Tag: Atiq Ahmed

  • ಪತಿಯನ್ನು ಹತ್ಯೆಗೈದವರು ಈಗ ಸಮಾಧಿಯಾಗಿದ್ದಾರೆ – ಯೋಗಿಯನ್ನು ಹೊಗಳಿದ್ದಕ್ಕೆ ಪಕ್ಷದಿಂದಲೇ ಎಸ್‌ಪಿ ಶಾಸಕಿ ಉಚ್ಚಾಟನೆ

    ಪತಿಯನ್ನು ಹತ್ಯೆಗೈದವರು ಈಗ ಸಮಾಧಿಯಾಗಿದ್ದಾರೆ – ಯೋಗಿಯನ್ನು ಹೊಗಳಿದ್ದಕ್ಕೆ ಪಕ್ಷದಿಂದಲೇ ಎಸ್‌ಪಿ ಶಾಸಕಿ ಉಚ್ಚಾಟನೆ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಅವರನ್ನು ಸದನದಲ್ಲೇ ಹೊಗಳಿದ್ದಕ್ಕೆ ಸಮಾಜವಾದಿ ಪಕ್ಷದ ಶಾಸಕಿ ಪೂಜಾ ಪಾಲ್ (Pooja Pal) ಅವರನ್ನು ಅಖಿಲೇಶ್‌ ಯಾದವ್‌ ಪಕ್ಷದಿಂದಲೇ ಹೊರಹಾಕಿದ್ದಾರೆ.

    ನೀವು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದೀರಿ. ಎಚ್ಚರಿಕೆ ನೀಡಿದ ನಂತರವೂ ನೀವು ಈ ಚಟುವಟಿಕೆಗಳನ್ನು ಮುಂದುವರಿಸಿದ್ದೀರಿ. ನೀವು ಮಾಡಿದ ಕೆಲಸ ಪಕ್ಷ ವಿರೋಧಿ ಮತ್ತು ಗಂಭೀರ ಅಶಿಸ್ತಿನ ಕೃತ್ಯವಾಗಿದೆ. ಆದ್ದರಿಂದ ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಮಾಜವಾದಿ ಪಕ್ಷದಿಂದ (SP) ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

    ಪಕ್ಷದಿಂದ ಉಚ್ಚಾಟಿಸಿದ ಬಳಿಕವೂ ಪೂಜಾ ಪಾಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಯೋಗಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಣೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪ್ರಯಾಗ್‌ರಾಜ್‌ನಲ್ಲಿ ನನಗಿಂತ ಹೆಚ್ಚು ನೋವನ್ನು ಅನುಭವಿಸಿದ ಮಹಿಳೆಯರ ಧ್ವನಿಯನ್ನು ನೀವು ಕೇಳಲು ಸಾಧ್ಯವಾಗದಿರಬಹುದು. ಆದರೆ ನಾನು ಅವರ ಧ್ವನಿ. ನನ್ನನ್ನು ಶಾಸಕಿಯಾಗಿ ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಲಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ತಾಯಂದಿರು ಮತ್ತು ಸಹೋದರಿಯರ ಧ್ವನಿ ನಾನು. ಪ್ರಯಾಗ್‌ರಾಜ್‌ನಲ್ಲಿರುವ ಪೂಜಾ ಪಾಲ್‌ಗೆ ಮಾತ್ರವಲ್ಲದೆ ಅತಿಕ್ ಅಹ್ಮದ್‌ನಿಂದ ತೊಂದರೆಗೊಳಗಾದ ಎಲ್ಲಾ ಜನರಿಗೆ ಮುಖ್ಯಮಂತ್ರಿಗಳು ನ್ಯಾಯ ಒದಗಿಸಿದ್ದಾರೆ. ನಾನು ಪಕ್ಷದಲ್ಲಿ ಇದ್ದರೂ ಮೊದಲ ದಿನದಿಂದಲೇ ಇದನ್ನೇ ಹೇಳುತ್ತಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್ಅತೀಕ್ಅಹ್ಮದ್ತಲೆಗೆ 1, ದೇಹಕ್ಕೆ 8 ಗುಂಡೇಟು

     

    ಪೂಜಾ ಪಾಲ್ ಯಾರು?
    ಪೂಜಾ ಪಾಲ್ ಅಲಹಾಬಾದ್ ನಗರದ ಪಶ್ಚಿಮ ಕ್ಷೇತ್ರದ ಬಿಎಸ್‌ಪಿ ಶಾಸಕ ರಾಜು ಪಾಲ್ ಅವರ ಪತ್ನಿ. 2005 ರಲ್ಲಿ ಪೂಜಾ ಪಾಲ್ ಮದುವೆಯಾದ 10 ದಿನದಲ್ಲೇ ರಾಜು ಪಾಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಾಫಿಯಾ ಡಾನ್ ಅತಿಕ್ ಅಹ್ಮದ್ (Atiq Ahmed) ಸಹೋದರ ಅಶ್ರಫ್ ಮೇಲೆ ಈ ಹತ್ಯೆ ಮಾಡಿದ ಆರೋಪ ಬಂದಿತ್ತು. ನಂತರ ಈ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಅತಿಕ್ ಅಹ್ಮದ್ ಸಹೋದರ ಖಾಲಿದ್ ಅಜೀಮ್ ವಿರುದ್ಧ ಬಿಎಸ್‌ಪಿಯಿಂದ ಪೂಜಾ ಪಾಲ್ ಸ್ಪರ್ಧಿಸಿದ್ದರು. ಆದರೆ ಈ ಚುನಾವಣೆಯಲ್ಲಿ ಪೂಜಾ ಸೋತಿದ್ದರು. ನಂತರ 2007 ಮತ್ತು 2012 ರ ಚುನಾವಣೆಯಲ್ಲಿ ಪೂಜಾ ಪಾಲ್ ಈ ಕ್ಷೇತ್ರದಿಂದ ಜಯಗಳಿಸಿದ್ದರು.

    ಈ ಮಧ್ಯೆ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಭೇಟಿಯಾಗಿದ್ದಕ್ಕೆ ಫೆಬ್ರವರಿ 2018 ರಲ್ಲಿ ಬಿಎಸ್‌ಪಿಯಿಂದ ಉಚ್ಚಾಟಿಸಲಾಗಿತ್ತು. 2019 ರಲ್ಲಿ ಸಮಾಜವಾದಿ ಪಕ್ಷವನ್ನು ಸೇರಿದ್ದ ಪೂಜಾ ಪಾಲ್ ಕೌಶಂಬಿ ಜಿಲ್ಲೆಯ ಚೈಲ್ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕಿಯಾಗಿ ಆಯ್ಕೆಯಾಗಿದ್ದರು.

    ಪೂಜಾ ಪಾಲ್‌ ಹೇಳಿದ್ದೇನು?
    ನನ್ನ ಪತಿಯನ್ನು ಹತ್ಯೆ ಮಾಡಿದವರು ಯಾರು ಎನ್ನುವುದು ಎಲ್ಲರಿಗೂ ಗೊತ್ತಿತ್ತು. ಯಾರಿಂದಲೂ ನ್ಯಾಯ ಸಿಗದೇ ಇದ್ದಾಗ ನನ್ನ ಮಾತು ಕೇಳಿ ನನಗೆ ನ್ಯಾಯ ಒದಗಿಸಿದ್ದಕ್ಕೆ ಯೋಗಿ ಆದಿತ್ಯನಾಥ್‌ ಅವರಿಗೆ ಧನ್ಯವಾದಗಳು. ಅಪರಾಧಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಗಳನ್ನು ತರುವ ಮೂಲಕ ಮುಖ್ಯಮಂತ್ರಿ ಪ್ರಯಾಗ್‌ರಾಜ್‌ನಲ್ಲಿ ನನ್ನಂತಹ ಅನೇಕ ಇತರ ಮಹಿಳೆಯರಿಗೆ ನ್ಯಾಯ ಒದಗಿಸಿದ್ದಾರೆ. ಇಂದು ಇಡೀ ರಾಜ್ಯವೇ ಸಿಎಂ ಅವರನ್ನು ವಿಶ್ವಾಸದಿಂದ ನೋಡುತ್ತಿದೆ. ಮುಖ್ಯಮಂತ್ರಿಗಳು ನನ್ನ ಪತಿಯ ಕೊಲೆಗಾರ ಅತಿಕ್ ಅಹ್ಮದ್‌ನನ್ನು ಸಮಾಧಿ ಮಾಡಿದ್ದಾರೆ ಎಂದು ಶ್ಲಾಘಿಸಿದ್ದರು.

    ಗುಂಡಿಕ್ಕಿ ಹತ್ಯೆ:
    ರಾಜು ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರನ್ನು ಫೆಬ್ರವರಿ 2023 ರಲ್ಲಿ ಪ್ರಯಾಗ್‌ರಾಜ್‌ನ ಸುಲೇಮ್ ಸರಾಯ್ ಪ್ರದೇಶದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

    ಈ ಪ್ರಕರಣದ ಪ್ರಮುಖ ಆರೋಪಿಗಳಾದ ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್‌ನನ್ನು ಪೊಲೀಸರು ಬಂಧಿಸಿದ್ದರು. ಏಪ್ರಿಲ್ 15, 2023 ರಂದು ಇಬ್ಬರನ್ನು ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಪತ್ರಕರ್ತರಂತೆ ನಟಿಸಿದ್ದ ಇಬ್ಬರು ಇವರ ಮೇಲೆ ಗುಂಡಿನ ದಾಳಿ ನಡೆಸಿ ಅಣ್ಣ, ತಮ್ಮನನ್ನು ಹತ್ಯೆ ಮಾಡಿದ್ದರು.

  • ಉಮೇಶ್ ಪಾಲ್ ಹತ್ಯೆ ಪ್ರಕರಣ- ಬಾಂಬ್ ಎಸೆದವನ ಮನೆ ಜಪ್ತಿ

    ಉಮೇಶ್ ಪಾಲ್ ಹತ್ಯೆ ಪ್ರಕರಣ- ಬಾಂಬ್ ಎಸೆದವನ ಮನೆ ಜಪ್ತಿ

    ಲಕ್ನೋ: ಬಹುಜನ ಸಮಾಜ ಪಕ್ಷದ (BSP) ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ (Umesh Pal) ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್‍ನ (Atiq Ahmed) ಸಹಾಯಕ ಗುಡ್ಡು ಮುಸ್ಲಿಂನ ಚಕಿಯಾ ಪ್ರದೇಶದಲ್ಲಿರುವ ಮನೆಯನ್ನು ಪೊಲೀಸರು (Police) ಜಪ್ತಿ ಮಾಡಿದ್ದಾರೆ.

    ಬಿಎಸ್‍ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರನ್ನು ಫೆ.25ರಂದು ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ದಾಳಿಯ ವೇಳೆ ಗುಡ್ಡು ಮುಸ್ಲಿಂ ಬಾಂಬ್ ಎಸೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆಯ ಬಳಿಕ ಗುಡ್ಡು ಮುಸ್ಲಿಂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 5 ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ

    ಉಮೇಶ್ ಪಾಲ್ ಅವರ ಪತ್ನಿ ಜಯಪಾಲ್ ಅವರ ದೂರಿನ ಮೇರೆಗೆ ಧುಮನಗಂಜ್ ಪೊಲೀಸ್ ಠಾಣೆಯಲ್ಲಿ ಮಾಫಿಯಾ ಅತೀಕ್ ಅಹ್ಮದ್, ಆತನ ಸಹೋದರ ಅಶ್ರಫ್, ಶೈಸ್ತಾ ಪರ್ವೀನ್, ಅತೀಕ್‍ನ ಇಬ್ಬರು ಪುತ್ರರು, ಗುಡ್ಡು ಮುಸ್ಲಿಂ, ಗುಲಾಮ್ ಮತ್ತು ಇತರ ಒಂಬತ್ತು ಸಹಚರರ ವಿರುದ್ಧ ಪ್ರಕರಣ ದಾಖಲಾಗಿತ್ತು.

    ಉಮೇಶ್ ಪಾಲ್ ಕೊಲೆ ಪ್ರಕರಣ ಸೇರಿದಂತೆ 100 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಭಾಗಿಯಾಗಿದ್ದರು. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿತ್ತು. ಇಬ್ಬರನ್ನು ಪೊಲೀಸರು ಕರೆದೊಯ್ಯುವ ವೇಳೆ ಏ.15 ರಂದು ಪ್ರಯಾಗರಾಜ್‍ನ ಕ್ಯಾಲ್ವಿನ್ ಆಸ್ಪತ್ರೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

    ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಅತೀಕ್‍ನ ಪತ್ನಿ ಶೈಸ್ತಾ ಪರ್ವೀನ್ ಮತ್ತು ಅಶ್ರಫ್‍ನ ಪತ್ನಿ ಜೈನಾಬ್ ಸಹ ತಲೆಮರೆಸಿಕೊಂಡಿದ್ದು ಶೀಘ್ರವೇ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

  • ಉಮೇಶ್ ಪಾಲ್ ಹತ್ಯೆ ಕೇಸ್ – ಗ್ಯಾಂಗ್‍ಸ್ಟರ್ ಅತೀಕ್ ಅಹ್ಮದ್‍ನ ವಕೀಲ ಅರೆಸ್ಟ್

    ಉಮೇಶ್ ಪಾಲ್ ಹತ್ಯೆ ಕೇಸ್ – ಗ್ಯಾಂಗ್‍ಸ್ಟರ್ ಅತೀಕ್ ಅಹ್ಮದ್‍ನ ವಕೀಲ ಅರೆಸ್ಟ್

    ಲಕ್ನೋ: ಬಿಎಸ್‍ಪಿ ಮಾಜಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್‍ನ (Atiq Ahmed) ವಕೀಲನನ್ನು ಉತ್ತರ ಪ್ರದೇಶ (Uttar Pradesh) ಪೊಲೀಸರು (Police) ಬಂಧಿಸಿದ್ದಾರೆ.

    ಆರೋಪಿ ವಿಜಯ್ ಮಿಶ್ರಾ ಹತ್ಯೆಗೀಡಾದ ಉಮೇಶ್ ಪಾಲ್ ಇರುವ ಸ್ಥಳದ ಮಾಹಿತಿಯನ್ನು ಹಂತಕರಿಗೆ ನೀಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಲಕ್ನೋದ ಹೋಟೆಲ್ ಒಂದರಲ್ಲಿ ಮಿಶ್ರಾನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಗ್ರೆನೇಡ್ ಮೇಲಿನ ಮೇಡ್ ಇನ್ ವಿವರವನ್ನೇ ಅಳಿಸಿ ಹಾಕಿರುವ ಶಂಕಿತ ಉಗ್ರರು

    ಅಲ್ಲದೇ ವಕೀಲ ವಿಜಯ್ ಮಿಶ್ರಾ 3 ಕೋಟಿ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ ಎಂದು ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ಈ ಸಂಬಂಧ ಆತನ ವಿರುದ್ಧ ಪ್ರಯಾಗ್‍ರಾಜ್‍ನ ಅತ್ತರ್ಸುಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರೋಡೆಕೋರ ಅತೀಕ್ ಅಹ್ಮದ್ ಹತ್ಯೆಯ ನಂತರ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಮೊಹಮ್ಮದ್ ಸಯೀದ್ ಎಂಬ ಪ್ಲೈವುಡ್ ವ್ಯಾಪಾರಿ ಪೊಲೀಸ್ ಠಾಣೆಗೆ ಬಂದು ವಿಜಯ್ ಮಿಶ್ರಾ ಬೇಡಿಕೆಗಳ ಬಗ್ಗೆ ಮಾಹಿತಿ ನೀಡಿದ್ದರು. ಹಣ ನೀಡದಿದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಿಶ್ರಾ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

    ಹಗಲಿನ ವೇಳೆಯಲ್ಲೇ ಉಮೇಶ್ ಪಾಲ್ ಹತ್ಯೆ ನಡೆದಿತ್ತು. ಹತ್ಯೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಘಟನೆಯ ನಂತರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಮಾಫಿಯಾ ವನ್ನು ಸಂಪೂರ್ಣವಾಗಿ ಮಟ್ಟ ಹಾಕುವುದಾಗಿ ವಿಧಾನಸಭೆಯಲ್ಲಿ ಪ್ರತಿಜ್ಞೆ ಮಾಡಿದ್ದರು. ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ – 125 ರೋಗಿಗಳ ಸ್ಥಳಾಂತರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    ಲಕ್ನೋ: ಕಳೆದ 2 ತಿಂಗಳ ಹಿಂದೆ ಹತ್ಯೆಯಾಗಿದ್ದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ನ (Atiq Ahmed) ಜಮೀನನ್ನು ಸರ್ಕಾರ ವಶಪಡಿಸಿಕೊಂಡಿತ್ತು. ಇದೀಗ ಆ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಬಡವರಿಗೆ ಹಂಚಿದ್ದಾರೆ.

    ಪ್ರಯಾಗ್‌ರಾಜ್ (Prayagraj) ಬಳಿಯ ಲುಕರ್ಗಂಜ್ ಬಳಿ ಸ್ವಾಧೀನಪಡಿಸಿಕೊಂಡ 1731 ಚ.ಮೀ ಭೂಮಿಯಲ್ಲಿ ಸಿಎಂ ಆದಿತ್ಯನಾಥ್ 2021ರ ಡಿಸೆಂಬರ್ 26ರಂದು ವಸತಿಯೋಜನೆಗೆ ಶಂಕು ಸ್ಥಾಪನೆ ಮಾಡಿದ್ದರು. ಬಳಿಕ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana) ಅಡಿಯಲ್ಲಿ 2 ಬ್ಲಾಕ್‌ಗಳಲ್ಲಿ 76 ಫ್ಲಾಟ್‌ಗಳನ್ನು ನಿರ್ಮಾಣ ಮಾಡಲಾಗಿದೆ.

    ಈ ತಿಂಗಳ ಆರಂಭದಲ್ಲಿ ಲಾಟರಿ ಮೂಲಕ ಫ್ಲಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಶುಕ್ರವಾರ ಆದಿತ್ಯನಾಥ್ ಅವರು 76 ಫ್ಲಾಟ್‌ಗಳ ಕೀಲಿಗಳನ್ನು ಬಡವರಿಗೆ ಹಂಚಿಕೆ ಮಾಡಿದ್ದಾರೆ. ಇದನ್ನೂ ಓದಿ: 4 ತಿಂಗಳಲ್ಲಿ ಮೂರನೇ ಬಾರಿಗೆ ಸಂಪುಟಕ್ಕೆ ಸರ್ಜರಿ- ಕೇಜ್ರಿವಾಲ್ ಬಳಿಕ ಅತಿಶಿ ಪ್ರಭಾವಿ ಸಚಿವೆ

    ಅಧಿಕಾರಿಗಳ ಪ್ರಕಾರ ಪ್ರತಿ ಫ್ಲಾಟ್‌ಗಳು 41 ಚ.ಮೀ ವಿಸ್ತೀರ್ಣವನ್ನು ಹೊಂದಿದೆ. ಮನೆಗಳಲ್ಲಿ 2 ಕೊಠಡಿಗಳು, ಅಡುಗೆಮನೆ, ಶೌಚಾಲಯ ಒಳಗೊಂಡಿದೆ. ಈ ಫ್ಲಾಟ್‌ಗಳಿಗಾಗಿ 6,000 ಕ್ಕೂ ಹೆಚ್ಚು ಜನರು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ 1,590 ಜನರು ಲಾಟರಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದರು.

    2017ಕ್ಕೂ ಮೊದಲು ಬಡವರು, ಉದ್ಯಮಿಗಳು ಅಥವಾ ಸರ್ಕಾರಿ ಸಂಸ್ಥೆಗಳ ಭೂಮಿಯನ್ನು ಯಾವುದೇ ಮಾಫಿಯಾಗಳು ವಶಪಡಿಸಿಕೊಳ್ಳಬಹುದಾಗಿತ್ತು. ಆ ಕಾಲದಲ್ಲಿ ಬಡವರು ಅಸಹಾಯಕರಾಗಿ ನೋಡುತ್ತಿದ್ದರು. ಇಂದು ನಾವು ಅದೇ ಭೂಮಿಯಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸುತ್ತಿದ್ದೇವೆ. ಈ ಮಾಫಿಯಾಗಳಿಂದ ಭೂಮಿಯನ್ನು ವಶಪಡಿಸಿಕೊಂಡಿರುವುದು ದೊಡ್ಡ ಸಾಧನೆಯಾಗಿದೆ ಎಂದು ಆದಿತ್ಯನಾಥ್ ಸಮಾರಂಭದಲ್ಲಿ ತಿಳಿಸಿದ್ದಾರೆ.

    100 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ಅತೀಕ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಈ ವರ್ಷದ ಏಪ್ರಿಲ್‌ನಲ್ಲಿ ಹತ್ಯೆಯಾದರು. ವೈದ್ಯಕೀಯ ತಪಾಸಣೆಗೆಂದು ಪ್ರಯಾಗ್‌ರಾಜ್‌ಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪತ್ರಕರ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಹತ್ಯೆಯ ವೇಳೆ ಅವರು ಪೊಲೀಸರ ವಶದಲ್ಲೇ ಇದ್ದರು. ಘಟನೆಗೂ ಕೆಲ ದಿನಗಳ ಮುನ್ನ ಅತೀಕ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಇದನ್ನೂ ಓದಿ: ಕೇಂದ್ರದ ಆದೇಶವನ್ನು ಪಾಲಿಸಿ – ಟ್ವಿಟ್ಟರ್‌ ಅರ್ಜಿ ವಜಾ, 50 ಲಕ್ಷ ದಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ಯಾಂಗ್‍ಸ್ಟರ್ ಅತೀಕ್ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಾಣ – ಶೀಘ್ರವೇ ಹಂಚಲಿದ್ದಾರೆ ಯೋಗಿ

    ಗ್ಯಾಂಗ್‍ಸ್ಟರ್ ಅತೀಕ್ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಾಣ – ಶೀಘ್ರವೇ ಹಂಚಲಿದ್ದಾರೆ ಯೋಗಿ

    ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಕೊಲೆಯಾದ ದರೋಡೆಕೋರ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‍ನಿಂದ (Atiq Ahmed) ವಶ ಪಡಿಸಿಕೊಂಡ ಭೂಮಿಯನ್ನು ಬಡವರಿಗೆ ಹಂಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಯಾಗ್‍ರಾಜ್ (Prayagraj) ಬಳಿಯ ಲುಕರ್ಗಂಜ್ ಬಳಿ ಸ್ವಾಧೀನಪಡಿಸಿಕೊಂಡ ನಂತರ 1731 ಚದರ ಮೀಟರ್ ಭೂಮಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) 2021ರ ಡಿಸೆಂಬರ್ 26 ರಂದು ವಸತಿ ಯೋಜನೆಯ ಶಂಕು ಸ್ಥಾಪನೆ ಮಾಡಿದ್ದರು. ಬಳಿಕ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎರಡು ಬ್ಲಾಕ್‍ಗಳಲ್ಲಿ 76 ಫ್ಲಾಟ್‍ಗಳನ್ನು ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಕಾಮಗಾರಿ ಮುಕ್ತಾಯದ ನಂತರ ಫಲಾನುಭವಿಗಳಿಗೆ ಯೋಗಿ ಹಂಚಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ – 7 ಸಾವು

    ಅತೀಕ್ ಅಹ್ಮದ್ 2005 ರಲ್ಲಿ ಬಹುಜನ ಸಮಾಜ ಪಕ್ಷದ (BSP) ಶಾಸಕ ರಾಜು ಪಾಲ್ ಅವರ ಹತ್ಯೆಯ ಆರೋಪಿಯಾಗಿದ್ದ. ಅಲ್ಲದೆ ಫೆಬ್ರವರಿಯಲ್ಲಿ ಆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರ ಹತ್ಯೆಯಲ್ಲಿ ಆತನ ಕೈವಾಡ ಇದೆ ಎಂದು ಆರೋಪಿಸಲಾಗಿತ್ತು. ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್‍ನನ್ನು ಏ.15ರ ರಾತ್ರಿ ಪ್ರಯಾಗ್‍ರಾಜ್‍ನಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ಪತ್ರಕರ್ತರ ಸೋಗಿನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಇದನ್ನೂ ಓದಿ: ರಾಹುಲ್ ಮೊಹಬ್ಬತ್ ಹಿಂದೂ ಜೀವನ ಶೈಲಿಯನ್ನು ಖಂಡಿಸುತ್ತದೆಯೇ? : ಸ್ಮೃತಿ ಇರಾನಿ

  • ಅತೀಕ್ ಹತ್ಯೆಯ ದ್ವೇಷ ತೀರಿಸಿಕೊಳ್ಳಲು ಭಾರತದ ಮೇಲೆ ದಾಳಿ ನಡೆಸ್ತೇವೆ: ಅಲ್ ಖೈದಾ

    ಅತೀಕ್ ಹತ್ಯೆಯ ದ್ವೇಷ ತೀರಿಸಿಕೊಳ್ಳಲು ಭಾರತದ ಮೇಲೆ ದಾಳಿ ನಡೆಸ್ತೇವೆ: ಅಲ್ ಖೈದಾ

    ನವದೆಹಲಿ: ಗ್ಯಾಂಗ್‍ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್ (Atiq Ahmed) ಹಾಗೂ ಆತನ ಸಹೋದರ ಆಶ್ರಫ್ ಹತ್ಯೆಯ ಸೇಡನ್ನು ತೀರಿಸಿಕೊಳ್ಳಲು ಭಾರತದ  (India) ಮೇಲೆ ದಾಳಿ ನಡೆಸುವುದಾಗಿ ಅಲ್ ಖೈದಾ (Al-Qaeda) ಬೆದರಿಕೆ ಹಾಕಿದೆ.

    ಅಲ್ ಖೈದಾ ಉಗ್ರ ಸಂಘಟನೆಯು ಅಸ್-ಸಾಹಬ್ ಬಿಡುಗಡೆ ಮಾಡಿದ 7 ಪುಟಗಳ ನಿಯತಕಾಲಿಕದಲ್ಲಿ ಈ ಸಂದೇಶವನ್ನು ಕಳುಹಿಸಿದೆ. ಈ ವೇಳೆ ಅಲ್‍ಖೈದಾ ಈದ್ ಸಂದೇಶವನ್ನು ಕಳಿಸಿ, ಎಲ್ಲರಿಗೂ ಶುಭಕೋರಿದೆ. ಅಷ್ಟೇ ಅಲ್ಲದೇ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಆಶ್ರಫ್‍ನನ್ನು ಹುತಾತ್ಮರು ಎಂದು ಕರೆದಿದೆ. ಅಷ್ಟೇ ಅಲ್ಲದೇ ಅತೀಕ್‍ನನ್ನು ಪ್ರಶಂಸಿಸಿದೆ. ಇದೇ ವೇಳೆ ಮುಸ್ಲಿಮರಿಗೆ ಸ್ವಂತಂತ್ರವನ್ನು ಕೊಡಿಸುವುದಾಗಿ ಭರವಸೆಯನ್ನು ನೀಡಿದೆ.

    ಅತೀಕ್‍ಗೆ ಹಲವು ಉಗ್ರ ಸಂಘಟನೆ ಹಾಗೂ ಪಾಕ್ ಗುಪ್ತಚರ ಇಲಾಖೆಯ ಜೊತೆಗೆ ನಂಟಿದೆ ಎಂದು ಇತ್ತೀಚೆಗೆ ಕೋರ್ಟ್‍ಗೆ ಸಲ್ಲಿದ್ದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: ಅತೀಕ್ ಅಹ್ಮದ್ ಪ್ರಕರಣ – ಐವರು ಪೊಲೀಸರ ಅಮಾನತು

    ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿಗಳಾದ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅವರನ್ನು ಪತ್ರಕರ್ತರ ಸೋಗಿನಲ್ಲಿ ಬಂದು ಏಪ್ರಿಲ್ 16ರಂದು ಪ್ರಯಾಗ್‌ರಾಜ್‍ನಲ್ಲಿ ಗುಂಡು ಹಾರಿಸಿದ್ದರು. ಅತೀಕ್ ಮತ್ತು ಆತನ ಸಹೋದರನನ್ನು ಸಂದರ್ಶಿಸಲು ಬಂದಿದ್ದ ಹಲವು ಪೊಲೀಸ್ ಅಧಿಕಾರಿಗಳು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ಅತೀಕ್ ಅಹ್ಮದ್ 1,169 ಕೋಟಿ ರೂ. ಒಡೆಯ- ಹುಡುಕಿದಷ್ಟು ಸಿಗುತ್ತಿದೆ ಗ್ಯಾಂಗಸ್ಟರ್‌ನ ಆಸ್ತಿ

  • ಅತಿಕ್ ಸಮಾಧಿಗೆ ತ್ರಿವರ್ಣ ಧ್ವಜ ಹಾಕಿದ ಕಾಂಗ್ರೆಸ್ ನಾಯಕ ಅರೆಸ್ಟ್

    ಅತಿಕ್ ಸಮಾಧಿಗೆ ತ್ರಿವರ್ಣ ಧ್ವಜ ಹಾಕಿದ ಕಾಂಗ್ರೆಸ್ ನಾಯಕ ಅರೆಸ್ಟ್

    ಲಕ್ನೋ: ಹತ್ಯೆಯಾದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್ (Atiq Ahmed) ಸಮಾಧಿ (Grave) ಮೇಲೆ ರಾಷ್ಟ್ರ ಧ್ವಜವನ್ನು (Tricolor) ಇರಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ ಕಾಂಗ್ರೆಸ್‌ನ ನಾಯಕನನ್ನು (Congress Leader) ಅಧಿಕಾರಿಗಳು ಬಂಧಿಸಿದ್ದಾರೆ.

    ಓಲ್ಡ್ ಸಿಟಿ ಪ್ರದೇಶದ ಕಸರಿ ಮಸಾರಿ ಸ್ಮಶಾನದಲ್ಲಿ ಅತಿಕ್ ಸಮಾಧಿಯಿದೆ. ಅಲ್ಲಿನ ಸ್ಥಳೀಯ ಕಾಂಗ್ರೆಸ್ ನಾಯಕ ರಾಜ್‌ಕುಮಾರ್ ಸಿಂಗ್ ರಜ್ಜು (Rajkumar Singh Rajju) ಅತಿಕ್ ಸಮಾಧಿ ಮೇಲೆ ರಾಷ್ಟ್ರಧ್ವಜವನ್ನು ಇರಿಸುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಧೂಮಗಂಜ್ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಅತಿಕ್ ಮತ್ತು ಆತನ ಕಿರಿಯ ಸಹೋದರ ಅಶ್ರಫ್ ಏಪ್ರಿಲ್ 15 ರಂದು ರಾತ್ರಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಮೂವರು ಬಂದೂಕುಧಾರಿಗಳು ಗುಂಡಿಕ್ಕಿ ಅವರಿಬ್ಬರನ್ನೂ ಕೊಂದಿದ್ದರು. ಬಳಿಕ ಏಪ್ರಿಲ್ 16ರ ಸಂಜೆ ತಡವಾಗಿ ಅತಿಕ್ ಮತ್ತು ಅಶ್ರಫ್‌ನ ಸಮಾಧಿ ಮಾಡಲಾಯಿತು. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವ ವೀಡಿಯೊದಲ್ಲಿ ರಾಜ್‌ಕುಮಾರ್ ಸಿಂಗ್ ಅತಿಕ್‌ನನ್ನು ಹುತಾತ್ಮ ಎಂದು ಕರೆದಿದ್ದಾನೆ. ಅತಿಕ್‌ಗೆ ಭಾರತ ರತ್ನ ನೀಡಬೇಕೆಂದು ಎಂದು ಹೇಳಿ ಸಮಾಧಿಯ ಮೇಲೆ ತ್ರಿವರ್ಣ ಧ್ವಜವನ್ನು ಹರಡಿರುವುದು ಕಂಡುಬಂದಿದೆ. ಆದರೆ ಈ ವೀಡಿಯೋ ಕ್ಲಿಪ್‌ನ ಸತ್ಯಾಸತ್ಯತೆ ಇನ್ನೂ ದೃಢಪಟ್ಟಿಲ್ಲ. ಇದನ್ನೂ ಓದಿ: ಗ್ಯಾಂಗ್‍ಸ್ಟಾರ್ ಅತೀಕ್ ಅಹ್ಮದ್ ಬೆಂಬಲಿಗ ಕಾಂಗ್ರೆಸ್ ಸ್ಟಾರ್ ಪ್ರಚಾರಕ – ಕರಂದ್ಲಾಂಜೆ ಖಂಡನೆ

    ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ವೀಡಿಯೋದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬುಧವಾರ ಆರೋಪಿ ಕಾಂಗ್ರೆಸ್ ನಾಯಕನನ್ನು ಬಂಧಿಸಿದ್ದಾರೆ. ಈ ನಡುವೆ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರದೀಪ್ ಮಿಶ್ರಾ ಅಂಶುಮಾನ್ ಮಾತನಾಡಿ, ರಾಜ್‌ಕುಮಾರ್‌ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಲಾಗಿದೆ. ಅತಿಕ್ ಬಗೆಗಿನ ರಜ್ಜು ಹೇಳಿಕೆಗಳು ಹಾಗೂ ಕೃತ್ಯಗಳು ಆತನ ವೈಯಕ್ತಿಕ ದೃಷ್ಟಿಕೋನದ್ದಾಗಿದೆ. ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅತೀಕ್ ಅಹ್ಮದ್ ಪ್ರಕರಣ – ಐವರು ಪೊಲೀಸರ ಅಮಾನತು

  • ಗ್ಯಾಂಗ್‍ಸ್ಟಾರ್ ಅತೀಕ್ ಅಹ್ಮದ್ ಬೆಂಬಲಿಗ ಕಾಂಗ್ರೆಸ್ ಸ್ಟಾರ್ ಪ್ರಚಾರಕ – ಕರಂದ್ಲಾಂಜೆ ಖಂಡನೆ

    ಗ್ಯಾಂಗ್‍ಸ್ಟಾರ್ ಅತೀಕ್ ಅಹ್ಮದ್ ಬೆಂಬಲಿಗ ಕಾಂಗ್ರೆಸ್ ಸ್ಟಾರ್ ಪ್ರಚಾರಕ – ಕರಂದ್ಲಾಂಜೆ ಖಂಡನೆ

    – ಸಿದ್ದರಾಮಯ್ಯ ಮುಸಲ್ಮಾನರ ನಾಯಕ
    – ಡಿಕೆಶಿ ಕ್ರಿಮಿನಲ್‍ಗಳ ಪರ ಇರುವ ನಾಯಕ
    – ದಕ್ಷಿಣ ಕರ್ನಾಟಕದಲ್ಲಿ ನಡೆದಾಡಲು ಭಯ ಆಗುತ್ತೆ ನಮಗೆ

    ಬೆಂಗಳೂರು: ಇಮ್ರಾನ್ ಪ್ರತಾಪ್ ಗರ್ಹಿಯಾಗಿದ್ದು (Imran Pratapgarhi) ಯುಪಿ ಗ್ಯಾಂಗ್‍ಸ್ಟರ್ ಅತೀಕ್ ಅಹ್ಮದ್ (Atiq Ahmed) ಬೆಂಬಲಿಗನಾಗಿದ್ದು, ಇಂಥವನನ್ನು ಕಾಂಗ್ರೆಸ್ (Congress) ರಾಜ್ಯ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕ ಮಾಡಿದೆ. ಇದನ್ನು ಬಿಜೆಪಿ (BJP) ತೀವ್ರವಾಗಿ ಖಂಡಿಸುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ (Shobha Karandlaje) ಕಿಡಿಕಾರಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಮ್ರಾನ್‍ನನ್ನು ಮಹಾರಾಷ್ಟ್ರ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿದೆ. ಗ್ಯಾಂಗ್‍ಸ್ಟರ್ ಕಾಯ್ದೆಯಡಿ ಬಂಧನವಾದವರ ಜತೆ ಇಮ್ರಾನ್ ಸಂಪರ್ಕ ಇದೆ. ಇಮ್ರಾನ್ ಪ್ರತಾಪ್ ಗರ್ಹಿ ಶಾಯರಿ ಬರೆಯುವವನಾಗಿದ್ದಾನೆ. ಆದರೆ ಅವನ ಶಾಯರಿಗಳು ದೇಶ, ಸಮಾಜದ ವಿರುದ್ಧ ಇವೆ. ಅಷ್ಟೇ ಅಲ್ಲದೇ ಇಮ್ರಾನ್ ಅತೀಕ್ ಅಹಮದ್‍ನನ್ನು ಗುರು ಅಂತ ಹೇಳಿ ಕೊಳ್ಳುತ್ತಿದ್ದ. ಇಂತಹ ದೇಶದ್ರೋಹಿ, ಸಮಾಜ ದ್ರೋಹಯಾದ ಇಮ್ರಾನ್‍ರಂತಹವರ ಮೇಲೆ ಕಾಂಗ್ರೆಸ್‍ಗೆ ಬಹಳ ಪ್ರೀತಿಯಿದೆ. ಅದಕ್ಕೆ ಕಾಂಗ್ರೆಸ್ ಸ್ಟಾರ್ ಪ್ರಚಾರಕನಾಗಿ ಇಮ್ರಾನ್ ಪ್ರತಾಪ್ ಗರ್ಹಿಯನ್ನು ಬಳಸಿಕೊಳ್ಳುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

    ಈ ಹಿಂದೆ ಇಮ್ರಾನ್ ಕರ್ನಾಟಕಕ್ಕೆ ಬಂದು ಟಿಪ್ಪು ಪರ ಭಾಷಣ ಮಾಡಿದ್ದ. ಮುಸ್ಲಿಮರಿಗೆ ತಲೆ ತಗ್ಗಿಸಿ ಗೊತ್ತಿಲ್ಲ, ತಲೆ ಕಡಿದು ಗೊತ್ತಿದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ನಮ್ಮ ರಾಜ್ಯದ ಮುಸಲ್ಮಾನರನ್ನು ಎತ್ತಿ ಕಟ್ಟುವ ಯತ್ನ ನಡೆಸಿದ್ದ. ಇಮ್ರಾನ್ ಬಗ್ಗೆ ಕಾಂಗ್ರೆಸ್‍ಗೆ ಎಲ್ಲಾ ಗೊತ್ತಿದೆ. ಉತ್ತರ ಪ್ರದೇಶದಲ್ಲಿ ಹತ್ಯೆ ಆದ ಅತೀಕ್, ಅಶ್ರಫ್ ಜತೆ ಇಮ್ರಾನ್ ನಿಕಟವರ್ತಿ ಆಗಿದ್ದ. ಆದರೆ ಅಪರಾಧಿ ಹಾಗೂ ದೇಶದ್ರೋಹಿಗಳ ಜೊತೆ ಕಾಂಗ್ರೆಸ್ ಇದೆ. ಇಮ್ರಾನ್‍ನನ್ನು ಸ್ಟಾರ್ ಪ್ರಚಾರಕ ಮಾಡಿರುವ ಕಾಂಗ್ರೆಸ್ ಸ್ಪಷ್ಟೀಕರಣ ಕೊಡಬೇಕು. ಕಾಂಗ್ರೆಸ್ ಉದ್ದೇಶ ಏನು? ಇಲ್ಲೂ ಹಿಂದೂಗಳ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟುವ ಕೆಲಸ ಮಾಡ್ತೀರಾ ಎಂದು ಪ್ರಶ್ನಿಸಿದರು.

    ಸಿದ್ದರಾಮಯ್ಯ (Siddaramaiah) ಟಿಪ್ಪು ಜಯಂತಿ ಆಚರಣೆ ಮಾಡಿದರು. ಆದರೆ ಯಾರೂ ಜಯಂತಿ ಮಾಡಿ ಅಂತ ಕೇಳಿರ್ಲಿಲ್ಲ. ಎಸ್‍ಡಿಪಿಐ ಕಾರ್ಯಕರ್ತರ 1,700 ಕೇಸ್ ವಾಪಸ್ ತೆಗೆದುಕೊಂಡರು. ಗೋಹತ್ಯೆಕೋರರ ಪರ ಸಿದ್ದರಾಮಯ್ಯ ಇದ್ದಾರೆ. ಸಿದ್ದರಾಮಯ್ಯ ಮುಸಲ್ಮಾನರ ನಾಯಕ ಜೊತೆಗೆ ಡಿಕೆಶಿ ಕ್ರಿಮಿನಲ್‍ಗಳ ಪರ ಇರುವ ನಾಯಕ. ಕಾಂಗ್ರೆಸ್‍ನವರ ಕೈಗೆ ರಕ್ತ ಅಂಟಿದೆ. ಈ ಹಿನ್ನೆಲೆಯಲ್ಲಿ ನಮಗೆ ದಕ್ಷಿಣ ಕರ್ನಾಟಕದಲ್ಲಿ ನಡೆದಾಡಲು ಭಯ ಆಗುತ್ತದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ನ ಅಂತಿಮ ಪಟ್ಟಿ ಬಿಡುಗಡೆ – 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ

    ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರು ನಮ್ಮ ಅಕ್ಕಪಕ್ಕದ ಮನೆಗಳಲ್ಲಿ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಬೆಂಬಲ ಇಂಥವರ ಪರ ಇದೆ. ಅಷ್ಟೇ ಅಲ್ಲದೇ ಮಂಗಳೂರು ಕುಕ್ಕರ್ ಬಾಂಬ್ ಆರೋಪಿ ನಮ್ಮ ಸೋದರ ಅಂತಾರೆ ಕಾಂಗ್ರೆಸ್‍ನವರು. ಹಾಗಾದ್ರೆ ಕಾಂಗ್ರೆಸ್‍ನವರು ಯಾರ ಪರ ಇದ್ದಾರೆ?. ಕುಕ್ಕರ್ ಬಾಂಬ್ ಭಯೋತ್ಪಾದಕ ಕೃತ್ಯ ಇಂಥವರ ಪರ ಕಾಂಗ್ರೆಸ್‍ನವರು ಇದ್ದಾರಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ : ಈಶ್ವರಪ್ಪ

  • ಅತಿಕ್ ಅಹ್ಮದ್ ಸಹಚರ ಗುಡ್ಡು ಮುಸ್ಲಿಂ ಲೊಕೇಶನ್ ಕರ್ನಾಟಕದಲ್ಲಿ ಪತ್ತೆ

    ಅತಿಕ್ ಅಹ್ಮದ್ ಸಹಚರ ಗುಡ್ಡು ಮುಸ್ಲಿಂ ಲೊಕೇಶನ್ ಕರ್ನಾಟಕದಲ್ಲಿ ಪತ್ತೆ

    ಲಕ್ನೋ: ಗ್ಯಾಂಗ್‌ಸ್ಟರ್, ರಾಜಕಾರಣಿ ಅತಿಕ್ ಅಹ್ಮದ್‌ನ (Atiq Ahmed) ಸಹಚರ ಹಾಗೂ ಉಮೇಶ್ ಪಾಲ್ (Umesh Pal) ಹತ್ಯೆ ಪ್ರಕರಣದಲ್ಲಿ ಬದುಕುಳಿದಿರುವ ಆರೋಪಿ ಗುಡ್ಡು ಮುಸ್ಲಿಂನ (Guddu Muslim) ಟವರ್ ಲೊಕೇಶನ್ ಕೊನೆಯದಾಗಿ ಕರ್ನಾಟಕದಲ್ಲಿ (Karnataka) ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    2005ರಲ್ಲಿ ಬಿಎಸ್‌ಪಿ ಶಾಸಕ ರಾಜು ಪಾಲ್ ಹತ್ಯೆ (Raju Pal) ಪ್ರಕರಣದಲ್ಲಿ ಉಮೇಶ್ ಪಾಲ್ ಪ್ರಮುಖ ಸಾಕ್ಷಿಯಾಗಿದ್ದರು. ಉಮೇಶ್ ಪಾಲ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಗುಡ್ಡು ಮುಸ್ಲಿಂ ಕೂಡಾ ಒಬ್ಬನಾಗಿದ್ದ. ಆತ ಉಮೇಶ್ ಪಾಲ್ ಹತ್ಯೆಯಾದ ದಿನ ಫೆಬ್ರವರಿ 24 ರಂದು ತಲೆಮರೆಸಿಕೊಂಡಿದ್ದಾನೆ.

    ಉಮೇಶ್ ಪಾಲ್ ಹತ್ಯೆಯಾದ ಒಂದು ದಿನದ ನಂತರ ಫೆಬ್ರವರಿ 25 ರಂದು ಪ್ರಯಾಗರಾಜ್‌ನ ಧೂಮ್‌ಗಂಜ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಹೆಸರಿಸಲಾಗಿರುವ 10 ಜನ ಆರೋಪಿಗಳಲ್ಲಿ ಗುಡ್ಡು ಮುಸ್ಲಿಂ ಸೇರಿದ್ದಾನೆ. ಉಮೇಶ್ ಪಾಲ್ ಹತ್ಯೆಯ ವೇಳೆ ಅವರ ನಿವಾಸದ ಹೊರಗಿನಿಂದ ಗುಡ್ಡು ಮುಸ್ಲಿಂ ಸ್ಫೋಟಕ ವಸ್ತುವನ್ನು ಎಸೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ತಲೆಗೆ 1, ದೇಹಕ್ಕೆ 8 ಗುಂಡೇಟು

    ಉಮೇಶ್ ಪಾಲ್ ಹತ್ಯೆಯ ಬಳಿಕ 2 ತಿಂಗಳೊಳಗೆ ಅತಿಕ್ ಅಹ್ಮದ್ ಸೇರಿದಂತೆ ಒಟ್ಟು 6 ಆರೋಪಿಗಳನ್ನು ಕೊಲ್ಲಲಾಗಿದೆ. 10 ಆರೋಪಿಗಳ ಪೈಕಿ ಹತ್ಯೆಯಾಗಿರುವ 6 ಜನರೆಂದರೆ, ಅತಿಕ್ ಅಹ್ಮದ್, ಆತನ ಪುತ್ರ ಅಸದ್, ಸಹೋದರ ಅಶ್ರಫ್, ಸಹಚರರಾದ ಅರ್ಬಾಜ್, ವಿಜಯ್ ಚೌಧರಿ ಅಲಿಯಾಸ್ ಉಸ್ಮಾನ್ ಹಾಗೂ ಗುಲಾಮ್ ಹಸನ್. ಇದೀಗ ಬದುಕುಳಿದಿರುವ ಆರೋಪಿಗಳಾದ ಗುಡ್ಡು ಮುಸ್ಲಿಂ, ಅರ್ಮಾನ್ ಹಾಗೂ ಸಬೀರ್ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಕೇರಳ ರೈಲಿಗೆ ಬೆಂಕಿ – ಇಸ್ಲಾಮಿಕ್ ಮತೀಯವಾದ ಬೆಳೆಸಿಕೊಂಡಿದ್ದ ಆರೋಪಿ

  • ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ತಲೆಗೆ 1, ದೇಹಕ್ಕೆ 8 ಗುಂಡೇಟು

    ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ತಲೆಗೆ 1, ದೇಹಕ್ಕೆ 8 ಗುಂಡೇಟು

    – ವೈದ್ಯಕೀಯ ಪರೀಕ್ಷೆ ವರದಿ ಬಹಿರಂಗ

    ನವದೆಹಲಿ: ಗ್ಯಾಂಗಸ್ಟರ್‌, ಪಾತಕಿ ಹಾಗೂ ಮಾಜಿ ಸಂಸದ ಅತೀಕ್‌ ಅಹ್ಮದ್‌ (Atiq Ahmed) ತಲೆಗೆ ಒಂದು ಗುಂಡು ಸೇರಿದಂತೆ ದೇಹವನ್ನು 9 ಗುಂಡುಗಳು ಹೊಕ್ಕಿವೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ.

    ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ಗ್ಯಾಂಗ್‌ಸ್ಟರ್‌ ದೇಹದಲ್ಲಿ ಕನಿಷ್ಠ 9 ಬುಲೆಟ್ ಹೊಕ್ಕಿದ್ದವು. ಆತನ ಸಹೋದರ ಅಶ್ರಫ್ ಅಹ್ಮದ್ ದೇಹದಿಂದ 5 ಗುಂಡುಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಹಂತಕರು ಜೈಲಿಗೆ

    ಅತೀಕ್ ಅಹ್ಮದ್ ತಲೆಗೆ ಒಂದು, ಎದೆ ಹಾಗೂ ಬೆನ್ನಿನ ಭಾಗಕ್ಕೆ ಎಂಟು ಬಾರಿ ಗುಂಡು ಹಾರಿಸಿರುವುದು ಶವಪರೀಕ್ಷೆಯಲ್ಲಿ ಪತ್ತೆಯಾಗಿದೆ. ಮೂವರು ಶೂಟರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಐವರು ವೈದ್ಯರಿದ್ದ ತಂಡ ಮರಣೋತ್ತರ ಪರೀಕ್ಷೆ ನಡೆಸಿದೆ.

    ಉಮೇಶ್‌ ಪಾಲ್‌ ಹತ್ಯೆ ಆರೋಪ ಪ್ರಕರಣದಲ್ಲಿ ಅತೀಕ್‌ ಅಹ್ಮದ್‌ನನ್ನು ಬಂಧಿಸಲಾಗಿತ್ತು. ಪ್ರಯಾಗ್‌ರಾಜ್‌ನ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಪೊಲೀಸರು ಕರೆತಂದಿದ್ದ ವೇಳೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದನ್ನೂ ಓದಿ: ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಸಹೋದರ ಗ್ಯಾಂಗ್‌ವಾರ್‌ಗೆ ಬಲಿ

    ಪತ್ರಕರ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅತೀಕ್‌ ಅಹ್ಮದ್‌ಗೆ ಮೊದಲು ತಲೆಗೆ ಗುರಿಯಿಟ್ಟು ಗುಂಡು ಹೊಡೆದರು. ನಂತರ ಆತನ ಸಹೋದರನಿಗೂ ಗುಂಡು ಹಾರಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಎಚ್ಚೆತ್ತ ಪೊಲೀಸರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದರು. ಅಷ್ಟರಲ್ಲಾಗಲೇ ಪಾತಕಿ ಅಹ್ಮದ್‌ ಮೇಲೆ ಹಲವು ಸುತ್ತಿನ ಗುಂಡು ಹಾರಿಸಲಾಗಿತ್ತು. ಅಹ್ಮದ್‌ ಮತ್ತು ಆತನ ಸಹೋದರ ಅಶ್ರಫ್‌ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದರು.