Tag: Audio Record

  • ಶಿವಮೊಗ್ಗ ಉಪವಿಭಾಗಾಧಿಕಾರಿ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

    ಶಿವಮೊಗ್ಗ ಉಪವಿಭಾಗಾಧಿಕಾರಿ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

    – ಲಾಸ್ಟ್ ಕಾಲ್ ರೆಕಾರ್ಡಿಂಗ್‍ನಲ್ಲಿತ್ತು ಸಾವಿನ ಸೀಕ್ರೆಟ್!

    ಶಿವಮೊಗ್ಗ: ಜಿಲ್ಲೆಯ ಉಪವಿಭಾಗಾಧಿಕಾರಿ ಪತ್ನಿ, ಶಾಲಾ ಶಿಕ್ಷಕಿ ಸುಮಾ ಅವರ ಸಾವಿನ ಪ್ರಕರಣಕ್ಕೆ ಇದೀಗ ಮಹತ್ವದ ಟ್ವಿಸ್ಟ್ ದೊರೆತಿದೆ. ಸಾವಿಗೂ ಮುನ್ನ ಅವರು ಕರೆ ಮಾಡಿದ್ದ ಆಡಿಯೋ ಕಾಲ್ ರೆಕಾರ್ಡಿಂಗ್ ನಿಂದ ಅವರ ಆತ್ಮಹತ್ಯೆ ಹಿಂದಿನ ಕಾರಣ ಬೆಳಕಿಗೆ ಬಂದಿದೆ.

    ಶಿಕ್ಷಕಿ ಸುಮಾ (40) ಆತ್ಮಹತ್ಯೆಗೆ ಅವರು ಕಾರ್ಯನಿರ್ವಹಿಸುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕಿಯ ಕಿರುಕುಳವೇ ಕಾರಣ ಎನ್ನಲಾಗಿದೆ. ಈ ಸಂಬಂಧ ಈಗಾಗಲೇ ಉಪವಿಭಾಗಾಧಿಕಾರಿ ಪ್ರಕಾಶ್ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತಮ್ಮ ಪತ್ನಿಗೆ ಇಲ್ಲ ಸಲ್ಲದ ಕೆಲಸ ಹೇಳಿ ಶಾಲೆಯ ಮುಖ್ಯ ಶಿಕ್ಷಕಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಡಿ.24 ರಂದು ಶಿವಮೊಗ್ಗ ನಗರ ಕ್ರಿಸ್ಮಸ್ ಹಬ್ಬದ ತಯಾರಿಯಲ್ಲಿತ್ತು. ಶಾಲೆಗೆ ರಜೆ ಇದೆ ಎಂದು ಮಕ್ಕಳು ಕೂಡ ರಜೆಯ ಮಜಾದಲ್ಲಿದ್ದರು. ಆದರೆ ಶಾಲೆಯ ಶಿಕ್ಷಕಿ ಮಾತ್ರ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದು ಎಲ್ಲರಿಗೂ ಶಾಕ್ ನೀಡಿತ್ತು.

    ಶಿವಮೊಗ್ಗ ಉಪವಿಭಾಗಾಧಿಕಾರಿ ಪ್ರಕಾಶ್ ಅವರ ಪತ್ನಿ ಸುಮಾ ಅವರು ನೇಣಿಗೆ ಶರಣಾಗಿದ್ದಾರೆ ಎಂದ ಕೂಡಲೇ ಇಡೀ ನಗರದ ಸರ್ಕಾರಿ ಅಧಿಕಾರಿಗಳಲ್ಲಿ, ಸರ್ಕಾರಿ ನೌಕರರಲ್ಲಿ ತಲ್ಲಣ ಉಂಟಾಗಿತ್ತು. ಅಷ್ಟೇ ಅಲ್ಲದೇ ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿಯೂ ಕೂಡ ಆತಂಕ ಉಂಟಾಗಿತ್ತು.

    ಅಂದು ಸುಮಾ ಅವರ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ದಂಪತಿಗೆ ವಿವಾಹವಾಗಿ 12 ವರ್ಷವಾಗಿದ್ದರೂ ಮಕ್ಕಳಾಗಿರಲಿಲ್ಲ ಎಂಬುದೇ ಕಾರಣ ಎನ್ನಲಾಗಿತ್ತು. ಈ ಕಾರಣಕ್ಕಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೇ ಹೇಳಲಾಗಿತ್ತು. ಮೃತ ಸುಮಾ ಅವರ ತಾಯಿ ಅವರು ಕೂಡ, ನನ್ನ ಮಗಳ ಸಾವಿಗೆ ದಂಪತಿಗೆ ಮಕ್ಕಳಾಗದಿರುವುದು ಕಾರಣ ಎಂದು ಪೊಲೀಸರಿಗೆ ತಿಳಿಸಿದ್ದರು.

    ಘಟನೆ ನಡೆದು ಸುಮಾರು 10 ದಿನಗಳಾದ ಬಳಿಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಮಾ ಅವರಿಗೆ ಶಾಲಾ ಮುಖ್ಯ ಶಿಕ್ಷಕಿ ಸರಸ್ವತಿ ಅವರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಆಡಿಯೋವೊಂದು ಬೆಳಕಿಗೆ ಬಂದಿದೆ. ಸುಮಾ ಅವರು ಆತ್ಮಹತ್ಯೆಗೂ ಮುನ್ನ ತಮ್ಮ ಸಹೋದ್ಯೋಗಿ ಕೆ.ಜಿ.ಎಸ್ ಎಂಬುವವರಿಗೆ ಕರೆ ಮಾಡಿ, ಮುಖ್ಯ ಶಿಕ್ಷಕಿ ಸರಸ್ವತಿ ಅವರು ನನಗೆ ಇಲ್ಲ ಸಲ್ಲದ ಕೆಲಸ ಹೇಳಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ ಎನ್ನಲಾಗಿದೆ.

    ಸುಮಾ ಅವರ ದೂರವಾಣಿ ಕರೆಯನ್ನು ಶಿಕ್ಷಕಿಯಾಗಿರುವ ಕೆ.ಜಿ.ಎಸ್. ಅವರು ತಮ್ಮ ಮೊಬೈಲ್ ನಲ್ಲಿ ರೆಕಾರ್ಡಿಂಗ್ ಮಾಡಿಕೊಂಡಿದ್ದು, ಈ ಆಡಿಯೋ ಪ್ರಕರಣಕ್ಕೆ ತಿರುವು ನೀಡಿದೆ. ಶಾಲಾ ಮುಖ್ಯಶಿಕ್ಷಕಿ ಸರಸ್ವತಿಯ ಕಿರುಕುಳವೇ ಎಸಿ ಪತ್ನಿ ನೇಣಿಗೆ ಶರಣಾಗಲೂ ಕಾರಣ ಎಂಬ ಆರೋಪಕ್ಕೆ ಆಡಿಯೋ ರೆಕಾರ್ಡ್ ಪ್ರಮುಖ ಆಧಾರವಾಗಿದೆ. ಈ ಆಧಾರವನ್ನಿಟ್ಟುಕೊಂಡು ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಿ ವಿರುದ್ಧ ಇದೀಗ ಉಪವಿಭಾಗಾಧಿಕಾರಿ ಪ್ರಕಾಶ್ ತುಂಗಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಭದ್ರಾವತಿಯ ಸಂಚಿ ಹೊನ್ನಮ್ಮ ಶಾಲೆಯಲ್ಲಿ ಶಿಕ್ಷಕರಾಗಿದ್ದ ಸುಮಾ ಅವರು ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿದ್ದರು. ಈ ಶಾಲೆಗೆ ಬಂದಾಗಿನಿಂದಲೂ ಇಲ್ಲಿನ ಮುಖ್ಯ ಶಿಕ್ಷಕಿ ಸರಸ್ವತಿ ಇವರಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರೆಂದು ಹೇಳಲಾಗಿದೆ. ಈ ಬಗ್ಗೆ ಸುಮಾ ಅವರು ತಮ್ಮ ಸಹೋದ್ಯೋಗಿ ಬಳಿ ಬೇಸರ ಹೇಳಿಕೊಂಡಿದ್ದು ಶಾಲೆಯಲ್ಲಿ ಇನ್ನಿತರರಿಗೂ ಈ ರೀತಿ ಮಾಡುತ್ತಿದ್ದರೆಂದು ಹೇಳಲಾಗುತ್ತಿದೆ.

    ಜಿಲ್ಲೆಯ ಪ್ರಮುಖ ಹುದ್ದೆಯಾಗಿರುವ ಉಪವಿಭಾಗಾಧಿಕಾರಿಯೊಬ್ಬರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಾಕಷ್ಟು ಸಂಶಯಗಳನ್ನು ಮೂಡಿಸಿತ್ತು. ಆದರೆ ಅವರ ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುವುದು ತಿಳಿದು ಬಂದಿರಲಿಲ್ಲ. ಸದ್ಯ ಸೋಮವಾರ ಸಂಜೆ ಪ್ರಕರಣದ ಆಡಿಯೋ ದೊರೆತಿರುವುದರಿಂದ ದೂರು ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣದ ಕುರಿತಂತೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

  • ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್

    ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್

    ಬೆಂಗಳೂರು: ನಾವು ಕೂಡ ಸನ್ಯಾಸಿಗಳಲ್ಲ ಎಂದು ತೋರಿಸಿಕೊಳ್ಳಲು ಮತ್ತು ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲ ಆಡಿಯೋವನ್ನು ಪತ್ರಿಕಾಗೋಷ್ಠಿ ನಡೆಸಿ ರಿಲೀಸ್ ಮಾಡಿದ್ದೇನೆ ಎದು ವಿಧಾನಸಭೆಯಲ್ಲಿ ಬಿಜೆಪಿ ಆರೋಪಕ್ಕೆ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

    ಸದನದಲ್ಲಿ ಇಂದು ಬಿಜೆಪಿ ನಾಯಕರು ಆಡಿಯೋ ಬಗ್ಗೆ ಎಸ್‍ಐಟಿ ತನಿಖೆಗೆ ಒಪ್ಪಿಸುವುದನ್ನು ವಿರೋಧಿಸಿ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಂತದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿ ಸ್ಪೀಕರ್ ಅವರನ್ನು ಬೀದಿಗೆ ತಂದಿದ್ದಾರೆ ಎಂದು ಆರೋಪಿಸಿದರು. ಶೆಟ್ಟರ್ ಅವರ ಆರೋಪಕ್ಕೆ ತಕ್ಷಣ ತಿರುಗೇಟು ನೀಡಿದ ಸಿಎಂ ಅವರು, ಬಿಜೆಪಿ ನಾಯಕರು ಪದೇ ಪದೇ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು ಹೇಳುತ್ತಿದ್ದರು. ಅಲ್ಲದೇ ಸರ್ಕಾರ ಉರುಳಿದರೆ ನಾವೇನು ಸುಮ್ಮನೆ ಕೂರಲು ಸನ್ಯಾಸಿಗಳಲ್ಲ ಎಂದು ಹೇಳುತ್ತಿದ್ದರು. ಹಾಗೆಯೇ ನಾವು ಕೂಡ ಸನ್ಯಾಸಿಗಳು ಅಲ್ಲ. ನಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ನಾವು ಪ್ರತಿಕಾಗೋಷ್ಠಿ ನಡೆಸಿ ಈ ಆಡಿಯೋ ರೆಕಾರ್ಡ್ ಬಿಡುಗಡೆ ಮಾಡಿದ್ದೇವೆ ಅಷ್ಟೇ ಎಂದು ಎಚ್‍ಡಿಕೆ ಟಾಂಗ್ ನೀಡಿದರು.

    ಇದೇ ವೇಳೆ ಏನೂ ತಪ್ಪು ಮಾಡಿಲ್ಲ ಅಂದರೆ ಬಿಜೆಪಿಯವರಿಗೆ ಭಯ ಏಕೆ ಎಂದು ಪ್ರಶ್ನಿಸಿದ ಸಿಎಂ ಕುಮಾರಸ್ವಾಮಿ ಅವರು, ಸತ್ಯವನ್ನ ಜನರಿಗೆ ತೋರಿಸಬೇಕಿತ್ತಲ್ವಾ? ಅದಕ್ಕೆ ಆಡಿಯೋ ನೀಡಿದೆ. ಸ್ಪೀಕರ್ ಹೆಸರನ್ನು ಬೀದಿಗೆ ತಂದಿದ್ದು ಯಾರು? ಎನ್ನುವುದನ್ನು ಅವರೇ ಯೋಚನೆ ಮಾಡಲಿ ಎಂದರು. ಅಲ್ಲದೇ ಶೆಟ್ಟರ್ ಅವರು ಫೋನ್ ಕದ್ದಾಲಿಕೆ ಆರೋಪ ನಿರಾಕರಿಸಿ, ನಾನು ಯಾರ ಫೋನ್ ಕದ್ದಾಲಿಕೆ ಮಾಡಿಲ್ಲ ಎಂದರು.

