ಬೀದರ್: ಖಾಸಗಿ ಶಾಲಾ ಬಸ್ (School Bus) ಹರಿದು ಯುಕೆಜಿ ಓದುತ್ತಿದ್ದ 6 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ ನಡೆದಿದೆ.
ಅಕಾಲಿಕ ಮಳೆಗೆ ಹಲವು ಮರಗಳು ರಸ್ತೆಗುರುಳಿದ ಪರಿಣಾಮ ಸಂತಪೂರ್ದಿಂದ ಜೋಜನಾ ಗ್ರಾಮದ ನಡುವೆ ರಸ್ತೆ ಸಂಚಾರ ಕೆಲವು ಹೊತ್ತು ಬಂದ್ ಆಗಿತ್ತು.
ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜಿಲ್ಲೆಯ ಜನರಿಗೆ ವರುಣ ತಂಪೆರೆದಿದ್ದು, ಔರಾದ್, ಬೀದರ್, ಬಸವಕಲ್ಯಾಣ, ಭಾಲ್ಕಿ, ಕಮಲನಗರ ಸೇರಿದಂತೆ ಜಿಲ್ಲೆಯ ಕೆಲವು ಕಡೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನರು ಫುಲ್ ಖುಷ್ ಆಗಿದ್ದಾರೆ.ಇದನ್ನೂ ಓದಿ: IPL 2025 | ಒಂದೇ ಒಂದು ತೂಫಾನ್ ಶತಕ – ವೈಭವ್ಗೆ 10 ಲಕ್ಷ ರೂ. ಬಹುಮಾನ!
ಬೀದರ್: ಜಿಲ್ಲೆಯ ಔರಾದ್ (Aurad) ತಾಲೂಕಿನ ವಿಜಯನಗರ ತಾಂಡಾದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ತೊಗರಿ ಹೊಟ್ಟಿನಲ್ಲಿ ಬಚ್ಚಿಟ್ಟಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾವನ್ನು ಪೊಲೀಸ್ ಇಲಾಖೆಗೆ ಸೇರಿದ ಶ್ವಾನ ಪತ್ತೆ ಹಚ್ಚಿದೆ.
ಪೊಲೀಸ್ ಇಲಾಖೆಗೆ ಸೇರಿದ, ಮಾದಕ ದ್ರವ್ಯ ಪತ್ತೆ ಮಾಡುವ ಪರಿಣಿತಿ ಹೊಂದಿರುವ ಡಾಬರ್ ಮ್ಯಾನ್ ತಳಿಯ ದೀಪಾ ಎನ್ನುವ ಶ್ವಾನ ಗಾಂಜಾವನ್ನು ಪತ್ತೆ ಹಚ್ಚಿದೆ. ಗಾಂಜಾಕೋರರು ಬಚ್ಚಿಟ್ಟಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾವನ್ನು ಪತ್ತೆ ಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.ಇದನ್ನೂ ಓದಿ: ‘ನಿನ್ನ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನ ಪಾಲಿರಲಿ’ ಎನ್ನುತ್ತಿದ್ದಾರೆ ಸಪ್ತಮಿ ಗೌಡ
ಔರಾದ್ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ತಹಶೀಲ್ದಾರ್ ದಾಳಿ ನಡೆಸಿದ್ದರೂ ಕೂಡ ಗಾಂಜಾ ಪತ್ತೆಯಾಗಿರಲಿಲ್ಲ. ಹೀಗಾಗಿ ತೆಲಂಗಾಣದಿಂದ ಕರೆತಂದಿದ್ದ ಶ್ವಾನವು, ತೊಗರಿ ಹೊಟ್ಟಿನಲ್ಲಿ ಬಚ್ಚಿಟ್ಟಿದ್ದ ಗಾಂಜಾ ಪತ್ತೆ ಹಚ್ಚಿದೆ.
