Tag: Avantika Shetty

  • ‘ನನಗೆ ಅವಕಾಶ ಕೊಡಿ’ ಎಂದು ಪೋಸ್ಟ್ ಹಾಕಿದ ರಂಗಿತರಂಗ ಖ್ಯಾತಿಯ ನಟಿ

    ‘ನನಗೆ ಅವಕಾಶ ಕೊಡಿ’ ಎಂದು ಪೋಸ್ಟ್ ಹಾಕಿದ ರಂಗಿತರಂಗ ಖ್ಯಾತಿಯ ನಟಿ

    ನ್ನಡ ಸಿನಿಮಾ ರಂಗದಲ್ಲಿ ಸಂಚಲನವನ್ನೇ ಸೃಷ್ಟಿ ಮಾಡಿದ್ದ ‘ರಂಗಿತರಂಗ’ (Rangitaranga) ಚಿತ್ರವು ಕೇವಲ ಕನ್ನಡದಲ್ಲಿ ಮಾತ್ರವಲ್ಲ, ಆನಂತರ ದೇಶ ವಿದೇಶಗಳಲ್ಲೂ ತನ್ನ ಗೆಲುವಿನ ಪತಾಕೆಯನ್ನು ಹಾರಿಸಿತ್ತು. ರಾತ್ರೋರಾತ್ರಿ ಅನೂಪ್ ಭಂಡಾರಿ (Anoop Bhandari)ಎಂಬ ನಿರ್ದೇಶಕ, ನಿರೂಪ ಭಂಡಾರಿ ಎನ್ನುವ ನಟ ಹಾಗೂ  ಆವಂತಿಕಾ ಶೆಟ್ಟಿ (Avantika Shetty) ಎನ್ನುವ ನಟಿ ಫೇಮಸ್ ಆಗಿ ಬಿಟ್ಟರು. ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಈ ಚಿತ್ರದ ಬಗ್ಗೆ ಮಾತನಾಡಿದರು. ಆನಂತರ ಅನೂಪ್ ನಡೆದದ್ದು ಹಾದಿ ಆಯಿತು.

    ರಂಗಿತರಂಗದ ನಂತರ ಅನೂಪ್ ‘ರಾಜರಥ’ ಚಿತ್ರ ಮಾಡಿದರೂ, ಅದು ಹೇಳಿಕೊಳ್ಳುವಂತಹ ಗೆಲುವನ್ನು ತಂದುಕೊಡಲಿಲ್ಲ. ಆದರೂ, ಅವರು ಛಲ ಬಿಡದೇ ಭಾರೀ ಬಜೆಟ್ ಚಿತ್ರಕ್ಕೆ ಕೈ ಹಾಕಿ ಗೆಲುವು ಕಂಡರು. ಆದರೆ, ಆವಂತಿಕಾ ಶೆಟ್ಟಿಗೆ ಮಾತ್ರ ನಂತರದ ಸಿನಿಮಾಗಳಲ್ಲಿ ಅಷ್ಟೇನೂ ಯಶಸ್ಸು ಮತ್ತು ಬೇಡಿಕೆ ಬರಲಿಲ್ಲ. ಎರಡ್ಮೂರು ಚಿತ್ರಗಳನ್ನು ಮಾಡಿ, ತೆರೆಮರೆಗೆ ಸರಿದುಬಿಟ್ಟರು ಆವಂತಿಕಾ. ಈಗ ಮತ್ತೆ ಸಿನಿಮಾ ಮಾಡುವ ಆಸೆಯನ್ನು ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಹೊಸ ಫೋಟೋಶೂಟ್‌ನಲ್ಲಿ ಮಹಾಲಕ್ಷ್ಮಿಯಂತೆ ಕಂಗೊಳಿಸಿದ ನಟಿ ಅಮೂಲ್ಯ

    ಕುಟುಂಬದ ಸಮಸ್ಯೆಯ ಕಾರಣದಿಂದಾಗಿ ಆವಂತಿಕಾ ಸಿನಿಮಾ ರಂಗದಿಂದಲೇ ದೂರ ಸರಿದರಂತೆ. ನೆಮ್ಮದಿಗಾಗಿ ಆಧ್ಯಾತ್ಮದತ್ತ ಒಲವು ಬೆಳೆಸಿಕೊಂಡರಂತೆ. ಕೋವಿಡ್ ಮತ್ತಿತರ ಕಾರಣದಿಂದಾಗಿ ಬರೋಬ್ಬರಿ ಐದು ವರ್ಷಗಳಿಂದ ಅವರು ಯಾವುದೇ ಸಿನಿಮಾ ಮಾಡಿಲ್ಲ. ಮುಂಬೈನಲ್ಲೇ ಬೀಡುಬಿಟ್ಟಿದ್ದರಿಂದ ಕನ್ನಡ ಮಾತನಾಡಲು ಕೂಡ ಕಷ್ಟವಾಗುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಆವಂತಿಕಾ, ‘ನನಗೆ ಸಿನಿಮಾದಲ್ಲಿ ನಟಿಸುವ ಆಸಕ್ತಿಯಿದೆ. ಯಾರಾದರೂ ಅವಕಾಶ ಕೊಡಬೇಕು ಅಷ್ಟೆ. ಅವಕಾಶ ಕೊಟ್ಟರೆ ಖಂಡಿತವಾಗಿಯೂ ನಟಿಸುತ್ತೇನೆ. ಈ ಮೂಲಕ ಅವಕಾಶಕ್ಕಾಗಿ ಕೇಳುತ್ತಿದ್ದೇನೆ’ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ತಮ್ಮ ವೈಯಕ್ತಿಕ ಬದುಕಿನ ಬಗ್ಗೆಯೂ ಅವರು ಕೆಲ ವಿಷಯಗಳನ್ನು ಹಂಚಿಕೊಂಡಿದ್ದಾರೆ.

  • ಅರ್ಜುನ್ ಸರ್ಜಾ ವಿರುದ್ಧ ನಾನು ಯಾವುದೇ ಹೇಳಿಕೆ ನೀಡಿಲ್ಲ: ಆವಂತಿಕಾ ಶೆಟ್ಟಿ

    ಅರ್ಜುನ್ ಸರ್ಜಾ ವಿರುದ್ಧ ನಾನು ಯಾವುದೇ ಹೇಳಿಕೆ ನೀಡಿಲ್ಲ: ಆವಂತಿಕಾ ಶೆಟ್ಟಿ

    ಬೆಂಗಳೂರು: ಶೃತಿ ಹರಿಹರನ್ ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ನಾನು ನಟ ಅರ್ಜುನ್ ಸರ್ಜಾ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ ಎಂದು ರಂಗಿತರಂಗ ನಟಿ ಆವಂತಿಕಾ ಶೆಟ್ಟಿ ಹೇಳಿದ್ದಾರೆ.

    ಈ ವೇಳೆ ನಾನು ಮೀಟೂ ಅಭಿಯಾನದ ಪರವಾಗಿ ಇದ್ದೇನೆ ಎಂದು ನಟಿ ಆವಂತಿಕಾ ಶೆಟ್ಟಿ ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟಪಡಿಸಿದ್ದಾರೆ.

    ನಾನು ಮಾಧ್ಯಮಗಳ ಜೊತೆ ಮಾತನಾಡಿದ್ದನ್ನು ಕೆಲ ಚಾನೆಲ್‍ಗಳಲ್ಲಿ ತಪ್ಪಾಗಿ ತೋರಿಸಲಾಗಿದೆ. ನಾನು ಮೀಟೂ ಪರವಾಗಿದ್ದೇನೆ ಎಂಬುದನ್ನು ನಾನು ಎಲ್ಲರನ್ನೂ ಅರ್ಥ ಮಾಡಿಸಬೇಕು. ನನ್ನ ಹಾಗೂ ಅರ್ಜುನ್ ಸರ್ಜಾ ಅವರ ನಡುವೆ ಉತ್ತಮ ಸಂಬಂಧವಿದೆ. ಅರ್ಜುನ್ ಸರ್ಜಾ ಅವರು ನನಗೆ ಸಾಕಷ್ಟು ಗೌರವ ನೀಡಿದ್ದಾರೆ. ಹೀಗಾಗಿ ನಾನು ಅರ್ಜು ಸರ್ಜಾ ಅವರ ವಿರುದ್ಧವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.

