Tag: atlee

  • ಎರಡೂವರೆ ಗಂಟೆ ಕಾರು ಚಲಾಯಿಸಿಕೊಂಡು ಹೋಗಿ ‘ಕಾಂತಾರ ಚಾಪ್ಟರ್‌ 1’ ನೋಡಿದ ಅಟ್ಲೀ

    ಎರಡೂವರೆ ಗಂಟೆ ಕಾರು ಚಲಾಯಿಸಿಕೊಂಡು ಹೋಗಿ ‘ಕಾಂತಾರ ಚಾಪ್ಟರ್‌ 1’ ನೋಡಿದ ಅಟ್ಲೀ

    – ರಿಷಬ್‌ ಶೆಟ್ಟಿಗೆ ಮತ್ತೆ ರಾಷ್ಟ್ರೀಯ ಪ್ರಶಸ್ತಿ ಸಿಗಬೇಕು ಎಂದ ಖ್ಯಾತ ನಿರ್ದೇಶಕ

    ಶಾರುಖ್‌ ಖಾನ್‌ ಅಭಿನಯದ ‘ಜವಾನ್’‌ ಸಿನಿಮಾ ಅದ್ಭುತ ಯಶಸ್ಸಿನ ನಂತರ ಭಾರತೀಯ ಚಿತ್ರರಂಗದಲ್ಲಿ ಬಹು ಬೇಡಿಕೆಯ ನಿರ್ದೇಶಕರಾಗಿರುವ ಅಟ್ಲೀ, ಕಾಂತಾರ ಚಾಪ್ಟರ್‌ 1 (Kantara Chapter 1) ಸಿನಿಮಾವನ್ನು ಹಾಡಿಹೊಗಳಿಸಿದ್ದಾರೆ. ಎರಡೂವರೆ ಗಂಟೆಗಳ ಕಾಲ ನಾನೇ ಕಾರು ಚಲಾಯಿಸಿಕೊಂಡು ಹೋಗಿ ಕಾಂತಾರ ಸಿನಿಮಾ ನೋಡಿದ್ದೇನೆಂದು ಅಟ್ಲೀ ಹೇಳಿಕೊಂಡಿದ್ದಾರೆ.

    ‘ಪುಷ್ಪ’ ತಾರೆ ಅಲ್ಲು ಅರ್ಜುನ್ ಅವರೊಂದಿಗಿನ ತಮ್ಮ ಮುಂಬರುವ ಚಿತ್ರದ ಕೆಲಸದಲ್ಲಿ ಅಟ್ಲೀ (Atlee) ಬ್ಯುಸಿಯಾಗಿದ್ದಾರೆ. ಈ ಸಂದರ್ಭದಲ್ಲೇ, ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ‘ಕಾಂತಾರ ಚಾಪ್ಟರ್‌ 1’ ಸಿನಿಮಾ ನೋಡಲು ಆಮ್ಸ್ಟರ್‌ಡ್ಯಾಮ್‌ನಲ್ಲಿ ಎರಡೂವರೆ ಗಂಟೆಗಳ ಕಾಲ ತಾನೇ ಕಾರು ಚಲಾಯಿಸಿದ್ದಾಗಿ ಅಟ್ಲೀ ತಿಳಿಸಿದ್ದಾರೆ. ಇದನ್ನೂ ಓದಿ: ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್‌ 1 ಮಿಂಚಿನ ಓಟ – ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್‌

    ಚಿತ್ರ ಬಿಡುಗಡೆಯಾದಾಗ ನಾನು ಆಮ್ಸ್ಟರ್‌ಡ್ಯಾಮ್‌ನಲ್ಲಿದ್ದೆ. ಮೊದಲ ದಿನವೇ ನಾನು ಅದನ್ನು ಚಿತ್ರಮಂದಿರದಲ್ಲಿ ನೋಡಿದೆ. ಸಿನಿಮಾ ನೋಡಬೇಕು ಅಂತ ಸುಮಾರು ಎರಡೂವರೆ ಗಂಟೆಗಳ ಕಾಲ ನಾನೇ ಕಾರು ಚಲಾಯಿಸಿಕೊಂಡು ಥಿಯೇಟರ್‌ಗೆ ಹೋದೆ. ಸಿನಿಮಾ ನೋಡಿದ ಬಳಿಕ ತಕ್ಷಣ ನಾನು ರಿಷಬ್‌ಗೆ ಕರೆ ಮಾಡಿದೆ. ಅವರು ನನ್ನ ಒಳ್ಳೆಯ ಸ್ನೇಹಿತ. ನಾನು ತುಂಬಾ ಗೌರವಿಸುವ ವ್ಯಕ್ತಿ ಎಂದು ಅಟ್ಲೀ ಪ್ರತಿಕ್ರಿಯಿಸಿದ್ದಾರೆ.

    ರಿಷಬ್‌ ಅವರು ಇತರೆ ಸಿನಿಮಾ ನಿರ್ದೇಶಕರಿಗೆ ಸ್ಫೂರ್ತಿ. ಅವರ ಸಾಧನೆ ಊಹಿಸಲು ಅಸಾಧ್ಯ. ಒಬ್ಬ ನಿರ್ದೇಶಕನಾಗಿ ಅಂತಹ ಚಿತ್ರವನ್ನು ನಿರ್ವಹಿಸುವುದು ತುಂಬಾ ಕಷ್ಟ. ಅವರು ನಾಯಕ ನಟನಾಗಷ್ಟೇ ಪಾತ್ರವನ್ನು ನಿರ್ವಹಿಸಿಲ್ಲ. ಇಂತಹ ಸಿನಿಮಾ ಹೊರತರಲು ನಿಮ್ಮೊಳಗೆ ಸಾಕಷ್ಟು ಲಯ ಬೇಕಾಗುತ್ತದೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: `ಕಾಂತಾರ’ ಮೆಚ್ಚಿದ ಅಟ್ಲಿ – ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ನೆನೆದ ಖ್ಯಾತ ನಿರ್ದೇಶಕ

    ಅದ್ಭುತ ಸಿನಿಮಾ ಕೊಟ್ಟ ರಿಷಬ್‌ಗೆ ಹ್ಯಾಟ್ಸ್ ಆಫ್! ಅವರು ರಾಷ್ಟ್ರೀಯ ಪ್ರಶಸ್ತಿಯನ್ನು ಗೆಲ್ಲಬೇಕೆಂದು ನಾನು ಬಯಸುತ್ತೇನೆ. ಚಿತ್ರದಲ್ಲಿನ ಅಭಿನಯಕ್ಕಾಗಿ ಅವರು ಮತ್ತೊಮ್ಮೆ ರಾಷ್ಟ್ರೀಯ ಪ್ರಶಸ್ತಿಗಳಿಗೆ ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದು ತಿಳಿಸಿದ್ದಾರೆ.

