Tag: Assets

  • ಸುಪ್ರೀಂ ಕೋರ್ಟ್‌ನ 33 ಜಡ್ಜ್‌ ಪೈಕಿ 21 ಮಂದಿಯ ಆಸ್ತಿ ಬಹಿರಂಗ

    ಸುಪ್ರೀಂ ಕೋರ್ಟ್‌ನ 33 ಜಡ್ಜ್‌ ಪೈಕಿ 21 ಮಂದಿಯ ಆಸ್ತಿ ಬಹಿರಂಗ

    ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರಿಂ ಕೋರ್ಟ್‌ (Supreme Court) ಮೊದಲ ಬಾರಿಗೆ ತನ್ನ ಒಟ್ಟು 33 ನ್ಯಾಯಾಧೀಶರ ಪೈಕಿ 21 ಜನರ ಆಸ್ತಿಯನ್ನು (Assets) ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

    ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ (CJI Sanjiv Khanna) ಅವರು ಸೇವೆಯಿಂದ ನಿವೃತ್ತಿಯಾಗಲು ಒಂದು ವಾರ ಬಾಕಿ ಇರುವಾಗ ನ್ಯಾಯಾಧೀಶರ ಆಸ್ತಿಗಳ ವಿವರ ಪ್ರಕಟವಾಗಿದೆ. ನ್ಯಾ.ಖನ್ನಾ ಮೇ 13 ರಂದು ನಿವೃತ್ತರಾಗಲಿದ್ದಾರೆ.

    ಆಸ್ತಿ ಮಾಹಿತಿಯ ಜೊತೆಗೆ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ಗೆ ನೇಮಕಾತಿಗಳ ಸಂಪೂರ್ಣ ಪ್ರಕ್ರಿಯೆಯನ್ನು ಹೈಕೋರ್ಟ್ ಕೊಲಿಜಿಯಂಗೆ ನಿಯೋಜಿಸಲಾದ ಪಾತ್ರ, ರಾಜ್ಯ ಸರ್ಕಾರಗಳು, ಭಾರತ ಸರ್ಕಾರದಿಂದ ಪಡೆದ ಪಾತ್ರ ಮತ್ತು ಇನ್‌ಪುಟ್‌ಗಳು ಮತ್ತು ಸುಪ್ರೀಂ ಕೋರ್ಟ್ ಕೊಲಿಜಿಯಂನ ಪರಿಗಣನೆಯ ಪತ್ರವನ್ನು ಪ್ರಕಟಿಸಿಲಾಗಿದೆ. ಇದನ್ನೂ ಓದಿ: ಭಾರತದ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಪಾಕಿಗೆ ಮತ್ತೆ ವಿಶ್ವಸಂಸ್ಥೆಯಲ್ಲಿ ಮುಖಭಂಗ

    ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಮಹಿಳಾ ನ್ಯಾಯಾಧೀಶರ ಪೈಕಿ ನ್ಯಾ.ಬೇಲಾ ಎಂ. ತ್ರಿವೇದಿ ತಮ್ಮ ಆಸ್ತಿಯನ್ನು ಪ್ರಕಟಿಸಿದ್ದಾರೆ ಆದರೆ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಆಸ್ತಿ ಇನ್ನೂ ಅಪ್‌ಲೋಡ್‌ ಆಗಿಲ್ಲ. ಬಾರ್‌ನಿಂದ ನೇರವಾಗಿ ಸುಪ್ರೀಂ ಕೋರ್ಟ್ ಪೀಠಕ್ಕೆ ಬಡ್ತಿ ಪಡೆದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಕೆ.ವಿ. ವಿಶ್ವನಾಥನ್ ಅವರ ಆಸ್ತಿಯನ್ನು ಪ್ರಕಟಿಸಲಾಗಿದೆ.

     

    ನ್ಯಾಯಮೂರ್ತಿ ನಾಗರತ್ನ ಅವರಲ್ಲದೆ, ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ, ದೀಪಂಕರ್ ದತ್ತ, ಅಹ್ಸಾನುದ್ದೀನ್ ಅಮಾನುಲ್ಲಾ, ಮನೋಜ್ ಮಿಶ್ರಾ, ಅರವಿಂದ್ ಕುಮಾರ್, ಪಿ.ಕೆ. ಮಿಶ್ರಾ, ಎಸ್.ಸಿ. ಶರ್ಮಾ, ಪಿ.ಬಿ. ವರಾಲೆ, ಎನ್. ಕೋಟೀಶ್ವರ್ ಸಿಂಗ್, ಆರ್. ಮಹಾದೇವನ್, ಜೋಯ್ಮಲ್ಯ ಬಾಗ್ಚಿ ಅವರ ಆಸ್ತಿಗಳನ್ನು ಸಾರ್ವಜನಿಕ ವೀಕ್ಷಣೆಗಾಗಿ ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿಲ್ಲ.

    ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾ.ಯಶವಂತ್ ವರ್ಮಾ (Justice Yashwant Varma) ಅವರ ದೆಹಲಿ ನಿವಾಸದಲ್ಲಿ ಕಂತೆ ಕಂತೆ ನಗದು ಪತ್ತೆಯಾದ ಬಳಿಕ ನ್ಯಾಯಧೀಶರು ತಮ್ಮ ಆಸ್ತಿಯನ್ನು ಬಹಿರಂಗಪಡಿಸಬೇಕೆಂಬ ಆಗ್ರಹ ವ್ಯಕ್ತವಾಗಿತ್ತು. ಇದನ್ನೂ ಓದಿ: ಜಡ್ಜ್‌ ನಿವಾಸದಲ್ಲಿ ಕಂತೆ ಕಂತೆ ನಗದು ಪತ್ತೆ ಕೇಸ್ – ಸಿಜೆಐ ಕೈ ಸೇರಿದ ತನಿಖಾ ವರದಿ

    ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಸ್ಥಿರ ಠೇವಣಿ ಮತ್ತು ಬ್ಯಾಂಕ್ ಖಾತೆಗಳಲ್ಲಿ 55.75 ಲಕ್ಷ ರೂ. ಮತ್ತು ಸಾರ್ವಜನಿಕ ಭವಿಷ್ಯ ನಿಧಿಯಲ್ಲಿ (ಪಿಪಿಎಫ್) 1.06 ಕೋಟಿ ರೂ. ಇದ್ದರೆ, ಮೇ 14 ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಬ್ಯಾಂಕ್ ಖಾತೆಗಳಲ್ಲಿ 19.63 ಲಕ್ಷ ರೂ. ಮತ್ತು ಪಿಪಿಎಫ್ ಖಾತೆಯಲ್ಲಿ 6.59 ಲಕ್ಷ ರೂ. ಇದೆ.

  • 2nd Phase Voting: ಹೇಮ ಮಾಲಿನಿಗಿಂತಲೂ ಸ್ಟಾರ್‌ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ!

    2nd Phase Voting: ಹೇಮ ಮಾಲಿನಿಗಿಂತಲೂ ಸ್ಟಾರ್‌ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ!

    – ಮಹಾರಾಷ್ಟ್ರದ ಅಭ್ಯರ್ಥಿ ಬಳಿಯಿದೆ ಕೇವಲ 500 ರೂ. ಆಸ್ತಿ

    ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Polls) 2ನೇ ಹಂತದ ಮತದಾನ ನಡೆಯುತ್ತಿದೆ. ಕರ್ನಾಟಕ, ಕೇರಳ ಸೇರಿದಂತೆ ಒಟ್ಟು 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಕ್ಷೇತ್ರಗಳಲ್ಲಿ ಮತದಾನ (Voting) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಿಗಿಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮೇ 7ರಂದು 2ನೇ ಹಂತದ ಮತದಾನ ನಡೆಯಲಿದೆ.

    ರಾಜಸ್ಥಾನದಲ್ಲಿ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ (Uttar Pradesh) ತಲಾ 8, ಮಧ್ಯ ಪ್ರದೇಶದಲ್ಲಿ 6, ಅಸ್ಸಾಂ ಮತ್ತು ಬಿಹಾರದಲ್ಲಿ ತಲಾ 5 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಜೊತೆಗೆ ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 3 ಸ್ಥಾನಗಳು ಮತ್ತು ಮಣಿಪುರ, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಒಂದೊಂದು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

    ದೇಶದ 2ನೇ ಹಂತದ ಚುನಾವಣೆಯಲ್ಲಿ ಒಟ್ಟು 89 ಕ್ಷೇತ್ರಗಳಿಗೆ ಮತದಾನ ನಿಗದಿಯಾಗಿತ್ತು. ಆದ್ರೆ ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ಮರಣ ಹೊಂದಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಬೇತುಲ್‌ನಲ್ಲಿ ಮತದಾನ ಮರುನಿಗದಿಪಡಿಲಾಗಿದೆ. ಮೇ 7 ರಂದು 3ನೇ ಹಂತದ ಮತದಾನದ ವೇಳೆ ಬೇತುಲ್‌ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಇದನ್ನೂ ಓದಿ: ಮೂಲಭೂತ ಸೌಕರ್ಯ ಕೊರತೆ ಆರೋಪ – ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

    ಅತೀ ಶ್ರೀಮಂತ ಅಭ್ಯರ್ಥಿಗಳು:
    ದೇಶದಲ್ಲಿ ನಡೆಯುತ್ತಿರುವ 2ನೇ ಹಂತದ ಚುನಾವಣೆಯಲ್ಲಿ ಸ್ಟಾರ್‌ ಚಂದ್ರು (ವೆಂಕಟರಮಣೇಗೌಡ) ಅತೀ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಅಖಾಡಕ್ಕಿಳಿದಿರುವ ಸ್ಟಾರ್‌ ಚಂದ್ರು ತಮ್ಮ ಕುಟುಂಬದ ಆಸ್ತಿ 622 ಕೋಟಿ ರೂ. ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. 593 ಕೋಟಿ ರೂ. ಆಸ್ತಿ ಹೊಂದಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿ.ಕೆ ಸುರೇಶ್‌, 278 ಕೋಟಿ ರೂ. ಆಸ್ತಿ ಹೊಂದಿರುವ ಉತ್ತರ ಪ್ರದೇಶದ ಮಥುರಾ ಕ್ಷೇತ್ರದ ಅಭ್ಯರ್ಥಿ ಹೇಮ ಮಾಲಿನಿ ಹಾಗೂ 232 ಕೋಟಿ ರೂ. ಆಸ್ತಿ ಹೊಂದಿರುವ ಮಧ್ಯಪ್ರದೇಶದ ಕಾಂಗ್ರೆಸ್‌ ಅಭ್ಯರ್ಥಿ ಸಂಜಯ್‌ ಶರ್ಮಾ ಕ್ರಮವಾಗಿ 2,3,4ನೇ ಸ್ಥಾನದಲ್ಲಿದ್ದಾರೆ.

    ಬಡ ಅಭ್ಯರ್ಥಿಗಳು ಯಾರು?
    ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲಕ್ಷ್ಮಣ್‌ ನಾಗೋರಾವ್‌ ಪಾಟಿಲ್‌ ಕೇವಲ 500 ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಕೇರಳದ ಕಾಸರಗೋಡು ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ 1,000 ರೂ. ಮತ್ತು ಮಹಾರಾಷ್ಟ್ರ ಅಮರಾವತಿ ಕ್ಷೇತ್ರದ ಪೃಥ್ವೀಸಾಮ್ರಾಟ್ ಮುಕಿಂದ್ರರಾವ್ ದೀಪವಂಶ ಕೇವಲ 1,400 ರೂ. ಆಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ 22.34% ಮತದಾನ – ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರಿನಲ್ಲಿ ಭರ್ಜರಿ ಪ್ರತಿಕ್ರಿಯೆ

  • ತೆಲಂಗಾಣದ ಶ್ರೀಮಂತ ಅಭ್ಯರ್ಥಿ – ಓವೈಸಿ ವಿರುದ್ಧ ಅಖಾಡಕ್ಕಿಳಿದಿರೋ ಮಾಧವಿ ಲತಾ ಆಸ್ತಿ ಎಷ್ಟಿದೆ ಗೊತ್ತಾ?

    ತೆಲಂಗಾಣದ ಶ್ರೀಮಂತ ಅಭ್ಯರ್ಥಿ – ಓವೈಸಿ ವಿರುದ್ಧ ಅಖಾಡಕ್ಕಿಳಿದಿರೋ ಮಾಧವಿ ಲತಾ ಆಸ್ತಿ ಎಷ್ಟಿದೆ ಗೊತ್ತಾ?

    ಹೈದರಾಬಾದ್‌: ಅಸಾದುದ್ದೀನ್‌ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಮಹಿಳಾ ಅಭ್ಯರ್ಥಿ ಮಾಧವಿ ಲತಾ (Madhavi Latha) ತಮ್ಮ ಕುಟುಂಬದ ಆಸ್ತಿ ವಿವರ ಘೋಷಿಸಿಕೊಂಡಿದ್ದಾರೆ. ತೆಲಂಗಾಣದ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿರುವ ಮಾಧವಿ ಲತಾ ಅವರ ಕುಟುಂಬ ಬರೋಬ್ಬರಿ 221.38 ಕೋಟಿ ರೂ. ಆಸ್ತಿ (Assets) ಹೊಂದಿರುವುದಾಗಿ ಅವರು ಘೋಷಿಸಿಕೊಂಡಿದ್ದಾರೆ.

    ಮಾಧವಿ ಲತಾ ಕುಟುಂಬ ಅವಳಿ ನಗರವಾದ ಸಿಕಂದರಾಬಾದ್‌ನಲ್ಲಿ ನೆಲೆಸಿದೆ. ಮಾಧವಿ ಲತಾ ಮತ್ತು ಕೊಂಪೆಲ್ಲಾ ವಿಶ್ವನಾಥ್ (Kompella Viswanath) ದಂಪತಿ 165.46 ಕೋಟಿ ರೂ. ಚರಾಸ್ತಿ, 55.91 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. 49 ವರ್ಷ ವಯಸ್ಸಿನ ಮಾಧವಿ ಲತಾ ಅವರು ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ: ಓವೈಸಿ ವಿರುದ್ಧ ಸ್ಪರ್ಧಿಸ್ತಿರೋ ಬಿಜೆಪಿ ಅಭ್ಯರ್ಥಿಗೆ Y+ ಭದ್ರತೆ

    ಮಾಧವಿ ಲತಾ ವೈಯಕ್ತಿಕವಾಗಿ ವಿವಿಧ ಕಂಪನಿಗಳಲ್ಲಿ 25.20 ಕೋಟಿ ರೂ. ಹೂಡಿಕೆ ಸೇರಿದಂತೆ ಒಟ್ಟು 31.31 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಜೊತೆಗೆ ವಿರಿಂಚಿ ಲಿಮಿಟೆಡ್‌ನಲ್ಲಿ 7.80 ಕೋಟಿ ರೂ. ಹೂಡಿಕೆ ಮಾಡಿದ್ದು, 3.78 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನ ಹೊಂದಿದ್ದಾರೆ. ಪತಿ ವಿಶ್ವನಾಥ್‌ ವಿರಿಂಚಿ ಲಿಮಿಟೆಡ್‌ನಲ್ಲಿ 52.36 ಕೋಟಿ ರೂ. ಮೌಲ್ಯದ ಷೇರುಗಳು ಒಳಗೊಂಡಂತೆ, 88.31 ಕೋಟಿ ರೂ.ನಷ್ಟು ಚರಾಸ್ತಿ ಹೊಂದಿದ್ದಾರೆ. ಅವರ ಮೂರು ಮಕ್ಕಳ ಹೆಸರಲ್ಲಿ 45 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಚರಾಸ್ತಿ ಇದೆ ಎಂಬುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಇಂದಿರಾ ವಿರುದ್ಧವೂ ಆಗಿತ್ತು ‘ಮಹಾಮೈತ್ರಿ’ – 1971 ರ ಚುನಾವಣೆ ಫಲಿತಾಂಶ ಏನಾಯ್ತು?

    ಅಭ್ಯರ್ಥಿಯಾಗಿರುವ ಮಾಧವಿ 6.32 ಕೋಟಿ ರೂ.ಗಳಷ್ಟು ಸ್ಥಿರಾಸ್ತಿ ಹೊಂದಿದ್ದರೆ, ಪತಿ 49.59 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಆಸ್ತಿಗಳಲ್ಲಿ ಕೃಷಿಯೇತರ ಭೂಮಿ ಮತ್ತು ಹೈದರಾಬಾದ್ ಮತ್ತು ಸುತ್ತಮುತ್ತಲಿನ ವಾಣಿಜ್ಯ ಮತ್ತು ವಸತಿ ಕಟ್ಟಡಗಳು ಸೇರಿವೆ. ಇನ್ನೂ ಮಾಧವಿ ಲತಾ 90 ಲಕ್ಷ ರೂ.ಗಳ ಸಾಲ ಹೊಂದಿದ್ದರೆ, ಪತಿ 26.13 ಕೋಟಿ ರೂ.ಗಳ ಸಾಲ ಹೊಂದಿದ್ದಾರೆ.

    ಕ್ರಿಮಿನಲ್‌ ಪ್ರಕರಣವೂ ಇದೆ:
    ಮಾಧವಿ ಲತಾ ಅವರು ಒಂದು ಕ್ರಿಮಿನಲ್‌ ಮೊಕದ್ದಮೆ ಎದುರಿಸುತ್ತಿದ್ದಾರೆ. ಕಳೆದ ವಾರವಷ್ಟೇ ಹೈದರಾಬಾದ್‌ನ ಬೇಗಂ ಬಜಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 295-ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾ ಪ್ರಚಾರದ ವೇಳೆ ಮಸೀದಿಗೆ ಬಾಣ ಬಿಡುವಂತೆ ಸನ್ನೆ ಮಾಡಿದ್ದರು. ಇದನ್ನೂ ಓದಿ: ಏ.26ರಂದು ರಾಜ್ಯದ ಮೊದಲ ಹಂತದ ಚುನಾವಣೆ: ಯಾವ ಕ್ಷೇತ್ರ-ಎಷ್ಟು ಮತದಾರರು? ಇಲ್ಲಿದೆ ವಿವರ…

    ಮಾಧವಿ ಲತಾ ಯಾರು?: ಆರ್‌ಎಸ್‌ಎಸ್‌ನ ಕಟ್ಟಾ ಕಾರ್ಯಕರ್ತೆ, ಹೋರಾಟಗಾರ್ತಿ, ಭರತನಾಟ್ಯ ಕಲಾವಿದೆ ಮಾಧವಿ ಲತಾ (Madhavi Latha) ಅವರನ್ನು ಭಾರತೀಯ ಜನತಾ ಪಾರ್ಟಿ ಅಖಾಡಕ್ಕೆ ಇಳಿಸಿದೆ. ಈ ಮೂಲಕ ಓವೈಸಿ ವಿರುದ್ಧ ಈ ಬಾರಿ ಗೆಲ್ಲಲೇಬೇಕು ಎಂಬ ಹಠಕ್ಕೆ ಬಿಜೆಪಿ ಬಿದ್ದಂತಿದೆ.

    ನಿಜಾಮ್ ಕಾಲೇಜಿನಲ್ಲಿ ಸಾರ್ವಜನಿಕ ಆಡಳಿತದಲ್ಲಿ ಪದವಿ ಮತ್ತು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಮಾಧವಿ ಲತಾ ಅವರು ಪಡೆದಿದ್ದಾರೆ. ಇವರ ಮೂವರು ಮಕ್ಕಳಲ್ಲಿ ಇಬ್ಬರು ಐಐಟಿ ಮದ್ರಾಸ್‌ನಲ್ಲಿ ಓದುತ್ತಿದ್ದಾರೆ. ಹೋಮ್‌ ಸ್ಕೂಲಿಂಗ್‌ ನಡೆಸಿಯೇ ಮಕ್ಕಳನ್ನು ಐಐಟಿಗೆ ಕಳುಹಿಸಿರುವುದು ವಿಶೇಷವಾಗಿದೆ.

    ವೃತ್ತಿಪರ ಭರತನಾಟ್ಯಂ ಡಾನ್ಸರ್‌ ಆಗಿರುವ 49 ವರ್ಷದ ಮಾಧವಿ ಲತಾ ಅವರು ಹೆಣ್ಣುಮಕ್ಕಳ ಶಿಕ್ಷಣದ ಪ್ರಾಯೋಜಕರಾಗಿದ್ದಾರೆ ಮತ್ತು ಆರೋಗ್ಯ ಶಿಬಿರಗಳನ್ನು ಆಯೋಜಿಸುವಲ್ಲಿ ಮತ್ತು ಪ್ರವಾಹ ನೆರವು ನೀಡುವಲ್ಲಿನ ಪ್ರಯತ್ನಗಳಿಗೆ ಹೆಸರುವಾಸಿಯಾಗಿದ್ದಾರೆ. ಪ್ರಸ್ತುತ ಹೈದರಾಬಾದ್ ಮೂಲದ ಪ್ರಮುಖ ಆರೋಗ್ಯ ಸಂಸ್ಥೆಯಾದ ವಿರಿಂಚಿ ಹಾಸ್ಪಿಟಲ್ಸ್‌ನ ಅಧ್ಯಕ್ಷರಾಗಿದ್ದಾರೆ. ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆರೋಪದ ನಂತರ ಆರೋಗ್ಯ ಅಧಿಕಾರಿಗಳು ಕೋವಿಡ್‌-19 ಚಿಕಿತ್ಸೆಗಾಗಿ ಅದರ ಪರವಾನಗಿಯನ್ನು ರದ್ದುಗೊಳಿಸಿದಾಗ ವಿರಿಂಚಿ ಹಾಸ್ಪಿಟಲ್ಸ್‌ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

  • ಮೊದಲ ಹಂತದ ಮತದಾನ: 716 ಕೋಟಿ ಆಸ್ತಿ ಒಡೆಯ – ʻಕೈʼನಾಯಕ ನಂ.1 ಶ್ರೀಮಂತ ಅಭ್ಯರ್ಥಿ!

    ಮೊದಲ ಹಂತದ ಮತದಾನ: 716 ಕೋಟಿ ಆಸ್ತಿ ಒಡೆಯ – ʻಕೈʼನಾಯಕ ನಂ.1 ಶ್ರೀಮಂತ ಅಭ್ಯರ್ಥಿ!

    – ಬಡ ಅಭ್ಯರ್ಥಿ ಬಳಿಯಿದೆ ಕೇವಲ 320 ರೂ.

    ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಇಂದು ಲೋಕಸಭೆ ಚುನಾವಣೆ (Lok Sabha Elections 2024) ಮೊದಲ ಹಂತದ ಮತದಾನ ನಡೆಯುತ್ತಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 102 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ (Voting) ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಶುರುವಾಗಿದ್ದು, ಎಲ್ಲೆಡೆ ಜನ ಉತ್ಸಾಹದಿಂದಲೇ ಮತದಾನ ಮಾಡ್ತಿದ್ದಾರೆ.

