Tag: Avane Srimannarayana

  • ಬುಲೆಟ್ ಬೈಕ್ ಮೇಲೆ ಬಂದು ಗುಡ್‍ನ್ಯೂಸ್ ಕೊಟ್ಟ ಶ್ರೀಮನ್ನಾರಾಯಣ

    ಬುಲೆಟ್ ಬೈಕ್ ಮೇಲೆ ಬಂದು ಗುಡ್‍ನ್ಯೂಸ್ ಕೊಟ್ಟ ಶ್ರೀಮನ್ನಾರಾಯಣ

    ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ `ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಮೂಲಕ ತೆರೆಯ ಮೇಲೆ ಬರಲು ಸಿದ್ಧಗೊಂಡಿದ್ದಾರೆ. ಬಹು ದಿನಗಳ ಬಳಿಕ ತಮ್ಮ ನೆಚ್ಚಿನ ನಟನನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿಯೂ ಅಧಿಕೃತವಾಗಿ ತಿಳಿದಿರಲಿಲ್ಲ. ಇದೀಗ ಮೊದಲ ಬಾರಿಗೆ `ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ.

    ರಿಲೀಸ್ ಆಗಿರುವ ಪೋಸ್ಟರಿನಲ್ಲಿ ರಕ್ಷಿತ್ ಶೆಟ್ಟಿ ಬುಲೆಟ್ ಬೈಕ್ ಮೇಲೆ ಕುಳಿತುಕೊಂಡು ಒಂದು ಕೈಯಲ್ಲಿ ಬೈಕ್ ಹ್ಯಾಂಡಲ್ ಹಿಡಿದುಕೊಂಡು, ಮತ್ತೊಂದು ಕೈಯಲ್ಲಿ ಗನ್ ಹಿಡಿದ ಶೂಟ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಅವರ ಹಿಂದೆ ಖಳನಾಯಕರು ಕುದುರೆಯನ್ನೇರಿ ಬರುತ್ತಿದ್ದಾರೆ. ಸಿನಿಮಾದ ಫಸ್ಟ ಲುಕ್ ಜೊತೆಗೆ ಇದೇ ತಿಂಗಳ 28 ರಂದು ಟ್ರೈಲರ್ ಬಿಡುಗಡೆ ಮಾಡುವುದಾಗಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

    ಪೋಸ್ಟರ್ ಬಿಡುಗಡೆಗೆ ಒಂದು ಗಂಟೆ ಮೊದಲು ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದರು. “ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದಿದೆ. ಇಂದು ಸಂಜೆ 6 ಗಂಟೆಗೆ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಫಸ್ಟ್ ಲುಕ್ ಅನ್ನು ಮತ್ತು ಟ್ರೈಲರ್ ದಿನಾಂಕದ ಜೊತೆಗೆ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ ನಮ್ಮ ಮೇಲಿರಲಿ” ಎಂದು ಬರೆದುಕೊಂಡಿದ್ದರು.

    ಚಿತ್ರಕ್ಕೆ ಎಚ್.ಕೆ ಪ್ರಕಾಶ್ ಹಾಗೂ ಪುಷ್ಕರ್ ಮಲ್ಲಿಕಾರ್ಜುನಯ್ಯ ಜೊತೆಯಾಗಿ ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ರಕ್ಷಿತ್‍ಗೆ ನಟಿ ಶಾನ್ವಿ ಶ್ರೀವತ್ಸವ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಇದೇ ಮೊದಲ ಬಾರಿಗೆ ರಕ್ಷಿತ್ ಶೆಟ್ಟಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

  • ಫೇಸ್‍ಬುಕ್ ಲೈವ್‍ನಲ್ಲಿ ಅವನೇ ಶ್ರೀಮನ್ನಾರಾಯಣ

    ಫೇಸ್‍ಬುಕ್ ಲೈವ್‍ನಲ್ಲಿ ಅವನೇ ಶ್ರೀಮನ್ನಾರಾಯಣ

    ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇದೀಗ ಶ್ರೀಮನ್ನಾರಾಯಣನಾಗಿ ತೆರೆಯ ಮೇಲೆ ಬರಲು ಸಿದ್ಧಗೊಂಡಿದ್ದಾರೆ. ಬಹುದಿನಗಳ ಬಳಿಕ ಫೇಸ್‍ಬುಕ್ ಲೈವ್ ಬಂದಿದ್ದ ರಕ್ಷಿತ್ ಶೆಟ್ಟಿ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಕುರಿತ ವಿಷಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡರು.

