Tag: Athletes

  • ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದು ಕ್ಷಮೆ ಕೇಳಿದ ಆರ್.ವಿ.ದೇಶಪಾಂಡೆ

    ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದು ಕ್ಷಮೆ ಕೇಳಿದ ಆರ್.ವಿ.ದೇಶಪಾಂಡೆ

    ಬೆಂಗಳೂರು: ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದಿದ್ದ ಉತ್ತರ ಕನ್ನಡ ಜಿಲ್ಲೆಯ ಉಸ್ತವಾರಿ ಸಚಿವ ಆರ್.ವಿ.ದೇಶಪಾಂಡೆ ಕ್ಷಮೆ ಕೇಳಿದ್ದಾರೆ.

    ಸ್ಥಳಾವಕಾಶ ಕಡಿಮೆ ಇದ್ದಿದ್ದರಿಂದ ವೇದಿಕೆ ಮೇಲೇ ನಿಂತು ಕ್ರೀಡಾಪಟುಗಳತ್ತ ಕಿಟ್ ಎಸೆದಿದ್ದೇನೆ ಎಂದು ಸಚಿವರು ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.

    ಆಗಿದ್ದೇನು?: ಜಿಲ್ಲೆಯ ಹಳಿಯಾಳದಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ನೂತನ ಒಳಾಂಗಣ ಕ್ರೀಡಾಂಗಣ ಕಟ್ಟಡ ಉದ್ಘಾಟನೆ ಆಯೋಜಿಸಲಾಗಿತ್ತು. ಜೊತೆಗೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಿದ ಕ್ರೀಡಾ ಪಟುಗಳು ಹಾಗೂ ಸಂಘಗಳಿಗೆ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆದಿತ್ತು.

    ಕಾರ್ಯಕ್ರಮದ ಬಳಿಕ ಸಚಿವರು ಕ್ರೀಡಾಪಟುಗಳಿಗೆ ವಿವಿಧ ಸಾಮಗ್ರಿಗಳನ್ನು ವಿತರಿಸಲು ಮುಂದಾಗಿದ್ದರು. ಆಗ ಸಾಮಗ್ರಿಗಳನ್ನು ಪಡೆಯಲು ಕ್ರೀಡಾಪಟು ಸ್ವಲ್ಪ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಸಚಿವರು ವೇದಿಕೆಯಿಂದಲೇ ಕಿಟ್ ಎಸೆದಿದ್ದರು. ಅಷ್ಟೇ ಅಲ್ಲದೇ ಲಗೂ ಬರ್ರೀ ಪಾ.. ತಗೊಂಡು ಹೋಗಾಕ ಹರಸಾಹಸ ಪಡತಿರಲ್ಲ ಎಂದು ಲೇವಡಿ ಮಾಡಿದ್ದರು. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವ ಪಟುಗಳ ಮೇಲೆ ದರ್ಪ ಮೆರೆದು ಸಚಿವರು ಅಗೌರವ ತೋರಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದು ದರ್ಪ ಮೆರೆದ ಆರ್.ವಿ.ದೇಶಪಾಂಡೆ: ವಿಡಿಯೋ

    ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದು ದರ್ಪ ಮೆರೆದ ಆರ್.ವಿ.ದೇಶಪಾಂಡೆ: ವಿಡಿಯೋ

    ಕಾರವಾರ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಬಿಸ್ಕೇಟ್ ಎಸೆದು ವಿವಾದಕ್ಕೆ ಗುರಿಯಾಗಿದ್ದರು. ಈ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದು ದರ್ಪ ಮೆರೆದಿದ್ದಾರೆ.

    ಜಿಲ್ಲೆಯ ಹಳಿಯಾಳದಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ನೂತನ ಒಳಾಂಗಣ ಕ್ರೀಡಾಂಗಣ ಕಟ್ಟಡ ಉದ್ಘಾಟನೆ ಆಯೋಜಿಸಲಾಗಿತ್ತು. ಜೊತೆಗೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಿದ ಕ್ರೀಡಾ ಪಟುಗಳು ಹಾಗೂ ಸಂಘಗಳಿಗೆ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆದಿತ್ತು. ಇದನ್ನೂ ಓದಿ: ಅಧಿಕಾರದ ಮದದಲ್ಲಿ ಅಮಾನವೀಯ ಕೆಲಸ- ಕೊಡಗು ಸಂತ್ರಸ್ತರಿಗೆ ಬಿಸ್ಕೆಟ್ ಎಸೆದ ಸೂಪರ್ ಸಿಎಂ

