Tag: Assembly Speaker

  • ಮೂರು ತಿಂಗಳಲ್ಲಿ ಶಾಸಕರ ಪಕ್ಷಾಂತರದ ಬಗ್ಗೆ ಕ್ರಮ ತೆಗೆದುಕೊಳ್ಳಿ – ತೆಲಂಗಾಣ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಸೂಚನೆ

    ಮೂರು ತಿಂಗಳಲ್ಲಿ ಶಾಸಕರ ಪಕ್ಷಾಂತರದ ಬಗ್ಗೆ ಕ್ರಮ ತೆಗೆದುಕೊಳ್ಳಿ – ತೆಲಂಗಾಣ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಸೂಚನೆ

    ನವದೆಹಲಿ: ಭಾರತ ರಾಷ್ಟ್ರ ಸಮಿತಿಯಿಂದ ಪಕ್ಷಾಂತರಗೊಂಡ ಶಾಸಕರ ಅನರ್ಹತೆಯ ಬಗ್ಗೆ ತ್ವರಿತ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ (Supreme Court) ತೆಲಂಗಾಣ ವಿಧಾನಸಭೆಯ ಸ್ಪೀಕರ್‌ಗೆ (Telangana Speaker) ನಿರ್ದೇಶನ ನೀಡಿದೆ. ಮೂರು ತಿಂಗಳೊಳಗೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಪ್ರಜಾಪ್ರಭುತ್ವಕ್ಕೆ ಹಾನಿಯಾಗಬಹುದು ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ.

    ಕಾಂಗ್ರೆಸ್ ಸೇರಿದ 10 ಬಿಆರ್‌ಎಸ್ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ಏಳು ತಿಂಗಳುಗಳ ನಂತರವೂ ಸ್ಪೀಕರ್ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠ ಈ ಆದೇಶ ನೀಡಿದೆ. ಇದನ್ನೂ ಓದಿ: ತಾಯಿಯನ್ನು ಕೊಂದ ಪಾಪಿಯಿಂದ ತಂದೆಯ ಮೇಲೂ ಮೃಗೀಯ ವರ್ತನೆ – ಚರ್ಮ ಸುಲಿಯುವಂತೆ ಹಲ್ಲೆ

    ವಿಚಾರಣೆ ವೇಳೆ ಸ್ಪೀಕರ್ ವರ್ತನೆಗೆ ಸಿಜೆಐ ಬಿ.ಆರ್ ಗವಾಯಿ ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್ ಸಕಾಲಿಕ ಕ್ರಮ ಕೈಗೊಳ್ಳದಿದ್ದರೆ ಅದು ‘ಆಪರೇಷನ್ ಸಕ್ಸಸ್, ಪೇಷಂಟ್ ಡೆಡ್’ ಪರಿಸ್ಥಿತಿಯಾಗುತ್ತದೆ. ಪಕ್ಷಾಂತರದ ಸಂದರ್ಭದಲ್ಲಿ ಸ್ಪೀಕರ್ ತ್ವರಿತ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಪ್ರಕ್ರಿಯೆಯನ್ನು ವಿಳಂಬ ಮಾಡಲು ಬಿಡಬೇಡಿ ಮತ್ತು ಇದು ಸಂಭವಿಸಿದಲ್ಲಿ, ಅವರ ವಿರುದ್ಧ ಪ್ರತಿಕೂಲ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು ಎಂದು ನ್ಯಾಯಾಲಯವು ಸ್ಪೀಕರ್‌ಗೆ ತಿಳಿಸಿತು. ಇದನ್ನೂ ಓದಿ: ಅನಾಮಿಕ ವ್ಯಕ್ತಿ ನಟೋರಿಯಸ್ ಕೆಲಸ ಮಾಡಿ ಕ್ಷೇತ್ರದಿಂದ ಉಚ್ಚಾಟನೆಗೊಂಡಿದ್ದ: ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ

    ರಾಜಕೀಯ ಪಕ್ಷಾಂತರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗಂಭೀರ ಬೆದರಿಕೆಯಾಗಿದೆ, ಇದನ್ನು ನಿಲ್ಲಿಸದಿದ್ದರೆ, ಅದು ಇಡೀ ವ್ಯವಸ್ಥೆಯನ್ನು ಅಸ್ಥಿರಗೊಳಿಸಬಹುದು. ಪಕ್ಷಾಂತರ ಪ್ರಕರಣಗಳಲ್ಲಿ ಸ್ಪೀಕರ್ ನಿರ್ಧಾರ ನೀಡುವ ಪ್ರಸ್ತುತ ವ್ಯವಸ್ಥೆಯು ಸೂಕ್ತವಾಗಿದೆಯೇ ಅಥವಾ ಅದನ್ನು ಬದಲಾಯಿಸುವ ಅಗತ್ಯವಿದೆಯೇ ಎಂದು ಪರಿಗಣಿಸುವಂತೆ ನ್ಯಾಯಾಲಯವು ಸಂಸತ್ತನ್ನು ಒತ್ತಾಯಿಸಿತು. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಕೊನೆಗೂ ಅಸ್ಥಿಪಂಜರ ಪತ್ತೆ

    ಸ್ಪೀಕರ್ ‘ಸಮಂಜಸ ಸಮಯದಲ್ಲಿ’ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದ ತೆಲಂಗಾಣ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್ ಇದೇ ವೇಳೆ ರದ್ದುಗೊಳಿಸಿತು. ಹಿಂದಿನ ಆದೇಶಗಳು ಕ್ರಮವನ್ನು ವಿಳಂಬಗೊಳಿಸಿವೆ ಎಂದು ನ್ಯಾಯಾಲಯ ಒಪ್ಪಿಕೊಂಡಿತು. ಆದರೆ ಸಂವಿಧಾನದ ಉದ್ದೇಶವು ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಂದು ಪೀಠ ಹೇಳಿತು. ಇದನ್ನೂ ಓದಿ: ಗಾಳಿ ಆಂಜನೇಯ ದೇಗುಲ ಭಕ್ತರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಹೋಮ, ಹವನ ಮಾಡಿಸೋಕೆ ಆನ್‌ಲೈನ್ ಸೇವೆ ಆರಂಭ