    ಸದ್ಯ ಸಿನಿಮಾದ ಡಬ್ಬಿಂಗ್, ಬ್ಯಾಕ್‍ಗ್ರೌಂಡ್ ಮ್ಯೂಸಿಕ್, ಗ್ರಾಫಿಕ್ಸ್ ಕೆಲಸ ನಡೆಯುತ್ತಿದೆ. ಅಕ್ಟೋಬರ್ ಕೊನೆಯ ವಾರ ಅಥವಾ ನವೆಂಬರ್ ಮೊದಲ ವಾರದಲ್ಲಿ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಶೀಘ್ರದಲ್ಲಿಯೇ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ. ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ಕೆಲಸ ಮಾಡುತ್ತಿದೆ. ಕಳೆದ ಮೂರು ವರ್ಷಗಳಿಂದ ಒಂದೇ ಸಿನಿಮಾದ ಮೇಲೆ ಕೆಲಸ ಮಾಡುತ್ತಿದ್ದರಿಂದ ಅಭಿಮಾನಿಗಳು ಚಿತ್ರ ಯಾವಾಗ ರಿಲೀಸ್ ಎಂಬ ಪ್ರಶ್ನೆ ಕೇಳುತ್ತಿರುತ್ತಾರೆ. ನನಗೂ ನಿಮ್ಮೊಂದಿಗೆ ಕುಳಿತು ಸಿನಿಮಾ ನೋಡಬೇಕೆಂಬ ಆಸೆ ಇದೆ ಎಂದು ರಕ್ಷಿತ್ ಶೆಟ್ಟಿ ತಿಳಿಸಿದರು.

    ಟ್ರೈಲರ್ ನೋಡಿದ ಮೇಲೆ ಅವನೇ ಶ್ರೀಮನ್ನಾರಾಯಣ ಸಿನಿಮಾದ ಬಗ್ಗೆ ಸ್ಪಷ್ಟತೆ ಸಿಗಲಿದೆ. ಉಳಿದವರು ಕಂಡಂತೆ ಸಿನಿಮಾದಂತೆ ಒಳ್ಳೆಯ ಕಥೆಯನ್ನು ಅವನೇ ಶ್ರೀಮನ್ನಾರಾಯಣ ಹೊಂದಿದೆ. ಚಿತ್ರ ಯಶಸ್ವಿಯಾಗಲಿದೆ ಎಂಬ ನಂಬಿಕೆಯೂ ನನಗಿದೆ. ಅವನೇ ಶ್ರೀಮನ್ನಾರಾಯಾಣ ಚಿತ್ರ ಐದು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಹಾಗಾಗಿ ಎಲ್ಲ ಭಾಷೆಯ ವಿತರಕರೊಂದಿಗೆ ಮಾತನಾಡಿ ಟ್ರೈಲರ್ ರಿಲೀಸ್ ಮಾಡುತ್ತೇವೆ ಎಂದರು.

    ಸಿನಿಮಾ ಬಿಡುಗಡೆಯ ದಿನಾಂಕ ನಿಗದಿಯಾದ ಕೂಡಲೇ ಎಲ್ಲ ಐದು ಭಾಷೆಗಳ ಟ್ರೈಲರ್, ಹಾಡುಗಳನ್ನು ಬಿಡುಗಡೆ ಮಾಡುತ್ತವೆ. ಸಿನಿಮಾ ಬಿಡುಗಡೆಯ 45 ದಿನ ಮೊದಲು ಟ್ರೈಲರ್ ನಿಮ್ಮ ಮುಂದೆ ಬರಲಿದೆ. ಟ್ರೈಲರ್ ನಿಮ್ಮಲ್ಲರಿಗೂ ಖಂಡಿತ ಇಷ್ಟವಾಗುತ್ತದೆ. ಪುಣ್ಯಕೋಟಿ ಮತ್ತು ಚಾರ್ಲಿ ಸಿನಿಮಾದ ಕೆಲಸ ಸಹ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಈ ಎರಡು ಸಿನಿಮಾಗಳ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.

    https://www.facebook.com/therakshitshetty/videos/349356869274878/

  • ತಡ ಮಾಡುತ್ತಲೇ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಶ್ರೀಮನ್ನಾರಾಯಣ!

