Tag: ATM card

  • ಧರ್ಮಸ್ಥಳ ಉತ್ಕನನ: 2 ಕಾರ್ಡ್‌, ಹರಿದ ರವಿಕೆ ಪತ್ತೆ

    ಧರ್ಮಸ್ಥಳ ಉತ್ಕನನ: 2 ಕಾರ್ಡ್‌, ಹರಿದ ರವಿಕೆ ಪತ್ತೆ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣಕ್ಕೆ (Dharmasthala Mass Burial Case) ಸಂಬಂಧಿಸಿದಂತೆ ಉತ್ಕನನದ ವೇಳೆ ಎರಡು ಕಾರ್ಡ್‌ (Card) ಮತ್ತು ಹರಿದ ರವಿಕೆ (Torn Red Blouse) ಪತ್ತೆಯಾಗಿವೆ.

    ಸ್ಥಳದಲ್ಲಿ ಒಂದು ಪಾನ್ ಕಾರ್ಡ್ ಮತ್ತೊಂದು ಡೆಬಿಡ್ ಕಾರ್ಡ್‌ ಪತ್ತೆಯಾಗಿದೆ. ಸ್ಥಳ ಅಗೆಯುವ ಸಂದರ್ಭ ದೊರೆತ ಎರಡು ಐಡಿ ಕಾರ್ಡ್‌ ಸಿಕ್ಕಿದೆ ಎಂದು ದೂರುದಾರನ ಪರ ವಕೀಲ ಮಂಜುನಾಥ್‌ ಎನ್‌ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಎಸ್‌ಐಟಿ ಮೂಲಗಳನ್ನು ಆಧಾರಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

     

    ಹೇಳಿಕೆಯಲ್ಲಿ ಏನಿದೆ?
    ಸೈಟ್ ಸಂಖ್ಯೆ 1 ರಲ್ಲಿ ಸುಮಾರು 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿದೆ. ಒಂದು ಕಾರ್ಡ್‌ನಲ್ಲಿ ಪುರುಷನ ಹೆಸರು ಇದ್ದರೆ ಇನ್ನೊಂದು ಕಾರ್ಡ್‌ನಲ್ಲಿ ಲಕ್ಷ್ಮಿ ಎಂಬ ಮಹಿಳೆಯ ಹೆಸರು ಇದೆ.

    ಸಾಕ್ಷ್ಯಗಳು ಸಿಕ್ಕಿದ ಕಾರಣ ನಮಗೆ ಹೊಸ ಭರವಸೆ ಮೂಡಿದೆ. ನಾವು ಎಸ್‌ಐಟಿ ಅವರ ಕೆಲಸದಲ್ಲಿ ಸಂಪೂರ್ಣ ನಂಬಿಕೆ ಇಟ್ಟಿದ್ದೇವೆ. ವಿಶೇಷ ತನಿಖಾ ತಂಡ ಶ್ಲಾಘನೀಯ ಕೆಲಸ ಮಾಡುತ್ತಿದೆ.

     

  • ಹೊಸ ಎಟಿಎಂ ಕಾರ್ಡ್ ನೀಡುವುದಾಗಿ 1 ಲಕ್ಷ ಪಂಗನಾಮ

    ಹೊಸ ಎಟಿಎಂ ಕಾರ್ಡ್ ನೀಡುವುದಾಗಿ 1 ಲಕ್ಷ ಪಂಗನಾಮ

    ಚಿಕ್ಕಮಗಳೂರು: ಹೊಸ ಎಟಿಎಂ ಕಾರ್ಡ್ ನೀಡುವುದಾಗಿ ಹೇಳಿ 1 ಲಕ್ಷ ರೂ. ಪಂಗನಾಮ ಹಾಕಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದಲ್ಲಿ ನಡೆದಿದೆ.

    ಕೃಷ್ಣೇಗೌಡ ಅವರ ಬ್ಯಾಂಕ್ ಖಾತೆಯಿಂದ ಹಣ ಕದ್ದಿದ್ದಾರೆ. ಓಟಿಪಿ ನಂಬರ್ ನೀಡುವಂತೆ ವಂಚಕನಿಂದ ಕೃಷ್ಣೇಗೌಡರಿಗೆ ಕರೆ ಬಂದಿದೆ. ತನ್ನನ್ನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡ ವಂಚಕ, ಮೊಬೈಲಿಗೆ ಬಂದ ಓಟಿಪಿ ನಂಬರ್ ಹೇಳಿ ಎಂದು ಕೃಷ್ಣೇಗೌಡರನ್ನು ಕೇಳಿದ್ದಾನೆ. ಕೆಲವೇ ಸೆಕೆಂಡುಗಳಲ್ಲಿ ಕೃಷ್ಣೇಗೌಡರ ಖಾತೆಯಿಂದ 1 ಲಕ್ಷ ರೂ. ಹಣ ಡ್ರಾ ಮಾಡಲಾಗಿದೆ. ಇದನ್ನೂ ಓದಿ: ಸೆ.5 ರವರೆಗೆ ರಾಜ್ಯದ ಹಲವೆಡೆ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

    ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೈಬರ್ ಕ್ರೈಂ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಹಣ ವಾಪಾಸ್ ಸಿಗುವ ಭರವಸೆ ನೀಡಿದ್ದಾರೆ.

  • ಎಟಿಎಂ ಕಾರ್ಡ್ ಮಾಹಿತಿ ಕದ್ದು, ಖಾತೆಗೆ ಕನ್ನ – ಅಂತರಾಷ್ಟ್ರೀಯ ಕಳ್ಳರ ಬಂಧನ

    ಎಟಿಎಂ ಕಾರ್ಡ್ ಮಾಹಿತಿ ಕದ್ದು, ಖಾತೆಗೆ ಕನ್ನ – ಅಂತರಾಷ್ಟ್ರೀಯ ಕಳ್ಳರ ಬಂಧನ

    ತುಮಕೂರು: ಎಟಿಎಂ ಕಾರ್ಡ್ ದತ್ತಾಂಶ ಕದ್ದು ಖಾತೆಗೆ ಕನ್ನ ಹಾಕುತ್ತಿದ್ದ ತುಮಕೂರು ಸಿ.ಇ.ಎನ್ ಪೊಲೀಸರು ಇಬ್ಬರು ಅಂತರಾಷ್ಟ್ರೀಯ ಹೈಟೆಕ್ ಕಳ್ಳರನ್ನು ಬಂದಿಸಿದ್ದಾರೆ.

    ಎಟಿಎಂ ಯಂತ್ರಗಳಿಗೆ ಸ್ಕಿಮ್ಮಿಂಗ್ ಮಷಿನ್ ಅಳವಡಿಸಿ ಹಣ ಡ್ರಾ ಮಾಡುತ್ತಿದ್ದ ಉಗಾಂಡ ಮೂಲದ ಐವಾನ್ ಕಾಂಬೊಂಗೆ, ಕೀನ್ಯಾ ಮೂಲದ ಲಾರೆನ್ಸ್ ಮಾಕಾಮು ಬಂಧಿತರು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿದ್ದ ಇಬ್ಬರೂ ಖದೀಮರು ಕಳೆದ ಅಕ್ಟೋಬರ್ ಹಾಗೂ ನವೆಂಬರ್ ನಿಂದ ತುಮಕೂರು ಜಿಲ್ಲೆಯ ಕುಣಿಗಲ್, ತುಮಕೂರು ನಗರ, ಕುಣಿಗಲ್, ಕೆ.ಬಿ ಕ್ರಾಸ್ ಸೇರಿದಂತೆ ಹಲವು ಎಟಿಎಂ ಗಳಲ್ಲಿ ಕಾರ್ಡ್‍ಗಳ ಮಾಹಿತಿ ಕದಿಯುತ್ತಿದ್ದರು. ಚೆನೈ, ದೆಹಲಿ, ಮುಂಬೈ ಸೇರಿದಂತೆ ಹಲವೆಡೆ ನಕಲಿ ಕಾರ್ಡ್ ಬಳಸಿ ಹಣ ಲಪಟಾಯಿಸುತ್ತಿದ್ದರು ಎನ್ನಲಾಗಿದೆ.

