Tag: Astronomy

  • ನಾಳೆ ಜ್ಯೇಷ್ಠ ಮಾಸದ ಹುಣ್ಣಿಮೆ – ಆಗಸದಲ್ಲಿ ಸೂಪರ್ ಮೂನ್ ದರ್ಶನ

    ನಾಳೆ ಜ್ಯೇಷ್ಠ ಮಾಸದ ಹುಣ್ಣಿಮೆ – ಆಗಸದಲ್ಲಿ ಸೂಪರ್ ಮೂನ್ ದರ್ಶನ

    ಉಡುಪಿ: ಜೂನ್ 14 ಜ್ಯೇಷ್ಠ ಮಾಸದ ಹುಣ್ಣಿಮೆ. ಆಗಸದಲ್ಲಿ ಸೂಪರ್ ಮೂನ್ ಗೋಚರವಾಗಲಿದೆ. 28 ದಿನಗಳಿಗೊಮ್ಮೆ ಚಂದ್ರ ಭೂಮಿಯ ಸುತ್ತ ಸುತ್ತುವ ತಿರುಗಾಟದಲ್ಲಿರುವ ಚಂದ್ರ ತನ್ನ ಪರಿಧಿಯಲ್ಲಿ ಭೂಮಿಯ ಸಮೀಪಕ್ಕೆ ಬರಲಿದ್ದಾನೆ.

    ಚಂದ್ರ ಸರಾಸರಿ ದೂರಕ್ಕಿಂತ ಸುಮಾರು 30 ಸಾವಿರ ಕಿಮೀ ಹತ್ತಿರ ಬರಲಿದ್ದಾನೆ. ಚಂದ್ರ ತನ್ನ ದೀರ್ಘ ವೃತ್ತಾಕಾರದ ಪಥದಲ್ಲಿ 28 ದಿನಗಳಿಗೊಮ್ಮೆ ಭೂಮಿಗೆ ಸಮೀಪ ಬರಲಿದ್ದಾನೆ. ಅಲ್ಲದೆ ದೂರದ ಅಪೊಜಿಯಲ್ಲಿ ಹತ್ತಿರ ಬರುವುದು ವಾಡಿಕೆ. ಈ ಪರಿಧಿಗೆ ಬಂದಾಗ ಹುಣ್ಣಿಮೆಯಾದರೆ ಸೂಪರ್ ಚಂದ್ರನ ಗೋಚರವಾಗುತ್ತದೆ. ಇದನ್ನೂ ಓದಿ: ರೆಸ್ಟೋರೆಂಟ್‍ನಲ್ಲಿದ್ದ ಯುವತಿಯರನ್ನು ಧರಧರನೇ ಎಳೆದು ಹಲ್ಲೆ ನಡೆಸಿದ ಗ್ಯಾಂಗ್

    ಚಂದ್ರ ನಮಗೆ ಸುಮಾರು 15 ಅಂಶ ಗಾತ್ರದಲ್ಲಿ ದೊಡ್ಡದಾಗಿ 25 ಅಂಶ ಹೆಚ್ಚಿನ ಬೆಳಕಿಂದ ಖುಷಿ ಕೊಡುತ್ತದೆ. ಚಂದ್ರ ಭೂಮಿಯ ಸರಾಸರಿ ದೂರ 3 ಲಕ್ಷದ 84 ಸಾವಿರ ಕಿಮೀ ಇದ್ದು, ನಾಳೆ 3 ಲಕ್ಷದ 57 ಸಾವಿರ ಕಿಲೋ ಮೀಟರ್ ದೂರದಲ್ಲಿ ಹಾದು ಹೋಗುತ್ತಾನೆ.

    ಭಾರತೀಯರ ಮಾಸಗಳ ಕಲ್ಪನೆ ಬಲು ಚಂದ. ಹುಣ್ಣಿಮೆಯ ಚಂದ್ರ ಆ ದಿನ ಯಾವ ನಕ್ಷತ್ರದ ಜೊತೆಗಿರುವನೋ ಆ ನಕ್ಷತ್ರದ ಹೆಸರನ್ನು ಆ ತಿಂಗಳಿಗೆ ನಮ್ಮ ಹಿರಿಯರು ಇಟ್ಟಿದ್ದಾರೆ. ಪೂರ್ವಜರ ಆಕಾಶ ವೀಕ್ಷಣಾ ಪ್ರೌಢ ಜ್ಞಾನವನ್ನು ಮನಗಾಣಬಹುದು. ಜೂನ್ 14 ವೃಶ್ಚಿಕ ರಾಶಿಯ ಸುಂದರ ನಕ್ಷತ್ರ ಜ್ಯೇಷ್ಠ / ಅಂಟಾರಸ್ ನ ಪಕ್ಕದಲ್ಲಿ ಚಂದ್ರ ಉದಯಿಸುತ್ತದೆ. ಹಾಗಾಗಿ ಈ ತಿಂಗಳಿನ ಹೆಸರು ಜ್ಯೇಷ್ಠ ಮಾಸ. ಈ ಅಂಟಾರಸ್‌ನನ್ನು ಜ್ಯೇಷ್ಠ ಎಂದು ನಾಮಕರಣ ಮಾಡಿದ್ದಾರೆ. ಜ್ಯೇಷ್ಠ ಅಂದರೆ ದೊಡ್ಡದು ಎಂದರ್ಥ.

    ಇಂದಿನ ಖಗೋಳ ವಿಜ್ಞಾನವೂ ಈಗ ಬರಿಗಣ್ಣಿಗೆ ಕಾಣುವ ನಕ್ಷತ್ರಗಳಲ್ಲಿ ಈ ಅಂಟಾರಸ್ ತುಂಬಾ ದೊಡ್ಡ ದೆಂದು ಸಾರಿದ್ದಾರೆ. ಈ ನಕ್ಷತ್ರ ನಮ್ಮ ಸೂರ್ಯನ ವ್ಯಾಸಕ್ಕಿಂತ ಸುಮಾರು 700 ಪಟ್ಟು ದೊಡ್ಡದಿದೆ. ಹಾಗಾಗಿ ಸೂರ್ಯನಿಗಿಂತ ಕೋಟಿ ಕೋಟಿ ಪಟ್ಟು ದೊಡ್ಡದಿದೆ. ಇದನ್ನೂ ಓದಿ: ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ – ಶೀಘ್ರವೇ ಕಾಂಗ್ರೆಸ್‌ ಸೇರಲಿದ್ದಾರೆ ಮಾಜಿ ಎಂಎಲ್‌ಸಿ

    ಭೂಮಿಗೆ ಚಂದ್ರ ಹತ್ತಿರ ಬಂದಾಗಲೆಲ್ಲಾ ಸಮುದ್ರದ ಭರತ ಇಳಿತಗಳ ಅಬ್ಬರ ಜೋರಾಗಿರುತ್ತದೆ. ಇದೀಗ ಮುಂಗಾರು ಅಬ್ಬರಿಸುವ ಸೂಚನೆ ಇರುವುದರಿಂದ ಹುಣ್ಣಿಮೆ ಹಾಗೂ ಸೂಪರ್ ಮೂನ್‌ಗಳಿಂದ ಸಮುದ್ರದ ತೆರೆಗಳ ಅಬ್ಬರ ಹೆಚ್ಚಿರಲಿದೆ.

    ಮಾಹಿತಿ: ಎ.ಪಿ.ಭಟ್, ಉಡುಪಿ, ಭೌತಶಾಸತ್ರಜ್ಞ 

  • ಭಾರತೀಯ ಖಗೋಳಶಾಸ್ತ್ರಜ್ಞರಿಂದ ನೂತನ ಪ್ರಯತ್ನ – ಎಐ ತಂತ್ರಜ್ಞಾನ ಬಳಸಿ ವಾಸಯೋಗ್ಯ ಗ್ರಹಗಳ ಪತ್ತೆ

    ಭಾರತೀಯ ಖಗೋಳಶಾಸ್ತ್ರಜ್ಞರಿಂದ ನೂತನ ಪ್ರಯತ್ನ – ಎಐ ತಂತ್ರಜ್ಞಾನ ಬಳಸಿ ವಾಸಯೋಗ್ಯ ಗ್ರಹಗಳ ಪತ್ತೆ

    ನವದೆಹಲಿ: ಭಾರತೀಯ ಖಗೋಳಶಾಸ್ತ್ರಜ್ಞರ ತಂಡ ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ತಂತ್ರಜ್ಞಾನ ಬಳಸಿಕೊಂಡು ಭೂಮಿಯಂತಹ ಗುಣಲಕ್ಷಣಗಳುಳ್ಳ ಕೆಲವು ಗ್ರಹಗಳನ್ನು ಪತ್ತೆಹಚ್ಚಿದ್ದಾರೆ.

    ಮಲ್ಟಿ-ಸ್ಟೇಜ್ ಮೆಮೆಟಿಕ್ ಬೈನರಿ ಟ್ರೀ ಅನಾಮಲಿ ಐಡೆಂಟಿಫೈಯರ್ ಎಂದು ಕರೆಯಲಾಗುವ ಎಐ ತಂತ್ರಜ್ಞಾನ ಆಧಾರಿತ ವಿಧಾನದಿಂದ ಕೆಲವು ಭೂಮಿಯಂತಹ ಅಂಶಗಳುಳ್ಳ ಗ್ರಹಗಳನ್ನು ಗುರುತಿಸಲಾಗಿದೆ. ಈ ವಿಧಾನ ಒಬ್ಬ ವ್ಯಕ್ತಿಯಿಂದ ಇನ್ನೊಬ್ಬರಿಗೆ ಅನುಕರಣೆ ಮಾಡುವ ರೀತಿಯಲ್ಲಿ ಕೆಲಸ ಮಾಡುತ್ತದೆ.

    ಭಾರತೀಯ ಇನ್‍ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‍ನ ಖಗೋಳಶಾಸ್ತ್ರಜ್ಞರು ಮತ್ತು ಬಿಟ್ಸ್ ಪಿಲಾನಿ ಹಾಗೂ ಗೋವಾ ಕ್ಯಾಂಪಸ್‍ನ ಖಗೋಳಶಾಸ್ತ್ರಜ್ಞರು ಭೂಮಿಯ ಅಸಂಗತತೆ(ಎನೋಮಲಿ) ಎಂಬ ಸಿದ್ಧಾಂತದ ಆಧಾರದ ಮೇಲೆ ವಾಸಿಸಲು ಯೋಗ್ಯವಿರುವ ಗ್ರಹಗಳನ್ನು ಗುರುತಿಸಿದ್ದಾರೆ. ಇದನ್ನೂ ಓದಿ: ಡಿಜಿಟಲ್ ರೂ.ಗೂ ಸಾಮಾನ್ಯ ರೂ.ಗೂ ವ್ಯತ್ಯಾಸವಿಲ್ಲ: ಶಕ್ತಿಕಾಂತ ದಾಸ್

    ಸಾವಿರಾರು ಗ್ರಹಗಳಲ್ಲಿ ಭೂಮಿ ಮಾತ್ರ ವಾಸಯೋಗ್ಯ ಗ್ರಹವಾಗಿರುವುದರಿಂದ ಅದನ್ನು ಅಸಂಗತತೆ ಎಂದು ವ್ಯಾಖ್ಯಾನಿಸಲಾಗಿದೆ. ಹೊಸ ಅಸಂಗತತೆ ಪತ್ತೆ ವಿಧಾನಗಳನ್ನು ಬಳಸಿಕೊಂಡು ಇದೇ ರೀತಿಯ ಇತರ ಗ್ರಹಗಳನ್ನು ಕಂಡುಹಿಡಿಯಬಹುದೇ ಎಂದು ನಾವು ಅನ್ವೇಷಿಸಿದ್ದೇವೆ ಎಂದು ಖಗೋಳಶಾಸ್ತ್ರಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ಭೂಕಾಂತೀಯ ಬಿರುಗಾಳಿಗೆ ಸ್ಟಾರ್‌ಲಿಂಕ್ನ 40 ಉಪಗ್ರಹಗಳು ನಾಶ

    ಇಲ್ಲಿಯವರೆಗೆ ಪರಿಶೀಲಿಸಲಾದ ಸುಮಾರು 5000 ಗ್ರಹಗಳಲ್ಲಿ 60 ಸಂಭಾವ್ಯ ವಾಸಯೋಗ್ಯ ಗ್ರಹಗಳಿವೆ ಎಂದು ಅಧ್ಯಯನದಿಂದ ತಿಳಿದು ಬಂದಿದೆ.

  • ಮಿಲ್ಕಿ ವೇಯಲ್ಲಿ 18 ನಿಮಿಷಗಳಿಗೊಮ್ಮೆ ಸ್ಫೋಟವಾಗುವ ವಸ್ತು ಪತ್ತೆ

    ಕ್ಯಾನ್‌ಬೆರಾ: ಆಕಾಶದಲ್ಲಿ ಇಲ್ಲಿಯವರೆಗೆ ಎಂದಿಗೂ ಕಾಣಿಸಿಕೊಳ್ಳದ ವಿಚಿತ್ರ ವಸ್ತುವೊಂದನ್ನು ಮಿಲ್ಕಿ ವೇ(ಕ್ಷೀರಪಥ) ಗ್ಯಾಲಕ್ಸಿಯಲ್ಲಿ  ಪತ್ತೆ ಹಚ್ಚಲಾಗಿದೆ. 18.18 ನಿಮಿಷಗಳಿಗೊಮ್ಮೆ ಸ್ಫೋಟಿಸುವ ಈ ಹೊಸ ವಸ್ತು ವಿಜ್ಞಾನ ಲೋಕಕ್ಕೆ ಹೊಸ ಸವಾಲಾಗಿದೆ.

    ಪಶ್ಚಿಮ ಆಸ್ಟ್ರೇಲಿಯಾದ ಹೊರವಲಯದಲ್ಲಿರುವ ಮರ್ಚಿಸನ್ ವೈಡ್‌ಫೀಲ್ಡ್ ಅರೇ ಪ್ರಾಜೆಕ್ಟ್ ಅಡಿ ತಯಾರಾದ ದೂರದರ್ಶಕವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಮೊದಲ ಬಾರಿಗೆ ಈ ವಿಚಿತ್ರ ವಸ್ತುವನ್ನು ಕಂಡುಹಿಡಿದಿದ್ದರು. ಈಗ ಪ್ರತಿ ಗಂಟೆಗೆ 3 ಬಾರಿ ದೊಡ್ಡ ಮಟ್ಟದ ಸ್ಫೋಟವನ್ನು ಬಿಡುಗಡೆ ಮಾಡುವ ವಸ್ತುವಿನ ಬಗ್ಗೆ ಖಗೋಳಶಾಸ್ತ್ರಜ್ಞರು ಕುತೂಹಲ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಂದ್ರನಿಗೆ ಅಪ್ಪಳಿಸಲಿದೆ SpaceX ರಾಕೆಟ್

    ಈ ವಿಚಿತ್ರ ವಸ್ತು ಭೂಮಿಯಿಂದ 4 ಸಾವಿರ ಬೆಳಕಿನ ವರ್ಷಗಳಷ್ಟು ದೂರದಲ್ಲಿದೆ ಎಂದು ಊಹಿಸಲಾಗಿದೆ. ಅತ್ಯಂತ ಪ್ರಕಾಶಮಾನವಾಗಿರುವ ವಸ್ತು ಅತ್ಯಂತ ಬಲವಾದ ಕಾಂತೀಯ ಕ್ಷೇತ್ರವನ್ನು ಹೊಂದಿದೆ. ಇದರ ಬಗ್ಗೆ ಇನ್ನೂ ಹಲವು ರಹಸ್ಯವನ್ನು ಬಯಲು ಮಾಡುವುದು ಬಾಕಿ ಇದೆ ಎಂದು ಖಗೋಳಶಾಸ್ತ್ರಜ್ಞ ನತಾಶಾ ಹರ್ಲಿ-ವಾಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಚ್ಚಾತೈಲ ಬೆಲೆ ಭಾರೀ ಏರಿಕೆ – ಮತ್ತೆ ಪೆಟ್ರೋಲ್ ಬೆಲೆ ದುಬಾರಿ?

    ಕ್ಷೀರ ಪಥದಲ್ಲಿ ಕಂಡುಹಿಡಿಯಲಾದ ಈ ವಿಚಿತ್ರ ವಸ್ತು ಸದ್ಯ ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಖಚಿತವಾಗಿಲ್ಲ. ಇದು ನಕ್ಷತ್ರದ ಅವಶೇಷವೂ ಅಗಿರುವ ಸಾಧ್ಯತೆಯಿದೆ. ಆದರೆ ಇದು ಇಲ್ಲಿಯವರೆಗೆ ಆಕಾಶದಲ್ಲಿ ಕಂಡುಹಿಡಿಯಲಾದ ಎಲ್ಲಾ ವಸ್ತುಗಳಿಗಿಂತಲೂ ಭಿನ್ನವಾಗಿದೆ ಎಂದು ತಿಳಿಸಿದ್ದಾರೆ.

  • ಜುಲೈ 2ಕ್ಕೆ ಸೂರ್ಯಗ್ರಹಣ – ಎಲ್ಲೆಲ್ಲಿ ಆಗುತ್ತೆ? ಎಷ್ಟು ಪ್ರಮಾಣದಲ್ಲಿ ಆಗುತ್ತೆ?

    ಜುಲೈ 2ಕ್ಕೆ ಸೂರ್ಯಗ್ರಹಣ – ಎಲ್ಲೆಲ್ಲಿ ಆಗುತ್ತೆ? ಎಷ್ಟು ಪ್ರಮಾಣದಲ್ಲಿ ಆಗುತ್ತೆ?

    ಬೆಂಗಳೂರು: ಈ ವರ್ಷದ ಎರಡನೇ ಸೂರ್ಯಗ್ರಹಣಕ್ಕೆ ಕೌಂಟ್ ಡೌನ್ ಆರಂಭಗೊಂಡಿದೆ. ಸೂರ್ಯ ಗ್ರಹಣ ಎನ್ನುವುದು ಭೌಗೋಳಿಕವಾಗಿ ಒಂದು ವಿದ್ಯಮಾನ ಎನಿಸಿಕೊಂಡರೂ ಧಾರ್ಮಿಕವಾಗಿ ಅವುಗಳನ್ನು ಸೂತಕ ಅಥವಾ ಋಣಾತ್ಮಕ ಎನ್ನುವ ರೀತಿಯಲ್ಲಿ ಪರಿಗಣಿಸಲಾಗುತ್ತದೆ.

    ಇದೇ ಜುಲೈ 2ರಂದು ಸೂರ್ಯಗ್ರಹಣ ಸಂಭವಿಸಲಿದೆ. ತಿಂಗಳ ಪ್ರಾರಂಭದಲ್ಲೇ ಸಂಭವಿಸುವ ಈ ಸೂರ್ಯ ಗ್ರಹಣವು ಒಟ್ಟು 4 ನಿಮಿಷ 33 ಸೆಕೆಂಡ್‍ಗಳ ಕಾಲ ಸಂಭವಿಸಲಿದೆ. ಕೊನೆಯದಾಗಿ 2017ರ ಆಗಸ್ಟ್ ನಲ್ಲಿ 2 ನಿಮಿಷ 40 ಸೆಕೆಂಡ್‍ಗಳ ಕಾಲ ಖಗ್ರಾಸ ಸೂರ್ಯ ಗ್ರಹಣ ಆಗಿತ್ತು. ಈ ವರ್ಷದ ಏಕೈಕ ಪೂರ್ಣ ಸೂರ್ಯ ಗ್ರಹಣ ಇದಾಗಿದೆ.

    ದಕ್ಷಿಣ ಪೆಸಿಫಿಕ್ ಸಾಗರ, ಚಿಲಿ ಮತ್ತು ಅರ್ಜೆಂಟಿನಾದಲ್ಲಿ ಸಂಪೂರ್ಣವಾಗಿ ಸೂರ್ಯಗ್ರಹಣವು ಗೋಚರವಾಗಲಿದೆ. ದಕ್ಷಿಣ ಅಮೆರಿಕ ಸೇರಿದಂತೆ ಇತರ ಭಾಗಗಳಲ್ಲಿ ಭಾಗಶಃ ಗ್ರಹಣವು ಗೋಚರವಾಗುವ ಸಾಧ್ಯತೆಯಿದೆ.

    ಪೂರ್ಣ ಸೂರ್ಯಗ್ರಹಣ ಭಾರತೀಯ ಕಾಲಮಾನ ರಾತ್ರಿ 10.25ಕ್ಕೆ ಸಂಭವಿಸಲಿದೆ. ಗ್ರಹಣದ ಮೊದಲ ಒಹಿನೋ ದ್ವೀಪದಲ್ಲಿ ಸ್ಥಳೀಯ ಕಾಲಮಾನ 10.24ಕ್ಕೆ ಆರಂಭವಾಗುತ್ತದೆ. ನಂತರ ಆಗ್ನೇಯದ ಕಡೆಗೆ ಸಾಗಲಿದೆ.

    ಎರಡು ವರ್ಷದ ಹಿಂದೆ ಆಗಿದ್ದ ಅವಧಿಯ ಎರಡರಷ್ಟು ಪ್ರಮಾಣದಲ್ಲಿ ಈ ಬಾರಿಯ ಸೂರ್ಯಗ್ರಹಣ ಸಂಭವಿಸಲಿದೆ ಎಂದು ಖಗೋಳ ವಿಜ್ಞಾನಿಗಳು ತಿಳಿಸಿದ್ದಾರೆ. ಭಾರತದಲ್ಲಿ ಗ್ರಹಣ ಸಂಭವಿಸುವ ವೇಳೆ ರಾತ್ರಿ ಆಗಿರುವುದರಿಂದ ಇಲ್ಲಿ ಕಾಣಿಸುವುದಿಲ್ಲ.

    ಸೂರ್ಯ, ಚಂದ್ರ ಹಾಗೂ ಭೂಮಿ ಒಂದೇ ಸಮಾನಾಂತರ ರೇಖೆಗೆ ಬಂದು, ಸೂರ್ಯನ ಕಿರಣಗಳನ್ನು ಭೂಮಿಗೆ ತಲುಪದಂತೆ ಚಂದ್ರನು ತಡೆಯುವ ಪ್ರಕ್ರಿಯೆಯನ್ನು ಸೂರ್ಯ ಗ್ರಹಣ ಎಂದು ಕರೆಯಲಾಗುತ್ತದೆ.

    ಸೂರ್ಯಗ್ರಹಣದ ಸಮಯದಲ್ಲಿ ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬರುತ್ತಾನೆ. ಹಾಗಾಗಿ ಚಂದ್ರನಂತಹ ಸಣ್ಣ ಉಪಗ್ರಹವು ಭೂಮಿಯ ಮೇಲೆ ಪ್ರತಿಬಿಂಬಿಸುವ ಸೂರ್ಯನ ಬೆಳಕನ್ನು ನಿರ್ಬಂಧಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

    ಗ್ರಹಣದ ಸಂದರ್ಭದಲ್ಲಿ ಪರಿಸರವು ಸಾಕಷ್ಟು ಕಲುಷಿತವಾಗುವುದು. ಇದರ ಪ್ರಭಾವ ಎಲ್ಲಾ ಜೀವ ಸಂಕುಲಗಳ ಮೇಲೆ ಪರಿಣಾಮ ಬೀರುವುದು. ಅಂತಹ ಸಂದರ್ಭದಲ್ಲಿ ಮನೆಯಿಂದ ಆಚೆ ಹೋಗಬಾರದು. ದೇವರ ನಾಮ ಸ್ಮರಣೆ ಮಾಡುವುದರ ಮೂಲಕ ಪ್ರಕೃತಿಯಲ್ಲಾಗುವ ಅಸಮತೋಲನವನ್ನು ನಿಯಂತ್ರಿಸಬೇಕು ಎನ್ನುವ ನಂಬಿಕೆಯಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • 353 ವರ್ಷಗಳ ನಂತ್ರ ಖಗೋಳ ಕೌತುಕ: ಗುರುವಾರ ಅತ್ಯಂತ ಕೆಟ್ಟದಿನ ಯಾಕೆ?

