Tag: Athletes

  • ಐತಿಹಾಸಿಕ ಸಾಧನೆ ಬೆನ್ನಲ್ಲೇ ಬಿಸಿಸಿಐನಿಂದ ಗುಡ್‌ನ್ಯೂಸ್‌ – ವಾರ್ಷಿಕ ಸಂಬಳ ಹೊರತುಪಡಿಸಿ ವಿಶೇಷ ವೇತನ ಘೋಷಣೆ

    ಐತಿಹಾಸಿಕ ಸಾಧನೆ ಬೆನ್ನಲ್ಲೇ ಬಿಸಿಸಿಐನಿಂದ ಗುಡ್‌ನ್ಯೂಸ್‌ – ವಾರ್ಷಿಕ ಸಂಬಳ ಹೊರತುಪಡಿಸಿ ವಿಶೇಷ ವೇತನ ಘೋಷಣೆ

    – ಭಾರತದಲ್ಲಿ ಟೆಸ್ಟ್‌ ಕ್ರಿಕೆಟ್‌ ಪ್ರೋತ್ಸಾಹಕ್ಕೆ ಪ್ರತಿವರ್ಷ 40 ಕೋಟಿ ರೂ. ಹೆಚ್ಚುವರಿ ಹೂಡಿಕೆ

    ಧರ್ಮಶಾಲಾ: ಇಂಗ್ಲೆಂಡ್‌ ತಂಡದ ವಿರುದ್ಧ ಟೀಂ ಇಂಡಿಯಾ (Team India) ಐತಿಹಾಸಿಕ ಗೆಲುವು ದಾಖಲಿಸುತ್ತಿದ್ದಂತೆಯೇ ಬಿಸಿಸಿಐ ಆಟಗಾರರಿಗೆ ಸಿಹಿ ಸುದ್ದಿ ನೀಡಿದೆ. ಟೆಸ್ಟ್‌ ಕ್ರಿಕೆಟ್‌ಗೆ ಆದ್ಯತೆ ನೀಡುವ ಕ್ರಿಕೆಟಿಗರ ಆರ್ಥಿಕ ಬೆಳವಣಿಗೆಗೆ ಸಹಾಯಕವಾಗುವಂತೆ ʻಟೆಸ್ಟ್ ಕ್ರಿಕೆಟ್ ಪ್ರೋತ್ಸಾಹ ಯೋಜನೆʼಯನ್ನು (Test Cricket Incentive Scheme) ಘೋಷಿಸಿದೆ.

    ಈ ಯೋಜನೆಯಿಂದಾಗಿ ಟೆಸ್ಟ್‌ ಪಂದ್ಯಗಳಿಗೆ ನಿಗದಿಯಾಗಿರುವ ಶುಲ್ಕ ಹೊರತುಪಡಿಸಿ, ಹೆಚ್ಚುವರಿ ನಗದು ಬಹುಮಾನವನ್ನು ಆಟಗಾರರು ಪಡೆದುಕೊಳ್ಳಲಿದ್ದಾರೆ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ತಿಳಿಸಿದೆ. ಇದನ್ನೂ ಓದಿ: ಟೀಂ ಇಂಡಿಯಾಗೆ ಇನ್ನಿಂಗ್ಸ್‌, 64 ರನ್‌ಗಳ ಜಯ – ತಾರಾ ಆಟಗಾರರ ಗೈರಿನ ಮಧ್ಯೆಯೂ ಅತ್ಯುತ್ತಮ ಸಾಧನೆ

    ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jay Shah), ನಮ್ಮ ಗೌರವಾನ್ವಿತ ಕ್ರೀಡಾಪಟುಗಳ ಆರ್ಥಿಕ ಬೆಳವಣಿಗೆಗೆ ಸಹಾಯಕವಾಗುವಂತೆ ಬಿಸಿಸಿಐ ಟೆಸ್ಟ್‌ ಕ್ರಿಕೆಟ್‌ ಪ್ರೋತ್ಸಾಹ ಯೋಜನೆಯನ್ನು ಘೋಷಣೆ ಮಾಡಿದೆ. ಇದು ಟೆಸ್ಟ್‌ ಕ್ರಿಕೆಟ್‌ ಆಟಗಾರರನ್ನು ಉತ್ತೇಜಿಸುವ ಯೋಜನೆಯ ಭಾಗವಾಗಿದೆ. ಈ ಯೋಜನೆಯ ಅಡಿಯಲ್ಲಿ ಟೆಸ್ಟ್‌ ಪಂದ್ಯಗಳಿಗೆ ವಾರ್ಷಿಕವಾಗಿ ನಿಗದಿಪಡಿಸಿರುವ ವೇತನ ಹೊರತುಪಡಿಸಿ, ಹೆಚ್ಚುವರಿ ಬಹುಮಾನವನ್ನು ಆಟಗಾರರು ಪಡೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಕಿರಿಕ್‌ ಚೀನಾಗೆ ಠಕ್ಕರ್‌ – ವಿಶ್ವದ ಅತೀ ಉದ್ದದ ದ್ವಿಪಥ ಸುರಂಗ ಲೋಕಾರ್ಪಣೆಗೊಳಿಸಿದ ಮೋದಿ’

    9 ಪಂದ್ಯಗಳ ಆವೃತ್ತಿಯಲ್ಲಿ 4ಕ್ಕಿಂತ ಕಡಿಮೆ ಪಂದ್ಯಗಳನ್ನಾಡಿದ್ದರೆ, ಬಹುಮಾನ ಪಡೆದುಕೊಳ್ಳಲು ಅರ್ಹರಾಗಿರುವುದಿಲ್ಲ. ಕನಿಷ್ಠ 5 ರಿಂದ 6 ಟೆಸ್ಟ್‌ಗಳನ್ನು ಆಡುವ ಆಟಗಾರರು ಪ್ಲೇಯಿಂಗ್‌-11 ನಲ್ಲಿ ಇದ್ದರೆ, ಪ್ರತಿ ಪಂದ್ಯಕ್ಕೆ 30 ಲಕ್ಷ ರೂ. ಪಡೆದುಕೊಳ್ಳಲಿದ್ದಾರೆ, ಪ್ಲೇಯಿಂಗ್‌-11ನಲ್ಲಿ ಇಲ್ಲದಿದ್ದರೆ, 15 ಲಕ್ಷ ರೂ. ಹಣ ಪಡೆಯಲಿದ್ದಾರೆ. ಹಾಗೆಯೇ 7 ಅಥವಾ ಅದಕ್ಕಿಂತಲೂ ಹೆಚ್ಚಿನ ಪಂದ್ಯಗಳನ್ನಾಡುವ ಆಟಗಾರರು ಪ್ಲೇಯಿಂಗ್‌-11ನಲ್ಲಿ ಇದ್ದರೆ, 45 ಲಕ್ಷ ರೂ., ಪ್ಲೇಯಿಂಗ್‌-11ನಲ್ಲಿ ಇಲ್ಲದೇ ಇದ್ದರೆ 22.5 ಲಕ್ಷ ರೂ.ಗಳನ್ನ ಪಡೆದುಕೊಳ್ಳಲಿದ್ದಾರೆ. ವರ್ಷದ ಎಲ್ಲ ಟೆಸ್ಟ್‌ ಸರಣಿಗಳಲ್ಲಿ ಪಾಲ್ಗೊಳ್ಳುವ ಆಟಗಾರರಿಗಷ್ಟೇ ಇದು ಅನ್ವಯವಾಗಲಿದೆ ಎಂದು ಜಯ್‌ ಶಾ ತಿಳಿಸಿದ್ದಾರೆ. ಅಲ್ಲದೇ ಭಾರತದಲ್ಲಿ ನಡೆಯುವ ಟೆಸ್ಟ್‌ ಕ್ರಿಕೆಟ್‌ ಅನ್ನು ಇನ್ನಷ್ಟು ಜನಪ್ರಿಯಗೊಳಿಸಲು ಪ್ರತಿ ವರ್ಷ 40 ಕೋಟಿ ರೂ.ಗಳಷ್ಟು ಹೆಚ್ಚುವರಿ ಹಣ ಹೂಡಿಕೆ ಮಾಡಲಿದೆ ಎಂದೂ ಅವರು ತಿಳಿಸಿದ್ದಾರೆ.

    ಅಂತಿಮ ಟೆಸ್ಟ್‌ನ ಸಂಕ್ಷಿಪ್ತ ಸ್ಕೋರ್‌:
    ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ 218/10
    ಭಾರತ ಮೊದಲ ಇನ್ನಿಂಗ್ಸ್‌ 477/10
    ಇಂಗ್ಲೆಂಡ್‌ ಎರಡನೇ ಇನ್ನಿಂಗ್ಸ್‌ 195/10

  • National Games: 37ನೇ ಆವೃತ್ತಿಯ ನ್ಯಾಷನಲ್‌ ಗೇಮ್ಸ್‌ಗೆ ಮೋದಿ ಅದ್ಧೂರಿ ಚಾಲನೆ

    National Games: 37ನೇ ಆವೃತ್ತಿಯ ನ್ಯಾಷನಲ್‌ ಗೇಮ್ಸ್‌ಗೆ ಮೋದಿ ಅದ್ಧೂರಿ ಚಾಲನೆ

    ಪಣಜಿ: 37ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಗೋವಾದಲ್ಲಿ ಇದೇ ಮೊದಲಬಾರಿಗೆ ಕ್ರೀಡಾಕೂಟ ನಡೆಯುತ್ತಿದ್ದು, ಅದ್ಧೂರಿ ಚಾಲನೆ ದೊರೆತಿದೆ. 36ನೇ ನ್ಯಾಷನಲ್‌ ಗೇಮ್ಸ್ ಕ್ರೀಡಾಕೂಟ ಗೋವಾದಲ್ಲಿ ನಡೆಯಬೇಕಿತ್ತು. ಆದ್ರೆ ಕೋವಿಡ್‌ ಕಾರಣಗಳಿಂದಾಗಿ ಗುಜರಾತ್‌ಗೆ ಕ್ರೀಡಾಕೂಟವನ್ನು ಸ್ಥಳಾಂತರಿಸಲಾಗಿತ್ತು.

    ಇದೇ ಮೊದಲಬಾರಿಗೆ ಗೋವಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟ ಅಕ್ಟೋಬರ್‌ 26 ರಿಂದ ನವೆಂಬರ್‌ 9ರ ವರೆಗೆ ನಡೆಯಲಿದೆ. ಗೋವಾದ 5 ನಗರಗಳು (ಮಾಪುಸಾ, ಮಾರ್ಗೋ, ಪಂಜಿಮ್, ಪೋಂಡಾ ಮತ್ತು ವಾಸ್ಕೋ), 28 ಸ್ಥಳಗಳು ಹಾಗೂ 43 ಕ್ರೀಡಾ ವಿಭಾಗಗಳಲ್ಲಿ 10,000ಕ್ಕೂ ಹೆಚ್ಚು ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಟ್ರ್ಯಾಕ್ ಸೈಕ್ಲಿಂಗ್ ಈವೆಂಟ್‌ ಮತ್ತು ಗಾಲ್ಫ್ ಮಾತ್ರ ಗೋವಾದ ಹೊರಗೆ ದೆಹಲಿಯಲ್ಲಿ ನಡೆಯಲಿದೆ.

    1924ರಲ್ಲಿ ಅವಿಭಜಿತ ಭಾರತದ ಲಾಹೋರ್‌ನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಕ್ರೀಡಾಕೂಟ ನಡೆಸಲಾಗಿತ್ತು. ಅಲ್ಲಿಂದ 1938ರ ವರೆಗೆ ಭಾರತೀಯ ಒಲಿಂಪಿಕ್ಸ್‌ ಕ್ರೀಡಾಕೂಟ ಎಂದೇ ಇದನ್ನು ಕರೆಯಲಾಗುತ್ತಿತ್ತು. ಸದ್ಯ ಗೋವಾದಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಕಳೆದ ಆವೃತ್ತಿಗಿಂತಲೂ ಸುಮಾರು 3,000ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ. ಒಳಾಂಗಣ ಮತ್ತು ಹೊರಾಂಗಣ ಸ್ಪರ್ಧೆಗಳನ್ನು ಒಳಗೊಂಡಿರುವ 43 ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ.

    ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಪ್ರಧಾನಿ ಮೋದಿ ಅವರಿಗೆ ರಾಜ್ಯದ ಸಾಂಸ್ಕೃತಿಕ ಸಂಕೇತವಾದ ಕುಂಬಿ ಶಾಲು ಹೊದಿಸಿ ಸನ್ಮಾನಿಸಿದರು.

    ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಹಿಂದಿನ ಆಡಳಿತಗಳು ಕ್ರೀಡೆಯನ್ನು ಕಡೆಗಣಿಸಿದ್ದವು. ಆದ್ರೆ ಈಗಿನ ಭಾರತ ಕ್ರೀಡೆಗೆ ಪೂರಕ ವಾತಾವರಣ ಕಲ್ಪಿಸುವ ಮೂಲಕ ದಾಪುಗಾಲಿಡುತ್ತಿದೆ. ಈ ವರ್ಷದ ಕ್ರೀಡೆಗೆ ಮೀಸಲಾಗಿಟ್ಟಿರುವ ಬಜೆಟ್‌ ಕಳೆದ 9 ವರ್ಷಗಳ ಹಿಂದೆ ಮಂಡಿಸಿದ್ದಕ್ಕಿಂತ 3 ಪಟ್ಟು ಹೆಚ್ಚಾಗಿದೆ ಎಂದು ಶ್ಲಾಘಿಸಿದ್ದಾರೆ.

    ನಮ್ಮ ದೇಶದ ಬೀದಿ ಬೀದಿಗಳಲ್ಲಿ ಮತ್ತು ಹಳ್ಳಿಗಳಲ್ಲಿ ಪ್ರತಿಭೆಗಳು ಅರಳುತ್ತಿವೆ. ವಿಶ್ವಚಾಂಪಿಯನ್‌ಗಳಿಗೆ ಜನ್ಮ ನೀಡಿದ ಅನೇಕರು ಭಾರತೀಯರು. ಹಿಂದೆಲ್ಲಾ ಕ್ರೀಡಾ ಕ್ಷೇತ್ರಗಳಲ್ಲಿ ಪದಕಗಳನ್ನು ನೋಡಿದಾಗ ನಾಚಿಕೆಪಡುವಂತಿತ್ತು. ಆದ್ರೆ ಈಗ ದೇಶವೇ ಹೆಮ್ಮೆಪಡುವಂತ ಸಾಧನೆಗಳು ನಡೆಯುತ್ತಿವೆ. 2014ರ ರಾಷ್ಟ್ರೀಯ ಕ್ರೀಡಾಕೂಟಗಳ ನಂತರ ಮೂಲ ಸೌಕರ್ಯಗಳಲ್ಲಿ ಬದಲಾವಣೆ ತಂದಿದ್ದೇವೆ. ಕ್ರೀಡಾಪಟುಗಳಿಗೆ ಇದ್ದ ಅಡೆತಡೆಗಳನ್ನು ಒಂದೊಂದಾಗಿ ತೆಗೆದುಹಾಕಿದ್ದೇವೆ. ಇದರಿಂದಾಗುವ ಪ್ರಯೋಜನಗಳನ್ನು ಇತ್ತೀಚೆಗೆ ನೋಡುತ್ತಿದ್ದೇವೆ. ಏಷ್ಯನ್ ಗೇಮ್ಸ್, ಏಷ್ಯನ್ ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆ ಹೆಚ್ಚಾಗಿದ್ದು ಇದಕ್ಕೆ ಉದಾಹರಣೆ ಎಂದು ಹೊಗಳಿದ್ದಾರೆ.

    ಇಷ್ಟಕ್ಕೆ ನಿಲ್ಲದ ಭಾರತದ ಸಾಧನೆ ಈಗ ಒಲಿಂಪಿಕ್ಸ್‌ ಹಾದಿಯತ್ತ ಸಾಗುತ್ತಿದೆ. 2030ರಲ್ಲಿ ಯುವ ಒಲಿಂಪಿಕ್ಸ್ ಮತ್ತು 2036 ರಲ್ಲಿ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುವ ಸಿದ್ಧತೆ ನಡೆಸುತ್ತಿದೆ ಎಂದು ಮೋದಿ ಮತ್ತೊಮ್ಮೆ ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ಮೀಸಲಾತಿ: ಬೊಮ್ಮಾಯಿ

    ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ಮೀಸಲಾತಿ: ಬೊಮ್ಮಾಯಿ

    ಬೆಂಗಳೂರು: ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್‍ಗೆ ಚಾಲನೆ ನೀಡಿ 2020ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ ಕರ್ನಾಟಕ ಕ್ರೀಡಾ ರತ್ನ ಹಾಗೂ 2021- 22ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

    ಮುಂದಿನ ಪ್ಯಾರೀಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಇವರಲ್ಲಿ ಹಲವರು ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆಲ್ಲಬೇಕೆಂಬುದು ಸರ್ಕಾರದ ಗುರಿಯಾಗಿದೆ. ಗ್ರಾಮೀಣ ಮಟ್ಟದಲ್ಲಿಯೂ ಕ್ರೀಡಾ ಸಾಧನೆಗಳಾಗಬೇಕು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಸರ್ಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ. ಕಬ್ಬಡಿ, ಖೋಖೋ, ಕಂಬಳ, ಎತ್ತಿನಗಾಡಿ ಸ್ಪರ್ಧೆ, ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಚಿಸುತ್ತದೆ. ಗ್ರಾಮಪಂಚಾಯತಿ, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳು ನಡೆಯುತ್ತವೆ. ಗ್ರಾಮಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ ಎಂದರು.

    ಯುವಜನ ಸಬಲೀಕರಣಕ್ಕಾಗಿ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಬಹಳ ಮುಖ್ಯ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಆಗಸ್ಟ್ 15ಕ್ಕೆ ಚಾಲನೆ ನೀಡಲಾಗಿದೆ. ಪ್ರತಿಗ್ರಾಮದಲ್ಲಿ 30 ಜನರ ಯುವಜನರ ಸಂಘವನ್ನು ಗುರುತಿಸಿ, 7.5 ಲಕ್ಷದಿಂದ 10 ಲಕ್ಷದವರೆಗೆ ಯೋಜನೆಗಳನ್ನು ನೀಡಿ, ಸಂಘಕ್ಕೆ 1.5 ಲಕ್ಷದ ಅನುದಾನವನ್ನು ಸರ್ಕಾರವೇ ಭರಿಸಿ, ಉತ್ಪನ್ನಗಳ ತಯಾರಿಕೆಗೆ ತರಬೇತಿ, ತಯಾರಿಕೆ ಹಾಗೂ ಮಾರುಕಟ್ಟೆ ಜೋಡಣೆಯನ್ನು ಕಲ್ಪಿಸುವ ಯೋಜನೆಯಾಗಿದೆ. ಸ್ವಯಂಉದ್ಯೋಗ ಮಾಡಿ ಇತರರಿಗೆ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಿಂದ ಒಂದು ವರ್ಷಕ್ಕೆ ಸುಮಾರು 5 ಲಕ್ಷ ಯುವಕರಿಗೆ ಉದ್ಯೋಗ ಸೃಷ್ಟಿಸಿದಂತಾಗುತ್ತದೆ. ಇದು ವಿನೂತನವಾದ ಯೋಜನೆ. ಆರ್ಥಿಕವಾಗಿ, ಸಾಮಾಜಿಕವಾಗಿ ಯುವಕರ ಸಾಮರ್ಥ್ಯವನ್ನು ಹೆಚ್ಚಿಸುವಂತಹ ಕೆಲಸವನ್ನು ಸರ್ಕಾರ ನಿರಂತರವಾಗಿ ಮಾಡುತ್ತದೆ ಎಂದರು.

    ಕರಾವಳಿಯ ಕಂಬಳ, ಉತ್ತರ ಕರ್ನಾಟಕದ ಚಕ್ಕಡಿ ಹೊಡೆಯುವ ಸ್ಪರ್ಧೆ, ಕುಸ್ತಿ, ಸೈಕಲ್, ಮೋಟರ್ ಸೈಕಲ್, ಕಾರ್ ರ‍್ಯಾಲಿಗಳು, ಗಾಲ್ಫ್, ವಾಲಿಬಾಲ್ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಕನ್ನಡದ ಯುವಕರು ಯಶಸ್ಸಿನ ಉತ್ತುಂಗಕ್ಕೆ ಏರಬೇಕು. ಸೀನಿಯರ್ ಒಲಂಪಿಕ್ಸ್ ಏರ್ಪಡಿಸಲು ರಾಜ್ಯ ಸರ್ಕಾರ 8 ಕೋಟಿ ರೂ.ಗಳನ್ನು ನೀಡಿದೆ. ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಗುರಿ ರಾಜ್ಯ ಸರ್ಕಾರಕ್ಕಿದೆ. ಕ್ರೀಡೆಯ ತರಬೇತುದಾರರಿಗೆ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದರು. ಇದನ್ನೂ ಓದಿ: ಸರ್ಕಾರ ಕೊಟ್ಟ ಮಾತಿಗೆ ತಪ್ಪಿ ಜನರ ನಂಬಿಕೆಗೆ ದ್ರೋಹ ಎಸಗಿದೆ, ಇದು ವಚನ ವಂಚನೆ: ಸಿದ್ದರಾಮಯ್ಯ

    ಧ್ಯಾನ್ ಚಂದ್ ಅವರು ಒಲಿಂಪಿಕ್ಸ್‌ನಲ್ಲಿ ಮೂರು ಬಾರಿ ಚಿನ್ನದ ಪದಕ ಗೆದ್ದು, ಭಾರತಕ್ಕೆ ಕೀರ್ತಿ ತಂದವರು. ಹಾಕಿಯ ಜಾದೂಗಾರರಾಗಿದ್ದ ಅವರು ಹಾಕಿಯನ್ನು ಅಗ್ರಮಾನ್ಯ ಸ್ಥಾನಕ್ಕೆ ತಂದವರು. ಧ್ಯಾನ್ ಚಂದ್ ಅವರ ಹೆಸರಿನಲ್ಲಿ ಖೇಲ್‍ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ನೀಡಲಾಗುವ ಏಕಲವ್ಯ ಪ್ರಶಸ್ತಿ, ಕ್ರೀಡಾರತ್ನ ಪ್ರಶಸ್ತಿ, ನಗದು ಪ್ರಶಸ್ತಿ ನೀಡಲಾಗುತ್ತಿದೆ. ಕ್ರೀಡಾಕ್ಷೇತ್ರದಲ್ಲಿನ ತಮ್ಮ ಶ್ರಮ, ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ನಿಮ್ಮ ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಭಾರತದಲ್ಲಿ ಶೇ. 46ರಷ್ಟು ಜನಸಂಖ್ಯೆ ಯುವಜನರಿದ್ದಾರೆ. ಮುಂದಿನ 25 ವರ್ಷಗಳು ಭಾರತದ ಭವಿಷ್ಯ ಈ ಯುವಜನತೆಯ ಮೇಲಿದೆ ಎಂದು ತಿಳಿಸಿದರು.

    ಯುವಕರಲ್ಲಿ ಶಿಸ್ತು, ವ್ಯಕ್ತಿತ್ವದಿಂದ ಯಶಸ್ಸು ಬರುತ್ತದೆ. ಕಠಿಣ ಪರಿಶ್ರಮಗಳಿಂದ ಹೆಚ್ಚಿನ ಗುರಿಗಳನ್ನು ಸಾಧಿಸುತ್ತಿರಬೇಕು. ಗೆಲ್ಲಬೇಕೆಂದು ಆಡಬೇಕೇ ಹೊರತು ಸೋಲಬಾರದು ಎಂದು ಆಟವಾಡಬಾರದು. ಗೆಲ್ಲಬೇಕೆಂಬ ಹುರುಪಿನಿಂದ ಸಕಾರಾತ್ಮಕವಾಗಿ ಆಡಬೇಕು ಆತ್ಮವಿಶ್ವಾಸದಿಂದ ನಿಮ್ಮ ಮೇಲೆ ನಂಬಿಕೆಯಿರಿಸಿ. ಯುವಕರು ಸಾಧನೆಗಳನ್ನು ಮಾಡಿದಾಗ ಹುರಿದುಂಬಿಸಿದರೆ, ಇನ್ನಷ್ಟು ಸಾಧನೆಗಳಿಗೆ ಪ್ರೋತ್ಸಾಹಿಸಿದಂತಾಗುತ್ತದೆ. ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್, ಹಿಮಾಲಯದ ತಪ್ಪಲಿನಲ್ಲಿ ಕುರಿ ಕಾಯುವವರ ಜನಾಂಗದಲ್ಲಿ ಕುರಿ ಕಾಯುತ್ತಿದ್ದ ಸಣ್ಣ ಹುಡುಗ ತೇನ್ ಸಿಂಗ್, ತನ್ನ 42ನೇ ವಯಸ್ಸಿನಲ್ಲಿ ಮೌಂಟ್ ಎವರೆಸ್ಟ್‍ನ್ನು ಹತ್ತಿ ಭಾರತದ ಧ್ವಜವನ್ನು ನೆಟ್ಟ ಕೀರ್ತಿ ಅವರದು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಂಕಲ್ಪವನ್ನು ಯಶಸ್ವಿಯಾಗಿ ಸಾಕಾರಗೊಳಿಸಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಯಶ ಸಾಧಿಸಲು ಮೊದಲು ಧೃಡ ನಿಶ್ಚಯ, ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳು ಯುವಕರಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಮುರುಘಾ ಶ್ರೀ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಲಿದೆ: ಸಿ.ಟಿ ರವಿ

    Live Tv
    [brid partner=56869869 player=32851 video=960834 autoplay=true]

  • ಚೀನಾ ಕಾನೂನು ವಿರುದ್ಧ ಹೇಳಿಕೆ ನೀಡಿದರೆ ಮಾನ್ಯತೆ ರದ್ದು: ಅಥ್ಲೀಟ್‌ಗಳಿಗೆ ಎಚ್ಚರಿಕೆ

    ಚೀನಾ ಕಾನೂನು ವಿರುದ್ಧ ಹೇಳಿಕೆ ನೀಡಿದರೆ ಮಾನ್ಯತೆ ರದ್ದು: ಅಥ್ಲೀಟ್‌ಗಳಿಗೆ ಎಚ್ಚರಿಕೆ

    ಬೀಜಿಂಗ್‌: ಚೀನಾದಲ್ಲಿ ಚಳಿಗಾಲದ ಒಲಿಂಪಿಕ್ಸ್‌ ನಡೆಯುತ್ತಿದ್ದು, ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಚೀನಾದ ಕಾನೂನು ವಿರುದ್ಧ ಯಾವುದೇ ಹೇಳಿಕೆ ನೀಡಿದಂತೆ ಎಚ್ಚರಿಕೆ ನೀಡಿದೆ.

    2008ರ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಈ ರೀತಿಯ ನಿರ್ಬಂಧಗಳನ್ನು ಹೇರಿರಲಿಲ್ಲ. ಆದರೆ ಈ ಬಾರಿ ದೇಶದ ಕಾನೂನು ವಿರುದ್ಧವಾಗಿ ಮಾತನಾಡದಂತೆ ಚೀನಾದ ಅಧಿಕಾರಿಗಳು ಕ್ರೀಡಾಪಟುಗಳಿಗೆ ಎಚ್ಚರಿಕೆ ನೀಡಿದ್ದಾರೆ. ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಚೀನಾದ ಖ್ಯಾತಿಗೆ ಧಕ್ಕೆ ತರಬಹುದು ಎಂಬ ಉದ್ದೇಶದಿಂದ ಸರ್ಕಾರ, ಸ್ಥಳೀಯ ಕಾರ್ಯಕರ್ತರನ್ನು ಗೃಹ ಬಂಧನದಲ್ಲಿ ಇರಿಸಿದೆ. ಇದನ್ನೂ ಓದಿ: ಗಲ್ವಾನ್‌ ಬಳಿಕ ಒಲಿಂಪಿಕ್ಸ್‌ ಜ್ಯೋತಿ ವಿಚಾರದಲ್ಲೂ ಕಿರಿಕ್‌ – ಸಣ್ಣತನ ತೋರಿದ ಚೀನಾ

    ದೇಶದ ಕಾನೂನು ವಿರುದ್ಧ ಮಾತನಾಡಿದರೆ ಅಂತಹ ಕ್ರೀಡಾಪಟುಗಳ ಮಾನ್ಯತೆಯನ್ನೇ ರದ್ದುಗೊಳಿಸಲಾಗುವುದು. ಒಲಿಂಪಿಕ್ಸ್‌ ಸ್ಪೂರ್ತಿಗೆ ವಿರುದ್ಧವಾದ ಯಾವುದೇ ನಡವಳಿಕೆ ಅಥವಾ ಭಾಷಣವು ಚೀನಾದ ಕಾನೂನುಗಳು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿದ್ದು, ಶಿಕ್ಷೆಗೆ ಒಳಪಟ್ಟಿರುತ್ತವೆ ಎಂದು ಬೀಜಿಂಗ್‌ ಸಂಘಟನಾ ಸಮಿತಿಯ ಯಾಂಗ್‌ ಶು ಸ್ಪಷ್ಟಪಡಿಸಿದ್ದಾರೆ.

    ಚೀನಾ ಸರ್ಕಾರದ ದೌರ್ಜನ್ಯ ಅಪರಾಧಗಳು ಮತ್ತು ಇತರೆ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗಳ ಆರೋಪದ ನಡುವೆ ಒಲಿಂಪಿಕ್ಸ್‌ ಆರಂಭವಾಗಿದೆ. ಇದನ್ನೂ ಓದಿ: ಭಾರತಕ್ಕಾಗಿ ಚಿಂತನಶೀಲ ನೀತಿ ಕಾರ್ಯಸೂಚಿ: ಬಜೆಟ್‌ ಬಗ್ಗೆ IMF ಮುಖ್ಯಸ್ಥೆ ಪ್ರತಿಕ್ರಿಯೆ

  • ಒಲಿಂಪಿಕ್ಸ್ ಡೋಪಿಂಗ್ ಪರೀಕ್ಷೆ- 18 ಅಥ್ಲೀಟ್ಸ್ ಅನರ್ಹ

    ಒಲಿಂಪಿಕ್ಸ್ ಡೋಪಿಂಗ್ ಪರೀಕ್ಷೆ- 18 ಅಥ್ಲೀಟ್ಸ್ ಅನರ್ಹ

    ಟೋಕಿಯೋ: ಜಪಾನ್‍ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ನಲ್ಲಿ ಡೋಪಿಂಗ್ ಪರೀಕ್ಷೆಯಲ್ಲಿ 18 ಅಥ್ಲೀಟ್ಸ್ ಗಳು ಅನರ್ಹರಾಗಿದ್ದಾರೆ. ಈಗಾಗಲೇ ಪದಕ ಜಯಿಸಿದವರು ಕೂಡ ಡೋಪಿಂಗ್ ಪರೀಕ್ಷೆಯಲ್ಲಿ ಅನರ್ಹರಾದ ಬಗ್ಗೆ ವರದಿಯಾಗಿದೆ.

    ಪ್ರಮುಖವಾಗಿ ಸ್ವಿಸ್ ಓಟಗಾರ ಅಲೆಕ್ಸ್ ವಿಲ್ಸನ್ ಅನರ್ಹವಾಗಿರುವ ಬಗ್ಗೆ ವರದಿಯಾಗಿದ್ದು, ಅಲೆಕ್ಸ್ ವಿಲ್ಸನ್ ಮೂಲತಃ ಜಮೈಕಾದವರಾಗಿದ್ದು ಪ್ರಸ್ತುತ ಸ್ವಿಸ್ ಪರವಾಗಿ ವೇಗದ ಓಟದ ವಿಭಾಗದಲ್ಲಿ ಪ್ರತಿನಿದಿಸುತ್ತಿದ್ದರು. ಆದರೆ ಇದೀಗ ಒಲಿಂಪಿಕ್ಸ್ ಸಮಿತಿ ನಡೆಸಿದ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲರಾಗಿ ಕೂಟದಿಂದ ಹೊರ ಬಿದ್ದಿದ್ದಾರೆ. ಇದನ್ನೂ ಓದಿ: ಒಲಿಂಪಿಕ್ಸ್ ಕ್ರೀಡಾಪಟುಗಳು ಗೆದ್ದ ಪದಕವನ್ನು ಕಚ್ಚಲು ಇದು ಅಸಲಿ ಕಾರಣ!

    ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಭಾರತದ ಪರ ಪದಕ ಭರವಸೆ ಮೂಡಿಸಿದ್ದ ಮಹಿಳಾ ಬಾಕ್ಸರ್ ಮೇರಿ ಕೋಮ್ ಪ್ರೀ ಕ್ವಾರ್ಟರ್ ಫೈನಲ್‍ನಲ್ಲಿ ಹೊರ ಬಿದ್ದಿದ್ದಾರೆ. 51 ಕೆಜಿ ವಿಭಾಗದಲ್ಲಿ ಕೊಲಂಬಿಯಾದ ಇಂಗ್ರಿಟ್ ವೆಲೆನ್ಸಿಯಾ ವಿರುದ್ಧ 16 ಸುತ್ತು ಸೆಣಸಿ, 2-3 ಅಂತರದಲ್ಲಿ ಸೋಲನ್ನಪ್ಪಿದ್ದಾರೆ. ಇನ್ನುಳಿದಂತೆ ಪುರುಷರ ಹಾಕಿ ತಂಡ ಅರ್ಜೇಂಟೀನಾ ವಿರುದ್ಧ 3-1 ಗೋಲ್‍ಗಳಿಂದ ಜಯಿಸಿ ಕ್ವಾರ್ಟರ್ ಫೈನಲ್‍ಗೆ ಲಗ್ಗೆ ಇಟ್ಟಿದೆ. ಆದರೆ, ಮಹಿಳೆಯರ ತಂಡ ಬ್ರಿಟನ್ ವಿರುದ್ಧ 1-4 ಗೋಲ್‍ಗಳಿಂದ ಸೋಲಪ್ಪಿ ನಿರಾಸೆ ಅನುಭವಿಸಿದೆ.

    ಬ್ಯಾಡ್ಮಿಂಟನ್‍ನಲ್ಲಿ ಪಿವಿ ಸಿಂಧೂ, 91 ಕೆಜಿ ವಿಭಾಗದ ಬಾಕ್ಸಿಂಗ್‍ನಲ್ಲಿ ಸತೀಶ್‍ಕುಮಾರ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಶೂಟಿಂಗ್‍ನಲ್ಲಿ ಮನು ಬಾಕರ್, ಆರ್ಚರಿಯಲ್ಲಿ ಅತನುದಾಸ್ ಪ್ರೀ ಕ್ವಾರ್ಟರ್ ಫೈನಲ್ ತಲುಪಿದ್ದು, ಭಾರತಕ್ಕೆ ಪದಕ ಭರವಸೆ ಮೂಡಿಸಿದ್ದಾರೆ.

  • ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ರೆ ಕೋಚ್, ಕ್ರೀಡಾಪಟುವಿಗೆ ಸಿಗಲಿದೆ ನಗದು ಬಹುಮಾನ

    ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ರೆ ಕೋಚ್, ಕ್ರೀಡಾಪಟುವಿಗೆ ಸಿಗಲಿದೆ ನಗದು ಬಹುಮಾನ

    ಟೋಕಿಯೋ: ಜಪಾನ್‍ನಲ್ಲಿ ನಡೆಯುತ್ತಿರುವ ಟೋಕಿಯೋ  ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ ಮತ್ತು ಅವರ ತರಬೇತುದಾರರಿಗೆ ಭಾರೀ ಮೊತ್ತದ ನಗದು ಬಹುಮಾನವನ್ನು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್(ಐಒಎ) ಘೋಷಿಸಿದೆ.

    ಒಲಿಂಪಿಕ್ಸ್‍ನಲ್ಲಿ ಭಾಗವಹಿಸಿರು ಭಾರತೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚು ಯಾವುದೇ ಪದಕ ಗೆದ್ದರೂ ಕೂಡ ನಗದು ಬಹುಮಾನ ಘೋಷಿಸಿದ್ದ ಐಒಎ ಇದೀಗ ಅಥ್ಲೀಟ್ಸ್ ಜೊತೆ ಅವರ ಕೋಚ್‍ಗಳಿಗೂ ಕೂಡ ನಗದು ಬಹುಮಾನವನ್ನು ಘೋಷಿಸಿದೆ.

    ಟೋಕಿಯೋ ಒಲಿಂಪಿಕ್ಸ್‌ನ ಮಹಿಳೆಯರ 49 ಕೆಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು ಅವರ ಕೋಚ್ ವಿಜಯ್ ಶರ್ಮಾ ಅವರಿಗೆ 10ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದೆ. ಇದನ್ನೂ ಓದಿ: ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿದ್ದು ಅತೀವ ಆನಂದ ನೀಡಿದೆ: ಮೀರಾಬಾಯಿ ಚಾನು

    ಇದಲ್ಲದೆ ಇನ್ನೂ ಮುಂದೆ ಚಿನ್ನದ ಪದಕ ಗೆದ್ದ ಕ್ರೀಡಾಪಟುಗಳ ಕೋಚ್‍ಗಳಿಗೆ 12.5 ಲಕ್ಷ ರೂಪಾಯಿ, ಬೆಳ್ಳಿ ಗೆದ್ದರೆ 10 ಲಕ್ಷ ರೂಪಾಯಿ ಮತ್ತು ಕಂಚು ಗೆದ್ದರೆ 7.5 ಲಕ್ಷ ರೂಪಾಯಿ ಕೊಡುವುದಾಗಿ ಐಒಎ ತಿಳಿಸಿದೆ.

    ಈ ಕುರಿತು ಮಾತನಾಡಿದ ಐಒಎನ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಅವರು, ಪದಕ ಗೆಲ್ಲುವ ಕ್ರೀಡಾಪಟುಗಳೊಂದಿಗೆ ಅವರ ಕೋಚ್‍ಗಳಿಗೂ ನಗದು ಬಹುಮಾನವನ್ನು ಘೋಷಿಸಲಾಗಿದ್ದು, ಪ್ರತಿದಿನ ಕ್ರೀಡಾಪಟುಗಳೊಂದಿಗೆ ಅವರ ಕೋಚ್‍ಗಳು ಕೂಡ ಶ್ರಮ ವಹಿಸುತ್ತಾರೆ. ಹಾಗಾಗಿ ಅವರಿಗೂ ಕೂಡ ಗೌರವಿಸಲು ನಿರ್ಧರಿಸಿದ್ದೇವೆ ಎಂದರು.

    ಈ ಹಿಂದೆ ರಾಷ್ಟ್ರೀಯ ಫೆಡರೇಶನ್(ಎನ್‍ಎಸ್‍ಎಫ್) ಚಿನ್ನದ ಪದಕ ಗೆಲ್ಲುವ ಕ್ರೀಡಾಪಟುವಿಗೆ 25 ಲಕ್ಷ ರೂಪಾಯಿ ಬೋನಸ್ ಜೊತೆ 75 ಲಕ್ಷ ರೂಪಾಯಿ ನಗದು, ಬೆಳ್ಳಿ ಪದಕ ಗೆದ್ದವರಿಗೆ 40 ಲಕ್ಷ ರೂಪಾಯಿ ಮತ್ತು ಕಂಚಿನ ಪದಕ ಗೆದ್ದವರಿಗೆ 25 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿತ್ತು. ಈ ಮೂಲಕ ಭಾರತದ ಪದಕ ವಿಜೇತರಿಗೆ ಇನ್ನಷ್ಟು ಹುರುಪನ್ನು ಮೂಡಿಸಿದೆ.

  • ಟೋಕಿಯೋ ಒಲಿಂಪಿಕ್ಸ್: ಈ ಬಾರಿ ಪದಕಕ್ಕೆ ಕೊರಳೊಡ್ಡುವಂತಿಲ್ಲ ತಾವೇ ಧರಿಸಿಕೊಂಡರಾಯಿತು!

    ಟೋಕಿಯೋ ಒಲಿಂಪಿಕ್ಸ್: ಈ ಬಾರಿ ಪದಕಕ್ಕೆ ಕೊರಳೊಡ್ಡುವಂತಿಲ್ಲ ತಾವೇ ಧರಿಸಿಕೊಂಡರಾಯಿತು!

    ಟೋಕಿಯೋ: ವಿಶ್ವದ ಸಾವಿರಾರು ಕ್ರೀಡಾಪಟುಗಳು ಒಂದೆಡೆ ಸೇರುವ ಕ್ರೀಡಾ ಜಾತ್ರೆ ಜಪಾನ್‍ನ ಟೋಕಿಯೋದಲ್ಲಿ ಆರಂಭವಾಗಿದೆ. ಈ ಬಾರಿಯ ಒಲಿಪಿಂಕ್ಸ್ ಹಲವು ವಿಶೇಷತೆಯಿಂದ ಕೂಡಿದ್ದು, ಪ್ರಮುಖವಾಗಿ ಹಿಂದಿದ್ದಂತಹ ವಿಜಯ ವೇದಿಕೆಯ ಸಂಭ್ರಮ ಈ ಬಾರಿ ಸ್ವಲ್ಪ ಕಳೆಗುಂದಲಿದೆ.

    ಈ ಹಿಂದಿನ ಎಲ್ಲಾ ಒಲಿಂಪಿಕ್ಸ್ ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ವಿಜಯ ವೇದಿಕೆಗೆ ಏರಿ ಸಂಭ್ರಮ ಪಡುತ್ತಿದ್ದರು. ಆದರೆ ಈ ಬಾರಿ ವಿಜಯ ವೇದಿಕೆಯ ಸಂಭ್ರಮ ಅಷ್ಟು ಸಿಗಲಾರದು. ಪ್ರತಿ ವರ್ಷ ವಿಜೇತರು ವಿಜಯವೇದಿಕೆ ಏರಿ ಪದಕ್ಕಾಗಿ ಕೊರಳೊಡ್ಡುತ್ತಿದ್ದರು. ಅತಿಥಿಗಳು ಪದಕ ಪ್ರಧಾನ ಮಾಡುತ್ತಿದ್ದರು. ಆದರೆ ಈ ಭಾರಿ ವಿಜೇತರೆ ತಮ್ಮ ಕೊರಳಿಗೆ ತಮ್ಮ ಪದಕ ಧರಿಸುವಂತಾಗಿದೆ. ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್-21ನೇ ಕ್ರಮಾಂಕದಲ್ಲಿ ಧ್ವಜ ಹಿಡಿದು ಆಗಮಿಸಿದ ಭಾರತ ತಂಡ

    ಹೌದು ಕೊರೊನಾದಿಂದಾಗಿ ಒಂದು ವರ್ಷಗಳ ಬಳಿಕ ಆರಂಭವಾದ ಟೋಕಿಯೋ ಒಲಿಂಪಿಕ್ಸ್ ಗೆ ಕೊರೊನಾ ಕಾಟ ಕೊಡುತ್ತಿದೆ. ಹಲವು ದೇಶದ ಕ್ರೀಡಾಪಟುಗಳು ಅಂತಿಮ ಕ್ಷಣದಲ್ಲಿ ಕೊರೊನಾದಿಂದಾಗಿ ಹೊರ ಬಿದ್ದಿದ್ದಾರೆ. ಈ ನಡುವೆ ಹೊಸ ನಿಯಮದಂತೆ ಈ ಬಾರಿ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಒಲಿಂಪಿಕ್ಸ್ ನಡೆಸಲು ಒಲಿಂಪಿಕ್ಸ್ ಮಂಡಳಿ ನಿರ್ಧರಿಸಿದೆ. ಹಾಗಾಗಿ ಪ್ರತಿವರ್ಷದಂತೆ ಇದ್ದಂತಹ ವಿಜಯ ವೇದಿಕೆಯ ಸಂಭ್ರಮ ಈ ಬಾರಿ ಕಾಣಸಿಗದಾಗಿದೆ.

    ಈ ಹಿಂದೆ ಪದಕ ಗೆದ್ದ ಅಥ್ಲೀಟ್ಸ್‍ಗಳು ಬಂದು ವಿಜಯ ವೇದಿಕೆಗೆ ಏರಿ ಅಲ್ಲಿ ಅತಿಥಿಗಳಿಂದ ಪದಕ ಹಾಕಿಸಿಕೊಂಡು ಕೈ ಕುಲುಕಿ, ಅಪ್ಪಿಕೊಂಡು ಸಂಭ್ರಮಪಡುತ್ತಿದ್ದರು. ಆದರೆ ಈ ಬಾರಿ ಈ ಸಂಭ್ರಮವಿಲ್ಲ. ಪದಕ ಗೆದ್ದವರು ಸಾಮಾಜಿಕ ಅಂತರ ಕಾಯ್ದುಕೊಂಡು ರೂಪಿಸಿರುವ ವಿಜಯ ವೇದಿಕೆಯ ಬಳಿ ತೆರಳಿ ಮುಂದೆ ಇಟ್ಟಿರುವ ಮೂರು ಪದಕಗಳಲ್ಲಿ ತಮಗೆ ಸಿಕ್ಕಿರುವ ಪದಕ ಧರಿಸಿ ನಿಲ್ಲಬೇಕು. ಇದನ್ನು ಹೊರತು ಪಡಿಸಿ ಸಹ ವಿಜೇತರಿಗೂ ಕೂಡ ಕ್ರೀಡಾಪಟುಗಳು ಕೈ ಕುಲುಕಿ ಅಭಿನಂದಿಸುವ ಕ್ರಮವನ್ನು ನಿಷೇಧಿಸಲಾಗಿದೆ. ಹಾಗಾಗಿ ಈ ಬಾರಿ ವಿಜಯ ವೇದಿಕೆ ತನ್ನ ಹಳೆಯ ಖದರ್, ಕಳೆದುಕೊಂಡಂತಾಗಿದೆ.

  • ಪ್ಯಾರಾ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಆಹಾರ ಕಿಟ್ ವಿತರಣೆ

    ಪ್ಯಾರಾ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಆಹಾರ ಕಿಟ್ ವಿತರಣೆ

    ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರವನ್ನು ಪ್ಯಾರಾ ಒಲಿಂಪಿಕ್ಸ್ ಕ್ರೀಡೆಯಲ್ಲಿ ಪ್ರತಿನಿಧಿಸೋ ವಿಕಲಚೇತನ ಕ್ರೀಡಾಪಟುಗಳಿಗೆ ಲಾಕ್‍ಡೌನ್ ನಿಂದ ಮನೆಯಲ್ಲೇ ಕೂರುವ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಅವರಿಗೆ ಸಂಸ್ಥೆಯೊಂದು ಫುಡ್ ಕಿಟ್ ವಿತರಣೆ ಮಾಡಿ ಮಾನವೀಯತೆ ಮೆರೆದಿದೆ.

    ರಾಜ್ಯ ಸರ್ಕಾರ ನೀಡಬೇಕಾಗಿದ್ದ ಪಿಂಚಿಣಿ ಹಣವನ್ನು ನೀಡಿಲ್ಲ. ರಾಜ್ಯದ ಹೆಸರನ್ನ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಗೊಳಿಸಿರೋ ಇವರಿಗೆ ಪ್ರೋತ್ಸಾಹ ಹಣ ಸಿಕ್ಕಿಲ್ಲ. ಹಣವಿಲ್ಲದೇ ಜೀವನ ನಡೆಸುವುದೇ ದುಸ್ತರವಾಗಿದೆ. ಇತಂಹ ಸಮಯಲ್ಲಿ ವಿಜಯನಗರದ ಮ್ಯಾಟ್ರಿಕ್ಸ್ ಫಿಟ್ನೇಸ್ ಮಾಲೀಕರಾದ ನವೀನ್ ಮತ್ತು ಎನರ್ಜಿಟಿಕ್ ಗ್ರೀನ್ ಸಂಸ್ಥೆಯ ಅನೂಪ ರೆಡ್ಡಿ ಅವ್ರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ಯಾರಾ ಕ್ರೀಡಾಪಟುಗಳಿಗೆ ಆಹಾರ ಕಿಟ್ ವಿತರಣೆ ಮಾಡಿದ್ದಾರೆ. ಇದನ್ನೂ ಓದಿ:  ಚಾರ್ಮಾಡಿ ಘಾಟಿಯಲ್ಲಿ ಮಂಗಗಳಿಗೆ ಬಾಳೆ ಹಣ್ಣು ನೀಡಿದ ಕಟೀಲ್

    ಲಾಕ್‍ಡೌನ್ ಸಮಯದಲ್ಲಿ ಮ್ಯಾಟ್ರಿಕ್ಸ್ ಫಿಟ್ನೇಸ್, ಎನರ್ಜಿಟಿಕ್ ಗ್ರೀನ್ ಸಂಸ್ಥೆಯ ಮಾಲೀಕರು ಸೇರಿಕೊಂಡು ಸಮಾಜದ ಕಡುವಬಡವರಿಗೆ ಇಲ್ಲಿವರೆಗೆ 1000ಕ್ಕೂ ಹೆಚ್ಚು ಆಹಾರದ ಕಿಟ್ಗಳನ್ನ ವಿತರಣೆ ಮಾಡಿದ್ದಾರೆ.  ಪ್ಯಾರಾ ಒಲಿಂಪಿಕ್ಸ್ ಕ್ರೀಡಾಪಟುಗಳಿಗೂ ಆಹಾರ ಕಿಟ್ ವಿತರಣೆ ಮಾಡಿದ್ದಾರೆ.

    ರಾಜ್ಯ ಸರ್ಕಾರ ಇತರ ವರ್ಗದವರಿಗೆ ನೀಡಿದಂತೆ ವಿಶೇಪ ಪ್ಯಾಕೇಜ್ ಅನ್ನ ವಿಕಲಾಂಗಚೇತನರಿಗೂ ವಿಶೇಷ ಪ್ಯಾಕೇಜ್ ನೀಡಿಬೇಕು ಅಂತಾ ವಿಕಲಚೇತನ ಕ್ರೀಡಾಪಟುಗಳು ಒತ್ತಾಯ ಮಾಡಿದ್ದಾರೆ. ಜೊತೆಗೆ ಇತಂಹ ಸಮಯದಲ್ಲಿ ನಿಮ್ಮ ನಿಮ್ಮ ಕೈಲಾದ ಸಹಾಯವನ್ನ ಮಾಡಿ ಎಂದು ನವೀನ್ ಹಾಗೂ ಅನೂಪ ರೆಡ್ಡಿ ಹೇಳಿದ್ದಾರೆ.

  • ಕೊಹ್ಲಿ, ಸಚಿನ್, ಗಂಗೂಲಿ ಸೇರಿದಂತೆ 40 ಕ್ರೀಡಾಪಟುಗಳ ಜೊತೆ ಮೋದಿ ಸಭೆ

    ಕೊಹ್ಲಿ, ಸಚಿನ್, ಗಂಗೂಲಿ ಸೇರಿದಂತೆ 40 ಕ್ರೀಡಾಪಟುಗಳ ಜೊತೆ ಮೋದಿ ಸಭೆ

    – ಕ್ರೀಡಾಪಟುಗಳ ಕೆಲಸವನ್ನು ಹಾಡಿಹೊಗಳಿದ ಪಿಎಂ

    ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಸುಮಾರು 40 ಜನ ಕ್ರೀಡಾಪುಟಗಳ ಜೊತೆ ಪ್ರಧಾನಿ ಮೋದಿ ಅವರು ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.

    ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಮಾರ್ಚ್ 24ರಂದು 21 ದಿನಗಳ ಲಾಕ್‍ಡೌನ್ ಜಾರಿಗೊಳಿಸಿದ ನಂತರ ಮೋದಿ ಅವರು ಕ್ರೀಡಾಪಟುಗಳ ಜೊತೆ ಇದೇ ಮೊದಲ ಬಾರಿಗೆ ಸಂವಹನ ನಡೆಸಿದ್ದಾರೆ. ಈ ಸಭೆಯಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ದೇಶದ ಪರಿಸ್ಥಿತಿ ಮತ್ತು ಲಾಕ್‍ಡೌನ್‍ನಿಂದ ಆಗಿರುವ ಪರಿಣಾಮಗಳ ಬಗ್ಗೆ ಕ್ರೀಡಾಪಟುಗಳ ಜೊತೆ ಚರ್ಚೆ ಮಾಡಿದ್ದಾರೆ.

    ಈ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಕೊಹ್ಲಿ, ಸಚಿನ್ ಮತ್ತು ಗಂಗೂಲಿಯವರ ಜೊತೆ, ಓಟಾಗಾರ್ತಿ ಪಿಟಿ ಉಷಾ, ಬ್ಯಾಡ್ಮಿಂಟನ್ ಆಟಗಾರ ಪುಲ್ಲೇಲಾ ಗೋಪಿಚಂದ್, ಚೆಸ್ ಆಟಗಾರ ವಿಶ್ವನಾಥನ್ ಆನಂದ್, ರನ್ನರ್ ಹಿಮಾ ದಾಸ್, ಕುಸ್ತಿಪಟು ಭಜರಂಗ್ ಪುನಿಯಾ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು, ಕ್ರಿಕೆಟಿಗರಾದ ರೋಹಿತ್ ಶರ್ಮಾ, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್ ಮತ್ತು ಚೇತೇಶ್ವರ ಪೂಜಾರ ಇತರ ಪ್ರಮುಖ ಕ್ರೀಡಾಪಟುಗಳು ಇದ್ದರು.

    ಈ ಸಮಯದಲ್ಲಿ ಕ್ರೀಡಾಪಡುಗಳು ರಾಷ್ಟ್ರಕ್ಕಾಗಿ ಮೈದಾನದಲ್ಲಿ ಪಡುವ ಕಷ್ಟವನ್ನು ಮೋದಿ ಅವರು ಶ್ಲಾಘಿಸಿದ್ದಾರೆ. ಇದರ ಜೊತೆಗೆ ಕ್ರೀಡಾಪಟುಗಳು ಈಗ ದೇಶದಲ್ಲಿ ಜನರಲ್ಲಿ ಸಾಮಾಜಿಕ ಅಂತರದ ಬಗ್ಗೆ ಮತ್ತು ಈಗಿನ ಪರಿಸ್ಥಿತಿಯ ಬಗ್ಗೆ ತಿಳಿ ಹೇಳುವ ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ಸರ್ಕಾರ ಮಾಡಿರುವ ನಿಯಮಗಳನ್ನು ಜನರು ಪಾಲಿಸುವಂತೆ ಮಾಡಬೇಕು ಎಂದು ಕ್ರೀಡಾಪಟುಗಳಿಗೆ ಕೇಳಿಕೊಂಡಿದ್ದಾರೆ.

    ಕೊರೊನಾ ವೈರಸ್ ನಿಂದ ಉಂಟಾಗುವ ಪರಿಸ್ಥಿತಿಯ ಬಗ್ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕ್ರೀಡಾಪಟುಗಳೊಂದಿಗೆ ಸಂವಹನ ನಡೆಸಿ ನಂತರ ಟ್ವೀಟ್ ಮಾಡಿರುವ ಮೋದಿ ಅವರು, ಕ್ರೀಡೆಗಳಲ್ಲಿ ಸ್ವಯಂ-ಶಿಸ್ತು, ಸ್ಥಿರತೆ, ತಂಡದ ಕೆಲಸ ಮತ್ತು ಹೋರಾಟದ ಮನೋಭಾವ ಬೇಕು. ಹಾಗೇಯೆ ಕೊರೊನಾ ವೈರಸ್ ಅನ್ನು ಸೋಲಿಸಲು ಇವುಗಳ ಅಗತ್ಯ ನಮಗಿದೆ ಎಂದಿದ್ದಾರೆ.

    ಇದರ ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಮೋದಿ, ಫಿಟ್‍ನೆಸ್‍ನ ಮಹತ್ವವನ್ನು ಸಾರುವ ವಿಡಿಯೋಗಳನ್ನು ಹಂಚಿಕೊಳ್ಳುವುದರಿಂದ, ಬಡವರಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡುವುದರಿಂದ, ಸಾಮಾಜಿಕ ಅಂತರಕ್ಕೆ ಒತ್ತು ನೀಡಿ ಜೊತೆಗೆ ಪಿಎಂ ಕೇರ್ಸ್ ನಂತಹ ಪ್ರಯತ್ನಗಳಿಗೆ ಸಹಕರಿಸಿ ನಮ್ಮ ಕ್ರೀಡಾಪಟುಗಳು ಭಾರತವನ್ನು ಕೊರೊನಾದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

  • ಎಲ್ಲದಕ್ಕೂ ದುಡ್ಡು ಕೇಳ್ತಾರೆ – ಕೆಆರ್‌ಎಸ್‌ಎ ಮೇಲೆ ಭ್ರಷ್ಟಾಚಾರ ಆರೋಪ

    ಎಲ್ಲದಕ್ಕೂ ದುಡ್ಡು ಕೇಳ್ತಾರೆ – ಕೆಆರ್‌ಎಸ್‌ಎ ಮೇಲೆ ಭ್ರಷ್ಟಾಚಾರ ಆರೋಪ

    ಬೆಂಗಳೂರು: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್(ಕೆಆರ್‌ಎಸ್‌ಎ) ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಅಸೋಸಿಯೇಷನ್ ಜನರಲ್ ಸೆಕ್ರೆಟರಿ ಕ್ರೀಡಾಪಟುಗಳಿಂದ ಹಣ ಪಡೆಯುತ್ತಾರೆ. ಸರ್ವಾಧಿಕಾರಿಯ ರೀತಿ ವರ್ತನೆ ಮಾಡುತ್ತಾರೆ ಎಂದು ಆರೋಪಿಸಲಾಗುತ್ತಿದೆ.

    ಅಸೋಸಿಯೇಷನ್‍ಗೆ ಪಿಕೆ ಭರತ್ ಕುಮಾರ್ ಜನರಲ್ ಸೆಕ್ರೆಟರಿಯಾಗಿ 11 ವರ್ಷದಿಂದ ಇದ್ದಾರೆ. ಇವರು ಮಕ್ಕಳ ಬಳಿಯೇ ದುಡ್ಡು ತೆಗೆದುಕೊಂಡು ದಂಧೆ ಮಾಡುತ್ತಿದ್ದಾರೆ. 10 ವರ್ಷಗಳಿಂದ ಅಸೋಸಿಯೇಷನ್‍ನಲ್ಲಿ ಎಲೆಕ್ಷನ್ ನಡೆಸದೇ ಸರ್ವಾಧಿಕಾರಿಯ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ 22 ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷರು ಪ್ರತಿಭಟನೆ ಮಾಡಿದರು.

    ಭರತ್ ಕುಮಾರ್ ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ . 1976ರಲ್ಲಿ ಅಸೋಸಿಯೇಷನ್ ಶುರುವಾಗಿದೆ. 1976- 1986ರವರೆಗೂ ಅಸೋಸಿಯೇಷನ್‍ನ ಎಲ್ಲಾ ದಾಖಲೆಗಳಮನ್ನು ಸಲ್ಲಿಸಲಾಗಿದೆ. ಆದರೆ 1986ರಿಂದ ಇಲ್ಲಿಯವರೆಗೂ ಯಾವುದೇ ದಾಖಲೆಯನ್ನ ಸಲ್ಲಿಸಿಲ್ಲ. ಈ ಮೂಲಕ ವರ್ಷಕ್ಕೆ 1 ಕೋಟಿಗೂ ಹೆಚ್ಚು ಹಣವನ್ನ ಲಪಟಾಯಿಸುತ್ತಿದ್ದಾರೆ. ಮಕ್ಕಳು ಕೊಡುವ ರಿಜಿಸ್ಟ್ರೇಷನ್ ಫೀಸ್ ಅನ್ನು ಸಹ ಬಳಸಿಕೊಂಡಿದ್ದಾರೆ. ಸೊಸೈಟಿ ಅಕ್ಟ್ 1960ರ ಪ್ರಕಾರ ಲೆಕ್ಕಪತ್ರ, ಆಕ್ಟಿವಿಟಿ ರಿಪೋರ್ಟ್ ಪ್ರತಿ ವರ್ಷ ಸಲ್ಲಿಕೆ ಮಾಡದೇ ಮಕ್ಕಳ ಕ್ರೀಡಾ ಭವಿಷ್ಯವನ್ನ ಭರತ್ ಕುಮಾರ್ ಹಾಳು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಅಸೋಸಿಯೇಷನ್‍ನಲ್ಲಿ 4 ವರ್ಷಕ್ಕೊಮ್ಮೆ ಚುನಾವಣೆ ನಡೆಯಬೇಕು. ಆದರೆ ಯಾವ ಚುನಾವಣೆಯೂ ನಡೆಸಿಲ್ಲ. ಕಾರ್ಯದರ್ಶಿ ಪಿಕೆ ಭರತ್ ಕುಮಾರ್ ಸರ್ವಾಧಿಕಾರಿ ರೀತಿ ವರ್ತಿಸುತ್ತಿದ್ದಾರೆ. ಅಧ್ಯಕ್ಷರಾದ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ್ ಅವರ ಸಹಕಾರ ಬಳಸಿಕೊಂಡು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮಕ್ಕಳ ಭವಿಷ್ಯ ಇವರಿಂದಾಗಿ ಹಾಳಾಗುತ್ತಿದೆ. ಮಕ್ಕಳಿಗೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಸಿಗದ ರೀತಿ ಇವರು ಮಾಡ್ತಿದ್ದಾರೆ. ನ್ಯಾಷನಲ್ ಸರ್ಟಿಫಿಕೇಟ್ ಕೊಡಬೇಕು ಅಂದರೆ ದುಡ್ಡು ಕೊಡಬೇಕು. ಎಲ್ಲದಕ್ಕೂ ದುಡ್ಡು, ದುಡ್ಡು ಅಂತ ಮಕ್ಕಳ ಪ್ರತಿಭೆಗಳನ್ನ ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

    ಈ ಹಿಂದೆ ಬೆಂಗಳೂರು ಜಿಲ್ಲೆಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಭರತ್ ಕುಮಾರ್ ಭ್ರಷ್ಟಾಚಾರದ ಬಗ್ಗೆ ಪ್ರಶ್ನೆ ಮಾಡಿತ್ತು. ಪ್ರಶ್ನೆ ಮಾಡಿದ್ದಕ್ಕೆ ಬೆಂಗಳೂರನ್ನ 4 ಝೋನ್ ಮಾಡಲು ಭರತ್ ಕುಮಾರ್ ಮುಂದಾಗಿದ್ದಾರೆ. ಇವರ ದಾಂಧಲೆ ಹೆಚ್ಚಾಗಿದ್ದರಿಂದ ನಾವು ಪ್ರತಿಭಟನೆ ಹಾದಿ ತುಳಿದಿದ್ದೇವೆ. ನಮಗೆ ನ್ಯಾಯ ಬೇಕು, ಪಿಕೆ ಭರತ್ ಕುಮಾರ್ ರಾಜೀನಾಮೆ ನೀಡಬೇಕು. ಕೂಡಲೇ ಚುನಾವಣೆಯಾಗಬೇಕು. ಭರತ್ ಕುಮಾರ್ ಅವರು ಮನೆಯಲ್ಲೇ ಸಭೆ ಮಾಡಿ ತೀರ್ಮಾನಗಳನ್ನ ತೆಗೆದುಕೊಳ್ಳುತ್ತಿದ್ದಾರೆ. ಅದನ್ನ ಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.