Tag: Avantipur

  • ಎಕೆ-47, 1,918 ಗುಂಡು, 2 ಹ್ಯಾಂಡ್ ಗ್ರೆನೆಡ್ -ಅಪಾರ ಪ್ರಮಾಣದ ಸ್ಫೋಟಕ ಪತ್ತೆ

    ಎಕೆ-47, 1,918 ಗುಂಡು, 2 ಹ್ಯಾಂಡ್ ಗ್ರೆನೆಡ್ -ಅಪಾರ ಪ್ರಮಾಣದ ಸ್ಫೋಟಕ ಪತ್ತೆ

    ಶ್ರೀನಗರ: ಉಗ್ರ ಸಂಘಟನೆ ಬಚ್ಚಿಟ್ಟದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಜಮ್ಮು -ಕಾಶ್ಮೀರದ ಅವಂತಿಪುರದಲ್ಲಿ ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

    ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಈ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಆಗಸ್ಟ್ 12 ರ ಮಧ್ಯರಾತ್ರಿ ನಡೆಸಿದ ಶೋಧ ಕಾರ್ಯದಲ್ಲಿ ಸ್ಫೋಟಕ ವಸ್ತುಗಳು ಲಭ್ಯವಾಗಿವೆ.

    ಗುರುವಾರ ಬೆಳಗ್ಗೆ ನಿಷೇಧಿತ ಸಂಘಟನೆಯ ಎರಡು ಅಡಗು ತಾಣಗಳ ಮೇಲೆ ದಾಳಿ ನಡೆಸಲಾಗಿತ್ತು. ಅಡಗು ತಾಣದಲ್ಲಿ ಮದ್ದುಗುಂಡು ಮತ್ತು ಸ್ಫೋಟಕ ವಸ್ತುಗಳ ಸಂಗ್ರಹ ಸ್ಥಳ ಪತ್ತೆಯಾಗಿದೆ. ಎಕೆ 47, 1,918 ಗುಂಡುಗಳು, ಎರಡು ಹ್ಯಾಂಡ್ ಗ್ರೆನೆಡ್, ಯಬಿಜಿಎಲ್ ಥ್ರೋವರ್, ಅಲ್ಯುಮಿನಿಯಂ ನೈಟ್ರೇಟ್ ತುಂಬಿದ ಬ್ಯಾಗ್, ಐದು ಜಿಲೆಟಿನ್ ಕಟ್ಟಿ, ಕ್ರೂಡ್ ಪೈಪ್ ಬಾಂಬ್ ಮತ್ತು ಮೂರು ಕೋಡ್ ಶೀಟ್ಸ್ ಲಭ್ಯವಾಗಿದೆ.

  • ಜಮ್ಮು, ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – ಓರ್ವ ಉಗ್ರನನ್ನು ಸದೆಬಡಿದ ಸೇನೆ

    ಜಮ್ಮು, ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – ಓರ್ವ ಉಗ್ರನನ್ನು ಸದೆಬಡಿದ ಸೇನೆ

    ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ಜಂಟಿ ಕಾರ್ಯಚರಣೆ ವೇಳೆ ನಡೆದ ಎನ್‍ಕೌಂಟರ್ ನಲ್ಲಿ ಹಿಜ್ಬುಲ್‍ನ ಓರ್ವ ಉಗ್ರನನ್ನು ಸದೆಬಡಿಯಲಾಗಿದೆ.

    ಆವಂತಿಪುರದಲ್ಲಿ ಭಾರತೀಯ ಸೇನೆ, ಸಿಆರ್‌ಪಿಎಫ್ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಎನ್‍ಕೌಂಟರ್ ಮಾಡಲಾಗಿದೆ. ಎನ್‍ಕೌಂಟರ್ ನಲ್ಲಿ ಹತ್ಯೆಯಾದ ಉಗ್ರನನ್ನು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ರಿಯಾಜ್ ನಾಯ್ಕು ಎಂದು ಗುರುತಿಸಲಾಗಿದೆ.

    ಪುಲ್ವಾಮಾದ ಶರ್ಸಾಲಿ ಗ್ರಾಮದಲ್ಲಿ ಇನ್ನಷ್ಟು ಉಗ್ರರು ಅಡಗಿರುವ ಮಾಹಿತಿ ಲಭ್ಯವಾದ ಹಿನ್ನೆಲೆ ಸೇನಾ ಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದ ಸುತ್ತಮುತ್ತಲಿನ 12ರಿಂದ 15 ಮನೆಗಳ ಜನರನ್ನು ಬೇರೆ ಜಾಗಕ್ಕೆ ಸ್ಥಳಾಂತರ ಮಾಡಲಾಗಿದ್ದು, ಉಗ್ರನನ್ನು ಸದೆಬಡಿದ ಸ್ಥಳದಲ್ಲಿ ಒಂದು ಎಕೆ-56 ರೈಫಲ್ ಅನ್ನು ವಶಕ್ಕೆ ಪಡೆಯಲಾಗಿದೆ.

    ಇಂದು ಮುಂಜಾನೆ ವೇಳೆಗೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೇನಾಪಡೆ ಕೂಡ ಪ್ರತಿದಾಳಿ ನಡೆಸಿದೆ. ಈ ವೇಳೆ ಗುಂಡೇಟಿಗೆ ಉಗ್ರ ಸಾವನ್ನಪ್ಪಿದ್ದಾನೆ.

    2 ದಿನಗಳ ಹಿಂದೆ ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ನಡೆಸಿದ್ದ ದಾಳಿಯಿಂದ ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಅಲ್ಲದೇ ಭಾನುವಾರ ಹಂದ್ವಾರದಲ್ಲಿ ನಡೆದ ದಾಳಿಯಲ್ಲಿ ಐವರು ಭದ್ರತಾ ಪಡೆಯ ಸಿಬ್ಬಂದಿ ಉಗ್ರರ ಗುಂಡೇಟಿಗೆ ಹುತಾತ್ಮರಾಗಿದ್ದರು.

  • ಸ್ಫೋಟಕ್ಕೆ ಬಳಸಿದ್ದು 100 ರಿಂದ 150 ಕೆಜಿ RDX- 7 ಶಂಕಿತರ ವಶಕ್ಕೆ..!

    ಸ್ಫೋಟಕ್ಕೆ ಬಳಸಿದ್ದು 100 ರಿಂದ 150 ಕೆಜಿ RDX- 7 ಶಂಕಿತರ ವಶಕ್ಕೆ..!

    ಪುಲ್ವಾಮ: ಜಮ್ಮು-ಕಾಶ್ಮೀರದ ಪುಲ್ವಾಮಾದ ಅವಂತಿಪೋರದಲ್ಲಿ ಆತ್ಮಾಹುತಿ ದಾಳಿಗೆ 44 ಯೋಧರು ವೀರಮರಣವನ್ನಪ್ಪಿದ್ದಾರೆ. ಆದರೆ 44 ಯೋಧರನ್ನು ಬಲಿಪಡೆದ ರಕ್ತಪಿಪಾಸುಗಳ ದುಷ್ಕೃತ್ಯದ ಹಿಂದಿನ ಪ್ಲಾನ್ ಈಗ ಒಂದೊಂದಾಗಿ ಹೊರಬರ್ತಿದೆ. ಈ ಪಾಪ ಕೃತ್ಯದ ಮಾಸ್ಟರ್ ಮೈಂಡ್ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕಮಾಂಡರ್ ಅಬ್ದುಲ್ ರಶೀದ್ ಘಾಝಿ. ಈತನೇ ಈ ದಾಳಿಯನ್ನು ಕಾರ್ಯರೂಪಕ್ಕೆ ತಂದಿದ್ದು ಅಂತಾ ಗುಪ್ತಚರ ಇಲಾಖೆ ಎಂಬ ಮಾಹಿತಿಗಳು ಲಭ್ಯವಾಗಿದೆ.

    ಅಫ್ಘಾನಿಸ್ತಾನದಲ್ಲಿ ತರಬೇತುಗೊಂಡಿದ್ದ ಈತ ಸುಧಾರಿತ ಸ್ಫೋಟಕ ತಯಾರಿಕೆಯಲ್ಲಿ ಹೆಚ್ಚು ಪರಿಣಿತನಾಗಿದ್ದರಿಂದ ಪುಲ್ವಾಮಾ ಸ್ಫೋಟದ ಜವಾಬ್ದಾರಿ ಈತನಿಗೆ ನೀಡಲಾಗಿತ್ತು. ಎನ್‍ಎಸ್‍ಜಿ ಮತ್ತು ಎನ್‍ಐಎ ಮಾಹಿತಿ ಪ್ರಕಾರ ಸ್ಫೋಟಕ್ಕೆ ಉಗ್ರರು ಬಳಸಿದ್ದು ಬರೋಬ್ಬರಿ 100 ರಿಂದ 150ಕೆಜಿ ಆರ್ ಡಿಎಕ್ಸ್. ಇದರಲ್ಲಿ ಹರಿತ ಕಬ್ಬಿಣದ ಚೂರುಗಳನ್ನು ಬಳಕೆ ಮಾಡಲಾಗಿತ್ತು. ಈ ಬಗ್ಗೆ ಎನ್‍ಎಸ್‍ಜಿ ಮತ್ತು ಎನ್‍ಐಎ ಸ್ಯಾಂಪಲ್ ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದೆ.

    ಕಾಕಪೋರ ಸಂಪರ್ಕಿಸುವ ಕಚ್ಚಾ ರಸ್ತೆ ಮೂಲಕ ಆತ್ಮಾಹುತಿ ಬಾಂಬರ್ ಬರುತ್ತಿದ್ದ. ಈತ ಸೆಡಾನ್ ಕಾರ್ ನಲ್ಲಿ ಬಂದು ಸರತಿ ಸಾಲಿನಲ್ಲಿ ಬರುತ್ತಿದ್ದ ಯೋಧರ ಐದನೇ ವಾಹನದ ಎಡಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಸೆಡಾನ್ ಕಾರ್ ಡಿಕ್ಕಿ ಹೊಡೆಯುತ್ತಲೇ 150 ಮೀಟರ್ ವ್ಯಾಪ್ತಿಯಲ್ಲಿ ಆರ್ ಡಿಎಕ್ಸ್ ಸ್ಫೋಟಗೊಂಡಿದೆ. ಪರಿಣಾಮ 80 ಮೀಟರ್ ದೂರದವರೆಗೂ ಯೋಧರ ದೇಹಗಳು ಚೂರು ಚೂರಾಗಿ ಹಾರಿ ಬಿದ್ದಿದೆ. ಸ್ಫೋಟದ ತೀವ್ರತೆಗೆ ಸುಮಾರು 10 ಕಿ.ಮೀ. ಶಬ್ದ ಕೇಳಿತ್ತು. ಸುತ್ತಮುತ್ತ ಪ್ರದೇಶದಲ್ಲಿ ಭೂಕಂಪದ ಅನುಭವವಾಗಿತ್ತು ಅಂತ ಸ್ಥಳೀಯರು ಹೇಳಿದ್ದಾರೆ.

    ದಾಳಿಗೆ ಸಹಕರಿಸಿದ ಆರೋಪದ ಮೇಲೆ ಪುಲ್ವಾಮಾ ಮತ್ತು ಆವಂತಿಪೋರಾದಲ್ಲಿ 7 ಮಂದಿ ಶಂಕಿತರನ್ನ ವಶಕ್ಕೆ ಪಡೆಯಲಾಗಿದೆ. ಮೊದಲು ದಕ್ಷಿಣದ ಕಾಶ್ಮೀರದ ಮಿಡೂರದಲ್ಲಿ ಜೈಷ್ ಉಗ್ರ ಕಮ್ರಾನ್ ನೇತೃತ್ವದಲ್ಲಿ ಭಯಾನಕ ಕೃತ್ಯದ ಸಂಚು ರೂಪಿಸಲಾಗಿತ್ತು. ಆದ್ರೆ ಅದು ವಿಫಲಗೊಂಡಿತ್ತು. ಒಟ್ಟಿನಲ್ಲಿ ಸ್ಫೋಟದ ಹಿಂದಿರುವ ಪಾಕ್ ಸಂಚಿಗೆ ವಿಶ್ವದಾದ್ಯಂತ ಆಕ್ರೋಶ ವ್ಯಕ್ತವಾಗ್ತಿದೆ. ಭಾರತದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ.

    https://www.youtube.com/watch?v=SJLdZhK9wTU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv