Tag: attempted suicide

  • ಎಎಪಿ ಶಾಸಕ ಲಾಭ್ ಸಿಂಗ್ ಉಗೋಕೆ ತಂದೆ ಆತ್ಮಹತ್ಯೆಗೆ ಯತ್ನ!

    ಎಎಪಿ ಶಾಸಕ ಲಾಭ್ ಸಿಂಗ್ ಉಗೋಕೆ ತಂದೆ ಆತ್ಮಹತ್ಯೆಗೆ ಯತ್ನ!

    ಚಂಡೀಗಢ: ಆಮ್ ಆದ್ಮಿ ಪಾರ್ಟಿ (AAP) ಯ ಶಾಸಕ ಲಾಭ್ ಸಿಂಗ್ ಉಗೋಕೆಯವರ ತಂದೆ ಆತ್ಮಹತ್ಯೆಗೆ ಯತ್ನಿಸಿದ ಅಚ್ಚರಿಯ ಘಟನೆಯೊಂದು ಇಂದು ಪಂಜಾಬ್‍ನಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಯತತ್ನಿಸಿದವರನ್ನು ದರ್ಶನ್ ಸಿಂಗ್ (Darshan Singh) ಎಂದು ಗುರುತಿಸಲಾಗಿದೆ. ಇವರು ಆತ್ಮಹತ್ಯೆಗೆ ಯತ್ನಿಸಿದ ವಿಚಾರವನ್ನು ಸ್ವತಃ ಪಂಜಾಬ್ (Punjab) ಶಾಸಕರೇ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

    ದರ್ಶನ್ ಸಿಂಗ್ ಅವರು ಇಂದು ಮಧ್ಯಾಹ್ನದ ಬಳಿಕ ವಿಷಯುಕ್ತ ಪದಾರ್ಥವನ್ನು ಸೇವಿಸಿದ್ದಾರೆ. ಪರಿಣಾಮ ಅಸ್ವಸ್ಥರಾಗಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದರ್ಶನ್ ಸಿಂಗ್ ಆತ್ಮಹತ್ಯೆಗೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಲಾಭ್ ಸಿಂಗ್ (Labh Singh Ugoke) ಅವರು ಪ್ರತಿಕ್ರಿಯಿಸಿ, ತಂದೆ ಬೆಳಗ್ಗಿನವರೆಗೆ ಚೆನ್ನಾಗಿಯೇ ಇದ್ದರು. ಆದರೆ ನಾನು ಸಚಿವ ಸಂಪುಟ ಸಭೆ (Cabinet Meeting) ಗೆಂದು ಚಂಢೀಗಢಕ್ಕೆ ಬಂದ ಬಳಿಕ ಏನಾಯ್ತೋ ಗೊತ್ತಿಲ್ಲ ಎಂದು ತಿಳಿಸಿರು.

    ವರದಿಗಳ ಪ್ರಕಾರ, ದರ್ಶನ್ ಅವರ ಹಿರಿಯ ಸಹೋದರ ಸುಖಚೈನ್ ಸಿಂಗ್ ಅವರು ಕುಡಿತದ ದಾಸರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮನೆಯಲ್ಲಿ ಶಾಸಕರ ತಂದೆ ಜಗಳವಾಡಿದ್ದಾರೆ. ಇದಾದ ಬಳಿಕ ಅವರು ವಿಷಕಾರಿ ವಸ್ತುವೊಂದನ್ನು (Poisonous Substance) ಸೇವಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ಅಲ್ಲಿಂದ ಅವರನ್ನು ಲೂಧಿಯಾನದ ಡಿಸಿಎಂ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಸದ್ಯ ಶಾಸಕರ ತಂದೆಗೆ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್ ಹೋರಾಟ- ವಾಟ್ಸಪ್, ಇನ್‌ಸ್ಟಾಗ್ರಾಮ್ ಬಳಕೆ ಸ್ಥಗಿತ

    ಶಾಸಕರು ತಮ್ಮ ತಂದೆ ಚಿಕಿತ್ಸೆ ಪಡೆಯುತ್ತಿರುವ ಲೂಧಿಯಾನ ಡಿಎಂಸಿಗೆ ತಲುಪಿದ್ದಾರೆ. ಈ ಮಧ್ಯೆ ಉಗೋಕೆ ಅವರ ಆಪ್ತ ಸಹಾಯಕ ಗುರ್ತೇಜ್ ಸಿಂಗ್ ಅವರು ಮಾತನಾಡಿ, ಶಾಸಕರ ತಂದೆಗೆ ಇಂದು ಬೆಳಿಗ್ಗೆ ಹೃದಯಾಘಾತವಾಗಿದೆ ಎಂದು ಹೇಳಿಕೆ ನೀಡಿದ್ದರು.

    ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಕಾಂಗ್ರೆಸ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಸೋಲಿಸಿದ ನಂತರ ಲಾಭ್ ಸಿಂಗ್ ಉಗೋಕೆ ಗಮನ ಸೆಳೆದರು.

    Live Tv
    [brid partner=56869869 player=32851 video=960834 autoplay=true]

  • ತುಮಕೂರಿನ ಗುಬ್ಬಿ ತಹಶೀಲ್ದಾರ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ತುಮಕೂರಿನ ಗುಬ್ಬಿ ತಹಶೀಲ್ದಾರ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ತುಮಕೂರು: ಗೋಮಾಳ ಒತ್ತುವರಿ ತೆರವನ್ನು ವಿರೋಧಿಸಿದ ರೈತ ಮಹಿಳೆಯೊಬ್ಬರು ತಹಶೀಲ್ದಾರ್ ಎದುರೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅರಿವೆಸಂದ್ರ ಗ್ರಾಮದಲ್ಲಿ ನಡೆದಿದೆ.

    ರೇಣುಕಮ್ಮ ಎಂಬವರೇ ಆತ್ಮಹತ್ಯೆಗೆ ಯತ್ನಿಸಿದ ರೈತ ಮಹಿಳೆ. ಅರಿವೆಸಂದ್ರ ಗ್ರಾಮದ ಸರ್ವೆ ನಂಬರ್ 13 ರಲ್ಲಿನ ಗೋಮಾಳದಲ್ಲಿ 12 ಕ್ಕೂ ಹೆಚ್ಚು ರೈತರು ಒತ್ತುವರಿ ಮಾಡಿಕೊಂಡು ಜಮಿನು ತೋಟ ನಿರ್ಮಿಸಿಕೊಂಡಿದ್ದರು. ಅದರಲ್ಲಿ ನಾಲ್ಕು ಜನ ರೈತರನ್ನು ಬಿಟ್ಟು ಉಳಿದವರು ಒತ್ತುವರಿ ಜಾಗವನ್ನು ಸಕ್ರಮ ಮಾಡಿಕೊಂಡಿದ್ದರು. ರೇಣುಕಮ್ಮ ಸೇರಿದಂತೆ ಸಕ್ರಮಕ್ಕೆ ಅರ್ಜಿಯನ್ನೂ ಹಾಕದೇ ನಿರ್ಲಕ್ಷ ತೋರಿದ್ದರು. ಆದರೆ ಈ ಕುರಿತು ಹೈಕೋರ್ಟ್ ಗೋಮಾಳವನ್ನು ತೆರವುಗೊಳಿಸುವಂತೆ ಆದೇಶ ನೀಡಿತ್ತು.

    ಹೈಕೋರ್ಟ್ ಆದೇಶದಂತೆ ಪೊಲೀಸರ ಭದ್ರತೆಯೊಂದಿಗೆ ತಹಶೀಲ್ದಾರ್ ಮೋಹನ್ ಕುಮಾರ್ ತಂಡ ತೆರವು ಕಾರ್ಯಾಚರಣೆ ಆರಂಭಿಸಿತ್ತು. ಇದರಿಂದ ಕಳೆದ 20 ವರ್ಷಗಳಿಂದ ಒತ್ತುವರಿ ಜಾಗದಲ್ಲಿದ್ದ ತೋಟದಿಂದಲೇ ಜೀವನ ಸಾಗಿಸುತ್ತಾ ಇದ್ದ ವಿಧವೆ ರೇಣುಕಮ್ಮ ಅವರಿಗೆ ಆತಂಕ ಉಂಟಾಗಿ ತಹಶೀಲ್ದಾರ್ ಎದುರೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.

    ತಕ್ಷಣ ತಹಶೀಲ್ದಾರ್ ಹಾಗೂ ಪೊಲೀಸರು ರೇಣುಕಮ್ಮಳನ್ನು ರಕ್ಷಿಸಿದ್ದಾರೆ. ಈ ವೇಳೆ ಒತ್ತುವರಿ ತೆರವುಗೊಳಿಸಲು ಬಂದ ಅಧಿಕಾರಿಗಳು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.