ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಆಟೋ ಚಾಲಕರ ಸಂಘದ ರಾಯಭಾರಿ ಆಗಿ ನೇಮಕಗೊಂಡಿದ್ದಾರೆ. ಖಾಕಿ ಶರ್ಟ್ ಧರಿಸಿಕೊಂಡೇ ಆಟೋ ಚಲಾಯಿಸಿ ಖುಷಿ ಪಟ್ಟಿದ್ದಾರೆ.
ಬೆಂಗಳೂರಿನಿಂದ (Bengaluru) ನೂರಾರು ಆಟೋ ಚಾಲಕರು ಆರ್.ಆರ್ ನಗರದ ಅವರ ನಿವಾಸದ ಬಳಿ ಜಮಾಯಿಸಿ ರಚಿತಾರನ್ನ ಅಫಿಷಿಯಲ್ ಆಗಿ ಚಾಲಕರ ಸಂಘದ (Auto Drivers Association) ರಾಯಭಾರಿಯನ್ನಾಗಿ ಮಾಡಿಕೊಳ್ಳುವ ಕಾರ್ಯಕ್ರಮ ಮಾಡಿದ್ದಾರೆ. ಆಟೋ ಎದುರು ಆಟೋ ಚಾಲಕರ ವಸ್ತ್ರದಲ್ಲೇ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ ರಚಿತಾ ರಾಮ್. ಈ ವಿಚಾರವನ್ನ ತಮ್ಮ ಸೋಷಿಯಲ್ ಮೀಡಿಯಾ ಇನ್ಸ್ಟಾ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.
ʻಅತಿರಥ ಮಹಾರಥ ಸಾರಥಿಗಳಿಗೆ ನನ್ನ ಸಮಸ್ಕಾರ, ನನ್ನನ್ನು ಆಟೋ ಚಾಲಕರ ಸಂಘದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಿದ್ದಕ್ಕೆ ಧನ್ಯವಾದಗಳುʼ ಎಂದಿದ್ದಾರೆ ರಚಿತಾ. ಅನೇಕ ಮಹಿಳಾ ಆಟೋ ಚಾಲಕಿಯರೂ ಸೇರಿದಂತೆ ಆಟೋ ಚಾಲಕರು ರಚಿತಾ ಮನೆ ಮುಂದೆ ಭರ್ಜರಿಯಾಗಿ ಜಮಾಯಿಸಿದ್ದರು. ಆಟೋ ಚಾಲಕಿಯರ ಜೊತೆ ತಾವೂ ಖಾಕಿ ಶರ್ಟ್ ಧರಿಸಿಯೇ ನಿಂತಿದ್ದರು ರಚಿತಾ. ಇದೀಗ ರಚಿತಾ ರಾಮ್ ಆಟೋ ಚಾಲಕರ ಸಂಘದ ರಾಯಭಾರಿ.
ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ವರ್ಷದ ಕೊನೆಯಲ್ಲಿ ಆಟೋ ಚಾಲಕರು (Auto Drivers) ಶಾಕ್ ನೀಡಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 29 ರಿಂದ ಆಟೋ ಚಾಲಕರು ಆಟೋ ಸಂಚಾರ ಬಂದ್ ಮಾಡಲು ತೀರ್ಮಾನಿಸಿದ್ದು, ಆಟೋ ಓಡಾಟ ಬಹುತೇಕ ಸ್ತಬ್ಧವಾಗುವ ಸಾಧ್ಯತೆ ಇದೆ.
ಬರುವ ಹೊಸ ವರ್ಷವನ್ನು ಅದ್ಧೂರಿಯಿಂದ ಸ್ವಾಗತಿಸುವ ಖುಷಿಯಲ್ಲಿದ್ದ ಜನರಿಗೆ ಆಟೋ ಚಾಲಕರು ಶಾಕ್ ಕೊಟ್ಟಿದ್ದಾರೆ. ಸಾರಿಗೆ ಇಲಾಖೆ ರ್ಯಾಪಿಡೊ ಬೈಕ್ (Rapido Bike), ಟ್ಯಾಕ್ಸಿ ಬ್ಯಾನ್ ಮಾಡಬೇಕು, ಬೌನ್ಸ್ ಎಲೆಕ್ಟ್ರಿಕ್ ಬೈಕ್ಗೆ (Electric Bike) ನೀಡಿರುವ ಅನುಮತಿ ತೆಗೆದುಹಾಕಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗೆ (Protest) ಕರೆ ನೀಡಲಾಗಿದೆ. ಡಿ.29ಕ್ಕೆ ಸಂಪೂರ್ಣ ಆಟೋ ಓಡಾಟ ಸ್ಥಗಿತಗೊಳಿಸಲು ತೀರ್ಮಾನಿಸಿದ್ದು, ಬರೊಬ್ಬರಿ ನಗರದ 2 ಲಕ್ಷ ಆಟೋ ಚಾಲಕರು ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ: ಈ ದೇಶಕ್ಕಾಗಿ BJP ನಾಯಕನ ಮನೆ ನಾಯಿಯೂ ಸತ್ತಿಲ್ಲ – ಕೋಲಾಹಲ ಎಬ್ಬಿಸಿದ ಖರ್ಗೆ ಹೇಳಿಕೆ
ಇತ್ತೀಚಿಗಷ್ಟೇ ಸಾರಿಗೆ ಇಲಾಖೆ ರಾಜ್ಯದಲ್ಲಿ ಕೆಲ ಖಾಸಗಿ ಕಂಪನಿಗಳ ಎಲೆಕ್ಟ್ರಿಕ್ ಬೈಕ್ (Electric Bike), ಟ್ಯಾಕ್ಸಿಗೆ ಅವಕಾಶ ನೀಡಿತ್ತು. ಸದ್ಯ ಈ ವಿಚಾರ ಆಟೋ ಚಾಲಕರ ಕೆಂಗೆಣ್ಣಿಗೆ ಗುರಿಯಾಗಿದೆ. ಹಲವು ವರ್ಷಗಳಿಂದ ನಗರದ ಜನರಿಗೆ ಸೇವೆ ಸಲ್ಲಿಸುತ್ತಿರೋ ಆಟೋ ಚಾಲಕರಿಗೆ ಆಗಬಹುದಾದ ಪರಿಣಾಮಗಳ ಬಗ್ಗೆ ಚಿಂತಿಸದೇ ಏಕಾಏಕಿ ಬೈಕ್ ಟ್ಯಾಕ್ಸಿಗೆ ಸಾರಿಗೆ ಇಲಾಖೆ ಅವಕಾಶ ನೀಡಿರೋದಕ್ಕೆ ಚಾಲಕ ಸಂಘಟನೆಗಳು ಆಕ್ರೋಶಗೊಂಡಿವೆ. ಇದನ್ನೂ ಓದಿ: ನೂಪೂರ್ಗೆ ಬೆಂಬಲ ನೀಡಿದ್ದಕ್ಕೆ ತಬ್ಲೀಘಿ ಜಮಾತ್ನ ಮೂಲಭೂತವಾದಿಗಳಿಂದ ಔಷಧ ವ್ಯಾಪಾರಿಯ ಹತ್ಯೆ: ಎನ್ಐಎ
ಮೊದಲ ಹಂತದಲ್ಲಿ 100 ಎಲೆಕ್ಟ್ರಿಕ್ ಬೈಕ್ಗಳನ್ನ (E-Bike) ರಸ್ತೆಗಿಳಿಸಲು ನಿರ್ಧರಿಸಿರುವ ಬೌನ್ಸ್ ಕಂಪನಿ, ನಂತರ ಹಂತ-ಹಂತವಾಗಿ ಸಾವಿರ ಇ- ಬೈಕ್ಗಳನ್ನ ರಸ್ತೆಗಿಳಿಸಲು ನಿರ್ಧಾರ ಮಾಡಿದೆ. ಈ ಹಿಂದೆ ಬೌನ್ಸ್ ಕಂಪನಿ ಬೈಕ್ ಸೇವೆ ನೀಡುತ್ತಿತ್ತು. ಆದ್ರೆ ಕೊರೊನಾ ಸಮಯದಲ್ಲಿ ಬೈಕ್ ಸೇವೆಯನ್ನ ಸ್ಥಗಿತಗೊಳಿಸಿತ್ತು. ಈಗ ಮತ್ತೆ ಇ-ಬೈಕ್ ಸೇವೆ ನೀಡಲು ಮುಂದಾಗಿರೋದು ಚಾಲಕರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ ಈಗಾಗಲೇ ಕೊರೊನಾ ಸಂಕಷ್ಟದಿಂದ ಬೇಸತ್ತಿರುವ ಚಾಲಕರಿಗೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಗಾಯದ ಮೇಲೆ ಬರೆ ಎಳೆದಂತೆ ಆಗಲಿದೆ ಎಂದು ಸಾರಿಗೆ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.