    ಕಾರ್ಯಕ್ರಮದ ಬಳಿಕ ಸಚಿವರು ಕ್ರೀಡಾಪಟುಗಳಿಗೆ ವಿವಿಧ ಸಾಮಗ್ರಿಗಳನ್ನು ವಿತರಿಸಲು ಮುಂದಾಗಿದ್ದರು. ಆಗ ಸಾಮಗ್ರಿಗಳನ್ನು ಪಡೆಯಲು ಕ್ರೀಡಾಪಟು ಸ್ವಲ್ಪ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಸಚಿವರು ವೇದಿಕೆಯಿಂದಲೇ ಕಿಟ್ ಎಸೆದಿದ್ದಾರೆ. ಅಷ್ಟೇ ಅಲ್ಲದೆ ಲಗೂ ಬರ್ರೀ ಪಾ.. ತಗೊಂಡು ಹೋಗಾಕ ಹರಸಾಹಸ ಪಡತಿರಲ್ಲ ಎಂದು ಲೇವಡಿ ಮಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವ ಪಟುಗಳ ಮೇಲೆ ದರ್ಪ ಮೆರೆದು ಸಚಿವರು ಅಗೌರವ ತೋರಿದ್ದಾರೆ. ಸಚಿವರ ನಡೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನನ್ನ ಪತ್ನಿ ಪ್ರಾಕ್ಟೀಸ್ ಮಾಡ್ವಾಗ ಯಾರೂ ಬರ್ಬೇಡಿ- ನ್ಯಾಷನಲ್ ಅಥ್ಲೀಟ್‍ಗಳನ್ನ ಹೊರಗೆ ಕಳಿಸಿದ ಐಪಿಎಸ್ ಅಧಿಕಾರಿ

    ನನ್ನ ಪತ್ನಿ ಪ್ರಾಕ್ಟೀಸ್ ಮಾಡ್ವಾಗ ಯಾರೂ ಬರ್ಬೇಡಿ- ನ್ಯಾಷನಲ್ ಅಥ್ಲೀಟ್‍ಗಳನ್ನ ಹೊರಗೆ ಕಳಿಸಿದ ಐಪಿಎಸ್ ಅಧಿಕಾರಿ

    ಬೆಂಗಳೂರು: ನನ್ನ ಪತ್ನಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ. ಆದ್ದರಿಂದ ಸ್ಟೇಡಿಯಂಗೆ ಯಾರೂ ಬರಬೇಡಿ ಎಂದು ಹೇಳಿ ಐಪಿಎಸ್ ಅಧಿಕಾರಿ ಅನುಪಮ್ ಅಗರವಾಲ್ ನ್ಯಾಷನಲ್ ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಅವಮಾನ ಮಾಡಿದ್ದಾರೆ.

    ಕಂಠೀರವ ಸ್ಟೇಡಿಯಂ ನಿರ್ದೇಶಕ ಅನುಪಮ್ ಅಗರವಾಲ್ ರಾಷ್ಟ್ರೀಯ ಕ್ರೀಡಾಪಟುಗಳ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಸ್ಟೇಡಿಯಂನಲ್ಲಿ ನನ್ನ ಪತ್ನಿ ಪ್ರಾಕ್ಟೀಸ್ ಮಾಡುವ ಸಂದರ್ಭದಲ್ಲಿ ಯಾರೂ ಸ್ಟೇಡಿಯೋ ಒಳಗಡೆ ಇರಬಾರದು ಎಂದು ಹೆಂಡತಿಗೋಸ್ಕರ ಅಥ್ಲೀಟ್‍ಗಳನ್ನು ಸ್ಟೇಡಿಯಂನಿಂದ ಹೊರ ಹೋಗಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಹೋಂಗಾರ್ಡ್‍ಗಳನ್ನು ಕರೆದು ಕ್ರೀಡಾಪಟುಗಳನ್ನು ಹೊರ ಹಾಕಿಸಿದ್ದಾರೆ.

    ಐಪಿಎಸ್ ಅಧಿಕಾರಿ ಅನುಪಮ್ ಅಗರವಾಲ್ ಅವರ ಪತ್ನಿಪ್ರೇಮಕ್ಕೆ ಕಂಗಾಲಾದ ಅಥ್ಲೀಟ್‍ಗಳು ಕಂಠೀರವ ಸ್ಟೇಡಿಯಂ ಬಿಟ್ಟು ಕಬ್ಬನ್ ಪಾರ್ಕ್‍ನಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ. ಈ ಎಲ್ಲಾ ಅಥ್ಲೆಟಿಕ್ ಕ್ರೀಡಾಪಟುಗಳು ಅಂತರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ.

    ಅನುಪಮ್ ಅಗರವಾಲ್ ಫೋನ್ ಮಾಡಿ ಯಾವುದೇ ಪೆÇಲೀಸ್ ಠಾಣೆಯಲ್ಲೂ ದೂರು ಸ್ವೀಕಾರ ಮಾಡಬೇಡಿ ಅಂತ ಹೇಳಿದ್ದಾರೆ. ಸಂಪಗಿ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿದ್ದಾರೆ.

    https://www.youtube.com/watch?v=sYO07ojfHMg