವರು ವಾಮಾಚಾರದ ಫ್ಯಾಮಿಲಿಯವರು ಸ್ಮಶಾನ ಪ್ರೀತಿಸುವವರು: ಜಗ್ಗೇಶ್

    STOP RAPE

    ಘಟನೆ ನಡೆದಾಗ ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಳು. ನಂತರ ಮನೆಗೆ ನುಗಿದ್ದ ಹುಡುಗರು ಬಲವಂತವಾಗಿ ಆಕೆಯನ್ನು ಹಿಡಿದು ಒಬ್ಬೊಬ್ಬರೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅಲ್ಲದೇ ಹಲ್ಲೆ ನಡೆಸಿದ ಕೃತ್ಯವನ್ನು ತಮ್ಮ ಮೊಬೈಲ್‌ನಲ್ಲಿ (Mobile) ಸೆರೆಹಿಡಿದಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಳಲಿ ಮಸೀದಿ ವಿವಾದ – ವಿಹೆಚ್‌ಪಿ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು

    ಸಂತ್ರಸ್ತೆ ಹೆಚ್ಚು ಆತಂಕಗೊಂಡಿದ್ದರಿಂದ ಯಾರಿಗೂ ಹೇಳಿರಲಿಲ್ಲ. ನಂತರ ಪೋಷಕರು ಸಮಾಧಾನಪಡಿಸಿ ದೂರು ಕೊಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಾರ್ಥ ಪ್ರತಿಮ್ ದಾಸ್ ಹೇಳಿದ್ದಾರೆ.

    STOP RAPE

    ಆರೋಪಿಗಳನ್ನು ಬಂಧಿಸಿದ್ದು, ಕೃತ್ಯ ಸೆರೆಹಿಡಿದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆದರೆ ಕೃತ್ಯ ಎಸಗಿರುವವರ ಪೈಕಿ ಓರ್ವ ಇತರರೊಂದಿಗೆ ವೀಡಿಯೋ ಹಂಚಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

    ಪೋಕ್ಸೋ ಕಾಯ್ದೆ (POCSO Act) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]