Tag: Astronauts

  • ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು?

    ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು?

    ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ʻನಾಸಾʼದ (NASA) ಗಗನಯಾತ್ರಿಗಳಾದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ (Sunita Williams) ಮತ್ತು ಬುಚ್‌ ವಿಲ್ಮೋರ್‌ ಭೂಮಿಗೆ ಸುರಕ್ಷಿತವಾಗಿ ಮರಳಿದ್ದು ಇಡೀ ದೇಶವೇ ಸಂಭ್ರಮಿಸಬೇಕಾದ ಸಂಗತಿ. 8 ದಿನಗಳ ಕಾರ್ಯಾಚರಣೆಗೆಂದು ತೆರಳಿದ್ದ ಇವರು ತಾಂತ್ರಿಕ ದೋಷದಿಂದಾಗಿ ಸುಮಾರು 286 ದಿನಗಳ ಕಾಲ ಬಾಹ್ಯಾಕಾಶದಲ್ಲೇ ಉಳಿಯಬೇಕಾಗಿತ್ತು. ಅದ್ರೆ ಇವರನ್ನು ಹೊತ್ತಿದ್ದ ಸ್ಪೇಸ್‌ಎಕ್ಸ್‌ ಸಂಸ್ಥೆಯ ಕ್ಯಾಪ್ಸೂಲ್‌ ಫ್ಲೋರಿಡಾದ ಸಮುದ್ರದಲ್ಲಿ ಜಲಸ್ಪರ್ಧ ಮಾಡಿರುವುದು ಸುದೀರ್ಘ ಅವಧಿಯಿಂದ ಮನೆ ಮಾಡಿದ್ದ ಅನಿಶ್ಚಿತತೆಯೊಂದನ್ನು ಕೊನೆಗೊಳಿಸಿದೆ. ಹಾಗಾದ್ರೆ ಭೂಮಿಗೆ ಬಂದ ನಂತ್ರ ಮುಂದೇನು? ತಕ್ಷಣಕ್ಕೆ ಸಹಜ ಜೀವನ ನಡೆಸಬಹುದೇ? ಅವರ ಆರೋಗ್ಯದ ಮೇಲೆ ಬೀರುವ ಪರಿಣಾಮಗಳೇನು? ಅದಕ್ಕೆ ಪರಿಹಾರ ಏನು? ಅನ್ನೋದೇ ಪ್ರಶ್ನೆ..

    ನಾವು ಗಗನಯಾತ್ರೆ ಎಂದಾಕ್ಷಣ ಸಾಮಾನ್ಯರ ಮನಸ್ಸಿನಲ್ಲಿ ಏನೋ ಒಂದು ಕೌತುಕ, ಮನಸ್ಸಿನಲ್ಲಿ ತಮ್ಮದೇ ಕಲ್ಪನೆ. ಗುರುತ್ವಾಕರ್ಷಣೆ ಇಲ್ಲದ ಬಾಹ್ಯಾಕಾಶದಲ್ಲಿ (Space) ಹಕ್ಕಿಯಂತೆ ಹಾರಾಡುವ ಅದ್ಭುತವೇ ಸರಿ. ಆದ್ರೆ ಬಾಹ್ಯಾಕಾಶದಲ್ಲಿ ಹಕ್ಕಿಗಳಂತೆ ಹಾರಾಡಿ ಮತ್ತು ಮನುಷ್ಯ ಸಹಜ ಜೀವನಕ್ಕೆ ತೆರೆದುಕೊಳ್ಳುವುದು ಅಷ್ಟು ಸುಲಭವಲ್ಲ. ಅದಕ್ಕೆಂದೇ ಸೂಕ್ತ ಮಾರ್ಪಾಡುಗಳನ್ನ ಮಾಡಿಕೊಳ್ಳಬೇಕಾಗುತ್ತೆ.

    ಹೌದು. ಬಾಹ್ಯಾಕಾಶ ಪ್ರಯಾಣ ಕೈಗೊಂಡ ಬಳಿಕ, ಗಗನಯಾತ್ರಿಗಳು ಬಾಹ್ಯಾಕಾಶದ ಕನಿಷ್ಠ ಗುರುತ್ವಾಕರ್ಷಣೆಯ (Gravity) ಕಾರಣದಿಂದ ಒಂದಷ್ಟು ಆರೋಗ್ಯ ಸಂಬಂಧಿ ವಿಚಾರಗಳು (Health Issues) ಹಾಗೂ ಶಾರೀರಿಕ ಬದಲಾವಣೆಗಳನ್ನ ಎದುರಿಸುವ ಸಾಧ್ಯತೆಗಳಿವೆ. ಅದರಲ್ಲಿನ ಕೆಲವು ಪರಿಸ್ಥಿತಿಗಳನ್ನ ನಾವಿಲ್ಲಿ ಕಾಣಬಹುದು.

    ಮೂಳೆಗಳು ಬಲಹೀನವಾಗುತ್ತವೆ:
    ಬಾಹ್ಯಾಕಾಶ ಪ್ರಯಾಣದ ಸಂದರ್ಭದಲ್ಲಿ ದೀರ್ಘಕಾಲದ ತನಕ ಕನಿಷ್ಠ ಗುರುತ್ವಾಕರ್ಷಣೆಗೆ ಒಳಗಾಗುವುದು ಸ್ನಾಯು ಕ್ಷೀಣತೆಯ ಸಮಸ್ಯೆ ಉಂಟುಮಾಡಬಲ್ಲದು. ಅಂದರೆ, ಕಡಿಮೆ ದೈಹಿಕ ಚಟುವಟಿಕೆಗಳ ಕಾರಣದಿಂದ ಸ್ನಾಯುಗಳ ಅಂಗಾಂಶಗಳು ಕ್ರಮೇಣ ಕಡಿಮೆಯಾಗಿ, ಶಕ್ತಿ ಕಳೆದುಕೊಳ್ಳುತ್ತವೆ.

    ಗಗನಯಾತ್ರಿಗಳು (Astronauts) ಸಾಮಾನ್ಯವಾಗಿ ಈ ಸಮಸ್ಯೆಯನ್ನ ಎದುರಿಸಿ, ಭೂಮಿಗೆ ಮರಳಿದ ಬಳಿಕ, ಸ್ನಾಯು ಭಾರ ಮತ್ತು ಶಕ್ತಿಯನ್ನ ಮರಳಿ ಪಡೆಯಲು ದೈಹಿಕ ಪುನರ್ವಸತಿ ಚಿಕಿತ್ಸೆ ಪಡೆಯಬೇಕಾಗುತ್ತದೆ. ಸ್ನಾಯು ಕ್ಷೀಣತೆಯ ಕಾರಣದಿಂದ, ದುರ್ಬಲತೆ ಮತ್ತು ಚಲನಹೀನತೆ ಉಂಟಾಗಬಹುದು. ಇದನ್ನ ಎದುರಿಸಲು, ಗಗನಯಾತ್ರಿಗಳು ದೈಹಿಕ ಚಿಕಿತ್ಸೆ, ಶಕ್ತಿ ತರಬೇತಿ ಹಾಗೂ ನಿರಂತರ ವ್ಯಾಯಾಮ ನಡೆಸುತ್ತಾರೆ. ಅದರೊಂದಿಗೆ ಮೂಳೆಯ ಸಾಂದ್ರತೆ ಕಳೆದುಕೊಳ್ಳುವುದು ಬಾಹ್ಯಾಕಾಶದಲ್ಲಿ ಇನ್ನೊಂದು ಕಳವಳಕಾರಿ ವಿಚಾರ. ಇದರಿಂದಾಗಿ ಮೂಳೆಗಳು ಬಲಹೀನವಾಗುತ್ತವೆ. ಗಗನಯಾತ್ರಿಗಳು ಇದನ್ನ ಎದುರಿಸಲು ನಿಯಮಿತ ವ್ಯಾಯಾಮ, ಉತ್ತಮ ಪೋಷಕಾಂಶಗಳ ಸೇವನೆಯಂತಹ ಕ್ರಮಗಳನ್ನ ಕೈಗೊಳ್ಳುತ್ತಾರೆ.

    ಹೃದಯ ಬಡಿತ ಹೆಚ್ಚಾಗುತ್ತೆ, ತಲೆ ಸುತ್ತು ಜಾಸ್ತಿಯಾಗುತ್ತೆ:
    ಬಾಹ್ಯಾಕಾಶ ಪ್ರಯಾಣ ಗಗನಯಾತ್ರಿಗಳಲ್ಲಿ ಆರ್ಥೋಸ್ಟಾಟಿಕ್ ಇಂಟಾಲರೆನ್ಸ್ (ಮಾನಸಿಕ ಅಸಹಿಷ್ಣುತೆ) ಸೇರಿದಂತೆ, ಹೃದಯದ ರಕ್ತನಾಳದ ಬದಲಾವಣೆಗಳನ್ನ ತರಬಲ್ಲದು. ಇದರ ಪರಿಣಾಮವಾಗಿ ಅವರಲ್ಲಿ ಕುಳಿತಲ್ಲಿಂದ ಅಥವಾ ಮಲಗಿದಲ್ಲಿಂದ ಎದ್ದು ನಿಲ್ಲುವಾಗ ತಲೆಸುತ್ತು, ಮೂರ್ಛೆ ಹೋಗುವುದು ಅಥವಾ ಹೃದಯ ಬಡಿತ ಪ್ರಮಾಣ ಹೆಚ್ಚಳ ಕಂಡುಬರಬಹುದು. ಈ ಪರಿಸ್ಥಿತಿ ರಕ್ತದೊತ್ತಡದ ನಿಯಂತ್ರಣದಲ್ಲಿನ ಬದಲಾವಣೆ ಹಾಗೂ ಸ್ವಯಂಚಾಲಿತ ನರಮಂಡಲದ ಕಾರ್ಯಾಚರಣೆಯ ಕಾರಣದಿಂದ ಉಂಟಾಗಬಹುದು. ಇದರ ಚಿಕಿತ್ಸೆ ಸಾಮಾನ್ಯವಾಗಿ ಜೀವನಶೈಲಿಯಲ್ಲಿನ ಬದಲಾವಣೆ, ಹೆಚ್ಚಿನ ದ್ರವ ಆಹಾರ ಮತ್ತು ಉಪ್ಪಿನ ಸೇವನೆ, ಸಂಕೋಚನ ವಸ್ತ್ರಗಳನ್ನು ಧರಿಸುವುದು (ದೇಹಕ್ಕೆ ಆರಾಮದಾಯಕ ಹಾಗೂ ಸುರಕ್ಷಿತ ಅನ್ನಿಸುವ ಉಡುಪುಗಳು) ಮತ್ತು ಕೆಲವು ಸಂದರ್ಭಗಳಲ್ಲಿ ಸುಗಮವಾಗಿ ಎದ್ದು ನಿಲ್ಲುವಂತಾಗಲು ಔಷಧೀಯ ಕ್ರಮಗಳನ್ನೂ ಒಳಗೊಂಡಿರುತ್ತದೆ.

    ಜೊತೆಗೆ ಮಾಂಸ ಖಂಡಗಳು, ಕಾರ್ಡಿಯೋ ವಾಸ್ಕುಲರ್‌ ಸಿಸ್ಟಮ್‌ ಭೂಮಿಗೆ ಹೊಂದಿಕೊಳ್ಳುವಂತೆ ಸರಿಪಡಿಸಬೇಕಾಗುತ್ತದೆ. ಇದು ಭೂಮಿಗೆ ಮರಳಿದ ನಂತರ ಸಾಮಾನ್ಯ ಜೀವನಕ್ಕೆ ಕರೆತರುವುದು ಕನಿಷ್ಠ 6 ತಿಂಗಳು ಬೇಕಾಗಬಹುದು ಎನ್ನುತ್ತಾರೆ ಭೌತ ವಿಜ್ಞಾನ ಪ್ರಾಧ್ಯಾಪಕಿ ವೈ.ಸಿ ಕಮಲಾ.

    ದೃಷ್ಟಿಯ ಬದಲಾವಣೆಗಳು:
    ಕೆಲವು ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಕಣ್ಣಿನ ಸಮಸ್ಯೆಗಳನ್ನೂ ಎದುರಿಸುತ್ತಾರೆ. ಉದಾಹರಣೆಗೆ ಕಣ್ಣುಗಳಲ್ಲಿ ದ್ರವದ ಬದಲಾವಣೆಗಳು ದೃಷ್ಟಿಯನ್ನು ದುರ್ಬಲಗೊಳಿಸಬಹುದು. ಈ ಸ್ಥಿತಿಯನ್ನು ಸ್ಪೇಸ್ ಫ್ಲೈಟ್-ಅಸೋಸಿಯೇಟೆಡ್ ನ್ಯೂರೋ-ಆಕ್ಯುಲರ್ ಸಿಂಡ್ರೋಮ್ (ಎಸ್ಎಎನ್ಎಸ್) ಎಂದು ಕರೆಯಲಾಗುತ್ತದೆ.

    ಕ್ಯಾನ್ಸರ್‌ಗೆ ತುತ್ತಾಗುವ ಅಪಾಯವಿದೆ:
    ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಅಧಿಕ ಮಟ್ಟದ ಕಾಸ್ಮಿಕ್ ವಿಕಿರಣಕ್ಕೆ ಒಡ್ಡಿಕೊಳ್ಳುತ್ತಾರೆ. ಇದರ ಪರಿಣಾಮವಾಗಿ, ಕಾಲಾನಂತರದಲ್ಲಿ ಕ್ಯಾನ್ಸರ್ ಮತ್ತು ಇತರ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಅಪಾಯವು ಹೆಚ್ಚಾಗಿರುತ್ತದೆ.

    ಮಾನಸಿಕ ಪರಿಣಾಮಗಳೇನು?
    ಬಾಹ್ಯಾಕಾಶ ಯಾತ್ರೆಯು ಏಕಾಂತತೆ, ಬಂಧನದ ಭಾವ ಮೂಡಿಸುತ್ತದೆ ಮತ್ತು ಇದರಿಂದ ಉಂಟಾಗುವ ಒತ್ತಡವು ಮನಸ್ಥಿತಿಯಲ್ಲಿ ಬದಲಾವಣೆ ಉಂಟುಮಾಡಿ, ಆತಂಕ ಮತ್ತು ಖಿನ್ನತೆಯಂತಹ ಕೆಲವು ಮಾನಸಿಕ ಸಮಸ್ಯೆಗಳನ್ನ ತಂದೊಡ್ಡಬಹುದು.

    ರೋಗನಿರೋಧಕ ಶಕ್ತಿ ಕುಗ್ಗಿಸುತ್ತೆ:
    ಬಾಹ್ಯಾಕಾಶ ಯಾನವು ರೋಗನಿರೋಧಕ ವ್ಯವಸ್ಥೆಯನ್ನು ಬಹುತೇಕ ದುರ್ಬಲಗೊಳಿಸಿ, ಗಗನಯಾತ್ರಿಗಳನ್ನು ಸೋಂಕುಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿಸುತ್ತದೆ.

    ವೆಸ್ಟಿಬ್ಯುಲರ್ ಸಮಸ್ಯೆಗಳು:
    ಒಳಗಿವಿಯ ಸಮತೋಲನ ವ್ಯವಸ್ಥೆಯಲ್ಲಿ ಉಂಟಾಗುವ ಬದಲಾವಣೆಗಳು ಬಾಹ್ಯಾಕಾಶ ಯಾನದ ಸಮಯದಲ್ಲಿ ಮತ್ತು ಆಮೇಲೂ ದಿಕ್ಕು ತಪ್ಪಿಸುವಿಕೆ ಮತ್ತು ಚಲನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

    ಈ ಎಲ್ಲ ಆರೋಗ್ಯ ಸಮಸ್ಯೆಗಳನ್ನ ನಿಯಂತ್ರಿಸಲು, ಗಗನಯಾತ್ರಿಗಳು ತಮ್ಮ ಕಾರ್ಯಾಚರಣೆಗೆ ಪೂರ್ವದಲ್ಲಿ ಹಾಗೂ ಪೂರ್ಣಗೊಂಡ ಮೇಲೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನಗಳಿಗೆ ಒಳಗಾಗುತ್ತಾರೆ. ಜೊತೆಗೆ ಸೂಕ್ಷ್ಮ ಗುರುತ್ವಾಕರ್ಷಣೆಯ ನಕಾರಾತ್ಮಕ ಪರಿಣಾಮಗಳನ್ನ ಕಡಿಮೆ ಮಾಡಲು ತಮ್ಮ ಕಾರ್ಯಗಳ ಸಮಯದಲ್ಲೂ ಅವರು ವ್ಯಾಯಾಮ ಮತ್ತು ಪುನರ್ವಸತಿ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುತ್ತಾರೆ. ಅಲ್ಲದೇ, ಬಾಹ್ಯಾಕಾಶ ಯಾನಕ್ಕೆ ಸಂಬಂಧಿಸಿದ ಈ ಆರೋಗ್ಯ ಸವಾಲುಗಳನ್ನ ಇನ್ನಷ್ಟು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಮತ್ತು ಪರಿಹರಿಸಲು ಅನೇಕ ಸಂಶೋಧನೆಗಳು ಪ್ರಗತಿಯಲ್ಲಿವೆ.

    ಮಾಹಿತಿ:
    ಸುಂದರ್‌, ಭೌತ ವಿಜ್ಞಾನಿ
    ವೈ.ಸಿ ಕಮಲಾ, ಭೌತ ವಿಜ್ಞಾನ ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು
    ಗಿರೀಶ್‌ ಲಿಂಗಣ್ಣ, ರಕ್ಷಣಾ ಮತ್ತು ಬಾಹ್ಯಾಕಾಶ ವಿಶ್ಲೇಷಕರು

    ಲೇಖನ: ಮೋಹನ ಬಿ.ಎಂ

  • ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳು ಬಟ್ಟೆ ತೊಳೆಯುತ್ತಾರಾ? – ಬಟ್ಟೆ ಕೊಳೆಯಾದ್ರೆ ಏನ್‌ ಮಾಡ್ತಾರೆ?

    ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳು ಬಟ್ಟೆ ತೊಳೆಯುತ್ತಾರಾ? – ಬಟ್ಟೆ ಕೊಳೆಯಾದ್ರೆ ಏನ್‌ ಮಾಡ್ತಾರೆ?

    ಭಾರತ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಹೊತ್ತಲ್ಲೇ, ಬಾಹ್ಯಾಕಾಶದ ಬಗ್ಗೆ ಹಲವಾರು ಪ್ರಶ್ನೆಗಳು ಕೇಳಿಬರುತ್ತಿವೆ. ಕಳೆದ 9 ತಿಂಗಳಿಂದ ಗಗನಯಾತ್ರಿ ಸುನಿತಾ ಮತ್ತು ಬುಚ್ ವಿಲ್ಮೋರ್ ಅವರು ಬಾಹ್ಯಾಕಾಶದಲ್ಲೇ ಸಿಲುಕಿದ್ದಾರೆ. ಅಲ್ಲಿ ಅವರ ದಿನಚರಿ ಹೇಗಿರುತ್ತೆ? ಆರೋಗ್ಯ ಕಾಪಾಡಿಕೊಳ್ಳಲು ಏನೇನು ಕ್ರಮ ಅನುಸರಿಸುತ್ತಾರೆ? ಈಗ ಅವರು ಹೇಗಿದ್ದಾರೆ ಎಂಬುದು ಎಲ್ಲರ ಸದ್ಯದ ಕುತೂಹಲದ ಪ್ರಶ್ನೆಗಳು. ಕೆಲವು ದಿನಗಳ ಮಟ್ಟಿಗೆ ಸಂಶೋಧನೆಗೆಂದು ತೆರಳುವ ಗಗನಯಾತ್ರಿಗಳು, ಈ ರೀತಿ ದೀರ್ಘ ಸಮಯದ ವರೆಗೆ ಬಾಹ್ಯಾಕಾಶದಲ್ಲಿ ತಗಲಾಕಿಕೊಂಡರೆ ಹೇಗಿರುತ್ತೆ ಪರಿಸ್ಥಿತಿ?

    ಗಗನಯಾತ್ರಿಗಳು ತಿಂಗಳುಗಳ ಕಾಲ ಬಾಹ್ಯಾಕಾಶದಲ್ಲಿ ಇರಬೇಕಾದ ಪರಿಸ್ಥಿತಿ ಬಂದರೆ, ಅಲ್ಲಿ ಅವರು ತಿನ್ನುತ್ತಾರೆ, ಮಲಗುತ್ತಾರೆ, ಕೆಲಸ ಮಾಡುತ್ತಾರೆ, ವ್ಯಾಯಾಮ ಮಾಡುತ್ತಾರೆ ಮತ್ತು ಆಟಗಳನ್ನೂ ಆಡುತ್ತಾರೆ. ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಭೂಮಿಯಿಂದ ಹೊರಡುವಾಗಲೇ ಮಾಡಿಕೊಂಡಿರುತ್ತಾರೆ. ಆದರೆ ಕುತೂಹಲಕಾರಿ ಪ್ರಶ್ನೆಯೊಂದು ಹುಟ್ಟುಕೊಂಡಿದೆ. ಅವರು ಬಾಹ್ಯಾಕಾಶದಲ್ಲಿ ತಮ್ಮ ಬಟ್ಟೆಗಳನ್ನು ತೊಳೆಯುತ್ತಾರೆಯೇ? ಈ ಪ್ರಶ್ನೆಗೆ ಉತ್ತರ ಸರಳವಾಗಿದ್ದರೂ, ಅದರ ಹಿಂದಿನ ಕೌತುಕಗಳು ಎಲ್ಲರನ್ನೂ ಬೆರಗುಗೊಳಿಸುವಂತಿವೆ.

    ಮೊದಲೆಲ್ಲ ಬಾಹ್ಯಾಕಾಶ ಕಾರ್ಯಾಚರಣೆಗಳು ಕೆಲವೇ ದಿನಗಳ ಕಾಲ ನಡೆಯುತ್ತಿದ್ದವು. ಆದ್ದರಿಂದ ಗಗನಯಾತ್ರಿಗಳು ಬಟ್ಟೆಗಳನ್ನು ತೊಳೆಯುವ ಬಗ್ಗೆ ಚಿಂತಿಸದೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು. ಆದರೆ, ಈಗ ಕಾರ್ಯಾಚರಣೆಗಳು ಮೂರರಿಂದ ಎಂಟು ತಿಂಗಳ ವರೆಗೆ ವಿಸ್ತರಿಸಿರುವುದರಿಂದ ಲಾಂಡ್ರಿ ಸೌಲಭ್ಯಗಳಿಲ್ಲದೆ ಅವರು ಹೇಗೆ ನಿಭಾಯಿಸುತ್ತಾರೆ?

    ಬಾಹ್ಯಾಕಾಶದಲ್ಲಿ ಬಟ್ಟೆಗಳನ್ನು ತೊಳೆಯಬಹುದೇ?
    ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಬಟ್ಟೆಗಳನ್ನು ತೊಳೆಯಲು ಸಾಧ್ಯವಿಲ್ಲ. ತಮ್ಮ ಸಂಪೂರ್ಣ ಕಾರ್ಯಾಚರಣೆಗೆ ಸಾಕಷ್ಟು ಬಟ್ಟೆಗಳನ್ನು ಭೂಮಿಯಿಂದಲೇ ಕೊಂಡೊಯ್ಯುವುದು ಸರಳವಾದ ಪರಿಹಾರ ಮಾರ್ಗ. ಬಾಹ್ಯಾಕಾಶದ ಜಾಗದಲ್ಲಿ ನೀರು ಸಿಗಲ್ಲ. ಗಗನಯಾತ್ರಿಗಳು ಕುಡಿಯಲು ಬಳಸುವ ಪ್ರತಿಯೊಂದು ಹನಿ ನೀರನ್ನೂ ಮರುಬಳಕೆ ಮಾಡಬೇಕು. ಪರಿಸ್ಥಿತಿ ಹೀಗಿರುವಾಗ ಅಲ್ಲಿ ಬಟ್ಟೆ ತೊಳೆಯುವುದು ಹೇಗೆ ಸಾಧ್ಯ?

    ಒಂದು ಬಟ್ಟೆಯನ್ನು ಎಷ್ಟು ಸಮಯ ಧರಿಸಬಹುದು?
    ಬಾಹ್ಯಾಕಾಶದಲ್ಲಿ ಒಂದು ಬಟ್ಟೆಯನ್ನು ಹಲವು ದಿನಗಳು ಅಥವಾ ಒಂದು ವಾರದ ವರೆಗೆ ಧರಿಸಬಹುದು. ಭೂಮಿಯಂತೆ ಬಾಹ್ಯಾಕಾಶದಲ್ಲಿ ಧೂಳು ಇರುವುದಿಲ್ಲ. ಆದ್ದರಿಂದ ಬಟ್ಟೆಗಳು ಬಹುಬೇಗ ಕೊಳೆ ಆಗುವುದಿಲ್ಲ. ಅಂತರರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ (ಐಎಸ್‌ಎಸ್) ನಿಯಂತ್ರಿತ ತಾಪಮಾನವನ್ನು ಸಹ ನಿರ್ವಹಿಸುತ್ತದೆ. ಆದ್ದರಿಂದ ಆಗಾಗ್ಗೆ ಬಟ್ಟೆ ಬದಲಾಯಿಸುವ ಅಗತ್ಯವನ್ನು ಕಡಿಮೆ ಮಾಡುತ್ತದೆ.

    ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಬೆವರುತ್ತಾರಾ?
    ಬಾಹ್ಯಾಕಾಶದಲ್ಲಿ ಗುರುತ್ವಾರ್ಷಣೆ ಬಲ ಇರಲ್ಲ ಎಂಬುದು ನಿಮಗೆಲ್ಲ ತಿಳಿದೇ ಇದೆ. ಗಗನಯಾತ್ರಿಗಳು ಮೈಕ್ರೊಗ್ರಾವಿಟಿಯಲ್ಲಿ ನಿತ್ಯದ ಚಟುವಟಿಕೆಯಲ್ಲಿ ಹೆಚ್ಚು ಶ್ರಮವಹಿಸುವ ಅಗತ್ಯವಿರುವುದಿಲ್ಲ. ಹೀಗಾಗಿ, ಅವರು ಬೆವರುವ ಸಾಧ್ಯತೆ ತುಂಬಾ ಕಡಿಮೆ. ಆದರೆ, ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚಿನ ವ್ಯಾಯಾಮ ಮಾಡಬೇಕಾಗುತ್ತದೆ. ಈ ತೀವ್ರವಾದ ದೈಹಿಕ ಚಟುವಟಿಕೆಯು ಅವರನ್ನು ಹೆಚ್ಚು ಬೆವರುವಂತೆ ಮಾಡುತ್ತದೆ. ಪರಿಣಾಮ ಅವರ ಬಟ್ಟೆಗಳು ಕೊಳೆಯಾಗುತ್ತವೆ.

    ಬಳಸಿದ ಬಟ್ಟೆಗಳ ಕಥೆಯೇನು?
    ಗಗನಯಾತ್ರಿಗಳು ಬಳಸುವ ಬಟ್ಟೆಗಳನ್ನು ಕೊಳಕಾಯಿತು ಎಂದರೆ, ಅಲ್ಲಿಗೆ ಅವುಗಳ ಕಥೆ ಮುಗಿಯಿತು ಎಂದೇ ಅರ್ಥ. ಅವುಗಳನ್ನು ಮರುಬಳಕೆ ಮಾಡುವಂತಿಲ್ಲ. ಬಟ್ಟೆಗಳನ್ನು ತೊಳೆಯಬೇಕು ಎಂದರೆ ಭೂಮಿಗೆ ವಾಪಸ್ ತರಬೇಕಾಗುತ್ತದೆ. ಗಗನಯಾತ್ರಿಗಳು ಕಾರ್ಯಾಚರಣೆ ಮುಗಿಸಿ ವಾಪಸ್ ಆಗುವಾಗ ಸರಕು ವಾಹನಗಳಲ್ಲಿ ಬಟ್ಟೆಗಳನ್ನೂ ಪ್ಯಾಕ್ ಮಾಡಿ ತರಲಾಗುತ್ತದೆ. ಬಾಹ್ಯಾಕಾಶದಲ್ಲಿ ತ್ಯಾಜ್ಯ ಉಂಟಾಗುವಂತೆ ಮಾಡಬಾರದು ಎಂಬುದು ಇದರ ಉದ್ದೇಶ. ಭೂಮಿಗೆ ಹಿಂತಿರುಗಿ ತಂದ ಮೇಲೆ ಅವುಗಳನ್ನು ಸುಡಲಾಗುತ್ತದೆ.

    ಬಾಹ್ಯಾಕಾಶದಲ್ಲೂ ಬಟ್ಟೆ ತೊಳೆಯಲು ನಡೆದಿದ್ಯಾ ಸಂಶೋಧನೆ?
    ಭವಿಷ್ಯದಲ್ಲಿ ಮಂಗಳ ಗ್ರಹದ ಮೇಲೆ ಹಲವಾರು ಕಾರ್ಯಾಚರಣೆಗಳನ್ನು ನಡೆಸಲು ವಿಜ್ಞಾನಿಗಳು ಯೋಜಿಸಿದ್ದಾರೆ. ಹೆಚ್ಚಿನ ಪ್ರಮಾಣದ ಬಟ್ಟೆಗಳನ್ನು ಒಯ್ಯುವುದು ಬಾಹ್ಯಾಕಾಶ ನೌಕೆಗೆ ಅನಗತ್ಯ ಭಾರವನ್ನು ಸೇರಿಸಿದಂತೆಯೇ ಅರ್ಥ. ಆದ್ದರಿಂದ, ಹೆಚ್ಚಿನ ಪ್ರಮಾಣದ ನೀರನ್ನು ಬಳಸದೇ ಬಾಹ್ಯಾಕಾಶದಲ್ಲಿ ಪರಿಣಾಮಕಾರಿಯಾಗಿ ಬಟ್ಟೆಗಳನ್ನು ತೊಳೆಯುವ ಮಾರ್ಗ ಕಂಡುಕೊಳ್ಳಲು ವಿಜ್ಞಾನಿಗಳು ಸಂಶೋಧನೆ ನಡೆಸುತ್ತಿದ್ದಾರೆ.

    2023ರಲ್ಲಿ ‘ಟೈಡ್ ಇನ್ಫಿನಿಟಿ’ ಎಂಬ ವಿಶೇಷ ಡಿಟರ್ಜೆಂಟ್ ಅನ್ನು ಅಭಿವೃದ್ಧಿಪಡಿಸಲಾಯಿತು. ಸಾಮಾನ್ಯ ಪ್ರಮಾಣಕ್ಕಿಂತ ಅರ್ಧ ನೀರಿನಿಂದ ಬಟ್ಟೆಗಳನ್ನು ತೊಳೆಯಲು ಇದನ್ನು ವಿನ್ಯಾಸಗೊಳಿಸಲಾಯಿತು. ಆದರೆ, ನಾಸಾ ಇದನ್ನು ಇನ್ನೂ ಜಾರಿಗೆ ತಂದಿಲ್ಲ. ಅಷ್ಟೇ ಅಲ್ಲ, ಸಂಶೋಧಕರು ‘ವಾಷರ್-ಡ್ರೈಯರ್’ ಸಂಯೋಜನೆಯ ಮೇಲೆ ರಿಸರ್ಚ್ ಮಾಡುತ್ತಿದ್ದಾರೆ. ಅದು ಚಂದ್ರ ಮತ್ತು ಮಂಗಳದ ಮೇಲೆ ಕಾರ್ಯನಿರ್ವಹಿಸುತ್ತದೆ. ಈ ತಂತ್ರಜ್ಞಾನವು ಭೂಮಿಯ ಮೇಲಿನ ಶುಷ್ಕ ಪ್ರದೇಶಗಳಲ್ಲಿ ಸಹ ಪ್ರಯೋಜನಕಾರಿಯಾಗಿದೆ.

    ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಯಾವಾಗ?
    ಬಾಹ್ಯಾಕಾಶದಲ್ಲಿ ಸಿಲುಕಿರುವ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಮಾರ್ಚ್ ತಿಂಗಳಲ್ಲಿ ಭೂಮಿಗೆ ಮರಳುವ ಸಾಧ್ಯತೆ ಇದೆ ಎಂದು ನಾಸಾ ತಿಳಿಸಿದೆ. 2024ರ ಜೂ.5 ರಂದು ಬೋಯಿಂಗ್ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಸುನಿತಾ ಮತ್ತು ವಿಲ್ಮೋರ್ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ (ಐಎಸ್‌ಎಸ್) ಪ್ರಯಾಣ ಬೆಳೆಸಿದ್ದರು. 8 ದಿನಗಳ ಕಾರ್ಯಾಚರಣೆ ಅದಾಗಿತ್ತು. ಎಂಟು ದಿನಗಳ ಬಳಿಕ ಅವರು ಭೂಮಿಗೆ ವಾಪಸ್ ಆಗಬೇಕಿತ್ತು. ಆದರೆ, ಗಗನನೌಕೆಯಲ್ಲಿ ಕಂಡುಬಂದ ತಾಂತ್ರಿಕ ದೋಷದಿಂದ ಅವರು ಹಿಂತಿರುಗಲು ಸಾಧ್ಯವಾಗಿಲ್ಲ.

    ಈ ಹಿಂದೆಯೇ ಏಪ್ರಿಲ್‌ನಲ್ಲಿ ಇಬ್ಬರನ್ನೂ ಕರೆತರುವುದಾಗಿ ನಾಸಾ ತಿಳಿಸಿತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಇಬ್ಬರೂ ಗಗನಯಾತ್ರಿಗಳನ್ನು ಸ್ಪೇಸ್‌ಎಕ್ಸ್‌ನ ಕ್ರ್ಯೂ-9 ಕ್ಯಾಪ್ಲ್ಯುಯಲ್‌ನಲ್ಲಿ ವಾಪಸ್ ಭೂಮಿಗೆ ಕರೆತರಲು ನಾಸಾ ಸಿದ್ಧತೆ ನಡೆಸಿದೆ. ಕಳೆದ 8 ತಿಂಗಳಿಂದ ಇಬ್ಬರೂ ಬಾಹ್ಯಾಕಾಶದಲ್ಲೇ ಸಿಲುಕಿದ್ದಾರೆ. ಈ ಹಿಂದೆ ಅಲ್ಲಿಂದಲೇ ಬಿಡುಗಡೆ ಮಾಡಿದ ವೀಡಿಯೋಗಳಲ್ಲಿ, ‘ನಾವು ಆರೋಗ್ಯವಾಗಿದ್ದೇವೆ’ ಸ್ಪಷ್ಟಪಡಿಸಿದ್ದಾರೆ.

  • 2027ರ ವೇಳೆಗೆ ಚಂದ್ರಯಾನ-4ರ ಸುಳಿವು ಕೊಟ್ಟ ಇಸ್ರೋ; ಚಂದ್ರನಲ್ಲಿಗೆ ಗಗನಯಾತ್ರಿಗಳು ಹೆಜ್ಜೆ ಇಡಲು ಹೇಗೆ ಸಹಕಾರಿ?

    2027ರ ವೇಳೆಗೆ ಚಂದ್ರಯಾನ-4ರ ಸುಳಿವು ಕೊಟ್ಟ ಇಸ್ರೋ; ಚಂದ್ರನಲ್ಲಿಗೆ ಗಗನಯಾತ್ರಿಗಳು ಹೆಜ್ಜೆ ಇಡಲು ಹೇಗೆ ಸಹಕಾರಿ?

    ಚಂದ್ರಯಾನ-3 ಯಶಸ್ಸಿನ ಬಳಿಕ ಇಸ್ರೋ ಬಾಹ್ಯಾಕಾಶ ವಲಯದಲ್ಲಿ ಮತ್ತೊಂದು ಸಾಧನೆಗೆ ಮುಂದಡಿಯಿಟ್ಟಿದೆ. 2040 ಕ್ಕೆ ಚಂದ್ರನಲ್ಲಿ ಮಾನವನ ಹೆಜ್ಜೆ ಗುರುತು ಮೂಡಿಸುವ ಗುರಿ ಹೊಂದಿರುವ ಇಸ್ರೋ, ಅದಕ್ಕೆ ಪೂರಕವಾಗಿ 2027ಕ್ಕೆ ಚಂದ್ರಯಾನ-4 ಉಡಾವಣೆಗೆ ಸಜ್ಜಾಗಿದೆ. ಬಾಹ್ಯಾಕಾಶ ಪರಿಶೋಧನಾ ಕ್ಷೇತ್ರದಲ್ಲಿ ಭಾರತದ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚು ಮಾಡುವ ಇರಾದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಚಂದ್ರಯಾನ-4 ಯೋಜನೆಗೆ ಹಸಿರು ನಿಶಾನೆ ತೋರಿದೆ. ಹಾಗಿದ್ರೆ ಚಂದ್ರಯಾನ-3ಕ್ಕಿಂತ ಚಂದ್ರಯಾನ-4 ಹೇಗೆ ವಿಭಿನ್ನ? ತಯಾರಿ ಹೇಗಿದೆ? ಚಂದ್ರಯಾನ 4 ಗಗನಯಾತ್ರಿಗಳಿಗೆ ಹೇಗೆ ಸಹಕಾರಿಯಾಗಬಹುದು ಎಂಬ ಕುರಿತು ಇಲ್ಲಿ ವಿವರಿಸಲಾಗಿದೆ.

    ಚಂದ್ರಯಾನ -4 ಯೋಜನೆಯಡಿ ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವುದಷ್ಟೇ ಅಲ್ಲದೇ, ಅಲ್ಲಿಂದ ಕಲ್ಲು ಮತ್ತು ಮಣ್ಣಿನ ಮಾದರಿಗಳನ್ನು ಭೂಮಿಗೆ ತರುವ ಉದ್ದೇಶವನ್ನು ಹೊಂದಿದೆ. ಹೀಗಾಗಿ ಈ ಯೋಜನೆಯಲ್ಲಿ ಚಂದ್ರಯಾನ- 3ರ ಯೋಜನೆಯಲ್ಲಿದ್ದ ಪ್ರೊಪಲ್ಷನ್‌ ಮಾಡ್ಯೂಲ್‌, ಡಿಸೆಂಡರ್‌ ಮಾಡ್ಯೂಲ್‌, ಅಸೆಂಡರ್‌ ಮಾಡ್ಯೂಲ್‌ ಜತೆಗೆ ಟ್ರಾನ್ಸಫರ್‌ ಮಾಡ್ಯೂಲ್‌, ರೀ -ಎಂಟ್ರಿ ಮಾಡ್ಯೂಲ್‌ ಎಂಬ ಎರಡು ಹೊಸ ಘಟಕಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌ ತಿಳಿಸಿದ್ದಾರೆ.

    ಈ ಮಿಷನ್ ಯಶಸ್ವಿ ಚಂದ್ರನ ಲ್ಯಾಂಡಿಂಗ್, ಚಂದ್ರನ ಮಾದರಿಗಳ ಸಂಗ್ರಹಣೆ ಮತ್ತು ಭೂಮಿಗೆ ಸುರಕ್ಷಿತವಾಗಿ ಮರಳಲು ಅಗತ್ಯವಾದ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಅವುಗಳನ್ನು ಭೂಮಿಯ ಮೇಲೆ ಪ್ರದರ್ಶನ ಮಾಡುವ ಗುರಿಯನ್ನು ಹೊಂದಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಚಂದ್ರಯಾನ-4 ಯೋಜನೆ ಸೇರಿದಂತೆ ಹಲವಾರು ಮಹತ್ವದ ಬಾಹ್ಯಾಕಾಶ ಕಾರ್ಯಾಚರಣೆಗಳಿಗೆ ಅನುಮೋದನೆಯನ್ನು ಘೋಷಿಸಿದರು. ಚಂದ್ರಯಾನ-4 ಮಿಷನ್ ಅನ್ನು ವಿಸ್ತರಿಸಲಾಗಿದೆ. ಮುಂದಿನ ಹಂತವು ಚಂದ್ರನಿಗೆ ಮಾನವಸಹಿತ ಮಿಷನ್ ಅನ್ನು ಜಾರಿ ಮಾಡುವುದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಪೂರ್ವಸಿದ್ಧತಾ ಕ್ರಮಗಳನ್ನು ಅನುಮೋದಿಸಲಾಗಿದೆ. ವೀನಸ್ ಆರ್ಬಿಟರ್ ಮಿಷನ್, ಗಗನ್‌ಯಾನ್ ಫಾಲೋ-ಆನ್ ಮತ್ತು ಭಾರತೀಯ ಅಂತರಿಕ್ಷ್ ನಿಲ್ದಾಣ ಮತ್ತು ಮುಂದಿನ ಪೀಳಿಗೆ ಲಾಂಚ್ ವೆಹಿಕಲ್ ಅಭಿವೃದ್ಧಿಗೂ ಅನುಮೋದನೆ ನೀಡಲಾಗಿದೆ ಎಂದು ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

    ಚಂದ್ರಯಾನ-4 ಭವಿಷ್ಯದ ಚಂದ್ರನ ಕಾರ್ಯಾಚರಣೆಗಳಿಗೆ ಪ್ರಮುಖವಾದ ಅಡಿಪಾಯ ತಂತ್ರಜ್ಞಾನಗಳನ್ನು ಪ್ರದರ್ಶಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಡಾಕಿಂಗ್ ಮತ್ತು ಅನ್‌ಡಾಕಿಂಗ್ ಕಾರ್ಯವಿಧಾನಗಳು, ಸುರಕ್ಷಿತ ಲ್ಯಾಂಡಿಂಗ್ ತಂತ್ರಗಳು ಮತ್ತು ಚಂದ್ರನ ಮಾದರಿಗಳನ್ನು ಭೂಮಿಗೆ ಹಿಂದಿರುಗಿಸುವ ಸಾಮರ್ಥ್ಯ 2040 ರಲ್ಲಿ ಯೋಜಿಸಲಾದ ಮಾನವಸಹಿತ ಚಂದ್ರನ ಲ್ಯಾಂಡಿಂಗ್‌ನ ಭಾರತದ ಗುರಿಯತ್ತ ಪ್ರಮುಖ ಹೆಜ್ಜೆಯಾಗಿದೆ.

    2035 ರ ವೇಳೆಗೆ ಭಾರತೀಯ ಅಂತರಿಕ್ಷ್ ನಿಲ್ದಾಣವನ್ನು (ಭಾರತೀಯ ಬಾಹ್ಯಾಕಾಶ ನಿಲ್ದಾಣ) ಸ್ಥಾಪಿಸುವುದು ಮತ್ತು 2040 ರ ವೇಳೆಗೆ ಮಾನವಸಹಿತ ಚಂದ್ರನ ಲ್ಯಾಂಡಿಂಗ್ ಅನ್ನು ಸಾಧಿಸುವುದು ಮತ್ತು ಅದರ ತಾಂತ್ರಿಕ ಸಾಧನೆಗಳನ್ನು ನಿರ್ಮಿಸುವುದು ಭಾರತ ಸರ್ಕಾರ ಹಾಗೂ ಇಸ್ರೋದ ಪ್ರಮುಖ ಉದ್ದೇಶವಾಗಿದೆ.

    ಚಂದ್ರಯಾನ 4ಕ್ಕೆ ವೆಚ್ಚವೆಷ್ಟು?
    ಚಂದ್ರಯಾನ 4 ಯೋಜನೆಗೆ 2,104.06 ಕೋಟಿ ರೂ. ಖರ್ಚಾಗಲಿದೆ. 2040ರ ಹೊತ್ತಿಗೆ ಚಂದ್ರನ ಅಂಗಳದಲ್ಲಿ ಗಗನಯಾತ್ರಿಗಳನ್ನು ಇಳಿಸಲು ಇಸ್ರೋ ಯೋಜನೆ ಹಾಕಿಕೊಂಡಿದೆ. 2040ರ ಸುಮಾರಿಗೆ ಭೂಮಿಯಿಂದ ಚಂದ್ರನಿಗೆ, ಚಂದ್ರನಿಂದ ಭೂಮಿಗೆ ಸುಲಭವಾಗಿ ಹೋಗಬಹುದಾಗ ಪರಿಸ್ಥಿತಿ ನಿರ್ಮಾಣವಾಗಬೇಕು ಎಂಬುದು ಇದರ ಗುರಿ.

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬಾಹ್ಯಾಕಾಶ ನೌಕೆಯ ಅಭಿವೃದ್ಧಿಯ ನೇತೃತ್ವವನ್ನು ವಹಿಸುತ್ತದೆ ಮತ್ತು ಮಿಷನ್ ಅನ್ನು ಮೇಲ್ವಿಚಾರಣೆ ಮಾಡುತ್ತದೆ. 36 ತಿಂಗಳುಗಳ ಟೈಮ್‌ಲೈನ್‌ ಇದಕ್ಕೆ ನೀಡಲಾಗಿದೆ. ಯೋಜನೆಯು ಉದ್ಯಮ ಮತ್ತು ಶಿಕ್ಷಣದೊಂದಿಗೆ ಸಹಯೋಗವನ್ನು ಒಳಗೊಂಡಿರುತ್ತದೆ, ತಾಂತ್ರಿಕ ಪ್ರಗತಿಗಳು ಮತ್ತು ಉದ್ಯೋಗಾವಕಾಶಗಳನ್ನು ಉತ್ತೇಜಿಸುತ್ತದೆ.

    ಚಂದ್ರಯಾನ4ರ ವಿಶೇಷತೆ ಏನು?
    ಚಂದ್ರಯಾನ 4ರ ಕಾರ್ಯಾಚರಣೆಯಲ್ಲಿ ಎರಡು ವಿಭಿನ್ನ ರಾಕೆಟ್‌ಗಳಾದ ಹೆವಿ-ಲಿಫ್ಟರ್ LVM-3 ಮತ್ತು PSLV ಬಳಸಲಾಗುತ್ತದೆ. ಇವೆರಡೂ ವಿಭಿನ್ನ ಪೇಲೋಡ್‌ಗಳನ್ನು ಹೊತ್ತೊಯ್ಯುತ್ತವೆ.

    ಚಂದ್ರಯಾನ 4ರ ಗಮನ ಚಂದ್ರನ ಮೇಲೆ ನಿಖರ ಲ್ಯಾಂಡಿಂಗ್, ಮಾದರಿ ಸಂಗ್ರಹಣೆ ಮತ್ತು ಭೂಮಿಗೆ ಸುರಕ್ಷಿತವಾಗಿ ಮರಳುವುದಾಗಿದೆ. ಇದರ ಮೂಲಕ ಭಾರತ ತನ್ನ ಬಾಹ್ಯಾಕಾಶ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲಿದೆ. ಒಟ್ಟು 5 ಮಾಡ್ಯೂಲ್‌ಗಳನ್ನು ತನ್ನೊಂದಿಗೆ ಚಂದ್ರಯಾನ 4 ಹೊತ್ತೊಯ್ಯಲಿದೆ. ಈ ಎಲ್ಲಾ ಮಾಡ್ಯೂಲ್‌ಗಳು ಒಟ್ಟಾಗಿ ಕೆಲಸ ಮಾಡುತ್ತವೆ ಮತ್ತು ಚಂದ್ರನಿಂದ ಅಗತ್ಯ ಮಾದರಿಗಳನ್ನು ಸಂಗ್ರಹಿಸುತ್ತವೆ. ಇದುವರೆಗೆ ಚೀನಾ ಮತ್ತು ಅಮೆರಿಕ ದೇಶಗಳು ಮಾತ್ರ ಇಂತಹ ಕಠಿಣ ಕಾರ್ಯಾಚರಣೆಯನ್ನು ನಿರ್ವಹಿಸಿವೆ.

    ಭಾರತಕ್ಕೆ ಜಪಾನ್ ನೆರವು:
    ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಈ ಕುರಿತು ಮಾತನಾಡಿ, ಚಂದ್ರಯಾನ 4 ಕೇವಲ ಚಂದ್ರನಿಂದ ಕಲ್ಲುಗಳನ್ನು ತರುವ ಮಿಷನ್ ಅಲ್ಲ. ಭವಿಷ್ಯದಲ್ಲಿ ಮನುಷ್ಯರು ಚಂದ್ರನಲ್ಲಿಗೆ ಹೋಗಲು ಮತ್ತು ಅಲ್ಲಿಂದ ಸುರಕ್ಷಿತವಾಗಿ ಹಿಂತಿರುಗಲು ಸಾಧ್ಯವಾಗುವಂತಹ ಸಾಮರ್ಥ್ಯವನ್ನು ರಚಿಸುವುದಾಗಿದೆ ಎಂದರು.

    ಈ ಯೋಜನೆಯಲ್ಲಿ ಭಾರತ ಮತ್ತು ಜಪಾನ್ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂಬ ಮಾಹಿತಿ ದೊರೆತಿದೆ. ಇಸ್ರೋ ತನ್ನ ಲ್ಯಾಂಡರ್ ಅನ್ನು ಸಿದ್ಧಪಡಿಸುತ್ತಿದ್ದು, ಚಂದ್ರನ ರೋವರ್‌ನ ಜವಾಬ್ದಾರಿಯನ್ನು JAXA ವಹಿಸಿಕೊಂಡಿದೆ. ಲ್ಯಾಂಡರ್ ರೋವರ್ ಅನ್ನು ಹೊತ್ತೊಯ್ಯುತ್ತದೆ. ಹೀಗಾಗಿ ಎರಡೂ ದೇಶಗಳು ಚಂದ್ರಯಾನ 4ರ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಲಿವೆ.

    ಭಾರತೀಯ ಬಾಹ್ಯಾಕಾಶ ನಿಲ್ದಾಣ:
    ಗಗನಯಾನ ಕಾರ್ಯಕ್ರಮದ ವ್ಯಾಪ್ತಿಯನ್ನು ವಿಸ್ತರಿಸುವುದರೊಂದಿಗೆ ಭಾರತೀಯ ಬಾಹ್ಯಾಕಾಶ ನಿಲ್ದಾಣದ (ಬಿಎಎಸ್-1) ಮೊದಲ ಮಾಡ್ಯೂಲ್ ಅನ್ನು ಅಭಿವೃದ್ಧಿಪಡಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಪರಿಷ್ಕೃತ ಗಗನಯಾನ ಕಾರ್ಯಕ್ರಮ BAS-1 ಘಟಕ ಸೇರಿದಂತೆ ಎಂಟು ಕಾರ್ಯಾಚರಣೆಗಳನ್ನು ಒಳಗೊಂಡಿದೆ. ಇದು ಡಿಸೆಂಬರ್ 2028ರೊಳಗೆ ಪೂರ್ಣಗೊಳ್ಳಲಿದೆ.

    ಗಗನಯಾನ ಕಾರ್ಯಕ್ರಮದ ಒಟ್ಟು ನಿಧಿಯನ್ನು 11,170 ಕೋಟಿ ರೂಪಾಯಿಗಳಿಂದ 20,193 ಕೋಟಿ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಗಗನಯಾನದಲ್ಲಿ 3 ಗಗನಯಾತ್ರಿಗಳನ್ನು 400 ಕಿ.ಮೀ ಮೇಲಿನ ಭೂಮಿಯ ಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಇರುವ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ.

    ವೀನಸ್ (ಶುಕ್ರ) ಆರ್ಬಿಟರ್ ಮಿಷನ್:
    ಈ ಯೋಜನೆಗೆ ಕೇಂದ್ರ ಸರ್ಕಾರ 1,236 ಕೋಟಿ ರೂ.ಗಳ ಬಜೆಟ್ ಮೀಸಲಿಟ್ಟಿದೆ. 2028ರ ಮಾರ್ಚ್‌ನಲ್ಲಿ ಯೋಜನೆ ಪ್ರಾರಂಭವಾಗಲಿದೆ. ಇದರ ಪ್ರಾಥಮಿಕ ಉದ್ದೇಶ ಶುಕ್ರನ ಮೇಲ್ಮೈ ಮತ್ತು ವಾತಾವರಣದ ಬಗ್ಗೆ ನಮ್ಮ ತಿಳುವಳಿಕೆಯನ್ನು ಹೆಚ್ಚಿಸುವುದು, ವಾತಾವರಣದ ಮೇಲೆ ಸೂರ್ಯನ ಪ್ರಭಾವದ ಕುರಿತು ಅಧ್ಯಯನ ಮಾಡುವುದಾಗಿದೆ.

  • ಸುನೀತಾ ವಿಲಿಯಮ್ಸ್‌ ಇನ್ನೂ 6 ತಿಂಗಳು ಭೂಮಿಗೆ ಬರಲ್ಲ – ಅಲ್ಲಿವರೆಗೂ ಗಗನಯಾನಿಗಳಿಗೆ ಆಹಾರ ವ್ಯವಸ್ಥೆ ಹೇಗೆ?

    ಸುನೀತಾ ವಿಲಿಯಮ್ಸ್‌ ಇನ್ನೂ 6 ತಿಂಗಳು ಭೂಮಿಗೆ ಬರಲ್ಲ – ಅಲ್ಲಿವರೆಗೂ ಗಗನಯಾನಿಗಳಿಗೆ ಆಹಾರ ವ್ಯವಸ್ಥೆ ಹೇಗೆ?

    ವಾಷಿಂಗ್ಟನ್‌: ಕಳೆದ ಜೂನ್‌ 5ರಂದು ಬಾಹ್ಯಾಕಾಶಕ್ಕೆ (Space) ತೆರಳಿದ್ದ ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಒಂದು ವಾರದ ಅವಧಿಗೆಂದು ಹೋದ ಅವರು ಇನ್ನೂ 6 ತಿಂಗಳು ಬಾಹ್ಯಾಕಾಶದಲ್ಲೇ ಉಳಿಯಲಿದ್ದಾರೆ ಎಂದು ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

    ಸದ್ಯ ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ತಾಂತ್ರಿಕ ದೋಷದಿಂದಾಗಿ ಬಾಹ್ಯಕಾಶದಲ್ಲೇ ಸಿಲುಕಿಕೊಂಡಿದ್ದಾರೆ. ಈ ಇಬ್ಬರು ಗಗನಯಾತ್ರಿಗಳು ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಹೇಳಿದೆ. ಮುಂದಿನ ಫೆಬ್ರವರಿಯಲ್ಲಿ ಬುಚ್ ಮತ್ತು ಸುನಿತಾ ಕ್ರ್ಯೂ-9 ರೊಂದಿಗೆ ಹಿಂತಿರುಗುತ್ತಾರೆ ಮತ್ತು ಸ್ಟಾರ್ಲೈನರ್ ಸಿಬ್ಬಂದಿಯಿಲ್ಲದೇ ಹಿಂತಿರುಗುತ್ತಾರೆ ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ. ಬೋಯಿಂಗ್ ಬಾಹ್ಯಾಕಾಶ ನೌಕೆಯ ಥ್ರಸ್ಟರ್ ಅಸಮರ್ಪಕ ಕಾರ್ಯಗಳಿಂದ ಸುನಿತಾ ವಿಲಿಯಮ್ಸ್‌ ಮತ್ತು ಬುಚ್‌ ಹಿಂತಿರುಗುವುದು ವಿಳಂಬವಾಗಿದೆ ಎಂದು ಅವರು ಹೇಳಿದ್ದಾರೆ.

    ಆಹಾರ ವ್ಯವಸ್ಥೆ ಹೇಗೆ?
    ಸದ್ಯ ಇನ್ನೂ 6 ತಿಂಗಳು ಬಾಹ್ಯಾಕಾಶದಲ್ಲೇ ಉಳಿಯಲಿರುವ ಗಗನ ಯಾನಿಗಳಿಗೆ ಆಹಾರ ಪೂರೈಕೆ ಹೇಗೆ ಸಾಧ್ಯ ಎನ್ನುವುದರ ಬಗ್ಗೆ ಎಲ್ಲರ ಕುತೂಹಲ ನೆಟ್ಟಿದೆ. ಇದಕ್ಕೆ ನಾಸಾ ಮಾಸ್ಟರ್‌ ಪ್ಲ್ಯಾನ್‌ ಸಹ ಮಾಡಿಕೊಂಡಿದೆ. ಹೌದು. ಮಾನವ ಸಹಿತ ನೌಕೆಯ ಉಡ್ಡಯನ ಸಾಧ್ಯವಾಗದೇ ಇದ್ದರೂ, ಸರಕು ಸಾಗಾಣೆಗೆ ಇರುವ ನೌಕೆಗಳು ಬಾಹ್ಯಾಕಾಶ ಕೇಂದ್ರಕ್ಕೆ ಆಗಾಗ್ಗೆ ಹೋಗಿಬರುತ್ತವೆ. ಅದರ ಮೂಲಕವೇ ಸುನೀತಾ ಹಾಗೂ ವಿಲ್ಮೋರ್‌ ಅವರಿಗೆ ಆಹಾರ ಸಾಮಗ್ರಿಗಳನ್ನು ಕಳುಹಿಸಿಕೊಡಲು ನಾಸಾ ನಿರ್ಧರಿಸಿದೆ.

    ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಕಳೆದ ಜೂನ್‌ 5ರಂದು ಆರಂಭಿಸಿದ್ದರು. ಜೂನ್‌ 6ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಸ್ಟೇಷನ್‌ ತಲುಪಿದ್ದ ಅವರು 1 ವಾರ ಸಂಶೋಧನೆ ನಡೆಸಿ ವಾಪಸಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಅವರು ಅಲ್ಲಿಯೇ ಸಿಲುಕಿದ್ದಾರೆ. ಇವರು ಯಾವಾಗ ಬರುತ್ತಾರೆ ಎಂಬುದರ ಕುರಿತು ನಾಸಾ ಈಗ ಮಾಹಿತಿ ನೀಡಿದೆ.

  • ಗಗನಯಾತ್ರಿಗಳ ಮೈಕ್ರೋಮೀಟೋರಾಯ್ಡ್ ದಿರಿಸುಗಳ ಕೌತುಕ ಲೋಕದ ಬಗ್ಗೆ ನಿಮಗೆ ಗೊತ್ತಾ? 

    ಗಗನಯಾತ್ರಿಗಳ ಮೈಕ್ರೋಮೀಟೋರಾಯ್ಡ್ ದಿರಿಸುಗಳ ಕೌತುಕ ಲೋಕದ ಬಗ್ಗೆ ನಿಮಗೆ ಗೊತ್ತಾ? 

    ಬೆಂಗಳೂರು: ತಾಂತ್ರಿಕತೆ ಬೆಳೆದಂತೆ ಬಾಹ್ಯಾಕಾಶ ಸಂಶೋಧನೆಗಳು (Space Research) ಹೆಚ್ಚೆಚ್ಚು ಆಗುತ್ತಿದ್ದು, ಅದಕ್ಕೆ ಪೂರಕವಾದ ಸಂಶೋಧನೆಗಳು ನಡೆಯುತ್ತಿವೆ. ಹಾಗಾಗಿ ಬ್ಯಾಹ್ಯಾಕಾಶ ಯಾನಕ್ಕೆ ಬಹುಮುಖ್ಯವಾಗಿ ಬೇಕಾದ ಗಗನಯಾತ್ರಿಗಳ ದಿರಿಸುಗಳಲ್ಲೂ (Astronuts Dress) ಸಾಕಷ್ಟು ಬೆಳವಣಿಗೆ ಕಂಡುಬರುತ್ತಿವೆ. 

    ಹೌದು.. ಬಾಹ್ಯಾಕಾಶ ಯಾನಕ್ಕೆ ತೆರಳುವ ಗಗನಯಾತ್ರಿಗಳು ಧರಿಸುವ ದಿರಿಸುಗಳು ಅದ್ಭುತ ತಂತ್ರಜ್ಞಾನವನ್ನ ಒಳಗೊಂಡಿವೆ. ಗಗನಯಾತ್ರಿಗಳು ಬಾಹ್ಯಾಕಾಶದ ಕಠಿಣ ವಾತಾವರಣದಲ್ಲಿಯೂ ಅನ್ವೇಷಣೆ ಕೈಗೊಳ್ಳಲು ಮತ್ತು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಅವು ಅನುವು ಮಾಡಿಕೊಡುತ್ತವೆ. ಬಾಹ್ಯಾಕಾಶ ಯಾನದ ವೇಳೆ ಗಗನಯಾತ್ರಿಗಳು ಧರಿಸುವ ಉಡುಪುಗಳ ಕೆಲವು ವಿಶಿಷ್ಟ ಲಕ್ಷಣಗಳನ್ನು ಇಲ್ಲಿ ತಿಳಿಯಬಹುದು. 

    ನೀರಿನ ಟ್ಯೂಬ್‌ಗಳಂತಹ ರಚನೆಗಳು ಮತ್ತು ಮೈಕ್ರೋಮೀಟೋರಾಯ್ಡ್ (Micrometeoroid) ಉಡುಪನ್ನು ಗಗನಯಾತ್ರಿಗಳು ಬಳಸುತ್ತಾರೆ. ಇದು ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳ ದೈಹಿಕ ದ್ರವಗಳು ಸಮತೋಲನದಲ್ಲಿರುವಂತೆ ನೋಡಿಕೊಳ್ಳಲು ಸಹಾಯಕವಾಗುತ್ತವೆ. 

    ಜೊತೆಗೆ ಈ ಉಡುಪುಗಳು -250° ಫ್ಯಾರನ್‌ಹೀಟ್‌ (ಸುಮಾರು -121 ಡಿಗ್ರಿ ಸೆಲ್ಸಿಯಸ್‌) ನಿಂದ 250° ಫ್ಯಾರನ್‌ ಹೀಟ್‌ (121 ಡಿಗ್ರಿ ಸೆಲ್ಸಿಯಸ್‌) ವರೆಗಿನ ವಿಪರೀತ ತಾಪಮಾನದಿಂದ ಅವರನ್ನ ರಕ್ಷಿಸುತ್ತವೆ. ಗಗನಯಾತ್ರಿಗಳಿಗೆ ಉಸಿರಾಟಕ್ಕೆ ಆಮ್ಲಜನಕ ಪೂರೈಕೆ ಮಾಡುವ ಜೊತೆಗೆ, ಬಾಹ್ಯಾಕಾಶದಲ್ಲಿ ನಡೆದಾಡುವ ಸಮಯದಲ್ಲಿ ಕುಡಿಯಲು ನೀರನ್ನೂ ಪೂರೈಸುತ್ತದೆ. ಇದನ್ನೂ ಓದಿ: ಅರ್ಮೇನಿಯನ್ ನಿಯಂತ್ರಿತ ಕರಾಬಾಕ್‌ನಲ್ಲಿ ಅಜರ್‌ಬೈಜಾನ್‌ ಮಿಲಿಟರಿ ದಾಳಿ – 25 ಮಂದಿ ಸಾವು

    ಕೈಗವಸುಗಳು, ಬೂಟುಗಳು, ಹೆಲ್ಮೆಟ್, ವೈಸರ್ (ಹೆಲ್ಮೆಟ್‌ನಲ್ಲಿ ಮುಖದ ಮುಂಭಾಗ ಅಳವಡಿಸಲಾದ ಗ್ಲಾಸ್‌) ಮತ್ತು ಬೆನ್ನುಹೊರೆಯನ್ನು ಈ ಉಡುಪು ಒಳಗೊಂಡಿರುತ್ತದೆ. ಕೆಲವೊಮ್ಮೆ ಜೆಟ್-ಪ್ಯಾಕ್‌ (ಲಿಕ್ವಿಡ್‌ ಡಿವೈಸ್‌) ಮಾದರಿಯ ಸಾಧನವಾಗಿರುವ ಇದನ್ನು ಮಾನವಸಹಿತ ಚಾಲನಾ ಘಟಕವೆಂದೂ (ಮ್ಯಾನ್ಡ್ ಮ್ಯಾನುವರಿಂಗ್ ಯುನಿಟ್) ಕರೆಯಲಾಗುತ್ತದೆ. ಇದು ಗಗನಯಾತ್ರಿಗಳು ಅಗತ್ಯ ಕಾರ್ಯನಿರ್ವಹಿಸಲು ನೆರವಾಗುತ್ತದೆ.

    ತಾಪಮಾನ, ಒತ್ತಡ, ಆಮ್ಲಜನಕ, ಇಂಗಾಲದ ಡೈಆಕ್ಸೈಡ್, ಶಕ್ತಿ, ಸಂವಹನ ಮತ್ತು ಟೆಲಿಮೆಟ್ರಿ ಅಥವಾ ದೂರಮಾಪನ (ದೂರದ ಭೌತಿಕ ಘಟನೆಯನ್ನು ತಿಳಿಯುವ ವ್ಯವಸ್ಥೆ) ಮಾಡುವ, ಸೂಟ್‌ನ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡುವ ಮತ್ತು ನಿಯಂತ್ರಿಸುವ ಜೀವ ಬೆಂಬಲ ವ್ಯವಸ್ಥೆಯನ್ನ (ಲೈಫ್ ಸಪೋರ್ಟ್ ಸಿಸ್ಟಂ) ಅವು ಹೊಂದಿವೆ. ಇದನ್ನೂ ಓದಿ: ನೀರಿನ ಸೆಲೆ ಇರುವ ಗ್ರಹ ಪತ್ತೆ; ಇಲ್ಲಿದ್ಯಾ ಜೀವಿಗಳ ನೆಲೆ? – ನಾಸಾ ಹೇಳೋದೇನು?

    ಭವಿಷ್ಯದ ಕಾರ್ಯಾಚರಣೆಗಳ ಸವಾಲುಗಳು ಮತ್ತು ಬೇಡಿಕೆಗಳನ್ನು ಪೂರೈಸಲು ಬಾಹ್ಯಾಕಾಶದ ದಿರಿಸುಗಳನ್ನು ನಿರಂತರವಾಗಿ ಸುಧಾರಿಸಲಾಗುತ್ತಿದೆ.  ಉದಾಹರಣೆಗೆ, ಎಕ್ಸ್‌ ಪ್ಲೋರೇಶನ್ ಎಕ್ಸ್‌ ಟ್ರಾವೆಹಿಕ್ಯುಲರ್ ಮೊಬಿಲಿಟಿ ಯುನಿಟ್ ಅಥವಾ xEMU ಎಂಬ ಹೊಸ ಸೂಟ್ ಅನ್ನು ನಾಸಾ (NASA) ಅಭಿವೃದ್ಧಿಪಡಿಸುತ್ತಿದೆ. ಇದು ಹಿಂಭಾಗದಲ್ಲಿ ಪ್ರವೇಶಿಸಬಹುದಾದ ಹ್ಯಾಚ್, ಸುಧಾರಿತ ಚಲನಶೀಲತೆ, ವರ್ಧಿತ ಸಂವಹನ ಮತ್ತು ಹೆಚ್ಚಿನ ಗ್ರಾಹಕೀಕರಣ ಆಯ್ಕೆಗಳನ್ನು ಹೊಂದಿರುತ್ತದೆ. 2025ರ ಚಂದ್ರಯಾನಕ್ಕೆ ಈಗಿನೀಂದಲೇ ಸಿದ್ಧತೆ ನಡೆಸಿರುವ ನಾಸಾ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯನ್ನೊಳಗೊಂಡ ಉಡುಪುಗಳನ್ನು ಸಿದ್ಧಪಡಿಸಿದೆ. 

    ಬಾಹ್ಯಾಕಾಶ ಸೂಟ್‌ಗಳು ಗಗನಯಾತ್ರಿಗಳ ಸುರಕ್ಷತೆಗೆ ಮಾತ್ರವಲ್ಲದೆ ಮತ್ತು ಆವಿಷ್ಕಾರಗಳನ್ನೂ ಮುನ್ನಡೆಸಲೂ ನೆರವಾಗುತ್ತಿವೆ

    ಮಾಹಿತಿ: ಗಿರೀಶ್ ಲಿಂಗಣ್ಣ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು? 

    ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು? 

    ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಇತ್ತೀಚೆಗಷ್ಟೇ ಚಂದ್ರಯಾನ-3 (Chandrayaan-3) ಯಶಸ್ವಿ ಕಂಡು, ಇದೀಗ ಸೂರ್ಯಯಾನ ಯಶಸ್ಸಿನ ನಿರೀಕ್ಷೆಯಲ್ಲಿದೆ. ನಾವು ಗಗನಯಾತ್ರೆ ಎಂದಾಕ್ಷಣ ಸಾಮಾನ್ಯರ ಮನಸ್ಸಿನಲ್ಲಿ ಏನೋ ಒಂದು ಕೌತುಕ, ಮನಸ್ಸಿನಲ್ಲಿ ತಮ್ಮದೇ ಕಲ್ಪನೆ. ಗುರುತ್ವಾಕರ್ಷಣೆ ಇಲ್ಲದ ಬಾಹ್ಯಾಕಾಶದಲ್ಲಿ (Space) ಹಕ್ಕಿಯಂತೆ ಹಾರಾಡುವ ಅದ್ಭುತವೇ ಸರಿ. ಆದ್ರೆ ಬಾಹ್ಯಾಕಾಶದಲ್ಲಿ ಹಕ್ಕಿಗಳಂತೆ ಹಾರಾಡಿ ಮತ್ತು ಮನುಷ್ಯ ಸಹಜ ಜೀವನಕ್ಕೆ ತೆರೆದುಕೊಳ್ಳುವುದು ಅಷ್ಟು ಸುಲಭವಲ್ಲ. ಅದಕ್ಕೆಂದೇ ಸೂಕ್ತ ಮಾರ್ಪಾಡುಗಳನ್ನ ಮಾಡಿಕೊಳ್ಳಬೇಕಾಗುತ್ತೆ. 

    ಹೌದು. ಬಾಹ್ಯಾಕಾಶ ಪ್ರಯಾಣ ಕೈಗೊಂಡ ಬಳಿಕ, ಗಗನಯಾತ್ರಿಗಳು ಬಾಹ್ಯಾಕಾಶದ ಕನಿಷ್ಠ ಗುರುತ್ವಾಕರ್ಷಣೆಯ (Gravity) ಕಾರಣದಿಂದ ಒಂದಷ್ಟು ಆರೋಗ್ಯ ಸಂಬಂಧಿ ವಿಚಾರಗಳು (Health Issues) ಹಾಗೂ ಶಾರೀರಿಕ ಬದಲಾವಣೆಗಳನ್ನ ಎದುರಿಸುವ ಸಾಧ್ಯತೆಗಳಿವೆ. ಅದರಲ್ಲಿನ ಕೆಲವು ಪರಿಸ್ಥಿತಿಗಳನ್ನ ನಾವಿಲ್ಲಿ ಕಾಣಬಹುದು. 

    ಮೂಳೆಗಳು ಬಲಹೀನವಾಗುತ್ತವೆ:

    ಬಾಹ್ಯಾಕಾಶ ಪ್ರಯಾಣದ ಸಂದರ್ಭದಲ್ಲಿ ದೀರ್ಘಕಾಲದ ತನಕ ಕನಿಷ್ಠ ಗುರುತ್ವಾಕರ್ಷಣೆಗೆ ಒಳಗಾಗುವುದು ಸ್ನಾಯು ಕ್ಷೀಣತೆಯ ಸಮಸ್ಯೆ ಉಂಟುಮಾಡಬಲ್ಲದು. ಅಂದರೆ, ಕಡಿಮೆ ದೈಹಿಕ ಚಟುವಟಿಕೆಗಳ ಕಾರಣದಿಂದ ಸ್ನಾಯುಗಳ ಅಂಗಾಂಶಗಳು ಕ್ರಮೇಣ ಕಡಿಮೆಯಾಗಿ, ಶಕ್ತಿ ಕಳೆದುಕೊಳ್ಳುತ್ತವೆ. 

    ಗಗನಯಾತ್ರಿಗಳು (Astronauts) ಸಾಮಾನ್ಯವಾಗಿ ಈ ಸಮಸ್ಯೆಯನ್ನ ಎದುರಿಸಿ, ಭೂಮಿಗೆ ಮರಳಿದ ಬಳಿಕ, ಸ್ನಾಯು ಭಾರ ಮತ್ತು ಶಕ್ತಿಯನ್ನ ಮರಳಿ ಪಡೆಯಲು ದೈಹಿಕ ಪುನರ್ವಸತಿ ಚಿಕಿತ್ಸೆ ಪಡೆಯಬೇಕಾಗುತ್ತದೆ. ಸ್ನಾಯು ಕ್ಷೀಣತೆಯ ಕಾರಣದಿಂದ, ದುರ್ಬಲತೆ ಮತ್ತು ಚಲನಹೀನತೆ ಉಂಟಾಗಬಹುದು. ಇದನ್ನ ಎದುರಿಸಲು, ಗಗನಯಾತ್ರಿಗಳು ದೈಹಿಕ ಚಿಕಿತ್ಸೆ, ಶಕ್ತಿ ತರಬೇತಿ ಹಾಗೂ ನಿರಂತರ ವ್ಯಾಯಾಮ ನಡೆಸುತ್ತಾರೆ. ಅದರೊಂದಿಗೆ ಮೂಳೆಯ ಸಾಂದ್ರತೆ ಕಳೆದುಕೊಳ್ಳುವುದು ಬಾಹ್ಯಾಕಾಶದಲ್ಲಿ ಇನ್ನೊಂದು ಕಳವಳಕಾರಿ ವಿಚಾರ. ಇದರಿಂದಾಗಿ ಮೂಳೆಗಳು ಬಲಹೀನವಾಗುತ್ತವೆ. ಗಗನಯಾತ್ರಿಗಳು ಇದನ್ನ ಎದುರಿಸಲು ನಿಯಮಿತ ವ್ಯಾಯಾಮ, ಉತ್ತಮ ಪೋಷಕಾಂಶಗಳ ಸೇವನೆಯಂತಹ ಕ್ರಮಗಳನ್ನ ಕೈಗೊಳ್ಳುತ್ತಾರೆ.

    ಹೃದಯ ಬಡಿತ ಹೆಚ್ಚಾಗುತ್ತೆ, ತಲೆ ಸುತ್ತು ಜಾಸ್ತಿಯಾಗುತ್ತೆ:

    ಬಾಹ್ಯಾಕಾಶ ಪ್ರಯಾಣ ಗಗನಯಾತ್ರಿಗಳಲ್ಲಿ ಆರ್ಥೋಸ್ಟಾಟಿಕ್ ಇಂಟಾಲರೆನ್ಸ್ (ಮಾನಸಿಕ ಅಸಹಿಷ್ಣುತೆ) ಸೇರಿದಂತೆ, ಹೃದಯದ ರಕ್ತನಾಳದ ಬದಲಾವಣೆಗಳನ್ನ ತರಬಲ್ಲದು. ಇದರ ಪರಿಣಾಮವಾಗಿ ಅವರಲ್ಲಿ ಕುಳಿತಲ್ಲಿಂದ ಅಥವಾ ಮಲಗಿದಲ್ಲಿಂದ ಎದ್ದು ನಿಲ್ಲುವಾಗ ತಲೆಸುತ್ತು, ಮೂರ್ಛೆ ಹೋಗುವುದು ಅಥವಾ ಹೃದಯ ಬಡಿತ ಪ್ರಮಾಣ ಹೆಚ್ಚಳ ಕಂಡುಬರಬಹುದು. ಈ ಪರಿಸ್ಥಿತಿ ರಕ್ತದೊತ್ತಡದ ನಿಯಂತ್ರಣದಲ್ಲಿನ ಬದಲಾವಣೆ ಹಾಗೂ ಸ್ವಯಂಚಾಲಿತ ನರಮಂಡಲದ ಕಾರ್ಯಾಚರಣೆಯ ಕಾರಣದಿಂದ ಉಂಟಾಗಬಹುದು. ಇದರ ಚಿಕಿತ್ಸೆ ಸಾಮಾನ್ಯವಾಗಿ ಜೀವನಶೈಲಿಯಲ್ಲಿನ ಬದಲಾವಣೆ, ಹೆಚ್ಚಿನ ದ್ರವ ಆಹಾರ ಮತ್ತು ಉಪ್ಪಿನ ಸೇವನೆ, ಸಂಕೋಚನ ವಸ್ತ್ರಗಳನ್ನು ಧರಿಸುವುದು (ದೇಹಕ್ಕೆ ಆರಾಮದಾಯಕ ಹಾಗೂ ಸುರಕ್ಷಿತ ಅನ್ನಿಸುವ ಉಡುಪುಗಳು) ಮತ್ತು ಕೆಲವು ಸಂದರ್ಭಗಳಲ್ಲಿ ಸುಗಮವಾಗಿ ಎದ್ದು ನಿಲ್ಲುವಂತಾಗಲು ಔಷಧೀಯ ಕ್ರಮಗಳನ್ನೂ ಒಳಗೊಂಡಿರುತ್ತದೆ.

    ದೃಷ್ಟಿಯ ಬದಲಾವಣೆಗಳು: 

    ಕೆಲವು ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಕಣ್ಣಿನ ಸಮಸ್ಯೆಗಳನ್ನೂ ಎದುರಿಸುತ್ತಾರೆ. ಉದಾಹರಣೆಗೆ ಕಣ್ಣುಗಳಲ್ಲಿ ದ್ರವದ ಬದಲಾವಣೆಗಳು ದೃಷ್ಟಿಯನ್ನು ದುರ್ಬಲಗೊಳಿಸಬಹುದು. ಈ ಸ್ಥಿತಿಯನ್ನು ಸ್ಪೇಸ್ ಫ್ಲೈಟ್-ಅಸೋಸಿಯೇಟೆಡ್ ನ್ಯೂರೋ-ಆಕ್ಯುಲರ್ ಸಿಂಡ್ರೋಮ್ (ಎಸ್ಎಎನ್ಎಸ್) ಎಂದು ಕರೆಯಲಾಗುತ್ತದೆ. 

    ಕ್ಯಾನ್ಸರ್‌ಗೆ ತುತ್ತಾಗುವ ಅಪಾಯವಿದೆ: 

    ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಅಧಿಕ ಮಟ್ಟದ ಕಾಸ್ಮಿಕ್ ವಿಕಿರಣಕ್ಕೆ ಒಡ್ಡಿಕೊಳ್ಳುತ್ತಾರೆ. ಇದರ ಪರಿಣಾಮವಾಗಿ, ಕಾಲಾನಂತರದಲ್ಲಿ ಕ್ಯಾನ್ಸರ್ ಮತ್ತು ಇತರ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಅಪಾಯವು ಹೆಚ್ಚಾಗಿರುತ್ತದೆ. 

    ಮಾನಸಿಕ ಪರಿಣಾಮಗಳೇನು? 

    ಬಾಹ್ಯಾಕಾಶ ಯಾತ್ರೆಯು ಏಕಾಂತತೆ, ಬಂಧನದ ಭಾವ ಮೂಡಿಸುತ್ತದೆ ಮತ್ತು ಇದರಿಂದ ಉಂಟಾಗುವ ಒತ್ತಡವು ಮನಸ್ಥಿತಿಯಲ್ಲಿ ಬದಲಾವಣೆ ಉಂಟುಮಾಡಿ, ಆತಂಕ ಮತ್ತು ಖಿನ್ನತೆಯಂತಹ ಕೆಲವು ಮಾನಸಿಕ ಸಮಸ್ಯೆಗಳನ್ನ ತಂದೊಡ್ಡಬಹುದು.

    ರೋಗನಿರೋಧಕ ಶಕ್ತಿ ಕುಗ್ಗಿಸುತ್ತೆ: 

    ಬಾಹ್ಯಾಕಾಶ ಯಾನವು ರೋಗನಿರೋಧಕ ವ್ಯವಸ್ಥೆಯನ್ನು ಬಹುತೇಕ ದುರ್ಬಲಗೊಳಿಸಿ, ಗಗನಯಾತ್ರಿಗಳನ್ನು ಸೋಂಕುಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿಸುತ್ತದೆ.

    ವೆಸ್ಟಿಬ್ಯುಲರ್ ಸಮಸ್ಯೆಗಳು:

    ಒಳಗಿವಿಯ ಸಮತೋಲನ ವ್ಯವಸ್ಥೆಯಲ್ಲಿ ಉಂಟಾಗುವ ಬದಲಾವಣೆಗಳು ಬಾಹ್ಯಾಕಾಶ ಯಾನದ ಸಮಯದಲ್ಲಿ ಮತ್ತು ಆಮೇಲೂ ದಿಕ್ಕು ತಪ್ಪಿಸುವಿಕೆ ಮತ್ತು ಚಲನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

    ಈ ಎಲ್ಲ ಆರೋಗ್ಯ ಸಮಸ್ಯೆಗಳನ್ನ ನಿಯಂತ್ರಿಸಲು, ಗಗನಯಾತ್ರಿಗಳು ತಮ್ಮ ಕಾರ್ಯಾಚರಣೆಗೆ ಪೂರ್ವದಲ್ಲಿ ಹಾಗೂ ಪೂರ್ಣಗೊಂಡ ಮೇಲೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನಗಳಿಗೆ ಒಳಗಾಗುತ್ತಾರೆ. ಜೊತೆಗೆ ಸೂಕ್ಷ್ಮ ಗುರುತ್ವಾಕರ್ಷಣೆಯ ನಕಾರಾತ್ಮಕ ಪರಿಣಾಮಗಳನ್ನ ಕಡಿಮೆ ಮಾಡಲು ತಮ್ಮ ಕಾರ್ಯಗಳ ಸಮಯದಲ್ಲೂ ಅವರು ವ್ಯಾಯಾಮ ಮತ್ತು ಪುನರ್ವಸತಿ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುತ್ತಾರೆ. ಅಲ್ಲದೇ, ಬಾಹ್ಯಾಕಾಶ ಯಾನಕ್ಕೆ ಸಂಬಂಧಿಸಿದ ಈ ಆರೋಗ್ಯ ಸವಾಲುಗಳನ್ನ ಇನ್ನಷ್ಟು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಮತ್ತು ಪರಿಹರಿಸಲು ಅನೇಕ ಸಂಶೋಧನೆಗಳು ಪ್ರಗತಿಯಲ್ಲಿವೆ.

    ಮಾಹಿತಿ: ಗಿರೀಶ್ ಲಿಂಗಣ್ಣ (ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ)
    – ಮೋಹನ ಬನ್ನಿಕುಪ್ಪೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳಿಗೆ ಸಿಗಲಿದೆ ಮೈಸೂರಿನ ಇಡ್ಲಿ, ಎಗ್ ರೋಲ್

    ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳಿಗೆ ಸಿಗಲಿದೆ ಮೈಸೂರಿನ ಇಡ್ಲಿ, ಎಗ್ ರೋಲ್

    ಬೆಂಗಳೂರು: ಡಿಸೆಂಬರ್ 2021ರಲ್ಲಿ ‘ಮಿಷನ್ ಗಗನಯಾನ’ಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಯಾರಿ ನಡೆಸುತ್ತಿದೆ. ಈ ಗಗನಯಾನದಲ್ಲಿ ಪಾಲ್ಗೊಳ್ಳುವ ಗಗನಯಾತ್ರಿಗಳಿಗಾಗಿ ಮೈಸೂರಿನ ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ ವಿಶೇಷ ಆಹಾರ ಹಾಗೂ ಲಿಕ್ವಿಡ್ ಪ್ಯಾಕೆಟ್‍ಗಳನ್ನು ತಯಾರಿಸಿದೆ.

    ಹೌದು. ಈ ವಿಶೇಷ ಆಹಾರಗಳಲ್ಲಿ ಇಡ್ಲಿ, ಎಗ್ ರೋಲ್, ವೆಜ್ ರೋಲ್, ಹೆಸರು ಬೇಳೆ ಹಲ್ವಾ ಹಾಗೂ ವೆಜ್ ಪಲಾವ್ ಸೇರಿದಂತೆ ಇತರೆ ಆಹಾರಗಳನ್ನು ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳು ಸೇವಿಸಲು ತಯಾರಿಸಲಾಗಿದೆ. ಸಚಿವಾಲಯವು ಗಗನಯಾತ್ರಿಗಳಿಗಾಗಿ ನೀರು ಹಾಗೂ ಜ್ಯೂಸ್‍ಗಳನ್ನು ಪ್ಯಾಕ್ ಮಾಡಲು ವಿಶೇಷ ಕಂಟೇನರ್ ಗಳ ವ್ಯವಸ್ಥೆಯನ್ನೂ ಮಾಡಿದೆ.

    ಇಸ್ರೋ ಮಾಹಿತಿ ಪ್ರಕಾರ, 2021ರ ಡಿಸೆಂಬರ್ ನಲ್ಲಿ ಭಾರತವು ಬಾಹ್ಯಾಕಾಶಕ್ಕೆ ಮಾನವನನ್ನು ಕಳುಹಿಸುವ ಗುರಿಯನ್ನು ಹಾಕಿಕೊಂಡಿದೆ. ನೌಕೆಯಲ್ಲಿ ಮೂರು ಮಂದಿ ಗಗನಯಾತ್ರಿಕರು ಬಾಹ್ಯಾಕಾಶದಲ್ಲಿ ಕನಿಷ್ಠ 7 ದಿನಗಳ ಕಾಲವಾದರೂ ಇರಿಸಲು ಯೋಜನೆ ರೂಪಿಸಲಾಗುತ್ತಿದೆ.

    ಈ ‘ಮಿಷನ್ ಗಗನಯಾನ’ ಯೋಜನೆಯನ್ನು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು 2018ರ ಸ್ವಾತಂತ್ರ್ಯ ದಿನಾಚರಣೆ ದಿನದಂದು ಘೋಷಿಸಿದ್ದರು. ಈ ಬಾಹ್ಯಾಕಾಶ ನೌಕೆಯ ಕ್ರಿವ್ ಮಾಡ್ಯೂಲ್ ವ್ಯವಸ್ಥೆಯನ್ನು ಹೊಂದಿರಲಿದೆ. ಗಗನಯಾನ ಯೋಜನೆಗೆ ಬರೋಬ್ಬರಿ 10 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಅಲ್ಲದೆ ಗಗನಯಾನದಲ್ಲಿ ಭಾಗಿಯಾಗಲಿರುವ 4 ಮಂದಿ ಗಗನಯಾತ್ರಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು, ಅವರನ್ನು ಜನವರಿಯಲ್ಲಿಯೇ ರಷ್ಯಾಕ್ಕೆ ತರಬೇತಿಗಾಗಿ ಕಳುಹಿಸಲಾಗುತ್ತಿದೆ ಎಂದು ಇಸ್ರೋ ಅಧ್ಯಕ್ಷ ಡಾ. ಕೆ ಶಿವನ್ ಅವರು ತಿಳಿಸಿದ್ದಾರೆ.