Tag: Athani

  • ಕಾವೇರಿಯನ್ನು ಬಲಿ ಪಡೆದ ಕೊಳವೆ ಬಾವಿ – ಜಮೀನು ಮಾಲೀಕನ ಮಗ ಅರೆಸ್ಟ್

    ಕಾವೇರಿಯನ್ನು ಬಲಿ ಪಡೆದ ಕೊಳವೆ ಬಾವಿ – ಜಮೀನು ಮಾಲೀಕನ ಮಗ ಅರೆಸ್ಟ್

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ತೆರೆದ ಕೊಳುವೆ ಬಾವಿಯನ್ನು ಮುಚ್ಚಿಸದೆ 6 ವರ್ಷದ ಕಂದಮ್ಮ ಕಾವೇರಿ ಸಾವಿಗೆ ಕಾರಣವಾಗಿದ್ದ ಜಮೀನಿನ ಮಾಲೀಕನ ಮಗನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

    ಬಾಗಲಕೋಟೆಯಲ್ಲಿ ತಲೆ ಮರಿಸಿಕೊಂಡಿದ್ದ ಶಂಕರ ಹಿಪ್ಪರಗಿಯ ಮಗ ಮುತ್ತಪ್ಪ ಶಂಕರ ಹಿಪ್ಪರಗಿಯನ್ನು ಐಗಳಿ ಪೆÇಲೀಸರು ಬಂಧಿಸಿದ್ದಾರೆ. ಇನ್ನು ಈತನ ತಂದೆ ಶಂಕರ ಹಿಪ್ಪರಗಿ ಇನ್ನೂ ತಲೆಮರೆಸಿಕೊಂಡಿದ್ದು ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ತನ್ನ ಜಮೀನಿನ ಕೊಳವೆ ಬಾವಿಯಲ್ಲಿ ಕಾವೇರಿ ಬಿದ್ದ ಸುದ್ದಿ ತಿಳಿದ ತಕ್ಷಣವೇ ಶಂಕರ ಹಿಪ್ಪರಗಿ ಹಾಗೂ ಕುಟುಂಬ ಸದಸ್ಯರು ಪರಾರಿಯಾಗಿದ್ದರು.

    ಸತತ 53 ಗಂಟೆಗಳ ಕಾಲ ಕಾವೇರಿಯ ರಕ್ಷಣೆಗಾಗಿ ಎನ್‍ಆರ್‍ಡಿಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ರಕ್ಷಣಾ ಕಾರ್ಯಚರಣೆ ಫಲಿಸದ ಪರಿಣಾಮ ಕಾವೇರಿ ಶವವನ್ನು ಹೊರ ತೆಗೆಯಲಾಗಿತ್ತು. ಕಾವೇರಿಗಾಗಿ ರಾಜ್ಯದ ಜನತೆ ನಡೆಸಿದ ಪ್ರಾರ್ಥನೆ ಈಡೇರಿರಲಿಲ್ಲ.

  • ಮಣ್ಣಲ್ಲಿ ಮಣ್ಣಾದ ಕಾವೇರಿ – ಮಧ್ಯರಾತ್ರಿ ಅಂತ್ಯಸಂಸ್ಕಾರ

    ಮಣ್ಣಲ್ಲಿ ಮಣ್ಣಾದ ಕಾವೇರಿ – ಮಧ್ಯರಾತ್ರಿ ಅಂತ್ಯಸಂಸ್ಕಾರ

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಮೃತ್ಯುಕೂಪ ಕೊಳವೆಬಾವಿಗೆ ಬಿದ್ದಿದ್ದ 6 ವರ್ಷದ ಕಾವೇರಿ ಕೊನೆಗೂ ಬದುಕಲೇ ಇಲ್ಲ.

    ಅಥಣಿಯ ಕೊಕಟನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾವೇರಿಯ ಮರಣೋತ್ತರ ಪರೀಕ್ಷೆ ನಡೆಸಲಾಯ್ತು. ಈ ವೇಳೆ ಅಥಣಿ ತಹಸೀಲ್ದಾರ್ ಉಮಾದೇವಿ ಹಾಜರಿದ್ದರು. ಇನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಕ್ಕೆ ಶವ ಹಸ್ತಾಂತರಿಸಲಾಯ್ತು. ಈ ವೇಳೆ ಹೆತ್ತವ್ವ ಸವಿತಾ ಮತ್ತು ತಂದೆ ಅಜಿತ್ ಗೋಳಾಟ ಎಂಥವರ ಕರಳು ಕಿವುಚುವಂತಿತ್ತು. ಸಂಬಂಧಿಕರಂತೂ ಎದೆ ಎದೆ ಹೊಡೆದುಕೊಂಡ್ರು. ಗ್ರಾಮಸ್ಥರೆಲ್ಲರೂ ಗೋಳಾಡಿದರು. ಬಳಿಕ ಝುಂಜರವಾಡ ಗ್ರಾಮದಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಯ್ತು.

