Tag: Auckland

  • ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

    ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

    ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧ ಶನಿವಾರ ನಡೆಯಲಿರುವ ಏಕದಿನ ಪಂದ್ಯವು ಟೀಂ ಇಂಡಿಯಾಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲೇ ಸೋಲುಂಡಿರುವ ಟೀಂ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಬೇಕಾದರೆ ಎರಡನೇ ಪಂದ್ಯದಲ್ಲಿ ಗೆಲ್ಲಲೇಬೇಕು.

    ಆಕ್ಲೆಂಡ್‍ನ ಈಡನ್ ಪಾರ್ಕ್ ನಲ್ಲಿ ಶನಿವಾರ ಬೆಳಗ್ಗೆ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಉಭಯ ತಂಡಗಳು ಗೆಲುವಿನ ಮಂತ್ರದೊಂದಿಗೆ ಕಣಕ್ಕಿಳಿಯಲಿವೆ. ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ ಒಂದು ಪಂದ್ಯ ಗೆದ್ದು ಬೀಗುತ್ತಿರುವ ಕಿವೀಸ್ ಪಡೆ, ನಾಳೆಯ ಪಂದ್ಯದಲ್ಲೂ ಗೆದ್ದು ಸರಣಿ ಕೈವಶ ಮಾಡಿಕೊಳ್ಳಲು ಭರ್ಜರಿ ತಯಾರಿ ನಡೆಸಿದೆ. ಇತ್ತ ಮೊದಲ ಪಂದ್ಯದಲ್ಲಿ ಸೋಲುಂಡಿರುವ ಕೊಹ್ಲಿ ಪಡೆ, ಸರಣಿ ಗೆಲ್ಲಲು ಉಳದಿರುವ ಎರಡು ಪಂದ್ಯಗಳಲ್ಲಿ ಜಯಸಾಧಿಸಲೇಬೇಕು.

    ಮೊದಲ ಪಂದ್ಯದಲ್ಲಿ ಬೃಹತ್ ಮೊತ್ತ ನೀಡಿದ್ದರೂ ಭಾರತ ಸೋಲಬೇಕಾಯಿತು. ಆ ಸೋಲಿನಿಂದ ಎಚ್ಚೆತ್ತುಕೊಂಡಿರುವ ಟೀಂ ಇಂಡಿಯಾ ತಂಡದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಬೃಹತ್ ಮೊತ್ತವಿದ್ದರೂ ಬೌಲರ್‍ಗಳು ಕಿವೀಸ್ ರನ್ ಓಟಕ್ಕೆ ಕಡಿವಾಣ ಹಾಕುವಲ್ಲಿ ವಿಫಲರಾದರು. ಈ ಹಿನ್ನೆಲೆಯಲ್ಲಿ ಬೌಲಿಂಗ್‍ನತ್ತ ಹೆಚ್ಚು ಗಮನಹರಿಸಲಾಗಿದೆ. ಕುಲ್‍ದೀಪ್ ಯಾದವ್ ಬದಲಿಗೆ ಯಜುವೇಂದ್ರ ಚಹಲ್ ಹಾಗೂ ಶಾರ್ದೂಲ್ ಠಾಕೂರ್ ಸ್ಥಾನದಲ್ಲಿ ನವದೀಪ್ ಸೈನಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಮೊದಲ ಪಂದ್ಯದಲ್ಲಿ ಕುಲ್‍ದೀಪ್, ಠಾಕೂರ್ ಭಾರೀ ದುಬಾರಿಯಾಗಿದ್ದರು. ಇನ್ನುಳಿದಂತೆ ಬ್ಯಾಟಿಂಗ್ ಲೈನ್‍ಅಪ್‍ನಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಮಯಾಂಕ್ ಅಗರ್ವಾಲ್ ಹಾಗೂ ಪೃಥ್ವಿ ಶಾ ಓಪನಿಂಗ್ ಆಗಿ ಬ್ಯಾಟ್ ಬೀಸಲಿದ್ದಾರೆ.

    ಟಿ20 ಪಂದ್ಯದ ಸೋಲುನಿಂದ ಫಿನಿಕ್ಸ್ ನಂತೆ ಎದ್ದು ನಿಂತಿರುವ ಕಿವೀಸ್ ಪಡೆ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದೆ. ನಾಳೆಯ ಪಂದ್ಯದಲ್ಲಿ ಭಾರತವನ್ನು ಮಣಿಸಿ ಏಕದಿನ ಸರಣಿ ವಶಕ್ಕೆ ಪಡೆಯಲು ರಣತಂತ್ರದಲ್ಲಿದೆ. ಇನ್ನೂ ಚೇತರಿಸಿಕೊಳ್ಳದ ಕೀವಿಸ್ ತಂಡದ ನಾಯಕ ಕೇನ್ ವಿಲಿಯಮ್ಸನ್ ನಾಳೆಯ ಪಂದ್ಯದಲ್ಲೂ ಆಡುತ್ತಿಲ್ಲ. ವೇಗಿ ಕೈಲ್ ಜಾಮೀಸನ್ ಏಕದಿನ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. 6 ಅಡಿ ಎಚ್ಚರದ ದೈತ್ಯ ತವರು ನೆಲದಲ್ಲೇ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

    ಒಟ್ಟಿನಲ್ಲಿ ನಾಳೆಯ ಪಂದ್ಯ ಕೊಹ್ಲಿ ಪಡೆಗೆ ಅಗ್ನಿಪರೀಕ್ಷೆಯಾಗಿದೆ. ಪಂದ್ಯವನ್ನ ಗೆದ್ದು ಸರಣಿ ಜೀವಂವಾಗಿರಿಸಿಕೊಳ್ಳಲು ಟೀಂ ಇಂಡಿಯಾ ತಂತ್ರ ರೂಪಿಸಿದ್ದಾರೆ. ಕಿವೀಸ್ ಸಹ ಗೆಲುವಿನ ವಿಶ್ವಾಸದಲ್ಲಿದೆ.

  • ‘ಬೌಲರ್ ಹೆಸರೇಳಿ’- ಸಂಜಯ್ ಮಂಜ್ರೇಕರ್​ರನ್ನ ಅಣಕಿಸಿದ ರವೀಂದ್ರ ಜಡೇಜಾ

    ‘ಬೌಲರ್ ಹೆಸರೇಳಿ’- ಸಂಜಯ್ ಮಂಜ್ರೇಕರ್​ರನ್ನ ಅಣಕಿಸಿದ ರವೀಂದ್ರ ಜಡೇಜಾ

    -ಜಡೇಜಾ ಟ್ವೀಟ್‍ಗೆ ಸಂಜಯ್ ಪ್ರತಿಕ್ರಿಯೆ

    ಆಕ್ಲೆಂಡ್: ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಲ್‍ರೌಂಡರ್ ರವೀಂದ್ರ ಜಡೇಜಾ ಹಾಗೂ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಜರ್ ನಡುವೆ ವಾಕ್ ಯುದ್ಧ ನಡೆದಿತ್ತು. ಅಂದು ಜಡೇಜಾರಂತಹ ‘ಬಿಟ್ಸ್ ಅಂಡ್ ಪೀಸಸ್’ ಆಟಗಾರನಿಗೆ ನಾನು ಅಭಿಮಾನಿಯಲ್ಲ. ಜಡೇಜಾ ಟೆಸ್ಟ್ ಏಕದಿನ ಮಾದರಿ ಸಿಮೀತ ಓವರ್ ಗಳ ಕ್ರಿಕೆಟ್‍ಗೆ ಫಿಟ್ ಅಲ್ಲ. ಆತ ಟೆಸ್ಟ್ ಕ್ರಿಕೆಟ್ ಮಾತ್ರ ಅಗತ್ಯ ಎಂದು ವ್ಯಾಖ್ಯಾನಿಸಿದ್ದರು.

     

    ಮಂಜ್ರೇಕರ್ ಅವರ ಈ ಕಾಮೆಂಟ್‍ಗಳಿಗೆ ತಿರುಗೇಟು ನೀಡಿದ್ದ ಜಡೇಜಾ, ತನ್ನ ಸ್ಥಾನ ಯಾವುದು ಎಂದು ತಿಳಿದುಕೊಂಡು ಮಾತನಾಡಿ. ನಿಮಗಿಂತ ಹೆಚ್ಚು ಪಂದ್ಯಗಳನ್ನು ದೇಶದ ಪರ ಆಡಿದ್ದೇನೆ ಎಂದಿದ್ದರು. ಇಂದಿಗೂ ರವೀಂದ್ರ ಜಡೇಜಾ, ಮಂಜ್ರೇಕರ್ ಅವರ ಮಾತುಗಳನ್ನು ಮರೆತಿಲ್ಲ.

    ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಪಡೆದ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಕೆಎಲ್ ರಾಹುಲ್ ಅವರಿಗೆ ನೀಡಲಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಮಂಜ್ರೇಕರ್ ಅವರು, ಈ ಪಂದ್ಯದಲ್ಲಿ ಬೌಲರ್ ಗಳಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿರುತ್ತಿತ್ತು ಎಂದಿದ್ದರು. ಮಂಜ್ರೇಕರ್ ಅವರ ಅಭಿಪ್ರಾಯಕ್ಕೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದ ಜಡೇಜಾ, ಆ ಬೌಲರ್ ಹೆಸರನ್ನು ಹೇಳಿ ಎಂದು ಅಣಕಿಸಿದ್ದರು.

    ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 4 ಓವರ್ ಗಳಲ್ಲಿ 18 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದಿದ್ದರು. ಬೌಲರ್ ಗಳ ಪ್ರದರ್ಶನವನ್ನು ಪರಿಗಣಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿದ್ದರೆ ಜಡೇಜಾ ಅವರಿಗೆ ಲಭಿಸುತ್ತಿತ್ತು. ಜಡೇಜಾ ಅವರ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ಮಂಜ್ರೇಕರ್ ಅವರು, ನಿನಗೆ ಅಥವಾ ಬುಮ್ರಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಬಹುದಿತ್ತು. ಬುಮ್ರಾಗೆ ಏಕೆ ಎಂದರೇ, ಆತ ಮಾಡಿದ 3, 10, 18 ಮತ್ತು 20 ಓವರ್ ಗಳ ಎಕಾನಮಿ ತುಂಬಾ ಉತ್ತಮವಾಗಿದೆ ಎಂದು ತಮ್ಮ ಸಮರ್ಥನೆಯನ್ನು ತಿಳಿಸಿದ್ದಾರೆ.

  • ವಿದೇಶಿ ನೆಲದಲ್ಲಿ ಕೊಹ್ಲಿ ಬಾಯ್ಸ್‌ಗೆ ಅದೃಷ್ಟ ಪರೀಕ್ಷೆ- ನಾಳೆಯಿಂದ ಇಂಡೋ-ಕಿವೀಸ್ ಟಿ20 ಕದನ

    ವಿದೇಶಿ ನೆಲದಲ್ಲಿ ಕೊಹ್ಲಿ ಬಾಯ್ಸ್‌ಗೆ ಅದೃಷ್ಟ ಪರೀಕ್ಷೆ- ನಾಳೆಯಿಂದ ಇಂಡೋ-ಕಿವೀಸ್ ಟಿ20 ಕದನ

    ಬೆಂಗಳೂರು: ತವರು ನೆಲದಲ್ಲಿ ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಸರಣಿ ಗೆದ್ದು ಬೀಗುತ್ತಿರುವ ಟೀಂ ಇಂಡಿಯಾಗೆ ಈ ವರ್ಷದಲ್ಲಿ ಮೊದಲ ವಿದೇಶಿ ಪ್ರವಾಸ ಕೈಗೊಂಡಿದೆ. ನ್ಯೂಜಿಲೆಂಡ್ ನೆಲದಲ್ಲಿ ಕಿವೀಸ್ ವಿರುದ್ಧ ಶುಕ್ರವಾರದಿಂದ ವಿರಾಟ್ ಕೊಹ್ಲಿ ಪಡೆಯು 5 ಟಿ20 ಪಂದ್ಯಗಳ ಸರಣಿ ಆಡಲಿದ್ದು, ಗೆಲುವಿನ ಓಟವನ್ನು ಮುಂದುವರಿಸುವ ಭರವಸೆ ಮೂಡಿಸಿದೆ.

    ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯವು ಆಕ್ಲೈಂಡ್ ಈಡನ್ ಪಾರ್ಕ್ ನಲ್ಲಿ ಶುಕ್ರವಾರ ಮಧ್ಯಾಹ್ನ 12:30ಕ್ಕೆ ನಡೆಯಲಿದೆ. ಟೀಂ ಇಂಡಿಯಾದ ಬಹುತೇಕ ಆಟಗಾರರು ಫಾರ್ಮ್ ನಲ್ಲಿದ್ದು, ವಿದೇಶಿ ನೆಲದಲ್ಲೂ ಅದ್ಭುತ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ.