ಇನ್ನೂ ಸಾರಿಗೆ ಇಲಾಖೆ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿ ಡಿ.29 ರಂದು ಬೆಂಗಳೂರಿನಾದ್ಯಂತ ಆಟೋ ಸಂಚಾರ ಸ್ಥಗಿತಗೊಳಿಸಲು ಆಟೋ ಚಾಲಕರು ಮುಂದಾಗಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ (ಮೆಜೆಸ್ಟಿಕ್) ದಿಂದ ಬೃಹತ್ ಆಟೋ ರ್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಆಟೋ ಮುಷ್ಕರಕ್ಕೆ ಈಗಾಗಲೇ 21 ಆಟೋ ಸಂಘಟನೆಗಳು ಸಾಥ್ ನೀಡಿವೆ. ರಾಜಧಾನಿಯ 2.10 ಲಕ್ಷ ಆಟೋ ಚಾಲಕರು ಮುಷ್ಕರಕ್ಕೆ ಬೆಂಬಲ ನೀಡಿದ್ದು 29ರ ಗುರುವಾರದಂದು ರಾಜಧಾನಿಯಲ್ಲಿ ಸಂಪೂರ್ಣ ಆಟೋ ಸಂಚಾರ ಸ್ತಬ್ಧವಾಗಲಿದೆ ಎಂದು ಆದರ್ಶ ಅಟೋ ಚಾಲಕರ ಸಂಘದ ಪ್ರಮುಖ ಮಂಜುನಾಥ್ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಓಲಾ (Ola), ಉಬರ್ (Uber) ಆಟೋ ಸ್ಥಗಿತಕ್ಕೆ ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ಕೊಟ್ಟಿದೆ. ಇನ್ನೊಂದೆಡೆ ಓಲಾ, ಉಬರ್ ಆಟೋಗಳ ಮೂಲಕ ಲೂಟಿ ಮಾಡುತ್ತಿರುವುದು ಪ್ರಯಾಣಿಕರ ಆಕ್ರೋಶಕ್ಕೂ ಕಾರಣವಾಗಿದೆ. ಈ ಮಧ್ಯೆ ಆ್ಯಪ್ ಆಧಾರಿತ ಆಟೋ ಇಲ್ಲದೇ ಹೋದ್ರೇ ಮುಂದೇನು ಅನ್ನೋದಕ್ಕೆ ಬೆಂಗಳೂರಿನ ಆಟೋ ಚಾಲಕರೇ (Auto Drivers) ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಸರ್ಕಾರಕ್ಕೂ ಈ ಕುರಿತು ಮನವಿ ಮಾಡಿದ್ದಾರೆ.
ಪ್ರೀಪೇಯ್ಡ್ ಕೌಂಟರ್ ಪರಿಹಾರ:
ಓಲಾ, ಉಬರ್ ಆಟೋ ಕಿರಿಕಿರಿ ತಾರಕಕ್ಕೇರಿದೆ. ಈ ಮಧ್ಯೆ ಸಾರಿಗೆ ಇಲಾಖೆ ದಿನಕ್ಕೊಂದು ಗೊಂದಲದ ಹೇಳಿಕೆ ಕೊಟ್ಟು ಜನರನ್ನು ದಾರಿತಪ್ಪಿಸುತ್ತಿದೆ. ಈಗ ಇಂದಿನಿಂದ ಓಲಾ, ಉಬರ್ ಆಟೋ (Auto Rickshaw) ಸಂಪೂರ್ಣ ಸ್ಥಗಿತವಾಗಬೇಕು. ಜನ ಇದನ್ನು ಬಳಕೆ ಮಾಡಬಾರದು ಅಂತಾ ಹೇಳಿದ್ದಾರೆ. ಹೀಗಾಗಿ ಆಟೋ ಚಾಲಕರು ಸರ್ಕಾರವೇ ಒಂದು ಆ್ಯಪ್ ನಿರ್ವಹಣೆ ಮಾಡಲಿ ಅದು ಸಾಧ್ಯವಾಗದೇ ಹೋದರೆ ಬೆಂಗಳೂರಿನಲ್ಲಿ ಹೆಚ್ಚು ಜನದಟ್ಟಣೆ ಇರುವ ಮಾಲ್, ಮೆಟ್ರೋ ಸ್ಟೇಷನ್ (Metro Stations), ಶಾಪಿಂಗ್ ಹಾಟ್ ಸ್ಪಾಟ್ ಬಸ್ ಸ್ಟ್ಯಾಂಡ್ ಕಡೆ ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರಿಪೇಯ್ಡ್ ಆಟೋ ಸೆಂಟರ್ (Prepaid Auto Rickshaw Counter) ತೆರೆಯಲು ಸರ್ಕಾರಕ್ಕೆ (Government Of Karnataka) ಮನವಿ ಮಾಡಿದ್ದಾರೆ.
ಖುದ್ದು ಚಾಲಕರೇ ಪತ್ರ ಬರೆದಿದ್ದು ಸರ್ಕಾರ, ಪೊಲೀಸ್ ಇಲಾಖೆ (Police Department) ಇದಕ್ಕೆ ಅವಕಾಶ ಕೊಟ್ಟರೆ ನಗರದಲ್ಲಿ ಸಾರಿಗೆ ಇಲಾಖೆ ನಿಗದಿಪಡಿಸಿದ ದರದಲ್ಲಿಯೇ ಆಟೋ ಓಡಿಸಬಹುದು. ಪ್ರಯಾಣಿಕರಿಗೂ ಇದರಿಂದ ಹೊರೆ ಕಡಿಮೆಯಾಗಲಿದೆ ಅಂತಾ ಹೇಳಿದ್ದಾರೆ. ಇದನ್ನೂ ಓದಿ: ಡಿಜೆ ಹಾಕಿ ಹಿಂದೂ ವಿರೋಧಿ ಘೋಷಣೆ- ಮಚ್ಚು, ಲಾಂಗ್, ತಲ್ವಾರ್ ಬೀಸಿ ಪುಂಡಾಟ
ಪ್ರಯಾಣಿಕರೊಂದಿಗಿನ ವರ್ತನೆ ಬಗ್ಗೆ ಟ್ರೈನಿಂಗ್:
ಇನ್ನು ಆಟೋ ಚಾಲಕರು ಪ್ರಯಾಣಿಕರ ಜೊತೆ ಯಾವ ರೀತಿ ವರ್ತಿಸಬೇಕು? ಸಾರಿಗೆ ಇಲಾಖೆ ಫಿಕ್ಸ್ ಮಾಡಿದ ದರದಲ್ಲಿ ಆಟೋ ಓಡಿಸಬೇಕು, ಪ್ರಯಾಣಿಕರು ಕರೆದಾಗ ನಿರಾಕರಣೆ ಮಾಡಬಾರದು, ಹಿಗ್ಗಾಮುಗ್ಗ ದರ ಹೇಳಬಾರದು ಹೀಗೆ ಆಟೋ ಚಾಲಕರ ಸಂಘದಿಂದ ಈ ಬಗ್ಗೆ ಎಲ್ಲಾ ಚಾಲಕರಿಗೆ ಕಾರ್ಯಾಗಾರ ನಡೆಸಲು ನಿರ್ಧಾರ ಮಾಡಲಾಗಿದೆ.
ಕೆಲವೊಮ್ಮೆ ಆಟೋ ಚಾಲಕರ ವರ್ತನೆಯಿಂದಲೇ ಇಂತಹ ಆ್ಯಪ್ಗಳು (Applications) ಜನರಿಗೆ ಹತ್ತಿರವಾಗಿದೆ. ಹೀಗಾಗಿ ಕಡಿಮೆ ದುಡ್ಡಿನಲ್ಲಿ ಜನರಿಗೆ ಆಟೋ ಸೇವೆ ಸಿಗಬೇಕಾದ್ರೇ ಆಟೋ ಚಾಲಕರೂ ಬದಲಾಗಬೇಕು. ಆದ್ದರಿಂದ ಅರಿವು ಮೂಡಿಸುವ ಕೆಲ್ಸ ಮಾಡ್ತೀವಿ ಎಂದು ಆಟೋ ಚಾಲಕರ ಸಂಘದವರು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಓಲಾ, ಊಬರ್ ಆಟೋ ಬಂದ್- ಸರ್ಕಾರದಿಂದಲೇ ಆಟೋ ದರ ನಿಗದಿ
ಒಲಾ ಉಬರ್ ದುಪ್ಪಟ್ಟು ಲೂಟಿಗೆ ಸಾರಿಗೆ ಇಲಾಖೆ ಮೂಗುದಾರ ಹಾಕುತ್ತಾ ಇಲ್ವಾ ಅನ್ನೋದು ನೋಡಬೇಕು. ಆದ್ರೇ ಒಗ್ಗಟ್ಟಿಗೆ ಹೆಸರಾಗಿರುವ ಆಟೋ ಚಾಲಕರು ಮನಸು ಮಾಡಿದರೆ ಈ ಲೂಟಿಕೋರರನ್ನು ಮಟ್ಟ ಹಾಕಿ ತಾವೇ ಪ್ರಯಾಣಿಕರಿಗೆ ಹೊರೆಯಾಗದಂತೆ ಸೇವೆ ನೀಡಬಹುದು ಅನ್ನೋದನ್ನು ಮೊದಲು ಅರ್ಥಮಾಡಿಕೊಳ್ಳಬೇಕು.
Live Tv
[brid partner=56869869 player=32851 video=960834 autoplay=true]