    ಎರಡು ಪಕ್ಷಗಳ ನಾಯಕರಿಗೆ ತಿಳಿ ಹೇಳಿದ ಸ್ಪೀಕರ್ ಅವರು, ಸಿಎಂ ಕುಮಾರಸ್ವಾಮಿ ಅವರಿಗೆ ನಾಗನಗೌಡ ಮಗ ಕೇಳಿದ್ದರು. ಅದಕ್ಕೆ ಹೋಗು ಎಂದು ಹೇಳಿ, ರೆಕಾರ್ಡ್ ಮಾಡಿ ತಂದಿದ್ದಾರೆ. ರೆಕಾರ್ಡ್ ಕೈಗೆ ಬಂದು, ಸ್ಪೀಕರ್ ಅವರ ಹೆಸರು ಪ್ರಸ್ತಾಪ ಆದಾಗ ಅವರು ಹೇಳಲೇ ಬೇಕಾಗಿತ್ತು. ಒಂದೊಮ್ಮೆ ಅವರು ಸುಮ್ಮನಾಗಿ 3ನೇ ವ್ಯಕ್ತಿಯಿಂದ ನನಗೆ ಆಗ ವಿಚಾರ ತಿಳಿದಿದ್ದರೆ ಏನಾಗುತಿತ್ತು? ಆಗ ಸಿಎಂ ಕುಮಾರಸ್ವಾಮಿ ಅವರು ಅಪರಾಧಿ ಆಗುತ್ತಿದ್ದರು. ಆದ್ದರಿಂದ ಅವರು ನನಗೆ ಮಾಹಿತಿ ನೀಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

    ಸಿಎಂ ಕುಮಾರಸ್ವಾಮಿ ಅವರ ಮಾತಿಗೆ ಮತ್ತೆ ಮಧ್ಯಪ್ರವೇಶ ಮಾಡಿದ ಶೆಟ್ಟರ್ ಅವರು, ಸಭಾಧ್ಯಕ್ಷರನ್ನೇ ಈಗ ಸನ್ಯಾಸಿ ಮಾಡಿದ್ದಾರೆ. ಸಭಾಧ್ಯಕ್ಷರ ಹೆಸರು ಬಂದಿದೆ ಎಂದು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ. ಅವರು ಸುದ್ದಿಗೋಷ್ಠಿ ಮಾಡಿದ್ದೆ ಇಷ್ಟೆಲ್ಲಾ ನಡೆಯಲು ಕಾರಣ ಎಂದು ಆರೋಪಿಸಿದರು.

    ಶೆಟ್ಟರ್ ಆರೋಪ: ಆಪರೇಷನ್ ಕಮಲ ಆಡಿಯೋ ಬಿಡುಗಡೆ ಮಾಡಿರುವ ಕುರಿತು ಸಿಎಂ ಕುಮಾರಸ್ವಾಮಿ ಮೇಲೆಯೇ ಆರೋಪಗಳನ್ನು ಮಾಡಿದ ಶೆಟ್ಟರ್ ಅವರು, ಸಿಎಂ ಸ್ಥಾನದಲ್ಲಿರುವ ಕುಮಾರಸ್ವಾಮಿ ಅವರು ಆಡಿಯೋ ರೆಕಾರ್ಡ್ ಮಾಡಿಸಿಕೊಳ್ಳಲು ಕಳುಹಿಸಿದ್ದು ಅವರ ಮೊದಲನೇ ಅಪರಾಧ ಹಾಗೂ ಕಾನ್ಫರೆನ್ಸ್ ಕುಳಿತು ಕೇಳಿಸಿಕೊಂಡಿದ್ದು 2ನೇ ಅಪರಾಧ. ಈ ಬಗ್ಗೆ ನೇರ ಸ್ಪೀಕರ್ ಅವರಿಗೆ ದೂರು ನೀಡದೇ ಸುದ್ದಿಗೋಷ್ಠಿ ನಡೆಸಿದ್ದು ಮತ್ತೊಂದು ತಪ್ಪು. ಸ್ವತಃ ಸಿಎಂ ಅವರೇ ಶಾಸಕರೊಬ್ಬರಿಗೆ ಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಹೇಳಿ ಆರೋಪಗಳ ಸುರಿಮಳೆಗೈದರು.

    https://www.youtube.com/watch?v=s2WxVzZmLyo

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv