Tag: Avenue Road

  • Bengaluru | ಮಹಿಳೆಗೆ ಥಳಿತ ಕೇಸ್‌ – ಬಟ್ಟೆ ಅಂಗಡಿ ಮಾಲೀಕ ಸೇರಿ ಇಬ್ಬರು ಆರೋಪಿಗಳು ಅರೆಸ್ಟ್

    Bengaluru | ಮಹಿಳೆಗೆ ಥಳಿತ ಕೇಸ್‌ – ಬಟ್ಟೆ ಅಂಗಡಿ ಮಾಲೀಕ ಸೇರಿ ಇಬ್ಬರು ಆರೋಪಿಗಳು ಅರೆಸ್ಟ್

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಅವೆನ್ಯೂ ರಸ್ತೆಯಲ್ಲಿ (Avenue Road) ಗುರುವಾರ ಮಹಿಳೆಗೆ ಅಮಾನುಷವಾಗಿ ಥಳಿಸಿದ್ದ ಆರೋಪಿಗಳನ್ನ ಕೆ.ಆರ್.ಮಾರ್ಕೆಟ್ ಪೊಲೀಸರು (KR Market Police) ಬಂಧಿಸಿದ್ದಾರೆ.

    ಅಂಗಡಿಯ ಮಾಲೀಕ ಉಮೇದ್‌ ರಾಮ್ ಮತ್ತು ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ, ಮಹೇಂದ್ರ ಶರ್ಮಾ ಬಂಧಿತ ಆರೋಪಿಗಳು. ಕಳೆದ ಶನಿವಾರ ಮಹಿಳೆಯೊಬ್ಬರು ಉಮೇದ್‌ ರಾಮ್ ಅಂಗಡಿಯಲ್ಲಿ ಸೀರೆ ಕಳ್ಳತನ ಮಾಡಿದ್ದರು. ಇದನ್ನ ಗಮನದಲ್ಲಿಟ್ಟುಕೊಂಡು, ಉಮೇದ್‌ ರಾಮ್ ಭಾನುವಾರ ಕಾದು ಕೂತಿದ್ದಾನೆ. ಮಹಿಳೆ ಬರುತ್ತಿದ್ದಂತೆ ಆಕೆಯನ್ನ ಹಿಡಿದು, ಆತ ಮತ್ತು ಸಿಬ್ಬಂದಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬೂಟ್ ಕಾಲಿನಲ್ಲಿ ಒದ್ದು, ಮನಬಂದಂತೆ ಥಳಿಸಿದ್ದರು. ಮಹಿಳೆ ನೋವಿನಿಂದ ಅಂಗಲಾಚಿದರೂ ಬಿಡದ ಪಾಪಿ ಮಾಲೀಕನ ಕೃತ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮಹಿಳೆ ದೂರು ಕೊಡಲು ಮುಂದಾದರೂ ಕೇರ್ ಮಾಡದ ಸಿಟಿ ಮಾರ್ಕೆಟ್ ಪೊಲೀಸರು, ಕಳ್ಳತನ ಕೇಸ್ ಹಾಕಿ ಮಹಿಳೆಯನ್ನ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ – ಸಿಎಂ ಅವ್ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ!

    ಸೋಷಿಯಲ್ ಮೀಡಿಯಾದಲ್ಲಿ ವೀಡಿಯೊ ವೈರಲ್ ಆಗುತ್ತಿದ್ದಂತೆ, ಕನ್ನಡಪರ ಹೋರಾಟಗಾರರು ಮಹಿಳೆಯ ಪರವಾಗಿ ನಿಂತಿದ್ದಾರೆ. ಕನ್ನಡ ಪರ ಸಂಘಟನೆಗಳು ಎಂಟ್ರಿ ಕೊಡುತ್ತಿದ್ದಂತೆ ಸಿಟಿ ಮಾರ್ಕೆಟ್ ಪೊಲೀಸರು, ತರಾತುರಿಯಲ್ಲಿ ಮಾಲೀಕನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಗುರುವಾರ ರಾತ್ರಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ | ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು

  • 3 ಕೆ.ಜಿ ಚಿನ್ನ ವಂಚನೆ – ವರ್ತೂರ್ ಪ್ರಕಾಶ್ ಆಪ್ತೆ ಸೆರೆ

    3 ಕೆ.ಜಿ ಚಿನ್ನ ವಂಚನೆ – ವರ್ತೂರ್ ಪ್ರಕಾಶ್ ಆಪ್ತೆ ಸೆರೆ

    -ರಾಜಕಾರಣಿ, ನಟ-ನಟಿಯರ ಜೊತೆ ಪೋಟೋ ತೆಗೆಸಿಕೊಂಡು ದುರ್ಬಳಕೆ ಆರೋಪ

    ಬೆಂಗಳೂರು: ಗಣ್ಯರ ಹೆಸರು ಬಳಸಿಕೊಂಡು ಕೋಟ್ಯಂತರ ರೂ. ಮೌಲ್ಯದ ಚಿನ್ನವನ್ನು ಖರೀದಿಸಿ ಹಣ ಪಾವತಿಸದೇ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

