Tag: Attacked

  • ಆಯುಕ್ತರ ಎದುರೇ ದೂರುದಾರನ ಮೇಲೆ ನಗರಸಭೆ ಕೈ ಸದಸ್ಯನಿಂದ ಹಲ್ಲೆ

    ಆಯುಕ್ತರ ಎದುರೇ ದೂರುದಾರನ ಮೇಲೆ ನಗರಸಭೆ ಕೈ ಸದಸ್ಯನಿಂದ ಹಲ್ಲೆ

    ಕೋಲಾರ: ಸಮಸ್ಯೆ ಕುರಿತು ದೂರು ನೀಡಲು ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆಯೇ ಕೆಜಿಎಫ್ ನಗರ ಸಭೆ ಕಾಂಗ್ರೆಸ್ ಸದಸ್ಯರೊಬ್ಬರು ಮಾರಣಾತಿಂಕವಾಗಿ ಹಲ್ಲೆ ಮಾಡಿ ಗುಂಡಾ ವರ್ತನೆ ಮೆರೆದಿದ್ದಾರೆ.

    ಕೆಜಿಎಫ್‍ನ 33ನೇ ವಾರ್ಡ್ ನಿವಾಸಿ ಭಾಸ್ಕರ್ ಹಲ್ಲೆಗೆ ಒಳಗಾದ ದೂರುದಾರ. ಸ್ಟಾನ್ಲಿ ಹಲ್ಲೆ ನಡೆಸಿದ ನಗರಸಭೆ ಸದಸ್ಯ. ನಗರಸಭೆ ಆಯುಕ್ತ ಶ್ರೀಕಾಂತ್ ಎದುರಲ್ಲೇ ಘಟನೆ ನಡೆದಿದ್ದು, ಕಚೇರಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.

    ನಡೆದದ್ದು ಏನು?
    ಕೆಜಿಎಫ್‍ನ 33ನೇ ವಾರ್ಡ್ ರಾಜಕಾಲುವೆಯನ್ನು ಒತ್ತುವರಿ ಮಾಡಲಾಗಿದೆ ಅಂತಾ ದೂರು ನೀಡಲು ಭಾಸ್ಕರ್ ಆಯುಕ್ತರ ಕಚೇರಿಗೆ ಬಂದಿದ್ದರು. ಆಗ ಅಲ್ಲಿಯೇ ಇದ್ದ ಸ್ಟಾನ್ಲಿ ನನ್ನ ವಿರುದ್ಧವೇ ದೂರು ನೀಡುತ್ತೀಯಾ ಥಳಿಸಿದ್ದಾರೆ. ಅಷ್ಟಕ್ಕೆ ಬಿಡದೇ ಸ್ಟಾನ್ಲಿ ಸಹಚರರು ಆಯುಕ್ತರ ಎದುರಲ್ಲಿಯೇ ಭಾಸ್ಕರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

    ಈ ಕುರಿತು ಬುಧವಾರ ಮಧ್ಯಾಹ್ನ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದ ಭಾಸ್ಕರ್ ಮೇಲೆ, ಕೆಲ ಪೊಲೀಸ್ ಅಧಿಕಾರಿಗಳು ರೇಗಾಡಿದ್ದಾರೆ. ನಿನ್ನದೆ ತಪ್ಪು ಇದೆ, ಸುಮ್ಮನೆ ಇಲ್ಲಿಂದ ಹೋಗು ಅಂತಾ ಗದರಿಸಿದ್ದರಂತೆ. ಸಂಜೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು, ಎಫ್‍ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

    ಭಾಸ್ಕರ್ ಮಾನವ ಹಕ್ಕುಗಳ ಜಾಗೃತಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಇದರಿಂದಾಗಿ ನಗರಸಭೆ ಸದಸ್ಯರ ಅಕ್ರಮಗಳನ್ನು ಹೊರ ಹಾಕುತ್ತಿದ್ದರು. ಹಳೇ ವೈಷಮ್ಯದಿಂದ ಭಾಸ್ಕರ್ ಮೇಲೆ ಸ್ಟಾನ್ಲಿ ಹಾಗೂ ಆತನ ಸಹಚರರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಂಜನೇಯ ಸ್ವಾಮಿಗೆ ಹಾರ ಹಾಕಲು ಹೋದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

    ಆಂಜನೇಯ ಸ್ವಾಮಿಗೆ ಹಾರ ಹಾಕಲು ಹೋದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

    ಶಿವಮೊಗ್ಗ: ಆಂಜನೇಯ ಸ್ವಾಮಿಗೆ ಹಾರ ಹಾಕಲು ಹೋದ ದಲಿತ ಯುವಕರ ಮೇಲೆ ಸವರ್ಣೀಯರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ತಡರಾತ್ರಿ ನಡೆದಿದೆ.

    ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ದಸರಾ ಹಾಗೂ ಭೂಮಿ ಪೂರ್ಣಿಮೆ ಹಬ್ಬದ ಅಂಗವಾಗಿ ಗುರುವಾರ ರಾತ್ರಿ ಆಂಜನೇಯ ಸ್ವಾಮಿಯ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ದಲಿತರು ಆಂಜನೇಯ ಸ್ವಾಮಿಗೆ ಹೂವಿನ ಹಾರ ಹಾಕಲು ಮುಂದಾಗಿದ್ದಾರೆ. ಅಲ್ಲೇ ಇದ್ದ ಸವರ್ಣೀಯರ ಗುಂಪೊಂದು ಯುವಕರ ಮೇಲೆ ಏಕಾಎಕಿ ದಾಳಿ ನಡೆಸಿ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇದೇ ವೇಳೆ ಕೆಲ ಕಿಡಿಗೇಡಿಗಳು ದಲಿತರಿಗೆ ಸೇರಿದ ಗೂಡಂಗಡಿಗೆ ಬೆಂಕಿ ಹಚ್ಚಿ ಧ್ವಂಸ ಮಾಡಿದ್ದಾರೆ. ಈ ಘಟನೆಯಿಂದಾಗಿ ಹರಮಘಟ್ಟ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಇನ್ನು ಗ್ರಾಮಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಘಟನೆ ಬಗ್ಗೆ ವಿಚಾರಣೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಡಿಎಆರ್ ತುಕಡಿಗಳನ್ನು ನಿಯೋಜನೆ ಮಾಡಿದ್ದಾರೆ.

    ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.