Tag: assassins

  • ಕೋರ್ಟ್ ಬಳಿ ಉದಯಪುರ ಟೈಲರ್ ಹಂತಕರ ಬಟ್ಟೆ ಹರಿದು ಥಳಿಸಿದ ಪ್ರತಿಭಟನಾಕಾರರು

    ಕೋರ್ಟ್ ಬಳಿ ಉದಯಪುರ ಟೈಲರ್ ಹಂತಕರ ಬಟ್ಟೆ ಹರಿದು ಥಳಿಸಿದ ಪ್ರತಿಭಟನಾಕಾರರು

    ಜೈಪುರ: ಟೈಲರ್ ಕನ್ಹಯ್ಯ ಲಾಲ್ ಅವರನ್ನು ಭೀಕರವಾಗಿ ಹತ್ಯೆಗೈದ ಹಂತಕರ ಮೇಲೆ ಜೈಪುರ ನ್ಯಾಯಾಲಯದ ಬಳಿ ದೊಡ್ಡ ಗುಂಪೊಂದು ಶನಿವಾರ ದಾಳಿ ನಡೆಸಿದೆ.

    ಜೈಪುರ ನ್ಯಾಯಾಲಯದ ಹೊರಗೆ ಗುಂಪೊಂದು ಉದಯಪುರ ಟೈಲರ್ ಹಂತಕರ ಮೇಲೆ ಹಲ್ಲೆ ನಡೆಸಿ, ಬಟ್ಟೆಯನ್ನೆಲ್ಲಾ ಹರಿದು ಹಾಕಿದ್ದಾರೆ. ಪೊಲೀಸರು ತಕ್ಷಣ ಆರೋಪಿಗಳನ್ನು ಪೊಲೀಸ್ ವ್ಯಾನ್‌ಗೆ ಹತ್ತಿಸಿ, ಅವರನ್ನು ರಕ್ಷಿಸಿದ್ದಾರೆ.

    ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಮಂಗಳವಾರ ಇಬ್ಬರು ಪಾತಕಿಗಳು ಭೀಕರವಾಗಿ ಹತ್ಯೆ ನಡೆಸಿ, ಅದರ ವೀಡಿಯೋವನ್ನೂ ಮಾಡಿದ್ದರು. ಬಳಿಕ ಅವರು ಹತ್ಯೆಗೆ ಬಳಸಿದ ಆಯುಧದಿಂದಲೇ ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಯನ್ನೂ ನಡೆಸುವುದಾಗಿ ಬೆದರಿಕೆ ಹಾಕಿದ್ದರು. ಆ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಇದನ್ನೂ ಓದಿ: ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ – 14 ದಿನ ನ್ಯಾಯಾಂಗ ಬಂಧನ

    ವೀಡಿಯೋ ವೈರಲ್ ಆಗುತ್ತಿದ್ದಂತೆ ದೇಶಾದ್ಯಂತ ಬೆಚ್ಚಿ ಬಿದ್ದ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಹಂತಕರಾದ ಅಖ್ತಾರಿ ಹಾಗೂ ಮೊಹಮ್ಮದ್‌ನನ್ನು ಪೊಲೀಸರು ಬಂಧಿಸಿದ್ದರು. ಹತ್ಯೆಯಲ್ಲಿ ಭಾಗಿಯಾಗಿದ್ದ ಹಾಗೂ ಸಂಚು ರೂಪಿಸಿದ್ದ ಆರೋಪದ ಮೇಲೆ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ.

    Udaipur

    ನಾಲ್ಕೂ ಆರೋಪಿಗಳನ್ನು ಇಂದು ಜೈಪುರದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಆದರೂ ಆರೋಪಿಗಳ ಮೇಲೆ ಸ್ಥಳದಲ್ಲಿ ನೆರೆದಿದ್ದ ಗುಂಪು ಹಲ್ಲೆ ನಡೆಸಲು ಮುಂದಾಗಿದೆ. ಇದರೊಂದಿಗೆ ಕನ್ಹಯ್ಯ ಹಂತಕರಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕರೊಂದಿಗೆ ಟೈಲರ್‌ ಹಂತಕರಿರೋ ಫೋಟೋ ವೈರಲ್‌ – BJPಗೂ ಹಂತಕರಿಗೂ ಇದ್ಯಾ ನಂಟು?

    Live Tv

  • ಹರ್ಷನ ಕೊಲೆಗೆ ಹಂತಕರು ಸ್ವತಃ ಕುಲುಮೆಯಲ್ಲಿ ಕುಳಿತು ಮಚ್ಚು ರೆಡಿ ಮಾಡಿಸಿದ್ರು!

    ಹರ್ಷನ ಕೊಲೆಗೆ ಹಂತಕರು ಸ್ವತಃ ಕುಲುಮೆಯಲ್ಲಿ ಕುಳಿತು ಮಚ್ಚು ರೆಡಿ ಮಾಡಿಸಿದ್ರು!

    ಶಿವಮೊಗ್ಗ: ಹರ್ಷನ ಕೊಲೆಗೆ ಹಂತಕರೇ ಸ್ವತಃ ಕುಲುಮೆಯಲ್ಲಿ ಕುಳಿತುಕೊಂಡು ಕುಲುಮೆಯವನಿಗೆ ಸೂಚನೆ ನೀಡಿ ಮಚ್ಚು ರೆಡಿ ಮಾಡಿಸಿದ್ದರು. ಹರ್ಷ ಕೊಲೆಗೆ ಮೊದಲೇ ಪ್ಲಾನ್ ಮಾಡಿದ್ರಾ ಎಂಬ ಶಂಕೆ ಬರುತ್ತಿದೆ.

    ಹರ್ಷ ಕೊಲೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದು, ಒಂದೊಂದೇ ಸತ್ಯ ತೆರೆದುಕೊಳ್ಳುತ್ತಿದೆ. ಈ ನಡುವೆ ಹರ್ಷನ ಕೊಲೆಗೆ ಸ್ವತಃ ಹಂತಕರೇ ಕುಲುಮೆಯಲ್ಲಿ ಕುಳಿತುಕೊಂಡು ಕುಲುಮೆಯವನಿಗೆ ನಿರ್ದೇಶನ ನೀಡಿ ಮಚ್ಚು ತಯಾರಿ ಮಾಡಿಸಿದ್ದರು. ಈ ಹಂತಕರು ಹರ್ಷನ ಕೊಲೆಗೆ 3 ಮಚ್ಚುಗಳನ್ನು ರೆಡಿ ಮಾಡಿಸಿದ್ದರು. ಭಾನುವಾರ ಮುಂಜಾನೆಯೇ ಭದ್ರಾವತಿಯ ಕುಲುಮೆಯೊಂದರಲ್ಲಿ ಸ್ವತಃ ನಾಲ್ವರು ಹಂತಕರು ಕುಳಿತುಕೊಂಡು ಇದನ್ನು ರೆಡಿ ಮಾಡಿಸಿದ್ದಾರೆ. ಇದನ್ನೂ ಓದಿ:  ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?

    ಹಂತಕರು ಮಚ್ಚುಗಳು ಹೀಗೆಯೇ ಇರಬೇಕು. ಇಷ್ಟೇ ಉದ್ದ ಇರಬೇಕು. ಇಷ್ಟೇ ಹರಿತವಾಗಿ ಇರಬೇಕು ಎಂದು ಹೇಳಿ ಮಾಡಿಸಿದ್ದಾರೆ. ಮೂರು ಮಚ್ಚುಗಳನ್ನು ತಯಾರಿಸಲು 1,200 ರೂ. ಹಣ ಖರ್ಚು ಮಾಡಿದ್ದಾರೆ. ಹರ್ಷನ ಕೊಲೆ ಮಾಡಲು ಈ ಮೊದಲೇ ನಿರ್ಧರಿಸಿದ್ದರಿಂದ ಭಾನುವಾರ ಮುಂಜಾನೆ ಮಚ್ಚು ರೆಡಿ ಮಾಡಿಸಿದ್ದರು. ಭಾನುವಾರ ರಾತ್ರಿ ಹರ್ಷನನ್ನು ಕೊಲೆ ಮಾಡಲಾಗಿದೆ.

    ಹಂತಕರು ಭಾನುವಾರ ಸಂಜೆ ಕಾರಿನಲ್ಲಿ ಕುಳಿತುಕೊಂಡು ಹರ್ಷನ ಚಲನವಲನ ಗಮನಿಸಿದ್ದಾರೆ. ಹರ್ಷ ಸೀಗೆಹಟ್ಟಿ ಬಡಾವಣೆಯಲ್ಲಿ ನಡೆದುಕೊಂಡು ಬರುತ್ತಿರುವಾಗ, ಹಂತಕರು ಅವನನ್ನು ಕಾರಿನಲ್ಲಿ ಕುಳಿತು ಗಮನಿಸಿದ್ದಾರೆ. ನಂತರ ಸೀಗೆಹಟ್ಟಿಯ ಹಲವೆಡೆ ಕಾರಿನಲ್ಲಿ ಓಡಾಟ ನಡೆಸಿದ್ದ ಹಂತಕರು, ಹರ್ಷನ ಕೊಲೆ ಮಾಡುವ ಮೊದಲು ಒಂದು ಕಾರು ಬಳಕೆ ಮಾಡಿದ್ದಾರೆ. ಹರ್ಷನ ಕೊಲೆ ಮಾಡಿದ ನಂತರ ಎಸ್ಕೇಪ್ ಆಗಲು ಮತ್ತೊಂದು ಕಾರು ಬಳಕೆ ಮಾಡಿದ್ದಾರೆ. ಇದನ್ನೂ ಓದಿ:  BJP, RSS ನಾಯಕರ ಮಾಹಿತಿಯನ್ನು SDPIಗೆ ಕೊಟ್ಟ ಪೊಲೀಸ್ ಅಮಾನತು!

    ಹರ್ಷ ಒಬ್ಬನೇ ಇರುವುದು ಗಮನಿಸಿದ ಹಂತಕರು, ಸೀಗೆಹಟ್ಟಿ ಬಳಿ ಮಚ್ಚು ಹಿಡಿದುಕೊಂಡು ಕಾರಿನಿಂದ ಕೆಳಗೆ ಇಳಿದಿದ್ದಾರೆ. ಹಂತಕರು ಕಾರಿನಿಂದ ಕೆಳಗೆ ಇಳಿಯುತ್ತಿದ್ದ ಹಾಗೆ ಆ ಸ್ಥಳದಿಂದ ಕಾರು ಹೊರಟು ಹೋಗಿದೆ. ಹರ್ಷನ ಕೊಲೆಯ ನಂತರ ಓಡಿ ಹೋಗಿ ಮತ್ತೊಂದು ಕಾರು ಹತ್ತಿಕೊಂಡು ಪರಾರಿಯಾಗಿದ್ದಾರೆ.

  • ಐವರು ಯೋಧರನ್ನು ಬಲಿ ಪಡೆದಿದ್ದ ಜೈಷ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ

    ಐವರು ಯೋಧರನ್ನು ಬಲಿ ಪಡೆದಿದ್ದ ಜೈಷ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ

    ಶ್ರೀನಗರ: ಭಾರತೀಯ ಸೇನೆ ಅನಂತ್‍ನಾಗ್‍ನ ಬಿಜ್‍ಬೆಹರಾ ಪ್ರದೇಶದಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ.

    ಘಟನೆ ಕುರಿತು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದು, ಜೈಷ್-ಇ-ಮೊಹಮ್ಮದ್ ಸಂಘಟನೆಯ ಫಯಾಜ್ ಪಂಝೂ ಹಾಗೂ ಆತನ ಸಹಚರ ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿ ವೇಳೆ ಹತರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

    ಪಂಝೂ ಜೈಷ್ ಸಂಘಟನೆಯ ಉನ್ನತ ಕಮಾಂಡರ್ ಆಗಿದ್ದು, ಪದೇ ಪದೆ ಸಿಆರ್‍ಪಿಎಫ್ ಯೋಧರ ಮೇಲೆ ದಾಳಿ ನಡೆಸುತ್ತಿದ್ದ. ಈ ಮೂಲಕ ಯೋಧರ ಮೇಲೆ ದಾಳಿ ನಡೆಸುವದನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದ. ಜೂನ್ 12 ರಂದು ಅನಂತ್‍ನಾಗ್ ನಗರದ ಬಳಿ ಸಿಆರ್‍ಪಿಎಫ್ ಯೋಧರ ಮೇಲೆ ದಾಳಿ ನಡೆಸಿ 5 ಸಿಆರ್‍ಪಿಎಫ್ ಯೋಧರನ್ನು ಹತ್ಯೆಗೈದಿದ್ದ. ಅಲ್ಲದೆ, ಇದೇ ಸಂದರ್ಭದಲ್ಲಿ ಯೋಧ ಶೋ ಅರ್ಷದ್ ಖಾನ್ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಮಾಹಿತಿ ನೀಡಿದ್ದಾರೆ.

    ಸೈನಿಕರ ಮೇಲೆ ಪದೆ ಪದೇ ದಾಳಿ ನಡೆಸುತ್ತಿದ್ದ ಈ ಇಬ್ಬರನ್ನು ಇಂದು ನಡೆದ ಎನ್‍ಕೌಂಟರ್‍ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

  • ಶೀಘ್ರವೇ ಗೌರಿ ಹತ್ಯೆ ಆರೋಪಿಗಳು ಅರೆಸ್ಟ್: ರಾಮಲಿಂಗಾರೆಡ್ಡಿ

    ಶೀಘ್ರವೇ ಗೌರಿ ಹತ್ಯೆ ಆರೋಪಿಗಳು ಅರೆಸ್ಟ್: ರಾಮಲಿಂಗಾರೆಡ್ಡಿ

    ಚಿಕ್ಕಬಳ್ಳಾಪುರ: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ಬಹುತೇಕ ಮುಗಿದಿದ್ದು ಸದ್ಯದಲ್ಲೇ ಹಂತಕರನ್ನು ಬಂಧಿಸುತ್ತೇವೆಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    ಇಂದಿರಾ ನಮನ ಕಾರ್ಯಕ್ರಮದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಕೂಡ ಸಾಕಷ್ಟು ಬಾರಿ ಹೇಳಿದ್ದೇನೆ. ತನಿಖೆ ಮಾಡಲಾಗಿದ್ದು, ಹಂತಕರು ಯಾರು ಅಂತ ತಿಳಿದಿದೆ. ಶೀಘ್ರದಲ್ಲೇ ಆರೋಪಿಗಳು ಯಾರು ಅಂತ ಪ್ರಕಟಿಸಲಾಗುತ್ತೆ. 100 ಕ್ಕೆ 100 ರಷ್ಟು ಹಂತಕರನ್ನ ಬಂಧಿಸುತ್ತೇವೆ. ಆರೋಪಿಗಳ ಬಂಧನಕ್ಕೆ ಇನ್ನೂ ಸ್ವಲ್ಪ ದಿನಗಳ ಕಾಲ ಕಾಯಬೇಕು ಎಂದರು.

    ರಾಜ್ಯದ 30 ಜಿಲ್ಲೆಗಳಲ್ಲೂ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಲ್ಲಾ ಅಗತ್ಯ ಕ್ರಮಗಳನ್ನ ಕೈಗೊಂಡಿದೆ ಎಂದು ಹೇಳಿದ್ದಾರೆ.

    https://youtu.be/L8QXSCaOqbM