    353 ವರ್ಷಗಳ ನಂತ್ರ ಖಗೋಳ ಕೌತುಕ: ಗುರುವಾರ ಅತ್ಯಂತ ಕೆಟ್ಟದಿನ ಯಾಕೆ?

    ಬೆಂಗಳೂರು: 1664ರ ಬಳಿಕ ಇದೇ ಮೊದಲ ಬಾರಿಗೆ ಖಗೋಳ ಕೌತುಕ ನಡೆಯಲಿದ್ದು, ಗುರುವಾರ ಯಾವುದೇ ಹೊಸ ನಿರ್ಣಯ ಕೈಗೊಳ್ಳಬಾರದು ಎಂದು ಜ್ಯೋತಿಷಿಗಳು ಸಲಹೆ ನೀಡಿದ್ದಾರೆ.

    ಹೌದು, ಬರೋಬ್ಬರಿ 353 ವರ್ಷಗಳ ನಂತರ ಶನಿ, ರವಿ ಸಮಾಗಮವಾಗಲಿದೆ. ಖಗೋಳಶಾಸ್ತ್ರದ ಪ್ರಕಾರ ಗುರುವಾರ ಅಪಾಯಕಾರಿಯಾಗಿದ್ದು, ನಾಳೆ ಯಾವುದೇ ಹೊಸ ನಿರ್ಣಯ ಕೈಗೊಳ್ಳಬಾರದು ಎಂದು ಹೇಳಿದ್ದಾರೆ.

    ಡಿಸೆಂಬರ್ 21 ಅತ್ಯಂತ ಕಡಿಮೆ ಹಗಲಿನ ದಿನವಾಗಿದ್ದು, ರವಿ, ಶನಿ ಜೊತೆಯಾಗಿ ಸಂಚಾರ ಮಾಡುವ ಕಾರಣ ಬಹಳ ಅಪಾಯಕಾರಿ ದಿನ ಎಂದು ಜ್ಯೋತಿಷಿಗಳು ಹೇಳುತ್ತಿದ್ದಾರೆ.

    ಜ್ಯೋತಿಷಿಗಳು ಹೇಳೋದು ಏನು?
    ಇದು ಅತಿ ವಿರಾಳವಾದ ದಿನವಾಗಿದ್ದು, ನಾಳೆ ಕಷ್ಟಕ್ಕೆ ಸಿಲುಕಿದರೆ ಇನ್ನು 1 ವರ್ಷ ಪರಿಣಾಮ ಅನುಭವಿಸಬೇಕಾಗುತ್ತದೆ. ಇನ್ನೊಂದು ವರ್ಷ ಶನಿ ಕಾಡುತ್ತಲೇ ಇರುತ್ತಾನೆ. ಮನೆಯಲ್ಲಿ ಅಗ್ನಿ ಆಕಸ್ಮಿಕ ಹೆಚ್ಚಾಗಿ ಸಂಭವಿಸುತ್ತದೆ. ಅಪಘಾತಗಳು ಜಾಸ್ತಿ ಆಗುತ್ತವೆ. ಮನೆಯಲ್ಲಿನ ಹಿರಿಯರು ದೈವಾಧೀನರಾಗುತ್ತಾರೆ. ಈ ಎಲ್ಲ ಕಾರಣಕ್ಕಾಗಿ ಯಾವುದೇ ಹೊಸ ನಿರ್ಧಾರವನ್ನು ಕೈಗೊಳ್ಳದೇ ಇರುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.

    https://www.youtube.com/watch?v=E1FfyUkMeUY