ಔರಾದ್ ಘಟಕಕ್ಕೆ ಸೇರಿದ ಏಂ38 ಈ1033 ನಂಬರ್ನ ಸರ್ಕಾರಿ ಬಸ್ ಬೀದರ್ನಿಂದ ಔರಾದ್ಗೆ ಹೋಗುತ್ತಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಬಸ್ಗೆ ಬೆಂಕಿ ತಗುಲಿದೆ. ಪರಿಣಾಮ ಬಸ್ ಸುಟ್ಟು ಕರಕಲಾಗಿದೆ. ಬಸ್ಸಿಗೆ ಬೆಂಕಿ ತಗಲುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೂಡಲೇ ಕೆಳಗಿಳಿಸಿದ್ದಾರೆ.
ಬೀದರ್: ಪ್ರತಿದಿನ ಮದ್ಯ (Alcohol) ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು (Husband) ಪೋಷಕರ ಜೊತೆ ಸೇರಿ ಪತ್ನಿ ಕೊಲೆ ಮಾಡಿದ ದಾರುಣ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಬಾಚೆಪಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಐದಾರು ವರ್ಷಗಳ ಹಿಂದೆ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು. ಚಾಲಕನ ಕೆಲಸ ಮಾಡುತ್ತಿದ್ದ ಪತಿ ಶ್ರೀಧರ್ ಕುಡಿದು ಬಂದು ಪ್ರತಿ ದಿನ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಪತ್ನಿ ಪೋಷಕರನ್ನು ಕರೆಸಿಕೊಂಡು ಹಗ್ಗದಿಂದ ಪತಿಯ ಕೈಕಾಲು ಕಟ್ಟಿ ಹಾಕಿ ಕಬ್ಬಿಣದ ಸಲಾಕೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಮಡಿಕೇರಿಯ ಇಗ್ಗುತಪ್ಪ, ನಾಲಾಡಿ ಬೆಟ್ಟದಲ್ಲಿ ಕಾಡ್ಗಿಚ್ಚು – 20 ಎಕ್ರೆಗೆ ಬೆಂಕಿ
ಬೀದರ್: ಪ್ರೀತಿ (Love) ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ.
ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು ಕೊಲೆ ಮಾಡಿ ತಂದೆ ಮೋತಿರಾಮ ಪರಾರಿಯಾಗಿದ್ದಾನೆ. ಪ್ರೀತಿ-ಪ್ರೇಮದಿಂದ ದೂರವಿರುವಂತೆ ಮಗಳಿಗೆ ತಂದೆ ತಿಳುವಳಿಕೆ ಹೇಳಿದ್ದಾನೆ. ಅಲ್ಲದೇ ನಿನಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಮಾಡುತ್ತೇನೆ ಎಂದಿದ್ದಾನೆ. ಈ ವೇಳೆ ತಂದೆಯ ಎದುರು ಮಗಳು ಪ್ರೀತಿ ವಿಷಯ ಪ್ರಸ್ತಾಪಿಸಿದ್ದಲ್ಲದೇ ಅವನನ್ನೇ ಮದುವೆ ಆಗುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ. ಬುದ್ಧಿಮಾತು ಹೇಳಿದ್ರೂ ಕೇಳದ ಹಿನ್ನೆಲೆ ಕೋಪಗೊಂಡು ತಂದೆ ಮಗಳನ್ನು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಈ ಬಾರಿಯೂ ಗೆಲುವು ನಮ್ಮದೇ – ಆಪ್ ಕಾರ್ಯಕರ್ತರ ಸಂಭ್ರಮಾಚರಣೆ ಆರಂಭ
ಬೀದರ್: ಜಿಲ್ಲೆಯ ಔರಾದ್ (Aurad) ತಾಲೂಕಿನ ಸಂತಪೂರ್ (Santhapur) ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿನ್ಸಿಪಲ್ ಹಾಗೂ ವಾರ್ಡನ್ನನ್ನು ಅಮಾನತು ಮಾಡಲಾಗಿದೆ.
ಊಟದಲ್ಲಿ ಹುಳ ಬಿದ್ದಿದ್ದನ್ನು ಹಾಗೂ ಮೆನು ಚಾರ್ಟ್ ಪ್ರಕಾರ ಊಟ ನೀಡದಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಪ್ರಿನ್ಸಿಪಲ್ ಹಾಗೂ ವಾರ್ಡನ್ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ವಸತಿ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು. ಈ ವೇಳೆ ಕರ್ತವ್ಯಲೋಪ ಎಸಗಿದ್ದವರ ವಿರುದ್ಧ ವರದಿ ಸಲ್ಲಿಸಲಾಗಿದೆ.
ಬೀದರ್: ವೇಗವಾಗಿ ಚಲಿಸುತ್ತಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಧರಿಹನುಮಾನ್ ಕ್ರಾಸ್ ಬಳಿ ನಡೆದಿದೆ.
ಕಾರು ಪಲ್ಟಿಯಾದ ರಭಸಕ್ಕೆ 47 ವರ್ಷದ ಶಿವಕುಮಾರ್ ಪೊಲೀಸ್ ಪಾಟೀಲ್ ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ಔರಾದ್ ತಾಲೂಕಿನ ಧೂಪತ್ ಮಹಾಗಾಂವ್ ಗ್ರಾಮದವರಾದ ವ್ಯಕ್ತಿ ಸಂತಪೂರ್ ಕಡೆಯಿಂದ ಸ್ವ ಗ್ರಾಮಕ್ಕೆ ತೆರಳುತ್ತಿದ್ದಾಗ ಕಾರು ಪಲ್ಟಿಯಾಗಿದೆ. ಇದನ್ನೂ ಓದಿ: ICAR-IIHR ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲು ಡಾ.ಮಂಜುನಾಥ್ ಮನವಿ
ಜಿರ್ಗಾ ಕ್ರಾಸ್ (Jirga Cross) ಬಳಿ ರಾಜ್ಯ ಹೆದ್ದಾರಿ ದಾಟುವಾಗ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಕಾರೊಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿತ್ತು. ಭೀಕರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸದ್ಯ ಸಂತಪೂರ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
ಘಟನೆ ಏನು?
ನ.26 ರಂದು ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಜಿರ್ಗಾ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ದಾಟುವಾಗ ವಿದ್ಯಾರ್ಥಿಗೆ ಕಾರೊಂಡು ಡಿಕ್ಕಿ ಹೊಡೆದಿತ್ತು.
ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಶಾಲಾ ವಾಹನದ ಎದುರಿನಿಂದ ವಿದ್ಯಾರ್ಥಿ ಓಡಿಕೊಂಡು ಬರುತ್ತಿದ್ದ. ಈ ವೇಳೆ ಅದೇ ಶಾಲಾ ವಾಹನದ ಪಕ್ಕದಿಂದ ವೇಗವಾಗಿ ಕಾರೊಂದು ಬಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಗಾಳಿಯಲ್ಲಿ ಮೇಲಿಂದ ಹಾರಿ ಮುಂದೆ ಹೋಗಿ ಬಿದ್ದಿದ್ದ. ಈ ಅಪಘಾತದ ಭೀಕರ ದೃಶ್ಯಗಳು ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ತಕ್ಷಣವೇ ವಿದ್ಯಾರ್ಥಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಇನ್ನೂ ಭೀಕರ ರಸ್ತೆ ಅಪಘಾತದಿಂದಾಗಿ ರೋಸಿ ಹೋಗಿದ್ದ ಗ್ರಾಮಸ್ಥರು, ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ್ದರು. ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಲಾಗಿದೆ. ಇದರಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದರು. ಜೊತೆಗ ವಿದ್ಯಾರ್ಥಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದರು. ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನೂ ಓದಿ: ಕಚ್ಚಾಡುವುದರಿಂದ ಯಾರಿಗೂ ಲಾಭವಿಲ್ಲ: ಯತ್ನಾಳ್ ವಿಚಾರಕ್ಕೆ ಬಿಎಸ್ವೈ ಪ್ರತಿಕ್ರಿಯೆ
ಬೀದರ್: ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) (PM Awas Yojana) ಅಡಿಯಲ್ಲಿ 2024-25ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ಔರಾದ್(ಬಿ) ಹಾಗೂ ಕಮಲಗರ ತಾಲ್ಲೂಕು ಒಳಗೊಂಡು ಔರಾದ್(ಬಿ) ವಿಧಾನಸಭಾ ಕ್ಷೇತ್ರಕ್ಕೆ 3923 ಮನೆಗಳು ಮಂಜೂರಾಗಿವೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.
ಔರಾದ್(ಬಿ) (Aurad) ಹಾಗೂ ಕಮಲಗರ ತಾಲ್ಲೂಕಿನಲ್ಲಿ ವಸತಿ ರಹಿತ ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಮನೆಗಳನ್ನು ಕಟ್ಟಿಸಿಕೊಡುವಂತಾಗಲು ಮನೆಗಳನ್ನು ಮಂಜೂರು ಮಾಡಬೇಕೆಂದು ಈ ಹಿಂದೆ ಹಲವಾರು ಬಾರಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಿದ್ದೆ. ನನ್ನ ಮನವಿಗೆ ಸ್ಪಂದಿಸಿ ಔರಾದ್ ಕ್ಷೇತ್ರಕ್ಕೆ ಹೆಚ್ಚಿನ ಮನೆಗಳನ್ನು ಮಂಜೂರು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಕ್ಷೇತ್ರದ ಮಹಾಜನತೆಯ ಪರವಾಗಿ ಶಾಸಕ ಪ್ರಭು ಚವ್ಹಾಣ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ನನ್ನ ಆಡಿಯೋ ಅಲ್ಲ, ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್ ಮಾಡಲು ಅರೆಸ್ಟ್: ಮುನಿರತ್ನ
ಪಿಎಂ ಆವಾಸ್ (ಗ್ರಾಮೀಣ) ಯೋಜನೆಯಡಿ 2024-25ನೇ ಸಾಲಿಗೆ ರಾಜ್ಯಕ್ಕೆ 2,26,175 ಮನೆಗಳನ್ನು ಮಂಜೂರು ಮಾಡಲಾಗಿದೆ. ಬೀದರ್ ಜಿಲ್ಲೆಗೆ 15,035 ಮನೆಗಳು ಮಂಜೂರಾಗಿದ್ದು, ಈ ಪೈಕಿ ಔರಾದ್(ಬಿ) ತಾಲ್ಲೂಕಿಗೆ 2286 ಹಾಗೂ ಕಮಲನಗರ ತಾಲ್ಲೂಕಿಗೆ 1,637 ಮನೆಗಳು ಸೇರಿ ಔರಾದ್(ಬಿ) ವಿಧಾನಸಭಾ ಕ್ಷೇತ್ರಕ್ಕೆ ಒಟ್ಟು 3,923 ಮನೆಗಳು ಮಂಜೂರಾಗಿವೆ. ಇದನ್ನೂ ಓದಿ: ಮುನಿರತ್ನ ಬೈದಿದ್ದು ಇನ್ನೂ ಸಾಬೀತಾಗಿಲ್ಲ, ಇದು ಸಿಡಿ ಶಿವು ಕೆಲಸ: ರಮೇಶ್ ಜಾರಕಿಹೊಳಿ
2018ರ ವಸತಿ ರಹಿತರ ಸಮೀಕ್ಷಾ ಪಟ್ಟಿಯಂತೆ ಆದ್ಯತೆಗೆ ಅನುಗುಣವಾಗಿ ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 1.75 ಲಕ್ಷ ರೂ. ಹಾಗೂ ಇತರೆ ಫಲಾನುಭವಿಗಳಿಗೆ 1.20 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಒಟ್ಟು 3 ಕಂತುಗಳಲ್ಲಿ ಹಣ ಬಿಡುಗಡೆಯಾಗುತ್ತದೆ. ಮನೆ ಮಂಜೂರಾದ ನಂತರ ಜಿಪಿಎಸ್ ಕಳುಹಿಸಿದ ಬಳಿಕ ಕೂಡಲೇ ಮೊದಲ ಕಂತಿನ ಹಣ ಬಿಡುಗಡೆಯಾಗುತ್ತದೆ. ಮನೆ ನಿರ್ಮಾಣದ ಹಂತಗಳನ್ನು ಆಧರಿಸಿ ನಂತರದ ಕಂತುಗಳನ್ನು ಬಿಡುಗಡೆ ಮಾಡಲಾಗುತ್ತದೆ. ಇದನ್ನೂ ಓದಿ: ವಂದೇ ಮೆಟ್ರೋ ಈಗ ‘ನಮೋ ಭಾರತ್ ರೈಲು’ – ಚಾಲನೆ ನೀಡಿದ ಮೋದಿ