    ಅ.2 ರಂದು ದೇಶ-ವಿದೇಶದಾದ್ಯಂತ ತೆರೆ ಕಂಡ ಕಾಂತಾರ ಚಾಪ್ಟರ್‌ 1 ಬ್ಲಾಕ್‌ಬಸ್ಟರ್‌ ಹಿಟ್‌ ಕಾಣುತ್ತಿದೆ. ಒಂದು ವಾರದಲ್ಲೇ ಗಲ್ಲಾಪೆಟ್ಟಿಗೆಯಲ್ಲಿ 509 ಕೋಟಿ ಕೊಳ್ಳೆ ಹೊಡೆದಿದೆ. ಕಾಂತಾರಗೆ ಎಲ್ಲೆಡೆ ಪ್ರೇಕ್ಷಕರಿಂದ ಮೆಚ್ಚುಗೆ ಮಹಾಪೂರವೇ ಹರಿದುಬರುತ್ತಿದೆ. ಸಿನಿಮಾರಂಗದ ಸ್ಟಾರ್‌ ನಟರು, ನಿರ್ದೇಶಕರು ಹಾಗೂ ಗಣ್ಯರು ರಿಷಬ್‌ ಶೆಟ್ಟಿಯ ಕಾಂತಾರ ಸಿನಿಮಾವನ್ನು ಹಾಡಿಹೊಗಳಿಸಿದ್ದಾರೆ.

  • ಅಟ್ಲಿ ಸಿನಿಮಾಗೆ ಮತ್ತೆ ಒಂದಾದ ಪುಷ್ಪ ಹಿಟ್ ಜೋಡಿ..!

    ಅಟ್ಲಿ ಸಿನಿಮಾಗೆ ಮತ್ತೆ ಒಂದಾದ ಪುಷ್ಪ ಹಿಟ್ ಜೋಡಿ..!

    ಲ್ಲು ಅರ್ಜುನ್ (Allu Arjun) ಹಾಗೂ ಅಟ್ಲಿ (Atlee) ಕಾಂಬಿನೇಷನ್‌ನ ಇನ್ನೂ ಹೆಸರಿಡದ ಎಎ26-ಎ6 ಸಿನಿಮಾ ಒಂದಿಲ್ಲೊಂದು ವಿಶೇಷತೆಗಳಿಂದ ಸದ್ದು ಮಾಡುತ್ತಿದೆ. ಈ ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್ ಮಾಡಿದಾಗಲೇ ಐಕಾನ್‌ಸ್ಟಾರ್ ಅಭಿಮಾನಿಗಳು ದಿಲ್‌ಖುಷ್ ಆಗಿದ್ದರು. ಈ ಸಿನಿಮಾ ದಿನದಿಂದ ದಿನಕ್ಕೆ ದೊಡ್ಡ ಸ್ಟಾರ್‌ಕ್ಯಾಸ್ಟ್ನಿಂದ ಭಾರೀ ಹವಾ ಕ್ರಿಯೇಟ್ ಮಾಡುತ್ತಿದೆ.

    ಬಹುಕೋಟಿ ಬಜೆಟ್‌ನಲ್ಲಿ ತಯಾರಾಗ್ತಿರುವ, ಸೂಪರ್ ಮ್ಯಾನ್ ಕಾನ್ಸೆಪ್ಟ್‌ನ ಇಂಡಿಯನ್ ಸಿನಿಮಾದಲ್ಲಿ ತುಂಬಾ ವಿಶೇಷತೆಗಳಿಂದ ಕೂಡಿದ ಸಿನಿಮಾ ಇದಾಗಿರಲಿದ್ದು, ಈ ಸಿನಿಮಾದಲ್ಲಿ ಒಬ್ಬೊಬ್ಬ ಕಲಾವಿದರು ಸೇರಿಕೊಳ್ತಿದ್ದಾರೆ. ಅದರಲ್ಲೂ ಸ್ಪೆಷಲ್ ಅಂದ್ರೆ ಈ ಸಿನಿಮಾದಲ್ಲಿ ನಟಿ ರಶ್ಮಿಕಾರನ್ನ ಆಯ್ಕೆ ಮಾಡಿಕೊಂಡಿದೆಯಂತೆ ಚಿತ್ರತಂಡ. ಪುಷ್ಪಾ ಪಾರ್ಟ್-1 ಹಾಗೂ ಪಾರ್ಟ್-2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಜೊತೆಗೆ ಶ್ರೀವಲ್ಲಿಯಾಗಿ ಕಾಣಿಸಿಕೊಂಡ ರಶ್ಮಿಕಾ ಮತ್ತೆ ಅಲ್ಲು ಅರ್ಜುನ್ ಜೊತೆ ತೆರೆಹಂಚಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ. ಇದನ್ನೂ ಓದಿ: ಹೆಣ್ಣು ಯಾವ ಬಟ್ಟೆ ಹಾಕ್ಬೇಕು, ಹೇಗೆ ತಾಯಿ ಆಗ್ಬೇಕು ಅನ್ನೋದು ಅವಳ ಆಯ್ಕೆ – ಭಾವನರನ್ನು ಬೆಂಬಲಿಸಿದ ರಾಗಿಣಿ

    ಮತ್ತೊಂದು ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್, ಜಾನವಿ ಕಪೂರ್ ಹಾಗೂ ರಶ್ಮಿಕಾ ಇವರೆಲ್ಲರನ್ನ ಒಂದೇ ಸಿನಿಮಾದಲ್ಲಿ ಒಟ್ಟಿಗೆ ಸೇರಿಸುವ ಪ್ಲ್ಯಾನ್ ಕೂಡಾ ಮಾಡಿದೆಯಂತೆ ಚಿತ್ರತಂಡ. ಪುಷ್ಪ ಸಿನಿಮಾ ಹಿಟ್ ಪೇರ್ ಮತ್ತೊಮ್ಮೆ ಒಂದಾಗಲಿದ್ದು, ಈ ಸಿನಿಮಾದ ಮೇಲೆ ಮತ್ತಷ್ಟು ಕ್ಯೂರಿಯಾಸಿಟಿ ಹೆಚ್ಚಾಗ್ತಿದೆ. ಅಲ್ಲು ಅರ್ಜುನ್ ಕೂಡಾ ಪುಷ್ಪ ಸಿನಿಮಾದ ಸಕ್ಸಸ್‌ನ ಪೀಕ್‌ನಲ್ಲಿದ್ದಾರೆ.

    ಕೊರೊನಾ ಬಳಿಕ ಬಾಲಿವುಡ್‌ನಲ್ಲಿ ಶಾರುಖ್ ಖಾನ್‌ಗೆ ಬಿಗ್ ಬ್ರೇಕ್ ಕೊಟ್ಟ ಜವಾನ್ ಸಿನಿಮಾವನ್ನ ನಿರ್ದೇಶನ ಮಾಡಿದ್ದ ನಿರ್ದೇಶಕ ಅಟ್ಲಿ ಐಕಾನ್ ಸ್ಟಾರ್‌ಗೆ ವಿಭಿನ್ನವಾದ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಸಿನಿಮಾದ ಬಜೆಟ್ ಹಾಗೂ ಸ್ಟಾರ್‌ಕಾಸ್ಟ್ ಕೂಡಾ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಇನ್ನು ಈ ಚಿತ್ರಕ್ಕೆ ಯಾರೆಲ್ಲ ಬಂದು ಸೇರಿಕೊಳ್ತಾರೋ ಕಾದು ನೋಡಬೇಕಿದೆ. ಇದನ್ನೂ ಓದಿ: ಬೆಟ್ಟಿಂಗ್‌ ಆ್ಯಪ್ ಹಗರಣ ಪ್ರಕರಣ; ಪ್ರಣೀತಾ, ಪ್ರಕಾಶ್‌ ರಾಜ್‌, ದೇವರಕೊಂಡ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ED ಕೇಸ್‌

  • ಅಟ್ಲಿ-ಅಲ್ಲು ಸಿನಿಮಾ ವಿಎಫ್‌ಎಕ್ಸ್‌ಗೆ ಬರೋಬ್ಬರಿ 350 ಕೋಟಿ ಖರ್ಚು !

    ಅಟ್ಲಿ-ಅಲ್ಲು ಸಿನಿಮಾ ವಿಎಫ್‌ಎಕ್ಸ್‌ಗೆ ಬರೋಬ್ಬರಿ 350 ಕೋಟಿ ಖರ್ಚು !

    ಐಕಾನ್‌ಸ್ಟಾರ್ ಅಲ್ಲು ಅರ್ಜುನ್ ಹಾಗೂ ಅಟ್ಲಿ ಕಾಂಬಿನೇಷನ್‌ನಲ್ಲಿ ಸಿನಿಮಾ ತಯಾರಾಗ್ತಿದೆ. ಒಂದೊಂದು ವಿಶೇಷತೆಗಳಿಂದ ಭಾರತೀಯ ಸಿನಿಮಾರಂಗದಲ್ಲಿ ಈ ಚಿತ್ರತಂಡ ಸದ್ದು ಗದ್ದಲ ಮಾಡುತ್ತಿದೆ. ಇನ್ನು ಹೆಸರಿಡದ ಅಲ್ಲು ಅರ್ಜುನ್ ನಟನೆಯ 22ನೇ ಸಿನಿಮಾ ಇದಾದ್ರೆ, ಅಟ್ಲಿ ನಿರ್ದೇಶನದ 6ನೇ ಚಿತ್ರ ಇದಾಗಿದ್ದು, ಈ ತಂಡದಿಂದ ಅಚ್ಚರಿ ಸುದ್ದಿಯೊಂದು ಹೊರಬಿದ್ದಿದೆ.

    ಸದ್ಯಕ್ಕೆ ವರ್ಕಿಂಗ್ ಟೈಟಲ್ ಆಗಿ ಎಎ22*ಎ6 ಎಂದು ನಾಮಕರಣ ಮಾಡಲಾಗಿದೆ. ವಿಶೇಷ ಅಂದ್ರೆ ಈ ಸಿನಿಮಾದ ವಿಎಫ್‌ಎಕ್ಸ್‌ಗಾಗಿಯೇ 350-400 ಕೋಟಿ ಖರ್ಚಾಗಲಿದೆಯಂತೆ. ಇನ್ನೂ ಈ ಸಿನಿಮಾದ ಬಜೆಟ್ ಎಲ್ಲಿಗೆ ಹೋಗಿ ಮುಟ್ಟಲಿದೆ ಅಂತಾ ನೀವೇ ಅಂದಾಜು ಮಾಡಿ. ಸನ್ ಪಿಕ್ಚರ್ಸ್‌ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ.

    ಸೂಪರ್ ಮ್ಯಾನ್ ಕಾನ್ಸೆಪ್ಟ್‌ನಲ್ಲಿ ರೆಡಿಯಾಗ್ತಿರುವ ಭಾರತೀಯ ಸಿನಿಮಾ ಇದಾಗಿದ್ದು, ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಪುಷ್ಪಾ ಪಾರ್ಟ್-1 ಹಾಗೂ ಪಾರ್ಟ್-2 ಸಿನಿಮಾದ ಬಿಗ್ ಸಕ್ಸಸ್‌ನ ಬಳಿಕ ಅಲ್ಲು ಅರ್ಜುನ್ ಒಪ್ಪಿಕೊಂಡ ಸಿನಿಮಾ ಇದಾಗಿದ್ದು, ಈ ಚಿತ್ರದ ಮೇಲೆ ಐಕಾನ್ ಸ್ಟಾರ್ ಫ್ಯಾನ್ಸ್ ಬೆಟ್ಟದಷ್ಟು ನಿರೀಕ್ಷೆಯನ್ನ ಇಟ್ಟುಕೊಂಡಿದ್ದಾರೆ.

    ಬಾಲಿವುಡ್‌ನ ಬ್ಲಾಕ್‌ಬಸ್ಟರ್ ಜವಾನ್ ಸಿನಿಮಾದ ಬಳಿಕ ಅಟ್ಲಿ ಕೈಗೆತ್ತಿಕೊಂಡಿರುವ ಸಿನಿಮಾ ಇದಾಗಿದೆ. ಐಕಾನ್‌ಸ್ಟಾರ್ ಅಲ್ಲು ಅರ್ಜುನ್‌ಗೆ ಈ ಸಿನಿಮಾ ಯಾವ ರೀತಿ ಇಮೇಜ್ ತಂದುಕೊಡುತ್ತೆ ಕಾದು ನೋಡಬೇಕಿದೆ.

  • ಅಲ್ಲು ಹೊಸ ಸಿನಿಮಾ ಡ್ಯೂನ್‌ ಕಾಪಿ? – ಕಿಡಿ ಕಿಡಿ ಕ್ಲಾರಿಟಿ ಕೊಟ್ಟ ಅಟ್ಲೀ

    ಅಲ್ಲು ಹೊಸ ಸಿನಿಮಾ ಡ್ಯೂನ್‌ ಕಾಪಿ? – ಕಿಡಿ ಕಿಡಿ ಕ್ಲಾರಿಟಿ ಕೊಟ್ಟ ಅಟ್ಲೀ

    ಪುಷ್ಪ ಬಳಿಕ ಅಲ್ಲು ಅರ್ಜುನ್ (Allu Arjun) ಒಪ್ಪಿಕೊಂಡಿರುವ ಬಿಗ್ ಪ್ರಾಜೆಕ್ಟ್ AA22xA6. ಈ ಚಿತ್ರಕ್ಕಿನ್ನೂ ಹೆಸರಿಟ್ಟಿಲ್ಲ ಆದರೆ ಈಗಾಗ್ಲೇ ಅನೌನ್ಸ್ಮೆಂಟ್ ಟೀಸರ್‌ನಿಂದಲೇ ಭಾರೀ ನಿರೀಕ್ಷೆ ಹುಟ್ಟಿಸಿದೆ.

    ಇದು ಬಿಗ್ ಪ್ರಾಜೆಕ್ಟ್ ಚಿತ್ರವಾಗಿದ್ದು ಸನ್‌ಪಿಚ್ಚರ್ಸ್‌ ಇದನ್ನು ನಿರ್ಮಾಣ ಮಾಡುತ್ತಿದೆ. ಬಿಗ್ ಮಹತ್ವದ ಪ್ರಾಜೆಕ್ಟ್ ತಮಿಳು ನಿರ್ದೇಶಕ ಅಟ್ಲೀ (Atlee) ನಿರ್ದೇಶನದಲ್ಲಿ ಬರುತ್ತಿದೆ. ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಅಭಿನಯಿಸುತ್ತಿರುವುದು ವಿಶೇಷ. ಆದರೆ ಟೀಸರ್ ರಿಲೀಸ್ ಆದ ಬೆನ್ನಲ್ಲೇ ಇದನ್ನ ಹಾಲಿವುಡ್‌ನ `ಡ್ಯೂನ್’ ಚಿತ್ರದ ಕಾಪಿ ಎಂದು ಟೀಕೆ ಮಾಡಲಾಗಿತ್ತು. ಹೌದು ಎನ್ನುವಂತೆ ಹಾಲಿವುಡ್‌ನಲ್ಲೇ ಮುಖವಾಡವನ್ನೂ ತಯಾರು ಮಾಡುವ ವೀಡಿಯೋ ಹಂಚಿಕೊಂಡಿದ್ರು ಅಲ್ಲು ಅರ್ಜುನ್. ಕಾಪಿ ಮಾಡಿದ್ದಾರೆ ಅನ್ನೋ ವಿಚಾರಕ್ಕೆ ಅಟ್ಲೀ ಇದೀಗ ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾಗೆ ದೇವರೇ ದಿಕ್ಕು – ರವೀನಾ ಟಂಡನ್

    ಹಾಲಿವುಡ್‌ನ ಡ್ಯೂನ್ ಕಾಪಿ ಎಂದು ಟೀಕೆ ಬರುತ್ತಿರುವ ಹಿನ್ನೆಲೆ ನಿರ್ದೇಶಕ ಅಟ್ಲೀ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮ ಕೆಲಸಕ್ಕೆ ಆಗಾಗ್ಗೆ ಹೀಗೆಯೇ ಹೇಳಲಾಗುತ್ತೆ, ಎಷ್ಟು ಬಾರಿ ಅಂತ ಈ ಥರ ಕಲ್ಪಿಸಿಕೊಳ್ಳುತ್ತಾರೆ ಎಂದಿದ್ದಾರೆ ಅಟ್ಲೀ. ಅಲ್ಲಿಗೆ ಪೋಸ್ಟರ್ ಕಾಪಿ ವಿಚಾರವನ್ನ ಅಟ್ಲಿ ತಳ್ಳಿಹಾಕಿದ್ದಾರೆ.

    ನಿರ್ದೇಶಕ ಅಟ್ಲೀ ಚೆನ್ನೈನಲ್ಲಿರುವ ಸತ್ಯಭಾಮಾ ಇನ್ಸ್ಸ್ಟಿಟ್ಯೂಟ್ ಆಫ್ ಸೈನ್ಸ್ & ಟೆಕ್ನಾಲಜಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದುಕೊಂಡಿದ್ದಾರೆ. ಈ ವೇಳೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸುವ ವೇಳೆ ಮುಂದಿನ ಬಿಗ್‌ಪ್ರಾಜೆಕ್ಟ್ ಹಾಗೂ ವೈರಲ್ ಆಗಿರುವ ಡ್ಯೂನ್ ಪೋಸ್ಟರ್ ಕಾಪಿ ಬಗ್ಗೆ ಪ್ರತಿಕ್ರಿಯೆ ನೀಡಿದರು.

  • ಅಟ್ಲಿ ಜೊತೆಗಿನ ಚಿತ್ರಕ್ಕಾಗಿ ಅಲ್ಲು ಅರ್ಜುನ್ ತಯಾರಿ ಹೇಗಿದೆ?- ಹೊರಬಿತ್ತು ಅಪ್‌ಡೇಟ್

    ಅಟ್ಲಿ ಜೊತೆಗಿನ ಚಿತ್ರಕ್ಕಾಗಿ ಅಲ್ಲು ಅರ್ಜುನ್ ತಯಾರಿ ಹೇಗಿದೆ?- ಹೊರಬಿತ್ತು ಅಪ್‌ಡೇಟ್

    ‘ಪುಷ್ಪ 2′ ಸಕ್ಸಸ್ ಬಳಿಕ ಡೈರೆಕ್ಟರ್ ಅಟ್ಲಿ (Atlee) ಜೊತೆಗಿನ ಸಿನಿಮಾಗಾಗಿ ಅಲ್ಲು ಅರ್ಜುನ್ (Allu Arjun) ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಫಿಟನೆಸ್ ಕಡೆ ಹೆಚ್ಚಿನ ಗಮನ ಕೊಡುತ್ತಿದ್ದಾರೆ. ಅದಕ್ಕಾಗಿ ಪ್ರಖ್ಯಾತ ಫಿಟ್ನೆಸ್ ಟ್ರೈನರ್ ಲಾಯ್ಡ್ ಸ್ಟೀವನ್ಸ್ (Lloyd Stevens) ಅವರನ್ನು ನಟ ನೇಮಿಸಿಕೊಂಡಿದ್ದಾರೆ. ಇದನ್ನೂ ಓದಿ:ಸಮಂತಾ ನಿರ್ಮಾಣದ ‘ಶುಭಂ’ ಚಿತ್ರದ ಸಾಂಗ್ ರಿಲೀಸ್

    ಅಟ್ಲಿ ಜೊತೆಗಿನ ಸಿನಿಮಾದಲ್ಲಿ ಅಲ್ಲು ಅರ್ಜುನ್ ತ್ರಿಬಲ್ ರೋಲ್‌ನಲ್ಲಿ ನಟಿಸಲಿದ್ದಾರೆ. ಅವರ ಪಾತ್ರಕ್ಕೆ ವರ್ಕೌಟ್, ಫಿಟ್‌ನೆಸ್ ಅಗತ್ಯವಿದೆ. ಅದಕ್ಕಾಗಿ ಅವರು ದೇಹವನ್ನು ಹುರಿಗೊಳಿಸುವ ಅಗತ್ಯವಿದೆ. ಹೀಗಾಗಿ ಮಹೇಶ್ ಬಾಬು, ಜ್ಯೂ.ಎನ್‌ಟಿಆರ್‌ಗೆ ಫಿಟ್‌ನೆಸ್ ಟ್ರೈನರ್ ಆಗಿದ್ದ ಲಾಯ್ಡ್ ಸ್ಟೀವನ್ಸ್ ಅವರನ್ನು ಅಲ್ಲು ಅರ್ಜುನ್ ನೇಮಿಸಿಕೊಂಡಿದ್ದಾರೆ. ಲಾಯ್ಡ್ ಸ್ಟೀವನ್ಸ್ (Lloyd Stevens) ಅವರು ನಟನ ಜೊತೆಗಿನ ಫೋಟೋಗೆ ಲೋಡಿಂಗ್‌ ಎಂದು ಅಡಿಬರಹ ನೀಡಿದ್ದಾರೆ. ಈ ಮೂಲಕ ಅಪ್‌ಡೇಟ್ ಹೊರಬಿದ್ದಿದೆ. ಇದನ್ನೂ ಓದಿ:‘ಟೋಬಿ’ ನಟಿಗೆ ಬೇಡಿಕೆ- ಸೌತ್‌ ಸಿನಿಮಾಗಳಲ್ಲಿ ಚೈತ್ರಾ ಆಚಾರ್‌ ಬ್ಯುಸಿ

     

    View this post on Instagram

     

    A post shared by Lloyd Stevens (@lloydstevenspt)

    ಅಂದಹಾಗೆ, ಅಲ್ಲು ಅರ್ಜುನ್ ಹೊಸ ಸಿನಿಮಾದಲ್ಲಿ 3 ಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಿದ್ದಾರೆ. ಹೀಗಾಗಿ ಅವರ ಚಿತ್ರದಲ್ಲಿ ಜಾನ್ವಿ ಕಪೂರ್, ಮೃಣಾಲ್ ಠಾಕೂರ್, ಅನನ್ಯಾ ಪಾಂಡೆ ನಾಯಕಿಯರಾಗಿ ನಟಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತವಾಗಿ ಚಿತ್ರತಂಡವೇ ತಿಳಿಸಬೇಕಿದೆ.

  • ಅಟ್ಲಿ, ಅಲ್ಲು ಅರ್ಜುನ್ ಸಿನಿಮಾಗೆ ಸಮಂತಾ ನಾಯಕಿ?

    ಅಟ್ಲಿ, ಅಲ್ಲು ಅರ್ಜುನ್ ಸಿನಿಮಾಗೆ ಸಮಂತಾ ನಾಯಕಿ?

    ಲ್ಲು ಅರ್ಜುನ್ (Allu Arjun) ‘ಪುಷ್ಪ 2’ (Pushpa 2) ಸಕ್ಸಸ್ ಬಳಿಕ ‘ಜವಾನ್’ ಡೈರೆಕ್ಟರ್ ಅಟ್ಲಿ ಜೊತೆ ಕೈಜೋಡಿಸಿದ್ದಾರೆ. ಇಬ್ಬರ ಪ್ರಾಜೆಕ್ಟ್ ಬಗ್ಗೆ ಈಗಾಗಲೇ ಅಧಿಕೃತವಾಗಿ ಘೋಷಣೆ ಕೂಡ ಆಗಿದೆ. ಈ ಬೆನ್ನಲ್ಲೇ ಅಲ್ಲು ಅರ್ಜುನ್‌ಗೆ ನಾಯಕಿಯಾಗಿ ಸಮಂತಾ (Samantha) ಜೊತೆಯಾಗ್ತಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:800 ಕೋಟಿ ಬಜೆಟ್‌ನಲ್ಲಿ ಮೂಡಿ ಬರಲಿದೆ ಅಲ್ಲು ಅರ್ಜುನ್, ಅಟ್ಲಿ ಸಿನಿಮಾ

    ಅಲ್ಲು ಅರ್ಜುನ್‌ಗಾಗಿ ಭಿನ್ನವಾಗಿರೋ ಕಥೆಯನ್ನೇ ಅಟ್ಲಿ ಹೆಣೆದಿದ್ದಾರೆ. ಎಂದೂ ನಟಿಸಿರದ ವಿಭಿನ್ನ ಪಾತ್ರದ ಮೂಲಕ ಬರಲು ನಟ ರೆಡಿಯಾಗಿದ್ದಾರೆ. 800 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗ್ತಿದೆ. ಹೀಗಿರುವಾಗ ಈ ಚಿತ್ರಕ್ಕೆ ಸಮಂತಾ ಹೀರೋಯಿನ್ ಎಂದು ಗುಸು ಗುಸು ಶುರುವಾಗಿದೆ. ಅದಕ್ಕೆ ಪೂರಕವೆಂಬಂತೆ ಚೆನ್ನೈನಲ್ಲಿರುವ ಡೈರೆಕ್ಟರ್ ಅಟ್ಲಿ ಆಫೀಸ್‌ಗೆ ಸಮಂತಾ ಭೇಟಿ ಕೊಟ್ಟಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹೀಗಾಗಿ ಅಲ್ಲು ಅರ್ಜುನ್‌ಗೆ ಸಮಂತಾ ನಾಯಕಿ ಎಂಬ ವಿಚಾರ ಫ್ಯಾನ್ಸ್‌ಗೆ ದಟ್ಟವಾಗಿದೆ.ಇದನ್ನೂ ಓದಿ:ಹಳ್ಳಿ ಹುಡುಗಿ ಗೆಟಪ್‌ನಲ್ಲಿ ‘ಕಿಸ್’ ನಟಿ- ಅಖಿಲ್ ಅಕ್ಕಿನೇನಿಗೆ ಶ್ರೀಲೀಲಾ ಜೋಡಿ

    ಈ ಹಿಂದೆ ಅಲ್ಲು ಅರ್ಜುನ್ ಜೊತೆ ಹಲವು ಪ್ರಾಜೆಕ್ಟ್‌ಗಳಲ್ಲಿ ಸಮಂತಾ ನಟಿಸಿದ್ದಾರೆ. ಡೈರೆಕ್ಟರ್ ಅಟ್ಲಿ ಜೊತೆಗೆ ಕೆಲಸ ಮಾಡಿ ಕೂಡ ಅವರು ಪಳಗಿದ್ದಾರೆ. ಹೀಗಾಗಿ ಈ ಮೂವರ ಕಾಂಬಿನೇಷನ್‌ನಲ್ಲಿ ಸಿನಿಮಾ ಬರಲಿದೆ ಎಂದು ಫ್ಯಾನ್ಸ್ ನಿರೀಕ್ಷಿಸುತ್ತಿದ್ದಾರೆ. ಆದರೆ ಈ ಕುರಿತು ಚಿತ್ರತಂಡ ಅಧಿಕೃತವಾಗಿ ತಿಳಿಸಿಲ್ಲ. ತಂಡ ಅಧಿಕೃತವಾಗಿ ಹೇಳುವವರೆಗೂ ಕಾದುನೋಡಬೇಕಿದೆ.

    ಅಂದಹಾಗೆ, ಬಾಲಿವುಡ್ ಪ್ರಾಜೆಕ್ಟ್ ಜೊತೆ ಕೆಲ ಆ್ಯಡ್ ಶೂಟ್‌ಗಳಲ್ಲಿ ಸಮಂತಾ ಬ್ಯುಸಿಯಾಗಿದ್ದಾರೆ. ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

  • 800 ಕೋಟಿ ಬಜೆಟ್‌ನಲ್ಲಿ ಮೂಡಿ ಬರಲಿದೆ ಅಲ್ಲು ಅರ್ಜುನ್, ಅಟ್ಲಿ ಸಿನಿಮಾ

    800 ಕೋಟಿ ಬಜೆಟ್‌ನಲ್ಲಿ ಮೂಡಿ ಬರಲಿದೆ ಅಲ್ಲು ಅರ್ಜುನ್, ಅಟ್ಲಿ ಸಿನಿಮಾ

    ‘ಜವಾನ್’ ಡೈರೆಕ್ಟರ್ ಅಟ್ಲಿ (Atlee) ಜೊತೆ ಅಲ್ಲು ಅರ್ಜುನ್ (Allu Arjun) ಸಿನಿಮಾ ಮಾಡೋದರ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಈ ಬೆನ್ನಲ್ಲೇ ಸಿನಿಮಾದ ಬಜೆಟ್ ಬಗ್ಗೆ ಚರ್ಚೆ ಶುರುವಾಗಿದೆ. ಅಲ್ಲು ಅರ್ಜುನ್ ಸಿನಿಮಾವನ್ನು ಅದ್ಧೂರಿಯಾಗಿ 800 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿದ್ದಾರೆ ಎನ್ನಲಾದ ವಿಚಾರವೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಗಾಯಗಳಾಗಿದೆ: ಪುತ್ರನ ಹೆಲ್ತ್ ಬಗ್ಗೆ ಅಪ್‌ಡೇಟ್‌ ಕೊಟ್ಟ ಪವನ್ ಕಲ್ಯಾಣ್

    ‘ಪುಷ್ಪ 2’ ಸಕ್ಸಸ್ ಬಳಿಕ ಅಟ್ಲಿ ಜೊತೆ ಸಿನಿಮಾ ಮಾಡಲು ಅಲ್ಲು ಅರ್ಜುನ್ ಮುಂದಾಗಿದ್ದಾರೆ. ಅದಕ್ಕಾಗಿ ಅಟ್ಲಿ ಜೊತೆ ವಿದೇಶಕ್ಕೆ ತೆರಳಿ VFX ತಂತ್ರಜ್ಞರೊಂದಿಗೆ ಅಲ್ಲು ಅರ್ಜುನ್ ಮಾತನಾಡಿದ್ದಾರೆ. ವಿಎಫ್‌ಎಕ್ಸ್‌ಗಾಗಿ ನಟನ ಮುಖದ ಮತ್ತು ದೇಹದ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ. ಹಾಗಾಗಿ ಹಾಲಿವುಡ್ ರೇಂಜ್‌ನಲ್ಲಿ ಅದ್ಧೂರಿಯಾಗಿ ಗ್ರಾಫಿಕ್ಸ್ ಮೂಡಿ ಬರಲಿದೆ ಎಂಬ ಸುಳಿವು ಸಿಕ್ಕಿದೆ. ಇದನ್ನೂ ಓದಿ:ಭರತನಾಟ್ಯ ಪ್ರವೀಣೆ ಚರಿತ್ರಾಗೀಗ ಇಂಟರ್ವಲ್‌ನದ್ದೇ ಧ್ಯಾನ!

     

    View this post on Instagram

     

    A post shared by Sun Pictures (@sunpictures)

    ಹೀಗಿರುವಾಗ ಅಟ್ಲಿ ಜೊತೆಗಿನ ಅಲ್ಲು ಅರ್ಜುನ್ ಸಿನಿಮಾ 800 ಕೋಟಿ ರೂ. ಬಜೆಟ್‌ನಲ್ಲಿ ಬರಲಿದೆ ಎಂಬ ಸುದ್ದಿ ಈಗ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಅದರಲ್ಲಿ 175 ಕೋಟಿ ರೂ. ಸಂಭಾವನೆಯನ್ನು ಅಲ್ಲು ಅರ್ಜುನ್ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ಒಟ್ನಲ್ಲಿ ದುಬಾರಿ ವೆಚ್ಚದಲ್ಲಿ ಸಿನಿಮಾ ಬರುತ್ತಿದೆ ಎಂದು ಕೇಳಿಯೇ ಫ್ಯಾನ್ಸ್ ದಂಗಾಗಿದ್ದಾರೆ. ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

  • ಶಾರುಖ್ ಆಯ್ತು ಸಲ್ಮಾನ್ ಖಾನ್ ಜೊತೆ ಅಟ್ಲಿ ಹೊಸ ಸಿನಿಮಾ

    ಶಾರುಖ್ ಆಯ್ತು ಸಲ್ಮಾನ್ ಖಾನ್ ಜೊತೆ ಅಟ್ಲಿ ಹೊಸ ಸಿನಿಮಾ

    ಸೌತ್ ಡೈರೆಕ್ಟರ್ ಅಟ್ಲಿ (Atlee) ಬಾಲಿವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಾ ಸದ್ದು ಮಾಡುತ್ತಿದ್ದಾರೆ. ‘ಜವಾನ್’ (Jawan) ಸಿನಿಮಾದಲ್ಲಿ ಶಾರುಖ್‌ಗೆ ಆ್ಯಕ್ಷನ್ ಕಟ್ ಹೇಳಿದ ಬಳಿಕ ಸಲ್ಮಾನ್ ಖಾನ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಹೊಸ ಚಿತ್ರಕ್ಕಾಗಿ ಸಲ್ಮಾನ್ ಖಾನ್ (Salman Khan) ಜೊತೆ ಕೈಜೋಡಿಸಿದ್ದಾರೆ.

    ಶಾರುಖ್ ಖಾನ್ ಜೊತೆ ‘ಜವಾನ್’ ಸಿನಿಮಾ ಮಾಡಿ ಗೆದ್ದು ಬೀಗಿದ್ದಾರೆ. ಈಗ ವರುಣ್ ಧವನ್ ಮತ್ತು ಕೀರ್ತಿ ಸುರೇಶ್ ನಟನೆಯ ಹೊಸ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ. ಈ ಸಿನಿಮಾ ರಿಲೀಸ್‌ಗೂ ಮುನ್ನವೇ ಸಲ್ಮಾನ್ ಖಾನ್‌ಗೆ ಹೊಸ ಕಥೆ ಬರೆದಿದ್ದಾರೆ. ಸಿನಿಮಾ ಕಥೆಯ ಬಗ್ಗೆ ನಟನಿಗೂ ಅಟ್ಲಿ ವರದಿ ಒಪ್ಪಿಸಿದ್ದಾರೆ.

    ಸಾಲು ಸಾಲು ಸಿನಿಮಾಗಳ ಸೋಲಿನ ರುಚಿ ಕಂಡಿರುವ ಸಲ್ಮಾನ್ ಖಾನ್ ಈಗ ಸೌತ್ ನಿರ್ದೇಶಕ ಎ.ಆರ್ ಮುರುಗದಾಸ್ ಜೊತೆ ಸಿನಿಮಾ ಮಾಡ್ತಿದ್ದಾರೆ. ಈ ಬೆನ್ನಲ್ಲೇ ಮತ್ತೊಬ್ಬ ಸೌತ್‌ ನಿರ್ದೇಶಕ ಅಟ್ಲಿ ಜೊತೆ ಸಿನಿಮಾ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 30ರಂದು ಈ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಸದ್ಯಕ್ಕಂತೂ ಈ ಬಗ್ಗೆ ನಟನ ಕಡೆಯಿಂದಾಗಲಿ, ಅಟ್ಲಿ ಕಡೆಯಿಂದಾಗಲಿ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

    ಇನ್ನೂ ಅಟ್ಲಿ ಜೊತೆ ಸಿನಿಮಾ ಮಾಡಿದರೆ ಸಲ್ಮಾನ್ ಖಾನ್‌ಗೆ ಖಂಡಿತವಾಗಿ ಭರ್ಜರಿ ಗೆಲುವು ಸಿಗಲಿದೆ ಎಂಬ ಅಭಿಪ್ರಾಯ ಅಭಿಮಾನಿಗಳಿಗೆ ಇದೆ. ಸ್ವತಃ ಸಲ್ಲು ಕೂಡ ಇದೇ ಆಲೋಚನೆ ಮಾಡಿದಂತಿದೆ.

  • ಅಲ್ಲು ಅರ್ಜುನ್ ಹೊಸ ಚಿತ್ರಕ್ಕೆ ಕೀರ್ತಿ ಸುರೇಶ್ ನಾಯಕಿ

    ಅಲ್ಲು ಅರ್ಜುನ್ ಹೊಸ ಚಿತ್ರಕ್ಕೆ ಕೀರ್ತಿ ಸುರೇಶ್ ನಾಯಕಿ

    ಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಸದ್ಯ ‘ಪುಷ್ಪ 2’ (Pushpa 2) ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರ ಹೊಸ ಹೊಸ ಸಿನಿಮಾಗಳು ಘೋಷಣೆ ಆಗುತ್ತಲೇ ಇವೆ. ಅದರಲ್ಲಿ ಅವರ ಮುಂಬರುವ ಪ್ರಾಜೆಕ್ಟ್ ಬಗ್ಗೆ ಸಖತ್ ಸುದ್ದಿ ಆಗುತ್ತಿದ್ದು, ‘ಜವಾನ್’ (Jawan) ಡೈರೆಕ್ಟರ್ ಅಟ್ಲೀ ಮುಂದಿನ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ.

    ಅಲ್ಲು ಅರ್ಜುನ್ ಮತ್ತು ಅಟ್ಲಿ ಒಟ್ಟಾಗುತ್ತಿರುವುದೇ ಒಂದು ಕ್ರೇಜ್ ಕ್ರಿಯೇಟ್ ಆಗಿದೆ. ಈ ಸಿನಿಮಾಗೆ ನಾಯಕಿ ಕೂಡ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರು ಈ ಚಿತ್ರಕ್ಕೆ ನಾಯಕಿಯಂತೆ. ಈಗಾಗಲೇ ಅಟ್ಲೀ ಅವರ ಜೊತೆ ಕೀರ್ತಿ ಮಾತನಾಡಿದ್ದಾರಂತೆ.

    ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್‌ಗೆ (Sharukh Khan) ಅಟ್ಲೀ ನಿರ್ದೇಶನ ಮಾಡಿದ ಮೇಲೆ ಅವರ ರೇಂಜ್ ಬದಲಾಗಿದೆ. ನಿರ್ದೇಶನದ ಮೊದಲ ಹಿಂದಿ ಸಿನಿಮಾ ಜವಾನ್ ಸೂಪರ್ ಡೂಪರ್ ಹಿಟ್ ಆಗಿದೆ. ಜವಾನ್ ಸಕ್ಸಸ್ ಬೆನ್ನಲ್ಲೇ ಅಲ್ಲು ಅರ್ಜುನ್ ಜೊತೆ ಅಟ್ಲೀ (Atlee) ಕೈಜೋಡಿಸಿದ್ದಾರೆ.

     

    ಈಗಾಗಲೇ ಹೈದರಾಬಾದ್‌ಗೆ ತೆರಳಿ ಅಲ್ಲು ಅರ್ಜುನ್‌ಗೆ (ಕಥೆ ಹೇಳಿ ಬಂದಿದ್ದಾರಂತೆ ಅಟ್ಲೀ. ಇಬ್ಬರೂ ಕೂಡ ಹೊಸ ಪ್ರಾಜೆಕ್ಟ್ ಬಗ್ಗೆ ಗ್ರೀನ್ ಸಿಗ್ನಲ್ ಕೊಡದೇ ಗಪ್‌ಚುಪ್ ಆಗಿದ್ದಾರೆ. ‘ಜವಾನ್’ (Jawan) ಸಿನಿಮಾಗಿಂತ ವಿಭಿನ್ನ ಕಥೆಯನ್ನೇ ಅಟ್ಲೀ ರೆಡಿ ಮಾಡಿದ್ದಾರಂತೆ.‌ ಮೂಲಗಳ ಪ್ರಕಾರ, ಪುಷ್ಪ 2 ನಂತರ ಅಟ್ಲೀ ಜೊತೆ ಅಲ್ಲು ಅರ್ಜುನ್‌ ಸಿನಿಮಾ ಮಾಡ್ತಾರೆ ಅನ್ನೋದು ಇನ್‌ಸೈಡ್‌ ಸುದ್ದಿ.

  • ವಿಜಯ್ ಕೊನೆಯ ಚಿತ್ರಕ್ಕೆ ಸಮಂತಾ ನಾಯಕಿ

    ವಿಜಯ್ ಕೊನೆಯ ಚಿತ್ರಕ್ಕೆ ಸಮಂತಾ ನಾಯಕಿ

    ಕಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್ (Vijay Thalapathy) ಅವರು ರಾಜಕೀಯಕ್ಕೆ (Politics) ಎಂಟ್ರಿ ಕೊಡುವ ಬಗ್ಗೆ ಇತ್ತೀಚೆಗೆ ಮಾಹಿತಿ ನೀಡಿದ್ದರು. ತಮ್ಮದೇ ಸ್ವಂತ ಪಕ್ಷ ಕಟ್ಟಿ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ಇದರ ನಡುವೆ ಈಗಾಗಲೇ ಒಪ್ಪಿಕೊಂಡಿರುವ ಚಿತ್ರಗಳನ್ನು ಕೂಡ ವಿಜಯ್ ಮುಗಿಸಿ ಕೊಡ್ತಿದ್ದಾರೆ. ಸದ್ಯ ವಿಜಯ್ ನಟನೆಯ ಕೊನೆಯ ಚಿತ್ರದ ನಾಯಕಿ, ಪ್ರಾಜೆಕ್ಟ್ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ.

    ‘ಲಿಯೋ’ (Leo) ಚಿತ್ರದ ನಂತರ ವಿಜಯ್ 68ನೇ ಚಿತ್ರಕ್ಕೆ ವೆಂಕಟ್ ಪ್ರಭು ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಈ ಚಿತ್ರದ ಶೂಟಿಂಗ್‌ನಲ್ಲಿ ವಿಜಯ್ ಸಕ್ರಿಯರಾಗಿದ್ದಾರೆ. ಈ ಬೆನ್ನಲ್ಲೇ ವಿಜಯ್ ನಟನೆಯ ಕೊನೆಯ ಚಿತ್ರದ ಬಗ್ಗೆ ಚರ್ಚೆ ಆಗುತ್ತಿದೆ. 69ನೇ ಸಿನಿಮಾ ವಿಜಯ್ ನಟಿಸಲಿರುವ ಕೊನೆಯ ಪ್ರಾಜೆಕ್ಟ್ ಎನ್ನಲಾಗುತ್ತಿದೆ. ಇದನ್ನೂ ಓದಿ:ಪುತ್ರ ಅನಂತ್ ಪ್ರೀ-ವೆಡ್ಡಿಂಗ್‌ನಲ್ಲಿ ನೀತಾ ಅಂಬಾನಿ ಡ್ಯಾನ್ಸ್

    ವಿಜಯ್ ಕೊನೆ ಸಿನಿಮಾಗೆ ‘ಜವಾನ್’ (Jawan) ಸ್ಟಾರ್ ಡೈರೆಕ್ಟರ್ ಅಟ್ಲೀ (Atlee Kumar) ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಇದೆ. ಈ ಹಿಂದೆ ಇಬ್ಬರ ಕಾಂಬೋದಲ್ಲಿ ಮೆರ್ಸಲ್, ಬಿಗಿಲ್, ಹಾಗೂ ತೇರಿ, ಚಿತ್ರಗಳು ಮೂಡಿ ಬಂದಿತ್ತು. ಈಗ ಮತ್ತೆ ಈ ಜೋಡಿ ಒಂದಾಗಲು ನಿರ್ಧರಿಸಿದ್ದಾರಂತೆ.

    ವಿಜಯ್ 69ನೇ ಚಿತ್ರಕ್ಕೆ ಸಮಂತಾ (Samantha) ನಾಯಕಿಯಾಗಿ ನಟಿಸುತ್ತಾರೆ ಎನ್ನಲಾಗುತ್ತಿದೆ. ಈ ಚಿತ್ರಕ್ಕೆ ಖ್ಯಾತ ನಿರ್ಮಾಣ ಸಂಸ್ಥೆಯೊಂದು ನಿರ್ಮಾಣದ ಹೊಣೆ ಹೊತ್ತಿದೆ. ಈ ಸುದ್ದಿ ನಿಜನಾ? ಚಿತ್ರತಂಡ ಅಧಿಕೃತ ಘೋಷಣೆ ಮಾಡುವವರೆಗೂ ಕಾಯಬೇಕಿದೆ.

    ಈ ಹಿಂದೆ ಕೂಡ ವಿಜಯ್-ಸಮಂತಾ ಕಾಂಬೋದಲ್ಲಿ ಮೆರ್ಸಲ್, ತೇರಿ ಸಿನಿಮಾ ಮೂಡಿ ಬಂದಿತ್ತು. ಇಬ್ಬರ ಕೆಮಿಸ್ಟ್ರಿ ಚಿತ್ರದಲ್ಲಿ ಮೋಡಿ ಮಾಡಿತ್ತು. ಸಿನಿಮಾಗಾಗಿ ಈಗ ಮತ್ತೆ ಈ ಜೋಡಿ ಒಂದಾಗುತ್ತಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ.