Tag: Assam

  • ಮದ್ವೆಯಾದ ಮೂರೇ ದಿನಕ್ಕೆ ಸ್ನೇಹಿತರ ಜೊತೆ ಸೇರಿ ಪತ್ನಿಯ ಮೇಲೆ ಗ್ಯಾಂಗ್‍ರೇಪ್

    ಮದ್ವೆಯಾದ ಮೂರೇ ದಿನಕ್ಕೆ ಸ್ನೇಹಿತರ ಜೊತೆ ಸೇರಿ ಪತ್ನಿಯ ಮೇಲೆ ಗ್ಯಾಂಗ್‍ರೇಪ್

    ಗುವಾಹಟಿ: ಪಾಪಿ ಪತಿಯೊಬ್ಬ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ನವವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

    ಈ ಘಟನೆ ದಕ್ಷಿಣ ಅಸ್ಸಾಂನ ಕರೀಮ್ಗಂಜ್ ಜಿಲ್ಲೆಯಲ್ಲಿ ನಡೆದಿದ್ದು, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ನನ್ನ ಮದುವೆಯಾದ ನಂತರ ಪತಿ ವರದಕ್ಷಿಣೆಗಾಗಿ ಚಿನ್ನವನ್ನು ತರುವಂತೆ ಒತ್ತಾಯಿಸಿದ್ದಾನೆ. ಆದರೆ ಆತನ ಬೇಡಿಕೆಗೆ ನಾನು ಒಪ್ಪದಿದ್ದಕ್ಕೆ ಆತ ಸ್ನೇಹಿತರ ಜೊತೆ ಸೇರಿ ಏಪ್ರಿಲ್ 17 ರಂದು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಅಂತಾ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಸಂತ್ರಸ್ತೆ ದೂರು ನೀಡಿದ ಬಳಿಕ ಆಕೆಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ್ದು, ವರದಿಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಆದ್ದರಿಂದ ಮೂವರು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಸದ್ಯಕ್ಕೆ ಆರೋಪಿ ಪತಿಯನ್ನು ಬಂಧಿಸಿಲಾಗಿದೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

     

  • ಪ್ರಿಯಕರನ ಜೊತೆ ಬಾಂಗ್ಲಾದೇಶಕ್ಕೆ ಓಡಿಹೋಗಿ ಭಾರತಕ್ಕೆ ವಾಪಸ್ ಬರಲ್ಲ ಎಂದ 21ರ ಯುವತಿ: ವಿಡಿಯೋ

    ಪ್ರಿಯಕರನ ಜೊತೆ ಬಾಂಗ್ಲಾದೇಶಕ್ಕೆ ಓಡಿಹೋಗಿ ಭಾರತಕ್ಕೆ ವಾಪಸ್ ಬರಲ್ಲ ಎಂದ 21ರ ಯುವತಿ: ವಿಡಿಯೋ

    ಅಸ್ಸಾಂ: ಯುವತಿಯೊಬ್ಬಳು ತನ್ನ ಪ್ರಿಯಕರನ ಜೊತೆ ಬಾಂಗ್ಲಾದೇಶಕ್ಕೆ ಓಡಿಹೋಗಿ ಭಾರತಕ್ಕೆ ವಾಪಸ್ ಬರಲ್ಲ ಎಂದು ವಿಡಿಯೋ ಮಾಡಿ ಕಳುಹಿಸಿದ್ದಾಳೆ.

    ಮೌಸಮಿ ದಾಸ್(21) ಬಾಂಗ್ಲಾದೇಶಕ್ಕೆ ಓಡಿಹೋದ ಯುವತಿ. ಮಾರ್ಚ್ 12ರಂದು ಮೌಸಮಿ ತನ್ನ ಮನೆಯಿಂದ ಕಾಣೆಯಾಗಿದ್ದಳು. ನಂತರ ಆಕೆಯ ಪೋಷಕರು ಕರೀಮ್‍ಗಂಜ್ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಅಷ್ಟೇ ಅಲ್ಲದೇ ಈ ದೂರಿನಲ್ಲಿ ಪೋಷಕರು ಆಕೆಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಹೇಳಿದ್ದರು.

    ಮಾರ್ಚ್ 27ರಂದು ವಾಟ್ಸಾಪ್‍ನಲ್ಲಿ ಒಂದು ವಿಡಿಯೋ ವೈರಲ್ ಆಗಿತ್ತು. ಆ ವಿಡಿಯೋದಲ್ಲಿ ಮೌಸಮಿ ದಾಸ್ ಪೊಲೀಸ್ ಠಾಣೆಯಲ್ಲಿ ಇರುವುದು ಕಂಡು ಬಂದಿತ್ತು. ಇದಾದ ಬಳಿಕ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಬಾಂಗ್ಲಾದೇಶದಲ್ಲಿ ನಾನು ಖುಷಿಯಾಗಿದ್ದೇನೆ. ನನಗೆ ಭಾರತಕ್ಕೆ ವಾಪಸ್ ಬರಲು ಇಷ್ಟವಿಲ್ಲ ಎಂದು ಮೌಸಾಮಿ ತಿಳಿಸಿದ್ದಾಳೆ.

    ವಿಡಿಯೋದಲ್ಲಿ ಏನಿದೆ?
    ನಾನು ಮೌಸಾಮಿ ದಾಸ್. ನಾನು ಭಾರತದಿಂದ ಓಡಿ ಬಂದಿದ್ದೇನೆ ಹಾಗೂ ನನ್ನ ಇಚ್ಛೆಯಿಂದ ಬಂದಿದ್ದೇನೆ. ನನಗೆ ಭಾರತಕ್ಕೆ ವಾಪಸ್ ಆಗಲು ಇಷ್ಟವಿಲ್ಲ. ನನ್ನ ಪತಿ ಜೊತೆ ಇರಲು ಇಷ್ಟಪಡುತ್ತೇನೆ. ಇನ್ನೂ ಬಾಂಗ್ಲಾದೇಶ ತುಂಬಾ ಚೆನ್ನಾಗಿದೆ. ನಾನು ಇಲ್ಲಿ ಇರಲು ಇಷ್ಟಪಡುತ್ತೇನೆ ಹಾಗೂ ಇಲ್ಲಿಯೇ ಇರುತ್ತೇನೆ. ನನಗೆ 21 ವರ್ಷವಾಗಿದೆ. ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗೋಕ್ಕೆ ನಾನು ಚಿಕ್ಕ ಮಗು ಅಲ್ಲ. ಪತಿಯಾದ ನೂಮನ್ ಬಾದ್‍ಶಾ ಜೊತೆ ಅಸ್ಸಾಂನ ಕರೀಂಗಂಜ್‍ನಿಂದ ಬಂದಿದ್ದೇನೆ ಎಂದು ಮೌಸಾಮಿ ಹೇಳಿದ್ದಾಳೆ.

    ಮೌಸಾಮಿ ಹಿಂದೂವಿನಿಂದ ಮುಸ್ಲಿಂ ಸಮುದಾಯಕ್ಕೆ ಮತಾಂತರಗೊಂಡಿದ್ದು, ವಿಡಿಯೋದಲ್ಲಿ ಬುರ್ಕಾ ಹಾಕಿರುವುದು ಕಂಡು ಬಂದಿದೆ. ಮೌಸಾಮಿ ಬಾಂಗ್ಲಾದೇಶ ತಲುಪಿದ ಮೇಲೆ ಮುಸ್ಲಿಂ ಸಮುದಾಯಕ್ಕೆ ಮತಾಂತರಗೊಂಡು ತನ್ನ ಪ್ರಿಯಕರ ನೂಮನ್ ಬಾದ್‍ಶಾ ಜೊತೆ ವಿವಾಹವಾಗಿದ್ದಾಳೆ. ಇನ್ನೂ ಮೌಸಾಮಿ ಹತ್ತಿರ ಯಾವುದೇ ಪಾಸ್‍ಪೋರ್ಟ್ ಹಾಗೂ ವೀಸಾ ಇಲ್ಲ. ಆಕೆ ಅಕ್ರಮವಾಗಿ ಬಾಂಗ್ಲಾ ತಲುಪಿದ್ದಾಳೆ ಎಂದು ವರದಿಯಾಗಿದೆ.

  • 5ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಎಸಗಿ ಬೆಂಕಿ ಇಟ್ಟ ಅಪ್ರಾಪ್ತ ಬಾಲಕರು

    5ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಎಸಗಿ ಬೆಂಕಿ ಇಟ್ಟ ಅಪ್ರಾಪ್ತ ಬಾಲಕರು

    ಅಸ್ಸಾಂ: 5ನೇ ತರಗತಿಯ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಗ್ಯಾಂಗ್ ರೇಪ್ ನಡೆಸಿ, ಬಳಿಕ ಬೆಂಕಿ ಹಚ್ಚಿರುವ ಘಟನೆ ಅಸ್ಸಾಂನ ನಾಗಾನ್ ಜಿಲ್ಲೆಯಲ್ಲಿ ನಡೆದಿದೆ.

    ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಯತ್ನಿಸಿದ್ದಾರೆ. ಆದರೆ ಶೇ. 90 ರಷ್ಟು ಸುಟ್ಟಗಾಯಗಳಾದ ಕಾರಣ ಚಿಕಿತ್ಸೆ ಫಲಿಸದೆ ಶುಕ್ರವಾರ ತಡರಾತ್ರಿ ಬಾಲಕಿ ಸಾವನ್ನಪ್ಪಿದ್ದಾಳೆ.

    ಘಟನೆ ಕುರಿತು ಪೊಲೀಸರು ಮಾಹಿತಿ ಪಡೆದು ಆಸ್ಪತ್ರೆಗೆ ಧಾವಿಸಿದ್ದು, ಬಾಲಕಿಯ ಹೇಳಿಕೆಯನ್ನು ಪಡೆದಿದ್ದರು. ಬಾಲಕಿ ತನ್ನ ಹೇಳಿಕೆಯಲ್ಲಿ ತನಗೆ ಪರಿಚಯ ಇರುವ ಐವರು ಅತ್ಯಾಚಾರ ಎಸಗಿ ಬಳಿಕ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಗಿ ತಿಳಿಸಿದ್ದಳು.

    ಬಾಲಕಿ ಹೇಳಿಕೆ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಉಳಿದ ಆರೋಪಿಯಗಳನ್ನ ಬಂಧಿಸಿಲು ಹುಡುಕಾಟ ನಡೆಸಲಾಗಿದೆ. ಬಂಧಿತರು ಅಪ್ರಾಪ್ತರಾಗಿರುವ ಕಾರಣ ಅವರ ವಿರುದ್ಧ ಬಾಲಾಪರಾಧಿ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ. ಬಾಲಕಿ ಹೇಳಿಕೆ ಪಡೆಯಲಾಗಿದ್ದು, ಆಕೆಯ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಘಟನೆ ಕುರಿತು ಗ್ರಾಮಸ್ಥರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರ್ಚ್ 17 ರಂದು 8 ಜನ ದುಷ್ಕರ್ಮಿಗಳು ಪತಿಯನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಪತ್ನಿ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು. ಘಟನೆ ಬಳಿಕ ಅಸ್ಸಾಂ ನ ಸ್ಥಳೀಯ ಶಾಸಕರು ವಿಧಾನಸಭೆಯಲ್ಲಿ ಮಹಿಳೆಯರ ರಕ್ಷಣೆ ಕುರಿತು ಪ್ರಶ್ನಿಸಿದ್ದರು.

  • ಪತಿಯ ಮುಂದೆಯೇ 8 ಮಂದಿ ಕಾಮುಕರಿಂದ ಗ್ಯಾಂಗ್ ರೇಪ್

    ಪತಿಯ ಮುಂದೆಯೇ 8 ಮಂದಿ ಕಾಮುಕರಿಂದ ಗ್ಯಾಂಗ್ ರೇಪ್

    ಗುವಾಹಟಿ: 35 ವರ್ಷದ ಮಹಿಳೆಯ ಮೇಲೆ ಆಕೆಯ ಪತಿಯ ಮುಂದೆಯೇ 8 ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಸ್ಸಾಂನ ನಾಗಾನ್ ಜಿಲ್ಲೆಯಲ್ಲಿ ನಡೆದಿದೆ.

    ನಡೆದಿದ್ದೇನು?
    ಗುರುವಾರ ದಂಪತಿ ಕಂಪುರ್ ನಿಂದ ಹೊಜೈಗೆ ಪ್ರಯಾಣಿಸುತ್ತಿದ್ದರು. ಆದರೆ ಚಾಪರ್ಮುಖ್ ತಲುಪಿದ ಬಳಿಕ ಅವರು ಹೊಜೈಗೆ ಹೋಗಲು ಯಾವುದೇ ವಾಹನಗಳು ಇರಲಿಲ್ಲ. ಈ ವೇಳೆ ಮುಖ್ಯ ಆರೋಪಿ ಮರ್ಜೋತ್ ಅಲ್ಲಿಗೆ ಬಂದು ಇಂದು ರಾತ್ರಿ ನೀವು ಉಳಿದುಕೊಳ್ಳಲು ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದ್ದಾನೆ. ಬಳಿಕ ಅವರನ್ನು ಕಾಕೋಟಿಗಾಂವ್ ಗೆ ಕರೆದುಕೊಂಡು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ದಂಪತಿ ಅಲ್ಲಿಗೆ ಹೋಗುವಷ್ಟರಲ್ಲಿ ಕೊಪಿಲಿ ನದಿಯ ಹತ್ತಿರ ಈಗಾಗಲೇ ಇತರೆ ಏಳು ಮಂದಿ ಆರೋಪಿಗಳು ಕಾಯುತ್ತಿದ್ದರು. ನಂತರ ಅವರು ಸಂತ್ರಸ್ತೆಯ ಪತಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಆತನ ಮುಂದೆಯೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ದಂಪತಿ ಬಳಿ ದರೋಡೆ ಮಾಡಿ ಅವರನ್ನು ಅಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯ ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ನಾವು ಆರೋಪಿಗಳನ್ನು ವಿಚಾರಣೆ ಮಾಡಲು ಹೆಚ್ಚು ಸಮಯ ಬೇಕಾಗಬಹುದು. ಈ ಘಟನೆ ಗುರುವಾರ ನಡೆದಿದ್ದು, ಸದ್ಯಕ್ಕೆ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ ಎಂದು ನಾಗಾನ್ ಎಸ್.ಪಿ. ಶಂಕರ್ ಬರಾತಾ ರೈಮೇಧಿ ಹೇಳಿದ್ದಾರೆ.

  • ತಂದೆಯ ಸ್ನೇಹಿತನಿಂದಲೇ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

    ತಂದೆಯ ಸ್ನೇಹಿತನಿಂದಲೇ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

    ಜೋರತ್: ತಂದೆಯ ಸ್ನೇಹಿತನೇ 6 ವರ್ಷದ ಮಗುವನ್ನು ಅತ್ಯಾಚಾರ ಮಾಡಿದ ಘಟನೆ ಅಸ್ಸಾಂನ ಜೋರತ್ ಜಿಲ್ಲೆಯಲ್ಲಿ ನಡೆದಿದೆ.

    ಬಾಲಕಿಯ ಪೋಷಕರು ನಾ-ಅಲಿ ಬೋಲಿಯಾಗೋಹೇನ್ ಫುಕುರಿ ನಗರದಿಂದ ಔಷಧಿ ತರಲು ಹೋಗುವಾಗ ತನ್ನ ಸ್ನೇಹಿತನಿಗೆ ಮಗುವನ್ನು ನೋಡಿಕೊಳ್ಳುವುದಾಗಿ ಹೇಳಿ ಹೋಗಿದ್ದರು. ಈ ಸಮಯದಲ್ಲಿ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

    ಪೋಷಕರು ಹಿಂತಿರುಗಿದಾಗ ಮಗು ಅಳುತ್ತಿದ್ದು, ಗುಪ್ತಾಂಗದಲ್ಲಿ ನೋವಾಗುತ್ತಿದೆ ಎಂದು ಹೇಳಿದ್ದಾಳೆ. ತಕ್ಷಣ ಪೋಷಕರು ಬಾಲಕಿಯನ್ನು ಜೋರತ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಗ ಮಗುವಿನ ಮೇಲೆ ಅತ್ಯಾಚಾರ ನಡೆದಿರೋದು ವೈದ್ಯರು ದೃಢಪಡಿಸಿದ್ದರು.

    ಇದಾದ ಬಳಿಕ ಬಾಲಕಿಯ ತಂದೆ ಆರೋಪಿಯನ್ನು ಹುಡುಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಮಾಡಿಸಿದ ಮೇಲೆ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ ಎಂಬುದು ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ.

  • ಕನ್ನಡ ಕಲಿಯೋದಿಲ್ವಾ: ಅಮಿತ್ ಶಾಗೆ ಸಿಎಂ ಪ್ರಶ್ನೆ

    ಕನ್ನಡ ಕಲಿಯೋದಿಲ್ವಾ: ಅಮಿತ್ ಶಾಗೆ ಸಿಎಂ ಪ್ರಶ್ನೆ

    ಬೆಂಗಳೂರು: ತಮಿಳು, ಬಂಗಾಳಿ ಭಾಷೆಯನ್ನು ಕಲಿಯುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಕನ್ನಡವನ್ನು ಕಲಿಯುದಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

    ಈ ಸಂಬಂಧ ಸಿದ್ದರಾಮಯ್ಯನವರು ವೈಯಕ್ತಿಕ ಖಾತೆಯಿಂದ ಟ್ವೀಟ್ ಮಾಡಿ ಕನ್ನಡ ಕಲಿಯುವುದಿಲ್ವಾ ಅಮಿತ್ ಶಾ ಅವರೆ ಎಂದು ಪ್ರಶ್ನಿಸಿದ್ದಾರೆ.

    ಈ ಪ್ರಶ್ನೆಗೆ ಪರ ಮತ್ತು ವಿರೋಧ ಟ್ವೀಟ್‍ಗಳನ್ನು ಮಾಡಿ ಜನ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

    ಶಾ ತಮಿಳು, ಬಂಗಾಳಿ ಕಲಿಯುತ್ತಿರುವುದು ಯಾಕೆ?
    ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ ಗೆಲ್ಲಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಣತಂತ್ರ ಹೂಡಿದ್ದಾರೆ. ಈ ಎರಡು ಕಡೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲೆಂದೇ ಅಮಿತ್ ಶಾ ತಮಿಳು ಹಾಗೂ ಬಂಗಾಳಿ ಭಾಷೆಗಳನ್ನು ಕಲಿಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತದ ಬಳಿಕ ಮೋದಿ, ಅಮಿತ್ ಶಾ ಹೊಸ ಟಾರ್ಗೆಟ್ ಇದು

    ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಲ ಕಡಿಮೆ ಇದ್ದು, ಪ್ರತಿ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳು ಜಯಗಳಿಸಿದರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಎಡಪಕ್ಷಗಳು ಜಯಗಳಿಸುತ್ತಿವೆ. ಹೀಗಾಗಿ ಈ ಎರಡು ರಾಜ್ಯಗಳಲ್ಲಿ ಕಮಲ ಅರಳಿಸಲು ಈಗ ಬಿಜೆಪಿಯ ಚುನಾವಣಾ ಚಾಣಕ್ಯ ಸಿದ್ಧತೆ ನಡೆಸುತ್ತಿದ್ದಾರೆ. ತವರು ರಾಜ್ಯವನ್ನು ಮತ್ತೊಮ್ಮೆ ಗೆಲ್ಲುವ ರಣತಂತ್ರದ ನಡುವೆಯೂ `ಭಾಷಾ’ ಅಧ್ಯಯನದಲ್ಲಿ ಅಮಿತ್ ಶಾ ಬ್ಯುಸಿಯಾಗಿರುವುದು ಇದೀಗ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

    ಈ ಎರಡು ರಾಜ್ಯಗಳಲ್ಲಿ ಮಾತೃಭಾಷೆಯಲ್ಲೇ ಜನರೊಂದಿಗೆ ವ್ಯವಹರಿಸಿದ್ರೆ ಚುನಾವಣೆಗೆ ಲಾಭ ಎನ್ನುವ ನಿಟ್ಟಿನಲ್ಲಿ ಶಾ ಈ ತೀರ್ಮಾನಕ್ಕೆ ಬಂದಿದ್ದಾರೆ. ಇಷ್ಟು ಮಾತ್ರವಲ್ಲದೇ ಶಾ ಅಸ್ಸಾಂ, ಮಣಿಪುರ ಭಾಷೆಯನ್ನೂ ಕರಗತ ಮಾಡಿಕೊಳ್ಳುತ್ತಿದ್ದಾರಂತೆ. ಒಟ್ಟಿನಲ್ಲಿ ಗುಜರಾತ್ ಚುನಾವಣೆಯ ಬ್ಯುಸಿ ನಡುವೆಯೂ ದಕ್ಷಿಣದತ್ತ ಅಮಿತ್ ಶಾ ಕಣ್ಣು ಹಾಕಿದ್ದಾರೆ.

    ಈಗಾಗಲೇ ಶಾ ಅವರಿಗೆ ತಮಿಳು, ಬೆಂಗಾಳಿ, ಅಸ್ಸಾಂ ಹಾಗೂ ಮಣಿಪುರಿ ಭಾಷೆಗಳನ್ನು ಕಲಿಸಲು ವೃತ್ತಿಪರ ಶಿಕ್ಷಕರು ಆಯ್ಕೆಯಾಗಿದ್ದು, ಶಾ ತಮ್ಮ ಭಾಷಾ ಕಲಿಕೆಯನ್ನು ಮುಂದುವರಿಸಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರ ತರಗತಿಗಳು ನಡೆಯುತ್ತಿವೆ. ಸದ್ಯಕ್ಕೆ ಶಾ ಎರಡೂ ಭಾಷೆಗಳಲ್ಲಿ ಮಾತನಾಡುವಷ್ಟು ಕಲಿತಿದ್ದಾರೆ. ಆದರೆ ನಿರರ್ಗಳವಾಗಿ ಮಾತನಾಡಲು ಮತ್ತಷ್ಟು ಅಧ್ಯಯನದ ಅಗತ್ಯವಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಒಟ್ಟಿನಲ್ಲಿ ತಮಿಳುನಾಡು ಹಾಗೂ ಬಂಗಾಳ ರಾಜ್ಯದಲ್ಲೂ ಗೆದ್ದು, ಬಿಜೆಪಿ ಒಂದು ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಅಮಿತ್ ಶಾ ಈ ಉಪಾಯ ಹೂಡಿದ್ದಾರೆ. ಆಯಾ ರಾಜ್ಯದ ಭಾಷೆಯಲ್ಲೇ ಜನರೊಂದಿಗೆ ಮಾತನಾಡಿದ್ರೆ ಮಾತ್ರ ಜನ ಇನ್ನೂ ತಮ್ಮೊಂದಿಗೆ ಹತ್ತಿರವಾಗುತ್ತಾರೆ. ಹೀಗೆ ಮಾಡಿದ್ದಲ್ಲಿ ತಮ್ಮ ಪಕ್ಷಕ್ಕೆ ಜನ ಮತ ನೀಡಬಹುದೆಂಬ ಉದ್ದೇಶ ಅವರದ್ದಾಗಿದೆ.

    https://twitter.com/winner2008/status/932995532326240256

    https://twitter.com/kanwarlalbolo/status/932983862317039616

  • ತಮಿಳು, ಬಂಗಾಳಿಗಳ ಮನಗೆಲ್ಲಲು `ಭಾಷಾ’ ಬಾಣ ಪ್ರಯೋಗಿಸಲಿದ್ದಾರೆ ಅಮಿತ್ ಶಾ!

    ತಮಿಳು, ಬಂಗಾಳಿಗಳ ಮನಗೆಲ್ಲಲು `ಭಾಷಾ’ ಬಾಣ ಪ್ರಯೋಗಿಸಲಿದ್ದಾರೆ ಅಮಿತ್ ಶಾ!

    ನವದೆಹಲಿ: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ ಗೆಲ್ಲಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಣತತಂತ್ರ ಹೂಡಿದ್ದಾರೆ.

    ಹೌದು. ಈ ಎರಡು ಕಡೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲೆಂದೇ ಅಮಿತ್ ಶಾ ತಮಿಳು ಹಾಗೂ ಬಂಗಾಳಿ ಭಾಷೆಗಳನ್ನು ಕಲಿಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಲ ಕಡಿಮೆ ಇದ್ದು, ಪ್ರತಿ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳು ಜಯಗಳಿಸಿದರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಎಡಪಕ್ಷಗಳು ಜಯಗಳಿಸುತ್ತಿವೆ. ಹೀಗಾಗಿ ಈ ಎರಡು ರಾಜ್ಯಗಳಲ್ಲಿ ಕಮಲ ಅರಳಿಸಲು ಈಗ ಬಿಜೆಪಿಯ ಚುನಾವಣಾ ಚಾಣಕ್ಯ ಸಿದ್ಧತೆ ನಡೆಸುತ್ತಿದ್ದಾರೆ. ತವರು ರಾಜ್ಯವನ್ನು ಮತ್ತೊಮ್ಮೆ ಗೆಲ್ಲುವ ರಣತಂತ್ರದ ನಡುವೆಯೂ `ಭಾಷಾ’ ಅಧ್ಯಯನದಲ್ಲಿ ಅಮಿತ್ ಶಾ ಬ್ಯುಸಿಯಾಗಿರುವುದು ಇದೀಗ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

    ಈ ಎರಡು ರಾಜ್ಯಗಳಲ್ಲಿ ಮಾತೃಭಾಷೆಯಲ್ಲೇ ಜನರೊಂದಿಗೆ ವ್ಯವಹರಿಸಿದ್ರೆ ಚುನಾವಣೆಗೆ ಲಾಭ ಎನ್ನುವ ನಿಟ್ಟಿನಲ್ಲಿ ಶಾ ಈ ತೀರ್ಮಾನಕ್ಕೆ ಬಂದಿದ್ದಾರೆ. ಇಷ್ಟು ಮಾತ್ರವಲ್ಲದೇ ಶಾ ಅಸ್ಸಾಂ, ಮಣಿಪುರ ಭಾಷೆಯನ್ನೂ ಕರಗತ ಮಾಡಿಕೊಳ್ಳುತ್ತಿದ್ದಾರಂತೆ. ಒಟ್ಟಿನಲ್ಲಿ ಗುಜರಾತ್ ಚುನಾವಣೆಯ ಬ್ಯುಸಿ ನಡುವೆಯೂ ದಕ್ಷಿಣದತ್ತ ಅಮಿತ್ ಶಾ ಕಣ್ಣು ಹಾಕಿದ್ದಾರೆ.

    ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತದ ಬಳಿಕ ಮೋದಿ, ಅಮಿತ್ ಶಾ ಹೊಸ ಟಾರ್ಗೆಟ್ ಇದು

    ಈಗಾಗಲೇ ಶಾ ಅವರಿಗೆ ತಮಿಳು, ಬೆಂಗಾಳಿ, ಅಸ್ಸಾಂ ಹಾಗೂ ಮಣಿಪುರಿ ಭಾಷೆಗಳನ್ನು ಕಲಿಸಲು ವೃತ್ತಿಪರ ಶಿಕ್ಷಕರು ಆಯ್ಕೆಯಾಗಿದ್ದು, ಶಾ ತಮ್ಮ ಭಾಷಾ ಕಲಿಕೆಯನ್ನು ಮುಂದುವರಿಸಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರ ತರಗತಿಗಳು ನಡೆಯುತ್ತಿವೆ. ಸದ್ಯಕ್ಕೆ ಶಾ ಎರಡೂ ಭಾಷೆಗಳಲ್ಲಿ ಮಾತನಾಡುವಷ್ಟು ಕಲಿತಿದ್ದಾರೆ. ಆದರೆ ನಿರರ್ಗಳವಾಗಿ ಮಾತನಾಡಲು ಮತ್ತಷ್ಟು ಅಧ್ಯಯನದ ಅಗತ್ಯವಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಒಟ್ಟಿನಲ್ಲಿ ತಮಿಳುನಾಡು ಹಾಗೂ ಬಂಗಾಳ ರಾಜ್ಯದಲ್ಲೂ ಗೆದ್ದು, ಬಿಜೆಪಿ ಒಂದು ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಅಮಿತ್ ಶಾ ಈ ಉಪಾಯ ಹೂಡಿದ್ದಾರೆ. ಆಯಾ ರಾಜ್ಯದ ಭಾಷೆಯಲ್ಲೇ ಜನರೊಂದಿಗೆ ಮಾತನಾಡಿದ್ರೆ ಮಾತ್ರ ಜನ ಇನ್ನೂ ತಮ್ಮೊಂದಿಗೆ ಹತ್ತಿರವಾಗುತ್ತಾರೆ. ಹೀಗೆ ಮಾಡಿದ್ದಲ್ಲಿ ತಮ್ಮ ಪಕ್ಷಕ್ಕೆ ಜನ ಮತ ನೀಡಬಹುದೆಂಬ ಉದ್ದೇಶ ಅವರದ್ದಾಗಿದೆ.

    https://www.youtube.com/watch?v=wVLDqd8Tgaw&feature=youtu.be&a=

  • ಹೊಟ್ಟೆ, ಎದೆಗೆ ಚಾಕುವಿನಿಂದ ಇರಿದು ಬೆಂಗ್ಳೂರಿನಲ್ಲಿ ಟೆಕ್ಕಿಯ ಬರ್ಬರ ಕೊಲೆ

    ಹೊಟ್ಟೆ, ಎದೆಗೆ ಚಾಕುವಿನಿಂದ ಇರಿದು ಬೆಂಗ್ಳೂರಿನಲ್ಲಿ ಟೆಕ್ಕಿಯ ಬರ್ಬರ ಕೊಲೆ

    ಬೆಂಗಳೂರು: ಉತ್ತರ ಭಾರತ ಮೂಲದ ಬೆಂಗಳೂರಿನಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ನಗರದಲ್ಲಿ ನಡೆದಿದೆ.

    ಅಸ್ಸಾಂ ಮೂಲದ ಪ್ರಣಯ್(24) ಕೊಲೆಯಾದ ವ್ಯಕ್ತಿ. ಈ ಘಟನೆ ಬೆಂಗಳೂರಿನ ತಾವರೆಕೆರೆ ಮುಖ್ಯರಸ್ತೆಯ ಚಾಕ್ಲೆಟ್ ಫ್ಯಾಕ್ಟರಿ ಬಳಿ ಭಾನುವಾರ ತಡರಾತ್ರಿ ನಡೆದಿದೆ.

    ಖಾಸಗಿ ಕಂಪನಿಯಲ್ಲಿ ಸಾಪ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರಣಯ್ ಅವರನ್ನು ಭಾನುವಾರ ರಾತ್ರಿ ಸ್ನೇಹಿತನೊಬ್ಬ ಫೋನ್ ಮಾಡಿ ಕರೆದಿದ್ದ. ಗೆಳೆಯನ ಕರೆಗೆ ಓಗೊಟ್ಟು ಹೋದ ಪ್ರಣಯ್ ನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಚಾಕುನಿಂದ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾರೆ. ಕೊಲೆಗೆ ಕಾರಣವೇನೆಂದು ತಿಳಿದುಬಂದಿಲ್ಲ.

    ಘಟನಾ ಸ್ಥಳಕ್ಕೆ ಮಡಿವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತಂಡ ರಚನೆ ಮಾಡಿರುವ ಪೊಲಿಸರು ಅರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

    https://www.youtube.com/watch?v=EI1fpzcn3wM

     

  • 8 ನವಜಾತ ಶಿಶುಗಳ ಮರಣ ವೈದ್ಯರ ನಿರ್ಲಕ್ಷ್ಮದಿಂದಲ್ಲ: ಅಸ್ಸಾಂನ ಆರೋಗ್ಯ ಸಚಿವ

    8 ನವಜಾತ ಶಿಶುಗಳ ಮರಣ ವೈದ್ಯರ ನಿರ್ಲಕ್ಷ್ಮದಿಂದಲ್ಲ: ಅಸ್ಸಾಂನ ಆರೋಗ್ಯ ಸಚಿವ

    ಅಸ್ಸಾಂ: ಬಾರ್ಪೆಟಾ ಜಿಲ್ಲೆಯಲ್ಲಿರುವ ಫರ್ಖುದ್ದೀನ್ ಅಲಿ ಅಹ್ಮದ್ ಮೆಡಿಕಲ್ ಕಾಲೇಜಿನಲ್ಲಿ (ಎಫ್‍ಎಎಎಂಸಿ) ಕಳೆದ ಎರಡು ದಿನಗಳಲ್ಲಿ 8 ನವಜಾತ ಶಿಶುಗಳು ಮೃತಪಟ್ಟಿದ್ದು, ಸಾವಿನ ತನಿಖೆ ನಡೆಸುವಂತೆ ಅಸ್ಸಾಂ ಸರ್ಕಾರ ಆದೇಶಿಸಿದೆ.

    ಅಸ್ಸಾಂನ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಶರ್ಮಾ ಅವರು, ವೈದ್ಯರು ಮಕ್ಕಳನ್ನು ಉಳಿಸಲು ತುಂಬಾ ಪ್ರಯತ್ನಿಸಿದರೂ ಯಶಸ್ವಿಯಾಗಿಲ್ಲ. ಜೊತೆಗೆ ಆಸ್ಪತ್ರೆಯಲ್ಲಿ ಸಾಕಷ್ಟು ಔಷಧಿಗಳು ಲಭ್ಯವಿರುವುದಾಗಿ ತಿಳಿಸಿದರು.

    5 ಶಿಶುಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅದರಿಂದ ಮೃತಪಟ್ಟಿವೆ. ಇದು ಯಾವುದೇ ವೈದ್ಯರ ನಿರ್ಲಕ್ಷ್ಮದಿಂದ ಸಂಭವಿಸಿಲ್ಲ. ನಾನು ಕಾಳಜಿಯಿಂದ ವೈದ್ಯರನ್ನು ವಿಚಾರಿಸಿದ್ದೇನೆ. ಅವರು ಶಿಶುಗಳನ್ನು ಹೆಚ್ಚಿನ ಆರೈಕೆ ಮಾಡಿದ್ದಾರೆ. ಆದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಿದರು.

    ಇನ್ನೂ ಮೂರು ಮಕ್ಕಳು ಹುಟ್ಟಿದ ತಕ್ಷಣ ಉಸಿರುಗಟ್ಟಿದೆ, ಮೆದುಳು ಮತ್ತು ಇತರೆ ಅಂಗಾಂಗಳಿಗೆ ಸಾಕಾಗುವಷ್ಟು ಆಮ್ಲಜನಕ ದೊರೆತಿಲ್ಲ ಆದ್ದರಿಂದ ಮೃತಪಟ್ಟಿವೆ ಎಂದು ಆಸ್ಪತ್ರೆಯ ಮುಖ್ಯಸ್ಥ ದಿಲೀಪ್ ದತ್ತಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಮಕ್ಕಳು ಜನಿಸಿದಾಗಲೇ ಕಡಿಮೆ ತೂಕವನ್ನು ಹೊಂದಿದ್ದವು. ಅಷ್ಟೇ ಅಲ್ಲದೇ ತೀವ್ರ ಗಂಭೀರವಾದ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ನಾವು ಮಾಡುವ ಪ್ರಯತ್ನವನ್ನು ಮಾಡಿದೆವು ಆದರೂ ಮಕ್ಕಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಮೃತಪಟ್ಟ ಶಿಶುಗಳಲ್ಲಿ 7 ಗಂಡು ಹಾಗೂ ಒಂದು ಹೆಣ್ಣು ಮಗು ಎಂದು ದತ್ತಾ ಹೇಳಿದರು.

  • 59 ಇಂಚಿನ ಹೊಟ್ಟೆಯೊಂದಿಗೆ ಪ್ರತಿದಿನ ನರಳಾಡ್ತಿದ್ದಾರೆ ಈ ವ್ಯಕ್ತಿ

    59 ಇಂಚಿನ ಹೊಟ್ಟೆಯೊಂದಿಗೆ ಪ್ರತಿದಿನ ನರಳಾಡ್ತಿದ್ದಾರೆ ಈ ವ್ಯಕ್ತಿ

    ಗುವಾಹಟಿ: ಆಗಾಗ ಹೊಟ್ಟೆನೋವು ಕಾಣಿಸಿಕೊಳ್ಳೋದು ಅಥವಾ ಹೆಚ್ಚಿಗೆ ಊಟ ಮಾಡಿದಾಗ ಹೊಟ್ಟೆ ಊದಿಕೊಳ್ಳೊದು ಸಾಮಾನ್ಯ. ಆದ್ರೆ ಹೊಟ್ಟೆ ಊತವೇ ಈಗ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕವಾಗಿದೆ.

    ಅಸ್ಸಾಂನ ಬಿಕಾಶ್ ಹಜಾರಿಕಾ 61 ಕೆಜಿ ತೂಕವಿದ್ದು, ಅವರ ಹೊಟ್ಟೆ ಊದಿಕೊಂಡಿರುವ ಕಾರಣ ಪ್ರತಿದಿನ ನಡೆದಾಡಲು ಸಾಧ್ಯವಾಗದೆ ನೋವಿನಿಂದ ನರಳುವಂತಾಗಿದೆ. ಇವರು ಕಂಜೆಸ್ಟಿವ್ ಹೆಪಟಾಮೆಗಾಲಿ ಎಂಬ ತೊಂದರೆಯಿಂದ ಬಳಲುತ್ತಿದ್ದಾರೆ. ಈ ಕಾರಣದಿಂದಲೇ ಅವರ ಹೊಟ್ಟೆ 10 ಕೆಜಿಯಷ್ಟು ಊದಿಕೊಂಡಿದೆ. ಈ ತೊಂದರೆಯಿಂದಾಗಿ 21 ವರ್ಷದ ಬಿಕಾಶ್ ಕಳೆದ 5 ವರ್ಷದಿಂದ ಒಂದು ಸಲಕ್ಕೆ ಸುಮಾರು ಒಂದೂವರೆ ಗಂಟೆಯ ಕಾಲ ಕುಳಿತ ಸ್ಥಿತಿಯಲ್ಲೇ ನಿದ್ದೆ ಮಾಡುವಂತಾಗಿದೆ.

    ಚಿಕಿತ್ಸೆಗೆ ಈಗಾಗಲೇ ತಡವಾಗಿದೆ ಎಂದು ಭಾವಿಸಿರೋ ಬಿಕಾಶ್ ಸದ್ಯ ಬದುಕುವ ಎಲ್ಲಾ ಆಸೆಯನ್ನ ಬಿಟ್ಟಿದ್ದಾರೆ. ಪ್ರತಿದಿನ ನರಳಾಡುತ್ತಿರುವುದರಿಂದ ನಾನು ನಿಧಾನವಾಗಿ ಸಾಯ್ತಿದ್ದೀನಿ. ಏನೇ ಮಾಡಿದ್ರೂ ನೋವನ್ನ ದೂರ ಮಾಡೋಕೆ ಆಗ್ತಿಲ್ಲ ಎಂದು ಬಿಕಾಶ್ ಹೇಳಿದ್ದಾರೆ. ಸರ್ಜರಿಯಿಂದ ಬಿಕಾಶ್ ಅವರನ್ನ ಗುಣಪಡಿಸಬಹುದು. ಆದ್ರೆ ಬಿಕಾಶ್ ತಂದೆ ಗುತ್ತಿಗೆ ನೌಕರರಾಗಿದ್ದು ಸುಮಾರು 5 ಲಕ್ಷಕ್ಕೂ ಮೀರಿದ ಚಿಕಿತ್ಸಾ ವೆಚ್ಛವನ್ನ ಭರಿಸಲು ಕುಟುಂಬಕ್ಕೆ ಸಾಧ್ಯವಿಲ್ಲ.

    ಬಿಕಾಶ್‍ಗೆ ಇದರ ಲಕ್ಷಣ ಕಾಣಿಸಿಕೊಂಡಾದ ಸ್ಥಳೀಯ ವೈದ್ಯರು ಸಣ್ಣ ಇನ್ಫೆಕ್ಷನ್ ಎಂದು ಹೇಳಿ ಕೆಲವು ವಾರ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು. ಆದ್ರೆ ಅದು ಉಲ್ಭಣಿಸಿದ ನಂತರ ಬಿಕಾಶ್ ಅವರ ಔಷಧಿಗಾಗಿ ಕುಟುಂಬದವರು ಮನೆಯನ್ನೇ ಮಾರಬೇಕಾಯ್ತು. ಇದೀಗ ಶಸ್ತ್ರಚಿಕಿತ್ಸೆಗೆ ಹಣವಿಲ್ಲದ ಕಾರಣ ಬಿಕಾಶ್ ಬದುಕುವ ಯಾವುದೇ ಭರವಸೆಯನ್ನ ಇಟ್ಟುಕೊಂಡಿಲ್ಲ.