Tag: australia

  • ಭಾನುವಾರ ಬೆಂಗ್ಳೂರಲ್ಲಿ ಇಂಡೋ-ಆಸೀಸ್ ಹೈವೋಲ್ಟೇಜ್ ಪಂದ್ಯ

    ಭಾನುವಾರ ಬೆಂಗ್ಳೂರಲ್ಲಿ ಇಂಡೋ-ಆಸೀಸ್ ಹೈವೋಲ್ಟೇಜ್ ಪಂದ್ಯ

    – ಮೆಟ್ರೋ ಅವಧಿ ವಿಸ್ತರಿಸಿದ ಬಿಎಂಆರ್‌ಸಿಎಲ್‌
    – ಬಿಎಂಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ

    ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಕ್ರಿಕೆಟ್ ಟೂರ್ನಿಯ 2ನೇ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಪಡೆದಿದೆ. ಇದರೊಂದಿಗೆ ಸರಣಿ 1-1 ಅಂತರದಲ್ಲಿ ಸಮಬಲವಾಗಿದ್ದು, ಸರಣಿ ಗೆಲ್ಲಲು ಭಾನುವಾರ ನಡೆಯಲಿರುವ 3ನೇ ಹಾಗೂ ಅಂತಿಮ ಏಕದಿನ ಕ್ರಿಕೆಟ್ ಪಂದ್ಯ ಇತ್ತಂಡಗಳಿಗೂ ಮಹತ್ವ ಎನಿಸಿದೆ.

    ಜ.19ರ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3ನೇ ಪಂದ್ಯ ನಡೆಯಲಿದೆ. ಈಗಾಗಲೇ ಕ್ರಿಕೆಟ್ ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸಿ ರೋಚಕ ಹೋರಾಟವನ್ನು ಸವಿಯಲು ಸಿದ್ಧರಾಗಿದ್ದಾರೆ. ಕ್ರಿಕೆಟ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್‌ ನಮ್ಮ ಮೆಟ್ರೋ ಸಂಚಾರ ಸಮಯ ವಿಸ್ತರಣೆ ಮಾಡಿದೆ.

    ಕಬ್ಬನ್ ಪಾರ್ಕ್ ನಿಲ್ದಾಣದಿಂದ ನಾಗಸಂದ್ರ ಮತ್ತು ಯಲಚೇನಹಳ್ಳಿ ನಿಲ್ದಾಣದ ಕಡೆಗೆ ಪ್ರಯಾಣಿಸುವ ಹಾಗೂ ನಾಡಪ್ರಭು ಕೆಂಪೇಗೌಡ ನಿಲ್ದಾಣ ಇಂಟರ್ ಚೇಂಜ್ ನಿಲ್ದಾಣದಿಂದ ಕೊನೆಯ ಸೇವೆಯು ರಾತ್ರಿ 12 ಗಂಟೆಗೆ ಇರಲಿದೆ. ಪಂದ್ಯಾವಳಿ ಮುಗಿದ ನಂತರ ತ್ವರಿತವಾಗಿ ಪ್ರಯಾಣಿಸಲು, ಪ್ರಯಾಣಿಕರ ಅನುಕೂಲಕ್ಕೆ ರಿಟರ್ನ್ ಜರ್ನಿ ಪೇಪರ್ ಟಿಕೆಟ್‍ಗಳನ್ನು ಬಿಎಂಆರ್‌ಸಿಎಲ್‌ ಪರಿಚಯಿಸಿದೆ.

    ಕಬ್ಬನ್‍ಪಾರ್ಕ್ ಮೆಟ್ರೋ ರೈಲು ನಿಲ್ದಾಣದಿಂದ ಇತರೆ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಮಾಡುವ ಸಂದರ್ಭದಲ್ಲಿ 50 ರೂ. ಪೇಪರ್ ಟಿಕೆಟನ್ನು ನೀಡಲಾಗುತ್ತದೆ. ಪ್ರಯಾಣಿಕರು ಕ್ರಿಕೆಟ್ ಪಂದ್ಯಾವಳಿ ಪ್ರಾರಂಭಕ್ಕೆ ಮೊದಲು ಭಾನುವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಾವುದೇ ಮೆಟ್ರೋ ನಿಲ್ದಾಣದಿಂದ ಪೇಪರ್ ಟಿಕೆಟ್ ಖರೀದಿಸಬಹುದು.

    ಇತ್ತ ಬಿಎಂಟಿಸಿ ಕೂಡ ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಭಾನುವಾರದಂದು ರಾತ್ರಿ 11.30 ರವರೆಗೂ ಬಸ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿದೆ. ಯಾವ ಮಾರ್ಗದಿಂದ ವಿಶೇಷ ಸಂಚಾರ ಇರಲಿದೆ ಎಂಬ ಮಾಹಿತಿ ಇಂತಿದೆ.

    ಮಾರ್ಗ ಸಂಖ್ಯೆ SBS-1K ಚಿನ್ನಸ್ವಾಮಿ ಸ್ಟೇಡಿಯಂನಿಂದ ಟ್ರಿನಿಟಿ ಸರ್ಕಲ್, ದೊಮ್ಮಲೂರು, ಎಚ್‍ಎಎಲ್, ಮಾರತ್ತಹಳ್ಳಿ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣಕ್ಕೆ ಹಾಗೂ ಮಾರ್ಗ ಸಂಖ್ಯೆ ಉ-2 ಚಿನ್ನಸ್ವಾಮಿ ಸ್ಟೇಡಿಯಂನಿಂದ ವಿವೇಕನಗರ, ಕೋರಮಂಗಲ, ಅಗರ ಮಾರ್ಗವಾಗಿ ಸರ್ಜಾಪುರಕ್ಕೆ ತಲುಪಲಿದೆ.

    ಮಾರ್ಗ ಸಂಖ್ಯೆ ಉ-3 ಚಿನ್ನಸ್ವಾಮಿ ಸ್ಟೇಡಿಯಂನಿಂದ ಆಡುಗೋಡಿ, ಮಡಿವಾಳ, ಬೊಮ್ಮನಹಳ್ಳಿ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಗೆ ತಲುಪಲಿದೆ. ಮಾರ್ಗ ಸಂಖ್ಯೆ ಉ-4 ಚಿನ್ನಸ್ವಾಮಿ ಸ್ಟೇಡಿಯಂನಿಂದ ಆಡುಗೋಡಿ, ಜಯದೇವ ಆಸ್ಪತ್ರೆ, ಹುಳಿಮಾವು ಗೇಟ್ ಮಾರ್ಗವಾಗಿ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಗೆ ತಲುಪಲಿದೆ.

    ಮಾರ್ಗ ಸಂಖ್ಯೆ ಉ-6 ಚಿನ್ನಸ್ವಾಮಿ ಸ್ಟೇಡಿಯಂನಿಂದ ಮೈಸೂರು ರಸ್ತೆ, ನಾಯಂಡಹಳ್ಳಿ, ಕೆಂಗೇರಿ ಮಾರ್ಗವಾಗಿ ಕೆಂಗೇರಿ ಕೆ.ಎಚ್.ಬಿ ಕ್ವಾಟರ್ಸ್ ಗೆ ತಲುಪಲಿದೆ. ಮಾರ್ಗ ಸಂಖ್ಯೆ ಉ-7 ಚಿನ್ನಸ್ವಾಮಿ ಸ್ಟೇಡಿಯಂನಿಂದ ಮಾಗಡಿ ರಸ್ತೆ, ಸುಂಕದ ಕಟ್ಟೆ, ಗೊಲ್ಲರಹಟ್ಟಿ ಮಾರ್ಗವಾಗಿ ಜನಪ್ರಿಯ ಟೌನ್ ಶಿಪ್ ಗೆ ತಲುಪಲಿದೆ.

    ಮಾರ್ಗ ಸಂಖ್ಯೆ ಉ-8 ಚಿನ್ನಸ್ವಾಮಿ ಸ್ಟೇಡಿಯಂನಿಂದ ಶಿವಾಜಿನಗರ, ಮೇಖ್ರಿ ಸರ್ಕಲ್, ಯಶವಂತಪುರ ಮಾರ್ಗವಾಗಿ ನೆಲಮಂಗಲಕ್ಕೆ ತಲುಪಲಿದೆ. ಮಾರ್ಗ ಸಂಖ್ಯೆ ಉ-9 ಚಿನ್ನಸ್ವಾಮಿ ಸ್ಟೇಡಿಯಂನಿಂದ ಶಿವಾಜಿನಗರ, ಮೇಖ್ರಿ ಸರ್ಕಲ್, ಹೆಬ್ಬಾಳ ಮಾರ್ಗವಾಗಿ ಯಲಹಂಕ 5ನೇ ಹಂತಕ್ಕೆ ತಲುಪಲಿದೆ. ಮಾರ್ಗ ಸಂಖ್ಯೆ ಉ-10 ಚಿನ್ನಸ್ವಾಮಿ ಸ್ಟೇಡಿಯಂನಿಂದ ಶಿವಾಜಿನಗರ, ಟ್ಯಾನರಿ ರಸ್ತೆ, ನಾಗವಾರ, ಆರ್.ಕೆ.ಹೆಗಡೆ ನಗರ ಮಾರ್ಗವಾಗಿ ಯಲಹಂಕ ತಲುಪಲಿದೆ.

    ಮಾರ್ಗ ಸಂಖ್ಯೆ ಉ-11 ಚಿನ್ನಸ್ವಾಮಿ ಸ್ಟೇಡಿಯಂನಿಂದ ಶಿವಾಜಿನಗರ, ಲಿಂಗರಾಜಪುರ, ಹೆಣ್ಣೂರು ಕ್ರಾಸ್ ಮಾರ್ಗವಾಗಿ ಬಾಗಲೂರು ತಲುಪಲಿದೆ. ಮಾರ್ಗ ಸಂಖ್ಯೆ 317-ಉ ಚಿನ್ನಸ್ವಾಮಿ ಸ್ಟೇಡಿಯಂನಿಂದ ಟಿನ್ ಫ್ಯಾಕ್ಟರಿ, ಕೆ. ಆರ್.ಪುರ ಮಾರ್ಗವಾಗಿ ಹೊಸಕೋಟೆ ತಲುಪಲಿದೆ.

  • ಧವನ್, ಕೊಹ್ಲಿ ಜತೆ ಕೊನೆಗೆ ರಾಹುಲ್ ಸ್ಫೋಟಕ ಬ್ಯಾಟಿಂಗ್- ಆಸೀಸ್‍ಗೆ 341 ರನ್ ಗುರಿ

    ಧವನ್, ಕೊಹ್ಲಿ ಜತೆ ಕೊನೆಗೆ ರಾಹುಲ್ ಸ್ಫೋಟಕ ಬ್ಯಾಟಿಂಗ್- ಆಸೀಸ್‍ಗೆ 341 ರನ್ ಗುರಿ

    – ಸಿಕ್ಕ ಅವಕಾಶ ಕೈಚೆಲ್ಲಿಕೊಂಡ ಅಯ್ಯರ್, ಪಾಂಡೆ
    – 5ನೇ ಕ್ರಮಾಂಕದಲ್ಲಿ ಮೈದಾಕ್ಕಿಳಿದು ಘರ್ಜಿಸಿದ ರಾಹುಲ್

    ರಾಜ್‍ಕೋಟ್: ಶಿಖರ್ ಧವನ್, ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಹಾಗೂ ಕನ್ನಡಿಗ ಕೆ.ಎಲ್.ರಾಹುಲ್ ಸ್ಫೋಟಕ ಬ್ಯಾಟಿಂಗ್‍ನಿಂದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾಗೆ 341 ರನ್‍ಗಳ ಗುರಿಯನ್ನು ನೀಡಿದೆ.

    ಗುಜರಾತ್‍ನ ರಾಜ್‍ಕೋಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ರೋಹಿತ್ ಶರ್ಮಾ 42 ರನ್ (44 ಎಸೆತ, 6 ಬೌಂಡರಿ), ಶಿಖರ್ ಧವನ್ 96 ರನ್ (90 ಎಸೆತ, 13 ಬೌಂಡರಿ, ಸಿಕ್ಸ್), ವಿರಾಟ್ ಕೊಹ್ಲಿ 78 ರನ್ (76 ಎಸೆತ, 6 ಬೌಂಡರಿ) ಹಾಗೂ ಕೆ.ಎಲ್.ರಾಹುಲ್ 80 ರನ್ (52 ಎಸೆತ, 6 ಬೌಂಡರಿ, 3 ಸಿಕ್ಸರ್) ಸಹಾಯದಿಂದ 6 ವಿಕೆಟ್‍ಗಳ ನಷ್ಟದಿಂದ 340 ರನ್ ಪೇರಿಸಿದೆ. ಇದನ್ನೂ ಓದಿ: ಪಂಥ್ ಸ್ಥಾನಕ್ಕೆ ಆಂಧ್ರದ ಕೆ.ಎಸ್.ಭರತ್ ಆಯ್ಕೆ

    ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ಆರಂಭದಲ್ಲಿ ಭಾರತ ಆರಂಭಿಕ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕುವಲ್ಲಿ ಶಕ್ತವಾಯಿತು. ಇನ್ನಿಂಗ್ಸ್ ನ ಮೊದಲ ಓವರ್ ಬೌಲಿಂಗ್ ಮಾಡಿದ ಪ್ಯಾಟ್ ಕಮ್ಮಿನ್ಸ್ ಮೇಡನ್ ಓವರ್ ಮಾಡಿದರು. ಆದರೆ ನಂತರ ಓವರ್‌ನ ಮೊದಲ ಎಸೆತವನ್ನು ಬೌಂಡರಿಗೆ ಅಟ್ಟುವ ಮೂಲಕ ಶಿಖರ್ ಧವನ್ ರನ್ ಗಳಿಕೆಗೆ ಆರಂಭ ನೀಡಿದರು. ಆರಂಭದಲ್ಲಿ ಭರ್ಜರಿ ಬ್ಯಾಟಿಂಗ್‍ಗೆ ಮುಂದಾದ ಶಿಖರ್ ಧವನ್‍ಗೆ ರೋಹಿತ್ ಶರ್ಮಾ ಸಾಥ್ ನೀಡಿದರು.

    ಇನ್ನಿಂಗ್ಸ್ ನ 10ನೇ ಓವರ್ ಮುಕ್ತಾಯಕ್ಕೆ ಧವನ್ ಹಾಗೂ ರೋಹಿತ್ ಜೋಡಿಯು 55 ರನ್‍ಗಳಿಸಿತು. ಟೀಂ ಇಂಡಿಯಾಗೆ ಉತ್ತಮ ಆರಂಭ ನೀಡಿದ ಈ ಜೋಡಿಯು ಮೊದಲ ವಿಕೆಟ್‍ಗೆ 81 ರನ್‍ಗಳ ಜೊತೆಯಾಟ ನೀಡಿತು. ರೋಹಿತ್ ಶರ್ಮಾ 42 ರನ್ (44 ಎಸೆತ, 6 ಬೌಂಡರಿ) ಗಳಿಸಿ ಆ್ಯಡಂ ಜಂಪಾಗೆ ವಿಕೆಟ್ ಒಪ್ಪಿಸಿದರು. ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಇನ್ನೂ ನಾಲ್ಕು ರನ್ ಗಳಿಸಿದ್ದಿದ್ದರೆ ವೇಗವಾಗಿ 9 ಸಾವಿರ ರನ್ ಗಳಿಸಿದ ಆಟಗಾರರಲ್ಲಿ ಮೂರನೇ ಸ್ಥಾನ ಪಡೆಯುತ್ತಿದ್ದರು.

    ಆಸ್ಟ್ರೇಲಿಯಾ ತಂಡಕ್ಕೆ ಬೃಹತ್ ಮೊತ್ತದ ರನ್‍ಗಳ ಸವಾಲು ನೀಡುವ ಹಾಗೂ ವಿಕೆಟ್ ಕಾಯ್ದುಕೊಂಡು ಆಡುವ ಉದ್ದೇಶದಿಂದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಎರಡನೇ ಕ್ರಮಾಂಕದಲ್ಲಿ ಮೈದಾನಕ್ಕಿಳಿದರು. ಆರಂಭಿಕ ಬ್ಯಾಟ್ಸ್‌ಮನ್‌ ಧವನ್ ಜೊತೆಗೆ ಸೇರಿದ ವಿರಾಟ್ ಉತ್ತಮ ಜೊತೆಯಾಟ ಕಟ್ಟಿದರು. ಉತ್ತಮ ಫಾರ್ಮ್ ನಲ್ಲಿದ್ದ ಶಿಖರ್ ಧವನ್ ಇನ್ನಿಂಗ್ಸ್ ನ 23ನೇ ಓವರ್‌ನಲ್ಲಿ ಅರ್ಧಶತಕ ಪೂರೈಸಿದರು. ಧವನ್ ಹಾಗೂ ಕೊಹ್ಲಿ ಜೋಡಿ ಎರಡನೇ ವಿಕೆಟ್‍ಗೆ 103 ರನ್‍ಗಳ ಜೊತೆಯಾಟವಾಡಿ ತಂಡಕ್ಕೆ ಕೊಡುಗೆ ನೀಡಿತು.

    ಇನ್ನಿಂಗ್ಸ್ ನ 29ನೇ ಓವರ್ ನಲ್ಲಿ ಕೇನ್‌ ರಿಚ​ರ್ಡ್‌​ಸನ್‌ ಶಿಖರ್ ಧವನ್ ವಿಕೆಟ್ ಕಿತ್ತರು. ಶಿಖರ್ ಧವನ್ 96 ರನ್ (90 ಎಸೆತ, 13 ಬೌಂಡರಿ, ಸಿಕ್ಸ್) ವಿಕೆಟ್ ಒಪ್ಪಿಸಿದರು. ಬಳಿಕ ಮೈದಾಕ್ಕಿಳಿದ ಶ್ರೇಯಸ್ ಅಯ್ಯರ್ 17 ಎಸೆತಗಳಲ್ಲಿ ಕೇವಲ 7 ರನ್‍ಗಳಿಸಿ ವಿಕೆಟ್ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿಕ್ಕ ಅವಕಾಶವನ್ನು ಶ್ರೇಯಸ್ ಅಯ್ಯರ್ ಕೈಚೆಲ್ಲಿಕೊಂಡರು.

    5ನೇ ಕ್ರಮಾಂಕದಲ್ಲಿ ಮೈದಾಕ್ಕಿಳಿದ ಕೆ.ಎಲ್.ರಾಹುಲ್ ನಾಯಕ ವಿರಾಟ್ ಕೊಹ್ಲಿಗೆ ಸಾಥ್ ನೀಡಿ, ಈ ಬಾರಿಯೂ ತಮ್ಮ ಬ್ಯಾಟಿಂಗ್ ಕಲೆಯನ್ನು ತೋರಿದರು. ಈ ಜೋಡಿಯು ನಾಲ್ಕನೇ ವಿಕೆಟ್‍ಗೆ 78 ರನ್‍ಗಳ ಜೊತೆಯಾಟದ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿತು. 78 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಆ್ಯಡಂ ಜಂಪಾಗೆ ವಿಕೆಟ್ ಒಪ್ಪಿಸಿದರು. ಬಳಿಕ ಮೈದಾಕ್ಕಿಳಿಸಿ ಮನೀಶ್ ಪಾಂಡೆ ಕೇವಲ 4 ರನ್ ಗಳಿಸಿ ಪೆವಿಲಿಯನ್‍ಗೆ ತೆರಳಿದರು.

    ಸ್ಫೋಟಕ ಬ್ಯಾಟಿಂಗ್ ನಡೆಸಿದ ಕೆ.ಎಲ್.ರಾಹುಲ್ ಇನ್ನಿಂಗ್ಸ್ ನ 46ನೇ ಓವರ್‌ನ 3ನೇ ಎಸೆತವನ್ನು ಬೌಂಡರಿಗೆ ಅಟ್ಟಿ ಅರ್ಧಶತಕ ದಾಖಲಿಸಿದರು. ಅಷ್ಟೇ ಅಲ್ಲದೆ ನಂತರ ಎಸೆತದಲ್ಲಿ ಸಿಕ್ಸ್ ಸಿಡಿಸಿದರು. ಇದೇ ಓವರ್ ನಲ್ಲಿ ಟೀಂ ಇಂಡಿಯಾ 300 ರನ್‍ಗಳ ಗಡಿದಾಡಿತು. ಕೆ.ಎಲ್.ರಾಹುಲ್ ಜೊತೆಗೂಡಿದ ರವೀಂದ್ರ ಜಡೇಜಾ ಕೂಡ ಉತ್ತಮ ಬ್ಯಾಟಿಂಗ್ ನಡೆಸಿದರು. ಕೊನೆಯ ಓವರ್ ನಲ್ಲಿ ರನ್ ಕದಿಯಲು ಮುಂದಾದ ಕೆ.ಎಲ್.ರಾಹುಲ್ ರನೌಟ್ ಆದರು. ಕೆ.ಎಲ್.ರಾಹುಲ್ 80 ರನ್ (52 ಎಸೆತ, 6 ಬೌಂಡರಿ, 3 ಸಿಕ್ಸರ್) ಹಾಗೂ ರವೀಂದ್ರ ಜಡೇಜಾ ಔಟಾಗದೆ 20 ರನ್ ಗಳಿಸಿದರು. ಆ್ಯಡಂ ಜಂಪಾ 50 ರನ್ ನೀಡಿ 3 ವಿಕೆಟ್ ಕಿತ್ತರೆ, ಕೇನ್‌ ರಿಚ​ರ್ಡ್‌​ಸನ್‌ 73 ರನ್ ನೀಡಿ 2 ವಿಕೆಟ್ ಪಡೆದರು.

    ರನ್ ಏರಿದ್ದು ಹೇಗೆ?:
    51 ಎಸೆತ- 50 ರನ್
    103 ಎಸೆತ – 100 ರನ್
    199 ಎಸೆತ – 200 ರನ್
    241 ಎಸೆತ – 250 ರನ್
    274 ಎಸೆತ – 300 ರನ್
    300 ಎಸೆತ – 340 ರನ್

  • 3ನೇ ಆಸ್ಟ್ರೇಲಿಯಾ-ಭಾರತ ಪಂದ್ಯಕ್ಕೆ ಸಿಎಎ ಪ್ರತಿಭಟನೆಯ ಆತಂಕ

    3ನೇ ಆಸ್ಟ್ರೇಲಿಯಾ-ಭಾರತ ಪಂದ್ಯಕ್ಕೆ ಸಿಎಎ ಪ್ರತಿಭಟನೆಯ ಆತಂಕ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ನಡುವೆ ನಡೆಯುವ ಮೂರನೇ ಏಕದಿನ ಪಂದ್ಯಕ್ಕೆ ಸಿಎಎ ವಿರೋಧಿಗಳ ಪ್ರತಿಭಟನೆಯ ಆತಂಕ ಶುರುವಾಗಿದೆ.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಹೆಚ್ಚಿನ ಭದ್ರತೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಣೆ ಮಾಡಲು ಬಂದ ಕೆಲ ಯುವಕ-ಯುವತಿಯರು ಸಿಎಎ ವಿರೋಧಿ ಬರಹ ಇರುವ ಟೀ-ಶರ್ಟ್ ಧರಿಸಿ ಬಂದ ಪ್ರತಿಭಟನೆ ಮಾಡಿದರು.

    ಮುಂಬೈ ಘೋಷಣೆ ಕೂಗುತ್ತಿದ್ದಂತೆ ಪರ-ವಿರೋಧಿ ವಾಗ್ವಾದ ಆರಂಭವಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದ ವೇಳೆ ಭದ್ರತೆ ವಹಿಸಲು ಪೊಲೀಸರು ಪ್ಲಾನ್ ಮಾಡಿದ್ದಾರೆ. ಪೊಲೀಸರು ಪಂದ್ಯದ ಭದ್ರತೆಯ ಬಗ್ಗೆ ಮೇಲಿಂದ ಮೇಲೆ ಮೀಟಿಂಗ್ ಮಾಡಿ ಭದ್ರತೆ ನೀಲಿ ನಕ್ಷೆಯನ್ನು ರೆಡಿ ಮಾಡಿಕೊಳ್ಳಲಾಗಿದೆ.

  • ಕೊಹ್ಲಿ ಕರೆಗಾಗಿ ಕಾಯುತ್ತಿದ್ದೇನೆ ಎಂದ ಡೇವಿಡ್ ವಾರ್ನರ್

    ಕೊಹ್ಲಿ ಕರೆಗಾಗಿ ಕಾಯುತ್ತಿದ್ದೇನೆ ಎಂದ ಡೇವಿಡ್ ವಾರ್ನರ್

    ಮುಂಬೈ: ಭಾರತದ ನೆಲದಲ್ಲಿ ಕ್ರಿಕೆಟ್ ಆಡುವುದು ವಿಶೇಷವಾಗಿರುತ್ತದೆ. ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ನಾವು ಗಟ್ಟಿ ಸವಾಲುಗಳನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಆಸೀಸ್ ತಂಡದ ಆಟಗಾರ ಡೇವಿಡ್ ವಾರ್ನರ್ ತಿಳಿಸಿದ್ದಾರೆ. ಇದೇ ವೇಳೆ ನಾನು ಈ ಬಾರಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕುಟುಂಬದೊಂದಿಗೆ ಡಿನ್ನರ್ ಮಾಡಲು ಆಸೆ ಪಡುತ್ತಿದ್ದು, ಕೊಹ್ಲಿ ಕರೆಗಾಗಿ ಕಾಯುತ್ತಿದ್ದೇನೆ ಎಂದು ವಾರ್ನರ್ ಹೇಳಿದ್ದಾರೆ.

    ಮುಂಬೈನಲ್ಲಿ ನಡೆದ ಮೊದಲ ಏಕದಿನ ಕ್ರಿಕೆಟ್ ಪಂದ್ಯಕ್ಕೂ ಮುನ್ನ ಡೇವಿಡ್ ವಾರ್ನರ್ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೋವನ್ನು ಐಪಿಎಲ್ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

    ಇದೇ ವೇಳೆ ಐಪಿಎಲ್‍ನಲ್ಲಿ ಆಡಿರುವುದರಿಂದ ನನಗೆ ಪ್ರೇಕ್ಷಕರಿಂದ ಉತ್ತಮ ಬೆಂಬಲ ಸಿಕ್ಕಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನನ್ನನ್ನು ಡಿನ್ನರ್ ಕರೆಯುತ್ತಾರೆ ಎಂದು ಅವರ ಫೋನ್ ಕರೆಗಾಗಿ ಕಾಯುತ್ತಿದ್ದೇನೆ. ವಿರಾಟ್, ರಾಹುಲ್, ರೋಹಿತ್ ರಂತಹ ಆಟಗಾರರನ್ನು ಹೊಂದಿರುವ ತಂಡದ ಬಲಿಷ್ಠವಾಗಿದ್ದು, ಬುಮ್ರಾಕ್ಕೆ ತಂಡಕ್ಕೆ ಮರಳಿರುವುದು ಟೀಂ ಇಂಡಿಯಾಗೆ ಮತ್ತಷ್ಟು ಬಲ ನೀಡಿದೆ ಎಂದಿದ್ದಾರೆ.

    ಇದೇ ವೇಳೆ ತಮ್ಮ ಮಗಳು ಕೊಹ್ಲಿ ಅಭಿಮಾನಿಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ವಾರ್ನರ್, ಮಕ್ಕಳು ಮಾತು ಯಾವಾಲೂ ಸುಂದರವಾಗಿರುತ್ತೆ. ಕೊಹ್ಲಿ ಅವರೊಂದಿಗೆ ಸವಾಲಿನ ಕ್ರಿಕೆಟ್ ಆಡಲು ಸಂತಸವಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಇತ್ತ ಮಂಗಳವಾರ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಆಸೀಸ್ ಆರಂಭಿಕರಾದ ಡೇವಿಡ್ ವಾರ್ನರ್ ಹಾಗೂ ಫಿಂಚ್ ಜೋಡಿ, 5 ಸಿಕ್ಸರ್, 30 ಬೌಂಡರಿಗಳೊಂದಿಗೆ 74 ಎಸೆತ ಬಾಕಿ ಇರುವಂತೆ 258 ರನ್ ಸಿಡಿಸಿ ತಂಡದಕ್ಕೆ ಜಯ ತಂದಿತ್ತು.

  • ಆಸೀಸ್ ವಿರುದ್ಧ ಕೆಟ್ಟ ದಾಖಲೆ ಬರೆದ ಕೊಹ್ಲಿ

    ಆಸೀಸ್ ವಿರುದ್ಧ ಕೆಟ್ಟ ದಾಖಲೆ ಬರೆದ ಕೊಹ್ಲಿ

    ಮುಂಬೈ: ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಕೆಟ್ಟ ದಾಖಲೆ ಬರೆದಿದ್ದಾರೆ.

    ಇಲ್ಲಿಯವರೆಗೆ ಆಸ್ಟ್ರೇಲಿಯಾ ಭಾರತದ ವಿರುದ್ಧ 10 ವಿಕೆಟ್ ಗಳ ಜಯವನ್ನು ಸಾಧಿಸಿರಲಿಲ್ಲ. ಆದರೆ ಮಂಗಳವಾರ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್‍ಗಳ ಜಯವನ್ನು ಸಾಧಿಸಿತ್ತು. ಈ ಮೂಲಕ ಕೊಹ್ಲಿ ನೇತೃತ್ವದ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಆಸ್ಟ್ರೇಲಿಯಾ ಈ ಸಾಧನೆ ನಿರ್ಮಿಸಿತು.

    ಈ ಹಿಂದೆ ನ್ಯೂಜಿಲೆಂಡ್(1981), ವೆಸ್ಟ್ ಇಂಡೀಸ್(1997), ದಕ್ಷಿಣ ಆಫ್ರಿಕಾ(2000), ದಕ್ಷಿಣ ಆಫ್ರಿಕಾ(2005) ಭಾರತದ ವಿರುದ್ಧ 10 ವಿಕೆಟ್‍ಗಳ ಜಯ ಸಾಧಿಸಿತ್ತು.

    ಆರಂಭಿಕ ಬ್ಯಾಟ್ಸ್ ಮನ್ ಆ್ಯರನ್ ಫಿಂಚ್ ಹಾಗೂ ಡೇವಿಡ್ ವಾರ್ನರ್ ಸ್ಫೋಟಕ ಬ್ಯಾಟಿಂಗ್‍ನಿಂದ ಆಸ್ಟ್ರೇಲಿಯಾ ತಂಡವು ಟೀಂ ಇಂಡಿಯಾ ವಿರುದ್ಧ 74 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

    ಆ್ಯರನ್ ಫಿಂಚ್ 110 ರನ್ (114 ಎಸೆತ, 13 ಬೌಂಡರಿ, 2 ಸಿಕ್ಸರ್) ಹಾಗೂ ಡೇವಿಡ್ ವಾರ್ನರ್ 128 ರನ್ (112 ಎಸೆತ, 17 ಬೌಂಡರಿ, 3 ಸಿಕ್ಸರ್) ಹೊಡೆದಿದ್ದರಿಂದ 37.4 ಓವರ್ ನಲ್ಲಿ 258 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 49.1 ಓವರ್ ಗಳಲ್ಲಿ 255 ರನ್‍ಗಳಿಗೆ ಆಲೌಟ್ ಆಗಿತ್ತು. ಇದನ್ನೂ ಓದಿ: ಪಂತ್ ಬದಲು ಕೀಪಿಂಗ್ ಗ್ಲೌಸ್ ತೊಟ್ಟ ರಾಹುಲ್

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 49.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿತ್ತು. ಶಿಖರ್ ಧವನ್ 74 ರನ್ (91 ಎಸೆತ, 9 ಬೌಂಡರಿ, ಸಿಕ್ಸ್), ಕೆ.ಎಲ್.ರಾಹುಲ್ 47 ರನ್ (61 ಎಸೆತ, 4 ಬೌಂಡರಿ) ಹೊಡೆದಿದ್ದರು.

    ಎರಡನೇ ಪಂದ್ಯ ಜ.17 ರಂದು ಗುಜರಾತಿನ ರಾಜ್‍ಕೋಟ್ ನಲ್ಲಿ ನಡೆಯಲಿದ್ದರೆ ಕೊನೆಯ ಪಂದ್ಯ ಜ.19 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

  • ಪಂತ್ ಬದಲು ಕೀಪಿಂಗ್ ಗ್ಲೌಸ್ ತೊಟ್ಟ ರಾಹುಲ್

    ಪಂತ್ ಬದಲು ಕೀಪಿಂಗ್ ಗ್ಲೌಸ್ ತೊಟ್ಟ ರಾಹುಲ್

    ಮುಂಬೈ: ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಬದಲು ಇಂದು ಬ್ಯಾಟ್ಸ್‌ಮನ್‌ ಕೆ.ಎಲ್.ರಾಹುಲ್ ಗ್ಲೌಸ್ ತೊಟ್ಟು ಕೀಪಿಂಗ್ ಮಾಡಿದ್ದಾರೆ.

    ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲನ್ನು ಕಂಡಿದೆ. ಭಾರತ ಇನ್ನಿಂಗ್ಸ್ ನಲ್ಲಿ ಪ್ಯಾಟ್ ಕಮ್ಮಿನ್ಸ್ ಎಸೆದ ಬೌನ್ಸರ್ ಬಾಲ್ ರಿಷಬ್ ಪಂತ್ ತಲೆಗೆ ಬಿದ್ದ ಪರಿಣಾಮ ಅವರು ಗಾಯಗೊಂಡರು. ಹೀಗಾಗಿ ಪಂತ್‍ಗೆ ವಿಶ್ರಾಂತಿ ನೀಡಿ ಅವರ ಜವಾಬ್ದಾರಿಯನ್ನು ಕೆ.ಎಲ್.ರಾಹುಲ್‍ಗೆ ನೀಡಲಾಯಿತು.

    ಈ ಪಂದ್ಯದಲ್ಲಿ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ರಿಷಭ್ ಪಂತ್ 28 ರನ್ (33 ಎಸೆತ, 2 ಬೌಂಡರಿ, ಸಿಕ್ಸರ್) ಗಳಿಸಿದ್ದರು. ಉತ್ತಮ ಬ್ಯಾಟಿಂಗ್ ಆರಂಭಿಸಿದ್ದ ಪಂತ್ ಕಮ್ಮಿನ್ಸ್ ಎಸೆದ ಇನ್ನಿಂಗ್ಸ್ ನ 43ನೇ ಓವರ್ ನ 2ನೇ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 49.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿತ್ತು. ಶಿಖರ್ ಧವನ್ 74 ರನ್ (91 ಎಸೆತ, 9 ಬೌಂಡರಿ, ಸಿಕ್ಸ್), ಕೆ.ಎಲ್.ರಾಹುಲ್ 47 ರನ್ (61 ಎಸೆತ, 4 ಬೌಂಡರಿ) ಹೊಡೆದಿದ್ದರು. ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಆ್ಯರನ್ ಫಿಂಚ್ 110 ರನ್ (114 ಎಸೆತ, 13 ಬೌಂಡರಿ, 2 ಸಿಕ್ಸರ್) ಹಾಗೂ ಡೇವಿಡ್ ವಾರ್ನರ್ 128 ರನ್ (112 ಎಸೆತ, 17 ಬೌಂಡರಿ, 3 ಸಿಕ್ಸರ್) ಹೊಡೆದಿದ್ದರಿಂದ 37.4 ಓವರ್ ನಲ್ಲಿ 258 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆ ಸಾಧಿಸಿದೆ.

  • 10 ವಿಕೆಟ್‍ಗಳ ಜಯದೊಂದಿಗೆ ಆಸೀಸ್ ಘರ್ಜನೆ- ತವರಲ್ಲಿ ಭಾರತಕ್ಕೆ  ಹೀನಾಯ ಸೋಲು

    10 ವಿಕೆಟ್‍ಗಳ ಜಯದೊಂದಿಗೆ ಆಸೀಸ್ ಘರ್ಜನೆ- ತವರಲ್ಲಿ ಭಾರತಕ್ಕೆ ಹೀನಾಯ ಸೋಲು

    – 74 ಎಸೆತಗಳು ಬಾಕಿ ಇರುವಂತೆ ಗೆದ್ದ ಆಸ್ಟ್ರೇಲಿಯಾ
    – 5 ಸಿಕ್ಸರ್, 30 ಬೌಂಡರಿ ಸಿಡಿಸಿದ ಫಿಂಚ್-ವಾರ್ನರ್ ಜೋಡಿ

    ಮುಂಬೈ: ಆರಂಭಿಕ ಬ್ಯಾಟ್ಸ್‌ಮನ್‌ ಆ್ಯರನ್ ಫಿಂಚ್ ಹಾಗೂ ಡೇವಿಡ್ ವಾರ್ನರ್ ಸ್ಫೋಟಕ ಬ್ಯಾಟಿಂಗ್‍ನಿಂದ ಆಸ್ಟ್ರೇಲಿಯಾ ತಂಡವು ಟೀಂ ಇಂಡಿಯಾ ವಿರುದ್ಧ 74 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿದೆ.

    ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ವಿರುದ್ಧ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಆ್ಯರನ್ ಫಿಂಚ್ 110 ರನ್ (114 ಎಸೆತ, 13 ಬೌಂಡರಿ, 2 ಸಿಕ್ಸರ್) ಹಾಗೂ ಡೇವಿಡ್ ವಾರ್ನರ್ 128 ರನ್ (112 ಎಸೆತ, 17 ಬೌಂಡರಿ, 3 ಸಿಕ್ಸರ್) ಹೊಡೆದಿದ್ದರಿಂದ 37.4 ಓವರ್ ನಲ್ಲಿ 258 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆ ಸಾಧಿಸಿದೆ.

    ಭಾರತ ನೀಡಿದ್ದ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆರಂಭದಿಂದಲೇ ಬಿರುಸಿನ ಹೊಡೆತಕ್ಕೆ ಮುಂದಾದ ಆ್ಯರನ್ ಫಿಂಚ್‍ಗೆ ಡೇವಿಡ್ ವಾರ್ನರ್ ಸಾಥ್ ನೀಡಿದರು. ಆದರೆ ಈ ಮಧ್ಯೆ ಸಿಕ್ಸರ್ ಹಾಗೂ ಬೌಂಡರಿ ಸಿಡಿಸಿದ ವಾರ್ನರ್ 44 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದರು. ಈ ಬೆನ್ನಲ್ಲೇ ಫಿಂಚ್ ಕೂಡ 52 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಈ ಜೋಡಿಯು ಇನ್ನಿಂಗ್ಸ್ ನ 20ನೇ ಓವರ್ ಮುಕ್ತಾಯಕ್ಕೆ 140 ರನ್ ಗಳಿಸುವಾಗಲೇ ಪಂದ್ಯ ಭಾರತದಿಂದ ಕೈ ಜಾರಿತ್ತು.

    ವಾರ್ನರ್ ಹಾಗೂ ಫಿಂಚ್ ಜೋಡಿಯನ್ನು ಮುರಿಯಲು ಭಾರತದ ಬೌಲರ್ ಗಳು ಪರದಾಡಿದರು. ಎಷ್ಟೇ ಪ್ರಯತ್ನಿಸಿದರೂ ಈ ಜೋಡಿ ವಿಕೆಟ್ ಕಾಯ್ದುಕೊಂಡು ಸಾಗಿತು. ವಾರ್ನರ್ ಸ್ಫೋಟಕ ಬ್ಯಾಟಿಂಗ್ ಹಾಗೂ ಫಿಂಚ್ ನಿಧಾನಗತಿಯ ಆಟದಿಂದ ಇನ್ನಿಂಗ್ಸ್ ನ 25ನೇ ಓವರ್ ಮುಕ್ತಾಯಕ್ಕೆ ಆಸ್ಟ್ರೇಲಿಯಾ 172 ರನ್ ಗಳಿಸಿತು. ಬಳಿಕ ಇನ್ನಿಂಗ್ಸ್ ನ 30ನೇ ಓವರ್ 2ನೇ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಡೇವಿಡ್ ವಾರ್ನರ್ 88ನೇ ಎಸೆತದಲ್ಲಿ ಶತಕ ಪೂರೈಸಿದರು. ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಇದು ಅವರ 18ನೇ ಶತಕವಾಗಿದೆ.

    ಡೇವಿಡ್ ವಾರ್ನರ್ ಶತಕ ಗಳಿಸಿದ ಬಳಿಕ ಭರ್ಜರಿ ಬ್ಯಾಟಿಂಗ್ ಮುಂದುವರಿಸಿದರು. ಜೊತೆಗೆ ಆ್ಯರನ್ ಫಿಂಚ್ 108 ಎಸೆತಗಳಲ್ಲಿ ಶತಕ ಹೊಡೆದರು.

    ವಾರ್ನರ್ 5 ಸಾವಿರ ರನ್:
    ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಅತಿ ವೇಗವಾಗಿ 5 ಸಾವಿರ ರನ್ ಗಳಿಸಿದ ಬ್ಯಾಟ್ಸ್‍ಮನ್‍ಗಳ ಪಟ್ಟಿಗೆ ಡೇವಿಡ್ ವಾರ್ನರ್ ಸೇರಿದ್ದಾರೆ. ಈ ದಾಖಲೆಯಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಹಸೀಮ್ ಆಮ್ಲಾ 101 ಇನ್ನಿಂಗ್ಸ್ ಗಳಲ್ಲಿ ಸಾಧನೆ ಮಾಡಿದ್ದಾರೆ. ಎರಡನೇ ಸ್ಥಾನದಲ್ಲಿರುವ ವೀವ್ ರಿಚರ್ಡ್ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದ್ದಾರೆ. ಈ ಆಟಗಾರರ ನಂತರದ ಸ್ಥಾನದಲ್ಲಿ ಡೇವಿಡ್ ವಾರ್ನರ್ ಇದ್ದು, ಅವರು 115 ಇನ್ನಿಂಗ್ಸ್ ಗಳಲ್ಲಿ ಅತಿ ವೇಗದಲ್ಲಿ 5,000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ.

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 49.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿತ್ತು. ಶಿಖರ್ ಧವನ್ 74 ರನ್ (91 ಎಸೆತ, 9 ಬೌಂಡರಿ, ಸಿಕ್ಸ್), ಕೆ.ಎಲ್.ರಾಹುಲ್ 47 ರನ್ (61 ಎಸೆತ, 4 ಬೌಂಡರಿ) ಹೊಡೆದಿದ್ದರು.

  • ಧವನ್, ರಾಹುಲ್, ಬೌಲರ್‌ಗಳ ಆಟ- ಸಾಧಾರಣ ಮೊತ್ತ ಪೇರಿಸಿದ ಭಾರತ

    ಧವನ್, ರಾಹುಲ್, ಬೌಲರ್‌ಗಳ ಆಟ- ಸಾಧಾರಣ ಮೊತ್ತ ಪೇರಿಸಿದ ಭಾರತ

    ಮುಂಬೈ: ಶಿಖರ್ ಧವನ್ ಅರ್ಧ ಶತಕ ಹಾಗೂ ಕೆ.ಎಲ್.ರಾಹುಲ್ ತಾಳ್ಮೆಯ ಆಟ, ಕೊನೆಗೆ ಬೌಲರ್‌ಗಳ ಸಹಾಯದಿಂದ ಭಾರತ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾಕ್ಕೆ 256 ರನ್‍ಗಳ ಗುರಿಯನ್ನು ನೀಡಿದೆ.

    ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ 49.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿತು. ಶಿಖರ್ ಧವನ್ 74 ರನ್ (91 ಎಸೆತ, 9 ಬೌಂಡರಿ, ಸಿಕ್ಸ್), ಕೆ.ಎಲ್.ರಾಹುಲ್ 47 ರನ್ (61 ಎಸೆತ, 4 ಬೌಂಡರಿ) ಹೊಡೆದರು.

    ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾದ ಬೌಲರ್‌ಗಳು ಭಾರತದ ಬ್ಯಾಟ್ಸ್‌ಮನ್‌ಗಳನ್ನು ಕಾಡಿದರು. ಇನ್ನಿಂಗ್ಸ್ ನ 5ನೇ ಓವರ್ ನಲ್ಲಿ ರೋಹಿತ್ ಶರ್ಮಾ (10 ರನ್, 15 ಎಸೆತ) ವಿಕೆಟ್ ಕಳೆದುಕೊಂಡ ಭಾರತ ಆಘಾತಕ್ಕೆ ಒಳಗಾಯಿತು. ಅಷ್ಟೇ ಅಲ್ಲದೆ 5ನೇ ಓವರ್ ಮುಕ್ತಾಯಕ್ಕೆ ಟೀಂ ಇಂಡಿಯಾ ಒಂದು ವಿಕೆಟ್ ನಷ್ಟಕ್ಕೆ ಕೇವಲ 19 ರನ್ ಗಳಿಸಿತ್ತು. ಬಳಿಕ ಮೈದಾನಕ್ಕಿಳಿದ ಕೆ.ಎಲ್.ರಾಹುಲ್ ವಿಕೆಟ್ ಕಾಯ್ದುಕೊಂಡು ಶಿಖರ್ ಧವನ್‍ಗೆ ಸಾಥ್ ನೀಡಿದರು.

    ಧವನ್ ಹಾಗೂ ರಾಹುಲ್ ಜೋಡಿಯು 2ನೇ ವಿಕೆಟ್‍ಗೆ 121 ರನ್‍ಗಳ ಜೊತೆಯಾಟದ ಕೊಡುಗೆ ನೀಡಿತು. ಇನ್ನಿಂಗ್ಸ್ ನ 28ನೇ ಓವರ್ ನಲ್ಲಿ ರಾಹುಲ್ ವಿಕೆಟ್ ಒಪ್ಪಿಸಿದರು. ಕೆ.ಎಲ್.ರಾಹುಲ್ 47 ರನ್ (61 ಎಸೆತ, 4 ಬೌಂಡರಿ) ಗಳಿಸಿ ಪೆವಿಲಿಯನ್‍ಗೆ ತೆರಳಿದರು. ಈ ಬೆನ್ನಲ್ಲೇ ಶಿಖರ್ ಧವನ್ 74 ರನ್ (91 ಎಸೆತ, 9 ಬೌಂಡರಿ, 1 ಸಿಕ್ಸ್) ಹೊಡೆದು ವಿಕೆಟ್ ಒಪ್ಪಿಸಿದರು. ಹೀಗಾಗಿ ಇನ್ನಿಂಗ್ಸ್ ನ 29ನೇ ಓವರ್ ಮುಕ್ತಾಯಕ್ಕೆ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 141 ರನ್ ಪೇರಿಸಲು ಶಕ್ತವಾಯಿತು.

    ತಂಡದ ಮೊತ್ತವನ್ನು ಏರಿಸುವ ಅಗತ್ಯವಿದ್ದ ಕಾರಣ ನಾಯಕ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಆದರೆ ಇನ್ನಿಂಗ್ಸ್ ನ 32ನೇ ಓವರ್ ನಲ್ಲಿ ಬೌಲರ್ ಆ್ಯಡಂ ಜಂಪಾ ಅವರಿಗೆ ನೇರ ಕ್ಯಾಚ್ ನೀಡಿದರು. ಹೀಗಾಗಿ ವಿರಾಟ್ 16 ರನ್ (14 ಎಸೆತ, ಸಿಕ್ಸ್) ಗಳಿಸಲು ಶಕ್ತರಾದರು. ಈ ಬೆನ್ನಲ್ಲೇ ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. ಒಂದು ಹಂತದಲ್ಲಿ 134 ರನ್‍ಗಳಿಗೆ ಒಂದು ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ಭಾರತ 164 ರನ್ ಆಗುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಬಳಿಕ ಮೈದಾನಕ್ಕಿಳಿದ ಸ್ಪಿನ್ನರ್ ರವೀಂದ್ರ ಜಡೇಜಾ ಯುವ ಆಟಗಾರ ರಿಷಭ್ ಪಂತ್‍ಗೆ ಸಾಥ್ ನೀಡಿದರು. ಆದರೆ ವಿಕೆಟ್ ಕಾಯ್ದುಕೊಳ್ಳು ಕಡೆಗೆ ಗಮನ ಹರಿಸಿದ ಜೋಡಿಯು ರನ್ ಗಳಿಸಲು ಪರದಾಡಿತು.

    ಇನ್ನಿಂಗ್ಸ್ ನ 36ನೇ ಓವರ್ ನ 5ನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿದ ರವೀಂದ್ರ ಜಡೇಜಾ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಆದರೆ ಆಸ್ಟ್ರೇಲಿಯಾದ ಬೌಲಿಂಗ್ ಎದುರು ಭಾತರದ ತಂಡದ ರನ್ ಏರಿಕೆ ನಿಧಾನಗತಿಯಲ್ಲಿ ಸಾಗಿತು. ಇನ್ನಿಂಗ್ಸ್ ನ 43ನೇ ಓವರ್ ಮೊದಲ ಎಸೆತದಲ್ಲೇ ಜಡೇಜಾ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಬೆನ್ನಲ್ಲೇ ರಿಷಭ್ ಪಂತ್ 28 ರನ್ ಗಳಿಸಿ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು.

    ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯದಲ್ಲಿ 8 ಎಸೆತಗಳಲ್ಲಿ 22 ರನ್ ಸಿಡಿಸಿ ಮಿಂಚಿದ್ದ ಟೀಂ ಇಂಡಿಯಾ ಆಲ್‍ರೌಂಡರ್ ಶಾರ್ದೂಲ್ ಠಾಕೂರ್ ಈ ಪಂದ್ಯದಲ್ಲಿ ನಿರಾಸೆ ಮೂಡಿಸಿದರು. 10 ಎಸೆತಗಳನ್ನು ಎದುರಿಸಿದ ಶಾರ್ದೂಲ್ 13 ರನ್ ಗಳಿಸಿ ಬಹುಬೇಗ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಕುಲದೀಪ್ ಯಾದವ್ 17 ರನ್ ಹಾಗೂ ಮೊಹಮ್ಮದ್ ಶಮಿ 10 ರನ್ ಹೊಡೆದು ಔಟಾದರು. ಮೈಕಲ್ ಸ್ಟ್ರಾಕ್ 3 ವಿಕೆಟ್ ಕಿತ್ತರೆ ಪ್ಯಾಟ್ ಕಮ್ಮಿನ್ಸ್ ಮತ್ತು ರಿಚರ್ಡ್‍ಸನ್ ತಲಾ ಎರಡು ವಿಕೆಟ್ ಪಡೆದರು.

  • ಇಂದಿನಿಂದ ಭಾರತ- ಆಸ್ಟ್ರೇಲಿಯಾ ಏಕದಿನ ಸರಣಿ

    ಇಂದಿನಿಂದ ಭಾರತ- ಆಸ್ಟ್ರೇಲಿಯಾ ಏಕದಿನ ಸರಣಿ

    ಮುಂಬೈ: ಸತತ ಟಿ-20 ಪಂದ್ಯಗಳ ಬಳಿಕ ಇಂದಿನಿಂದ ಭಾರತ ತಂಡ ಏಕದಿನ ಪಂದ್ಯವನ್ನು ಆಡಲಿದೆ. ಬಲಿಷ್ಠ ಆಸ್ಟ್ರೇಲಿಯಾ ತಂಡದ ಜೊತೆ 3 ಪಂದ್ಯಗಳ ಸರಣಿ ಇಂದಿನಿಂದ ಆರಂಭವಾಗಲಿದೆ. ಮೊದಲ ಪಂದ್ಯ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

    ಟಿ20 ವಿಶ್ವಕಪ್ ಗೆ ಕೆಲವು ತಿಂಗಳು ಮಾತ್ರ ಬಾಕಿ ಉಳಿದಿದೆ. ಹೀಗಿರುವಾಗ ಈ ಸರಣಿ ಭಾರತಕ್ಕೆ ಮಹತ್ವದಾಗಿದೆ. ಭಾರತದ ತಂಡಕ್ಕೆ ಈ ವರ್ಷದ ಮೊದಲ ಏಕದಿಂದ ಪಂದ್ಯ ಇದಾಗಿದ್ದು, ಗೆಲುವಿನ ಹುಮ್ಮಸ್ಸಿನಲ್ಲಿ ಕೊಹ್ಲಿ ಪಡೆ ಇದೆ.

    ಭಾರತ ತಂಡಕ್ಕೆ ರೋಹಿತ್ ಶರ್ಮಾ, ಶಿಖರ್ ಧವನ್ ವಾಪಸ್ ಆಗಿದ್ದು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಕೆ.ಎಲ್.ರಾಹುಲ್ ಭರ್ಜರಿ ಫಾರ್ಮ್ ನಲ್ಲಿದ್ದು 3ನೇ ಕ್ರಮಾಂಕದಲ್ಲಿ ಆಡೋ ಸಾಧ್ಯತೆ ಇದೆ. ನಾಯಕ ವಿರಾಟ್ ಕೊಹ್ಲಿ 4 ನೇ ಸ್ಥಾನದಲ್ಲಿ ಆಡಲಿದ್ದಾರೆ. ಉಳಿದಂತೆ ಶ್ರೇಯಸ್ ಅಯ್ಯರ್, ಕೇದಾರ್ ಜಾಧವ್ ಟೀಂ ಇಂಡಿಯಾದ ಬ್ಯಾಟಿಂಗ್ ಬಲ. ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಆಲ್ ರೌಂಡರ್ ಜಾಗವನ್ನು ತುಂಬಲಿದ್ದಾರೆ. ಶಮಿ, ಬುಮ್ರಾ, ಕುಲ್ದೀಪ್ ಯಾದವ್, ಭಾರತದ ಬೌಲಿಂಗ್ ಅಸ್ತ್ರವಾಗಿದ್ದಾರೆ.

    ಆಸ್ಟ್ರೇಲಿಯಾ ತಂಡ ಕೂಡಾ ಬಲಿಷ್ಠವಾಗಿದೆ. ಆರೋನ್ ಪಿಂಚ್ ತಂಡ ಮುನ್ನಡೆಸುತ್ತಿದ್ದಾರೆ. ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇರ್ ಬ್ಯಾಟಿಂಗ್ ಬಲ ಇದ್ದರೆ, ಪ್ಯಾಟ್ ಕಮ್ಮಿನ್ಸ್ ಅಲ್ ರೌಂಡರ್ ಜಾಗ ತುಂಬಲಿದ್ದಾರೆ. ಮಿಚೆಲ್ ಸ್ಟಾರ್ಕ್, ಹೇಜಲ್ ವುಡ್, ಆಡಂ ಜಂಪಾ ಬೌಲಿಂಗ್ ಪಡೆಯಲ್ಲಿದ್ದಾರೆ.

    2018ರ ಏಕದಿನ ಸರಣಿಯಲ್ಲಿ ಭಾರತ 3-2 ರಲ್ಲಿ ಆಸ್ಟ್ರೇಲಿಯಾಗೆ ಶರಣಾಗಿತ್ತು. ಹೀಗಾಗಿ ಸೇಡು ತೀರಿಸಿಕೊಳ್ಳೊಕೆ ಕೊಹ್ಲಿ ಪಡೆ ಸಿದ್ಧವಾಗಿದೆ. ಇದೂವರೆಗೂ ಭಾರತ-ಆಸ್ಟ್ರೇಲಿಯಾ 137 ಪಂದ್ಯಗಳನ್ನು ಆಡಿದ್ದು, ಭಾರತ 50 ಪಂದ್ಯಗಳಲ್ಲಿ ಗೆದ್ದಿದ್ದರೆ, ಆಸ್ಟ್ರೇಲಿಯಾ 77 ಪಂದ್ಯಗಳಲ್ಲಿ ಜಯಗಳಿಸಿದೆ. 10 ಪಂದ್ಯಗಳು ಡ್ರಾ ಆಗಿವೆ. ಐಸಿಸಿ ರ‍್ಯಾಂಕಿಂಗ್ ನಲ್ಲಿ ಭಾರತ 2 ನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 4 ನೇ ಸ್ಥಾನದಲ್ಲಿದೆ.

    ಮಧ್ಯಾಹ್ನ 1.30 ಕ್ಕೆ ಪಂದ್ಯಗಳು ಆರಂಭವಾಗಲಿದೆ. ವಾಂಖೇಡೆ ಕ್ರೀಡಾಂಗಣ ಬ್ಯಾಟಿಂಗ್ ಸ್ನೇಹಿಯಾಗಿದ್ದು, ರನ್ ಸುರಿಮಳೆ ಆಗೋ ಸಾಧ್ಯತೆ ಇದೆ.

    https://twitter.com/BCCI/status/1216673393015250944

    ಸಂಭಾವ್ಯ ಆಟಗಾರರ ಪಟ್ಟಿ
    ಭಾರತ ತಂಡ– ವಿರಾಟ್ ಕೊಹ್ಲಿ(ನಾಯಕ) ರೋಹಿತ್, ಧವನ್, ರಾಹುಲ್, ಜಡೇಜಾ, ಶ್ರೇಯಸ್ ಅಯ್ಯರ್, ಜಾಧವ್, ಕುಲ್ದೀಪ್ ಯಾದವ್, ಶಮಿ, ಬೂಮ್ರಾ, ಶಾರ್ದೂಲ್ ಠಾಕೂರ್.
    ಆಸ್ಟ್ರೇಲಿಯಾ ತಂಡ– ಆರೋನ್ ಪಿಂಚ್( ನಾಯಕ), ವಾರ್ನರ್, ಸ್ಟೀವ್ ಸ್ಮಿತ್, ಲಬುಶೇನ್, ಪೀಟರ್ ಹ್ಯಾಂಡ್ಸ್ ಕಂಬ್, ಅಲೆಕ್ಸ್ ಕಾರಿ, ಆಸ್ಟನ್ ಆಗರ್, ಪ್ಯಾಟ್ ಕಮ್ಮಿನ್ಸ್, ಜಂಪಾ,ಹೇಜಲ್ ವುಡ್, ಮಿಚೆಲ್ ಸ್ಟಾರ್ಕ್.

  • 2.45 ಕೋಟಿ ಗಡಿದಾಟಿದ ಶೇನ್ ವಾರ್ನ್ ‘ಬ್ಯಾಗಿ ಗ್ರೀನ್’ ಕ್ಯಾಪ್ ಬೆಲೆ

    2.45 ಕೋಟಿ ಗಡಿದಾಟಿದ ಶೇನ್ ವಾರ್ನ್ ‘ಬ್ಯಾಗಿ ಗ್ರೀನ್’ ಕ್ಯಾಪ್ ಬೆಲೆ

    – ಹರಾಜಿನ ಹಣ ಆಸ್ಟ್ರೇಲಿಯಾ ಕಾಡ್ಗಿಚ್ಚಿಗೆ ಸರ್ಮಪಣೆ

    ಕಾನ್ಬೆರಾ: ಆಸ್ಪ್ರೇಲಿಯಾದ ಕ್ರಿಕೆಟ್ ತಂಡದ ದಿಗ್ಗಜ ಸ್ಪಿನ್ನರ್ ಶೇನ್ ವಾರ್ನ್ `ಬ್ಯಾಗಿ ಗ್ರೀನ್’ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದು, ಈಗಾಗಲೇ ಈ ಕ್ಯಾಪ್ ಬೆಲೆ 5 ಲಕ್ಷ ಆಸ್ಪ್ರೇಲಿಯನ್ ಡಾಲರ್(ಅಂದಾಜು 2.45 ಕೋಟಿ ರೂ.) ಗಡಿದಾಟಿದೆ.

    ಬ್ಯಾಗಿ ಗ್ರೀನ್ ಕ್ಯಾಪ್ ಟೆಸ್ಟ್ ಗೆ ಪಾದಾರ್ಪಣೆ ಮಾಡುವಾಗ ನೀಡುವ ಕ್ಯಾಪ್ ಆಗಿದ್ದು, ಇದನ್ನು ವಾರ್ನ್ ಆಸ್ಟ್ರೇಲಿಯಾ ಕಾಡ್ಗಿಚ್ಚಿಗೆ ಹಣ ಸಂಗ್ರಹಿಸಲು ಹರಾಜಿಗಿಟ್ಟಿದ್ದಾರೆ. ಕಾಡ್ಗಿಚ್ಚಿನಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ಹಣ ಸಂಗ್ರಹಿಸುವ ಪ್ರಯತ್ನದಲ್ಲಿರುವ ವಾರ್ನ್ ತಮ್ಮ ಟೆಸ್ಟ್ ಕ್ಯಾಪ್ ಅನ್ನು ಹರಾಜಿಗಿಟ್ಟಿದ್ದಾರೆ. ಜನವರಿ 6ರಂದು ಆರಂಭಗೊಂಡ ಈ ಹರಾಜು ಪ್ರಕ್ರಿಯೆ ಜನವರಿ 10ರ ವರೆಗೂ ನಡೆಯಲಿದೆ. ಇದನ್ನೂ ಓದಿ: ಬೆತ್ತಲೆ ಫೋಟೋ ಮಾರಾಟ ಮಾಡಿ ಆಸ್ಟ್ರೇಲಿಯಾ ಕಾಡ್ಗಿಚ್ಚಿಗೆ 5 ಕೋಟಿ ಸಂಗ್ರಹಿಸಿದ ಯುವತಿ

    ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಧರಿಸಿದ ಬ್ಯಾಗಿ ಗ್ರೀನ್ ಕ್ಯಾಪ್‍ನ ಬೆಲೆ ಈಗಾಗಲೇ 5,00,000 ಆಸ್ಪ್ರೇಲಿಯನ್ ಡಾಲರ್(ಅಂದಾಜು 2.45 ಕೋಟಿ ರೂ.) ಗಡಿದಾಟಿದೆ. ವಾರ್ನ್ ಕ್ಯಾಪ್ ಖರೀದಿಸಲು ತಾ ಮುಂದು ನಾ ಮುಂದು ಎಂದು ಅಭಿಮಾನಿಗಳು ಹರಾಜಿನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜನವರಿ 10ರೊಳಗೆ ಈ ಮೊತ್ತ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದ್ದು, ವಾರ್ನ್ ಅವರ ಬ್ಯಾಗಿ ಗ್ರೀನ್ ಕ್ಯಾಪ್ ಯಾರ ಪಾಲಾಗಲಿದೆ ಎನ್ನುವುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ಆಸ್ಟ್ರೇಲಿಯಾದ 10 ಸಾವಿರ ಒಂಟೆಗಳ ಸಂಹಾರಕ್ಕೆ ಸಿದ್ಧತೆ

    ತನ್ನ ಬ್ಯಾಗಿ ಗ್ರೀನ್ ಕ್ಯಾಪ್ ಹರಾಜಿಗೆ ಭಾರೀ ಪ್ರತಿಕ್ರಿಯೆ ಸಿಗುತ್ತಿರುವ ಬಗ್ಗೆ ಸ್ವತಃ ವಾರ್ನ್ ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ. ಜೊತೆಗೆ ಭಾರೀ ಮೊತ್ತ ನೀಡಿ ಕ್ಯಾಪ್ ಖರೀದಿಸಲು ಆಸಕ್ತಿ ತೋರಿದವರಿಗೆ ಧನ್ಯವಾದ ತಿಳಿಸಿದ್ದಾರೆ. 2003ರಲ್ಲಿ ಕ್ರಿಕೆಟ್ ಆಟಗಾರ ಸರ್ ಡೊನಾಲ್ಡ್ ಬ್ರಾಡ್ಮನ್ ಅವರು ತಮ್ಮ ಟೆಸ್ಟ್ ಕ್ಯಾಪ್ ಅನ್ನು ಹರಾಜಿಗಿಟ್ಟಿದ್ದರು. ಆಗ 4,25,000 ಆಸ್ಪ್ರೇಲಿಯನ್ ಡಾಲರ್ ಗೆ ಕ್ಯಾಪ್ ಹರಾಜಾಗಿತ್ತು. ಈ ದಾಖಲೆಯನ್ನು ವಾರ್ನ್ ಅವರ ಬ್ಯಾಗಿ ಗ್ರೀನ್ ಕ್ಯಾಪ್ ಹರಾಜು ಹಿಂದಿಕ್ಕಿದೆ.

    ವಾರ್ನ್ ಅವರು ಆಸ್ಟ್ರೇಲಿಯಾಕ್ಕಾಗಿ 104 ಟೆಸ್ಟ್ ಮ್ಯಾಚ್‍ಗಳನ್ನು ಆಡಿದ್ದಾರೆ. ಅದರಲ್ಲಿ 708 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ. ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ವಾರ್ನ್ 2ನೇ ಸ್ಥಾನದಲ್ಲಿದ್ದಾರೆ.

    ಆಸ್ಪ್ರೇಲಿಯಾದಲ್ಲಿ ಉಂಟಾಗಿರುವ ಕಾಡ್ಗಿಚ್ಚು ವಿಶ್ವವನ್ನೇ ನಡುಗಿಸಿದ್ದು, ಆಸ್ಪ್ರೇಲಿಯಾದ ಟೆನ್ನಿಸ್ ಆಟಗಾರರು, ಕ್ರಿಕೆಟಿಗರು ಹಾಗೂ ಸೆಲೆಬ್ರಿಟಿಗಳು ಪರಿಹಾರ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಆಸ್ಟ್ರೇಲಿಯಾ ಕಾಡ್ಗಿಚ್ಚಿನ ರೌದ್ರನರ್ತನಕ್ಕೆ ಅಕ್ಷರಶಃ ನಲುಗಿಹೋಗಿದೆ. ಕಾಡ್ಗಿಚ್ಚಿಗೆ ಸುಮಾರು 5 ಮಿಲಿಯನ್ ಹೆಕ್ಟೇರ್ ಪ್ರದೇಶ ಸುಟ್ಟು ಭಸ್ಮವಾಗಿದೆ. 2 ಸಾವಿರಕ್ಕೂ ಹೆಚ್ಚು ಮನೆಗಳು ಕಾಡ್ಗಿಚ್ಚಿಗೆ ಆಹುತಿಯಾಗಿದೆ. ಈವರೆಗೆ ಸುಮಾರು 25ಕ್ಕೂ ಹೆಚ್ಚು ಮಂದಿ ಬೆಂಕಿ ಕೆನ್ನಾಲಿಗೆಗೆ ಬಲಿಯಾಗಿದ್ದಾರೆ. ಲಕ್ಷಗಟ್ಟಲೆ ಕಾಡು ಪ್ರಾಣಿಗಳು, ಪಕ್ಷಿಗಳು ಜೀವ ಕಳೆದುಕೊಂಡಿವೆ.

    ಸಾಮಾಜಿಕ ಜಾಲತಾಣಗಳಲ್ಲಿ `ಪ್ರೇ ಫಾರ್ ಆಸ್ಟ್ರೇಲಿಯಾ’ ಎಂದು ಹಲವು ಪೋಸ್ಟ್ ಗಳು ಹರಿದಾಡುತ್ತಿವೆ. ಅಲ್ಲದೆ ಆಸ್ಟ್ರೇಲಿಯಾ ಕಾಡ್ಗಿಚ್ಚಿನ ಫೋಟೋಗಳು, ಸುಟ್ಟು ಕರಕಲಾಗಿರುವ ಪ್ರಾಣಿಗಳ ಮೃತದೇಹಗಳ ಫೋಟೋಗಳು ಹಾಗೂ ಸಹಾಯಕ್ಕಾಗಿ ಜನರ ಕಾಲು ಹಿಡಿದ ಕಾಂಗರುಗಳು ಹಾಗೂ ಇತರೆ ಪ್ರಾಣಿಗಳ ಫೋಟೋಗಳು ವೈರಲ್ ಆಗುತ್ತಿದೆ.

    ಇತ್ತ ಆಸ್ಟ್ರೇಲಿಯಾದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನ ಕಾರಣದಿಂದ ಅಪಾರ ಪರಿಸರ ನಾಶವಾಗಿದ್ದು, ಸದ್ಯ ಆಸ್ಟ್ರೇಲಿಯಾದ 10 ಸಾವಿರ ಒಂಟೆಗಳನ್ನು ಹತ್ಯೆ ಮಾಡಲು ಅಲ್ಲಿನ ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

    ಐದು ದಿನಗಳ ಅವಧಿಯಲ್ಲಿ 10 ಸಾವಿರ ಒಂಟೆಗಳನ್ನು ಹತ್ಯೆ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು, ಬುಧವಾರದಿಂದಲೇ ಈ ಕಾರ್ಯಾಚರಣೆ ಬೇಕಾದ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಕಾಡ್ಗಿಚ್ಚಿನ ಪ್ರಭಾವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಒಂಟೆಗಳು ಬೆಂಕಿಯ ತೀವ್ರತೆಗೆ ಹೆಚ್ಚಿನ ಪ್ರಮಾಣದ ನೀರನ್ನು ಸೇವನೆ ಮಾಡುತ್ತಿರುವುದೇ ಅವುಗಳನ್ನು ಹತ್ಯೆ ಮಾಡಲು ಕಾರಣ ಎನ್ನಲಾಗಿದೆ. ಒಂಟೆಗಳನ್ನು ಹತ್ಯೆ ಮಾಡಲು ಅಲ್ಲಿನ ಸರ್ಕಾರ ಹೆಲಿಕಾಪ್ಟರ್ ಗಳನ್ನು ಒದಗಿಸುತ್ತಿದೆ.