    ತಡ ಮಾಡುತ್ತಲೇ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಶ್ರೀಮನ್ನಾರಾಯಣ!

    ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗುತ್ತಿದೆ. ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ಟೀಸರ್ ಮೂಲಕ ಇದರ ಕಥೆಯ ಮಜಾ ಏನೆಂಬುದು ಎಲ್ಲರಿಗೂ ತಿಳಿದು ಹೋಗಿದೆ. ಆದರೆ ಈ ಚಿತ್ರ ಸುದೀರ್ಘ ಕಾಲವನ್ನು ತೆಗೆದುಕೊಂಡು ಚಿತ್ರೀಕರಣಗೊಂಡಿದೆ, ತಡವಾಗಿದೆ ಎಂಬೆಲ್ಲ ಕೊರಗು ಅಭಿಮಾನಿಗಳಲ್ಲಿ ಇದ್ದೇ ಇದೆ. ಆದರೆ ಹೀಗೆ ತಡ ಮಾಡಿಯೇ ಶ್ರೀಮನ್ನಾರಾಯಣ ಸಾರ್ವಕಾಲಿಕ ದಾಖಲೆಯೊಂದರ ರೂವಾರಿಯಾಗಿದ್ದಾನೆ!

    ಅಷ್ಟಕ್ಕೂ ಅವನೇ ಶ್ರೀಮನ್ನಾರಾಯಣ ಚಿತ್ರ ಇಷ್ಟೊಂದು ತಡವಾಗಿ ರೂಪುಗೊಳ್ಳಲು ಕಾರಣವೇನು ಅಂತೊಂದು ಪ್ರಶ್ನೆ ಹಾಗೇ ಉಳಿದು ಹೋಗಿತ್ತು. ಇದಕ್ಕೆ ಉತ್ತರ ಹುಡುಕುತ್ತಾ ಹೋದರೆ ಮಜವಾದ ಉತ್ತರಗಳೇ ಎದುರುಗೊಳ್ಳುತ್ತವೆ!

    ಅಂದಹಾಗೆ ಅವನೇ ಶ್ರೀಮನ್ನಾರಾಯಣ ಚಿತ್ರದ ಕಥೆ ಎಂಬತ್ತರ ದಶಕದಲ್ಲಿ ನಡೆಯುವಂಥಾದ್ದೆಂಬ ಸುಳಿವು ಈಗಾಗಲೇ ಸಿಕ್ಕಿದೆ. ಈ ಕಾಲ ಘಟ್ಟವನ್ನು ಮರು ಸೃಷ್ಟಿಸೋದೇನು ಸಲೀಸಿನ ಕೆಲಸವಲ್ಲ. ಅದನ್ನು ಮತ್ತೆ ಸೃಷ್ಟಿಸೋದಕ್ಕಾಗಿ ಚಿತ್ರತಂಡ ಭಾರೀ ರಿಸ್ಕು ತೆಗೆದುಕೊಂಡಿದೆ. ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಎರಡ್ಮೂರು ಸೆಟ್ ಹಾಕಿದರೆ ಅದೇ ಹೆಚ್ಚು. ಆದರೆ ಅವನೇ ಶ್ರೀಮನ್ನಾರಾಯಣ ಚಿತ್ರದ ಬಹುಪಾಲು ಚಿತ್ರೀಕರಣ ಸೆಟ್‍ನಲ್ಲಿಯೇ ನಡೆದಿದೆ. ಇದಕ್ಕೆಂದೇ ಬರೋಬ್ಬರಿ ಇಪ್ಪತ್ತು ಸೆಟ್‍ಗಳನ್ನು ಹಾಕಲಾಗಿತ್ತಂತೆ!

    ಹೀಗೆ ಸೆಟ್ ಹಾಕಿ ಚಿತ್ರೀಕರಿಸಿರೋದರಿಂದಲೇ ಇಡೀ ಚಿತ್ರ ರಿಚ್ ಆಗಿ ಮೂಡಿ ಬಂದಿದೆಯಂತೆ. ಈ ಚಿತ್ರ ಕನ್ನಡ ಮಾತ್ರವಲ್ಲದೇ ತಮಿಳು, ಹಿಂದಿ, ತೆಲುಗು, ಮಲೆಯಾಳಂನಲ್ಲಿಯೂ ಬಿಡುಗಡೆಯಾಗಲಿದೆ. ಇನ್ನುಳಿದಂತೆ ಈ ಚಿತ್ರಕ್ಕೆ ಅತೀ ಹೆಚ್ಚು ದಿನ ಚಿತ್ರೀಕರಣಗೊಂಡ ಚಿತ್ರವೆಂಬ ಗರಿಯೂ ಮೂಡಿಕೊಂಡಿದೆ. ಅವನೇ ಶ್ರೀಮನ್ನಾರಾಯಣಕ್ಕಾಗಿ ಇನ್ನೂರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಎಂಭತ್ತರ ದಶಕವನ್ನು ಮತ್ತೆ ಸೃಷ್ಟಿಸೋ ಕಾಯಕ ಈ ಇನ್ನೂರು ದಿನವೂ ನೆರವೇರಿದೆ. ಹೀಗೆ ತಡ ಮಾಡಿಕೊಂಡೇ ಈ ಚಿತ್ರ ದಾಖಲೆಯ ರೂವಾರಿಯಾಗಿ ಬಿಟ್ಟಿದೆ.

  • ‘ಅವನೇ ಶ್ರೀಮನ್ನಾರಾಯಣ’ ಟೀಸರ್ ರಿಲೀಸ್

    ‘ಅವನೇ ಶ್ರೀಮನ್ನಾರಾಯಣ’ ಟೀಸರ್ ರಿಲೀಸ್

    ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರ ಸ್ಯಾಂಡಲ್‍ವುಡ್ ಮತ್ತೊಂದು ಹೈವೋಲ್ಟೇಜ್ ಸಿನಿಮಾವಾಗಿದೆ. ಇದೀಗ ಈ ಚಿತ್ರದ ಮಗದೊಂದು ಟೀಸರ್ ಬಿಡುಗಡೆಯಾಗಿದೆ.

    ರಕ್ಷಿತ್ ಹುಟ್ಟುಹಬ್ಬದ ಪ್ರಯುಕ್ತ ಗುರುವಾರವೇ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ಟೀಸರ್ ನ ಕ್ವಾಲಿಟಿ ಪ್ರೇಕ್ಷಕರನ್ನು ಸೆಳೆಯುತ್ತಿದ್ದು, ‘ರಾಕ್ಷಸನ ಎದುರಿಸಬೇಕಾದರೆ, ಮೊದಲು ನಮ್ಮೊಳಗಿನ ರಾಕ್ಷಸನಿಂದ ಮುಕ್ತವಾಗಬೇಕು” ಎಂಬ ಡೈಲಾಗ್ ಅಭಿಮಾನಿಗಳಿಗೆ ಇಷ್ಟವಾಗಿದೆ.

    ಕೆಜಿಎಫ್ ಚಿತ್ರದಂತೆ 1980ರ ದಶಕದ ಬ್ಯಾಕ್‍ಡ್ರಾಪ್‍ನಲ್ಲಿ ಸಾಗುವ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾಗೆ ಸಾವಿರಾರು ಜನ ಕಲಾವಿದರು ಸಾಥ್ ನೀಡಿದ್ದಾರೆ. ಬಿಡುಗಡೆಯಾದ ಒಂದೇ ದಿನದಲ್ಲಿ ಯೂಟ್ಯೂಬ್‍ನಲ್ಲಿ ನಂಬರ್ 1 ಟ್ರೆಂಡಿಂಗ್ ಆಗಿದೆ.

    ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಿಂದಿ ಸೇರಿದಂತೆ ಪಂಚ ಭಾಷೆಯಲ್ಲಿ ಬೆಳ್ಳಿತೆರೆಗೆ ಬರಲಿದೆ. ಈ ಚಿತ್ರಕ್ಕೆ ಎಚ್.ಕೆ ಪ್ರಕಾಶ್ ಹಾಗೂ ಪುಷ್ಕರ್ ಮಲ್ಲಿಕಾರ್ಜುನಯ್ಯ ಕೋಟಿ ಕೋಟಿ ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ನಟಿ ಶಾನ್ವಿ ಶ್ರೀವತ್ಸವ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿ ರಕ್ಷಿತ್ ಶೆಟ್ಟಿ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ಗುರುವಾರ ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬವಿತ್ತು. ಹೀಗಾಗಿ ಹಲವು ತಿಂಗಳ ಬಳಿಕ ಸಾಮಾಜಿಕ ಜಾಲತಾಣಕ್ಕೆ ಮರಳಿದ್ದು, ಅವನೇ ಶ್ರೀಮನ್ನಾರಾಯಣ ಚಿತ್ರದ ಇಂಟ್ರಸ್ಟಿಂಗ್ ಪೋಸ್ಟರ್ ಅನ್ನು ಟ್ವಿಟ್ಟರಿನಲ್ಲಿ ಪ್ರೊಫೈಲ್ ಫೋಟೋವನ್ನಾಗಿ ಹಾಕಿದ್ದರು.

  • ರಕ್ಷಿತ್ ಶೆಟ್ಟಿಗೆ 36ರ ಹುಟ್ಟುಹಬ್ಬದ ಸಂಭ್ರಮ- ಅಭಿಮಾನಿಗಳಿಗೆ ಸಿಂಪಲ್ ಸ್ಟಾರ್‌ನಿಂದ ಗಿಫ್ಟ್

    ರಕ್ಷಿತ್ ಶೆಟ್ಟಿಗೆ 36ರ ಹುಟ್ಟುಹಬ್ಬದ ಸಂಭ್ರಮ- ಅಭಿಮಾನಿಗಳಿಗೆ ಸಿಂಪಲ್ ಸ್ಟಾರ್‌ನಿಂದ ಗಿಫ್ಟ್

    ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇಂದು ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

    ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಂಜೆ ‘ಅವನೇ ಶ್ರೀಮನ್ನಾರಾಯಣ’ ಚಿತ್ರತಂಡ ಟೀಸರ್ ಬಿಡುಗಡೆ ಆಗಲಿದೆ.

    ಸದ್ಯ ರಕ್ಷಿತ್ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ‘ಅವನೇ ಶ್ರೀಮನ್ನಾರಾಯಣ’ ಹಾಗೂ ‘777 ಚಾರ್ಲಿ’ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಈ ಎರಡು ಚಿತ್ರದ ಪೋಸ್ಟರ್ ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ. ಈಗ ಅವರು ಅವನೇ ಶ್ರೀಮನ್ನಾರಾಯಣ ಚಿತ್ರದ ಟೀಸರ್ ಗಾಗಿ ಕಾಯುತ್ತಿದ್ದಾರೆ.

    ಹಲವು ತಿಂಗಳ ಬಳಿಕ ಇಂದು ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣಕ್ಕೆ ಮರಳಿದ್ದು ಅವನೇ ಶ್ರೀಮನ್ನಾರಾಯಣ ಚಿತ್ರದ ಇಂಟ್ರಸ್ಟಿಂಗ್ ಪೋಸ್ಟರ್ ವೊಂದು ಟ್ವಿಟ್ಟರಿನಲ್ಲಿ ಪ್ರೋಫೈಲ್ ಫೋಟೋವನ್ನಾಗಿ ಹಾಕಿದ್ದಾರೆ. ಈ ಪೋಸ್ಟರ್ ನಲ್ಲಿ ರಕ್ಷಿತ್ ಪೊಲೀಸ್ ಸಮವಸ್ತ್ರದಲ್ಲಿ ಗನ್ ಹಿಡಿದುಕೊಂಡು ನಿಂತಿದ್ದಾರೆ.

    ಅವನೇ ಶ್ರೀಮನ್ನಾರಾಯಣ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಈ ಚಿತ್ರದ ಚಿತ್ರೀಕರಣವೇ ಬರೋಬ್ಬರಿ 600 ದಿನ ನಡೆದಿದೆ. ಈ ಚಿತ್ರವನ್ನು ಸಚಿನ್ ರವಿ ನಿರ್ದೇಶನ ಮಾಡುತ್ತಿದ್ದು, ರಕ್ಷಿತ್ ಅವರಿಗೆ ನಾಯಕಿಯಾಗಿ ಶಾನ್ವಿ ಶ್ರೀವತ್ಸ್ ನಟಿಸಿದ್ದಾರೆ.

    ರಕ್ಷಿತ್ ನಟಿಸುತ್ತಿರುವ 777 ಚಾರ್ಲಿ ಚಿತ್ರದ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಈ ಪೋಸ್ಟರ್ ನಲ್ಲಿ ರಾಯಲ್ ಎನ್‍ಫೀಲ್ಡ್ ನಲ್ಲಿ ನಾಯಿ ಜೊತೆ ಹೋಗುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಎರಡು ಪೋಸ್ಟರ್ ಈ ಮೊದಲು ಬಿಡುಗಡೆಯಾಗಿದೆ. ಈ ಚಿತ್ರವನ್ನು ಕಿರಣ್ ರಾಜ್ ನಿರ್ದೇಶನ ಮಾಡುತ್ತಿದ್ದಾರೆ.

    ರಕ್ಷಿತ್ ಶೆಟ್ಟಿ ಕೆಲ ದಿನಗಳ ಹಿಂದೆ ಹೇಳಿದಂತೆಯೇ ಸಾಮಾಜಿಕ ಜಾಲತಾಣಕ್ಕೆ ರೀ- ಎಂಟ್ರಿ ನೀಡುವ ಮೂಲಕ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ನೀಡಿದ್ದಾರೆ.

  • ಶ್ರೀಮನ್ನಾರಾಯಣನಿಗೆ ಆಯ್ತು ಮುಹೂರ್ತ- ಚಿತ್ರ ಯಾಕೆ ಲೇಟಾಯ್ತು ಅಂತಾ ಹೇಳಿದ್ರು ರಕ್ಷಿತ್ ಶೆಟ್ಟಿ

    ಶ್ರೀಮನ್ನಾರಾಯಣನಿಗೆ ಆಯ್ತು ಮುಹೂರ್ತ- ಚಿತ್ರ ಯಾಕೆ ಲೇಟಾಯ್ತು ಅಂತಾ ಹೇಳಿದ್ರು ರಕ್ಷಿತ್ ಶೆಟ್ಟಿ

    ಬೆಂಗಳೂರು: ಕಿರಿಕ್ ಪಾರ್ಟಿಯ ಹೀರೋ ರಕ್ಷಿತ್ ಶೆಟ್ಟಿ ಈಗ ನಾರಾಯಣನ ಅವತಾರದಲ್ಲಿ ರಂಜಿಸೋಕ್ಕೆ ರೆಡಿಯಾಗ್ತಿದ್ದಾರೆ. ಬನಶಂಕರಿಯ ಧರ್ಮಗಿರಿ ದೇವಸ್ಥಾನದಲ್ಲಿ `ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಮುಹೂರ್ತ ನೆರೆವೇರಿಸಲಾಯ್ತು.

    ಅವನೇ ಶ್ರೀಮನ್ನಾರಾಯಣ ಪಿರಿಯಾಡಿಕಲ್ ಸಿನಿಮಾ ಆಗಿದ್ದು 80 ರ ದಶಕದ ಪೊಲೀಸ್ ಆಫೀಸರ್ ಪಾತ್ರದಲ್ಲಿ ರಕ್ಷಿತ್ ಕಾಣಿಸಿಕೊಳ್ಳಲಿದ್ದಾರೆ. ಒಂದು ವರ್ಷ ಸ್ಕ್ರಿಪ್ಟ್ ಕೆಲಸ ಮಾಡಿದ್ದರಿಂದ ಚಿತ್ರದ ಮುಹೂರ್ತ ಲೇಟ್ ಆಯ್ತು. ಬಹುತೇಕ ಸೆಟ್ ನಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದ್ದು ಉತ್ತರ ಕರ್ನಾಟಕದ ಬಾಗಲಕೋಟೆಯಲ್ಲಿಯೂ ಚಿತ್ರೀಕರಣ ನಡೆಯಲಿದೆ ಅಂತಾ ರಕ್ಷಿತ್ ಶೆಟ್ಟಿ ತಿಳಿಸಿದ್ರು.

    ಸಚಿನ್ ಆ್ಯಕ್ಷನ್ ಕಟ್ ಹೇಳ್ತಿರೋ ಚೊಚ್ಚಲ ಸಿನಿಮಾ ಇದಾಗಿದ್ದು ರಕ್ಷಿತ್ ಜೊತೆ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ಸಾಥ್ ಕೊಡ್ತಿದ್ದಾರೆ. ಪೂಜೆ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಿ ಫಿಲಂ ಟೀಮ್‍ಗೆ ಗುಡ್‍ಲಕ್ ಅಂತ ವಿಶ್ ಮಾಡಿದ್ರು.