    ನಟಿ ಶೃತಿ ಹರಿಹರನ್, ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿದ್ದರು. ಈ ವೇಳೆ ಸಾಕಷ್ಟು ನಟಿಯರು ಶೃತಿ ಪರವಾಗಿ ನಿಂತರು. ಇನ್ನೂ ಕೆಲವು ಕಲಾವಿದರು ಅರ್ಜುನ್ ಪರವಾಗಿ ನಿಂತಿದ್ದರು. ಆವಂತಿಕಾ ಮೀಟೂ ಬಗ್ಗೆ ಮಾತನಾಡಿದ್ದರು. ಮೀಟೂ ಪರವಾಗಿ ಮಾತನಾಡಿದ್ದನ್ನು ಕೆಲ ಮಾಧ್ಯಮಗಳು ತಪ್ಪಾಗಿ ಅರ್ಥೈಸಿ ಅರ್ಜುನ್ ಸರ್ಜಾ ವಿರುದ್ಧ ಆವಂತಿಕಾ ಮಾತನಾಡಿದ್ದಾರೆ ಎಂದು ವರದಿ ಪ್ರಸಾರವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

    ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

    ಬೆಂಗಳೂರು: ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ. ನಮಗೆ ಇದರಿಂದ ತುಂಬ ನೋವಾಗಿದೆ ಇನ್ಮುಂದೆ ಹೀಗೆ ಆಗುವುದಿಲ್ಲ. ನಾವು ಕನ್ನಡಿಗರಿಗೆ ನೋಯಿಸಬೇಕು ಅಂತ ಆ ರೀತಿ ಮಾತನಾಡಲಿಲ್ಲ ಎಂದು ಹೇಳಿ ರಾಜರಥ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ.

    ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರ್ಯಾಪಿಡ್ ರಶ್ಮಿ ಅವರಲ್ಲಿ ಆ ವಿಡೀಯೊವನ್ನ ಡಿಲೀಟ್ ಮಾಡಲು ತಿಳಿಸಿದ್ದೇವೆ. ಯಾವುದೋ ಸಮಯದಲ್ಲಿ ಹೀಗೆ ಆಗಿ ಹೋಗಿದೆ ಎಂದು ಹೇಳಿದರು. ಈ ವೇಳೆ ರಾಜರಥ ಚಿತ್ರ ತಂಡ ಎದ್ದುನಿಂತು ಕನ್ನಡಿಗರ ಕ್ಷಮೆ ಯಾಚಿಸಿತು.

    ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ ರಾ ಗೋವಿಂದ್ ಮಾತನಾಡಿ, ನಿನ್ನೆ ಸಂಜೆಯಿಂದ ದೂರವಾಣಿ ಕರೆಗಳು ಬರುತ್ತಿದೆ. ಸಾರ್ವಜನಿಕವಾಗಿ ತಪ್ಪು ನಡೆದಿದೆ ನೀವೇ ಕ್ಷಮೆ ಕೇಳಬೇಕು ಅಂತ ಹೇಳಿದಾಗ ಚಿತ್ರ ತಂಡದವರು ಬಂದಿದ್ದಾರೆ. ಚಿತ್ರ ರಿಲೀಸ್ ಆಗುವ ಮೊದಲೇ ಈ ರೀತಿ ಮಾತನಾಡಿದ್ದಾರೆ. ಕೆಲವರು ಕೇಳುವ ಪ್ರಶ್ನೆಗಳು ಉದ್ರೇಕಗೊಳಿಸುತ್ತದೆ. ಎಂತಹವರಿಗಾದರು ಸಿಟ್ಟು ತರಿಸುತ್ತೆ ಎಂದು ಹೇಳಿದರು.

    ಮಾಡಿದ ಸಿನಿಮಾಗಳೆಲ್ಲಾ ಹಿಟ್ ಆಗಲೇ ಬೇಕು ಅಂತ ಇಲ್ಲ. ಕೆಟ್ಟ ಪದವನ್ನು ಯಾರು ಬಳಸಿರಲಿಲ್ಲ. ರಾಜ್ ಕುಮಾರ್ ಆಗಿರಲಿ, ವಿಷ್ಣುವರ್ಧನ್, ಅಂಬರೀಶ್ ಯಾರೂ ಸಹ ಕೆಟ್ಟದಾಗಿ ಮಾತನಾಡಿರಲಿಲ್ಲ ಆದರೆ ಇಂದು ಪರಿಸ್ಥಿತಿ ಹಾಗಿಲ್ಲ. ಚಿತ್ರತಂಡ ಪೂರ್ತಿ ಕನ್ನಡದವರು, ಕನ್ನಡಿಗರ ಬಗ್ಗೆ ಈ ರೀತಿಯ ಮಾತು ಸರಿಯಲ್ಲ ಎಂದರು.

    ಭಂಡಾರಿ ಸಹೋದರರು ಹೇಳಿದ್ದು ಏನು?
    ಸಂದರ್ಶನದ ನಡುವೆ ರ್ಯಾಪಿಡ್ ರಶ್ಮಿ “ರಾಜರಥ ಸಿನಿಮಾ ನೋಡದ ಪ್ರೇಕ್ಷಕರು______” ಎಂದು ಬಿಟ್ಟ ಸ್ಥಳವನ್ನು ತುಂಬಿಸುವಂತೆ ಕೇಳುತ್ತಾರೆ. ಮೊದಲು ಉತ್ತರಿಸಿದ ಅನೂಪ್ ಭಂಡಾರಿ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ನನ್ ಮಕ್ಳು” ಎಂದು ಹೇಳುತ್ತಾರೆ. ನಂತರ ಆ ಪ್ರಶ್ನೆ ನಟಿ ಅವಾಂತಿಕಾ ಶೆಟ್ಟಿಗೆ ಹೋಗುತ್ತದೆ. ಅವರೂ ಸಹ ಅನೂಪ್ ಅವರ ಉತ್ತರವನ್ನೇ ಮತ್ತೆ ಹೇಳುತ್ತಾರೆ. ಕೊನೆಗೆ ನಿರೂಪ್ ಭಂಡಾರಿ ಕೂಡ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ಮಾತ್ರವಲ್ಲ ಲೋಫರ್ ನನ್ ಮಕ್ಳು” ಎಂದು ಹೇಳಿದ್ದಾರೆ.

    ಫೇಸ್‍ಬುಕ್ ನಲ್ಲಿ ಕ್ಷಮೆ:
    ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಸಂದರ್ಶನಕ್ಕೂ ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೇ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ. ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

  • ರಾಜರಥ ನೋಡದೇ ಇರೋರು ಕಚಡಾ ನನ್ಮಕ್ಳು – ಕ್ಷಮೆ ಕೇಳಿದ ಅನೂಪ್ ಭಂಡಾರಿ

    ರಾಜರಥ ನೋಡದೇ ಇರೋರು ಕಚಡಾ ನನ್ಮಕ್ಳು – ಕ್ಷಮೆ ಕೇಳಿದ ಅನೂಪ್ ಭಂಡಾರಿ

    ಬೆಂಗಳೂರು: ರಾಜರಥ ನೋಡದೇ ಇರೋರು ಕಚಡಾ ನನ್ಮಕ್ಳು ಎಂದಿದ್ದ ನಿರ್ದೇಶಕ ಅನೂಪ್ ಭಂಡಾರಿ ಈಗ ಕ್ಷಮೆ ಕೇಳಿದ್ದಾರೆ.

    ರಾಜರಥ ಸಿನಿಮಾದ ಸಂಬಂಧ ಮಹಿಳಾ ರೇಡಿಯೋ ಜಾಕಿಯೊಬ್ಬರು ನಡೆಸಿದ ಕಾರ್ಯಕ್ರಮದಲ್ಲಿ ನಿರ್ದೇಶಕ ಅನೂಪ್ ಭಂಡಾರಿ, ನಾಯಕ ನಿರೂಪ್ ಭಂಡಾರಿ ಮತ್ತು ಚಿತ್ರದ ನಾಯಕಿ ಅವಾಂತಿಕಾ ಶೆಟ್ಟಿ ಭಾಗಿಯಾಗಿದ್ದರು. ಈ ವೇಳೆ ರಾಜರಥ ಸಿನಿಮಾ ನೋಡದವರು “ಕಚಡ ನನ್ ಮಕ್ಳು” ಎಂದು ಮೂವರು ಹೇಳಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ.

    ರಂಗಿತರಂಗ ಸಿನಿಮಾ ನಿರ್ದೇಶಿಸಿದ ಬಳಿಕ ಅನೂಪ್ ಭಂಡಾರಿ ರಾಜರಥವನ್ನು ನಿರ್ಮಿಸಿದ್ದರು. ಈ ಸಿನಿಮಾ ಎರಡು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ಆದರೆ ‘ರಂಗಿತರಂಗ’ ರೇಂಜ್ ಗೆ ಈ ಸಿನಿಮಾ ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಈಗ ‘ರಾಜರಥ’ ಸಿನಿಮಾ ನೋಡದ ಪ್ರೇಕ್ಷಕರಿಗೆ ಅಣ್ಣ-ತಮ್ಮ ಇಬ್ಬರೂ “ಕಚಡ ನನ್ ಮಕ್ಳು” ಎಂದು ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ ಟೀಕೆ ವ್ಯಕ್ತವಾಗಿದೆ.

    ಭಂಡಾರಿ ಸಹೋದರರು ಹೇಳಿದ್ದು ಏನು?
    ಸಂದರ್ಶನದ ನಡುವೆ ನಿರೂಪಕಿ “ರಾಜರಥ ಸಿನಿಮಾ ನೋಡದ ಪ್ರೇಕ್ಷಕರು______” ಎಂದು ಬಿಟ್ಟ ಸ್ಥಳವನ್ನು ತುಂಬಿಸುವಂತೆ ಕೇಳುತ್ತಾರೆ. ಮೊದಲು ಉತ್ತರಿಸಿದ ಅನೂಪ್ ಭಂಡಾರಿ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ನನ್ ಮಕ್ಳು” ಎಂದು ಹೇಳುತ್ತಾರೆ. ನಂತರ ಆ ಪ್ರಶ್ನೆ ನಟಿ ಅವಾಂತಿಕಾ ಶೆಟ್ಟಿಗೆ ಹೋಗುತ್ತದೆ. ಅವರೂ ಸಹ ಅನೂಪ್ ಅವರ ಉತ್ತರವನ್ನೇ ಮತ್ತೆ ಹೇಳುತ್ತಾರೆ. ಕೊನೆಗೆ ನಿರೂಪ್ ಭಂಡಾರಿ ಕೂಡ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ಮಾತ್ರವಲ್ಲ ಲೋಫರ್ ನನ್ ಮಕ್ಳು” ಎಂದು ಹೇಳಿದ್ದಾರೆ.

    ಕ್ಷಮೆ ಕೇಳಿದ ಅನೂಪ್ ಭಂಡಾರಿ:
    ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಸಂದರ್ಶನಕ್ಕು ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೆ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ. ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

    https://twitter.com/anupsbhandari/status/980852507319574528

  • ಬೆಳ್ಳಿತೆರೆ ಮೇಲೆ ರಾಜರಥ ದರ್ಬಾರ್ ಶುರು

    ಬೆಳ್ಳಿತೆರೆ ಮೇಲೆ ರಾಜರಥ ದರ್ಬಾರ್ ಶುರು

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರ ರಾಜರಥ ಇಂದು ಬಿಡುಗಡೆಗೊಂಡಿದೆ. ರಂಗಿತರಂಗ ಎಂಬ ಸೂಪರ್ ಹಿಟ್ ಸಿನಿಮಾ ನೀಡಿದ ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿಬಂದಿರುವ ರಾಜರಾಥ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ.

    ವಿಭಿನ್ನ ಕಥಾ ಹಂದರವುಳ್ಳ ರಂಗಿತರಂಗ ಸಿನಿಮಾ ನೀಡಿದ ಬಳಿಕ ಅನೂಪ್ ಭಂಡಾರಿ ರಾಜರಥದಲ್ಲಿ ಸಾಗುತ್ತಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಸಿನಿಮಾ ಮೂಡಿದ್ದು, ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದ್ದಾರೆ. ನಿರೂಪ್ ಗೆ ಜೊತೆಯಾಗಿ ನಟಿ ಆವಂತಿಕಾ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ತಮಿಳು ನಟ ಆರ್ಯ, ರವಿಶಂಕರ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

    ರಾಜರಥ ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದ ಗಾಂಧಿನಗರದಲ್ಲಿ ಭರವಸೆಯನ್ನು ಮೂಡಿಸಿದೆ. ಕಾಲೇಜು, ಸ್ವೀಟ್ ಲವ್ ಸ್ಟೋರಿಯನ್ನು ಸಿನಿಮಾ ಹೊಂದಿದೆ ಎಂಬುದನ್ನು ಹಾಡುಗಳು ಈಗಾಗಲೇ ಹೇಳ್ತಿವೆ. ಆದ್ರೆ ಚಿತ್ರದ ಸಂಪೂರ್ಣ ಕಥಾ ಹಂದರವನ್ನು ಎಲ್ಲಿಯೂ ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಈ ಹಿಂದೆ ಅನೂಪ್ ಭಂಡಾರಿ ರಂಗಿತರಂಗ ಸಿನಿಮಾದಲ್ಲಿ ನೋಡುಗರನ್ನು ಕೊನೆಯವರೆಗೂ ಹಿಡಿದಿಟ್ಟುಕೊಂಡಿದ್ದರು.

    ಸಿನಿಮಾದ ಕಥೆ ಕಣ್ಣಮುಂದೆಯೇ ಬರುವಂತೆ ಚಿತ್ರೀಕರಿಸಲಾಗಿದೆ. ಜನರು ಏನು ನೋಡಬೇಕೆಂದು ಥಿಯೇಟರ್ ಗೆ ಬರುತ್ತಾರೆ ಅದಕ್ಕಿಂತ ಹೆಚ್ಚಿನದನ್ನು ರಾಜರಥ ನೀಡಲಿದೆ. ಒಂದು ಸಿನಿಮಾ ಯಶಸ್ಸಿನ ಬಳಿಕ ಅಂತಹ ಚಿತ್ರವನ್ನು ಮಾಡಬೇಕೆಂದು ಮಾಡಿಲ್ಲ. ಇದು ರಂಗಿತರಂಗ ಚಿತ್ರಕ್ಕಿಂತ ವಿಭಿನ್ನವಾದ ಹೊಸತನದ ಕಥೆಯನ್ನು ಹೊಂದಿದೆ. ಈ ಹಿಂದೆ ಸರಳ ಹುಡಗನಾಗಿ ಕಾಣಿಸಿದ್ದ ನಿರೂಪ್ ಈ ಬಾರಿ ತರಲೆ ಕಾಲೇಜು ಹುಡಗನಾಗಿ ವಿಭಿನ್ನ ಲುಕ್ ನಲ್ಲಿ ಮಿಂಚಿದ್ದಾರೆ ಅಂತಾ ಚಿತ್ರತಂಡ ತಿಳಿಸಿದೆ.

    ಅಜನೀಶ್ ಲೋಕನಾಥ್ ಅವರ ಹಿನ್ನೆಲೆ ಸಂಗೀತವನ್ನು ಚಿತ್ರ ಹೊಂದಿದೆ. ಜಾನಿ ಮಾಸ್ಟರ್ ಮತ್ತು ಬೋಸ್ಕೋ ಕೇಸರ್ ಕ್ಯಾಮೆರಾ ಕಾರ್ಯ ನಿರ್ವಹಿಸಿದ್ದಾರೆ. ಮೊದಲ ಟ್ರೇಲರ್ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹಿನ್ನೆಲೆ ಧ್ವನಿಯಲ್ಲಿ ಬಿಡುಗಡೆಯಾಗಿತ್ತು. ಸಿನಿಮಾ ಕನ್ನಡ ಮತ್ತು ತೆಲಗುನಲ್ಲಿಯೂ ಮೂಡಿಬಂದಿದೆ.

    ಕರ್ನಾಟಕದ 150 ಥಿಯೇಟರ್‍ಗಳಲ್ಲಿ ಹಾಗೂ ಆಂಧ್ರಪ್ರದೇಶದ 200 ಥಿಯೇಟರ್‍ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಯುಎಸ್‍ನಲ್ಲಿ 200 ಶೋಗಳು, ಯೂರೋಪ್ ಹಾಗೂ ಯುಕೆಯಲ್ಲಿ 15 ದಿನಗಳ ನಂತರ ಸಿನಿಮಾ ಬಿಡುಗಡೆಯಾಗಲಿದೆ.

  • ರಂಗಿತರಂಗದ ನಂತ್ರ ಮತ್ತೊಮ್ಮೆ ಮೋಡಿ ಮಾಡಲು ತೆರೆಗೆ ಬರ್ತಿದೆ ‘ರಾಜರಥ’

    ರಂಗಿತರಂಗದ ನಂತ್ರ ಮತ್ತೊಮ್ಮೆ ಮೋಡಿ ಮಾಡಲು ತೆರೆಗೆ ಬರ್ತಿದೆ ‘ರಾಜರಥ’

    ಬೆಂಗಳೂರು: ರಂಗಿತರಂಗ ಎಂಬ ಸೂಪರ್ ಹಿಟ್ ಸಿನಿಮಾ ನೀಡಿದ ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿ ಬಂದಿರುವ ರಾಜರಾಥ ಸಿನಿಮಾ ಇದೇ ಶುಕ್ರವಾರ ಅಂದರೆ ಮಾರ್ಚ್ 23ರಂದು ತೆರೆಕಾಣಲಿದೆ.

    ವಿಭಿನ್ನ ಕಥಾ ಹಂದರವುಳ್ಳ ರಂಗಿತರಂಗ ಸಿನಿಮಾ ನೀಡಿದ ಬಳಿಕ ಅನೂಪ್ ಭಂಡಾರಿ ರಾಜರಥದಲ್ಲಿ ಸಾಗುತ್ತಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಸಿನಿಮಾ ಮೂಡಿದ್ದು, ನಿರೂಪ ಭಂಡಾರಿ ನಾಯಕನಾಗಿ ನಟಿಸಿದ್ದಾರೆ. ನಿರೂಪ್ ಗೆ ಜೊತೆಯಾಗಿ ನಟಿ ಆವಂತಿಕಾ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಇನ್ನೂ ತಮಿಳು ನಟ ಆರ್ಯ, ರವಿಶಂಕರ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

    ರಾಜರಥ ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದ ಗಾಂಧಿನಗರದಲ್ಲಿ ಭರವಸೆಯನ್ನು ಮೂಡಿಸಿದೆ. ಕಾಲೇಜು, ಸ್ವೀಟ್ ಲವ್ ಸ್ಟೋರಿಯನ್ನು ಸಿನಿಮಾ ಕಥೆ ಎಂಬುದನ್ನು ಹಾಡುಗಳು ಈಗಾಗಲೇ ಹೇಳ್ತಿವೆ. ಆದ್ರೆ ಚಿತ್ರದ ಸಂಪೂರ್ಣ ಕಥಾ ಹಂದರವನ್ನು ಎಲ್ಲಿಯೂ ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಈ ಹಿಂದೆ ಅನೂಪ್ ಭಂಡಾರಿ ರಂಗಿತರಂಗ ಸಿನಿಮಾದಲ್ಲಿ ನೋಡುಗರನ್ನು ಕೊನೆಯವರೆಗೂ ಹಿಡಿದಿಟ್ಟಿಕೊಂಡಿದ್ದರು. ಇದನ್ನೂ ಓದಿ: ಮತ್ತೆ ಬರ್ತಿದೆ ರಂಗಿತರಂಗ ಜೋಡಿ- ಇದು ಅವರ ಕಥೆಯಲ್ಲ, ನನ್ನ ಕಥೆ ಅಂತಿದೆ ರಾಜರಥ ನೋಡಿ

    ಸಿನಿಮಾದ ಕಥೆ ಕಣ್ಣಮುಂದೆಯೇ ಬರುವಂತೆ ಚಿತ್ರೀಕರಿಸಲಾಗಿದೆ. ಜನರು ಏನು ನೋಡಬೇಕೆಂದು ಥಿಯೇಟರ್ ಗೆ ಬರುತ್ತಾರೆ ಅದಕ್ಕಿಂತ ಹೆಚ್ಚಿನದನ್ನು ರಾಜರಥ ನೀಡಲಿದೆ. ಒಂದು ಸಿನಿಮಾ ಯಶಸ್ಸಿನ ಬಳಿಕ ಅಂತಹ ಚಿತ್ರವನ್ನು ಮಾಡಬೇಕೆಂದು ಮಾಡಿಲ್ಲ. ಇದು ರಂಗಿತರಂಗ ಚಿತ್ರಕ್ಕಿಂತ ವಿಭಿನ್ನವಾದ ಹೊಸತನದ ಕಥೆಯನ್ನು ಹೊಂದಿದೆ. ಈ ಹಿಂದೆ ಸರಳ ಹುಡಗನಾಗಿ ಕಾಣಿಸಿದ್ದ ನಿರೂಪ್ ಈ ಬಾರಿ ತರಲೆ ಕಾಲೇಜು ಹುಡಗನಾಗಿ ವಿಭಿನ್ನ ಲುಕ್ ನಲ್ಲಿ ಮಿಂಚಿದ್ದಾರೆ ಅಂತಾ ಚಿತ್ರತಂಡ ತಿಳಿಸಿದೆ.

    ಅಜನೀಶ್ ಲೋಕನಾಥ್ ಅವರ ಹಿನ್ನೆಲೆ ಸಂಗೀತವನ್ನು ಚಿತ್ರ ಹೊಂದಿದೆ. ಜಾನಿ ಮಾಸ್ಟರ್ ಮತ್ತು ಬೋಸ್ಕೋ ಕೇಸರ್ ಕ್ಯಾಮೆರಾ ಕಾರ್ಯ ನಿರ್ವಹಿಸಿದ್ದಾರೆ. ಮೊದಲ ಟ್ರೇಲರ್ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹಿನ್ನೆಲೆ ಧ್ವನಿಯಲ್ಲಿ ಬಿಡುಗಡೆಯಾಗಿತ್ತು. ಸಿನಿಮಾ ಕನ್ನಡ ಮತ್ತು ತೆಲಗುವಿನಲ್ಲಿಯೂ ಮೂಡಿಬಂದಿದೆ.

  • ನಗೆಗಡಲಿನಲ್ಲಿ ಕನ್ನಡದ ಕಂಪು ಪಸರಿಸಲು ಬರ್ತಿದ್ದಾನೆ `ಕನ್ನಡ ಮೀಡಿಯಂ ರಾಜು’

    ನಗೆಗಡಲಿನಲ್ಲಿ ಕನ್ನಡದ ಕಂಪು ಪಸರಿಸಲು ಬರ್ತಿದ್ದಾನೆ `ಕನ್ನಡ ಮೀಡಿಯಂ ರಾಜು’

    ಬೆಂಗಳೂರು: ಫಸ್ಟ್ ರ‍್ಯಾಂಕ್ ಖ್ಯಾತಿಯ ಗುರುನಂದನ್ ಅಭಿನಯದ `ರಾಜು ಕನ್ನಡ ಮೀಡಿಯಂ’ ಟ್ರೇಲರ್ ಇಂದು ಬಿಡುಗಡೆಯಾಗಿದ್ದು, ನೋಡುಗರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತಿದೆ.

    ಕನ್ನಡ ಮೀಡಿಯಂ ನಲ್ಲಿ ಕಲಿತಿರುವ ಹುಡುಗ ರಾಜಧಾನಿಗೆ ಬಂದು ಹೇಗೆ ಜೀವನ ನಡೆಸುವುದರ ಜೊತೆಗೆ ಕನ್ನಡದ ಕಂಪನ್ನು ಹೇಗೆ ಪಸರಿಸುತ್ತಾನೆ ಎಂಬುದೇ ಕಥೆಯ ಜೀವಾಳವಾಗಿದೆ. ಸಿನಿಮಾ ಚಿತ್ರೀಕರಣ ಪ್ರಾರಂಭ ಮಾಡಿದಾಗಿನಿಂದಲೂ ಸ್ಯಾಂಡಲ್‍ವುಡ್ ನಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿತ್ತು.

    ಈ ಹಿಂದೆ ಗುರುನಂದನ್ ನಟನೆಯ `ಫಸ್ಟ್ ರ‍್ಯಾಂಕ್ ರಾಜು’ ಭರ್ಜರಿ ಯಶಸ್ಸನ್ನು ಕಂಡಿತ್ತು. ಕನ್ನಡ ಮೀಡಿಯಂ ರಾಜು ಮೊದಲ ಸಿನಿಮಾದ ಮುಂದುವೆರಿದ ಭಾಗವೇ ಎಂದು ಹೇಳಲಾಗಿತ್ತು, ಆದರೆ ಇದು ಸಂಪೂರ್ಣ ವಿಭಿನ್ನ ಕಥೆಯನ್ನು ಒಳಗೊಂಡಿದೆ. ಗುರು ಅವರ ಕನ್ನಡದ ಬಗೆಗಿನ ಒಲವು, ಸಿನಿಮಾದಲ್ಲಿ ಬರುವ ಕಾಮಿಡಿ ದೃಶ್ಯಗಳು ಎಲ್ಲರನ್ನು ನಗಿಸುವುದು ಪಕ್ಕಾ ಆಗಿದೆ.

    ಚಿಕ್ಕಣ್ಣ, ಕುರಿ ಪ್ರತಾಪ್ ನಗಿಸಲು ರಾಜುವಿಗೆ ಸಾಥ್ ನೀಡಿದ್ದಾರೆ. ಸಿನಿಮಾದಲ್ಲಿ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಎಲ್ಲರ ಗಮನವನ್ನು ಸೆಳೆಯಲಿದ್ದಾರೆ. ಸಿನಿಮಾ ನರೇಶ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿದ್ದು, ಕಿರಣ್ ರವೀಂದ್ರನಾಥ್ ಸಂಗೀತ ನೀಡಿದ್ದಾರೆ. ಆವಂತಿಕಾ ಶೆಟ್ಟಿ, ಆಶಿಕಾ ರಂಗನಾಥ್, ಸಾಧು ಕೋಕಿಲ, ಓಂ ಪ್ರಕಾಶ್ ಸೇರಿದಂತೆ ದೊಡ್ಡ ತಾರಾಬಳಗವನ್ನು ಸಿನಿಮಾ ಹೊಂದಿದೆ.