    ಬಿಆರ್‌ಎಸ್ ಶಾಸಕರಾದ ದಾನಂ ನಾಗೇಂದರ್ (ಖೈರತಾಬಾದ್), ತೆಲ್ಲಂ ವೆಂಕಟ ರಾವ್ (ಭದ್ರಾಚಲಂ), ಕಡಿಯಂ ಶ್ರೀಹರಿ (ಸ್ಟೇಷನ್ ಘನಪುರ), ಪೋಚಾರಂ ಶ್ರೀನಿವಾಸ್ ರೆಡ್ಡಿ (ಬನ್ಸವಾಡ), ಎಂ. ಸಂಜಯ್ ಕುಮಾರ್ (ಜಗಿತಿಯಾಲ), ಅರೆಕಪುಡಿ ಗಾಂಧಿ (ಸೆರಿಲಿಂಗಂಪಲ್ಲಿ), ಟಿ. ಪ್ರಕಾಶ್ ಗೌಡ್ (ರಾಜೇಂದ್ರನಗರ), ಬಿ. ಕೃಷ್ಣ ಮೋಹನ್ ರೆಡ್ಡಿ (ಗದ್ವಾಲ್), ಜಿ. ಮಹಿಪಾಲ್ ರೆಡ್ಡಿ (ಪಟಾಂಚೇರು), ಮತ್ತು ಕಾಲೆ ಯಡಯ್ಯ (ಚೇವೆಲ್ಲ) ಕಾಂಗ್ರೇಸ್ ಸೇರ್ಪಡೆಯಾಗಿದ್ದರು. ಇದನ್ನೂ ಓದಿ: 10,000 ಕೊಡ್ತೀನಿ ಬಾ – ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್

  • ಹಿಂದೂಗಳು ನಮಸ್ಕಾರ ಮಾಡ್ಬೇಕು ಅಂತ ನಾನು ಹೇಳಿದ್ದೀನಾ? – ಸಚಿವ ಜಮೀರ್‌ ಪ್ರಶ್ನೆ

    ಹಿಂದೂಗಳು ನಮಸ್ಕಾರ ಮಾಡ್ಬೇಕು ಅಂತ ನಾನು ಹೇಳಿದ್ದೀನಾ? – ಸಚಿವ ಜಮೀರ್‌ ಪ್ರಶ್ನೆ

    ಬೆಳಗಾವಿ: ಮುಸ್ಲಿಂ ಸ್ಪೀಕರ್‌ ಕುರಿತಾದ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ, ಹಿಂದೂಗಳು (Hindu) ನಮಸ್ಕಾರ ಮಾಡ್ಬೇಕು ಅಂತ ನಾನು ಹೇಳಿದ್ದೀನಾ? ಎಂದು ಸಚಿವ ಜಮೀರ್ ಅಹ್ಮದ್ ಖಾನ್‌ (Zameer Ahmed Khan) ಪ್ರಶ್ನೆ ಮಾಡಿದರು.

    ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನ 4ನೇ ತಾರೀಖು ಶುರುವಾಗಿದೆ. ಮೊದಲ ವಾರ ಏನೂ ಮಾತಾಡಿಲ್ಲ. 2ನೇ ವಾರ ಇದ್ದಕ್ಕಿದ್ದಂತೆ ಈ ವಿಷಯ ತೆಗೆದುಕೊಂಡಿದ್ದಾರೆ. ಇದರ ಅಗತ್ಯವಾದರೂ ಏನಿತ್ತು? ನಾ‌ನೇನು ತಪ್ಪು ಮಾತಾಡಿದ್ದೇನೆ? ಹೈದರಾಬಾದ್ ಸಭೆಯಲ್ಲಿ ಮಾತಾಡಿದ್ದೇನೆ. ಸಭೆಯಲ್ಲಿ ಯಾರೋ ಒಬ್ಬ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸಮಾನ ಅವಕಾಶ ಕೊಡಲ್ಲ ಎಂದು ಕೇಳಿದ್ರು. ಆಗ ನಿನ್ನ ಭಾವನೆ ತಪ್ಪಿದೆ ಎಂದು ತಿಳಿವಳಿಕೆ ಹೇಳಿದೆ ಎಂದರು. ಇದನ್ನೂ ಓದಿ: Article 370: ಶೇಕ್ ಅಬ್ದುಲ್ಲಾ ಖುಷಿಪಡಿಸಲು ಜಾರಿಗೆ ತಂದಿದ್ದನ್ನು ಮೋದಿ ಧೈರ್ಯದಿಂದ ರದ್ದು ಮಾಡಿದ್ರು: ಯತ್ನಾಳ್

    ಕರ್ನಾಟಕದಲ್ಲಿ 17‌ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ (Congress) ಟಿಕೆಟ್‌ ಕೊಟ್ಟಿದೆ, ಅದರಲ್ಲಿ 9 ಜನ ಗೆದಿದ್ದಾರೆ. 9 ರಲ್ಲಿ 5 ಜನರಿಗೆ ಅಧಿಕಾರಿ ಕೊಟ್ಟಿದ್ದಾರೆ. ನನ್ನ, ರಹೀಮ್ ಖಾನ್‌ನ ಮಂತ್ರಿ ಮಾಡಿದ್ದಾರೆ. ಸಲೀಂ ಅಹ್ಮದ್ ಅವರನ್ನ ಚಿಫ್ ವಿಪ್ ಮಾಡಿದ್ದಾರೆ. ನಜೀರ್ ಅಹ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿ ಮಾಡಿದ್ದಾರೆ. ಕರ್ನಾಟಕದಲ್ಲಿ ಯು.ಟಿ ಖಾದರ್ (UT Khader) ಅವರನ್ನ ಸ್ಪೀಕರ್ ಮಾಡಿದ್ದಾರೆ. ಸ್ಪೀಕರ್ ಅವರಿಗೆ ನನ್ನನ್ನು ಸೇರಿದಂತೆ ಬಿಜೆಪಿ ಅವರು ನಮಸ್ಕಾರ ಮಾಡಬೇಕು ಎಂದು ಹೇಳಿದ್ದೇನೆ. ಇದು ಹೇಗೆ ಅಪಮಾನ ಆಗುತ್ತೆ‌ ಎಂದು ಜಮೀರ್‌ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

    ಸಾಂವಿಧಾನಿಕ ಪೀಠಕ್ಕೆ ಎಲ್ಲರೂ ನಮಸ್ಕಾರ ಮಾಡಲೇಬೇಕು ತಾನೇ. ಕಾಂಗ್ರೆಸ್ ಪಕ್ಷ ಸ್ಪೀಕರ್ ಸ್ಥಾನ ಕೊಟ್ಟಿದೆ. ಯಾರೇ ಇದ್ದರೂ ಪೀಠಕ್ಕೆ ನಮಸ್ಕಾರ ಮಾಡಲೇಬೇಕು. ಅಂತಹ ಸ್ಥಾನವನ್ನು ಅಲ್ಪ ಸಂಖ್ಯಾತರಿಗೆ ಕಾಂಗ್ರೆಸ್ ಕೊಟ್ಟಿದೆ ಎಂದು ಹೇಳಿದ್ದೇನೆ. ಹಿಂದೂಗಳು ನಮಸ್ಕಾರ ಮಾಡಬೇಕು ಎಂದು ನಾನು ಹೇಳಿದ್ದೀನಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: `ದಳಪತಿ’ಗಳಿಗೆ ಸೆಡ್ಡು ಹೊಡೆದ ಸಿ.ಎಂ ಇಬ್ರಾಹಿಂ ಬಣ- ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ನೇಮಕ

    ಬಿಜೆಪಿ ಅವರಿಗೆ ಯಾವ ವಿಷಯ ಇರಲಿಲ್ಲ. ಹಾಗಾಗಿ ಇವತ್ತು ಈ ವಿಷಯ ತೆಗೆದುಕೊಂಡಿದ್ದಾರೆ. ಸ್ಪಷ್ಟನೆ ಕೊಡಲು ನಾನು ಸಿದ್ದವಾಗಿದ್ದೇನೆ. ಅದನ್ನು ಕೇಳಲು ಬಿಜೆಪಿಯವರು ರೆಡಿಯಾಗಿಲ್ಲ. ಬಿಜೆಪಿಯಲ್ಲೇ ಹೊಂದಾಣಿಕೆಯಿಲ್ಲ, ಅವರ ಹೈಕಮಾಂಡ್ ನಿಂದ ಸೂಚನೆ ಬಂದಿದೆ‌. ಆದ್ದರಿಂದ ಬಿಜೆಪಿ ಅವರು‌ ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ತಪ್ಪು ಮಾಡಿಲ್ಲ, ನನ್ನ ಹೇಳಿಕೆಗೆ ನಾನೀಗಲೂ ಬದ್ಧ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸಮನ್ವಯ ಹೆಲ್ತ್‌ಕೇರ್ ರಾಘವೇಂದ್ರ ಶಾಸ್ತ್ರಿಗೆ ಸಿಂಗಾಪುರ ಸರ್ಕಾರದ ಪ್ರೆಸಿಡೆನ್ಶ್ಯಿಯಲ್ ರೆಸಿಲಿಯನ್ಸ್ ಪದಕ 

  • ಮಧ್ಯಪ್ರದೇಶ ಸಿಎಂ ಹುದ್ದೆಗೆ ಮೋಹನ್ ಯಾದವ್ ಅಚ್ಚರಿ ಆಯ್ಕೆ – ಇಬ್ಬರಿಗೆ ಡಿಸಿಎಂ ಸ್ಥಾನ

    ಮಧ್ಯಪ್ರದೇಶ ಸಿಎಂ ಹುದ್ದೆಗೆ ಮೋಹನ್ ಯಾದವ್ ಅಚ್ಚರಿ ಆಯ್ಕೆ – ಇಬ್ಬರಿಗೆ ಡಿಸಿಎಂ ಸ್ಥಾನ

    ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ (Madhya Pradesh CM) ಸ್ಥಾನಕ್ಕೆ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ (Mohan Yadav) ಅವರನ್ನು ಆಯ್ಕೆ ಮಾಡಲಾಗಿದೆ.

    ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ. ಜಗದೀಶ್ ದೇವಾಡ, ರಾಜೇಶ್ ಶುಕ್ಲಾ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ವಿಧಾನಸಭೆಯ ಸ್ಪೀಕರ್‌ (Assembly Speaker) ಸ್ಥಾನಕ್ಕೆ ನರೇಂದ್ರ ತೋಮರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಅಚ್ಚರಿಯ ಆಯ್ಕೆ ಮೂಲಕ 18 ವರ್ಷಗಳ ಸುಧೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹನ್‌ಗೆ ಅವರಿಗೆ ಹೈಕಮಾಂಡ್ ವಿಶ್ರಾಂತಿ ನೀಡಿದೆ.

    2013ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಮೋಹನ್‌ ಯಾದವ್‌ 2018ರಲ್ಲಿ ಮರು ಆಯ್ಕೆಯಾಗಿದ್ದರು. 2020ರಿಂದ ಹಾಲಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ನೇತೃತ್ವದ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

    1965ರ ಮಾರ್ಚ್‌ 25 ರಂದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಜನಿಸಿದ ಮೋಹನ್ ಯಾದವ್ ಹಲವು ವರ್ಷಗಳಿಂದ ಬಿಜೆಪಿಯೊಂದಿಗೆ ಒಡನಾಟದಲ್ಲಿದ್ದರು. ರಾಜಕೀಯ ಪ್ರಯತ್ನಗಳ ಜೊತೆಗೆ, ಅವರು ಉದ್ಯಮಿಯೂ ಆಗಿದ್ದಾರೆ. 2013, 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಮೋಹನ್‌ ಯಾದವ್‌ 2023ರ ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೇತನ್ ಪ್ರೇಮನಾರಾಯಣ್ ಯಾದವ್ ವಿರುದ್ಧ 12,941 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಈ ಮೂಲಕ ಸತತ ಹಾಟ್ರಿಕ್‌ ಗೆಲುವಿನ ನಗೆ ಬೀರಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – 11 ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ

    ಉಜ್ಜಯಿನಿ ದಕ್ಷಿಣ ಕ್ಷೇತ್ರವು 2003 ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿದೆ ಎಂದು ಹೇಳಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳೊಂದಿಗೆ ಬಹುಮತ ಪಡೆದರೆ, ಕಾಂಗ್ರೆಸ್‌ 66 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತು. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

    ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ನಿಯೋಜಿತ ಸಿಎಂ ಮೋಹನ್ ಯಾದವ್, “ನಾನು ಪಕ್ಷದ ಸಣ್ಣ ಕಾರ್ಯಕರ್ತ, ನಿಮ್ಮೆಲ್ಲರಿಗೂ, ರಾಜ್ಯ ನಾಯಕತ್ವ ಮತ್ತು ಕೇಂದ್ರ ನಾಯಕತ್ವಕ್ಕೆ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ನನ್ನ ಜವಾಬ್ದಾರಿಯನ್ನು ಪೂರೈಸಲು ಪ್ರಯತ್ನಿಸುತ್ತೇನೆ” ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವಿಶೇಷವಾಗಿ ಧನ್ಯವಾದ ತಿಳಿಸಿದರು.

  • ಕೆ.ಎಸ್. ನಾಗರತ್ನಮ್ಮ ರಾಜ್ಯದ ಮೊದಲ ಮಹಿಳಾ ಸ್ಪೀಕರ್

    ಕೆ.ಎಸ್. ನಾಗರತ್ನಮ್ಮ ರಾಜ್ಯದ ಮೊದಲ ಮಹಿಳಾ ಸ್ಪೀಕರ್

    ಮೈಸೂರು: ರಾಜ್ಯ ವಿಧಾನಸಭೆಯಲ್ಲಿ ಮಹಿಳೆಯೊಬ್ಬರು ಸ್ಪೀಕರ್ (Speaker) ಆಗಿ ಕೆಲಸ ಮಾಡಿದ್ದಾರೆ. ಅವರೇ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಕೆ.ಎಸ್‌. ನಾಗರತ್ನಮ್ಮ .

    ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಕಬ್ಬಹಳ್ಳಿಯ ಸಾಹುಕಾರ್ ಕೆ.ಸಿ. ಸುಬ್ಬಣ್ಣ ಅವರ ಧರ್ಮಪತ್ನಿ ನಾಗರತ್ನಮ್ಮ. 1957, 1962, 1967, 1972, 1983, 1985 ಹಾಗೂ 1989 – ಹೀಗೆ 7 ಬಾರಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಗುಂಡ್ಲುಪೇಟೆ (Gundlupet) ಇಂದಿರಾಗಾಂಧಿ, ಗುಂಡ್ಲುಪೇಟೆ ಅಮ್ಮ ಎಂದೇ ಹೆಸರಾಗಿದ್ದರು. 1972 ರಿಂದ 1978 ರವರೆಗೆ ರಾಜ್ಯ ವಿಧಾನಸಭೆಯ ಪ್ರಥಮ ಮಹಿಳಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1978ರಲ್ಲಿ ಅವರು ಎಚ್.ಕೆ. ಶಿವರುದ್ರಪ್ಪ ಅವರ ಎದುರು ಪರಾಭವಗೊಂಡಿದ್ದರು. ಇದನ್ನೂ ಓದಿ: ಶಾಸಕ ಮಹೇಶ್ ಕುಮಠಳ್ಳಿಗೆ ಟಿಕೆಟ್ ಟೆನ್ಶನ್- ವಲಸಿಗ ಶಾಸಕರಿಗೆ ಮೂಲ ಬಿಜೆಪಿಗರಿಂದ ಕಿರಿಕ್

    1985ರಲ್ಲಿ ರಾಜ್ಯದಲ್ಲಿ ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ಜನತಾ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದಾಗ ಕೆ.ಎಸ್. ನಾಗರತ್ನಮ್ಮ ( KS Nagarathnamma) ಅವರು ರಾಜ್ಯದ ಪ್ರಥಮ ವಿರೋಧ ಪಕ್ಷದ ನಾಯಕಿಯಾಗಿಯೂ 1987 ಜ. 29 ರಿಂದ 1989 ಏ. 21 ರವರೆಗೆ ಕೆಲಸ ಮಾಡಿದ್ದರು. ಆದರೆ, ಮಂತ್ರಿಯಾಗಲು 1990ರವರೆಗೆ ಕಾಯಬೇಕಾಯಿತು. ಎಸ್. ಬಂಗಾರಪ್ಪ ಅವರ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಕೆಲಸ ಮಾಡಿದರು. ಮೈಸೂರು ಜಿಲ್ಲೆಯ ಪ್ರಥಮ ಮಹಿಳಾ ಉಸ್ತುವಾರಿ ಸಚಿವೆಯೂ ಆಗಿದ್ದರು. ಸಚಿವೆ ಆಗಿದ್ದಾಗಲೇ ನಿಧನರಾದರು. ಇದನ್ನೂ ಓದಿ: ಅಕ್ರಮ ಗಾಂಜಾ ಮಾರಾಟ ಯತ್ನ- ಇಬ್ಬರ ಬಂಧನ

  • ಮಹಾ ಹೈಡ್ರಾಮಾ ಅಂತ್ಯ – ವಿಶ್ವಾಸ ಪರೀಕ್ಷೆ ಗೆದ್ದ ಏಕನಾಥ್‌ ಶಿಂಧೆ

    ಮಹಾ ಹೈಡ್ರಾಮಾ ಅಂತ್ಯ – ವಿಶ್ವಾಸ ಪರೀಕ್ಷೆ ಗೆದ್ದ ಏಕನಾಥ್‌ ಶಿಂಧೆ

    ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟ ಕೊನೆಗೂ ಅಂತ್ಯವಾಗಿದೆ. ಸಿಎಂ ಏಕನಾಥ್‌ ಶಿಂಧೆ ಬಹುಮತ ಪರೀಕ್ಷೆಯಲ್ಲಿ ಪಾಸ್‌ ಆಗಿದ್ದಾರೆ.

    ಒಟ್ಟು ಬಿಜೆಪಿ ಮತ್ತು ಶಿವಸೇನೆ ಬಣದ ಒಟ್ಟು 164 ಶಾಸಕರು ಶಿಂಧೆ ಪರ ನಿಂತರೇ, 99 ಶಾಸಕರು ವಿರುದ್ಧವಾಗಿ ನಿಂತಿದ್ದಾರೆ. ಈ ಮೂಲಕ ಬಿಜೆಪಿ ಬೆಂಬಲಿತ ಶಿವಸೇನೆ ಬಂಡಾಯ ಸರ್ಕಾರ ಎರಡೂವರೆ ವರ್ಷದ ಬಳಿಕ ಅಧಿಕಾರ ಹಿಡಿದಿದೆ. ಇದನ್ನೂ ಓದಿ: ಪ್ರವಾಹಕ್ಕೆ ಕೊಚ್ಚಿ ಹೋದ ಚೀನಾ-ಭಾರತ ಗಡಿಯಲ್ಲಿನ ಸೇತುವೆ

    ಎರಡು ದಿನಗಳ ಕಾಲ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ, ಭಾನುವಾರದಂದು ಸ್ಪೀಕರ್ ಆಯ್ಕೆ ಮಾಡಲಾಗಿತ್ತು. ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಬಂಡಾಯ ಶಾಸಕರ ನೆರವಿನೊಂದಿಗೆ 164 ಮತಗಳನ್ನು ಗಳಿಸುವ ಮೂಲಕ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಿಂಧೆ ಬಹುಮತ ಸಾಬೀತಿಗೆ ಮತಗಳ ಕೊರತೆಯಾಗಲಿಲ್ಲ. ಇದನ್ನೂ ಓದಿ: ಮೆಟ್ಟಿಲಿನಿಂದ ಎಡವಿ ಬಿದ್ದ ಲಾಲೂ ಪ್ರಸಾದ್ ಯಾದವ್ – ಭುಜದ ಮೂಳೆ ಮುರಿತ

    288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಮತಗಳ ಅವಶ್ಯಕತೆ ಇದ್ದು, ಓರ್ವ ಶಾಸಕನ ನಿಧನದಿಂದ ಇದು 144ಕ್ಕೆ ಇಳಿದಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ 55, ಎನ್‍ಸಿಪಿ 53, ಕಾಂಗ್ರೆಸ್ 44, ಬಿಜೆಪಿ 106, ಬಹುಜನ ವಿಕಾಸ್ ಅಘಾಡಿ 3, ಸಮಾಜವಾದಿ 2, ಎಐಎಂಐಎಂ 2, ಪ್ರಹರ್ ಜನಶಕ್ತಿ 1, ಸಿಪಿಐ (ಎಂ) 1, ಪಿಡಬ್ಲ್ಯೂಪಿ 1, ಸ್ವಾಭಿಮಾನಿ ಪಕ್ಷ 1, ರಾಷ್ಟ್ರೀಯ ಸಮಾಜ ಪಕ್ಷ 1, ಜನಸುರಾಜ್ಯ ಶಕ್ತಿ ಪಕ್ಷ 1, ಕ್ರಾಂತಿಕಾರಿ ಶೆಟ್ಕರಿ ಪಕ್ಷ 1 ಸ್ಥಾನಗಳನ್ನು ಹೊಂದಿದೆ.

    107 ಮತಗಳನ್ನು ಹೊಂದಿರುವ ಮಹಾ ವಿಕಾಸ್ ಅಘಾಡಿ ಮೈತ್ರಿ ವಿರೋಧ ಪಕ್ಷವಾಗಲಿದೆ. ಈ ಮೂಲಕ ಮೂರು ವಾರಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಕ್ಕೆ ಅಧಿಕೃತ ತೆರೆ ಬಿದ್ದಿದೆ.

    Live Tv
    [brid partner=56869869 player=32851 video=960834 autoplay=true]

  • ಸುದೀಪ್ – ದೇವಗನ್ ವಿಚಾರ ಕಟ್ಟಿಕೊಂಡು ಏನ್ ಮಾಡ್ತೀರಾ: ರಮೇಶ್‌ಕುಮಾರ್ ವ್ಯಂಗ್ಯ

    ಸುದೀಪ್ – ದೇವಗನ್ ವಿಚಾರ ಕಟ್ಟಿಕೊಂಡು ಏನ್ ಮಾಡ್ತೀರಾ: ರಮೇಶ್‌ಕುಮಾರ್ ವ್ಯಂಗ್ಯ

    ವಿಜಯಪುರ: ಹಿಂದಿ ಭಾಷೆ ವಿಚಾರವಾಗಿ ನಟ ಸುದೀಪ್ -ಅಜಯ್ ದೇವಗನ್ ಮಧ್ಯೆ ನಡೆಯುತ್ತಿರುವ ವಿವಾದದಿಂದ ಜನರಿಗೆ ಪ್ರಯೋಜನವಿಲ್ಲ. ಇವೆಲ್ಲ ಕಟ್ಟಿಕೊಂಡು ಏನ್‌ ಮಾಡ್ತೀರಾ? ಎಂದು ವ್ಯಂಗ್ಯವಾಡಿದ್ದಾರೆ.

    RAMESHKUMAR

    ವಿಜಯಪುರದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, 108 ಸಮಸ್ಯೆಗಳು ನಮ್ಮನ್ನು ಕಾಡುತ್ತಿವೆ. ಅವುಗಳಿಗೆ ನಾವು ಪರಿಹಾರ ಹುಡುಕೋಣ. ಇವೆಲ್ಲ ಕಟ್ಟಿಕೊಂಡು ಏನಾಗಬೇಕು. ಇದು ಜನರ ಗಮನ ಬೇರೆಡೆ ಸೆಳೆಯೋದಕ್ಕೆ ಸೃಷ್ಟಿ ಮಾಡುವಂತಹ ವಿವಾದ ಎಂದು ಟೀಕಿಸಿದ್ದಾರೆ.  ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

    RAMESH KUMAR 02

    ಇದೇ ವೇಳೆ ದಲಿತ ಸಿಎಂ ಬಗ್ಗೆ ರಮೇಶ್ ಜಿಗಜಿಣಗಿ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಯಾಕಪ್ಪಾ ಅವೆಲ್ಲಾ ಚರ್ಚೆ? ಯಾವ ಪಾರ್ಟಿ ಆಯ್ಕೆ ಆಗುತ್ತೋ- ಆ ಪಾರ್ಟಿಯವರು ಏನು ತೀರ್ಮಾನ ಮಾಡ್ತಾರೋ? ಸುಮ್ಮನೆ ಅವೆಲ್ಲಾ ಮಾತನಾಡುವುದರಿಂದ ಏನು ಶಕ್ತಿ ಬರುತ್ತೆ? ನಾನು ಸಿಎಂ ಆಕಾಂಕ್ಷಿ ಅಲ್ಲದಿರುವುದರಿಂದ ದಲಿತ ಸಿಎಂ ಮಾಡಿದರೆ, ಖುಷಿ ಪಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವಿಟ್ ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್

  • 8 ಬಾರಿ ಶಾಸಕ, ಸತೀಶ್ ಮಹಾನ್ ಮುಂದಿನ ಯುಪಿ ಸ್ಪೀಕರ್‌?

    8 ಬಾರಿ ಶಾಸಕ, ಸತೀಶ್ ಮಹಾನ್ ಮುಂದಿನ ಯುಪಿ ಸ್ಪೀಕರ್‌?

    ಲಕ್ನೋ: ಉತ್ತರ ಪ್ರದೇಶ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ಬಿಜೆಪಿ ನಾಯಕ ಮತ್ತು ಎಂಟು ಬಾರಿ ಶಾಸಕರಾಗಿರುವ ಸತೀಶ್ ಮಹಾನಾ ಅವರು ಆಯ್ಕೆಯಾಗುವ ಸಾಧ್ಯತೆಯಿದೆ.

    ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಯೋಗಿ ಆದಿತ್ಯನಾಥ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಈ ಸಮಾರಂಭದಲ್ಲಿ ನೂತನ ಸಂಪುಟದಲ್ಲಿ ಸತೀಶ್ ಮಹಾನಾ ಅವರನ್ನು ಸಚಿವರನ್ನಾಗಿ ಮಾಡಿಲ್ಲ. ಇದನ್ನೂ ಓದಿ: 2ನೇ ಬಾರಿ ಸಿಎಂ ಆಗಿ ‘ಬುಲ್ಡೋಜರ್ ಬಾಬಾ’ ಚುಕ್ಕಾಣಿ – ಮೋದಿ, ಬಿಜೆಪಿ ಸಿಎಂಗಳ ಸಮ್ಮುಖದಲ್ಲಿ ಪ್ರಮಾಣವಚನ

    ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಮಾರ್ಚ್ 28-29 ರಂದು ಪ್ರಮಾಣ ವಚನ ಬೋಧಿಸಲಿದ್ದಾರೆ. ನಂತರ ಮಾರ್ಚ್ 30 ರಂದು ವಿಧಾನಸಭೆಯಲ್ಲಿ ಸತೀಶ್ ಮಹಾನಾ ಅವರನ್ನು ಹೊಸ ಸ್ಪೀಕರ್ ಎಂದು ಘೋಷಿಸಬಹುದು. ಯೋಗಿ ಆದಿತ್ಯನಾಥ್ ಅವರ ಮೊದಲ ಸಂಪುಟದಲ್ಲಿ ಸತೀಶ್ ಮಹಾನಾ ಅವರು ಕೈಗಾರಿಕಾ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಮೂರ್ಖರು, ಹುಚ್ಚರು, ಬುದ್ಧಿಇಲ್ಲದವರಿಗೆ ಉತ್ತರಿಸಬಾರದು – ಕೇಜ್ರಿವಾಲ್‍ಗೆ ಅಗ್ನಿಹೋತ್ರಿ ಪರೋಕ್ಷ ಟಾಂಗ್

    ಶುಕ್ರವಾರ ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ 2ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರೊಂದಿಗೆ 52 ಶಾಸಕರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಅಮಿತ್ ಶಾ ಪಾಲ್ಗೊಂಡಿದ್ದರು. ಇವರೊಂದಿಗೆ ವಿವಿಧ ರಾಜ್ಯಗಳ ಬಿಜೆಪಿ ಸಿಎಂಗಳೂ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು. ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ, ಉದ್ಯಮಿಗಳು, ಬಾಲಿವುಡ್ ನಟ, ನಟಿಯರು ಭಾಗವಹಿಸಿದ್ದರು.

  • ವಿಧಾನಸಭೆಯಲ್ಲಿ ಹಾಲಿ ಸ್ಪೀಕರ್‌ಗೆ ಮಾಜಿ ಸ್ಪೀಕರ್ ಸವಾಲ್ – ಸಸ್ಪೆಂಡ್ ಮಾಡ್ಬಿಡಿ ಎಂದ ರೇವಣ್ಣ

    ವಿಧಾನಸಭೆಯಲ್ಲಿ ಹಾಲಿ ಸ್ಪೀಕರ್‌ಗೆ ಮಾಜಿ ಸ್ಪೀಕರ್ ಸವಾಲ್ – ಸಸ್ಪೆಂಡ್ ಮಾಡ್ಬಿಡಿ ಎಂದ ರೇವಣ್ಣ

    ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸವಾಲು ಹಾಕಿದ ಘಟನೆ ನಡೆಯಿತು. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿಗೆ ಸ್ಪೀಕರ್ ಕೂಡ ಗರಂ ಆಗಿದ್ದರು.

    ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಇವತ್ತು ಕೂಡ ಧರಣಿ ಮುಂದುವರಿಸಿ ಕಲಾಪಕ್ಕೆ ಅಡ್ಡಿ ಪಡಿಸಿತು. ಆ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಚರ್ಚೆಯಲ್ಲಿ ಭಾಗವಹಿಸಿ, ಧರಣಿ ಕೈಬಿಡಿ. ಕಲಾಪಕ್ಕೆ ಅಡ್ಡಿ ಮಾಡುವುದು ಸರಿಯಾದ ಕ್ರಮ ಅಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ಅಲ್ಲ. ಕಾಂಗ್ರೆಸ್ ಪಕ್ಷಕ್ಕೂ ಇದು ಶೋಭೆ ಅಲ್ಲ. ಹೊರಗಡೆ ಏನಾದರೂ ಮಾಡಿ, ಕಲಾಪ ನಡೆಸಲು ಅವಕಾಶ ಕೊಡಿ ಅಂತಾ ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ರಾಜ್ಯದ ಮಕ್ಕಳಿಗೆ ದ್ರೋಹ ಮಾಡ್ತಿದೆ, ಇದು ರಾಜದ್ರೋಹ: ಬೊಮ್ಮಾಯಿ ಕಿಡಿ

    ನಮ್ಮ ಮೇಲೆ ಏಕೆ ಗೂಬೆ ಕೂರಿಸ್ತೀರಾ?: ಈ ನಡುವೆ ಸದನದ ಬಾವಿಯಿಂದ ತಮ್ಮ ಆಸನಕ್ಕೆ ಬಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸ್ಪೀಕರ್ ಕಾಗೇರಿಗೆ ಸವಾಲು ಹಾಕಿದರು. ಸಸ್ಪೆಂಡ್ ಮಾಡಲು ನಿಮಗೆ ಅವಕಾಶ ಇದೆ. ಸಸ್ಪೆಂಡ್ ಮಾಡಿ. ಸುಮ್ಮನೇ ನಮ್ಮ ಮೇಲೆ ಏಕೆ ಗೂಬೆ ಕೂರಿಸುತ್ತೀರಾ ಅಂತಾ ಸ್ಪೀಕರ್‌ಗೆ ತಿರುಗೇಟು ಕೊಟ್ಟರು. ಇದೇ ವೇಳೆ ಮಧ್ಯಪ್ರವೇಶ ಮಾಡಿದ ಶಾಸಕ ಹೆಚ್.ಡಿ.ರೇವಣ್ಣ, ಅವರೇ ಹೇಳ್ತಿದಾರಲ್ಲ, ಸಸ್ಪೆಂಡ್ ಮಾಡಿ. ಕಲಾಪ ನಡೆಸಲು ಕಾಂಗ್ರೆಸ್ ಅವರು ಅವಕಾಶ ಕೊಡಲಿ, ಇಲ್ಲದಿದ್ದರೆ ಸಸ್ಪೆಂಡ್ ಮಾಡಿ ಅಂತಾ ಒತ್ತಾಯಿಸಿದರು.

    ರಾತ್ರಿ ಇಲ್ಲೇ ಮಲಗೋಣ ಎಂದ ಸಿದ್ದರಾಮಯ್ಯ: ಆಗ ಮಧ್ಯಪ್ರವೇಶ ಮಾಡಿದ ಸ್ಪೀಕರ್, ರಮೇಶ್ ಕುಮಾರ್‌ಗೆ ಟಾಂಗ್ ಕೊಟ್ಟರು. ಸಸ್ಪೆಂಡ್ ಮಾಡಿ ಅಂತಾ ರಮೇಶ್ ಕುಮಾರ್ ಸಲಹೆ ಕೊಟ್ಟಿದ್ದಾರೆ. ಸಸ್ಪೆಂಡ್ ಮಾಡಿ ಅಂತ ರಮೇಶ್ ಕುಮಾರ್ ಬರೆದು ಕೊಡಲಿ. ಸಿದ್ದರಾಮಯ್ಯ ಹಿರಿಯರಿದ್ದಾರೆ, ಅನುಭವಿಗಳಿದ್ದಾರೆ. ಅಂತಹವರನ್ನು ಸಸ್ಪೆಂಡ್ ಮಾಡಿ ಅಂತ ರಮೇಶ್ ಕುಮಾರ್ ಸಲಹೆ ಕೊಡ್ತಿದ್ದಾರೆ ಅಂತಾ ತಿರುಗೇಟು ನೀಡಿದರು. ಇದನ್ನೂ ಓದಿ: ನನಗೆ ವಯಸ್ಸಾಗಿದ್ರೂ ಹಾಗೆ ಕಾಣಲ್ಲ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ಬಳಿಕವೂ ಗದ್ದಲ ಮುಂದುವರಿದಾಗ ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಲಾಯಿತು. ಕಾಂಗ್ರೆಸ್ ನಾಯಕರು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದಾರೆ. ಸೋಮವಾರದವರೆಗೂ ಧರಣಿ ಮಾಡೋಣ, ಯಾರೂ ಹೋಗಬೇಡಿ, ಇಲ್ಲೇ ಕೂರಿ. ರಾತ್ರಿ ವಿಧಾನಸಭೆಯಲ್ಲಿ ಮಲಗೋಣ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಸದಸ್ಯರಿಗೆ ಖಡಕ್ ಸೂಚನೆ ಕೊಟ್ಟಿದ್ದು, ಧರಣಿ ಮುಂದುವರಿದಿದೆ.

  • ಕರ್ನಾಟಕಲ್ಲಿ ಇತಿಹಾಸ ಸೃಷ್ಟಿಸಿದ ಸ್ಪೀಕರ್ ಕಾಗೇರಿ

    ಕರ್ನಾಟಕಲ್ಲಿ ಇತಿಹಾಸ ಸೃಷ್ಟಿಸಿದ ಸ್ಪೀಕರ್ ಕಾಗೇರಿ

    ಬೆಂಗಳೂರು: ಅಧಿಕೃತವಾಗಿ ಸಲಹೆಗಾರರನ್ನು ನೇಮಿಸಿಕೊಳ್ಳುವ ಮೂಲಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

    ಇದೇ ಮೊದಲ ಬಾರಿಗೆ ಸ್ಪೀಕರ್ ಕಾಗೇರಿ ಹೊಸ ಸಂಪ್ರದಾಯ ಹುಟ್ಟುಹಾಕಿದ್ದಾರೆ. ಈ ಮೂಲಕ ವಿಧಾನಸಭೆ ನಿವೃತ್ತ ಕಾರ್ಯದರ್ಶಿಯನ್ನು ಈಗ ವಿಧಾನಸಭೆ ಸ್ಪೀಕರ್ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ.

    ಸ್ಪೀಕರ್ ಕಾಗೇರಿ ಅವರು ವಿಧಾನಸಭೆ ನಿವೃತ್ತ ಕಾರ್ಯದರ್ಶಿ ಓಂಪ್ರಕಾಶ್ ಅವರನ್ನು ಅಧಿಕೃತವಾಗಿ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ. ಈ ಹಿಂದೆ ಓಂ ಪ್ರಕಾಶ್ ಅವರನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್ತು ಎರಡಕ್ಕೂ ಮಹಾ ಕಾರ್ಯದರ್ಶಿ ಮಾಡುವ ಪ್ರಯತ್ನ ನಡೆದಿತ್ತು. ಆದರೆ ಇದಕ್ಕೆ ಸಚಿವಾಲಯ ಸಿಬ್ಬಂದಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಈ ನಿರ್ಧಾರವನ್ನು ಸರ್ಕಾರದ ಕೈಬಿಟ್ಟಿತ್ತು. ಆದರೆ ಈಗ ಸ್ಪೀಕರ್ ಓಂ ಪ್ರಕಾಶ್ ಅವರನ್ನು ಸಲಹೆಗಾರರನ್ನಾಗಿ ನೇಮಿಸಿಕೊಂಡಿರುವ ಬಗ್ಗೆ ಚರ್ಚೆ ನಡೆದಿದೆ.

    ಸ್ಪೀಕರ್ ಕಾಗೇರಿ ನಿರ್ಧಾರಕ್ಕೆ ವಿಧಾನಸಭೆ ಸಚಿವಾಲಯದಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ವಿಧಾನಸಭೆ ಸ್ಪೀಕರ್ ಸಲಹೆಗಾರರಿಗೆ ಮಣೆ ಹಾಕಿ, ಹಾಲಿ ಅಧಿಕಾರಿಗಳ ಕಡಗಣನೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ ಸ್ಪೀಕರ್ ಕಾಗೇರಿ 10 ದಿನಗಳ ಹಿಂದೆ ಸಲಹೆಗಾರರನ್ನ ನೇಮಕ ಮಾಡಿಕೊಂಡಿದ್ದಾರೆ. ಈ ನಿರ್ಧಾರಕ್ಕೆ ಆರ್‍ಎಸ್‍ಎಸ್ ಸೂಚನೆ ನೀಡಿದ್ಯಾ ಅಥವಾ ಸ್ಪೀಕರ್ ಕಾಗೇರಿ ಅವರ ವೈಯುಕ್ತಿಕ ನಿರ್ಧಾರವೋ ಎಂಬ ಪ್ರಶ್ನೆ ಶುರುವಾಗಿದೆ.

    ಕಾಗೇರಿ ಅವರು ನಿವೃತ್ತ ಕಾರ್ಯದರ್ಶಿಗಳನ್ನು ಸಲಹೆಗಾರರನ್ನಾಗಿ ನೇಮಿಸಿಕೊಂಡಿರುವುದಕ್ಕೆ ವಿಧಾನಸಭೆ ಸಚಿವಾಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಇಂತಹ ನಿರ್ಧಾರದ ಮೂಲಕ ಅವರು ದುಂದುವೆಚ್ಚಕ್ಕೆ ಮುಂದಾದ್ರಾ? ಅವರಿಗೆ ಅನುಭವದ ಕೊರತೆ ಕಾಡುತ್ತಿದೆಯಾ? ಅಥವಾ ವಿಧಾನಸಭೆ ಸಚಿವಾಲಯದ ಅಧಿಕಾರಿಗಳ ಮೇಲಿನ ಅಪನಂಬಿಕೆಯೋ ಎಂಬ ಪ್ರಶ್ನೆ ಮೂಡಿವೆ.

  • ಸ್ಪೀಕರ್ ಆಗಿ ಕಾಗೇರಿ ಅವಿರೋಧ ಆಯ್ಕೆ – ಆರ್‌ಎಸ್‌ಎಸ್ ನಂಟು ಬಿಚ್ಚಿಟ್ಟ ಈಶ್ವರಪ್ಪ

    ಸ್ಪೀಕರ್ ಆಗಿ ಕಾಗೇರಿ ಅವಿರೋಧ ಆಯ್ಕೆ – ಆರ್‌ಎಸ್‌ಎಸ್ ನಂಟು ಬಿಚ್ಚಿಟ್ಟ ಈಶ್ವರಪ್ಪ

    – ಸ್ಪೀಕರ್ ಹುದ್ದೆಯಲ್ಲಿದ್ದಾಗ ನಮ್ಮಲ್ಲಿ ಇಲ್ಲದ ಗುಣಗಳನ್ನೂ ಸೇರಿಸಿ ಹೊಗಳ್ತಾರೆ
    – ಕಾಗೇರಿ ಕಾಲೆಳೆದ ರಮೇಶ್ ಕುಮಾರ್

    ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷರಾಗಿ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಕಲಾಪ ಆರಂಭವಾದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಚುನಾಯಿಸುವಂತೆ ಪ್ರಸ್ತಾವ ಮಂಡಿಸಿದರು. ಸಿಎಂ ಪ್ರಸ್ತಾವಕ್ಕೆ ಶಾಸಕ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದರು. ಈ ವೇಳೆ ಡೆಪ್ಯೂಟಿ ಸ್ಪೀಕರ್ ಕೃಷ್ಣಾರೆಡ್ಡಿ ಅವರು ಸಭಾಧ್ಯಕ್ಷರ ಆಯ್ಕೆ ಪ್ರಸ್ತಾವವನ್ನು ಮತಕ್ಕೆ ಹಾಕಿ, ಧ್ವನಿಮತದ ಮೂಲಕ ಒಪ್ಪಿಗೆ ಪಡೆದರು. ಈ ಮೂಲಕ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆಯಾದರು.

    ನೂತನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಡೀ ಸದನದ ಘನತೆ ಕಾಪಾಡುತ್ತೀರಿ ಎನ್ನುವ ಭರವಸೆ ನಮಗಿದೆ. ಪಕ್ಷಾತೀತವಾಗಿ ಕೆಲಸ ಮಾಡುತ್ತೀರಿ ಅಂತ ನಂಬಿದ್ದೇವೆ. ಸ್ಪೀಕರ್ ಪಕ್ಷಾತೀತವಾಗಿ ಆಯ್ಕೆ ಆಗಬೇಕು. ಹಾಗಾಗಿ ನಮ್ಮ ಪಕ್ಷದಿಂದ ನಾವು ಅಭ್ಯರ್ಥಿ ಹಾಕಲಿಲ್ಲ. ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಬಿಟ್ಟು ಹೋಗಿರುವ ಮೌಲ್ಯಗಳನ್ನು ಎತ್ತಿ ಹಿಡೀತೀರಿ ಎಂಬ ಭರವಸೆ ಇದೆ ಎಂದು ತಿಳಿಸಿದರು.

    ಕಾಗೇರಿ ಅವರಿಗೆ ನಿರ್ಗಮಿತ ಸ್ಪೀಕರ್ ರಮೇಶ್ ಕುಮಾರ್ ಅಭಿನಂದನೆ ಸಲ್ಲಿಸಿ, ಸ್ಪೀಕರ್ ಹುದ್ದೆಗೆ ಬಂದು ಕೂತಾಗ ನಮ್ಮಲ್ಲಿ ಇಲ್ಲದ ಗುಣಗಳನ್ನೂ ಸೇರಿಸಿ ಹೊಗಳುತ್ತಾರೆ. ಪಕ್ಷದಲ್ಲಿ ಯಾರಿಗೆ ಸಚಿವ ಸ್ಥಾನ ಕೊಡಕ್ಕಾಗಲ್ವೋ, ಹಿರಿಯರಿದ್ದಾರೋ ಅವರಿಗೆ ಸ್ಪೀಕರ್ ಸ್ಥಾನ ಕೊಡುತ್ತಾರೆ ಎಂದು ತಮಾಷೆ ಮಾಡಿದರು. ಈ ವೇಳೆ ಸದನದ ಸದಸ್ಯರು ನಗೆ ಬೀರಿದರು.

    ಸದನದಲ್ಲಿ ಬಿಜೆಪಿ 80, ಕಾಂಗ್ರೆಸ್ 32, ಜೆಡಿಎಸ್ 12 ಸದಸ್ಯರು ಭಾಗಿಯಾಗಿದ್ದರು. ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಕೆಲವು ಶಾಸಕರು ಸಿದ್ಧಾರ್ಥ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಚಿಕ್ಕಮಗಳೂರಿಗೆ ತೆರಳಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಹಲವರು ಇಂದಿನ ಸದನಕ್ಕೆ ಗೈರು ಆಗಿದ್ದರು.

    ನೂತನ ಸ್ಪೀಕರ್ ಕಾಗೇರಿ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು, ಹಿಂದುತ್ವ ಸಂಕುಚಿತ ಅಲ್ಲ ಎಂಬುದನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಸಾಧಿಸಿ ತೋರಿಸುತ್ತಾರೆ. ಆರ್‌ಎಸ್‌ಎಸ್ ಕೇವಲ ಬ್ರಾಹ್ಮಣರದ್ದು ಎಂಬ ತಪ್ಪು ಕಲ್ಪನೆ ಇದೆ. ಆರ್‌ಎಸ್‌ಎಸ್ ಶಾಖೆಗೆ ಹೋಗುತ್ತಿದ್ದ ಕಾರಣಕ್ಕೆ ನಮ್ಮ ತಂದೆ ನಮ್ಮ ಅಣ್ಣನನ್ನು ಹೊಡೆದು ಆಚೆ ಓಡಿಸಿದ್ದರು. ಆದರೆ ಶಿವಮೊಗ್ಗದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಅರ್ಚಕ ನರಸಿಂಹ ಅಯ್ಯಂಗಾರ್ ನಮ್ಮ ಅಣ್ಣನಿಗೆ ಆಶ್ರಯ ಕೊಟ್ಟಿದ್ದರು. ಅವರು ತಮ್ಮ ಮಕ್ಕಳೊಂದಿಗೆ ನಮ್ಮ ಅಣ್ಣನನ್ನು ಕೂಡಿಸಿ ಊಟ ಹಾಕುತ್ತಿದ್ದುದನ್ನು ಕಂಡ ಮೇಲೆ ನಮ್ಮ ತಂದೆಗೆ ಜ್ಞಾನೋದಯವಾಯ್ತು. ನಾನು ಗೆದ್ದು ಬರುತ್ತಿರುವ ಕ್ಷೇತ್ರದಲ್ಲಿ ಕುರುಬರ ವೋಟು ಜಾಸ್ತಿಯಿಲ್ಲ. ಬ್ರಾಹ್ಮಣರ ವೋಟ್ ಹೆಚ್ಚಿದೆ. ಆದರೆ ಅವರು ಜಾತಿ ನೋಡದೆ ನನ್ನನ್ನು ಆಯ್ಕೆ ಮಾಡುತ್ತಿದ್ದಾರೆ. ಹೀಗಾಗಿ ನಾನು ಆರ್‌ಎಸ್‌ಎಸ್ ಸಂಘಟನೆಯ ಸ್ವಯಂಸೇವಕನಾಗಿ ಸೇರಿಕೊಂಡಿರುವೆ ಎಂದು ಹೇಳಿದರು.

    ಎಲ್ಲರನ್ನೂ ಸಮಾನವಾಗಿ ಕಾಣುವುದನ್ನು ಆರ್‌ಎಸ್‌ಎಸ್ ಕಲಿಸುತ್ತದೆ. ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದ ಕಾಗೇರಿ ಅವರು ಸರ್ವರನ್ನು ಸಮಾನವಾಗಿ ಕಾಣುತ್ತಾರೆ. ಯಶಸ್ವಿಯೂ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.