    ಏಪ್ರಿಲ್ 22ರಂದು ಅಮ್ಮನ ಜೊತೆ ಕಟ್ಟಿಗೆ ಆರಿಸಲು ಹೋಗಿದ್ದ ಕಾವೇರಿ ಸಂಜೆ 5 ಗಂಟೆ ಸುಮಾರಿಗೆ ಶಂಕರಪ್ಪ ಹಿಪ್ಪರಗಿ ಅವ್ರ ತೋಟದ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು. ಸುದ್ದಿ ತಿಳಿದು ರಾತ್ರಿ 8 ಗಂಟೆ ಸುಮಾರಿಗೆ ಕಾರ್ಯಾಚರಣೆ ಆರಂಭಿಸಿದ್ದ ರಕ್ಷಣಾ ಪಡೆಗಳು ಸತತ 54 ಗಂಟೆ ಕಾರ್ಯಾಚರಣೆ ಬಳಿಕ ಸೋಮವಾರ ರಾತ್ರಿ 11.33ರ ಸುಮಾರಿಗೆ ಕಾವೇರಿಯ ಮೃತದೇಹವನ್ನ ಹೊರ ತೆಗೆದರು.

    28 ಅಡಿಯಲ್ಲಿ ಸಿಲುಕಿದ್ದ ಕಾವೇರಿಯನ್ನ ಸುರಂಗ ಕೊರೆದು ನಿನ್ನೆ ರಾತ್ರಿ ರಕ್ಷಣಾ ಸಿಬ್ಬಂದಿ ಹೊರ ತೆಗೆದ್ರು. ಆದಾಗಲೇ ಸಾವನ್ನಪ್ಪಿದ್ದ ಕಾವೇರಿ ಬಾಯಲ್ಲಿ ರಕ್ತ ಬಂದಿತ್ತು. ಲವಲವಿಕೆಯಿಂದ ಚೂಟಿಯಾಗಿದ್ದ ಮಗಳನ್ನ ಶವವಾಗಿ ಕಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.

  • ಬದುಕಲಿಲ್ಲ ಕಾವೇರಿ: ನಮ್ಗೆ ಪರಿಹಾರ ಬೇಡ, ತೆರೆದ ಬೋರ್‍ವೆಲ್‍ಗಳನ್ನು ಮುಚ್ಚಿಸಿ- ಸರ್ಕಾರಕ್ಕೆ ತಾಯಿಯ ಕಣ್ಣೀರಿನ ಮನವಿ

    ಬದುಕಲಿಲ್ಲ ಕಾವೇರಿ: ನಮ್ಗೆ ಪರಿಹಾರ ಬೇಡ, ತೆರೆದ ಬೋರ್‍ವೆಲ್‍ಗಳನ್ನು ಮುಚ್ಚಿಸಿ- ಸರ್ಕಾರಕ್ಕೆ ತಾಯಿಯ ಕಣ್ಣೀರಿನ ಮನವಿ

    ಬೆಳಗಾವಿ: ಅಥಣಿ ತಾಲೂಕಿನ ಝುಂಜರವಾಡದಲ್ಲಿ ಶನಿವಾರ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದ 6 ವರ್ಷದ ಕಾವೇರಿ ಮಾದರ ಮೃತಪಟ್ಟಿದ್ದಾಳೆ.

    ಶನಿವಾರ ಸಂಜೆ ಕಾವೇರಿ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು. 27 ಅಡಿ ಆಳದಲ್ಲಿ ಕಾವೇರಿಯ ಕೈಗಳು ಕ್ಯಾಮೆರಾಗೆ ಕಾಣಿಸಿದ್ದವು. ಹುಕ್ ಮೂಲಕ ಬಾಲಕಿಯನ್ನು ಐದಾರು ಬಾರಿ ಮೇಲೆತ್ತುವ ಪ್ರಯತ್ನ ಮಾಡಿದ್ರೂ ಯಶಸ್ವಿಯಾಗಲಿಲ್ಲ. ದೊಡ್ಡ ಗಾತ್ರದ ಬಂಡೆಗಳು ಸಿಕ್ಕಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗಿತ್ತು. ಕೊಳವೆ ಬಾವಿ ಸುತ್ತ 20 ಬೋರ್‍ವೆಲ್‍ ಕೊರೆದು ಸಕ್ಕಿಂಗ್ ಮಷಿನ್ ಮೂಲಕ ಮಣ್ಣು ತೆಗೆಯುವ ಕಾರ್ಯ ನಡೆದಿತ್ತು.

    ಸರ್ಕಾರಕ್ಕೆ ಕಾವೇರಿ ತಾಯಿ ಮನವಿ: ನಮ್ಗೆ ಆಗಿರೋ ಆದ ಪರಿಸ್ಥಿತಿ ಬೇರೆಯವರಿಗೆ ಆಗೋದು ಬೇಡ, ಪರಿಹಾರವೂ ನಮ್ಗೆ ಬೇಡ. ರಾಜ್ಯದಲ್ಲಿ ಇರುವ ಎಲ್ಲಾ ತೆರೆದ ಬೋರ್‍ವೆಲ್‍ಗಳನ್ನ ಮುಚ್ಚಿಸಿ ಅಂತಾ ಕಾವೇರಿ ತಾಯಿ ಸವಿತಾ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದು, ನಮಗೆ ಪರಿಹಾರ ಬೇಡ ಏನೂ ಬೇಡ ಗೋಳಿಟ್ಟಿದ್ದಾರೆ.

    `ನನ್ನ ಮಗಳು ಮತ್ತ ತೊಡಿ ಮ್ಯಾಲ ಆಡಬೇಕು. ಹಸದ್ರ ಉಣ್ಣಾಕ್ ಕೇಳಬೇಕು. ನೀರಡಿಕಿ ಆದ್ರ ನಾ ನೀರ್ ಕುಡ್ಸಬೇಕು… ಅಲ್ಲೀಮಟಾ ನಂಗ ಏನೂ ಬ್ಯಾಡ….’ ಎಂದು ತಾಯಿ ಸವಿತಾ ಸತತ ರೋದಿಸಿದ್ದರಿಂದ ಹಲವು ಬಾರಿ ಪ್ರಜ್ಞಾಹೀನರಾಗಿದ್ರು. ತಕ್ಷಣವೇ ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್ ನಲ್ಲಿ ಕರೆದೊಯ್ದು ಚಿಕಿತ್ಸೆ ನೀಡಿ, ಚೇತರಿಸಿಕೊಂಡ ಬಳಿಕ ಕುಟುಂಬದವರ ಬಳಿ ಕಳಿಸಿಕೊಟ್ಟರು. ಹೀಗೆ ಅವರು ಪ್ರಜ್ಞೆ ತಪ್ಪುವುದು, ಚಿಕಿತ್ಸೆ ನೀಡಿ ಕರೆತರುವುದು ಐದಾರು ಬಾರಿ ನಡೆಯಿತು. ರೋಧನದ ನಡುವೆ ತೀವ್ರವಾದ ಬಿಸಿಲು ಇದ್ದುದರಿಂದ ಕಾವೇರಿ ತಾಯಿ ಮತ್ತೆ ಅಸ್ವಸ್ಥರಾಗಿದ್ದು, ಝುಂಜರವಾಡ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಸವಿತಾ ಬೆಳಗ್ಗೆ ಹಾಲು ಬ್ರೆಡ್ ಸೇವಿಸಿದ್ದಾರೆ ಅಂತಾ ಕೊಕಟ್ಟನೂರು ಪ್ರಾಥಮಿಕ ಆರೋಗ್ಯಾಧಿಕಾರಿ ಸುಕನ್ಯ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಸಾಂತ್ವನ ಹೇಳಲು, ಮನೋಸ್ಥೈರ್ಯ ತುಂಬಲು ಸಂಬಂಧಿಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು ಕುಟುಂಬದವರ ಬಳಿ ತೆರಳುತ್ತಿದ್ದಂತೆಯೇ ಅವರ ದುಃಖದ ಕಟ್ಟೆಯೊಡೆಯುತ್ತಿತ್ತು. ರೋದನ ಮುಗಿಲು ಮುಟ್ಟುತ್ತಿತ್ತು. ನೆತ್ತಿ ಸುಡುವ ಬಿಸಿಲನ್ನು ಲೆಕ್ಕಿಸದೇ ಸಂಬಂಧಿಕರು, ನೆರೆಹೊರೆಯವರು ಜಾಲಿ ಮರದ ಕೆಳಗೆ ಕುಳಿತು ಒಬ್ಬರನ್ನೊಬ್ಬರು ಸಂತೈಸುತ್ತಿದ್ದರು. ಬಾಲಕಿಯ ಉಳಿವಿಗಾಗಿ ಒಂದೆಡೆ ಪ್ರಾರ್ಥಿಸುತ್ತಿದ್ದರೆ, ಇನ್ನೊಂದೆಡೆ ಕಣ್ಣೀರ ಕೋಡಿ ಹರಿಯುತ್ತಿದ್ದ ದೃಶ್ಯಗಳು ಸೋಮವಾರ ಬಾಲಕಿಯ ರಕ್ಷಣಾ ಕಾರ್ಯಾಚರಣೆ ಸ್ಥಳದಲ್ಲಿ ಗೋಚರಿಸಿತ್ತು,

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡದಲ್ಲಿ ಕೊಳವೆ ಬಾವಿಗೆ ಬಾಲಕಿ ಬಿದ್ದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಡಿಆರ್‍ಎಫ್ ಸಿಬ್ಬಂದಿ, ಎಂಎಲ್‍ಐಆರ್‍ಸಿ ಸಿಬ್ಬಂದಿಗಳಿಂದ ಕಾರ್ಯಾಚರಣೆ ಶನಿವಾರ ರಾತ್ರಿಯಿಂದಲೇ ನಡೆದಿತ್ತು. ಅವಸರ ಮಾಡಿದ್ರೆ ಬಾಲಕಿ ಕಾವೇರಿ ದೇಹಕ್ಕೆ ತೊಂದರೆಯಾಗುವ ಸಾಧ್ಯತೆಗಳಿರುವ ನಿಟ್ಟಿನಲ್ಲಿ ಈವರೆಗೂ ಸೂಕ್ಷ್ಮವಾಗಿ ಕಾರ್ಯಾಚರಣೆ ಮಾಡಿದ್ದೇವು ಅಂತಾ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹೇಳಿದ್ದಾರೆ.

    ಸತತ ಕಾರ್ಯಾಚರಣೆಯ ಬಳಿಕ ಬಾಲಕಿ ಪತ್ತೆಯಾಗದ ಹಿನ್ನೆಲೆಯಲ್ಲಿ ರಂಧ್ರ ನಿರ್ಮಾಣ ಮಾಡಲು ನಿರ್ಧರಿಸಿದ್ದೇವು. ಆದ್ರೆ ಈ ವೇಳೆ ಬಂಡೆ ಕಲ್ಲುಗಳು ಅಡ್ಡಿಪಡಿಸಿದವು. ನಂತ್ರ ಯಂತ್ರೋಪಕರಣಗಳನ್ನು ಬಳಸಿ ರಂಧ್ರ ಕೊರೆಯುವುದಾಗಿ ನಿರ್ಧರಿಸಲಾಯಿತು. ಅಂತೆಯೇ ಕಾರ್ಯಾಚರಣೆ ಕೊನೆ ಹಂತ ತಲುಪಿತು ಅಂತಾ ಎನ್‍ಡಿಆರ್‍ಎಫ್ ಟೀಂನ ಅಧಿಕಾರಿ ಭಜೇಂದರ್ ಪಬ್ಲಿಕ್ ಟಿವಿ ವರದಿಗಾರನ ಜೊತೆ ಮಾತನಾಡುತ್ತಾ ಹೇಳಿದ್ರು.

    ಬಾಲಕಿ ಕಾವೇರಿ ಕೊಳವೆ ಬಾವಿಯಲ್ಲಿ ಸಿಲುಕಿ 36 ಗಂಟೆ ನಂತ್ರ ಕೊಳವೆ ಬಾವಿ ಪಕ್ಕದಲ್ಲೇ 25 ಅಡಿ ಆಳದಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಯಿತು. ಬಾಲಕಿಯ ಕಾರ್ಯಾಚರಣೆಗೆ 2 ಹಿಟಾಚಿ, 2 ಜೆಸಿಬಿ ಬಳಕೆ ಮಾಡಲಾಗಿದ್ದು, ಇನ್ನು ಸ್ಥಳದಲ್ಲಿ ಅಗ್ನಿಶಾಮಕ ದಳ, ಎನ್‍ಡಿಆರ್‍ಎಫ್, ಎಂಎಲ್‍ಐಆರ್‍ಸಿ ಅಧಿಕಾರಿಗಳು ಹಾಗೂ ಹಟ್ಟಿ ಚಿನ್ನದ ಗಣಿಯ ನುರಿತ ತಜ್ಞರ ತಂಡವು ಕಾರ್ಯಾಚರಣೆ ನಡೆಸಿತ್ತು.

    ನಡೆದಿದ್ದೇನು?: ಅಜಿತ್ ಮಾದರ ಮತ್ತು ಸವಿತಾ  ದಂಪತಿ ಕೂಲಿ ಅರಸಿ ಬಾಗಲಕೋಟೆ ಜಿಲ್ಲೆಯಿಂದ ಇಲ್ಲಿಗೆ ಬಂದಿದ್ದರು. ಸಿಗೆ ಆರಂಭವಾದಾಗಿನಿಂದ ಕೆಲಸ ಸಿಗುವುದೂ ಕಡಿಮೆ ಆಗಿದೆ. ಹೀಗಾಗಿ ಅಜಿತ್ ಮಾದರ ಕೂಲಿ ಹುಡುಕಿಕೊಂಡು, ಸಿಕ್ಕಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಅಂತೆಯೇ ಬೆಳಗಾವಿಯಲ್ಲಿ ಬಂದು ಕುಟುಂಬ ನೆಲೆಸಿತ್ತು. ಹೆಂಡತಿ ಸವಿತಾ ಮಕ್ಕಳನ್ನು ನೋಡಿಕೊಂಡು ಮನೆಯಲ್ಲಿದ್ದರು.

    ಶನಿವಾರ ಸಂಜೆ ತೋಟದ ವಸತಿಯಲ್ಲಿ ದೊಡ್ಡ ಮಗಳು ಅನ್ನಪೂರ್ಣಾಳನ್ನು ಬಿಟ್ಟು, ಚಿಕ್ಕವರಾದ ಕಾವೇರಿ ಹಾಗೂ ಪವನ್‍ನನ್ನು ಕರೆದುಕೊಂಡು ಕಟ್ಟಿಗೆ ಆಯಲು ಬಂದಿದ್ದರು. ಈ ಹೊತ್ತಿನಲ್ಲಿ ಮಕ್ಕಳಿಬ್ಬರೂ ಹೊಲದ ದಾರಿಯ ಪಕ್ಕದಲ್ಲಿ ಆಡುತ್ತಿದ್ದರು. ಮೂರ್ನಾಲ್ಕು ದಿನಗಳ ಹಿಂದಷ್ಟೇ ಹೊಲವನ್ನು ಗಳೆ ಹೊಡೆದಿದ್ದರಿಂದ ದೊಡ್ಡ ದೊಡ್ಡ ಮಣ್ಣಿನ ಹೆಂಟೆಗಳು ಎದ್ದು ನಿಂತಿದ್ದವು. ಆ ಹೆಂಟೆಗಳ ನಡುವೆಯೇ ತೆರೆದ ಕೊಳವೆ ಬಾವಿ ಇರುವುದು ಮಕ್ಕಳಿಗೆ ತಿಳಿದಿರಲಿಲ್ಲ. ಆಡುತ್ತ ಹೋದ ಕಾವೇರಿ ಕಾಲು ಜಾರಿ ಬಿದ್ದಿದ್ದಳು. ಇದನ್ನು ಕಂಡ ಆಕೆಯ ತಮ್ಮ ಪವನ ಗಾಬರಿಯಿಂದ ಚೀರಿದ್ದ. ಮಗನ ದನಿ ಕೇಳುತ್ತಿದ್ದಂತೆಯೇ ಅಲ್ಲಿಗೆ ಧಾವಿಸಿದ ತಾಯಿಯ ಮುಂದೆ `ಅಕ್ಕ ಇದರಾಗ ಬಿದ್ಲು…’ ಎಂದು ಪವನ್ ಕುಣಿಯೊಂದನ್ನು ತೋರಿಸಿದ್ದಾನೆ. ಕೂಡಲೇ ಮಗಳ ರಕ್ಷಣೆಗೆ ಮುಂದಾದ ಸವಿತಾ, ಹಗ್ಗವೊಂದನ್ನು ಬಿಟ್ಟು ಕಾವೇರಿಯನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡಿದ್ದರು.

  • ಕೊಳವೆಬಾವಿಗೆ ಬಿದ್ದ 6ರ ಬಾಲಕಿಗಾಗಿ ಮುಂದುವರಿದ ಕಾರ್ಯಾಚರಣೆ- ಅಡ್ಡಿಯಾಗ್ತಿದೆ ಬಂಡೆಗಲ್ಲು

    ಕೊಳವೆಬಾವಿಗೆ ಬಿದ್ದ 6ರ ಬಾಲಕಿಗಾಗಿ ಮುಂದುವರಿದ ಕಾರ್ಯಾಚರಣೆ- ಅಡ್ಡಿಯಾಗ್ತಿದೆ ಬಂಡೆಗಲ್ಲು

    – ಭದ್ರತೆಗೆ ಬಂದಿದೆ ಸೇನೆ

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಜುಂಜರವಾರ ಗ್ರಾಮದಲ್ಲಿ ಕೊಳವೆ ಬಾವಿಯೊಳಗೆ 6 ವರ್ಷದ ಬಾಲಕಿ ಕಾವೇರಿ ಬಿದ್ದ ಪ್ರಕರಣದ ಕಾರ್ಯಾಚರಣೆ ಚುರುಕು ಪಡೆದಿದೆ. 15 ಗಂಟೆಗಳಿಂದಲೂ ಕಾರ್ಯಾಚರಣೆ ನಡೀತಿದೆ. ಕೊಳವೆ ಬಾವಿಗೆ ಆಮ್ಲಜನಕ ಪೂರೈಸಲಾಗುತ್ತಿದ್ದು, ಪುಣೆ ಎನ್‍ಡಿಆರ್‍ಎಫ್ ತಂಡ ಒಂದ್ಕಡೆ ಆ್ಯಂಕರ್ (ಲಂಗರು) ಬಳಸಿಯೂ ಮತ್ತೊಂದು ಕಡೆ ಹಿಟಾಚಿ, ಬಂಡೆ ಒಡೆಯೋ ಯಂತ್ರಗಳಿಂದ ಮಣ್ಣನ್ನು ಅಗೆಯಲಾಗ್ತಿದೆ. ಈಗಾಗಲೇ 13 ಅಡಿ ಅಗೆಯಲಾಗಿದೆ.

    ಶನಿವಾರ ಸಂಜೆ 5 ಗಂಟೆ ಆಸುಪಾಸಿನಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕಿ ಕಾವೇರಿಯನ್ನ ಇನ್ನೂ ಮೇಲೆತ್ತಲು ಆಗಿಲ್ಲ. ರಾತ್ರಿಯೆಲ್ಲಾ ನಡೆದ ಕಾರ್ಯಾಚರಣೆ ಇದೀಗ 15 ಗಂಟೆಯೇ ಮುಗಿದಿದೆ. ಆದಾಗ್ಯೂ ಕಾವೇರಿ ಇನ್ನೂ ಮೇಲೆ ಬಂದಿಲ್ಲ. ಸುಮಾರು 30 ಅಡಿ ಆಳದಲ್ಲಿ ಸಿಕ್ಕಿರುವ ಕಾವೇರಿಯ ಚಲನವಲನ ವೀಕ್ಷಿಸಲು 18 ಅಡಿಯವರೆಗೆ ವೆಬ್ ಕ್ಯಾಮೆರಾ ಬಿಡಲಾಗಿತ್ತು. ಆದ್ರೆ ಮಧ್ಯದಲ್ಲಿ ಮಣ್ಣು ಆವರಿಸಿದ ಕಾರಣ ಬಾಲಕಿಯ ಸುಳಿವು ಸಿಕ್ಕಿಲ್ಲ.

    ಬಾಲಕಿ ಕಾವೇರಿ ರಕ್ಷಣಾ ಕಾರ್ಯದಲ್ಲಿ 9 ತಂಡಗಳು ಭಾಗಿಯಾಗಿವೆ. ಪುಣೆ, ಹೈದರಾಬಾದ್‍ನ ಎನ್‍ಡಿಆರ್‍ಎಫ್ ತಂಡಗಳು, ಬೆಳಗಾವಿಯ ಮಿಲಿಟರಿ ತುಕಡಿ, ಸಾಂಗ್ಲಿಯ ಹೆಲ್ಪ್‍ಲೈನ್ ಬಸವರಾಜ್ ಹಿರೇಮಠ್, ರಾಯಚೂರಿನ ಹಟ್ಟಿ, ಸ್ಥಳೀಯ ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸ್ ಇಲಾಖೆಗಳು ಆಪರೇಷನ್ ಕಾವೇರಿಯಲ್ಲಿ ಭಾಗಿಯಾಗಿವೆ. ಇನ್ನು ಬೆಳಗಾವಿಯ ಡಿಸಿ ಜಯರಾಮ್, ಎಸ್‍ಪಿ ರವಿಕಾಂತೇಗೌಡ, ಅಥಣಿ ತಹಸೀಲ್ದಾರ್ ಉಮಾದೇವಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವಧಿ ರಾತ್ರಿಯೆಲ್ಲಾ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು. ಗಂಟೆ ಗಂಟೆಗೂ ಎಲ್ಲರೂ ಮಾಹಿತಿ ಕೊಡ್ತಿದ್ರು.

    ಸವಿತಾ – ಅಜಿತ್ ದಂಪತಿಗೆ ಅನ್ನಪೂರ್ಣ, ಕಾವೇರಿ ಮತ್ತು ಪವನ್ ಎಂಬ ಮೂವರು ಮಕ್ಕಳಿದ್ದಾರೆ. ಶನಿವಾರ ಸಂಜೆ ಕಟ್ಟಿಗೆ ಆರಿಸಲು ತಾಯಿ ಜೊತೆ ಕಾವೇರಿ ಮತ್ತು ಪವನ್ ತೆರಳಿದ್ದರು. ಈ ವೇಳೆ ಶಂಕರಪ್ಪ ಹಿಪ್ಪರಗಿ ಅವರ ಜಮೀನಿನಲ್ಲಿ ಮೂರು ವರ್ಷಗಳ ಹಿಂದೆ ಕೊರೆದು ಫೇಲ್ ಆದ ಕಾರಣ ಹಾಗೇ ಬಿಟ್ಟಿದ್ದ ಕೊಳವೇ ಬಾವಿಗೆ ಅಚಾನಕ್ ಆಗಿ ಕಾವೇರಿ ಆಯತಪ್ಪಿ ಬಿದ್ದಿದ್ದಾರೆ. ಅಕ್ಕ ಬಾವಿಗೆ ಬಿದ್ದ ಸುದ್ದಿಯನ್ನ ಪವನ್ ತಕ್ಷಣವೇ ತಾಯಿಗೆ ತಿಳಿಸಿದ್ದಾನೆ. ಆತಂಕದಿಂದ ಓಡಿ ಬಂದ ತಾಯಿ ಸವಿತಾಗೆ ಮೊದಲಿಗೆ ಕಾವೇರಿಯ ಅಳಲು ಕೇಳಿಸಿದೆ. ಆಮೇಲೆ ಹಗ್ಗ ಬಿಟ್ಟು ರಕ್ಷಿಸಲು ಯತ್ನಿಸಿದ್ದಾರೆ. ಆದ್ರೆ ಸಾಧ್ಯವಾಗಿಲ್ಲ. ತಕ್ಷಣವೇ ಗ್ರಾಮಸ್ಥರಿಗೆ ಸುದ್ದಿ ಮುಟ್ಟಿಸಿ ಎಲ್ಲರಿಗೂ ತಿಳಿದಿದೆ. ಕೂಲಿಗೆ ಹೋಗಿದ್ದ ಪತಿ ಅಜಿತ್ ಬರುವಷ್ಟರಲ್ಲಿ ಇಡೀ ಗ್ರಾಮವೇ ಅಲ್ಲಿ ನೆರೆದಿತ್ತು. ಡಿಸಿ, ಎಸ್‍ಪಿ, ಅಗ್ನಿಶಾಮಕ ದಳವೆಲ್ಲಾ ಬಂದಿತ್ತು. ಸವಿತಾ ಅವರ ಆಕ್ರಂದನ ಮುಗಿಲು ಮುಟ್ಟಿತ್ತು. ಅಲ್ಲದೆ, ಅನ್ನ-ಆಹಾರ ಸೇವಿಸದೆ ರಾತ್ರಿಯೆಲ್ಲಾ ಗೋಳಾಡಿ ಕಣ್ಣೀರಿಟ್ಟ ಸವಿತಾ ಅಸ್ವಸ್ಥರಾಗಿದ್ದರು.

  • ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ : 6 ವರ್ಷದ ಪುಟಾಣಿಯ ರಕ್ಷಣೆಗೆ ಹರಸಾಹಸ

    ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ : 6 ವರ್ಷದ ಪುಟಾಣಿಯ ರಕ್ಷಣೆಗೆ ಹರಸಾಹಸ

    ಬೆಳಗಾವಿ: 10 ದಿನಗಳ ಅಂತರದಲ್ಲಿ ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ ಸಂಭವಿಸಿದೆ. ಅಥಣಿ ತಾಲೂಕಿನ ಝಂಜರವಾಡದಲ್ಲಿ ತೆರೆದ ಬೋರ್‍ವೆಲ್‍ಗೆ 6 ವರ್ಷದ ಬಾಲಕಿ ಬಿದ್ದಿದ್ದಾಳೆ.

    ಕಾವೇರಿ ಮಾದರ ಝಂಜರವಾಡ ಗ್ರಾಮದ ತೋಟದ ಮನೆಯಲ್ಲಿನ ತೆರೆದ ಕೊಳವೆ ಬಾವಿಗೆ ಬಿದ್ದ ಬಾಲಕಿ. ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಮಗು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

    ರೈತ ಶಂಕರಪ್ಪ ಹಿಪ್ಪರಗಿ ಅವರು 400 ಅಡಿ ಕೊಳವೆ ಬಾವಿ ಕೊರೆಸಿದ್ದಾಗ ಫೇಲ್ ಆಗಿತ್ತು. ಇವರು ಕೊಳವೆ ಬಾವಿ ಮುಚ್ಚದೇ ಹಾಗೇ ಬಿಟ್ಟಿದ್ದರು. ಇಂದು ಸಂಜೆ ಸುಮಾರು 5 ಗಂಟೆಗೆ ಬಾಲಕಿ `ಕಾವೇರಿ ಮಾದರ’ ಆಟವಾಡುತ್ತಾ ಹೋಗಿ ಬಿದ್ದಿದ್ದಾಳೆ. ಸುಮಾರು 50 ಅಡಿ ಆಳದಲ್ಲಿ ಬಾಲಕಿ ಸಿಲುಕಿದ್ದಾಳೆ ಎನ್ನುವ ಮಾಹಿತಿ ಈಗ ಸಿಕ್ಕಿದೆ.

  • ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪ್ರಿಯಕರನೊಂದಿಗೆ ಮಗನನ್ನೇ ಕೊಂದ ತಾಯಿ!

    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪ್ರಿಯಕರನೊಂದಿಗೆ ಮಗನನ್ನೇ ಕೊಂದ ತಾಯಿ!

    – ತಾಯಿ, ಪ್ರಿಯಕರನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    ಚಿಕ್ಕೋಡಿ: ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ತಾಯಿ ಮತ್ತು ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಅಥಣಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ.

    ಕಿರಣ ಕೆಂಗೇರಿ(14) ಶವ ಇಂದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಜಮೀನಿನಲ್ಲಿ ಪತ್ತೆಯಾಗಿತ್ತು. ಈತನ ಶವದ ಬಳಿ ತಾಯಿ ರೇಶ್ಮಾ ಕೆಂಗೇರಿ ಮತ್ತು ಪ್ರಿಯಕರ ದಿಲೀಪ್ ಜೋಗೆ ಇರುವುದನ್ನು ನೋಡಿದ ಗ್ರಾಮಸ್ಥರು ಇವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.

    ಇವರಿಬ್ಬರು ನಾವು ಕಿರಣನನ್ನು ಕೊಲೆ ಮಾಡಿಲ್ಲ ಎಂದು ಹೇಳುತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.

    ಕಳೆದ ಹಲವು ವರ್ಷಗಳಿಂದ ಇವರಿಬ್ಬರು ಅಕ್ರಮ ಸಂಬಂಧ ಹೊಂದಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ತಾಯಿ ರೇಷ್ಮಾ, ಪ್ರಿಯಕರ ಜೊತೆ ಸೇರಿ ಕೊಲೆ ಮಾಡಿದ್ದಾಳೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಸ್ಥಳಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಾಯಿ ಮತ್ತು ಪ್ರಿಯಕರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇದೀಗ ಪೊಲೀಸ್ ಠಾಣೆಗೆ ರೇಷ್ಮಾಳ ಗಂಡ ಆಗಮಿಸಿದ್ದು ಪಿಎಸ್‍ಐ ಸಮೀರ್ ಮುಲ್ಲಾ ವಿಚಾರಣೆ ನಡೆಸುತ್ತಿದ್ದಾರೆ.

    https://www.youtube.com/watch?v=8rm2wE2TQDM

  • ಕುಡಿಯೋ ಹಾಲಿಗೆ ಬೆರೆಸ್ತಾರೆ ಎಣ್ಣೆ, ಯೂರಿಯಾ – ಅಥಣಿ, ರಾಯಬಾಗದಲ್ಲಿ ಭಾರೀ ದಂಧೆ

    ಬೆಳಗಾವಿ: ಹಾಲು ಕುಡಿದವರೇ ಬದಕಲ್ಲ, ಇನ್ನು ವಿಷ ಕುಡಿದವರು ಬದುಕ್ತಾರಾ? ಅನ್ನೋ ಗಾದೆ ಮಾತಿದೆ. ಬೆಳಗಾವಿ ಜಿಲ್ಲೆಯ ನಗರ ಪ್ರದೇಶದ ಜನ ಹಾಲಿನ ಹೆಸರಲ್ಲಿ ವಿಷವನ್ನೇ ಕುಡೀತಿದ್ದಾರೆ.

    ಜನರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿರೋ ಹಾಲಿಗೆ ರಾಸಾಯನಿಕ ಬೆರೆಸುತ್ತಿದ್ದು, ಬೆಳಗಾವಿಯ ಅಥಣಿ ಮತ್ತು ರಾಯಬಾಗ ತಾಲೂಕಿನ ಹಾಲಿನ ದಂಧೆಯ ಬಗ್ಗೆ ಜನರಿಗೆ ಆತಂಕ ಶುರುವಾಗಿದೆ. ಇದ್ರಿಂದ ಭಯಾನಕ ರೋಗಗಳ ಭೀತಿನೂ ಎದುರಾಗಿದೆ.

    ರೈತರಿಂದ ಹಾಲು ಪಡೆಯೋ ಡೈರಿಯವರು, ಹಾಲಿನ ಫ್ಯಾಟ್ ಹಾಗೂ ಡಿಗ್ರಿ ಹೆಚ್ಚಳ ಮಾಡೋಕೆ ಇಂಥ ಅಕ್ರಮ ಹಾದಿ ಹಿಡಿದಿದ್ದಾರೆ. 50 ಲೀಟರ್ ಹಾಲಿಗೆ ಎಣ್ಣೆ, ಯೂರಿಯಾ ಸೇರಿದಂತೆ ವಿಷಪೂರಿತ ಕೆಮಿಕಲ್ ಮಿಕ್ಸ್ ಮಾಡಿ ಅದನ್ನ 100 ಲೀಟರ್‍ಗೆ ಹೆಚ್ಚಿಸ್ತಾರೆ. ಬಳಿಕ ಗ್ರಾಹಕರಿಗೆ ಹಾಲನ್ನ ಮಾರಾಟ ಮಾಡ್ತಿದ್ದಾರೆ. ಈ ಹಾಲಾಹಲದ ದಂಧೆ ಹಿಂದೆ ಭ್ರಷ್ಟ ಅಧಿಕಾರಿಗಳ ಕುಮ್ಮಕ್ಕೂ ಇದೆ ಅಂತ ಸ್ಥಳೀಯರು ಆರೋಪಿಸಿದ್ದಾರೆ.

    ಶುಭ್ರ, ಶುದ್ಧ ಹಾಲಿನಲ್ಲಿ ಪಾತಕಿಗಳು ವಿಷ ತುಂಬಿ ಅಕ್ರಮವಾಗಿ ಲಾಭ ಪಡೀತಿದ್ದಾರೆ. ಈ ಮಿಲ್ಕ್ ಮಾಫಿಯಾ ಹೀಗೆ ಮುಂದುವರಿದ್ರೆ ನಗರದ ಜನ ಆಸ್ಪತ್ರೆಗಳಲ್ಲಿ ಸಾಲು ನಿಲ್ಲೋದು ತಪ್ಪಲ್ಲ.