    ಈ ಮೊದಲ ಹಂತ ಚುನಾವಣೆಯಲ್ಲಿ ಒಂದೆಡೆ ಶ್ರೀಮಂತರಿದ್ದರೆ, ಮತ್ತೊಂದೆಡೆ ಬಡ ಅಭ್ಯರ್ಥಿಗಳು ಕಣಕ್ಕಿಳಿದಿರುವುದು ವಿಶೇಷ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (Association for Democratic Reforms)  1,625 ಅರ್ಥಿಗಳ ಪೈಕಿ 1,618 ಅಭ್ಯರ್ಥಿಗಳ ಆಸ್ತಿ ವಿವರ ಬಿಡುಗಡೆಯಾಗಿದೆ. ಅವರಲ್ಲಿ 10 ಮಂದಿ ತಮ್ಮ ಆಸ್ತಿಯನ್ನು ಶೂನ್ಯ ಎಂದು ಘೋಷಿಸಿದ್ದಾರೆ. 450 ಅಭ್ಯರ್ಥಿಗಳು ಕೋಟ್ಯಧಿಪತಿಗಳಾಗಿದ್ದು 1 ಕೋಟಿ ರೂ.ಗಿಂತಲೂ ಹೆಚ್ಚು ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ವರದಿಗಳು ತೋರಿಸಿವೆ.

    ಮಧ್ಯಪ್ರದೇಶದ ಚಿಂದ್ವಾರದ ಹಾಲಿ ಸಂಸದ ಕಾಂಗ್ರೆಸ್‌ನ ನಕುಲ್ ನಾಥ್ (Nakul Nath) ಅವರು ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ನಕುಲ್‌ ನಾಥ್‌ ಸರಿಸುಮಾರು 716 ಕೋಟಿ ಮೌಲ್ಯದ ಆಸ್ತಿ ಒಡೆಯರಾಗಿದ್ದಾರೆ. ಮಧ್ಯಪ್ರದೇಶದ ಮಾಜಿ ಸಿಎಂ ಪುತ್ರನೂ ಆಗಿರುವ ನಕುಲ್‌ ನಾಥ್‌ 2019ರ ಲೋಕಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸಿದ್ದರು.

    ಕೋಟ್ಯಧಿಪತಿಗಳು ಯಾರು?
    ಮೊದಲ ಹಂತದ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ನಕುಲ್‌ ನಾಥ್‌ ಅತ್ಯಂತ ಶ್ರೀಮಂತ (716 ಕೋಟಿ ರೂ.) ಅಭ್ಯರ್ಥಿಯಾಗಿದ್ದಾರೆ. ಅಲ್ಲದೇ ತಮಿಳುನಾಡಿನ ಈರೋಡ್‌ನಿಂದ ಸ್ಪರ್ಧಿಸಿರುವ ಎಐಎಡಿಎಂಕೆಯ ಅಶೋಕ್ ಕುಮಾರ್ 662 ಕೋಟಿ ರೂ., ಶಿವಗಂಗಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿಯ ದೇವನಾಥನ್ ಯಾದವ್ 304 ಕೋಟಿ ರೂ., ಉತ್ತರಾಖಂಡದ ತೆಹ್ರಿ ಗರ್ವಾಲ್‌ನಿಂದ ಕಣಕ್ಕಿಳಿದಿರುವ ಬಿಜೆಪಿಯ ಮಾಲಾ ರಾಜ್ಯ ಲಕ್ಷ್ಮಿ ಶಾ 206 ಕೋಟಿ ರೂ., ಉತ್ತರ ಪ್ರದೇಶದ ಸಹರಾನ್‌ಪುರದಿಂದ ಸ್ಪರ್ಧಿಸಿರುವ 159 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದರೆ, ಕಾಂಗ್ರೆಸ್‌ನ ಹಾಲಿ ಸಂಸದ ಕಾರ್ತಿ ಚಿದಂಬರಂ 96 ಕೋಟಿ ರೂ. ಆಸ್ತಿಯ ಒಡೆಯರಾಗಿದ್ದಾರೆ.

    ಬಡ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರಿದ್ದಾರೆ.
    ತಮಿಳುನಾಡಿನ ತೂತುಕುಡಿ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಪೊನ್‌ರಾಜ್ ಕೇವಲ 320 ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದ ರಾಮ್‌ಟೆಕ್ ಕ್ಷೇತ್ರ ಮತ್ತು ತಮಿಳುನಾಡಿನ ಚೆನ್ನೈ ಉತ್ತರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಗಳಾದ ಕಾರ್ತಿಕ್ ಗೆಂದ್ಲಾಜಿ ಡೋಕೆ ಮತ್ತು ಸೂರ್ಯಮುತ್ತು ತಲಾ 500 ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.

  • 1,214 ಕೋಟಿ ಆಸ್ತಿಯ ಒಡೆಯ ಡಿಕೆ ಶಿವಕುಮಾರ್‌- ಪತ್ನಿ, ಮಕ್ಕಳ ಬಳಿ ಎಷ್ಟು ಆಸ್ತಿಯಿದೆ?

    1,214 ಕೋಟಿ ಆಸ್ತಿಯ ಒಡೆಯ ಡಿಕೆ ಶಿವಕುಮಾರ್‌- ಪತ್ನಿ, ಮಕ್ಕಳ ಬಳಿ ಎಷ್ಟು ಆಸ್ತಿಯಿದೆ?

    ರಾಮನಗರ: ಕನಕಪುರ (Kanakapura) ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ತನ್ನ ಬಳಿ ಒಟ್ಟು 1,214 ಕೋಟಿ ರೂ. ಮೌಲ್ಯದ ಆಸ್ತಿಯಿದೆ (Assets) ಎಂದು ಘೋಷಿಸಿಕೊಂಡಿದ್ದಾರೆ.

    2018ರಲ್ಲಿ ಡಿಕೆಶಿ 840 ಕೋಟಿ ರೂ. ಮೌಲ್ಯದ ಆಸ್ತಿಯಿದೆ ಎಂದು ಘೋಷಿಸಿಕೊಂಡಿದ್ದರು. ಡಿಕೆಶಿ ಪತ್ನಿಯ ಸ್ಥಿರಾಸ್ತಿ ಹಾಗೂ ಚರಾಸ್ತಿ ಒಟ್ಟು ಮೌಲ್ಯ 153.30ಕೋಟಿ ರೂ. ಇದ್ದು ಇದರಲ್ಲಿ ಅವಿಭಜಿತ ಕುಟುಂಬದ ಬಂದ 61 ಕೋಟಿ ರೂ. ಆಸ್ತಿ ಇದೆ. ಡಿಕೆಶಿ ಬಳಿ ಇರುವ ಚರಾಸ್ತಿ ಮೌಲ್ಯ 244 ಕೋಟಿ ರೂ., ಪತ್ನಿ ಹೆಸರಿನ ಚರಾಸ್ತಿ 20.30 ಕೋಟಿ ರೂ. ಹಾಗೂ ಅವಿಭಜಿತ ಕುಟುಂಬದ ಚರಾಸ್ತಿ 2.74 ಕೋಟಿ ರೂ. ಇದ್ದು ಮಗನ ಹೆಸರಲ್ಲಿ 1.29 ಲಕ್ಷ ರೂ. ಮಗಳ ಹೆಸರಲ್ಲಿ 12 ಲಕ್ಷ ರೂ. ಚರಾಸ್ತಿ ಇದೆ.

    ಡಿಕೆಶಿ ಸ್ಥಿರಾಸ್ತಿ ಒಟ್ಟು ಮೌಲ್ಯ 970 ಕೋಟಿ ರೂ. ಆಗಿದ್ದು ಪತ್ನಿ ಹೆಸರಿನಲ್ಲಿ 113 ಕೋಟಿ ರೂ. ಸ್ಥಿರಾಸ್ತಿ, ಅವಿಭಜಿತ ಕುಟುಂಬದ ಒಟ್ಟು 54.33 ಕೋಟಿ ಸ್ಥಿರಾಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಜೊತೆಗೆ ಕೃಷಿ, ಬಾಡಿಗೆ ಮತ್ತು ವಿವಿಧ ಕಂಪನಿಗಳಲ್ಲಿ ಶೇರು, ಉದ್ದಿಮೆ ಗಳ ಮೂಲಕ ತಮ್ಮ ಆದಾಯದ ಮೂಲ ತೋರಿಸಿದ್ದಾರೆ.

