ಬೆಂಗಳೂರು: ವಿಧಾನಸಭೆ ಸಭಾಂಗಣದೊಳಗೆ ಟೀ ಕಾಫಿ ವ್ಯವಸ್ಥೆ ಮಾಡುವ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ (Arvind Bellad) ವಿರೋಧ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಎದ್ದುನಿಂತು ಆಕ್ಷೇಪ ವ್ಯಕ್ತಪಡಿಸಿದ ಅರವಿಂದ ಬೆಲ್ಲದ್, ಅಧ್ಯಕ್ಷರೇ, ಸದನದ ಒಳಗೆ ಟೀ ಕಾಫಿ ವ್ಯವಸ್ಥೆ ಮಾಡುತ್ತೀರಿ ಎಂದು ವರದಿ ಬರುತ್ತಿದೆ, ಇದು ಬೇಡ, ಸರಿಯಲ್ಲ ಎಂದರು. ಆಗ ಸ್ಪೀಕರ್ (UT Khader) ತಿರುಗೇಟು ನೀಡಿ ಏನ್ರೀ, ಅದನ್ನ ಇಲ್ಲಿ ಚರ್ಚೆ ಮಾಡೋದಾ? ನನ್ನ ಕೊಠಡಿಗೆ ಬಂದು ಮಾತಾಡಿ. ಬೇಡ ಅಂದ್ರೆ ಬೇಡ, ಮುಗೀತು ಬಿಡಿ. ಕುಳಿತುಕೊಳ್ಳಿ ಎಂದು ಸೂಚಿಸಿದರು. ಇದನ್ನೂ ಓದಿ: ಕಮ್ಯೂನಲ್ ಕ್ರಿಮಿನಲ್ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ: ಸಿ.ಟಿ.ರವಿ
ಇನ್ನು ಇದಕ್ಕೂ ಮುನ್ನ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸ್ಪೀಕರ್, ನಾನೊಬ್ಬ ಸಭಾಧ್ಯಕ್ಷನಾಗಿ ಶಾಸಕರಿಗೆ ವ್ಯವಸ್ಥೆ ಮಾಡೋದು ನನ್ನ ಕೆಲಸ. ಶಾಸಕರನ್ನ ವೈರಿಗಳಂತೆ ನೋಡಬೇಡಿ. ಶಾಸಕರು ಎಲ್ಲಾ ವಯಸ್ಸಿನವರು ಇದ್ದಾರೆ. ದೂರದ ಹೊಟೆಲ್, ಶಾಸಕರ ಭವನಕ್ಕೆ ಹೋಗಿ ರೆಸ್ಟ್ ತೆಗೆದುಕೊಳ್ಳುವ ಬದಲು ಇಲ್ಲಿಯೇ ವ್ಯವಸ್ಥೆ ಮಾಡಿದರೆ ಅನುಕೂಲ ಎಂದು ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆಗೆ 4 ಲಕ್ಷ ಮೌಲ್ಯ ಆಗಬಹುದು, ದೊಡ್ಡ ಮಟ್ಟದ ಹಣ ಬೇಕಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ 430ನೇ ಜನ್ಮದಿನ ಸಂಭ್ರಮ – ನೂರಾರು ಕಲಾವಿದರಿಂದ ನಾದಹಾರ ಸೇವೆ
ಸದನದಲ್ಲಿ ಹೆಚ್ಚಾಗಿ ಶಾಸಕರು ಪಾಲ್ಗೊಳ್ಳಲಿ ಎಂದು ವ್ಯವಸ್ಥೆ ಮಾಡಿದ್ದೇವೆ. ಈಗಾಗಲೇ ಸದನದ ಒಳಗೆ ಶಾಸಕರಿಗೆ ನೀರಿನ ವ್ಯವಸ್ಥೆ ಮಾಡಿದ್ದೇವೆ. ಟೀ- ಕಾಫಿ ವ್ಯವಸ್ಥೆ ಬಗ್ಗೆಯೂ ಚಿಂತಿಸಿದ್ದೇವೆ. ಶಾಸಕರಿಗೆ ಕ್ಲಬ್ ವ್ಯವಸ್ಥೆ ಬಗ್ಗೆ ಸಿದ್ಧತೆ ಮಾಡುತ್ತಿದ್ದೇವೆ. ಆದಷ್ಟು ಬೇಗ ಕೆಲಸ ಮಾಡುತ್ತೇವೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ನನ್ನನ್ನು ಎಲ್ಲರೂ ಸೇರಿ ಟ್ರ್ಯಾಪ್ ಮಾಡಿದ್ರು.. ಅದ್ಕೆ ಈ ರೀತಿ ಕೆಲಸ ಮಾಡಿದ್ದೇನೆ: ನಟಿ ರನ್ಯಾ ಅಳಲು
ಬೆಂಗಳೂರು: ಶಾಸಕರ ವೇತನವನ್ನು (Salary Hike) 50%ನಷ್ಟು ಹೆಚ್ಚಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ಇದರೊಂದಿಗೆ ಶಾಸಕರ ಕ್ಲಬ್ಗೆ 20 ಕೋಟಿ ರೂ. ಅನುದಾನ ನೀಡಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ.
ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ (Session) ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ 50% ಹೆಚ್ಚಾಗಲಿದೆ. ಇದರ ಜೊತೆ ಇತರೆ ಭತ್ಯೆಗಳ ಮೊತ್ತವೂ ಹೆಚ್ಚಲಿದೆ.
ಕಳೆದ ಅಧಿವೇಶನದಲ್ಲಿ ಶಾಸಕರ ವೇತನ ಹೆಚ್ಚಳ ಮಾಡುವಂತೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಪ್ರಸ್ತಾಪ ಮಾಡಿದ್ದರು. ಮಸೂದೆಗೆ ಒಪ್ಪಿಗೆ ಸಿಕ್ಕಿದರೆ ಶಾಸಕರ ವೇತನ 80 ಸಾವಿರ ರೂ.ಗೆ ಏರಿಕೆಯಾಗಲಿದೆ.
ಸದ್ಯ ಶಾಸಕರ ತಿಂಗಳ ವೇತನ/ಭತ್ಯೆ ಎಷ್ಟಿದೆ?
* ವೇತನ – 40,000 ರೂ.
* ಕ್ಷೇತ್ರ ಭತ್ಯೆ – 60,000 ರೂ.
* ಪ್ರಯಾಣ ಭತ್ಯೆ – 60,000 ರೂ
* ಆಪ್ತ ಸಹಾಯಕರ ವೇತನ – 20,000 ರೂ.
* ದೂರವಾಣಿ ವೆಚ್ಚ – 20,000 ರೂ.
* ಅಂಚೆ ವೆಚ್ಚ – 5000 ರೂ
* ಒಟ್ಟು ಮೊತ್ತ – 2,05,000 ರೂ.
ಪ್ರಸ್ತುತ ಇರುವ ಸಂಬಳ ಎಷ್ಟು?
ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಪತಿ – 75,000 ರೂ.
ಮುಖ್ಯಮಂತ್ರಿ – 75,000 ರೂ.
ಉಪ ಸ್ಪೀಕರ್ ಮತ್ತು ಉಪ ಸಭಾಪತಿ – 60,000 ರೂ.
ಕ್ಯಾಬಿನೆಟ್ ಸಚಿವರು – 60,000 ರೂ.
ವಿಪಕ್ಷ ನಾಯಕರು – 60,000 ರೂ.
ರಾಜ್ಯ ಸಚಿವ ದರ್ಜೆ – 50,000 ರೂ.
ಸರ್ಕಾರ-ವಿಪಕ್ಷ ಮುಖ್ಯ ಸಚೇತಕ -50,000 ರೂ.
ಎಂಎಲ್ಸಿ – 40,000 ರೂ.
ಬೆಂಗಳೂರು: ರೈತರ (Farmers) ಸಾಲಮನ್ನಾ (Loan waiver) ಆಗುವ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರ ನಿರಾಸೆ ಮೂಡಿಸಿದೆ. ರೈತರ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ತಿಳಿಸಿದ್ದಾರೆ.
ಸಿಟಿ ರವಿ ಮಾತನಾಡಿ, ಸಹಕಾರ ಸಂಘದಲ್ಲಿ ಸರಿಯಾಗಿ ಸಾಲ ಸೌಲಭ್ಯ ನೀಡುತ್ತಿಲ್ಲ. ಅಗತ್ಯವಾಗಿ ಸಾಲ ಬೇಕಾಗಿರುವವರಿಗೆ ಸಾಲ ಸಿಗುತ್ತಿಲ್ಲ. ತಮಗೆ ಬೇಕಾದವರಿಗೆ ಮಾತ್ರ ಸಾಲ ನೀಡುವ ವ್ಯವಸ್ಥೆ ಸಹಕಾರಿ ಬ್ಯಾಂಕುಗಳಲ್ಲಿ ಇವೆ. ಬಾಗಿಲು ಹಾಕಿಕೊಂಡು ಕಿಟಕಿಯಲ್ಲಿ ವ್ಯವಹಾರ ಮಾಡುವ ವ್ಯವಸ್ಥೆ ಸಹಕಾರಿ ಇಲಾಖೆಯಲ್ಲಿ ಇದೆ ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು. ರೈತರ ಸಾಲಮನ್ನಾ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 1 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಸರ್ಕಾರ ರೈತರ ನೆರವಿಗೆ ಬರಬೇಕು. 2023ರ ಭಾಷಣದಲ್ಲಿ ಈ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಉದ್ಯೋಗಿಗಳಿಗೆ 17,500 ರೂ. ಉಳಿತಾಯ – ಮೊದಲು ತೆರಿಗೆ ಎಷ್ಟಿತ್ತು? ಈಗ ಏನು ಬದಲಾವಣೆಯಾಗಿದೆ?
ಇದಕ್ಕೆ ಸಚಿವ ರಾಜಣ್ಣ ಉತ್ತರ ನೀಡಿ, 2024-25ರ ಸಾಲಿನಲ್ಲಿ ಜೂನ್ ಅಂತ್ಯದವರೆಗೆ ಸಹಕಾರಿ ಸಂಘಗಳು ಹೊಸದಾಗಿ ಅರ್ಜಿ ಸಲ್ಲಿಸಿದ 9,797 ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 93.49 ಕೋಟಿ ರೂ. ಬೆಳೆ ಸಾಲ ನೀಡಿದೆ. 2,815 ರೈತರಿಗೆ 138.36 ಕೋಟಿ ರೂ. ಮಧ್ಯಮ ಸಾಲ, ದೀರ್ಘಾವಧಿ ಸಾಲ ನೀಡಲಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಸಾಲಮನ್ನಾ ಮಾಡಿದೆ. ರಾಜಕೀಯಗೋಸ್ಕರ ರೈತರನ್ನು ಬಳಕೆ ಮಾಡೋದು ಬೇಡ. ಬಿಜೆಪಿ ಅವರು ಸಾಲಮನ್ನಾ ಮಾಡಿ ಎನ್ನುವ ಬದಲು ರಾಷ್ಟ್ರೀಯ ಬ್ಯಾಂಕ್ ಸಾಲಮನ್ನಾ ಕೇಂದ್ರ ಮಾಡಲಿ. ಅದನ್ನು ನೋಡಿಕೊಂಡು ನಾವು ಬೇಕಾದರೆ ಮಾಡುತ್ತೇವೆ. ಹೆಚ್ಚು ಸಾಲಮನ್ನಾ ಮಾಡಿರೋದು ಕಾಂಗ್ರೆಸ್ ಸರ್ಕಾರ. ಇದರಲ್ಲಿ ಬಿಜೆಪಿ ರಾಜಕೀಯ ಮಾಡೋದು ಬೇಡ. ಹಣಕಾಸು ಇತಿಮಿತಿಯಲ್ಲಿ ಸಾಲ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹರೀಶ್ ಪೂಂಜಾ ಗೂಂಡಾ ಎಂದ ರಾಜೇಗೌಡ: ವಿಧಾನಸಭೆಯಲ್ಲಿ ಗದ್ದಲ
ಬೆಂಗಳೂರು: ವಿಧಾನಸಭೆಯಲ್ಲಿ (Assembly Session) ಪ್ರತಿಪಕ್ಷ ನಾಯಕ ಆರ್.ಅಶೋಕ್ (R.Ashok) ವಿರುದ್ಧ ಹಕ್ಕುಚ್ಯುತಿ ಮಂಡನೆ ಪ್ರಸ್ತಾಪ ಮಾಡಲಾಗಿದೆ. ಆರ್.ಅಶೋಕ್ ನಿಂದನೆ ಮಾಡಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹಕ್ಕುಚ್ಯುತಿ ಪ್ರಸ್ತಾಪಿಸಿದರು.
ಬಡತನ, ಕಣ್ಣೀರು ಸುರಿಸಿ ನಾನು ವಿಧಾನಸಭೆಗೆ ಬಂದಿದ್ದೇನೆ. ನಾನು ಶ್ರೀಮಂತ ಕುಟುಂಬದಿಂದ ಬಂದವನಲ್ಲ. ನಾನು ಗೆದ್ದ ಕೂಡಲೇ ಹತ್ತು ಆಂಬ್ಯುಲೆನ್ಸ್ಗಳನ್ನು ಬಡವರಿಗಾಗಿ ಕೊಟ್ಟಿದ್ದೇನೆ. ನನ್ನ ಸ್ವಂತ ದುಡ್ಡಲ್ಲಿ ಜನರನ್ನು ಕಾಪಾಡುತ್ತಿದ್ದೇನೆ. ವಿರೋಧ ಪಕ್ಷದ ನಾಯಕರ ಮೇಲೆ ಗೌರವ ಇದೆ. ಅವರು ಶಾಸಕರ ಮೇಲೆ ಕೆಟ್ಟದಾಗಿ ಪದ ಬಳಕೆ ಮಾಡಿದ್ದಾರೆ. ಇದು ಸರೀನಾ ಎಂದು ಎಂದು ಪ್ರಶ್ನಿಸಿದ ಅವರು ಹಕ್ಕುಚ್ಯುತಿ ಮಂಡಿಸಿದರು. ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸೈನಿಕರಿಗೆ ಅಪಮಾನ ಮಾಡಿದ್ದಾರೆ: ಹೆಚ್ಡಿಕೆ
ಹಕ್ಕುಚ್ಯುತಿ ಮಂಡನೆ ವಿಚಾರವಾಗಿ ಆರ್.ಅಶೋಕ್ ಮಾತನಾಡಿ, ಗೌರವಾನ್ವಿತ ಪ್ರದೀಪ್ ಈಶ್ವರ್ ಅವರು ನಾನು ಅವಾಚ್ಯ ಶಬ್ಧ ಬಳಸಿದೆ ಎಂದು ಹೇಳುತ್ತಿದ್ದಾರೆ. ನಾನು ದಾಖಲೆಗಳನ್ನು ಕೇಳಿದೆ ಆ ರೀತಿ ಯಾವುದು ಇಲ್ಲ. ಪ್ರದೀಪ್ ಈಶ್ವರ್ ಬಹಳ ದೊಡ್ಡ ದೊಡ್ಡ ಮಾತಾಡಿದ್ದಾರೆ. ನಾನು ಆ ರೀತಿ ಬಳಸಿದ್ದರೆ ದಾಖಲೆಗಳನ್ನು ಕೊಡಲಿ. ಹಾಗೆ ಬಳಸಿದ್ದರೆ ತಪ್ಪು ತಪ್ಪೇ ಎಂದರು. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್ ಹಾಕಿಕೊಂಡಿದ್ದಾರೆ, ಅದರ ಬಗ್ಗೆ ಮಾತಾಡಲಿ ಎಂದು ಬಿಜೆಪಿ ಶಾಸಕರು ಇದೇ ವೇಳೆ ಟಾಂಗ್ ಕೊಟ್ಟರು.
ಬಳಿಕ ಸ್ಪೀಕರ್ ಖಾದರ್ ಮಧ್ಯ ಪ್ರವೇಶಿಸಿ ಹಕ್ಕುಚ್ಯುತಿ ಸ್ವೀಕಾರ ಮಾಡಬೇಕಾ? ಅಥವಾ ಮಾಡಬಾರದಾ? ಎಂಬ ಬಗ್ಗೆ ರೂಲಿಂಗ್ ಕಾಯ್ದಿರಿಸಿದರು. ನಾವು ಸದನದಲ್ಲಿ ನಮ್ಮ ಸ್ಟೇಟಸ್ನ್ನು ತೋರಿಸೋದು ಬೇಡ. ಅದನ್ನು ಹೊರಗೆ ಎಲ್ಲಿ ಮಾಡಬೇಕೋ ಅಲ್ಲಿ ಮಾಡೋಣ. ನಾನು ದಾಖಲೆಗಳನ್ನು ತರಿಸಿಕೊಂಡು ಪರಿಶೀಲನೆ ಮಾಡುತ್ತೇನೆ ಎಂದು ಸದನಕ್ಕೆ ತಿಳಿಸಿದರು. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ
– ಏನಿಲ್ಲ ಏನಿಲ್ಲ ಮಳೆಗಾಲಕ್ಕೆ ಪರಿಹಾರ ಏನಿಲ್ಲ, ಅನುದಾನ ಬರಲ್ಲ: ಬಿಜೆಪಿ ಲೇವಡಿ – ಬಣ್ಣ ಹಚ್ಚಿಕೊಂಡು ಕುಣಿಯಿರಿ ಅಂತ ಶಿವಲಿಂಗೇಗೌಡ ಕಿಡಿ
ಬೆಂಗಳೂರು: ವಿಧಾನಸಭೆಯ ಕಲಾಪದ (Assembly Session) ವೇಳೆ ಗದ್ದಲ ಮಾಡಿದ ಬಿಜೆಪಿ ಶಾಸಕರಿಗೆ ಇದೇನು ನಿಮ್ಹಾನ್ಸಾ ಅಥವಾ ವಿಧಾನಸಭೆನಾ? ಅಂತ ಸ್ಪೀಕರ್ ಯು.ಟಿ ಖಾದರ್ (U.T. Khader) ಗರಂ ಆದ ಪ್ರಸಂಗ ನಡೆದಿದೆ.
ವಿಧಾನಸಭೆಯಲ್ಲಿ ಗದ್ದಲದ ನಡುವೆಯೇ ಮಳೆಹಾನಿ ಚರ್ಚೆಗೆ ಸ್ಪೀಕರ್ ಅವಕಾಶ ಕೊಟ್ಟರು. ಈ ವೇಳೆ ಶಾಸಕ ಪೊನ್ನಣ್ಣ ಚರ್ಚೆ ಆರಂಭಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಶಾಸಕರು ಚಪ್ಪಾಳೆ ತಟ್ಟಿ ಘೋಷಣೆ ಕೂಗಿದರು. ಅಲ್ಲದೇ `ಏನಿಲ್ಲ ಏನಿಲ್ಲ ಮಳೆಗಾಲಕ್ಕೆ ಪರಿಹಾರ ಏನಿಲ್ಲ, ಅನುದಾನ ಬರಲ್ಲ’ ಅಂತ ಪ್ರತಿಪಕ್ಷದ ಸದಸ್ಯರು ಹಾಡು ಹೇಳಿ ಗದ್ದಲ ಎಬ್ಬಿಸಿದರು. ಈ ವೇಳೆ ಇದು ಯಾವ ನಾಟಕದ ಕಂಪನಿ? ಅಂತ ಸ್ಪೀಕರ್ ಸಿಡಿಮಿಡಿಗೊಂಡರು. ಇದನ್ನೂ ಓದಿ: ಲೋಕಾಯುಕ್ತ ದಾಳಿ ವೇಳೆ ಚಿನ್ನ ಇದ್ದ ಬ್ಯಾಗನ್ನು ಪಕ್ಕದ ಮನೆಗೆ ಎಸೆದ ಅಧಿಕಾರಿ
ಇದೇ ವೇಳೆ ಭೋವಿ ನಿಗಮದ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ (Shivalinge Gowda) ಪ್ರಸ್ತಾಪ ಮಾಡಿದರು. 220 ಕೋಟಿ ರೂ. ಅಕ್ರಮ ಮಾಜಿ ಸಿಎಂ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಕಾಲದಲ್ಲಿ ಆಗಿದೆ ಎಂದು ಪೇಪರ್ ಕಟ್ಟಿಂಗ್ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಎಲ್ಲಾ ಕಡೆ ಮಳೆಯಾಗಿ ಸಮಸ್ಯೆ ಆಗ್ತಿದೆ. ಅದನ್ನು ಬಿಟ್ಟು ಕ್ಷುಲ್ಲಕ ರಾಜಕಾರಣ ಮಾಡ್ತಿದ್ದಾರೆ, ನಾಚಿಕೆ ಆಗಬೇಕು ಇವರಿಗೆ. ವಾಲ್ಮೀಕಿ ನಿಗಮದಲ್ಲಿ ಅಚಾತುರ್ಯ ನಡೆದು ಹೋಗಿದೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸ್ತಾರೆ. ನಿಮಗೆ ನಾಚಿಕೆ, ಮಾನ ಮರ್ಯಾದೆ ಇದೆಯಾ? ತಾಕತ್ ಇದ್ದರೆ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
ಮುಂದುವರಿದು, ನಿಮ್ಮನ್ನೂ ಅಷ್ಟು ಸುಲಭವಾಗಿ ಬಿಡುವುದಿಲ್ಲ. ಲೋಕಸಭೆಯಲ್ಲಿ ವಿರೋಧ ಪಕ್ಷಗಳನ್ನು ಹೊರಗಿಟ್ಟು ಸದನ ನಡೆಸಲಿಲ್ಲವಾ? ಹಾಗೇ ಇವರನ್ನೂ ಹೊರಗೆ ಇಟ್ಟು ಸದನ ನಡೆಸಿ ಅಧ್ಯಕ್ಷರೇ. ನಿಮಗೆ ಆತ್ಮಸಾಕ್ಷಿ ಇದೆಯಾ? ನೈತಿಕತೆ ಇದೆಯಾ? ಗೌರವ ಇದೆಯಾ? ಎಲ್ಲಾ ನಿಗಮಗಳ ಅಕೌಂಟ್ನ್ನು ಸಿಎಂ ಹೋಗಿ ನೋಡೋಕೆ ಆಗುತ್ತಾ? ಸಿಎಂ ಹೇಗೆ ವಾಲ್ಮೀಕಿ ಹಗರಣದ ಜವಬ್ದಾರಿ ಆಗ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತು ಪ್ರತಿಪಕ್ಷಗಳಿಗೆ ತಿರುಗೇಟು ಕೊಟ್ಟರು.
ಬಿಜೆಪಿ ಶಾಸಕರು ಹಾಡು ಹೇಳಿದ ವಿಚಾರವಾಗಿ ಅವರು, ಬಣ್ಣ ಹಚ್ಕೊಂಡಾದ್ರೂ ಕುಣೀರಿ. ಎಲ್ಲರೂ ಬಣ್ಣ ಹಚ್ಚಿಕೊಂಡು ನಾಟಕ ಮಾಡಿದ್ರೆ, ನೀವು ಬಣ್ಣ ಹಚ್ಚದೇ ನಾಟಕ ಮಾಡ್ತೀರಿ. ನಾಟಕ ಸಾಕು ಕುಳಿತುಕೊಳ್ಳಿ ಎಂದು ಬಿಜೆಪಿ ಶಾಸಕರಿಗೆ ತಿರುಗೇಟು ಕೊಟ್ಟರು.
ಇದೇ ವೇಳೆ ಅತಿವೃಷ್ಠಿಯ ಬಗ್ಗೆ ಶಾಸಕ ಆರ್.ವಿ ದೇಶಪಾಂಡೆ ಚರ್ಚೆ ಆರಂಭಿಸಿ ಉತ್ತರಕನ್ನಡದಲ್ಲಿ ಗುಡ್ಡ ಕುಸಿತದ ಬಗ್ಗೆ ಮಾತು ಆರಂಭಿಸಿದರು. ಈ ವೇಳೆ ವಿರೋಧ ಪಕ್ಷದ ನಾಯಕ ಅಶೋಕ್ `ಏನಿಲ್ಲ ಏನಿಲ್ಲ ದೇಶಪಾಂಡೆಗೆ ಮಂತ್ರಿ ಸ್ಥಾನವಿಲ್ಲ’ ಎಂದು ಲೇವಡಿ ಮಾಡಿದರು. ಅಲ್ಲದೇ ವಾಲ್ಮೀಕಿ ಹಗರಣದ (Valmiki Corporation Scam) ಬಗ್ಗೆ ಮಾತನಾಡಿ ಎಂದು ಅವರು ಆಗ್ರಹಿಸಿದರು. ಇದನ್ನೂ ಓದಿ: ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ಇದಕ್ಕೂ ಮುನ್ನ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿ ಗರಂ ಆಗಿದ್ದರು. ಅವನು ಎಷ್ಟೇ ದೊಡ್ಡವನು ಇರಲಿ. ಅವನಿಗೆ ಏನು ಅನ್ನೋದನ್ನ ತೋರಿಸಬೇಕು. ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಎಲ್ಲಾ ಮಾಲ್ಗಳಿಗೂ ಒಂದೇ ರೂಲ್ಸ್ ಮಾಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ
ಅಲ್ಲದೆ ರಾಜ್ಯದ ಎಲ್ಲಾ ಕ್ಲಬ್ಗಳು, ಮಾಲ್ಗಳಲ್ಲಿ ಒಂದೇ ರೂಲ್ಸ್ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದನ್ನು ಬಿಡಬೇಕು ಎಂದು ಅಶೋಕ್ ಪಟ್ಟಣ, ಬೈರತಿ ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ರು. ಒಟ್ಟಾರೆಯಾಗಿ ಇಡೀ ಸದನ ಮಾಲ್ ನಡವಳಿಕೆ ಖಂಡಿಸಿ ಆಕ್ರೋಶವನ್ನು ವ್ಯಕ್ತಪಡಿಸಿತು. ಆ ಬಳಿಕ ಸರ್ಕಾರದ ಪರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ 7 ದಿನಗಳ ಕಾಲ ಮಾಲ್ ಮುಚ್ಚುವ ಘೋಷಣೆ ಮಾಡಿದರು. ಇದನ್ನೂ ಓದಿ: ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ – ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ
– 56 ಸಾವಿರ ಕಾರ್ಡ್ ಬಿಪಿಎಲ್ಗೆ ಅನರ್ಹ: ಸಚಿವ ಮುನಿಯಪ್ಪ
– ಪರಿಷತ್ನಲ್ಲಿ ನಿರೂಪಕಿ ದಿ. ಅಪರ್ಣಾ ಸೇರಿದಂತೆ ಗಣ್ಯರಿಗೆ ಸಂತಾಪ
ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ (Karnataka Assembly Session) ಇಂದಿನಿಂದ ಆರಂಭವಾಗಿದೆ. ಪರಿಷತ್ನಲ್ಲಿ ಮೊದಲ ದಿನವೇ ಹಗರಣಗಳ ಸದ್ದು ಪ್ರಸ್ತಾಪವಾಗಿದೆ. ಅಧಿವೇಶನದಲ್ಲಿ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಾಲ್ಮೀಕಿ ನಿಗಮದ ಹಗರಣ (Valmiki Corporation Corruption) ವಿಚಾರ ಪ್ರಸ್ತಾಪವಾಗಿದೆ.
ವಿಧಾನ ಪರಿಷತ್ನಲ್ಲಿ ಜೆಡಿಎಸ್ನ ಭೋಜೇಗೌಡ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಸಭಾಪತಿ ಘೋಷಣೆ ಮಾಡಿದರು. ಬಳಿಕ ನಿಯಮ 59ರ ಅಡಿ ನಿಲುವಳಿ ಸೂಚನೆಗೆ ಪ್ರಸ್ತಾಪಿಸಲಾಯಿತು.ಈ ವೇಳೆ ಬಿಜೆಪಿ ಸದಸ್ಯ ಸಿ.ಟಿ ರವಿ (CT Ravi), ವಾಲ್ಮೀಕಿ ನಿಗಮದ ಹಗರಣ ಕುರಿತು ನಿಲುವಳಿ ಮಂಡಿಸಿದರು. ಇದಕ್ಕೆ ದನಿಗೂಡಿಸಿದ ಬಿಜೆಪಿ ಸದಸ್ಯ ರವಿಕುಮಾರ್ ಸಹ ವಾಲ್ಮೀಕಿ ಹಗರಣದ 187 ಕೋಟಿ ರೂ. ಹಣವನ್ನು ಬಳ್ಳಾರಿ ಚುನಾವಣೆ (Bellary Lok Sabha Election) ಹಾಗೂ ತೆಲಂಗಾಣ ಚುನಾವಣೆಗೆ ಬಳಕೆ ಮಾಡಲಾಗಿದೆ. ದೊಡ್ಡ ಈ ಬಗ್ಗೆ ದೊಡ್ಡ ಚರ್ಚೆಗೆ ಅವಕಾಶ ಕೊಡಿ ಎಂದು ಆಗ್ರಹಿಸಿದರು.
ಇದೇ ವೇಳೆ ಸಿ.ಟಿ ರವಿ ಸಹ, 187 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಿ. ಅಹಿಂದ ರಾಜಕಾರಣ ಮಾಡೋರು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಣ ನುಂಗಿದ್ದಾರೆ. ಈ ಬಗ್ಗೆ ಚರ್ಚೆ ಆಗಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ, ನಿಯಮದ ಪ್ರಕಾರ ನಾವು ಎಲ್ಲದಕ್ಕೂ ಸಮಯ ಕೊಡುತ್ತೇವೆ. ಪ್ರಶ್ನೋತ್ತರ ಅವಧಿ ಆದ್ಮೇಲೆ ವಿಷಯ ಪ್ರಸ್ತಾಪಕ್ಕೆ ಅವಕಾಶ ಕೊಡ್ತೀನಿ ಎಂದು ಹೇಳಿದರು.
ಬಿಪಿಎಲ್ ಕಾರ್ಡ್ ವಿಚಾರ ಪ್ರಸ್ತಾಪ:
ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಆಡಳಿತ ಕಾಂಗ್ರೆಸ್ ಪಕ್ಷದ ವಿರುದ್ಧ ಮುಗಿಬಿದ್ದರು. ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನಿಟ್ಟರು. ಪಡಿತರ ಚೀಟಿ ವಿವರಣೆ ಮಾಡಿ 3 ವರ್ಷ ಆಗಿದೆ. ಇದರಿಂದ ಬಡವರಿಗೆ ತೊಂದರೆಯಾಗಿದೆ, ಕೂಡಲೇ ಸರ್ಕಾರದಿಂದ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ (BPL Card) ವಿತರಿಸುವ ಕೆಲಸ ಆಗಬೇಕು. ಬಿಪಿಎಲ್ ಕಾರ್ಡ್ ಜೊತೆಗೆ ಎಪಿಎಲ್ ಕಾರ್ಡನ್ನೂ ಕೊಡಬೇಕು. ಬಿಪಿಎಲ್ಕಾರ್ಡ್ ಮತ್ತು ಎಪಿಎಲ್ ಕಾರ್ಡ್ ನಿಂದ ಮೆಡಿಕಲ್ ಗೂ ಸಹಾಯ ಆಗಲಿದೆ. ಹೀಗಾಗಿ ಶೀಘ್ರವೇ ಪಡಿತರ ಚೀಟಿ ಕೊಡಿ ಎಂದು ಆಗ್ರಹಿಸಿರು.
1.73 ಲಕ್ಷ ಕಾರ್ಡ್ ಗಳ ಅಂತಿಮ ಹಂತದ ಪರಿಶೀಲನೆ:
ಇದಕ್ಕೆ ಉತ್ತರ ನೀಡಿದ ಸಚಿವ ಮುನಿಯಪ್ಪ, ಹಿಂದಿನ ಸರ್ಕಾರದಲ್ಲಿ ಚುನಾವಣೆಗೂ ಮುನ್ನ 2.95 ಲಕ್ಷ ಅರ್ಜಿಗಳು ಬಿಪಿಎಲ್ಗೆ ಬಂದಿದ್ದವು. ಈಪೈಕಿ 2.35 ಲಕ್ಷ ಕಾರ್ಡ್ ಬಿಪಿಎಲ್ಗೆ ಅರ್ಹತೆ ಪಡೆದಿದೆ. 56 ಸಾವಿರ ಕಾರ್ಡ್ ಬಿಪಿಎಲ್ ಅರ್ಹತೆ ಪಡೆದಿಲ್ಲ. ಅರ್ಹತೆ ಪಡೆದ 2.35 ಲಕ್ಷ ಕಾರ್ಡ್ ಪೈಕಿ 62 ಸಾವಿರ ಕಾರ್ಡ್ ಗಳಿಗೆ ಈಗಾಗಲೇ ಪಡಿತರ ಕೊಡ್ತಿದ್ದೇವೆ. ಉಳಿದ 1.73 ಲಕ್ಷ ಕಾರ್ಡ್ ಗಳ ಅಂತಿಮ ಹಂತದ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ಶೀಘ್ರವೇ ಪಡಿತರ ಕೊಡುವ ವ್ಯವಸ್ಥೆ ಮಾಡಿಸ್ತೀವಿ. ಆರೋಗ್ಯಕ್ಕೆ ಸಂಬಂಧಿಸಿದಂತೆ ಪಡಿತರ ಚೀಟಿಗೆ ಅರ್ಜಿ ಹಾಕೋರಿಗೆ ಒಂದು ವಾರದಲ್ಲಿ ಪಡಿತರ ಚೀಟಿ ಕೊಡೋ ಕೆಲಸ ಮಾಡ್ತೀವಿ ಎಂದು ಭರವಸೆ ನೀಡಿದರು.
