Tag: Atiq Ahmed

  • ಅತಿಕ್, ಅಶ್ರಫ್ ಹತ್ಯೆ – ಮೂವರು ಹಂತಕರ ಬಂಧನ, ಯುಪಿಯಲ್ಲಿ ಹೈ ಅಲರ್ಟ್

    ಅತಿಕ್, ಅಶ್ರಫ್ ಹತ್ಯೆ – ಮೂವರು ಹಂತಕರ ಬಂಧನ, ಯುಪಿಯಲ್ಲಿ ಹೈ ಅಲರ್ಟ್

    ಲಕ್ನೋ: ಮಾಜಿ ಸಂಸದ, ಗ್ಯಾಂಗ್‌ಸ್ಟರ್ ಅತಿಕ್ ಅಹ್ಮದ್ (Atiq Ahmed) ಹಾಗೂ ಆತನ ಸಹೋದರ ಅಶ್ರಫ್‌ನನ್ನು (Ashraf) ಶನಿವಾರ ಪ್ರಯಾಗ್‌ರಾಜ್‌ನಲ್ಲಿ (Prayagraj) ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉತ್ತರ ಪ್ರದೇಶದಾದ್ಯಂತ (Uttar Pradesh) ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

    ಉಮೇಶ್ ಪಾಲ್ ಕೊಲೆ ಪ್ರಕರಣದ ಆರೋಪಿಗಳಾದ ಅತಿಕ್ ಹಾಗೂ ಅಶ್ರಫ್‌ನನ್ನು ಶನಿವಾರ ಪ್ರಯಾಗ್‌ರಾಜ್ ಆಸ್ಪತ್ರೆಗೆ ಮೆಡಿಕಲ್ ಚೆಕಪ್‌ಗೆಂದು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರಿಬ್ಬರ ಮೇಲೆ ಗುಂಡು ಹಾರಿಸಲಾಗಿದೆ. ಅತಿಕ್ ಹಾಗೂ ಅಶ್ರಫ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆಯೇ ಪತ್ರಕರ್ತರ ರೂಪದಲ್ಲಿ ಬಂದಿದ್ದ ಬಂದೂಕುಧಾರಿಗಳು ಅವರಿಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

    ಘಟನೆಗೆ ಸಂಬಂಧಿಸಿದಂತೆ ಮೂವರು ಹಂತಕರನ್ನು ತಕ್ಷಣವೇ ಅಧಿಕಾರಿಗಳು ಬಂಧಿಸಿದ್ದು, ಅವರನ್ನು ಲವ್ಲೇಶ್, ಸನ್ನಿ ಹಾಗೂ ಅರುಣ್ ಮೌರ್ಯ ಎಂದು ಪೊಲೀಸರು ಗುರುತಿಸಿದ್ದಾರೆ. ಇವರು ಪತ್ರಕರ್ತರಂತೆ ಬಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅತಿಕ್ ಹಾಗೂ ಅಶ್ರಫ್ ಮೇಲೆ ಗುಂಡು ಹಾರಿಸಿದ್ದಾರೆ.

    ಘಟನೆಯ ಬಳಿಕ ಮಥುರಾ, ಅಯೋಧ್ಯೆ ಸೇರಿದಂತೆ ಉತ್ತರಪ್ರದೇಶದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಪ್ರಮುಖ ನಗರಗಳಲ್ಲಿ ಭದ್ರತಾ ಅಧಿಕಾರಿಗಳು ಗುಸ್ತು ತಿರುಗುತ್ತಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಭಾನುವಾರ ಎಲ್ಲಾ ಜಿಲ್ಲೆಗಳಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ವಿಧಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಏನಿದು ಪ್ರಕರಣ?
    2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಉಮೇಶ್ ಪಾಲ್ ಪ್ರಮುಖ ಸಾಕ್ಷಿಯಾಗಿದ್ದರು. ಫೆ.24 ರಂದು ಉಮೇಶ್ ಪಾಲ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.

    ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 40 ಜನರನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ. ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್, ಆತನ ಸಹೋದರ ಮತ್ತು ಮಾಜಿ ಶಾಸಕ ಅಶ್ರಫ್ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದು ಇವರಿಬ್ಬರೂ ಜೈಲಿನಲ್ಲಿದ್ದರು. ಇದನ್ನೂ ಓದಿ: ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಸಹೋದರ ಗ್ಯಾಂಗ್‌ವಾರ್‌ಗೆ ಬಲಿ

    ಕಳೆದ ಕೆಲ ದಿನಗಳ ಹಿಂದಷ್ಟೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಅತಿಕ್ ಅಹ್ಮದ್‌ನ ಪುತ್ರ ಅಸದ್‌ನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿತ್ತು. ಇದಕ್ಕೂ ಮುನ್ನವೇ ತಮ್ಮನ್ನು ಜೈಲಿನಿಂದ ಹೊರಗಡೆ ಕರೆದುಕೊಂಡು ಹೋಗುವ ವೇಳೆ ಯಾರಾದರೂ ತಮ್ಮನ್ನು ಗುಂಡಿಕ್ಕಿ ಕೊಲ್ಲಬಹುದು ಎಂದು ಅಶ್ರಫ್ ಭೀತಿ ವ್ಯಕ್ತಪಡಿಸಿದ್ದ. ಹಾಗೂ ತಮ್ಮನ್ನು ಜೈಲಿನಿಂದ ಹೊರಗೆ ಕರೆದುಕೊಂಡು ಹೋಗದಂತೆ ಮನವಿ ಮಾಡಿಕೊಂಡಿದ್ದ. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್‌ – ಗ್ಯಾಂಗ್‌ ಸ್ಟಾರ್‌ ಅತಿಕ್‌ ಪುತ್ರ ಎನ್‌ಕೌಂಟರ್‌ಗೆ ಬಲಿ

  • ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಸಹೋದರ ಗ್ಯಾಂಗ್‌ವಾರ್‌ಗೆ ಬಲಿ

    ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಸಹೋದರ ಗ್ಯಾಂಗ್‌ವಾರ್‌ಗೆ ಬಲಿ

    ಲಕ್ನೋ: ಮಾಜಿ ಸಂಸದ, ಗ್ಯಾಂಗ್‌ ಸ್ಟಾರ್‌ ಅತಿಕ್‌ ಅಹ್ಮದ್‌ (Atiq Ahmed) ಮತ್ತು ಸಹೋದರ ಅಶ್ರಫ್‌ ಅಹ್ಮದ್‌ ಗ್ಯಾಂಗ್‌ವಾರ್‌ಗೆ ಬಲಿಯಾಗಿದ್ದಾರೆ.

    ಇಬ್ಬರನ್ನು ಇಂದು ಪ್ರಯಾಗ್‌ರಾಜ್‌ ಆಸ್ಪತ್ರೆಗೆ ಮೆಡಿಕಲ್‌ ಚೆಕಪ್‌ಗೆಂದು ಕರೆದುಕೊಂಡು ಹೋಗಲಾಗುತ್ತಿತ್ತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಲು ಮುಂದಾಗುತ್ತಿದ್ದಾಗ ಎಲ್ಲಿಂದಲೋ ಬಂದ ಇಬ್ಬರು ಅನಾಮಿಕ ವ್ಯಕ್ತಿಗಳು ಪಿಸ್ತೂಲ್‌ನಿಂದ ಶೂಟ್‌ ಮಾಡಿ ಹತ್ಯೆ ಮಾಡಿದ್ದಾರೆ.

    ಏಪ್ರಿಲ್‌ 13 ರಂದು ಅತಿಕ್‌ ಅಹ್ಮದ್‌ ಪುತ್ರ ಅಸಾದ್‌ (Asad) ಮತ್ತು ಗುಲಾಂನನ್ನು ಉತ್ತರ ಪ್ರದೇಶ (Uttar pradesh) ಪೊಲೀಸರು ಎನ್‌ಕೌಂಟರ್‌ (Encounter) ಮಾಡಿ ಹತ್ಯೆ ಮಾಡಿದ್ದರು.

    https://twitter.com/ANI/status/1647291564136308737

    ಉಮೇಶ್ ಪಾಲ್ ಹತ್ಯೆ ಪ್ರಕರಣದ (Umesh Pal Murder Case) ಪ್ರಮುಖ ಆರೋಪಿಗಳಾದ ಅಸಾದ್‌ ಮತ್ತು ಗುಲಾಂ ಅವರ ಬಗ್ಗೆ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ನಾಪತ್ತೆಯಾಗಿದ್ದ ಈ ಇಬ್ಬರನ್ನು ಝಾನ್ಸಿಯಲ್ಲಿ ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಲಾಗಿದೆ.

    2005ರ ಬಹುಜನ ಸಮಾಜ ಪಾರ್ಟಿಯ (Bahujan Samaj Party) ಶಾಸಕ ರಾಜುಪಾಲ್ (Raju Pal) ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ (Umesh Pal) ಅವರನ್ನು ಫೆ.24 ರಂದು ಅತಿಕ್ ಅಹಮ್ಮದ್ ಗ್ಯಾಂಗ್ ಸದಸ್ಯರು ಗುಂಡಿಟ್ಟು ಹತ್ಯೆ ಮಾಡಿದ್ದರು. ಹತ್ಯೆಯಾದ ಇಬ್ಬರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.

    ಈ ಹಿಂದೆ ಗುಜರಾತಿನ ಸಬರಮತಿ (Sabarmati) ಜೈಲಿನಿಂದ ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ಗೆ (Prayagraj) ಕರೆದೊಯ್ಯುವ ವೇಳೆ ಪತ್ರಕರ್ತರು ಜೀವ ಭಯವಿದೆಯೇ ಎಂದು ಕೇಳಿದ್ದರು. ಈ ಪ್ರಶ್ನೆಗೆ ಅತಿಕ್ ನ್ಯಾಯಾಲಯಕ್ಕೆ ಕರೆದೊಯ್ಯುವುದು ಪೊಲೀಸರು ನನ್ನನ್ನು ಕೊಲ್ಲಲು ಇರುವ ನೆಪವಾಗಿದೆ ಎಂದಿದ್ದ.

    2005ರ ಬಹುಜನ ಸಮಾಜ ಪಾರ್ಟಿಯ (Bahujan Samaj Party) ಶಾಸಕ ರಾಜುಪಾಲ್ (Raju Pal) ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ (Umesh Pal) ಅವರನ್ನು ಫೆ.24 ರಂದು ಅತಿಕ್ ಅಹಮ್ಮದ್ ಗ್ಯಾಂಗ್ ಸದಸ್ಯರು ಗುಂಡಿಟ್ಟು ಹತ್ಯೆ ಮಾಡಿದ್ದರು.  ಹತ್ಯೆಯಾದ ಇಬ್ಬರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.

    ಏನಿದು ಪ್ರಕರಣ?
    2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಉಮೇಶ್ ಪಾಲ್ ಪ್ರಮುಖ ಸಾಕ್ಷಿಯಾಗಿದ್ದರು. ಫೆ.24 ರಂದು ಉಮೇಶ್ ಪಾಲ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು

    ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 40 ಜನರನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ. ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್, ಆತನ ಸಹೋದರ ಮತ್ತು ಮಾಜಿ ಶಾಸಕ ಅಶ್ರಫ್ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದು ಇವರಿಬ್ಬರೂ ಜೈಲಿನಲ್ಲಿದ್ದರು.

  • ಸಿಎಂ ಯೋಗಿ ಆದಿತ್ಯನಾಥ್ ನನ್ನ ಅಣ್ಣ ಎಂದ ನಟಿ ಕಂಗನಾ ರಣಾವತ್

    ಸಿಎಂ ಯೋಗಿ ಆದಿತ್ಯನಾಥ್ ನನ್ನ ಅಣ್ಣ ಎಂದ ನಟಿ ಕಂಗನಾ ರಣಾವತ್

    ತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಎನ್ ಕೌಂಟರ್ ಕಾರಣದಿಂದಾಗಿ ಸಖತ್ ಸುದ್ದಿ ಆಗುತ್ತಿದ್ದಾರೆ. ಗ್ಯಾಂಗ್ ಸ್ಟರ್ ಗಳಿಗೆ ಸಿಂಹಸ್ವಪ್ನವಾಗಿರುವ ಯೋಗಿ ಆದಿತ್ಯನಾಥ್ ‘ಮಿಟ್ಟಿ ಮೇ ಮಿಲಾ ದೂಂಗಾ (ಮಣ್ಣಿನೊಳಗೆ ಮಣ್ಣು ಮಾಡುತ್ತೇನೆ’ ಎಂದು ಹೇಳಿದ ಹೇಳಿಕೆ ರೌಡಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ. ರೌಡಿಗಳ ಹೆಡೆಮೂರಿ ಕಟ್ಟಿ ಜೈಲಿಗೆ ಅಥವಾ ಸ್ಮಶಾನಕ್ಕೆ ಕಳುಹಿಸುತ್ತಿರುವುದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ.

    ಉತ್ತರ ಪ್ರದೇಶವನ್ನು ರೌಡಿಗಳಿಂದ ಮುಕ್ತಗೊಳಿಸುತ್ತೇನೆ ಎಂದು ಹೊರಟಿರುವ ಯೋಗಿ ಆದಿತ್ಯನಾಥ್ ಅವರನ್ನು ಬಾಯ್ತುಂಬಾ ಹೊಗಳಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut). ಯೋಗಿ ಕೈಗೊಂಡಿರುವ ಈ ಕ್ರಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನೂ ಆಡಿರುವ ಕಂಗನಾ, ‘ಯೋಗಿ ಆದಿತ್ಯನಾಥ್ ನನ್ನ ಸಹೋದರ. ಅವರನ್ನು ನನ್ನಷ್ಟು ಪ್ರೀತಿಸುವವರೂ ಯಾರೂ ಇಲ್ಲ’ ಎಂದು ಹೇಳಿದ್ದಾರೆ. ಇದನ್ನೂ ಓದಿ: KGF 2ಗೆ 1 ವರ್ಷ- ಪಾರ್ಟ್ 3 ಬಗ್ಗೆ ಸಿಹಿಸುದ್ದಿ ಕೊಟ್ಟ ಹೊಂಬಾಳೆ ಫಿಲ್ಮ್ಸ್

    ಅಲ್ಲದೇ, ಉಮೇಶ್ ಪಾಲ್ (Umesh Paul) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀಕ್ ಅಹ್ಮದ್ (Atiq Ahmed) ಅವರ ಮಗ ಅಸದ್ ಮತ್ತು ಆತನ ಸಹಚರರನ್ನು ಉತ್ತರ ಪ್ರದೇಶದ ಪೊಲೀಸರು ಎನ್ ಕೌಂಟರ್ ಮಾಡಿ ಸಾಯಿಸಿದ್ದಾರೆ. ಈ ಸಂಬಂಧವಾಗಿ ಕಂಗನಾ ಹುಮ್ಮಸ್ಸಿನಿಂದಲೇ ಯೋಗಿ ಆದಿತ್ಯನಾಥ್ ಅವರನ್ನು ಮುಕ್ತ ಕಂಠದಿಂದ ಶ್ಲ್ಯಾಘಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವುದು ನಕಲಿ ಎನ್ ಕೌಂಟರ್ ಎಂದು ಪ್ರಗತಿಪರರು ವಿರೋಧಿಸುತ್ತಿದ್ದರೆ ಮತ್ತೊಂದು ಕಡೆ ಎನ್ ಕೌಂಟರ್ ಅನ್ನು ಸ್ವಾಗತಿಸಿಯೂ ಬೆಂಬಲ ಸೂಚಿಸಿದ್ದಾರೆ. ಕಂಗನಾ ರಣಾವತ್ ಈ ವಿಷಯದಲ್ಲಿ ಯೋಗಿ ಆದಿತ್ಯನಾಥ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

  • ಬಿಜೆಪಿಗೆ ನ್ಯಾಯಾಲಯಗಳಲ್ಲಿ ನಂಬಿಕೆ ಇಲ್ಲ, ಇದು ನಕಲಿ ಎನ್‌ಕೌಂಟರ್‌ : ಅಖಿಲೇಶ್‌ ಯಾದವ್‌

    ಬಿಜೆಪಿಗೆ ನ್ಯಾಯಾಲಯಗಳಲ್ಲಿ ನಂಬಿಕೆ ಇಲ್ಲ, ಇದು ನಕಲಿ ಎನ್‌ಕೌಂಟರ್‌ : ಅಖಿಲೇಶ್‌ ಯಾದವ್‌

    ಲಕ್ನೋ: ಗ್ಯಾಂಗ್‌‌ ಸ್ಟಾರ್‌, ರಾಜಕಾರಣಿ ಅತೀಕ್ ಅಹ್ಮದ್ ಪುತ್ರ (Atiq Ahmed) ಅಸಾದ್‌ ಮತ್ತು ಸಹಚರನನ್ನು ಕೊಲ್ಲಲು ನಕಲಿ ಎನ್‌ಕೌಂಟರ್‌ (Fake Encounter) ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

    ರಾಜ್ಯವನ್ನು ಕಾಡುತ್ತಿರುವ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಆಡಳಿತ ಪಕ್ಷ ನಕಲಿ ಎನ್‌ಕೌಂಟರ್‌ ನಡೆಸುತ್ತಿದೆ ಎಂದು ಆರೋಪಿಸಿದರು.  ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್‌ – ಗ್ಯಾಂಗ್‌ ಸ್ಟಾರ್‌ ಅತಿಕ್‌ ಪುತ್ರ ಎನ್‌ಕೌಂಟರ್‌ಗೆ ಬಲಿ

    ಬಿಜೆಪಿಗೆ (BJP) ನ್ಯಾಯಾಲಯಗಳ ಮೇಲೆ ನಂಬಿಕೆ ಇಲ್ಲ. ಅಧಿಕಾರದಲ್ಲಿರುವವರು ಯಾರು ಬದುಕಬೇಕು ಅಥವಾ ಸಾಯಬೇಕು ಎಂದು ನಿರ್ಧರಿಸಲು ಸಾಧ್ಯವಿಲ್ಲ. ಇಂದಿನ ಮತ್ತು ಇತ್ತೀಚಿನ ಎನ್‌ಕೌಂಟರ್‌ಗಳ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

    ಅಸದ್ ಮತ್ತು ಗುಲಾಮ್ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಝಾನ್ಸಿಯಲ್ಲಿ ವಿಶೇಷ ಕಾರ್ಯಪಡೆ ತಂಡವು ಅವರನ್ನು ತಡೆದಿದೆ. ಈ ವೇಳೆ ಅವರು ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಬಲಿಯಾಗಿದ್ದಾರೆ. ಇವರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

  • ಉಮೇಶ್ ಪಾಲ್ ಹತ್ಯೆ ಕೇಸ್‌ – ಗ್ಯಾಂಗ್‌ ಸ್ಟಾರ್‌ ಅತಿಕ್‌ ಪುತ್ರ ಎನ್‌ಕೌಂಟರ್‌ಗೆ ಬಲಿ

    ಉಮೇಶ್ ಪಾಲ್ ಹತ್ಯೆ ಕೇಸ್‌ – ಗ್ಯಾಂಗ್‌ ಸ್ಟಾರ್‌ ಅತಿಕ್‌ ಪುತ್ರ ಎನ್‌ಕೌಂಟರ್‌ಗೆ ಬಲಿ

    ಲಕ್ನೋ: ಮಾಜಿ ಸಂಸದ, ಗ್ಯಾಂಗ್‌ ಸ್ಟಾರ್‌ ಅತಿಕ್‌ ಅಹ್ಮದ್‌ (Atiq Ahmed) ಪುತ್ರ ಅಸಾದ್‌ (Asad)  ಉತ್ತರ ಪ್ರದೇಶ (Uttar pradesh) ಪೊಲೀಸರ ಎನ್‌ಕೌಂಟರ್‌ಗೆ (Encounter) ಬಲಿಯಾಗಿದ್ದಾನೆ.

    ಉಮೇಶ್ ಪಾಲ್ ಹತ್ಯೆ ಪ್ರಕರಣದ ( Umesh Pal Murder Case ) ಪ್ರಮುಖ ಆರೋಪಿಗಳಾದ ಅಸಾದ್‌ ಮತ್ತು ಗುಲಾಂ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ನಾಪತ್ತೆಯಾಗಿದ್ದ ಈ ಇಬ್ಬರನ್ನು ಇಂದು ಝಾನ್ಸಿಯಲ್ಲಿ ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಲಾಗಿದೆ.

    2005ರ ಬಹುಜನ ಸಮಾಜ ಪಾರ್ಟಿಯ (Bahujan Samaj Party) ಶಾಸಕ ರಾಜುಪಾಲ್ (Raju Pal) ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ (Umesh Pal) ಅವರನ್ನು ಫೆ.24 ರಂದು ಅತಿಕ್ ಅಹಮ್ಮದ್ ಗ್ಯಾಂಗ್ ಸದಸ್ಯರು ಗುಂಡಿಟ್ಟು ಹತ್ಯೆ ಮಾಡಿದ್ದರು.

    ಹತ್ಯೆಯಾದ ಇಬ್ಬರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಯುಪಿ ಪೊಲೀಸರಿಂದ ಹತ್ಯೆಯಾಗುವ ಭಯವಿದೆ – ಬಂಧನದಲ್ಲಿರುವ ಮಾಜಿ ಸಂಸದ ಅತಿಕ್ ಅಹಮ್ಮದ್

    ಏನಿದು ಪ್ರಕರಣ?
    2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಉಮೇಶ್ ಪಾಲ್ ಪ್ರಮುಖ ಸಾಕ್ಷಿಯಾಗಿದ್ದರು. ಫೆ.24 ರಂದು ಉಮೇಶ್ ಪಾಲ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು

    ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 40 ಜನರನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ. ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್, ಆತನ ಸಹೋದರ ಮತ್ತು ಮಾಜಿ ಶಾಸಕ ಅಶ್ರಫ್ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ಇವರಿಬ್ಬರೂ ಸದ್ಯ ಜೈಲಿನಲ್ಲಿದ್ದಾರೆ.

    ಉಮೇಶ್ ಪಾಲ್ ಅವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದರು.

  • ಹಿರಿಯ ಅಧಿಕಾರಿಯಿಂದ ಬೆದರಿಕೆ, 2 ವಾರದೊಳಗೆ ನನ್ನ ಕೊಲ್ಬೋದು – ಅತೀಕ್ ಸಹೋದರ ಅಶ್ರಫ್

    ಹಿರಿಯ ಅಧಿಕಾರಿಯಿಂದ ಬೆದರಿಕೆ, 2 ವಾರದೊಳಗೆ ನನ್ನ ಕೊಲ್ಬೋದು – ಅತೀಕ್ ಸಹೋದರ ಅಶ್ರಫ್

    ಲಕ್ನೋ: ನನಗೆ ಹಿರಿಯ ಅಧಿಕಾರಿಯಿಂದ ಜೀವ ಬೆದರಿಕೆಯಿದೆ ಎಂದು ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್‌ನ (Atiq Ahmed) ಸಹೋದರ ಅಶ್ರಫ್ ಅಹ್ಮದ್ (Ashraf Ahmed) ಹೇಳಿಕೆ ನೀಡಿದ್ದಾನೆ.

    2006ರಲ್ಲಿ ಉಮೇಶ್ ಪಾಲ್ (Umesh Pal) ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ 7 ಜನರಲ್ಲಿ ಅಶ್ರಫ್ ಅಹ್ಮದ್ ಕೂಡಾ ಒಬ್ಬ. ತನಗೆ ಜೀವಬೆದರಿಕೆಯಿದ್ದು, 2 ವಾರದೊಳಗೆ ನನ್ನನ್ನು ಕೊಲೆ ಮಾಡಬಹುದು ಎಂದು ಅಶ್ರಫ್ ಭೀತಿ ವ್ಯಕ್ತಪಡಿಸಿದ್ದಾನೆ.

    ಮಂಗಳವಾರ ಅಶ್ರಫ್‌ನನ್ನು ಬರೇಲಿ ಜೈಲಿಗೆ ಸ್ಥಳಾಂತರಿಸಲಾಗಿದ್ದು, ಅತೀಕ್‌ನನ್ನು ಗುಜರಾತ್‌ನ ಸಾಬರಮತಿ ಜೈಲಿಗೆ ಕರೆತರಲಾಗುತ್ತಿದೆ. ಅಶ್ರಫ್‌ನನ್ನು ಬರೇಲಿ ಜೈಲಿಗೆ ಸ್ಥಳಾಂತರಿಸುವಾಗ ನನ್ನನ್ನು ಜೈಲಿನಿಂದ ಹೊರಗೆ ಕರೆದೊಯ್ಯುವ ಸಂದರ್ಭದಲ್ಲಿ 2 ವಾರಗಳ ಒಳಗಾಗಿ ಕೊಲ್ಲುವ ಸಾಧ್ಯತೆಯಿದೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ನನಗೆ ವಯಸ್ಸಾಗಿದೆ, ಟಿಕೆಟ್ ಬೇಡ: ಶಾಸಕ ಎಂ.ವೈ ಪಾಟೀಲ್

    ಈ ಹಿಂದೆ ಅಶ್ರಫ್ ತನ್ನನ್ನು ದಯವಿಟ್ಟು ಜೈಲಿನಿಂದ ಹೊಗೆ ಕರೆದುಕೊಂಡು ಹೋಗಬೇಡಿ. ಜೈಲಿನಿಂದ ಆಚೆ ಕರೆದುಕೊಂಡು ಹೋಗುವ ವೇಳೆ ನನ್ನನ್ನು ಕೊಲೆ ಮಾಡುವ ಸಾಧ್ಯತೆಯಿದೆ ಎಂದು ಭೀತಿ ವ್ಯಕ್ತಪಡಿಸಿದ್ದ. ಇದೀಗ ಅಶ್ರಫ್ ನನ್ನನ್ನು ಜೈಲಿನಿಂದ ಆಚೆ ಕರೆದುಕೊಂಡು ಹೋಗುವ ವೇಳೆ 2 ವಾರಗಳಲ್ಲಿ ಕೊಲ್ಲುವುದಾಗಿ ಅಧಿಕಾರಿಯೊಬ್ಬರು ನನಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ.

    ಬೆದರಿಕೆಯ ಕುರಿತು ಮಾತನಾಡಿದ ಅಶ್ರಫ್, ತನಗೆ ಬೆದರಿಕೆಯನ್ನು ಹಿರಿಯ ಅಧಿಕಾರಿಯೊಬ್ಬರು ನೀಡಿದ್ದಾರೆ. ಅವರ ಹೆಸರನ್ನು ಮುಖ್ಯಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಅಲಹಾಬಾದ್ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗಪಡಿಸುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಕಲ್ಲೆಸೆದರೆ 5 ವರ್ಷ ಜೈಲು?- ರೈಲ್ವೆ ಎಚ್ಚರಿಕೆ

  • ಉಮೇಶ್‌ ಪಾಲ್‌ ಕಿಡ್ನ್ಯಾಪ್‌, ಕೊಲೆ ಪ್ರಕರಣ – ಮಾಜಿ ಸಂಸದ, ಪಾತಕಿ ಅತೀಕ್‌ ಅಹ್ಮದ್‌ಗೆ ಜೀವಾವಧಿ ಶಿಕ್ಷೆ

    ಉಮೇಶ್‌ ಪಾಲ್‌ ಕಿಡ್ನ್ಯಾಪ್‌, ಕೊಲೆ ಪ್ರಕರಣ – ಮಾಜಿ ಸಂಸದ, ಪಾತಕಿ ಅತೀಕ್‌ ಅಹ್ಮದ್‌ಗೆ ಜೀವಾವಧಿ ಶಿಕ್ಷೆ

    ಲಕ್ನೋ: 2006 ರ ಉಮೇಶ್ ಪಾಲ್ (Umesh Pal) ಅಪಹರಣ ಪ್ರಕರಣದಲ್ಲಿ ಪ್ರಯಾಗ್‌ರಾಜ್‌ನ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿ ಗ್ಯಾಂಗ್‌ಸ್ಟರ್ ಸಮಾಜವಾದಿ ಪಕ್ಷದ ಮಾಜಿ ಸಂಸದ ಮತ್ತು ಪಾತಕಿ ಅತೀಕ್ ಅಹ್ಮದ್ (Atiq Ahmed) ಮತ್ತು ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

    ಈ ಪ್ರಕರಣದಲ್ಲಿ ಅತೀಕ್ ಅಹ್ಮದ್ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸೇರಿದಂತೆ ಏಳು ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಇದನ್ನೂ ಓದಿ: ಕರೆಂಟ್ ಕಟ್ ಮಾಡಿದ್ದಕ್ಕೆ ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಹಾಕಿದ ಭೂಪ

    ಕೊಲೆ ಮತ್ತು ಅಪಹರಣ ಸೇರಿದಂತೆ 100 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಮಾಜಿ ಸಂಸದ ಮತ್ತು ಶಾಸಕ ಅಹ್ಮದ್ ಅವರನ್ನು ಸೋಮವಾರ ಉತ್ತರ ಪ್ರದೇಶ ಪೊಲೀಸರು ಗುಜರಾತ್ ಜೈಲಿನಿಂದ ಪ್ರಯಾಗ್‌ರಾಜ್‌ಗೆ ಕರೆತಂದರು.

    ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಅವರ (2005) ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಹತ್ಯೆಯ ಒಂದು ತಿಂಗಳ ನಂತರ ಅಹ್ಮದ್ ಅವರಿಗೆ ಶಿಕ್ಷೆಯಾಗಿದೆ. ಇದನ್ನೂ ಓದಿ: ಧನ್ಯವಾದ, ಮನೆ ಖಾಲಿ ಮಾಡುವೆ – ಲೋಕಸಭೆಯ ವಸತಿ ಸಮಿತಿ ಪತ್ರಕ್ಕೆ ರಾಗಾ ಉತ್ತರ

    ಈ ವರ್ಷ ಫೆಬ್ರವರಿ 24 ರಂದು ಪ್ರಯಾಗರಾಜ್‌ನಲ್ಲಿ ಹ್ಯುಂಡೈ ಕ್ರೆಟಾ ಎಸ್‌ಯುವಿಯ ಹಿಂಬದಿಯಿಂದ ಹೊರಬರುತ್ತಿದ್ದಾಗ ಉಮೇಶ್ ಪಾಲ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಅವರ ಜೊತೆಗಿದ್ದ ಇಬ್ಬರು ಪೊಲೀಸ್ ಅಂಗರಕ್ಷಕರೂ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದರು.

  • ಉಮೇಶ್‌ ಪಾಲ್‌ ಕಿಡ್ನ್ಯಾಪ್‌, ಕೊಲೆ ಪ್ರಕರಣ – ಮಾಜಿ ಸಂಸದ, ಪಾತಕಿ ಅತೀಕ್‌ ಅಹ್ಮದ್‌ಗೆ ಜೀವಾವಧಿ ಶಿಕ್ಷೆ

    ಉಮೇಶ್‌ ಪಾಲ್‌ ಕಿಡ್ನ್ಯಾಪ್‌, ಕೊಲೆ ಪ್ರಕರಣ – ಮಾಜಿ ಸಂಸದ, ಪಾತಕಿ ಅತೀಕ್‌ ಅಹ್ಮದ್‌ಗೆ ಜೀವಾವಧಿ ಶಿಕ್ಷೆ

    ಲಕ್ನೋ: 2006 ರ ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಪ್ರಯಾಗ್‌ರಾಜ್‌ನ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿ ಗ್ಯಾಂಗ್‌ಸ್ಟರ್ ಸಮಾಜವಾದಿ ಪಕ್ಷದ ಮಾಜಿ ಸಂಸದ ಮತ್ತು ಪಾತಕಿ ಅತೀಕ್ ಅಹ್ಮದ್ ಮತ್ತು ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

    ಈ ಪ್ರಕರಣದಲ್ಲಿ ಅತೀಕ್ ಅಹ್ಮದ್ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸೇರಿದಂತೆ ಏಳು ಮಂದಿಯನ್ನು ಖುಲಾಸೆಗೊಳಿಸಲಾಗಿದೆ.

     

    ಕೊಲೆ ಮತ್ತು ಅಪಹರಣ ಸೇರಿದಂತೆ 100 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಮಾಜಿ ಸಂಸದ ಮತ್ತು ಶಾಸಕ ಅಹ್ಮದ್ ಅವರನ್ನು ಸೋಮವಾರ ಉತ್ತರ ಪ್ರದೇಶ ಪೊಲೀಸರು ಗುಜರಾತ್ ಜೈಲಿನಿಂದ ಪ್ರಯಾಗ್‌ರಾಜ್‌ಗೆ ಕರೆತಂದರು.

    ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಅವರ (2005) ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಹತ್ಯೆಯ ಒಂದು ತಿಂಗಳ ನಂತರ ಅಹ್ಮದ್ ಅವರಿಗೆ ಶಿಕ್ಷೆಯಾಗಿದೆ.

    ಈ ವರ್ಷ ಫೆಬ್ರವರಿ 24 ರಂದು ಪ್ರಯಾಗರಾಜ್‌ನಲ್ಲಿ ಹ್ಯುಂಡೈ ಕ್ರೆಟಾ ಎಸ್‌ಯುವಿಯ ಹಿಂಬದಿಯಿಂದ ಹೊರಬರುತ್ತಿದ್ದಾಗ ಉಮೇಶ್ ಪಾಲ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಅವರ ಜೊತೆಗಿದ್ದ ಇಬ್ಬರು ಪೊಲೀಸ್ ಅಂಗರಕ್ಷಕರೂ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದರು.

  • ಗ್ಯಾಂಗ್‍ಸ್ಟರ್ ಅತೀಕ್‍ನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ಬೆಂಗಾವಲು ವಾಹನಕ್ಕೆ ಹಸು ಡಿಕ್ಕಿ

    ಗ್ಯಾಂಗ್‍ಸ್ಟರ್ ಅತೀಕ್‍ನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ಬೆಂಗಾವಲು ವಾಹನಕ್ಕೆ ಹಸು ಡಿಕ್ಕಿ

    ಲಕ್ನೋ: ಗ್ಯಾಂಗ್‍ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್‍ನನ್ನು (Atiq Ahmed) ಉತ್ತರ ಪ್ರದೇಶಕ್ಕೆ (Uttar Pradesh) ಸ್ಥಳಾಂತರಿಸುವಾಗ ಬೆಂಗಾವಲು ವಾಹನಕ್ಕೆ (Vehicle) ಹಸುವೊಂದು (Cow) ಡಿಕ್ಕಿ ಹೊಡೆದ ಘಟನೆ ನಡೆದಿದೆ.

    ಉತ್ತರ ಪ್ರದೇಶದ ಶಿವಪುರಿಯಲ್ಲಿ ಬೆಂಗಾವಲು ಪಡೆ ಪ್ರಯೋಜ್‍ರಾಜ್‍ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಪಘಾತದ ನಂತರ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ.

    ಅತಿಕ್ ಅಹ್ಮದ್ ಅವರನ್ನು ಗುಜರಾತ್‍ನ ಸಬರಮತಿ ಜೈಲಿನಿಂದ ಹೊರಗೆ ಕರೆದೊಯ್ಯಲಾಯಿತು. ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಸೋಮವಾರ ಸಂಜೆಯೊಳಗೆ ಪ್ರಯಾಗ್‍ರಾಜ್ ತಲುಪಲಿದೆ.

    ಅತಿಕ್ ಅಹ್ಮದ್‍ನ ಜೈಲಿನಲ್ಲಿದ್ದಾಗ ರಿಯಲ್ ಎಸ್ಟೇಟ್ ಉದ್ಯಮಿ ಮೋಹಿತ್ ಜೈಸ್ವಾಲ್ ಅವರನ್ನು ಅಪಹರಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ʻಫುಟ್ಬಾಲ್ʼ ಚಿಹ್ನೆ ತೆಗೆದುಕೊಂಡ ಕಥೆ ವಿವರಿಸಿದ ಜನಾರ್ದನ ರೆಡ್ಡಿ

    ಇತ್ತೀಚೆಗೆ ಉಮೇಶ್ ಪಾಲ್ ಹತ್ಯೆ ಪ್ರಕರಣ ಸೇರಿದಂತೆ 100ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಈತನ ಹೆಸರಿದೆ. ಈ ವರ್ಷ ಫೆಬ್ರವರಿ 24 ರಂದು ಪ್ರಯಾಗ್‍ರಾಜ್‍ನಲ್ಲಿರುವ ಅವರ ನಿವಾಸದ ಹೊರಗೆ ಉಮೇಶ್ ಪಾಲ್‍ನನ್ನು ಗುಂಡಿಕ್ಕಿ ಕೊಲ್ಲಲಾಯಿತು. ಇದನ್ನೂ ಓದಿ: ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ

  • ಯುಪಿ ಪೊಲೀಸರಿಂದ ಹತ್ಯೆಯಾಗುವ ಭಯವಿದೆ – ಬಂಧನದಲ್ಲಿರುವ ಮಾಜಿ ಸಂಸದ ಅತಿಕ್ ಅಹಮ್ಮದ್

    ಯುಪಿ ಪೊಲೀಸರಿಂದ ಹತ್ಯೆಯಾಗುವ ಭಯವಿದೆ – ಬಂಧನದಲ್ಲಿರುವ ಮಾಜಿ ಸಂಸದ ಅತಿಕ್ ಅಹಮ್ಮದ್

    ಗಾಂಧಿನಗರ: ಉತ್ತರ ಪ್ರದೇಶದ (Uttar Pradesh) ಪೊಲೀಸರು ನನ್ನನ್ನು ಕೋಲ್ಲಲು ಯೋಜಿಸಿದ್ದಾರೆ ಎಂದು ಗ್ಯಾಂಗ್‍ಸ್ಟರ್‌ನಿಂದ  ಬದಲಾಗಿದ್ದ ರಾಜಕಾರಣಿ ಹಾಗೂ ಸಮಾಜವಾದ ಪಾರ್ಟಿಯ (Samajwadi Party) ಮಾಜಿ ಸಂಸದ ಅತಿಕ್ ಅಹಮ್ಮದ್ (Atiq Ahmed) ಆರೋಪಿಸಿದ್ದಾನೆ.

    ಭಾನುವಾರ ಅವರನ್ನು ಗುಜರಾತಿನ ಸಬರಮತಿ (Sabarmati) ಜೈಲಿನಿಂದ ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ಗೆ (Prayagraj) ಕರೆದೊಯ್ಯುವ ವೇಳೆ ಪತ್ರಕರ್ತರು, ನಿಮಗೆ ಜೀವ ಭಯವಿದೆಯೇ ಎಂದು ಕೇಳಿದ್ದಾರೆ. ಆದಕ್ಕೆ ಅತಿಕ್, ನ್ಯಾಯಾಲಯಕ್ಕೆ ಕರೆದೊಯ್ಯುವುದು ಪೊಲೀಸರು ನನ್ನನ್ನು ಕೊಲ್ಲಲು ಇರುವ ನೆಪವಾಗಿದೆ ಎಂದಿದ್ದಾನೆ. ಇದನ್ನೂ ಓದಿ: ಅಮಿತ್ ಶಾ ಸಂಚಾರದ ವೇಳೆ ಭದ್ರತಾ ವೈಫಲ್ಯ – ವಾಹನಗಳನ್ನು ಬೆನ್ನಟ್ಟಿದ ಬೈಕರ್ಸ್

    ಮಾ.28 ರಂದು ಅಪಹರಣ ಪ್ರಕರಣದ ಆದೇಶ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಪ್ರಯಾಗ್‍ರಾಜ್‍ಗೆ ಕರೆದೊಯ್ಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    2019ರ ಏಪ್ರಿಲ್‍ನಲ್ಲಿ ಸುಪ್ರೀಂ ಕೊರ್ಟ್ ಅತೀಕ್‍ನನ್ನು ಉತ್ತರ ಪ್ರದೇಶದಿಂದ ಗುಜರಾತ್‍ಗೆ (Gujarat)  ಸ್ಥಳಾಂತರಿಸುವಂತೆ ನಿರ್ದೇಶನ ನೀಡಿತ್ತು. ಅದರಂತೆ ಜೂ.2019ರಲ್ಲಿ ಸಬರಮತಿ ಜೈಲಿಗೆ ಸ್ಥಳಾಂತರಿಸಲಾಗಿತ್ತು.

    ಇತ್ತೀಚಿನ ಉಮೇಶ್ ಪಾಲ್ ಹತ್ಯೆಯನ್ನೂ ಸೇರಿದಂತೆ ಆತನ ಮೇಲೆ 100ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    2005ರ ಬಹುಜನ ಸಮಾಜ ಪಾರ್ಟಿಯ (Bahujan Samaj Party) ಶಾಸಕ ರಾಜುಪಾಲ್ (Raju Pal) ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ (Umesh Pal) ಅವರನ್ನು ಫೆ.24 ರಂದು ಅತಿಕ್ ಅಹಮ್ಮದ್ ಗ್ಯಾಂಗ್ ಸದಸ್ಯರು ಗುಂಡಿಟ್ಟು ಹತ್ಯೆ ಮಾಡಿದ್ದರು.

    ಇದೇ ತಿಂಗಳ ಆರಂಭದಲ್ಲಿ ಅತೀಕ್, ಉಮೇಶ್ ಪಾಲ್ ಹತ್ಯೆಯಲ್ಲಿ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅನಗತ್ಯವಾಗಿ ಸಿಲುಕಿಸಲಾಗಿದೆ. ಪೊಲೀಸರಿಂದ ನಕಲಿ ಎನ್‍ಕೌಂಟರ್ ಆಗುವ ಭಯವಿದೆ ಎಂದು ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಸಾವರ್ಕರ್‌ಗೆ ಅವಮಾನ ಮಾಡಿದ್ರೆ ಮೈತ್ರಿಯಲ್ಲಿ ಬಿರುಕು – ರಾಹುಲ್‍ಗೆ ಉದ್ಧವ್ ನೇರ ಎಚ್ಚರಿಕೆ