    ತನ್ನ ಬಳಿ 2.184 ಕೆ.ಜಿ ಚಿನ್ನ, 12 ಕೆಜಿ ಬೆಳ್ಳಿ, 2.26 ಕೋಟಿ ರೂ. ಮೌಲ್ಯದ ವಜ್ರ ಮತ್ತು ಮಾಣಿಕ್ಯದ ಆಭರಣ, 9 ಲಕ್ಷ ರೂ. ಮೌಲ್ಯದ ರೊಲೆಕ್ಸ್ ವಾಚ್, 23 ಲಕ್ಷ ರೂ. ಮೌಲ್ಯದ ಹ್ಯೂಬ್ಲೋಟ್‌ ವಾಚ್‌ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿ ಅಭ್ಯರ್ಥಿಗಳ ಆಸ್ತಿ ಎಷ್ಟು?

     

    ಪತ್ನಿ ಹೆಸರಿನಲ್ಲಿ 2.600 ಕೆ.ಜಿ ಚಿನ್ನ, 20 ಕೆ.ಜಿ ಬೆಳ್ಳಿ, ಕುಟುಂಬದ ಆಸ್ತಿ 1 ಕೆ.ಜಿ ಚಿನ್ನ, 10 ಕೆ.ಜಿ ಬೆಳ್ಳಿ, ಮಗನ ಹೆಸರಿನಲ್ಲಿ 675 ಗ್ರಾಂ ಚಿನ್ನ, ಮಗಳ ಹೆಸರಿನಲ್ಲಿ 675 ಗ್ರಾಂ ಚಿನ್ನ ಹಾಗೂ ಅವಿಭಜಿತ ಕುಟುಂಬದಿಂದ 1.ಕೆಜಿ ಚಿನ್ನ, 10 ಕೆಜಿ ಬೆಳ್ಳಿ ಹೊಂದಿದ್ದಾರೆ.

    ಒಟ್ಟು 226 ಕೋಟಿ ರೂ. ಸಾಲ ಇದ್ದು, ಪತ್ನಿ ಹೆಸರಲ್ಲಿ 34.53 ಕೋಟಿ ರೂ. ಮಗನ ಹೆಸರಲ್ಲಿ 3.81 ಕೋಟಿ ರೂ. ಹಾಗೂ ಮಗಳ ಹೆಸರಿನಲ್ಲಿ 8.25 ಕೋಟಿ ರೂ. ಸಾಲ ಇದೆ ಎಂದು ತೋರಿಸಿದ್ದಾರೆ.

    4 ಆದಾಯ ತೆರಿಗೆ, 1 ಲೋಕಾಯುಕ್ತ, 2 ಜಾರಿ ನಿರ್ದೇಶನಾಲಯ, ಕೋವಿಡ್ ನಿಯಮಾವಳಿ ಸಂಬಂಧ 6 ಪ್ರಕರಣ ಸೇರಿದಂತೆ ಡಿಕೆಶಿ ವಿರುದ್ಧ ಒಟ್ಟು 19 ಪ್ರಕರಣಗಳಿವೆ.  ಡಿಕೆಶಿ ಒಟ್ಟು 14.24 ಕೋಟಿ ರೂ ವಾರ್ಷಿಕ ಆದಾಯ ಹೊಂದಿದ್ದರೆ  ಇವರ ಪತ್ನಿ 1.90 ಕೋಟಿ ರೂ. ವಾರ್ಷಿಕ ಆದಾಯ ಹೊಂದಿದ್ದಾರೆ.

  • 200 ಕೋಟಿ ರೂ. ಅಕ್ರಮ ಆಸ್ತಿ ಖರೀದಿ – ಶಾಸಕ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

    200 ಕೋಟಿ ರೂ. ಅಕ್ರಮ ಆಸ್ತಿ ಖರೀದಿ – ಶಾಸಕ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಚಿಕ್ಕಮಗಳೂರು: ಶೃಂಗೇರಿಯ ಶಾಸಕ ರಾಜೇಗೌಡ (RajeGowda) ಆದಾಯಕ್ಕೂ ಮೀರಿ ಅಕ್ರಮವಾಗಿ 200 ಕೋಟಿ ರೂ.ಗೂ ಅಧಿಕ ಆಸ್ತಿ ಸಂಪಾದಿಸಿದ್ದಾರೆ, ಜೊತೆಗೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ಮೋಸ ಮಾಡಿದ್ದಾರೆ ಎಂದು ಇಂದು ಲೋಕಾಯುಕ್ತದಲ್ಲಿ (Lokayukta)  ದೂರು ದಾಖಲಾಗಿದೆ.

    ರಾಜೇಗೌಡ ಮತ್ತು ಕುಟುಂಬಸ್ಥರ ವಿರುದ್ಧ ವಿಜಯಾನಂದ ಸಿಪಿ ದೂರು ನೀಡಿದ್ದು ಶಬಾನ್ ರಂಜಾನ್ ಫಾರ್ಮ್‍ನ 266 ಎಕರೆಯಲ್ಲಿ ವಿವಿಧ ಪ್ಲಾಂಟ್‌ ಇರುವ ಭೂಮಿಯನ್ನು ರಾಜೇಗೌಡ ಕುಟುಂಬ ಅಕ್ರಮವಾಗಿ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಇದು ಈ ಮೊದಲ ಮೃತ ಸಿದ್ದಾರ್ಥ ಅವರ ಹೆಸರಿನಲ್ಲಿ ಇತ್ತು. ಅವರ ಮರಣದ ಬಳಿಕ ಅವರ ಪತ್ನಿ ಮತ್ತು ಮಗನ ಹೆಸರಿನಲ್ಲಿ ಇತ್ತು ಅದನ್ನ ರಾಜೇಗೌಡರು ತಮ್ಮ ಪ್ರಭಾವ ಬೀರಿ ಅವರ ಪತ್ನಿ ಹಾಗೂ ಮಗನ ಹೆಸರನ್ನು ಫಾರ್ಮ್‍ಗೆ ಸೇರಿಸಿದ್ದಾರೆ ಎಂದು ವಕೀಲ ದಿನೇಶ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಗೋಲ್ಮಾಲ್ – ಚಿಲುಮೆ ಸಂಸ್ಥೆಯ ನಾಲ್ವರು ಪೊಲೀಸರ ವಶಕ್ಕೆ

    ಸಿದ್ದಾರ್ಥ ಕುಟುಂಬ 1992ರಲ್ಲಿ ಶಾಬನ್ ರಂಜನ್ ಟ್ರಸ್ಟ್‌ನಿಂದ ಸುಮಾರು 266 ಎಕರೆ 38 ಗುಂಟೆ, ಬಂಗ್ಲೆ, ಸಿಬ್ಬಂದಿ ಕ್ವಾಟರ್ಸ್ ಸೇರಿದಂತೆ ಖರೀದಿ ಮಾಡಿದ್ರು, ಇದನ್ನು ಖರೀದಿ ಮಾಡಲು ಶಾಬನ್ ರಂಜನ್ ಪಾಲುದಾರಿಕೆಗೆ ಸೇರಿಕೊಂಡಿದ್ರು, ಆದ್ರೆ ಇದೀಗ ಸಿದ್ದಾರ್ಥ ಅವರ ಪತ್ನಿ ಮಗನ ಹೆಸರಿನಲ್ಲಿದ್ದ ಪ್ರಾಪರ್ಟಿ ರಾಜೇಗೌಡರ ಕುಟುಂಬಕ್ಕೆ ಹಸ್ತಾಂತರ ಅಗಿದೆ. ಹಸ್ತಾಂತರ ಮಾಡಿಕೊಂಡಿದ್ದಕ್ಕೆ ಯಾವುದೇ ಹಣಕಾಸು ವ್ಯವಹಾರದ ಲೆಕ್ಕಪತ್ರ ಇಲ್ಲ. ಜೊತೆಗೆ ಈ ಹಿಂದೆ 2018 ಚುನಾವಣೆಗೆ ಸ್ಪರ್ಧೆ ಮಾಡುವಾಗ ಒಟ್ಟು 30 ಕೋಟಿ ಪ್ರಾಪರ್ಟಿ ಕ್ಲೈಮ್ ಮಾಡಿದ್ರು, ಅದರಲ್ಲಿ 25 ಕೋಟಿ ಬೇರೆ ಬೇರೆ ಹೊಣೆಗಾರಿಕೆ ಇರುವುದಾಗಿ ದಾಖಲೆ ನೀಡಿದ್ರು, ಈ ಹಿನ್ನೆಲೆ ಸರ್ಕಾರದ ಬೊಕ್ಕಸಕ್ಕೆ ಮತ್ತು ಅಕ್ರಮ ಹಣ ಗಳಿಕೆ, ಅಧಿಕಾರ ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಮಾಡಿ ಹಣ ಆಸ್ತಿ ಪಾಸ್ತಿ ಮಾಡುವ ಮೂಲಕ ನಷ್ಟ ಮಾಡಿರುವುದಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಆದಾಯ ತೆರಿಗೆ ಮತ್ತು ಇಡಿ ಕಚೇರಿಗೆ ದಾಖಲೆಗಳ ಸಮೇತ ದೂರು ನೀಡಲು ವಕೀಲರು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: ರಾಮನಿಗಿಂತ ರಾವಣ ಜ್ಞಾನಿ – ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ: ರಾಜನಾಥ್ ಸಿಂಗ್

    Live Tv
    [brid partner=56869869 player=32851 video=960834 autoplay=true]

  • ಆಸ್ತಿ ವಿವರ ಘೋಷಿಸಿಕೊಂಡ ಪ್ರಧಾನಿ ಮೋದಿ – ಎಷ್ಟಿದೆ ಗೊತ್ತಾ?

    ಆಸ್ತಿ ವಿವರ ಘೋಷಿಸಿಕೊಂಡ ಪ್ರಧಾನಿ ಮೋದಿ – ಎಷ್ಟಿದೆ ಗೊತ್ತಾ?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ಮೋದಿ ಅವರ ಚರಾಸ್ತಿಯು ಒಂದು ವರ್ಷದಲ್ಲಿ 26.13 ಲಕ್ಷದಷ್ಟು ಏರಿಕೆಯಾಗಿದ್ದು, ಅವರ ಬಳಿ ಒಟ್ಟು 2.23 ಕೋಟಿ ಮೌಲ್ಯದ ಆಸ್ತಿ ಇದೆ.

    ಗುಜರಾತ್‌ನ ಗಾಂಧಿನಗರದಲ್ಲಿರುವ ಭೂಮಿಯನ್ನು ದಾನ ಮಾಡಿರುವುದರಿಂದ ಅವರ ಬಳಿ ಯಾವುದೇ ಸ್ಥಿರಾಸ್ತಿ ಇಲ್ಲ. 2022ರ ಮಾರ್ಚ್‌ 31ರ ವೇಳೆಗೆ ಮೋದಿ ಅವರ ಒಟ್ಟು ಆಸ್ತಿ ಮೌಲ್ಯ 2,23,82,504 ರೂ. ಆಗಿದೆ.  ಇದನ್ನೂ ಓದಿ: ಶ್ರೀಲಂಕಾದಲ್ಲಿ 50 ಪೆಟ್ರೋಲ್‌ ಬಂಕ್‌ ತೆರೆಯಲಿದೆ ಐಒಸಿ

    ಕಳೆದ ವರ್ಷ ಪ್ರಧಾನಿ ಮೋದಿ ಬಳಿಯಿದ್ದ ನಗದು ಮೊತ್ತ 36,900 ರೂ.ನಿಂದ 35,250 ರೂ.ಗೆ ಇಳಿದಿತ್ತು. 2021ರ ಮಾರ್ಚ್ 31, 2021 ರವರೆಗೆ ಅವರ ಬ್ಯಾಂಕ್‌ ಖಾತೆಯಲ್ಲಿ 1,52,480 ರೂ. ಇದ್ದ ಹಣ 46,555 ರೂ.ಗೆ ಕಡಿಮೆಯಾಗಿದೆ ರಿಂದ ಕಡಿಮೆಯಾಗಿದೆ.

    ಮೋದಿ ಅವರು ಯಾವುದೇ ಬಾಂಡ್, ಷೇರು ಅಥವಾ ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಿಲ್ಲ. ವಾಹನ ಕೂಡ ಹೊಂದಿಲ್ಲ. 1.73 ಲಕ್ಷ ರೂ. ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ ಎಂದು ಆಸ್ತಿ ವಿವರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬಿಜೆಪಿ- ಜೆಡಿಯು ಮೈತ್ರಿಗೆ ಗುಡ್‌ಬೈ – ನಿತೀಶ್‌ ರಾಜೀನಾಮೆಗೆ ಕಾರಣ ಏನು?

    ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ, ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ಪ್ರತಿ ಹಣಕಾಸು ವರ್ಷದ ಅಂತ್ಯದೊಳಗೆ ಎಲ್ಲಾ ಕೇಂದ್ರ ಸಚಿವರು ತಮ್ಮ ಆಸ್ತಿಯನ್ನು ಘೋಷಿಸಲು ನಿರ್ಧರಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಯುಪಿ ಸಂಸದರು, ಐಎಎಸ್ ಅಧಿಕಾರಿಗಳಿಗೆ ಆಸ್ತಿ ವಿವರ ಬಹಿರಂಗಪಡಿಸುವಂತೆ ಯೋಗಿ ಆದೇಶ

    ಯುಪಿ ಸಂಸದರು, ಐಎಎಸ್ ಅಧಿಕಾರಿಗಳಿಗೆ ಆಸ್ತಿ ವಿವರ ಬಹಿರಂಗಪಡಿಸುವಂತೆ ಯೋಗಿ ಆದೇಶ

    ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಂಪುಟದ ಸಚಿವರು ಹಾಗೂ ಅವರ ಕುಟುಂಬದವರ ಎಲ್ಲಾ ಆಸ್ತಿಯ ವಿವರಗಳನ್ನು 3 ತಿಂಗಳುಗಳ ಒಳಗಾಗಿ ಬಹಿರಂಗ ಪಡಿಸುವಂತೆ ಆದೇಶ ನೀಡಿದ್ದಾರೆ.

    ಯುಪಿ ಸಿಎಂ ತಮ್ಮ ಸಂಪುಟದ ಸದಸ್ಯರೊಂದಿಗೆ, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೂ ತಮ್ಮ ಆಸ್ತಿಯ ವಿವರಗಳನ್ನು ಆನ್‌ಲೈನ್‌ನಲ್ಲಿ ಬಹಿರಂಗ ಪಡಿಸುವಂತೆ ತಿಳಿಸಿದ್ದಾರೆ. ಇದರೊಂದಿಗೆ ಸರ್ಕಾರಿ ಕೆಲಸಗಳಲ್ಲಿ ಸಂಸದರ ಸಂಬಧಿಕರು ಮಧ್ಯ ಪ್ರವೇಶಿಸಬಾರದು ಎಂದು ಆದಿತ್ಯನಾಥ್ ಸೂಚಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ

    yogi adithyanath

    ಸಂಪುಟ ಸಭೆಯ ಬಳಿಕ ವಿಶೇಷ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ, ಐಎಎಸ್, ಐಪಿಎಸ್ ಹಾಗೂ ಪ್ರಾಂತೀಯ ನಾಗರಿಕ ಸೇವಾ ಅಧಿಕಾರಿಗಳು ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿಯನ್ನು ಘೋಷಿಸಬೇಕು. ಅದನ್ನು ಜನರು ನೋಡುವಂತೆ, ಆನ್‌ಲೈನ್ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: YSRP ಪೋಸ್ಟರ್‌ಗಳಿಗೆ ಹಾನಿ – 3, 4ನೇ ತರಗತಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸ್ರು

    ಪ್ರಜಾಪ್ರಭುತ್ವದ ಒಳಿತಿಗಾಗಿ, ಸಾರ್ವಜನಿಕ ಪ್ರತಿನಿಧಿಗಳ ನಡವಳಿಕೆ ಬಹಳ ಮುಖ್ಯವಾದುದು. ಹೀಗಾಗಿ ಎಲ್ಲಾ ಮಂತ್ರಿಗಳು ತಮ್ಮ ಹಾಗೂ ಕುಟುಂಬದ ಸದಸ್ಯರ ಎಲ್ಲಾ ಚರ ಮತ್ತು ಸ್ಥಿರ ಆಸ್ತಿಯನ್ನು ಮುಂದಿನ 3 ತಿಂಗಳ ಒಳಗಾಗಿ ಸಾರ್ವಜನಿಕವಾಗಿ ಘೋಷಣೆ ಮಾಡಬೇಕು ಎಂದರು.

  • 2019-20ರ ಆರ್ಥಿಕ ವರ್ಷದಲ್ಲಿ ಶೇ.67 ಆಸ್ತಿ ಹೆಚ್ಚಳ – ಬಿಜೆಪಿ ದೇಶದ ಶ್ರೀಮಂತ ಪಕ್ಷ

    2019-20ರ ಆರ್ಥಿಕ ವರ್ಷದಲ್ಲಿ ಶೇ.67 ಆಸ್ತಿ ಹೆಚ್ಚಳ – ಬಿಜೆಪಿ ದೇಶದ ಶ್ರೀಮಂತ ಪಕ್ಷ

    ನವದೆಹಲಿ: ದೇಶದಲ್ಲೇ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅತ್ಯಂತ ಶ್ರೀಮಂತ ಪಕ್ಷವಾಗಿ ಹೊರಹೊಮ್ಮಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR)  ಪ್ರಕಾರ, 2019-20ರಲ್ಲಿ ಬಿಜೆಪಿ 4,847.78 ಕೋಟಿ ಆಸ್ತಿಯನ್ನು ಘೋಷಿಸಿ ದೇಶದ ಶ್ರೀಮಂತ ಪಕ್ಷ ಎನಿಸಿಕೊಂಡಿದೆ.

    2018-19ರಲ್ಲಿ ಬಿಜೆಪಿ 2,904.18 ಕೋಟಿ ಆಸ್ತಿ ಘೋಷಿಸಿತ್ತು. 2019-2020ರಲ್ಲಿ 4,847.78 ಕೋಟಿ ಆಸ್ತಿಯನ್ನು ಘೋಷಿಸಿ ಶೇ.67ರಷ್ಟು ಆಸ್ತಿಯನ್ನು ಹೆಚ್ಚಳ ಮಾಡಿಕೊಂಡಿದೆ. ಎಡಿಆರ್ ಪ್ರಕಾರ, 7 ರಾಷ್ಟ್ರೀಯ ಪಕ್ಷಗಳ ಒಟ್ಟು ಆಸ್ತಿ 6,988.57 ಕೋಟಿ ಮತ್ತು 44 ಪ್ರಾದೇಶಿಕ ರಾಜಕೀಯ ಪಕ್ಷಗಳ ಒಟ್ಟು ಆಸ್ತಿ 2,129.38 ಕೋಟಿ ರೂಪಾಯಿ ಆಗಿದೆ. ಬಿಜೆಪಿ ಆಸ್ತಿ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ಎರಡನೇಯ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ. ಬಿಎಸ್‍ಪಿ ಬಳಿ 698.33 ಕೋಟಿ (9.99%) ಆಸ್ತಿ ಇರುವುದಾಗಿ ತಿಳಿಸಿದೆ. ಮೂರನೇ ಸ್ಥಾನದಲ್ಲಿ ಕಾಂಗ್ರೆಸ್  ಪಕ್ಷವಿದ್ದು, 588.16 ಕೋಟಿ (8.42%) ಮೌಲ್ಯದ ಆಸ್ತಿಯನ್ನು ದಾಖಲಿಸಿಕೊಂಡಿದೆ. ಇದನ್ನೂ ಓದಿ: ಬಿಜೆಪಿಯವರು ಎಂಜಲು ಹಚ್ಚಿ ಮಾಡಿದ ಪ್ರಚಾರದಿಂದ ಕೊರೊನಾ ಹೆಚ್ಚಳ: ಅಖಿಲೇಶ್

    ಪ್ರಾದೇಶಿಕ ಪಕ್ಷಗಳ ಆಸ್ತಿ ವಿವರ:
    ಪ್ರಾದೇಶಿಕ ಪಕ್ಷಗಳ ಪೈಕಿ ಸಮಾಜವಾದಿ ಪಕ್ಷ (SP) 563.47 ಕೋಟಿ (26.46%) ಆಸ್ತಿ ದಾಖಲಿಸಿಕೊಂಡು ಮೊದಲ ಸ್ಥಾನ ಪಡೆದುಕೊಂಡಿದೆ. ನಂತರ ತೆಲಂಗಾಣ ರಾಷ್ಟ್ರ ಸಮಿತಿ (TRS) 301.47 ಕೋಟಿ ಆಸ್ತಿ ಘೋಷಿಸಿ ಎರಡನೇ ಸ್ಥಾನ, ಮೂರನೇ ಸ್ಥಾನದಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) 267.61 ಕೋಟಿ ಎಂದು ಎಡಿಆರ್ ವರದಿ ಮಾಡಿದೆ. ಈ ವರದಿಯ ಪ್ರಕಾರ ಏಳು ಪಕ್ಷಗಳಾದ ಬಿಜೆಪಿ, ಬಿಎಸ್‍ಪಿ, ಕಾಂಗ್ರೆಸ್, ಸಿಪಿಎಂ, ಎಐಟಿಸಿ, ಸಿಪಿಐ ಮತ್ತು ಎನ್‍ಸಿಪಿ ಪಕ್ಷಗಳ ಆಸ್ತಿಯಲ್ಲಿ ಹೆಚ್ಚಳ ವಾಗಿದೆ. ಇದನ್ನೂ ಓದಿ: ಸ್ಯಾಂಡಲ್‍ವುಡ್ ನಟ ಕಂ ನಿರ್ದೇಶಕನ ವಿರುದ್ಧ ಅತ್ಯಾಚಾರ ಪ್ರಕರಣ

    ರಾಷ್ಟ್ರೀಯ ಪಕ್ಷಗಳ ವಾರ್ಷಿಕವಾಗಿ ಹೆಚ್ಚಳ ಪಟ್ಟಿ:
    2018-19 ರಲ್ಲಿ ಬಿಜೆಪಿ 2,904.19 ಕೋಟಿ ಆಸ್ತಿಯನ್ನು ಘೋಷಿಸಿತ್ತು. ಇದು 2019-20ರ ಅವದಿಯಲ್ಲಿ ಶೇ.67ರಷ್ಟು ಏರಿಕೆ ಕಂಡು 4,847.78 ತಲುಪಿದೆ. ಇದೇ ಅವದಿಯಲ್ಲಿ ಕಾಂಗ್ರೆಸ್ ತನ್ನ ಆಸ್ತಿ 928.84 ಕೋಟಿಯಿಂದ 588.16ಕ್ಕೆ ಕುಸಿತ ಕಂಡಿದೆ. ಬಿಎಸ್‍ಪಿ 738 ಕೋಟಿಯಿಂದ 698.33 ಕೋಟಿಗೆ ಇಳಿಕೆ ಕಂಡಿದೆ. ಇದನ್ನೂ ಓದಿ: IPS ರವಿ ಚೆನ್ನಣ್ಣವರ್ ವರ್ಗ ಆದೇಶಕ್ಕೆ ಬ್ರೇಕ್

    ಆಸ್ತಿ ಲೆಕ್ಕಾಚಾರ ಮೂಲ:
    ರಾಜಕೀಯ ಪಕ್ಷಗಳು ಪ್ರಮುಖ 6 ಅಂಶಗಳಿಂದ ತಮ್ಮ ಆಸ್ತಿಯ ಲೆಕ್ಕಾಚಾರ ಕೊಡುತ್ತದೆ. ಸ್ಥಿರ ಆಸ್ತಿ, ಸಾಲ, ಮುಂಗಡ ಸಾಲ, ಠೇವಣಿ, ಎಫ್‍ಡಿಆರ್, ಟಿಡಿಎಸ್ ಮತ್ತು ಇತರ ಮೂಲಗಳ ಪ್ರಕಾರ ಆಸ್ತಿ ಘೋಷಿಸುತ್ತದೆ. ರಾಷ್ಟ್ರೀಯ ಪಕ್ಷಗಳು ಘೋಷಿಸಿರುವ ಆಸ್ತಿಯಲ್ಲಿ ಠೇವಣಿ ಮೂಲಕ 5,970.59 ಕೋಟಿ ಆಸ್ತಿಯನ್ನು ಇಟ್ಟುಕೊಂಡಿವೆ ಎಂದು ವರದಿಯಲ್ಲಿ ಸ್ಪಷ್ಟವಾಗಿದೆ.

  • ಜಮೀರ್ ಆಸ್ತಿ 10 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ಜಮೀರ್ ಆಸ್ತಿ 10 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ಬೆಂಗಳೂರು: ಬಡ ಜನರನ್ನು ವಂಚಿಸಿದ್ದ, `ಐ ಮಾನಿಟರಿ ಅಡ್ವೈಸರಿ’ ಅರ್ಥಾಥ್ 400 ಕೋಟಿ ಐಎಂಎ ಹಗರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್‍ಗೆ ಬಂಧನ ಭೀತಿ ಎದುರಾಗಿದೆ.

    ಐಎಂಎ ಸಂಸ್ಥಾಪಕ ಮನ್ಸೂರ್ ಅಲಿ ಖಾನ್ ಜೊತೆಗಿನ ಡೀಲ್ ಸಂಬಂಧ ಜಮೀರ್ ಜೊತೆಗೆ ರೋಷನ್ ಬೇಗ್‍ಗೂ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ಕೊಟ್ಟಿದೆ.

    ಇಡಿ ಅಧಿಕಾರಿಗಳ ತಂಡ ಇವತ್ತು ಬೆಳ್ಳಂಬೆಳಗ್ಗೆ ಬೆಂಗಳೂರು, ಮುಂಬೈ, ದೆಹಲಿಯ 6 ಕಡೆ ಏಕಕಾಲಕ್ಕೆ ರೇಡ್ ಮಾಡಿದೆ. ದಾಳಿ ವೇಳೆ ಮನೆಯಲ್ಲೇ ಜಮೀರ್, ಮಗ ಝಯ್ಯದ್ ಸೇರಿದಂತೆ ಕುಟುಂಬಸ್ಥರು ಇದ್ದರು. ಇವರೆಲ್ಲರ ಸಮ್ಮುಖದಲ್ಲೇ ಇಡಿ ಅಧಿಕಾರಿಗಳ ತಂಡ, ಜಮೀರ್ ಸಂಪಾದನೆ-ಆಸ್ತಿ-ವ್ಯವಹಾರದ ದಾಖಲೆಗಳನ್ನ ಜಾಲಾಡಿದ್ದಾರೆ.  ಇದನ್ನೂ ಓದಿ: ಐಎಂಎ ಗೋಲ್ಡ್‌ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಶಾಸಕ ಜಮೀರ್!

    ಜೊತೆಗೆ, ಜಮೀರ್ ಸಹೋದರ ಮುಜಾಮಿಲ್ ಅಹ್ಮದ್ ಖಾನ್‍ನನ್ನು ವಶಕ್ಕೆ ಪಡೆದಿದೆ. ಆದರೂ, ಮುಜಾಮಿಲ್ ಮಾತ್ರ `ಗೆಲುವಿನ’ ಸಂಕೇತ ತೋರಿಸಿದ್ದಾರೆ.

    ಎಲ್ಲೆಲ್ಲಿ ದಾಳಿ?
    ಬಂಬೂ ಬಜಾರ್ ನಲ್ಲಿರುವ ಜಮೀರ್ ನಿವಾಸ, ಸದಾಶಿವನಗರದಲ್ಲಿರುವ ಜಮೀರ್ ಅತಿಥಿಗೃಹ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಯುಬಿ ಸಿಟಿ ಫ್ಲ್ಯಾಟ್, ಮುಂಬೈ-ದೆಹಲಿಯಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಗೋರಿಪಾಳ್ಯದಲ್ಲಿರುವ ಜಮೀರ್ ಆಪ್ತ ಅಲ್ತಾಫ್ ಮನೆ ಮೇಲೆ ದಾಳಿ ನಡೆದಿದೆ.

    ದಾಳಿ ಯಾಕೆ?
    ಜಮೀರ್ ಅವರ ಆರ್ಥಿಕ ವ್ಯವಹಾರದ ಮೇಲೆ ಇಡಿ 8 ತಿಂಗಳಿಂದಲೂ ನಿಗಾ ಇಟ್ಟಿತ್ತು. ಐಷಾರಾಮಿ ಮನೆ, ಮಗಳ ವೈಭವೋಪೇತ ಮದುವೆಗಳು, ವಿದೇಶಗಳಲ್ಲಿ ಕ್ಯಾಸಿನೋ ಬಾರ್ ವ್ಯವಹಾರದಲ್ಲಿ ಕೊಡ್ತಿದ್ದ ಕೊಡ್ತಿದ್ದ ಲೆಕ್ಕಕ್ಕೆ ತಾಳೆ ಆಗುತ್ತಿರಲಿಲ್ಲ. ಇದರ ಜೊತೆಗೆ 10 ವರ್ಷದಲ್ಲಿ ಜಮೀರ್ ಆಸ್ತಿ ಭಾರೀ ಏರಿಕೆಯಾಗಿದೆ.

    ಆದಾಯ ಎಷ್ಟು?
    2008 – 52 ಲಕ್ಷ ರೂ.
    2009 – 44 ಲಕ್ಷ ರೂ.
    2013 – 9.45 ಕೋಟಿ ರೂ.
    2018 – 44 ಕೋಟಿ ರೂ.

    ಆಸ್ತಿ ಎಷ್ಟಿದೆ?
    – ಸದಾಶಿವನಗರದಲ್ಲಿ 2 ಕೋಟಿ ರೂ. ಮೌಲ್ಯದ ಮನೆ
    – 37 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ
    – 9.64 ಲಕ್ಷ ರೂ. ಮೌಲ್ಯದ ಚಿನ್ನಾಭರಣ
    – 51 ಲಕ್ಷ ರೂ. ಮೌಲ್ಯದ ವಾಹನಗಳು
    – 49 ಲಕ್ಷ ರೂ. ಮೌಲ್ಯದ ಮರ್ಸಿಡೀಜ್ ಬೆನ್ಜ್ ಕಾರು
    – 20 ಕೋಟಿ ರೂ. ಸಾಲ ಪಡೆದಿರುವ ಮಾಹಿತಿ
    – 2016-17ರಲ್ಲಿ 25.65 ಲಕ್ಷ ರೂ. ತೆರಿಗೆ ಪಾವತಿ