    ಕೇಂದ್ರ ವಲಯ ಐಜಿಪಿ ಸೀಮಂತ್ಕುಮಾರ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಬಂಧಿತರಿಂದ ವಿವಿಧ ಬ್ಯಾಂಕ್‍ಗಳ 20 ಎಟಿಎಂ ಕಾರ್ಡ್, ಕೃತ್ಯಕ್ಕೆ ಬಳಸಿದ ಸ್ಕಿಮ್ಮಿಂಗ್ ಮಷಿನ್‍ಗಳು ಸೇರಿದಂತೆ, ಒಂದು ಹೊಂಡಾ ಸಿಆರ್‍ವಿ ಕಾರನ್ನು ವಶಕ್ಕೆ ಪಡೆಯಲಾಗಿದೆ.

    ಈ ಇಬ್ಬರೂ ಖದೀಮರು ವಿದ್ಯಾರ್ಥಿಗಳಾಗಿದ್ದು, ಒಬ್ಬ ಕಾಮರ್ಸ್ ವಿದ್ಯಾರ್ಥಿಯಾಗಿದ್ದು ಮತ್ತೊಬ್ಬ ಫಿಜಿಯೋ ತೆರಪಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಟಿಎಂ ಕಾರ್ಡ್ ಗಳು ಗ್ರಾಹಕರ ಬಳಿ ಇದ್ದರೂ ಹಣ ಡ್ರಾ ಆಗಿರೋ ಮೆಸೇಜ್ ಬರುತ್ತಿತ್ತು. ಇದರಿಂದ ಸಾಕಷ್ಟು ಜನ ಹಣ ಕಳೆದುಕೊಂಡಿರುವ ಬಗ್ಗೆ ಸುಮಾರು 60ಕ್ಕೂ ಹೆಚ್ಚು ದೂರುಗಳು ದಾಖಲಾಗಿದ್ದವು. ಪ್ರಕರಣದ ತನಿಖೆ ಆರಂಭಿಸಿದ ಸಿ.ಇ.ಎನ್ ಪೊಲೀಸರು ಈಗಾಗಲೇ ಇಬ್ಬರು ಖದೀಮರನ್ನು ಬಂಧಿಸಿದ್ದು, ಮತ್ತಿಬ್ಬರ ಪತ್ತೆಗಾಗಿ ಬಲೆ ಬೀಸಿದ್ದಾರೆ.

  • ಕೊಲೆ ಆರೋಪಿಗಳ ಸುಳಿವು ನೀಡಿದ ಎಟಿಎಂ ಕಾರ್ಡ್

    ಕೊಲೆ ಆರೋಪಿಗಳ ಸುಳಿವು ನೀಡಿದ ಎಟಿಎಂ ಕಾರ್ಡ್

    – ಡಬಲ್ ಮರ್ಡರ್ ಮಾಡಿದ್ದ 6 ಆರೋಪಿಗಳು ಅಂದರ್

    ಹಾಸನ: ತೋಟದ ಮನೆಯಲ್ಲಿ ವೃದ್ಧ ದಂಪತಿಯ ಜೋಡಿ ಕೊಲೆ ಪ್ರಕರಣರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸರು 6 ಜನ ಆರೋಪಿಗಳನ್ನು ಬಂಧಿಸಿದ್ದು, ಮಂಜಶೆಟ್ಟಿ(23), ಪ್ರಸಾದ್(25), ನಂದನ್ ಕುಮಾರ್(33), ಯೋಗಾನಂದ(29), ಭರತ್(24), ಮಧು(25) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸುಮಾರು 15 ಲಕ್ಷ ಮೌಲ್ಯದ 316 ಗ್ರಾಂ ಚಿನ್ನ, ಎರಡು ಕೆಜಿ 250 ಗ್ರಾಂ ಬೆಳ್ಳಿ, ಸುಮಾರು 25 ಸಾವಿರ ನಗದು, ಮೂರು ಮೊಬೈಲ್ ಫೋನ್, ಒಂದು ಕಾರು, ಮೂರು ಬೈಕ್ ವಶಕ್ಕೆ ಪಡೆಯಲಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಅವರ ಮಾಹಿತಿ ಮೇರೆಗೆ ಉಳಿದ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳು ದಂಪತಿಯ ಎಟಿಎಂ ಕಾರ್ಡ್‍ನಿಂದ ಹಣ ಪಡೆಯಲು ಹೋಗಿದ್ದರಿಂದ ಆರೋಪಿಗಳ ಹುಡುಕಾಟದಲ್ಲಿದ್ದ ಪೊಲೀಸರಿಗೆ ಸುಳಿವು ಸಿಕ್ಕಿದ್ದು, ಎಟಿಎಂ ಮೂಲಕ ಎಲ್ಲರನ್ನೂ ಬಂಧಿಸಲು ಸಾಧ್ಯವಾಗಿದೆ.

    ಈ ಕುರಿತು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳೆಲ್ಲ ಪೊಲೀಸರ ವಶವಾಗಿದ್ದು, ತನಿಖಾ ತಂಡಕ್ಕೆ ಎಸ್‍ಪಿ ಶ್ರೀನಿವಾಸ್‍ಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಆಗಸ್ಟ್ 29 ರಂದು ಚನ್ನರಾಯಪಟ್ಟಣ ತಾಲೂಕಿನ, ಆಲಗೊಂಡನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಮುರಳೀಧರ್ ಮತ್ತು ಉಮಾದೇವಿ ದಂಪತಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು.

  • ಎಟಿಎಂ ಕಾರ್ಡ್ ಅಲ್ಲ ಇದು ಮದುವೆ ಆಮಂತ್ರಣ!- ಫೋಟೋ ವೈರಲ್

    ಎಟಿಎಂ ಕಾರ್ಡ್ ಅಲ್ಲ ಇದು ಮದುವೆ ಆಮಂತ್ರಣ!- ಫೋಟೋ ವೈರಲ್

    ಬೆಂಗಳೂರು / ಕೊಪ್ಪಳ: ವಿಭಿನ್ನವಾಗಿ ಮದುವೆ ಆಮಂತ್ರಣ ಮುದ್ರಿಸಲು ಅನೇಕರು ಪ್ಲಾನ್ ಮಾಡುತ್ತಲೇ ಇರುತ್ತಾರೆ. ಹಾಗೇ ಕೊಪ್ಪಳ ಜಿಲ್ಲೆಯ ವ್ಯಕ್ತಿಯೊಬ್ಬರು ತಮ್ಮ ಮದುವೆಯ ಆಮಂತ್ರಣವನ್ನು ಎಟಿಎಂ ಕಾರ್ಡ್ ಮಾದರಿಯಲ್ಲಿ ಮುದ್ರಿಸಿ ಹಂಚುತ್ತಿದ್ದಾರೆ.

    ಕೊಪ್ಪಳ ಜಿಲ್ಲೆ ಕುಷ್ಠಗಿ ತಾಲೂಕು ಹಾಬಲಕಟ್ಟಿ ಗ್ರಾಮದ ದುರ್ಗೇಶ್ ದೊಡ್ಡಮನಿ ಅವರ ವಿವಾಹ ಇದೇ 30ರಂದು ನಡೆಯಲಿದೆ. ಸಂಬಂಧಿಕರು, ಆಪ್ತರು ಹಾಗೂ ಸ್ನೇಹಿತರಿಗೆ ಎಟಿಎಂ ಕಾರ್ಡ್ ನಂತೆ ಕಾಣುವ ಮದುವೆ ಆಮಂತ್ರಣ ಪತ್ರಿಕೆ ನೀಡುತ್ತಿದ್ದಾರೆ. ಅದರಲ್ಲಿ ವಿವಾಹ ಸ್ಥಳ, ದಿನಾಂಕ ಎಲ್ಲವನ್ನೂ ಅಚ್ಚುಕಟ್ಟಾಗಿ ತಿಳಿಸಲಾಗಿದೆ. ಈ ಮದುವೆ ಕಾರ್ಡ್ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಈ ಬಗ್ಗೆ ಮದುಮಗ ದುರ್ಗೇಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನಾನು ಯಾದಗಿರಿ ಜಿಲ್ಲೆಯ ಶಾಹಾಪುರದ ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಮದುವೆಗೂ ಮುನ್ನ ಇಂಟರ್ ನೆಟ್‍ನಲ್ಲಿ ಇಂತಹ ಕಾರ್ಡ್ ಗಳನ್ನು ನೋಡಿದ್ದೆ. ಹೀಗಾಗಿ ನಾನು ಹೀಗೆ ಆಮಂತ್ರಣ ಮುದ್ರಿಸಿ ಹಂಚಬೇಕು ಎನ್ನುವ ಪ್ಲಾನ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

    ಕಾರ್ಡ್ ವಿಶೇಷತೆ ಏನು?:
    ಎಟಿಎಂ ಕಾರ್ಡ್ ನಲ್ಲಿರುವ ಯಾವುದೇ ವಿಷಯವನ್ನು ಮದ್ವೆ ಕಾರ್ಡ್ ನಲ್ಲೂ ಕೈಬಿಟ್ಟಿಲ್ಲ. ಕಾರ್ಡ್ ನಲ್ಲಿರುವ ಮಾಹಿತಿಯನ್ನು ಮಾತ್ರ ಬದಲಾಯಿಸಿದ್ದಾರೆ. ವಿಸಾ ಕಾರ್ಡ್ ಹೆಸರಿನ ಜಾಗದಲ್ಲಿ ವಿವಾಹ ಎಂದು, 16 ಸಂಖ್ಯೆಯ ಕಾರ್ಡ್ ನಂಬರ್ ಬದಲಾಗಿ ವಿವಾಹ ದಿನಾಂಕ, ಸಮಯವನ್ನು ತಿಳಿಸಲಾಗಿದೆ.

    ಕಾರ್ಡ್ ನ ಬಲ ಭಾಗದಲ್ಲಿ ನ್ಯೂಲೈಫ್ ಬ್ಯಾಂಕ್ ಅಂತ ಬರೆಯಲಾಗಿದೆ. ಅವಧಿ ಆರಂಭ (3-12-2018) ಹಾಗೂ ಮುಕ್ತಾಯ ಲೈಫ್ ಟೈಮ್. ನಿಮ್ಮ ಹಾಜರಿಕೊಟ್ಟು ಮದುವೆಯ ಸಂಭ್ರಮದಲ್ಲಿ ಭಾಗಿಯಾಗಿ. ಮದುವೆಗೆ ಬರದವರಿಗೆ ಯಾವುದೇ ಕ್ಷಮೆ ಇರುವುದಿಲ್ಲ ಎಂದು ತಿಳಿಸಿ ವಧು-ವರರು ಸಹಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com

  • ಕೇಸ್ ಕ್ಲೋಸ್ ಆಗಿಲ್ಲ, ಕಳ್ಳರೂ ಸಿಕ್ಕಿಲ್ಲ, ಆದ್ರೂ ಡ್ರಾ ಆಗಿದ್ದ 20,89,558 ರೂ. ಅಕೌಂಟ್‍ಗೆ ವಾಪಸ್

    ಕೇಸ್ ಕ್ಲೋಸ್ ಆಗಿಲ್ಲ, ಕಳ್ಳರೂ ಸಿಕ್ಕಿಲ್ಲ, ಆದ್ರೂ ಡ್ರಾ ಆಗಿದ್ದ 20,89,558 ರೂ. ಅಕೌಂಟ್‍ಗೆ ವಾಪಸ್

    ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮಕರ್ತರಾದ ಶ್ರೀ ಭೀಮೇಶ್ವರ ಜೋಷಿ ಅವರು ಯೂರೋಪ್ ಪ್ರವಾಸದಲ್ಲಿದ್ದ ವೇಳೆ ಅವರ ಎಟಿಎಂ ಕಾರ್ಡ್ ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಆದರೆ ಈಗ ಕೇಸ್ ಕ್ಲೋಸ್ ಆಗದಿದ್ದರೂ, ಕಳ್ಳರೂ ಇನ್ನೂ ಸಿಗದಿದ್ದರೂ 20 ಲಕ್ಷದ 89 ಸಾವಿರದ 558 ರೂ. ಅಕೌಂಟ್‍ಗೆ ವಾಪಸ್ ಬಂದಿದ್ದು, ಹಲವು ಅನುಮಾನಗಳು ಹುಟ್ಟಿಕೊಂಡಿದೆ.

    ಕಳಸಾದ ಕರ್ನಾಟಕ ಬ್ಯಾಂಕಿನ ಜೋಷಿ ಅವರ ಅಕೌಂಟಿನಿಂದ ದುಷ್ಕರ್ಮಿಗಳು 20 ಲಕ್ಷಕ್ಕೂ ಅಧಿಕ ಹಣವನ್ನ ಡ್ರಾ ಮಾಡಿಕೊಂಡಿದ್ದರು. ವಿದೇಶದಿಂದ ಹಿಂದಿರುಗಿದ ಭೀಮೇಶ್ವರ ಜೋಷಿ ಕಳಸಾದ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದರು. ಕಳೆದ 29 ದಿನದಿಂದ ತನಿಖೆ ನಡೆಯುತ್ತಿದೆ. ಕಳ್ಳರಿನ್ನೂ ಅರೆಸ್ಟ್ ಆಗಿಲ್ಲ. ಈ ನಡುವೆ ಅಷ್ಟು ದೊಡ್ಡ ಮೊತ್ತದ ಹಣ ಜೋಷಿಯವರ ಅಕೌಂಟ್‍ಗೆ ಹಿಂದಿರುಗಿರೋದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಖಾತೆಗೆ ಹಣವನ್ನು ಹಿಂದಿರುಗಿರೋದ್ರಿಂದ ನಿಜಕ್ಕೂ ಹಣ ಡ್ರಾ ಆಗಿತ್ತಾ? ಅಥವಾ ಬ್ಯಾಂಕ್‍ನವರೇ ಲೆಕ್ಕದಲ್ಲಿ ಹೆಚ್ಚು ಕಡಿಮೆ ಮಾಡಿದ್ದಾರಾ? ಕಳ್ಳರು ಸಿಗದೆ ಆ ಹಣ ಹೇಗೆ ಸಿಕ್ತು? ಅನ್ನೋ ಅನುಮಾನ ಮೂಡಿದೆ. ಜನಸಾಮಾನ್ಯರು ಒಂದು ಸಾವಿರ ಕಳೆದುಕೊಂಡರೆ ಅರ್ಜಿ, ಐಡಿ ಪ್ರೂಫ್ ಅಂತೆಲ್ಲಾ 45 ದಿನಕ್ಕೂ ಹೆಚ್ಚು ಕಾಲ ಅಲೆಯಬೇಕು. ಆದರೆ ಕಳ್ಳರೇ ಸಿಗದೆ ಇಷ್ಟು ದೊಡ್ಡ ಮೊತ್ತದ ಹಣ ವಾಪಸ್ ಬರೋಕೆ ಹೇಗೆ ಸಾಧ್ಯ ಎಂದು ಬ್ಯಾಂಕ್ ಸಿಬ್ಬಂದಿಗಳೇ ಸ್ಪಷ್ಟಪಡಿಸಬೇಕಿದೆ.