    ಆರಂಭಿಕನಾಗಿ ರಾಹುಲ್ ಮೈದಾನಕ್ಕೆ:
    ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಅವರಿಗೆ ಗಾಯವಾಗಿರುವುದರಿಂದ ಅವರನ್ನು ನ್ಯೂಜಿಲೆಂಡ್ ಪ್ರವಾಸದಿಂದ ಕೈಬಿಡಲಾಗಿದೆ. ಹೀಗಾಗಿ ಕನ್ನಡಿಗ ಕೆ.ಎಲ್.ರಾಹುಲ್ ಅವರು ಅನುಭವಿ ಆಟಗಾರ ರೋಹಿತ್ ಶರ್ಮಾ ಜೊತೆ ಆರಂಭಿಕ ಆಟಗಾರನಾಗಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಉಳಿದಂತೆ ನಾಯಕ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಬ್ ಪಂಥ್ ಬ್ಯಾಟಿಂಗ್ ಬಲ ತುಂಬಲಿದ್ದಾರೆ. ಸ್ಪಿನ್ನರ್ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂಟ್, ಶಿವಂ ದುಬೆ ಅಲೌಂಡರ್ ಸ್ಥಾನ ತುಂಬಲಿದ್ದಾರೆ. ಜಸ್‍ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ನವದೀಪ್ ಸೈನಿ ಬೌಲಿಂಗ್ ಪಡೆಯಲ್ಲಿದ್ದಾರೆ.

    ತವರು ನೆಲದಲ್ಲಿ ಟೀಂ ಇಂಡಿಯಾದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಲು ವಿಲಿಯಮ್ಸನ್ ಪಡೆ ಸಿದ್ಧವಾಗಿದೆ. ಯುವಕರ ತಂಡದೊಂದಿಗೆ ಕೊಹ್ಲಿ ಬಾಯ್ಸ್ ಎದುರಿದುವುದಕ್ಕೆ ನ್ಯೂಜಿಲೆಂಡ್ ಸಿದ್ಧವಾಗಿದೆ. ಮಾರ್ಟಿನ್ ಗಪ್ಟಿಲ್, ಕಾಲಿನ್ ಮನ್ರೊ, ಕೇನ್ ವಿಲಿಯಮ್ಸನ್, ರಾಸ್ ಟೈಲರ್ ನ್ಯೂಜಿಲೆಂಡ್ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ. ಕಾಲಿನ್ ಡಿ ಗ್ರ್ಯಾಂಡ್‍ಹೋಮ್, ಡ್ಯಾರಿಲ್ ಮಿಚೆಲ್, ಸಾಂಟ್ನರ್ ಅಲ್ರೌಂಡರ್ ಸ್ಥಾನ ತುಂಬಲಿದ್ದಾರೆ. ಟೀಂ ಸೌಥಿ, ಇಶಾ ಸೋದಿ, ಬ್ಲೇರ್ ಟೆಕ್ನರ್, ಸ್ಕಾಟ್ ಕುಗ್ಗೆಲೀಜ್ನ್, ಹಮೀಶ್ ಬೆನೆಟ್ ಬೌಲಿಂಗ್ ಪಡೆಯಲ್ಲಿದ್ದಾರೆ.

    ತಂಡಗಳ ವಿವರ
    ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶಾರ್ಮಾ, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್‍ಪ್ರೀತ್ ಬೂಮ್ರಾ, ಯಜುವೇಂದ್ರ ಚಹಲ್, ಸಂಜು ಸಾಮ್ಸನ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಿವಂ ದುಬೆ, ಕುಲದೀಪ್ ಯಾದವ್.

    ನ್ಯೂಜಿಲ್ಯಾಂಡ್: ಕೇನ್ ವಿಲಿಯಮ್ಸನ್ (ನಾಯಕ), ಮಾರ್ಟಿನ್ ಗಪ್ಟಿಲ್, ಕಾಲಿನ್ ಮನ್ರೋ, ಟೀ ಸೈಫರ್ಟ್, ರಾಸ್ ಟೇಲರ್, ಕಾಲಿನ್ ಡಿ ಗ್ರ್ಯಾಂಡ್‍ಹೋಮ್, ಡ್ರಾಲ್ ಮಿಚೆಲ್, ಮಿಚೆಲ್ ಸಾಂಟ್ನರ್, ಟೀ ಸೌಥಿ, ಇಶಾ ಸೋಧಿ, ಬ್ಲೇರ್ ಟೆಕ್ನರ್, ಸ್ಕಾಟ್ ಕುಗ್ಗೆಲೀಜ್ನ್, ಹಮೀಶ್ ಬೆನೆಟ್.

  • ವಿಶ್ವಕಪ್ ಫೈನಲ್ ಬಳಿಕ ಕಿವೀಸ್, ಇಂಗ್ಲೆಂಡ್ ನಡ್ವೆ ಮತ್ತೊಂದು ಸೂಪರ್ ಓವರ್

    ವಿಶ್ವಕಪ್ ಫೈನಲ್ ಬಳಿಕ ಕಿವೀಸ್, ಇಂಗ್ಲೆಂಡ್ ನಡ್ವೆ ಮತ್ತೊಂದು ಸೂಪರ್ ಓವರ್

    ಆಕ್ಲೆಂಡ್: 2019 ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ಟೈ ಆಗುವ ಮೂಲಕ ಸೂಪರ್ ಓವರ್ ಗೆ ದಾರಿ ಮಾಡಿಕೊಟ್ಟಿತ್ತು. ಬಳಿಕ ನಡೆದ ಸೂಪರ್ ಓವರ್ ಕೂಡ ಟೈ ಆದ ಪರಿಣಾಮ ಬೌಂಡರಿ ಆಧಾರದಲ್ಲಿ ಇಂಗ್ಲೆಂಡ್ ತಂಡ ಕಪ್ ಗೆದ್ದಿತ್ತು. ವಿಶ್ವಕಪ್ ಬಳಿಕ ಮತ್ತೊಮ್ಮೆ ಎದುರಾದ ಎರಡು ತಂಡಗಳು ಮತ್ತೊಂದು ಸೂಪರ್ ಓವರ್ ಹೋರಾಟಕ್ಕೆ ಸಾಕ್ಷಿಯಾಗಿದೆ.

    ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವೆ ನಡೆದ 5 ಪಂದ್ಯಗಳ ಟಿ20 ಸರಣಿ ಇಂದು ಅಂತ್ಯವಾಗಿದೆ. ಸರಣಿಯಲ್ಲಿ ಮೊದಲ 4 ಪಂದ್ಯಗಳಲ್ಲಿ ಇತ್ತಂಡಗಳು ತಲಾ 2 ಗೆಲುವು ಪಡೆದು ಸಮಬಲ ಸಾಧಿಸಿದ್ದವು. ಪರಿಣಾಮ ಭಾನುವಾರ ನಡೆದ ಪಂದ್ಯ ಸರಣಿಯ ಫೈನಲ್ ಆಗಿ ಮಾರ್ಪಾಟ್ಟಿತ್ತು.

    ಪಂದ್ಯದ ಆರಂಭಕ್ಕೂ ಮೊದಲೇ ಮಳೆ ಅಡ್ಡಿ ಪಡಿಸಿದ ಪರಿಣಾಮ 11 ಓವರ್ ಗಳಿಗೆ ಪಂದ್ಯ ಕಡಿತಗೊಳಿಸಲಾಗಿತ್ತು. ಮೊದಲು ಬ್ಯಾಟಿಂಗ್ ನಡೆಸಿದ ಕಿವೀಸ್ ತಂಡ 11 ಓವರ್ ಗಳಲ್ಲಿ 5 ವಿಕೆಟ್ ಕಳೆದು 146 ರನ್ ಗಳಿಸಿತ್ತು. ಸವಾಲಿನ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ ತಂಡದ ಬ್ಯಾಟ್ಸ್ ಮನ್‍ಗಳ ಸಮಬಲದ ಹೋರಾಟದ ಪರಿಣಾಮ ಪಂದ್ಯ ಟೈ ಆಯ್ತು. ಗೆಲುವಿಗಾಗಿ ಅಂತಿಮ ಓವರಿನಲ್ಲಿ ಇಂಗ್ಲೆಂಡ್‍ಗೆ 16 ರನ್ ಅಗತ್ಯವಿತ್ತು. ಅಂತಿಮ ಓವರ್ ಬೌಲ್ ಮಾಡಿದ ನೀಶಾಮ್, ಟಾಮ್ ಕರ್ರನ್ ವಿಕೆಟ್ ಪಡೆದರು. ಆದರೆ ಅಂತಿಮ 3 ಎಸೆತಗಳಲ್ಲಿ 12 ರನ್ ಗಳಿಸಿದ ಜೋರ್ಡನ್ ಪಂದ್ಯ ಟೈ ಆಗಲು ಕಾರಣರಾದರು.

    ಫಲಿತಾಂಶಕ್ಕಾಗಿ ನಡೆದ ಸೂಪರ್ ಓವರ್ ಆಟದಲ್ಲಿ ಇಂಗ್ಲೆಂಡ್ 17 ರನ್ ಗಳಿಸಿದರೆ, ಕಿವೀಸ್ 8 ರನ್ ಗಳಿಸಿ ಸೋಲುಂಡಿತು. ಪಂದ್ಯದ 7 ರನ್ ಗೆಲುವು ಪಡೆದ ಇಂಗ್ಲೆಂಡ್ ತಂಡ 3-2ರ ಅಂತರದಲ್ಲಿ ಟಿ20 ಸರಣಿಯನ್ನು ಗೆದ್ದು ಸಂಭ್ರಮಿಸಿತು.