ಅರ್ಪಣಾ ನಿಧನಕ್ಕೆ ಸಂತಾಪ:
ಪರಿಷತ್ ಕಲಾಪ ಆರಂಭಿಸುವುದಕ್ಕೂ ಇತ್ತೀಚೆಗೆ ರಾಜ್ಯದಲ್ಲಿ ನಿಧನಹೊಂದಿದ ರಾಜಕೀಯ ನಾಯಕರು ಹಾಗೂ ಗಣ್ಯಮಾನ್ಯರಿಗೆ ಸಂತಾಪ ಸೂಚಿಸಲಾಯಿತು. ಪಾಟೀಲ ಸುನಂದಾ ನಿಂಗನಗೌಡ, ಟಿ.ಕೆ.ಚಿನ್ನಸ್ವಾಮಿ, ಇಕ್ಬಾಲ್ ಅಹಮದ್ ಸರಡಗಿ, ಎಂ.ಬಿ.ಭಾನು ಪ್ರಕಾಶ್, ನಾಗಮ್ಮ, ಕೇಶವಮೂರ್ತಿ, ವಿ.ಶ್ರೀನಿವಾಸ್ ಪ್ರಸಾದ್, ಎಂ.ಪಿ ಕೇಶವಮೂರ್ತಿ, ಪಾಡ್ಡನ ಕಲಾವಿದೆ ಗಿಡಿಗೆರೆ ರಾಮಕ್ಕ, ದ್ವಾರಕೀಶ್, ಭಗಾವತ ಸುಬ್ರಮಣ್ಯ ಧಾರೇಶ್ವರ, ಪೇತ್ರಿ ಮಾಧವ ನಾಯಕ್, ಕಮಲಾ ಹಂಪನಾ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
– ಕೇಂದ್ರ ಸರ್ಕಾರ, ಬಿಜೆಪಿ ನಾಯಕರ ವಿರುದ್ಧ ಜಿ.ಟಿ. ದೇವೇಗೌಡ ವಾಗ್ದಾಳಿ
ಬೆಂಗಳೂರು: ಕೆಲ ದಿನಗಳ ಹಿಂದೆ ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (H.D.Kumaraswamy) ಪರಸ್ಪರ ವಾಗ್ಯುದ್ಧವನ್ನೇ ನಡೆಸಿದ್ದರು. ಆದರೆ ಜೆಡಿಎಸ್ (JDS) ಕೆಲ ನಾಯಕರು, ಕಾಂಗ್ರೆಸ್ (Congress) ಹಾಗೂ ಸಿದ್ದರಾಮಯ್ಯ ವಿಚಾರದಲ್ಲಿ ಸಾಫ್ಟ್ಕಾರ್ನರ್ ಹೊಂದಿದಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ (G.T.Devegowda) ಅವರು ಸದನದಲ್ಲಿ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಗ್ಯಾರಂಟಿಗಳ ಪರವಾಗಿ ಬ್ಯಾಟಿಂಗ್ ಮಾಡಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಮೇಲೆ ಮಾತನಾಡಿದ ಜಿ.ಟಿ. ದೇವೇಗೌಡ, ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಬೆಂಬಲಿಸಬೇಕಿತ್ತು. ಕೇಂದ್ರ ಅಕ್ಕಿ ಕೊಡಬೇಕಿತ್ತು, ಆದರೆ ಕೊಡಲಿಲ್ಲ. ರಾಜ್ಯ ಸರ್ಕಾರದ ತೆರಿಗೆ ಸಂಗ್ರಹದಿಂದ ಕೇಂದ್ರ ಸರ್ಕಾರ ನಡೆಯುತ್ತಿದೆ. ಅನ್ನಭಾಗ್ಯಕ್ಕೆ ಕೇಂದ್ರ ಬೆಂಬಲ ನೀಡದೆ ಇರುವುದು ಖಂಡನೀಯ. ಐದು ಗ್ಯಾರಂಟಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಬಿಜೆಪಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ, ಸರ್ಕಾರ ಐದು ಗ್ಯಾರಂಟಿ ಜಾರಿಗೆ ತಂದಿದೆ. ತಿಂಗಳಿಗೆ ಒಂದೊಂದು ಮಾಡಲಿ. ಎಲ್ಲಾ ಕಾರ್ಯಕ್ರಮ ಜಾರಿಗೆ ತರಲಿ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿರೋಧ ಪಕ್ಷದ ನಾಯಕ ಕುಮಾರಸ್ವಾಮಿ? – ಸದನದಲ್ಲಿ ಸ್ವಾರಸ್ಯಕರ ಚರ್ಚೆ
ಸಿಎಂ ಸಿದ್ದರಾಮಯ್ಯ ಪರವಾಗಿಯೂ ಜಿ.ಟಿ.ದೇವೇಗೌಡರು ಮಾತನಾಡಿದ್ದಾರೆ. ಅನ್ನಭಾಗ್ಯ ಯೋಜನೆ ಪರವಾಗಿ ಮಾತನಾಡುವಾಗ ಜಿಟಿಡಿ, ಅನ್ನಭಾಗ್ಯ ಯೋಜನೆಯ ಹಿಂದೆ ಸಿದ್ದರಾಮಯ್ಯ ಅವರ ಅನುಭವ ಇದೆ. ಬಡತನದ ಹಿನ್ನೆಲೆಯ ಸಿದ್ದರಾಮಯ್ಯ ಕುಟುಂಬದ ಬಗ್ಗೆ ನನಗೆ ಗೊತ್ತಿದೆ. ಆ ಕಾರಣಕ್ಕೆ ಸಿದ್ದರಾಮಯ್ಯ ಅನ್ನಭಾಗ್ಯ ತಂದಿದ್ದಾರೆ. ಅದಕ್ಕಾಗಿ ನಾನು ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ಅವರ ಕುಟುಂಬ, ಹೊಲ, ಗದ್ದೆ ನನಗೆ ಗೊತ್ತು. ಅವರ ತುಂಬು ಕುಟುಂಬದ ಬಗ್ಗೆಯೂ ನನಗೆ ಗೊತ್ತು ಎಂದು ಹೇಳಿದರು.
ಗಾಂಧೀನಗರ: ವಿದೇಶಾಂಗ ಸಚಿವ ಎಸ್ ಜೈಶಂಕರ್ (Jai Shankar) ಅವರು ಸೋಮವಾರ (ಇಂದು) ರಾಜ್ಯಸಭಾ ಚುನಾವಣೆಗೆ (Elections to the Rajya Sabha from Gujarat.) ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಮತ್ತು ಬಿಜೆಪಿ ಗುಜರಾತ್ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ (C. R Pateel) ಅವರು ಜೈಶಂಕರ್ ಅವರೊಂದಿಗೆ ರಾಜ್ಯ ವಿಧಾನಸಭೆ ಸಂಕೀರ್ಣಕ್ಕೆ ತೆರಳಿ ಚುನಾವಣಾಧಿಕಾರಿ ರೀಟಾ ಮೆಹ್ತಾ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಗುಜರಾತ್ನ 11 ರಾಜ್ಯಸಭಾ ಸ್ಥಾನಗಳ ಪೈಕಿ ಬಿಜೆಪಿ 8 ಸ್ಥಾನಗಳನ್ನು ಹೊಂದಿದೆ. ಉಳಿದ ಸ್ಥಾನಗಳು ಕಾಂಗ್ರೆಸ್ ಪಾಲಾಗಿವೆ. ಬಿಜೆಪಿ ಹೊಂದಿರುವ 8 ಸ್ಥಾನಗಳ ಪೈಕಿ ಜೈಶಂಕರ್, ಜುಗಲ್ಜಿ ಠಾಕೋರ್ ಮತ್ತು ದಿನೇಶ್ ಅನವಾಡಿಯಾ ಅವರ ರಾಜ್ಯಸಭಾ ಅವಧಿಯು ಆಗಸ್ಟ್ 18 ರಂದು ಮುಕ್ತಾಯಗೊಳ್ಳಲಿದೆ. ಈ ಮೂರು ಸ್ಥಾನಗಳಿಗೆ ಪ್ರಸ್ತುತ ಚುನಾವಣೆ ನಡೆಯಲಿದೆ.
2022ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 182ರಲ್ಲಿ 156 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿತ್ತು. ಕಾಂಗ್ರೆಸ್ 17 ಸ್ಥಾನಗಳನ್ನು ಪಡೆದುಕೊಂಡರೆ, ಆಪ್ ಕೇವಲ 5 ಸ್ಥಾನಗಳನ್ನು ಪಡೆದುಕೊಂಡಿತ್ತು.
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿಂದು ನಾಗಮಂಗಲದ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ ಭಾರೀ ಗದ್ದಲ, ಕೋಲಾಹಲಕ್ಕೆ ವೇದಿಕೆ ಒದಗಿಸಿತ್ತು. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಮತ್ತು ಸಿಎಂ ಸಿದ್ದರಾಮಯ್ಯ (Siddaramaiah) ನಡುವೆ ತೀವ್ರ ವಾಕ್ಸಮರ ನಡೆಯಿತು.
ನಾಗಮಂಗಲ ಕೆಎಸ್ಆರ್ಟಿಸಿ ಡಿಪೋ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ತನಿಖೆ ನಡೆಸುವಂತೆ, ಸಚಿವರ ರಾಜೀನಾಮೆ ಪಡೆಯುವಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸದನದಲ್ಲಿ ಜಂಟಿ ಹೋರಾಟ ನಡೆಸಿದರು. ಇದನ್ನೂ ಓದಿ: ಹೆಚ್ಡಿಕೆಯ ವರ್ಗಾವಣೆ ಬಾಂಬ್ಗೆ ‘ದ್ವೇಷ’ದ ಪಂಚ್ ಕೊಟ್ಟ ಸಿದ್ದರಾಮಯ್ಯ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೊದಲು ಪ್ರಕರಣದ ಬಗ್ಗೆ ಪ್ರಸ್ತಾಪಿಸಿ, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ತನಿಖೆ ಮುಗಿಯೋವರೆಗೂ ಸಚಿವ ಚೆಲುವರಾಯಸ್ವಾಮಿ ರಾಜೀನಾಮೆ ಕೊಡಬೇಕು ಅಂತ ಆಗ್ರಹಿಸಿದರು. ಬಳಿಕ ಮಧ್ಯ ಪ್ರವೇಶಿಸಿದ ಹೆಚ್ಡಿಕೆ ಸಚಿವ ಚೆಲುವರಾಯಸ್ವಾಮಿ ವಿರುದ್ಧ ತೀಕ್ಷ್ಣವಾಗಿಯೇ ವಾಗ್ದಾಳಿ ನಡೆಸಿದರು. ಈ ವೇಳೆ ಪರಸ್ಪರ ನಡುವೆ ವಾಕ್ಸಮರ ನಡೆಯಿತು. ಜಗದೀಶ್ ಆತ್ಮಹತ್ಯೆ ಯತ್ನಕ್ಕೆ ಚೆಲುವರಾಯಸ್ವಾಮಿ ಕಾರಣ ಅಂತ ಹೆಚ್ಡಿಕೆ ಆರೋಪಿಸಿದರು. ಇತ್ತ, ಮೈಸೂರು ಆಸ್ಪತ್ರೆಗೆ ಜಗದೀಶ್ ದಾಖಲು ತಡೆದಿದ್ದು ಹೆಚ್ಡಿಕೆ, ಆತನಿಗೆ ಹೆಚ್ಚು ಕಡಿಮೆ ಆದ್ರೆ ಹೆಚ್ಡಿಕೆ ಕಾರಣ ಅಂತ ಚೆಲುವರಾಯಸ್ವಾಮಿ ಕಿಡಿಕಾರಿದರು. ಒಂದು ಹಂತದಲ್ಲಿ ಇಬ್ಬರೂ ಸಹನೆ ಕಳೆದುಕೊಂಡು ಏಕವಚನದಲ್ಲೇ ಬೈದಾಡಿಕೊಂಡರು.
ಇದೇ ವೇಳೆ ಸಚಿವ ಕೆ.ಜೆ ಜಾರ್ಜ್, ಚೆಲುವರಾಯಸ್ವಾಮಿ ಪರ ರಕ್ಷಣೆಗೆ ಬಂದು ಹೆಚ್ಡಿಕೆ ವಿರುದ್ಧ ಮುಗಿಬಿದ್ದರು. ಜಾರ್ಜ್ ಮತ್ತು ಹೆಚ್ಡಿಕೆ ಮಧ್ಯೆಯೂ ಸಾಕಷ್ಟು ಜಟಾಪಟಿ ನಡೆಯಿತು. ತಾಕತ್ ಇದ್ರೆ ನಿಮ್ಮ ಬಳಿ ಇರೋ ಪೆನ್ಡ್ರೈವ್ ಕೊಡಿ ತನಿಖೆ ಮಾಡ್ತೀವಿ ಅಂತ ಜಾರ್ಜ್ ಸವಾಲು ಹಾಕಿದರು. ಇದಕ್ಕೆ ಹೆಚ್ಡಿಕೆ, ಇಲ್ಲೇ ಆಡಿಯೋ ವ್ಯವಸ್ಥೆ ಮಾಡಿ 224 ಶಾಸಕರಿಗೂ ಪೆನ್ಡ್ರೈವ್ ಆಡಿಯೋ ಕೇಳಿಸ್ತೀನಿ ಅಂತ ಪ್ರತಿ ಸವಾಲೊಡ್ಡಿದರು. ಇನ್ನೂ ಪೆನ್ಡ್ರೈವ್ನಲ್ಲಿರುವ ಸಚಿವರ ಹೆಸರೇ ಹೇಳಿಲ್ಲ. ನೀವ್ಯಾಕೆ ಮೈಪರಚಿಕೊಳ್ತೀರ ಅಂತ ಜಾರ್ಜ್ಗೆ ಹೆಚ್ಡಿಕೆ ಟಾಂಗ್ ಕೊಟ್ಟರು. ಇದನ್ನೂ ಓದಿ: ನಾನು ವರ್ಗಾವಣೆ ದಂಧೆ ನಡೆಸಿದ್ದೇನೆ ಅಂತ ಒಂದು ಪ್ರಕರಣ ತೋರಿಸಿದ್ರೆ ರಾಜಕೀಯ ನಿವೃತ್ತಿ: ಹೆಚ್ಡಿಕೆ
ಮಾತಾಡುವಾಗ ಸಿಎಂ ಸಿದ್ದರಾಮಯ್ಯರನ್ನೂ ಹೆಚ್ಡಿಕೆ ಕೆಣಕಿದರು. ಇಂದು ಬೆಳಗ್ಗೆ ಸಿದ್ದರಾಮಯ್ಯರ ಮಾಧ್ಯಮ ಹೇಳಿಕೆ ಬಗ್ಗೆ ಉಲ್ಲೇಖಿಸಿದ ಹೆಚ್ಡಿಕೆ, ಸಿದ್ದರಾಮಯ್ಯನವರು ಮಾಧ್ಯಮಗಳ ಎದುರು ದೇವೇಗೌಡರು ಕುಟುಂಬದ ಬಗ್ಗೆ ಮಾತಾಡಿದ್ದಾರೆ. ಮುಖ್ಯಮಂತ್ರಿಗಳು ಭಾರೀ ಉತ್ತರ ಕೊಟ್ಟುಬಿಟ್ಟಿದ್ದಾರೆ ಅಂತ ಕೆಲವರು ಅವರಿಗೆ ಶೇಕ್ ಹ್ಯಾಂಡ್ ಕೊಟ್ಟರು. ಇದನ್ನೆಲ್ಲ ನಾನು ಗಮನಿಸಿದ್ದೇನೆ. ದೇವೇಗೌಡರನ್ನು ನೀವು ಕುತ್ತಿಗೆ ಕುಯ್ದ್ರಿ. ಜೆಡಿಎಸ್ನ ಬಿಜೆಪಿ ‘ಬಿ’ ಟೀಮ್ ಅಂದ್ರಿ. ಈಶ್ವರಪ್ಪರಿಂದ ಸಣ್ಣ ವಿಷಯಕ್ಕೆ ರಾಜೀನಾಮೆ ತಗೊಂಡ್ರಲ್ಲ. ಈಗ ಯಾಕೆ ಚೆಲುವರಾಯಸ್ವಾಮಿ ರಾಜೀನಾಮೆ ಕೊಡ್ತಿಲ್ಲ ಅಂತ ಸಿದ್ದರಾಮಯ್ಯಗೆ ಠಕ್ಕರ್ ಕೊಟ್ಟರು. ಹೆಚ್ಡಿಕೆ ಮಾತಿಗೆ ಸಿಟ್ಟಾದ ಸಿಎಂ, ನಿಮಗೆ ಯಾರು ಹೆದರುಕೊಳ್ಳುವುದಿಲ್ಲ ಕುಮಾರಸ್ವಾಮಿಯವರೇ. ನನಗೂ ಇದಕ್ಕೂ ಏನ್ರೀ ಸಂಬಂಧ. ನನಗೆ ಇದರ ಬಗ್ಗೆ ಗೊತ್ತೇ ಇಲ್ಲ. ಯಾರಿಗೆ ನೀವು ಹೆದರಿಸ್ತೀರಿ. ನಾನು ಹೆದರಿಕೊಂಡು ರಾಜಕಾರಣ ಮಾಡಿಲ್ಲ ಅಂತ ತಿರುಗೇಟು ನೀಡಿದರು.
ಸಿಎಂ vs ಮಾಜಿ ಸಿಎಂ ಜಟಾಪಟಿ
ಮಾಜಿ ಸಿಎಂ ಹೆಚ್ಡಿಕೆ ಮಾತನಾಡಿವಾಗ, ಬಹಳ ಚೆನ್ನಾಗಿ ಉತ್ತರ ಕೊಟ್ಟಿದ್ದೀರ ಅಂತ ನಮ್ಮ ಮುಖ್ಯಮಂತ್ರಿಗಳಿಗೆ ಶೇಕ್ ಹ್ಯಾಂಡ್ ಬೇರೆ ಕೊಟ್ರು. ರೀ.. ನಾವು ಇದಕ್ಕೆಲ್ಲ ಕೇರ್ ಮಾಡಲ್ಲ. ಇದನ್ನೆಲ್ಲ ಗಮನಿಸುತ್ತಿರುತ್ತೇವೆ. ಇಂಥದ್ದನ್ನೆಲ್ಲ ಬಹಳ ನೋಡಿಬಿಟ್ಟಿದ್ದೀವಿ. ಈ ಥರದ ರಾಜಕಾರಣ ಯಾರಿಗೂ ಶಾಶ್ವತ ಅಲ್ಲ ಎಂದು ಸಿಎಂ ಸಿದ್ದುಗೆ ಟಾಂಗ್ ಕೊಟ್ಟರು.
ಇದಕ್ಕೆ ಪ್ರತಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿಮಗೆಲ್ಲ ಹೆದರಿಕೊಳ್ತೀವೇನ್ರಿ ನಾವು. ನೀವು ಕೇರ್ ಮಾಡಿದ್ರೆ, ನಾವು ಕೇರ್ ಮಾಡ್ತೀವಿ. ಕೇರ್ ಮಾಡಲ್ಲ ಅಂದ್ರೆ.. ನಾವು ಕೇರ್ ಮಾಡಲ್ಲ. ಯಾರ್ರೀ ಹೆದರಿಕೊಳ್ತಾರೆ ನಿಮಗೆ? ನಾನು ಸುಮ್ನೆ ಕುಲುಕಿದ್ದೇನೆ. ಅವರು ಬಂದು ಕೈ ಕುಲುಕಿದ್ರೆ.. ಚೆನ್ನಾಗಿ ಉತ್ತರ ಕೊಟ್ಟಿದ್ದಾರೆ ಅಂತ ಕೈ ಕುಲುಕಿದ್ರು ಅಂತ ಹೇಳಿದ್ರೆ? ನನಗೂ ಇದ್ದಕ್ಕೂ ಸಂಬಂಧವೇ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗರಂ ಆದರು. ಇದನ್ನೂ ಓದಿ: ಯತೀಂದ್ರ ನಮ್ಮ ಮನೆಯಲ್ಲಿದ್ದಾರೆ ಅಂತ ಆರೋಪ ಮಾಡೋದು ಸರಿಯಲ್ಲ – HDK ವಿರುದ್ಧ ಸಿಎಂ ವಾಗ್ದಾಳಿ
ಈ ವೇಳೆ, ನಾವು ಕೂಡ ಕೇರ್ ಮಾಡಲ್ಲ ಅಂತ ಹೆಚ್ಡಿಕೆ ಪ್ರತಿ ವಾಗ್ದಾಳಿ ನಡೆಸಿದರು. ಆಗ ಸಿಎಂ ಸಿದ್ದರಾಮಯ್ಯ ಮಾತನಾಡಿ, ನೀವು ಕೇರ್ ಮಾಡಲ್ಲ ಅಂದ್ರೆ.. ಅದರ ಅಪ್ಪನಷ್ಟು ನಾವು ಕೇರ್ ಮಾಡಲ್ಲ. ಹೇಯ್.. ಹೋಗ್ರಿ ಕೇರ್ ಮಾಡದೇ ಇದ್ರೆ ನೀವು. ಇಂಥವರನ್ನ ಬಹಳ ಜನರನ್ನ ನೋಡಿಬಿಟ್ಟಿದ್ದೀನಿ ಎಂದು ಜೋರು ಧ್ವನಿಯಲ್ಲೇ ಮಾತನಾಡಿದರು.