ಬೆಂಗಳೂರು/ಲಕ್ನೋ: ನಗರದಿಂದ (Bengaluru) ವಾರಣಾಸಿಗೆ (Varanasi) ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ (Air India Express) IX-1086 ವಿಮಾನದಲ್ಲಿ ಪ್ರಯಾಣಿಕನೊಬ್ಬ ಆಕಸ್ಮಿಕವಾಗಿ ಕಾಕ್ಪಿಟ್ಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಈ ಬಗ್ಗೆ ವಿಮಾನದ ಪೈಲಟ್ ಸಿದ್ಧಾರ್ಥ್ ಶರ್ಮಾ ಅವರು ಎಟಿಸಿಗೆ (ATC) ಸಂದೇಶ ನೀಡಿದ್ದು, ತನಿಖೆ ನಡೆಯುತ್ತಿದೆ.
An Air India Express spokesperson says, “We are aware of media reports regarding an incident on one of our flights to Varanasi, where a passenger approached the cockpit entry area while looking for the lavatory. We reaffirm that robust safety and security protocols are in place…
— ANI (@ANI) September 22, 2025
9 ಪ್ರಯಾಣಿಕರ ಗುಂಪಿನಲ್ಲಿ ಮಣಿ ಎಂಬ ಪ್ರಯಾಣಿಕ ಕಾಕ್ಪಿಟ್ ಬಾಗಿಲಿನ ಬಳಿ ಬಟನ್ ಒತ್ತಿ, ವಿಮಾನದಲ್ಲಿದ್ದ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದ. ಈ ಬಗ್ಗೆ ಆತನಿಗೆ ವಿಚಾರಿಸಿದಾಗ ತಾನು ಮೊದಲನೇ ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು, ಈ ಬಗ್ಗೆ ತನಗೆ ತಿಳಿದಿಲ್ಲ ಎಂದಿದ್ದಾನೆ. CISF ಸಿಬ್ಬಂದಿ ವಿಚಾರಣೆಗಾಗಿ ಎಲ್ಲಾ 9 ಪ್ರಯಾಣಿಕರನ್ನು ವಶಕ್ಕೆ ಪಡೆದು, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Air India Plane Crash | ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ಬೇಜವಾಬ್ದಾರಿ ಎಂದ ಸುಪ್ರೀಂ
ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಎಕ್ಸ್ಪ್ರೆಸ್ ವಕ್ತಾರರು, ಶೌಚಾಲಯವನ್ನು ಹುಡುಕುತ್ತಾ ಪ್ರಯಾಣಿಕ ಆಕಸ್ಮಿಕವಾಗಿ ಕಾಕ್ಪಿಟ್ ಬಳಿ ಬಂದು ಬಟನ್ ಒತ್ತಿರುವ ಬಗ್ಗೆ ವರದಿಯಾಗಿದೆ. ಈ ವರದಿ ನಮ್ಮ ಗಮನಕ್ಕೆ ಬಂದಿದೆ. ಸುರಕ್ಷತೆ ಮತ್ತು ಭದ್ರತಾ ಪ್ರೋಟೋಕಾಲ್ಗಳ ಅಡಿಯಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳಿಗೆ ನಾವು ಮಾಹಿತಿ ನೀಡಿದ್ದೇವೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: Air India Crash | ವಿಮಾನ ದುರಂತಕ್ಕೂ ಮುನ್ನವೇ ಏರ್ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು ಅಮೆರಿಕ