    ಆರೋಪಿಯನ್ನು ಬಾಗಲಗುಂಟೆ (Bagalagunte) ನಿವಾಸಿ ಶ್ವೇತಾಗೌಡ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಪುಲಕೇಶಿ ನಗರ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಇದನ್ನೂ ಓದಿ: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ – ಇಂದಿನಿಂದ ಮೋದಿ ಕುವೈತ್‌ ಪ್ರವಾಸ

    ಕೆಲ ದಿನಗಳ ಹಿಂದೆ ಕಮರ್ಷಿಯಲ್ ಮುಖ್ಯರಸ್ತೆಯ ನವರತ್ನ ಜ್ಯುವೆಲ್ಸ್ ಮಾಲೀಕ ಸಂಜಯ್ ಭಾಷ್ನಾ ಅವರನ್ನು ಶ್ವೇತಾಗೌಡ ಭೇಟಿಯಾಗಿದ್ದಳು. ತಾನು ಚಿನ್ನಾಭರಣ ವ್ಯಾಪಾರ ಆರಂಭಿಸುತ್ತಿದ್ದು, ನಿಮ್ಮಿಂದಲೇ ಆಭರಣ ಖರೀದಿಸುತ್ತೇನೆ ಎಂದಿದ್ದಳು. ಇದಕ್ಕೆ ಸಂಜಯ್ ಸಹ ಸಮ್ಮಿತಿಸಿದ್ದರು. ಆಕೆಯ ಮಾತು ನಂಬಿ ಆರಂಭದಲ್ಲಿ ಎರಡು ಮೂರು ಬಾರಿ ಶ್ವೇತಾ ನೀಡಿದ್ದ ಮನೆ ವಿಳಾಸಕ್ಕೆ ಚಿನ್ನಾಭರಣ ಕಳುಹಿಸಿದ್ದರು.

    ಹೀಗೆ ವಿಶ್ವಾಸಗಳಿಸಿದ ಶ್ವೇತಾ, ಕೊನೆಗೆ ನವರತ್ನ ಜ್ಯುವೆಲರ್ಸ್ನಲ್ಲಿ 2.42 ಕೋಟಿ ರೂ. ಮೌಲ್ಯದ 2.945 ಕೆಜಿ ಚಿನ್ನ ಹಾಗೂ ವಜ್ರಾಭರಣ ಖರೀದಿಸಿ ವಂಚಿಸಿದ್ದಳು. ಅಲ್ಲದೆ ಚಿನ್ನ ಮರಳಿಸಿ ಇಲ್ಲ ಹಣ ಪಾವತಿಸುವಂತೆ ಕೇಳಿದ್ದ ಚಿನ್ನದ ವ್ಯಾಪಾರಿಗೆ ಆಕೆ ಧಮ್ಕಿ ಹಾಕಿದ್ದಳು.

    ಈ ಬಗ್ಗೆ ಜ್ಯುವೆಲರ್ಸ್‌ನ ಮಾಲಿಕ ಸಂಜಯ್ ಕಮಿರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ಪುಲಿಕೇಶಿನಗರ ಉಪವಿಭಾಗದ ಎಸಿಪಿ ಗೀತಾ ಅವರು ತನಿಖೆ ಕೈಗೆತ್ತಿಕೊಂಡಿದ್ದರು. ಇದನ್ನು ತಿಳಿದ ಆರೋಪಿ ಕೂಡಲೇ ನಗರದಿಂದ ಪರಾರಿಯಾಗಿದ್ದಳು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ತಂಡವು, ತಾಂತ್ರಿಕ ಮಾಹಿತಿ ಆಧರಿಸಿ ಮೈಸೂರಿನಲ್ಲಿ ಆಕೆಯನ್ನು ಬಂಧಿಸಲಾಯಿತು. ಜೊತೆಗೆ ಆರೋಪಿಯಿಂದ ಚಿನ್ನ, ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

    ಆರೋಪಿ ಮಾಜಿ ಸಚಿವರ ಮನೆ ವಿಳಾಸ ನೀಡಿರುವ ಆರೋಪದ ಆಧಾರದ ಮೇಲೆ ವರ್ತೂರು ಪ್ರಕಾಶ್ ವಿಚಾರಣೆಗೆ ಪೊಲೀಸರು ನಿರ್ಧರಿಸಿದ್ದಾರೆ. ಈ ಬಗ್ಗೆ ವರ್ತೂರು ಪ್ರಕಾಶ್ ಮಾತನಾಡಿ, ಫೋನ್‌ನಲ್ಲಿ ಪೊಲೀಸರು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಸೋಮವಾರ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಸಿಟಿ ರವಿ ಕೇಸ್‌ – ಪ್ರತಿಷ್ಠಿಗೆ ಬಿದ್ದು ಏನೋ ಮಾಡಲು ಹೋಗಿ ಯಡವಟ್ಟು ಮಾಡಿತಾ ಸರ್ಕಾರ?