Tag: Assembly elections 2019

  • ಮತಗಟ್ಟೆ ಸಮೀಕ್ಷೆಗಳಲ್ಲೂ ಬಿಜೆಪಿಗೆ ಬಹುಮತ – ಮಹಾರಾಷ್ಟ್ರ, ಹರ್ಯಾಣದಲ್ಲಿ ಮತ್ತೆ ಗದ್ದುಗೆ

    ಮತಗಟ್ಟೆ ಸಮೀಕ್ಷೆಗಳಲ್ಲೂ ಬಿಜೆಪಿಗೆ ಬಹುಮತ – ಮಹಾರಾಷ್ಟ್ರ, ಹರ್ಯಾಣದಲ್ಲಿ ಮತ್ತೆ ಗದ್ದುಗೆ

    ನವದೆಹಲಿ: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಅಂತ್ಯವಾಗಿದ್ದು, ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ಗುಟ್ಟು ಇವಿಯಂ ಯಂತ್ರದಲ್ಲಿ ಲಾಕ್ ಆಗಿದೆ. ಅಕ್ಟೋಬರ್ 24ರಂದು ಎರಡು ರಾಜ್ಯಗಳ ಚುಣಾವಣೆ ಫಲಿತಾಂಶ ಹೊರ ಬೀಳಲಿದೆ. ಚುನಾವಣೋತ್ತರ ಸಮೀಕ್ಷೆಗಳು ಹೊರ ಬಂದಿದ್ದು, ಎರಡು ರಾಜ್ಯಗಳಲ್ಲಿ ಮತ್ತೊಮ್ಮೆ ಕೇಸರಿ ರಣ ಕಹಳೆ ಮೊಳಗಲಿದೆ ಎಂದು ಸಮೀಕ್ಷೆಗಳು ಸ್ಪಷ್ಟವಾಗಿ ಹೇಳುತ್ತಿವೆ.

    ಲೋಕಸಭಾ ಚುನಾವಣೆ ಬಳಿಕ ಮೊದಲ ವಿಧಾನಸಭಾ ಚುನಾವಣೆ ಇದಾಗಿದ್ದು, ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪ್ರತಿಷ್ಠೆಯ ಕಣವಾಗಿತ್ತು. ಇತ್ತ ಕಾಂಗ್ರೆಸ್ ಗೆ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಶ್ನೆ ಎದುರಾಗಿತ್ತು. ಎರಡು ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮತದಾರರನ್ನು ಸೆಳೆಯುವ ಪ್ರಯತ್ನವನ್ನು ಮಾಡಿದ್ದವು. ಸಮೀಕ್ಷೆಗಳು ಮಾತ್ರ ಮತ್ತೊಮ್ಮೆ ಮೋದಿ- ಅಮಿತಾ ಶಾ ಜೋಡಿಯೇ ಮೇಲುಗೈ ಸಾಧಿಸಲಿವೆ ವಿಚಾರವನ್ನು ಸಮೀಕ್ಷೆಗಳ ಅಂಕಿಗಳು ಸ್ಪಷ್ಟಪಡಿಸುತ್ತಿವೆ.

    ಇಂಡಿಯಾ ಟುಡೇ:
    ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಅಧಿಕಾರ ಹಿಡಿಯಲಿದೆ. ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ 109-124, ಶಿವಸೇನೆ 57-40, ಕಾಂಗ್ರೆಸ್ 32-40, ಎನ್‍ಸಿಪಿ 40-50, ವಿಬಿಎ 0-2 ಮತ್ತು ಇತರರು 22-32 ಕ್ಷೇತ್ರಗಳಲ್ಲಿ ಗೆಲುವನ್ನು ದಾಖಲಿಸಬಹುದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ. ಇಂಡಿಯಾ ಟುಡೇ ಪ್ರಕಾರ ಹರ್ಯಾಣದಲ್ಲಿ ಬಿಜೆಪಿ 77, ಕಾಂಗ್ರೆಸ್ 11 ಮತ್ತು ಇತರರು 1 ಕ್ಷೇತ್ರದಲ್ಲಿ ಗೆಲುವು ದಾಖಲಿಸುವ ಸಾಧ್ಯತೆಗಳಿವೆ.

    2014ರಲ್ಲಿ ನಡೆದ ಚುನಾವಣೆ ವೇಳೆ ಬಿಜೆಪಿ ಮತ್ತು ಶಿವಸೇನೆ 185 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿ ಸರ್ಕಾರ ರಚನೆ ಮಾಡಿದ್ದವು. ಕಾಂಗ್ರೆಸ್ 83 ಮತ್ತು ಪಕ್ಷೇತರ ಅಭ್ಯರ್ಥಿಗಳು 20 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರು. ಹರ್ಯಾಣದಲ್ಲಿ ನಡೆದ 2014ರ ಚುನಾವಣೆಯಲ್ಲಿ ಬಿಜೆಪಿ 47, ಕಾಂಗ್ರೆಸ್ 15 ಮತ್ತು ಇತರರು 28 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು.

    ಇಂದು ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.55.31 ಮತ್ತು ಹರ್ಯಾಣದಲ್ಲಿ ಶೇ.61.62ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದ 288, ಹರ್ಯಾಣದ 90 ಮತ್ತು ವಿವಿಧ ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಬಹುತೇಕ ಎಲ್ಲ ಕಡೆಯೂ ಶಾಂತಿಯುತ ಮತದಾನವಾಗಿದೆ ಎಂದು ವರದಿಯಾಗಿದೆ.

    ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆದಿದೆ. ಸಂಜೆ ಆರು ಗಂಟೆಗೆ ಒಟ್ಟು ಶೇ.55.31 ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮೈತ್ರಿ ಮತ್ತು ಕಾಂಗ್ರೆಸ್,ಎನ್‍ಸಿಪಿ ಮೈತ್ರಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಎಲ್ಲ ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರದಲ್ಲಿ ಭದ್ರವಾಗಿದೆ.

    ದೇಶದ ವಿವಿಧ ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇಂದು ಉಪ ಚುನಾವಣೆ ನಡೆದಿದೆ. ಗುಜರಾತ-6, ಅಸ್ಸಾಂ-4, ಹಿಮಾಚಲ ಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ ಎರಡು, ಉತ್ತರ ಪ್ರದೇಶದ 11 ಕ್ಷೇತ್ರಗಳಲ್ಲಿ ಇಂದು ಉಪ ಚುನಾವಣೆ ನಡೆದಿದೆ. ಪಂಜಾಬ್-4, ಕೇರಳ-5, ಸಿಕ್ಕಿಂ-3, ರಾಜಸ್ಥಾನ-2, ಮಧ್ಯ ಪ್ರದೇಶ, ಓಡಿಸ್ಸಾ, ಛತ್ತೀಸಗಢ, ಪುದುಚೇರಿ, ಮೇಘಾಲಯ ಮತ್ತು ತೆಲಂಗಾಣದಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿದೆ.

    ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೂ ಇಂದು ಚುನಾವಣೆ ನಡೆದಿದ್ದು, ಸಂಜೆ 6ಗಂಟೆವರೆಗೆ ಶೇ.61.62ರಷ್ಟು ಮತದಾನವಾಗಿದೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಇಂಡಿಯನ್ ನ್ಯಾಶನಲ್ ಲೋಕ್ ದಳದಿಂದ ಬೇರೆಯಾಗಿರುವ ಜೆಜೆಪಿ ಅಭ್ಯರ್ಥಿಗಳು ಕೆಲವು ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿ ನೀಡಲಿದ್ದಾರೆ. ಒಂದು ಹರ್ಯಾಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

  • ಮಹಾರಾಷ್ಟ್ರದಲ್ಲಿ ಶೇ.60.05, ಹರ್ಯಾಣ ಶೇ.65ರಷ್ಟು ಮತದಾನ

    ಮಹಾರಾಷ್ಟ್ರದಲ್ಲಿ ಶೇ.60.05, ಹರ್ಯಾಣ ಶೇ.65ರಷ್ಟು ಮತದಾನ

    ನವದೆಹಲಿ: ಇಂದು ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.60.05 ಮತ್ತು ಹರ್ಯಾಣದಲ್ಲಿ ಶೇ.65 ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದ 288, ಹರ್ಯಾಣದ 90 ಮತ್ತು ವಿವಿಧ ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಬಹುತೇಕ ಎಲ್ಲ ಕಡೆಯೂ ಶಾಂತಿಯುತ ಮತದಾನವಾಗಿದೆ ಎಂದು ವರದಿಯಾಗಿದೆ.

    ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆದಿದೆ. ಸಂಜೆ ಆರು ಗಂಟೆಗೆ ಒಟ್ಟು ಶೇ.60.05 ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮೈತ್ರಿ ಮತ್ತು ಕಾಂಗ್ರೆಸ್,ಎನ್‍ಸಿಪಿ ಮೈತ್ರಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಎಲ್ಲ ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರದಲ್ಲಿ ಭದ್ರವಾಗಿದೆ.

    ದೇಶದ ವಿವಿಧ ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇಂದು ಉಪ ಚುನಾವಣೆ ನಡೆದಿದೆ. ಗುಜರಾತ-6, ಅಸ್ಸಾಂ-4, ಹಿಮಾಚಲ ಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ ಎರಡು, ಉತ್ತರ ಪ್ರದೇಶದ 11 ಕ್ಷೇತ್ರಗಳಲ್ಲಿ ಇಂದು ಉಪ ಚುನಾವಣೆ ನಡೆದಿದೆ. ಪಂಜಾಬ್-4, ಕೇರಳ-5, ಸಿಕ್ಕಿಂ-3, ರಾಜಸ್ಥಾನ-2, ಮಧ್ಯ ಪ್ರದೇಶ, ಓಡಿಸ್ಸಾ, ಛತ್ತೀಸಗಢ, ಪುದುಚೇರಿ, ಮೇಘಾಲಯ ಮತ್ತು ತೆಲಂಗಾಣದಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿದೆ.

    ಪುಣೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮತದಾನದ ಹಕ್ಕನ್ನು ಚಲಾಯಿಸಿದರು. ಮುಂಬೈನಲ್ಲಿ ಬಾಲಿವುಡ್ ಸ್ಟಾರ್ ಗಳಾದ ಸಲ್ಮಾನ್ ಖಾನ್, ಶಾರೂಖ್ ಖಾನ್, ಅಮೀರ್ ಖಾನ್, ದೀಪಿಕಾ ಪಡುಕೋಣೆ, ಅಭಿಷೇಕ್ ಬಚ್ಚಬ್, ಅಮಿತಾಬ್ ಬಚ್ಚನ್, ಐಶ್ವರ್ಯ ರೈ ಸೇರಿದಂತೆ ಬಹುತೇಕ ಗಣ್ಯರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾದರು.

    ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೂ ಇಂದು ಚುನಾವಣೆ ನಡೆದಿದ್ದು, ಸಂಜೆ 6ಗಂಟೆವರೆಗೆ ಶೇ.65ರಷ್ಟು ಮತದಾನವಾಗಿದೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಇಂಡಿಯನ್ ನ್ಯಾಶನಲ್ ಲೋಕ್ ದಳದಿಂದ ಬೇರೆಯಾಗಿರುವ ಜೆಜೆಪಿ ಅಭ್ಯರ್ಥಿಗಳು ಕೆಲವು ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿ ನೀಡಲಿದ್ದಾರೆ. ಒಂದು ಹರ್ಯಾಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.